Wednesday, August 5, 2026
Wednesday, August 5, 2026
Home Blog Page 71

1991 ಏಪ್ರಿಲ್ ನಿಂದ 2022 ಮಾರ್ಚ್ 31 ವರೆಗೆ ವಿಧಿಸಲಾಗಿದ್ದ ತೆರಿಗೆ ಬಾಕಿ ಪಾವತಿಗೆ ವಿಶೇಷ ರಿಯಾಯಿತಿ ಸೌಲಭ್ಯ. ಸಾರಿಗೆ ಇಲಾಖೆ ಪ್ರಕಟಣೆ

0

1991ರಿಂದ 2022ರ ಅವಧಿಯಲ್ಲಿ ದಾಖಲಾಗಿರುವ ಕೆಲವು ಹಳೆಯ ವಾಹನಗಳಿಗೆ ವಿಧಿಸಲಾಗಿದ್ದ ತೆರಿಗೆ ಬಾಕಿಯ ಮೊತ್ತದ ಮೇಲೆ 50% ರಿಯಾಯಿತಿ ನೀಡಲಾಗಿದೆ.

01-04-1991 ರಿಂದ 31-03-2022 ರವರೆಗೆ ದಾಖಲಾಗಿರುವ ವಾಹನಗಳಿಗೆ ಮಾತ್ರ ಈ ಸೌಲಭ್ಯ ಅನ್ವಯಿಸುತ್ತದೆ.

21-06-2026 ರಿಂದ 10-07-2026 ರವರೆಗೆ ಮಾತ್ರ ಈ ವಿಶೇಷ ರಿಯಾಯಿತಿ ಲಭ್ಯ.

ವಾಹನ ಮಾಲೀಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಬಾಕಿ ತೆರಿಗೆಯನ್ನು ಪಾವತಿಸಿ, ಕಾನೂನುಬದ್ಧವಾಗಿ ತಮ್ಮ ವಾಹನಗಳ ದಾಖಲೆಗಳನ್ನು ನವೀಕರಿಸಿಕೊಳ್ಳಿ.

ಗವಟೂರು ಕೆರೆ ಕಾಮಗಾರಿ ವೇಳೆ ಪತ್ತೆಯಾದ ಪುರಾತನ ಜಿನಮೂರ್ತಿ ಅವಶೇಷಗಳು

0

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಗವಟೂರು ಗ್ರಾಮದಲ್ಲಿ ನಡೆಯುತ್ತಿದ್ದ ಕೆರೆ ಅಭಿವೃದ್ಧಿ ಕಾಮಗಾರಿಯ ವೇಳೆ ಪುರಾತನ ಜೈನ ತೀರ್ಥಂಕರರ ಮೂರ್ತಿಗಳು ಹಾಗೂ ಪೀಠದ ಅವಶೇಷಗಳು ಪತ್ತೆಯಾಗಿವೆ.

ಈ ಆಕಸ್ಮಿಕ ಶೋಧನೆಯಿಂದಾಗಿ ಈ ಭಾಗದಲ್ಲಿ ಹಿಂದೊಮ್ಮೆ ಭವ್ಯವಾದ ಜೈನ ಬಸದಿ ಅಸ್ತಿತ್ವದಲ್ಲಿತ್ತು ಎಂಬ ಬಲವಾದ ಸುಳಿವು ದೊರೆತಿದೆ. ಗವಟೂರು ಗ್ರಾಮದ ತಾವರೆಕೆರೆ ಪ್ರದೇಶದಲ್ಲಿ ಶುಕ್ರವಾರ ಸಂಜೆ ಹಿಟಾಚಿ ಯಂತ್ರದ ಮೂಲಕ ಮಣ್ಣು ತೆರವುಗೊಳಿಸುವ ಕೆಲಸ ನಡೆಯುತ್ತಿತ್ತು.

ಈ ವೇಳೆ ಮಣ್ಣಿನಡಿ ಹುದುಗಿದ್ದ ಬೃಹತ್ ಕಲ್ಲಿನ ರಚನೆಗಳು ಗೋಚರಿಸಿವೆ. ಕಾರ್ಮಿಕರು ಅದನ್ನು ಸೂಕ್ಷ್ಮವಾಗಿ ಗಮನಿಸಿದಾಗ, ಅದೊಂದು ಅದ್ಭುತ ಕೆತ್ತನೆಗಳಿರುವ ಐತಿಹಾಸಿಕ ಶಿಲಾಮೂರ್ತಿ ಎಂಬುದು ಅರಿವಿಗೆ ಬಂದಿದೆ. ತಕ್ಷಣವೇ ಎಚ್ಚೆತ್ತ ಅವರು ಕಾಮಗಾರಿಯನ್ನು ನಿಲ್ಲಿಸಿ, ಸ್ಥಳೀಯ ಆಡಳಿತ ಹಾಗೂ ಪಂಚಾಯಿತಿ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದರು.

ಪುರಾತತ್ವ ತಜ್ಞರ ಪ್ರಾಥಮಿಕ ಅಂದಾಜಿನ ಪ್ರಕಾರ, ಈ ಅಪರೂಪದ ಮೂರ್ತಿಗಳು 12 ರಿಂದ 13ನೇ ಶತಮಾನದ ಜೈನ ಪರಂಪರೆಗೆ ಸೇರಿವೆ.
ಧ್ಯಾನಸ್ಥ ಭಂಗಿ: ತೀರ್ಥಂಕರರು ಪದ್ಮಾಸನ ಹಾಕಿ ಧ್ಯಾನಸ್ಥ ಸ್ಥಿತಿಯಲ್ಲಿ ಕುಳಿತಿರುವಂತೆ ಮೂರ್ತಿಯನ್ನು ಕೆತ್ತಲಾಗಿದೆ.

ಕಳೆದ ಎರಡು ದಶಕಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕ್ರಮದಲ್ಲಿ ಮಹತ್ತರ ಬದಲಾವಣೆಯಾಗಿದೆ- ಡಾ. ರವಿ ನಡಹಳ್ಳಿ

0

ಕ್ಯಾನ್ಸರ್ ಎಂಬುದು ಜೀವನದ ಕೊನೆಯ ಅಧ್ಯಾಯವಲ್ಲ; ಸೂಕ್ತ ಚಿಕಿತ್ಸೆ, ವೈದ್ಯರ ಮೇಲಿನ ನಂಬಿಕೆ, ಕುಟುಂಬದ ಬೆಂಬಲ ಮತ್ತು ದೃಢ ಮನೋಬಲದಿಂದ ಅದನ್ನು ಜಯಿಸಿ ಆರೋಗ್ಯಕರ ಜೀವನ ನಡೆಸಬಹುದು ಎಂಬ ಸಂದೇಶ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆದ ‘ರಾಷ್ಟ್ರೀಯ ಕ್ಯಾನ್ಸರ್ ಸರ್ವೈವರ್ ಡೇ’ ಕಾರ್ಯಕ್ರಮದಲ್ಲಿ ಪ್ರತಿಧ್ವನಿಸಿತು.

ಕಾರ್ಯಕ್ರಮದಲ್ಲಿ ಕ್ಯಾನ್ಸರ್‌ನ್ನು ಯಶಸ್ವಿಯಾಗಿ ಎದುರಿಸಿ ಬದುಕು ಗೆದ್ದ ಸರ್ವೈವರ್‌ಗಳು ಅವರ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ರೋಗಿಗಳಲ್ಲಿ ಆತ್ಮವಿಶ್ವಾಸ ತುಂಬಲಾಯಿತು.

ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರು ಡಾ. ಉತ್ತಮ ಶರ್ಮಾ ಮಾತನಾಡಿ, ಕ್ಯಾನ್ಸರ್ ರೋಗನಿರ್ಣಯವಾದ ತಕ್ಷಣ ಬದುಕಿನ ಬಗ್ಗೆ ನಿರಾಶರಾಗುವ ಅಗತ್ಯವಿಲ್ಲ. ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆದರೆ ಕ್ಯಾನ್ಸರ್‌ನಿಂದ ಗುಣಮುಖರಾಗಲು ಸಾಧ್ಯ ಎಂಬುದಕ್ಕೆ ಸಾವಿರಾರು ಸರ್ವೈವರ್‌ಗಳ ಬದುಕು ಸಾಕ್ಷಿಯಾಗಿದೆ ಎಂದು ಹೇಳಿದರು.

ಕ್ಯಾನ್ಸರ್ ಚಿಕಿತ್ಸೆಯು ಸುದೀರ್ಘ ಪ್ರಕ್ರಿಯೆಯಾಗಿದ್ದು, ಈ ಅವಧಿಯಲ್ಲಿ ಕುಟುಂಬದವರ ಬೆಂಬಲ ಮತ್ತು ರೋಗಿಯ ಮನೋಬಲ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಳೆದ ಹಲವು ವರ್ಷಗಳಲ್ಲಿ 10 ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ರೋಗಿಗಳು ಯಶಸ್ವಿಯಾಗಿ ಚಿಕಿತ್ಸೆ ಪಡೆದು ಸರ್ವೈವರ್‌ಗಳಾಗಿದ್ದಾರೆ ಎಂದು ತಿಳಿಸಿದರು.

ವಿಕಿರಣ ಆಂಕೊಲಾಜಿಸ್ಟ್ ಡಾ. ರವಿ ನಡಹಳ್ಳಿ ಮಾತನಾಡಿ, ಕ್ಯಾನ್ಸರ್ ಸರ್ವೈವರ್‌ಗಳ ಬದುಕು ಸಮಾಜಕ್ಕೆ ಸ್ಫೂರ್ತಿಯಾಗಿದೆ. ಚಿಕಿತ್ಸೆಯ ಸಮಯದಲ್ಲಿ ಎದುರಾಗುವ ದೈಹಿಕ ಮತ್ತು ಮಾನಸಿಕ ಸವಾಲುಗಳನ್ನು ಧೈರ್ಯದಿಂದ ಎದುರಿಸುವುದು ಅತ್ಯಗತ್ಯ ಎಂದರು.

ಕಳೆದ ಎರಡು ದಶಕಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಾಗಿದ್ದು, ಐಎಂಆರ್ಟಿ, ಐಜಿಆರ್ಟಿ ಹಾಗೂ ಪ್ರೋಟಾನ್ ಥೆರಪಿಯಂತಹ ಅತ್ಯಾಧುನಿಕ ತಂತ್ರಜ್ಞಾನಗಳಿಂದ ಚಿಕಿತ್ಸೆಯ ನಿಖರತೆ ಹೆಚ್ಚಿದ್ದು, ಅಡ್ಡಪರಿಣಾಮಗಳು ಗಣನೀಯವಾಗಿ ಕಡಿಮೆಯಾಗಿವೆ ಎಂದು ಹೇಳಿದರು.

ಮೆಡಿಕಲ್ ಆಂಕೊಲಾಜಿಸ್ಟ್ ಡಾ. ಅಪರ್ಣಾ ಶ್ರೀವತ್ಸ ಮಾತನಾಡಿ, ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಚಿಕಿತ್ಸೆ ಮಾತ್ರವಲ್ಲ, ರೋಗಿಯ ಮನಸ್ಥಿತಿ ಮತ್ತು ವೈದ್ಯರ ಮೇಲಿನ ನಂಬಿಕೆಯೂ ಮಹತ್ವದ್ದಾಗಿದೆ ಎಂದು ಹೇಳಿದರು.

ಚಿಕಿತ್ಸೆಯ ಸಂದರ್ಭದಲ್ಲಿ ನಕಾರಾತ್ಮಕ ಚಿಂತನೆಗಳಿಂದ ದೂರವಿದ್ದು, ಆತ್ಮವಿಶ್ವಾಸ ಮತ್ತು ಆಶಾವಾದವನ್ನು ಉಳಿಸಿಕೊಳ್ಳುವುದು ಅಗತ್ಯ. ಚಿಕಿತ್ಸೆ ಪೂರ್ಣಗೊಂಡ ಬಳಿಕವೂ ನಿಯಮಿತ ಆರೋಗ್ಯ ತಪಾಸಣೆಗಳನ್ನು ಮಾಡಿಸಿಕೊಳ್ಳುವುದು ಅತ್ಯಂತ ಮುಖ್ಯ ಎಂದು ಅವರು ಸಲಹೆ ನೀಡಿದರು.

ಹೆಡ್ ಅಂಡ್ ನೆಕ್ ಆಂಕೊ ಸರ್ಜನ್ ಡಾ. ದೀಪಕ್ ಕಿತ್ತೂರು ಮಾತನಾಡಿ, ಬಾಯಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.

ಪುರುಷರಲ್ಲಿ ಬಾಯಿ ಕ್ಯಾನ್ಸರ್ ಪ್ರಮುಖ ಕ್ಯಾನ್ಸರ್‌ಗಳಲ್ಲಿ ಒಂದಾಗಿದ್ದು, ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ಪಡೆದರೆ ದೀರ್ಘಕಾಲೀನ ಬದುಕು ಸಾಧ್ಯವಾಗುತ್ತದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು 8 ರಿಂದ 12 ವರ್ಷಗಳಿಗೂ ಹೆಚ್ಚು ಕಾಲ ಆರೋಗ್ಯವಂತರಾಗಿ ಬದುಕುತ್ತಿರುವ ಅನೇಕ ರೋಗಿಗಳು ಇದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕ್ಯಾನ್ಸರ್ ಸರ್ವೈವರ್ ದೇವ ತಮ್ಮ ಅನುಭವ ಹಂಚಿಕೊಂಡು, 2012ರಲ್ಲಿ ಮಿಡ್‌ರೆಕ್ಟಲ್ ಕ್ಯಾನ್ಸರ್ ಪತ್ತೆಯಾದ ಬಳಿಕ ಲಿವರ್ ಹಾಗೂ ಶ್ವಾಸಕೋಶ ಸಂಬಂಧಿತ ಸಮಸ್ಯೆಗಳನ್ನು ಎದುರಿಸಿ ಒಟ್ಟು ಆರು ಶಸ್ತ್ರಚಿಕಿತ್ಸೆಗಳಿಗೆ ಒಳಗಾಗಿದ್ದರೂ, ವೈದ್ಯರ ಮಾರ್ಗದರ್ಶನ, ಕುಟುಂಬದ ಬೆಂಬಲ ಮತ್ತು ದೃಢ ಮನೋಬಲದಿಂದ ಬದುಕಿನಲ್ಲಿ ಮತ್ತೆ ಮುನ್ನಡೆಯಲು ಸಾಧ್ಯವಾಯಿತು ಎಂದು ಹೇಳಿದರು.

ಮತ್ತೋರ್ವ ಸರ್ವೈವರ್ ಸುರೇಶ ಮಾತನಾಡಿ, ಕ್ಯಾನ್ಸರ್ ಎಂಬುದು ಭಯಪಡುವ ಕಾಯಿಲೆಯಲ್ಲ. ಸಮಯಕ್ಕೆ ಸರಿಯಾಗಿ ರೋಗ ಪತ್ತೆ, ವೈದ್ಯರ ಸಲಹೆ ಪಾಲನೆ ಹಾಗೂ ಸೂಕ್ತ ಚಿಕಿತ್ಸೆಯಿಂದ ರೋಗವನ್ನು ಜಯಿಸಬಹುದು ಎಂದು ತಿಳಿಸಿದರು.

ರೇಡಿಯೇಷನ್ ಆಂಕೋಲಜಿಸ್ಟ ಡಾ. ಸುದರ್ಶನ ಗುಪ್ತ, ಸರ್ಜಿಕಲ್ ಆಂಕೋಲಾಜಿಸ್ಟ್ ಡಾ. ವಿವೇಕ ಎಂ. ಎ, ಮಾರುಕಟ್ಟೆ ವಿಭಾಗದ ಮುಖ್ಯಸ್ಥರು ಶ್ರೀ ಶೈಲೇಶ್ ಎಸ್ ಎನ್ ಇದ್ದರು. ಕ್ಯಾನ್ಸರ್ ಸರ್ವೈವರ್‌ಗಳು, ರೋಗಿಗಳು ಹಾಗೂ ಅವರ ಕುಟುಂಬ ಸದಸ್ಯರು ಭಾಗವಹಿಸಿ, ಪರಸ್ಪರ ಅನುಭವಗಳನ್ನು ಹಂಚಿಕೊಂಡರು. ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಜೊತೆಗೆ ರೋಗಿಗಳಲ್ಲಿ ಹೊಸ ಭರವಸೆ ಮತ್ತು ಆತ್ಮವಿಶ್ವಾಸ ತುಂಬುವಲ್ಲಿ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಿತು.

World Environment Day ಶಿವಮೊಗ್ಗದಲ್ಲಿ ಗಮನ ಸೆಳೆದ ವಿಶಿಷ್ಟ ರೀತಿಯ “ಪರಿಸರ ದಿನಾಚರಣೆ”

0

ದಿನಾಂಕ ೦೫.೦೬.೨೦೨೬ ರಂದು ಶುಕ್ರವಾರ ಬೆಳಿಗ್ಗೆ ೮ ಗಂಟೆಗೆ ಶಿವಮೊಗ್ಗ
ರಾಜೇಂದ್ರನಗರ ಬಡಾವಣೆಯ ಅನಿಕೇತನ ಪಾರ್ಕ್ನಲ್ಲಿ ಪರಿಸರ ದಿನಾಚರಣೆ ಅಂಗವಾಗಿ
ಸಸಿ ನೆಡುವ ಹಾಗೂ ಪರಿಸರ ಕುರಿತ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ
ಪ್ರಶಸ್ತಿ ವಿತರಿಸುವ ಹಾಗೂ ಪರಿಸರ ಪ್ರೇಮಿಗಳಾಗಿ ರಾಜೇಂದ್ರನಗರ –ರವೀಂದ್ರನಗರ
ಪಾರ್ಕ್ಗಳಲ್ಲಿ ಪ್ರತಿದಿನ ಸಾರ್ವಜನಿಕ ಉದ್ಯಾನವನದಲ್ಲಿ ನೀರು ಹಾಕುವ ಸ್ವಯಂ
ಸೇವಕರಿಗೆ – ಪೌರಕಾರ್ಮಿಕರಿಗೆ ಅಭಿನಂದಿಸುವ ಕಾರ್ಯಕ್ರಮ ನಡೆಯಿತು.
ರಾಜೇಂದ್ರನಗರ ನಿವಾಸಿಗಳ ಸಂಘದ ಶ್ರೀ ಅಶಿತ್ ಗೌಡರವರ ಅಧ್ಯಕ್ಷತೆಯಲ್ಲಿ ನಡೆದ
ಈ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಹಾತ್ಮಾಗಾಂಧಿ ಗ್ರಾಮೀಣ ಅಭಿವೃದ್ಧಿ
ಮತ್ತು ಸಮಾಜ ಪರಿವರ್ತನಾ ಟ್ರಸ್ಟ್ನ ನಿರ್ದೇಶಕರಾದ ಶ್ರೀ ಕೆ.ಸಿ. ಬಸವರಾಜು ರವರು
ಪರಿಸರದ ಅಳಿವು-ಉಳಿವು ನಮ್ಮ ಕೈಯಲ್ಲಿದ್ದು ವಿದ್ಯಾರ್ಥಿ ದೆಸೆಯಿಂದಲೇ ಮಕ್ಕಳಲ್ಲಿ ಪರಿಸರ
ಸಂರಕ್ಷಣೆ ಬಗ್ಗೆ ಒಲವು ಮೂಡಿಸಲು ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಬಗ್ಗೆ ಚಿತ್ರಕಲಾ
ಸ್ಪರ್ಧೆ ಏರ್ಪಡಿಸಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಇಂದಿನ ಕಾರ್ಯಕ್ರಮ
ನಡೆಸಲಾಯಿತು ಎಂದು ತಿಳಿಸಿದರು.
ಮುಂದುವರೆದು ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ನಿವಾಸಿಗಳಾಗಿರುವ
ನಾವು ಶಿವಮೊಗ್ಗದ ಬಗ್ಗೆ ಹೆಮ್ಮೆ ಪಡುವ ಜೊತೆಗೆ ಇಲ್ಲಿನ ಪರಿಸರ ಸಂರಕ್ಷಣೆಗಾಗಿ ಶಿವಮೊಗ್ಗ
ಜಿಲ್ಲೆ ಬಯಲುಸೀಮೆ ಯಾಗದಂತೆ ತಡೆಯಲು ಮರ-ಗಿಡಗಳನ್ನು ಹೆಚ್ಚು ಹೆಚ್ಚು ಬೆಳೆಸಿ
ಸಂರಕ್ಷಿಸಲು ಎಲ್ಲರ ಸಹಕಾರ ಮುಖ್ಯ ಆ ದಿಸೆಯಲ್ಲಿ ಶಿವಮೊಗ್ಗ ನಮ್ಮ ಹೆಮ್ಮೆ – ಜಿಲ್ಲೆಯ
ಪರಿಸರ ಉಳಿಸಲು ಪರಿಸರಕ್ಕಾಗಿ ಎಲ್ಲಾ ಬೇಧ-ಭಾವಗಳನ್ನು ಬದಿಗಿಟ್ಟು ಒಟ್ಟಾಗಿ
ಪ್ರಯತ್ನಿಸಬೇಕೆಂದು ಕರೆ ನೀಡಿದರು.


ರಾಜ್ಯಾದ್ಯಂತ ನಡೆಯಲಿರುವ ಈ ಆಂದೋಲನದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿನ
ಸಸಿಗಳನ್ನು ನೆಟ್ಟು ಬೆಳೆಸಲು ಎಲ್ಲರ ಸಹಕಾರ ಕೋರಿದರು.
ವಿದ್ಯಾರ್ಥಿಗಳು – ಯುವಕರು, ಮಹಿಳೆಯರು, ಹಿರಿಯ ನಾಗರೀಕರು, ಸಂಘ –
ಸಂಸ್ಥೆಗಳು, ಪರಿಸರಕ್ಕಾಗಿ ಒಟ್ಟಾಗಿ ಬಂದು ಅರ್ಥಪೂರ್ಣ ಕಾರ್ಯದಲ್ಲಿ
ಕೈಜೋಡಿಸಿರುವುದನ್ನು ಅವರು ಶ್ಲಾಫಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕಿ ್ತಗಳಾಗಿ
ಪಾಲ್ಗೊಂಡಿದ್ದ ಮಹಾತ್ಮಾಗಾಂಧಿ ಗ್ರಾಮೀಣಾಭಿವೃದ್ಧಿಯ ಸಂಸ್ಥೆಯ ಸದಸ್ಯರೂ ಹಾಗೂ ಕ್ಷಕಿರಣ ತಜ ್ಞರಾದ ಡಾ|| ಪರಮೇಶ್ವರ್ ಶಿಗ್ಗಾಂವ್ ರವರು ಪರಿಸರ ಹವಾಮಾನ ಬದಲಾವಣೆ
ನಮ್ಮ ಜವಾಬ್ದಾರಿ ಕುರಿತು ಉಪನ್ಯಾಸ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ಸಂತೋಷ್ ರವರು ಮತ್ತು ವಕೀಲರಾದ
ಶ್ರೀ ಕೆ.ಸಿ. ಬಸವರಾಜ್ ರವರು ಪರಿಸರ ಕುರಿತ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ
ಮಕ್ಕಳಿಗೆ ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ನವಚೇತನ ಮಹಿಳಾ ಸಂಘದ
ಅಧ್ಯಕ್ಷೆ ಶ್ರೀಮತಿ ಪ್ರೇಮ ಪೂರ್ಣಚಂದ್ರ ರೋಟರಿ ಶಾಲೆ ಪ್ರಾಂಶುಪಾಲರಾದ ಶ್ರೀ ಸೂರ್ಯ
ನಾರಾಯಣ್ ಭಾಹುಸಾರ ವಿಜನ್ ವೈಭವ್‌ನ ಅಧ್ಯಕ್ಷರಾದ ಶ್ರೀ ವಿಜಯ್ ಬೇದ್ರೆ
ಕಾರ್ಯದರ್ಶಿ ಶ್ರೀ ರಮೇಶ್ ಕುಮಾರ್ ಮುಸಳೆ ರವರು ಶಿವಮೊಗ್ಗ ಮಹಾನಗರ
ಪಾಲಿಕೆಯ ಅಧಿಕಾರಿಗಳಾದ ಶ್ರೀ ಪ್ರಭುರಾಜ್ ಮುಂತಾದವರು ಬೆಳಗಿನ ವಾಯುವಿಹಾರಿಗಳ
ಸಂಘದ ಶ್ರೀ ರಮೇಶ್, ಶ್ರೀ ಹಾಲೇಶಪ್ಪ, ಶ್ರೀ ಕೃಷ್ಣಮೂರ್ತಿ, ಶ್ರೀ ಹರಿಶಂಕರ್ ಸುರಭಿ
ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಸವಿತಾ ವಿನಾಯಕ್, ಸ್ವಯಂ ಸೇವಕ ಶ್ರೀ
ಮಂಜುನಾಥ ಡಿ.ಎಸ್. ಮುಂತಾದವರು, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಾನಗರ ಪಾಲಿಕೆ, ಶಿವಮೊಗ್ಗ ಮಹಾತ್ಮ
ಗಾಂಧಿ ಗ್ರಾಮೀಣಾಭಿವೃದಿ ್ಧ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್. ನವಚೇತನ ಮಹಿಳಾ
ಸಂಘ ರಾಜೇಂದ್ರನಗರ ಬೆಳಗಿನ ವಾಯುವಿಹಾರಿಗಳ ಸಂಘ, ರವೀಂದ್ರನಗರ ಬಾಹುಸಾರ
ವಿಜನ್ ಇಂಡಿಯಾ – ವೈಭವ್, ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್, ಶಿವಮೊಗ್ಗ ಇವರುಗಳ
ಸಂಯುಕ್ತ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಯುವಕರು
ಮಹಿಳೆಯರು ಹಿರಿಯ ನಾಗರೀಕರು ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು.


ಸಸಿ ನೆಡುವ ಮೂಲಕ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ
ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ
ಕಾರ್ಯದರ್ಶಿಗಳಾದ ಶ್ರೀ ಸಂತೋಷ್‌ರವರು ಮಾತನಾಡಿ ರಾಜ್ಯ ಕಾನೂನು ಸೇವಾ
ಪ್ರಾಧಿಕಾರ ರಾಜ್ಯದಲ್ಲಿ ೫ ಕೋಟಿ ಸಸಿಗಳನ್ನು ನೆಟ್ಟು ಬೆಳೆಸಬೇಕು ಎಂದು ಅವುಗಳ
ಸಂರಕ್ಷಣೆ ಮಾಡುವ ಕಾರ್ಯಕ್ರಮ ಆಯೋಜಿಸುತ್ತಿದ್ದು, ಈ ಕಾರ್ಯದಲ್ಲಿ ಸಂಘ –
ಸಂಸ್ಥೆಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕರ್ನಾಟಕ ರಾಜ್ಯದಲ್ಲಿ
ಪರಿಸರ ಸಂರಕ್ಷಣೆಗಾಗಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕೆಂದು ಕರೆನೀಡಿದರು
ರಾಜ್ಯಾದ್ಯಂತ ನಡೆಯಲಿರುವ ಈ ಆಂದೋಲನದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿನ
ಸಸಿಗಳನ್ನು ನೆಟ್ಟು ಬೆಳೆಸಲು ಎಲ್ಲರ ಸಹಕಾರ ಕೋರಿದರು.
ವಿದ್ಯಾರ್ಥಿಗಳು – ಯುವಕರು, ಮಹಿಳೆಯರು, ಹಿರಿಯ ನಾಗರೀಕರು, ಸಂಘ –
ಸಂಸ್ಥೆಗಳು, ಪರಿಸರಕ್ಕಾಗಿ ಒಟ್ಟಾಗಿ ಬಂದು ಅರ್ಥಪೂರ್ಣ ಕಾರ್ಯದಲ್ಲಿ
ಕೈಜೋಡಿಸಿರುವುದನ್ನು ಅವರು ಶ್ಲಾಫಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕಿ ್ತಗಳಾಗಿ
ಪಾಲ್ಗೊಂಡಿದ್ದ ಮಹಾತ್ಮಾಗಾಂಧಿ ಗ್ರಾಮೀಣಾಭಿವೃದ್ಧಿಯ ಸಂಸ್ಥೆಯ ಸದಸ್ಯರೂ ಹಾಗೂ ಕ್ಷಕಿರಣ ತಜ ್ಞರಾದ ಡಾ|| ಪರಮೇಶ್ವರ್ ಶಿಗ್ಗಾಂವ್ ರವರು ಪರಿಸರ ಹವಾಮಾನ ಬದಲಾವಣೆ
ನಮ್ಮ ಜವಾಬ್ದಾರಿ ಕುರಿತು ಉಪನ್ಯಾಸ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ಸಂತೋಷ್ ರವರು ಮತ್ತು ವಕೀಲರಾದ
ಶ್ರೀ ಕೆ.ಸಿ. ಬಸವರಾಜ್ ರವರು ಪರಿಸರ ಕುರಿತ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ
ಮಕ್ಕಳಿಗೆ ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ನವಚೇತನ ಮಹಿಳಾ ಸಂಘದ
ಅಧ್ಯಕ್ಷೆ ಶ್ರೀಮತಿ ಪ್ರೇಮ ಪೂರ್ಣಚಂದ್ರ ರೋಟರಿ ಶಾಲೆ ಪ್ರಾಂಶುಪಾಲರಾದ ಶ್ರೀ ಸೂರ್ಯ
ನಾರಾಯಣ್ ಭಾಹುಸಾರ ವಿಜನ್ ವೈಭವ್‌ನ ಅಧ್ಯಕ್ಷರಾದ ಶ್ರೀ ವಿಜಯ್ ಬೇದ್ರೆ
ಕಾರ್ಯದರ್ಶಿ ಶ್ರೀ ರಮೇಶ್ ಕುಮಾರ್ ಮುಸಳೆ ರವರು ಶಿವಮೊಗ್ಗ ಮಹಾನಗರ
ಪಾಲಿಕೆಯ ಅಧಿಕಾರಿಗಳಾದ ಶ್ರೀ ಪ್ರಭುರಾಜ್ ಮುಂತಾದವರು ಬೆಳಗಿನ ವಾಯುವಿಹಾರಿಗಳ
ಸಂಘದ ಶ್ರೀ ರಮೇಶ್, ಶ್ರೀ ಹಾಲೇಶಪ್ಪ, ಶ್ರೀ ಕೃಷ್ಣಮೂರ್ತಿ, ಶ್ರೀ ಹರಿಶಂಕರ್ ಸುರಭಿ
ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಸವಿತಾ ವಿನಾಯಕ್, ಸ್ವಯಂ ಸೇವಕ ಶ್ರೀ
ಮಂಜುನಾಥ ಡಿ.ಎಸ್. ಮುಂತಾದವರು, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಕೊನೆಯಲ್ಲಿ ಗಿಡಮರ ಬೆಳೆಸಿ ಸಂರಕ್ಷಿಸುವ ಬಗ್ಗೆ, ಪ್ಲಾಸಿಕ್ ಬಳಕೆ ತಗ್ಗಿಸಿ
ಸಾರ್ವಜನಿಕ ವಾಹನ ಬಳಸುವ ಬಗ್ಗೆ ಮಹಾತ್ಮಾಗಾಂದಿ ü ಗ್ರಾಮೀಣಾಭಿವೃದ್ಧಿ ಸಂಸ್ಥೆಯ
ನಿರ್ದೇಶಕರಾದ ಶ್ರೀ ಕೆ.ಸಿ. ಬಸವರಾಜ್ ರವರು ಪ್ರತಿಜ್ಞಾ ವಿಧಿ ಭೋಧಿಸಿದರು.


Bhadra Achukattu Area Development ರೈತರು ನೀರನ್ನ ಮಿತ ಬಳಸಿ,ಬಹುಬೆಳೆ ಮಾದರಿ ಅನುಸರಿಸಿ ಮಣ್ಣಿನ ಫಲವತ್ತತೆ ಕಾಪಾಡಬೇಕು,- ಡಾ.ಕೆ.ಪಿ.ಅಂಶುಮಂತ್.

0

Bhadra Achukattu Area Development ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಶಿವಮೊಗ್ಗ ಈ ಕಛೇರಿಯಲ್ಲಿ ದಿನಾಂಕ 06.06.2026 ರ ಶನಿವಾರದಂದು ಅಧ್ಯಕ್ಷರಾದ ಡಾ.ಕೆ.ಪಿ. ಅಂಶುಮಂತ್ ರವರ ಅಧ್ಯಕ್ಷತೆಯಲ್ಲಿ ವಿವಿಧ ಸಹಕಾರ ಸಂಘಗಳ ಪದಾಧಿಕಾರಿಗಳು ಮತ್ತು ಸದಸ್ಯರು, ಪ್ರಗತಿಪರ ರೈತರು, ಕೃಷಿಕರು ಹಾಗೂ ಕೃಷಿ ತಜ್ಞರುಗಳೊಂದಿಗೆ ಭದ್ರಾ ಕಾಡ ಪ್ರಾಧಿಕಾರದ ಉದ್ದೇಶ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿ ಭದ್ರಕಾಡ ಪ್ರಾಧಿಕಾರವು ಸಾಧಿಸಿರುವ ಪ್ರಗತಿಯ ಕುರಿತು
ಸಮಾಲೋಚನೆ ಮತ್ತು ತರಬೇತಿ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು .

ಮಾನ್ಯ ಅಧ್ಯಕ್ಷರು ಮಾತನಾಡುತ್ತಾ – ನೀರಾವರಿ ಕ್ಷೇತ್ರದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಜವಾಬ್ದಾರಿಗಳ ಬಗ್ಗೆ ವಿವರಿಸಿದರು.ರೈತರು ಬಹು ಬೆಳೆ ಮಾದರಿಯನ್ನು ಅನುಸರಿಸಿ ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳಬೇಕು ಹಾಗೂ ನೀರನ್ನು ಮಿತವಾಗಿ ಬಳಸಬೇಕು, ರೈತರು ವಿವಿಧ ಮಾದರಿಯ ಬೆಳೆಯನ್ನು ಬೆಳೆದು ಕೊಯ್ಲಿನ ಬಳಿಕದ ತಂತ್ರಜ್ಞಾನಗಳನ್ನು ಬಳಸಿ ಮಾರುಕಟ್ಟೆಯನ್ನು ಕಂಡುಕೊಳ್ಳಬೇಕು.

ಹೆಚ್ಚಿನ ಲಾಭವನ್ನು ಗಳಿಸಿಕೊಳ್ಳಬೇಕು ಇದಕ್ಕೆ ನೀರು ಬಳಕೆದಾರರ ಸಹಕಾರ ಸಂಘಗಳು ಹೊಸ ಚಿಂತನೆಯೊಂದಿಗೆ ಆಧುನಿಕ ತಂತ್ರಜ್ಞಾನವನ್ನು ಬಳಸಿ ಕೃಷಿಯಲ್ಲಿ ವಿವಿಧ ರೀತಿಯಲ್ಲಿ ಅಭಿವೃದ್ಧಿಗಳನ್ನು ಸಾಧಿಸಿ ಆರ್ಥಿಕವಾಗಿ ಸಬಲರಾಗಿ
ಮುನ್ನಡೆಯಬೇಕು ಎಂದು ತಿಳಿಸಿದರು.

Bhadra Achukattu Area Development ಕಾಡಾ ಪ್ರಾಧಿಕಾರದ ಕಾಮಗಾರಿಗಳ ಮತ್ತು ತರಬೇತಿ ಹಾಗೂ ಸಾಧಿಸಿದ ಪ್ರಗತಿ ಯಂತ್ರೋಪಕರಣಗಳ ವಿತರಣೆ ಮತ್ತಿತರ ಕಾರ್ಯ ಚಟುವಟಿಕೆಗಳ ಕುರಿತು ಭೂ ಅಭಿವೃದ್ಧಿ ಅಧಿಕಾರಿಗಳು ಕೆ, ಪ್ರಶಾಂತ್ (ತಾಂತ್ರಿಕ),(ಕೃಷಿ)(ಪ್ರ) ರವರು ಮತ್ತು ಡಾ.ನಾಗೇಶ್ ಎಸ್ ಡೋಂಗರೆ , ಭೂ ಅಭಿವೃದ್ಧಿ ಅಧಿಕಾರಿ ( ಸಹಕಾರ ) ಇವರುಗಳು ವಿವರಿಸಿದರು.

ಈ ಸಂದರ್ಭದಲ್ಲಿ ಪ್ರಾಧಿಕಾರದ ತಾಂತ್ರಿಕ ಕೃಷಿ ಮತ್ತು ಸಹಕಾರ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Wrestling in India ಶಿವಮೊಗ್ಗದ ಕ್ರೀಡಾಶಾಲೆಯ ಅನಿಲ್ ಮತ್ತು ಮನೋಜ್ ಅವರಿಗೆ ಕುಸ್ತಿ ಸ್ಪರ್ಧೆಯಲ್ಲಿ ಬಂಗಾರ ಪದಕದ ಗೌರವ.

Wrestling in India ಪುದುಚೆರಿಯಲ್ಲಿ ಮೇ 16 ಮತ್ತು 17 ರಂದು ನಡೆದ 15 ವರ್ಷದೊಳಗಿನ ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಫ್‌ನಲ್ಲಿ ಶಿವಮೊಗ್ಗ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕ್ರೀಡಾಶಾಲಯ ಕ್ರೀಡಾಪಟುಗಳಾದ ಅನಿಲ್‌ಕುಮಾರ್ ಸೌಧಿ ಫ್ರೀಸ್ಟೈಲ್-41 ಕೆ.ಜಿ.ಯಲ್ಲಿ ಮತ್ತು ಮನೋಜ್ ಭಜಂತ್ರಿ ಗ್ರೀಕೋ ರೋಮನ್ -52 ಕೆ.ಜಿ. ಕುಸ್ತಿಯಲ್ಲಿ ಭಾಗವಹಿಸಿ ಬಂಗಾರ ಪದಕ ವಿಜೇತರಾಗಿದ್ದಾರೆ.

Wrestling in India ಈ ಕ್ರೀಡಾಪಟುಗಳು ಇಲಾಖೆಯ ಕ್ರೀಡಾ ವಸತಿ ನಿಲಯದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ. ವಿಜೇತರಿಗೆ ಇಲಾಖೆಯ ಸಹಾಯಕ ನಿರ್ದೇಶಕರಾದ ರೇಖ್ಯಾ ನಾಯ್ಕ್, ಕುಸ್ತಿ ತರಬೇತುದಾರರಾದ ರಾಜಪ್ಪ ಎಂ. ಫಳಕೆ ಮತ್ತು ಸಂಜಯ್ ಈ. ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

VISL ಪ್ರತಿಭಾ ಪುರಸ್ಕಾರ ಪಡೆದ ಮಕ್ಕಳ ಶೈಕ್ಷಣಿಕ ಮತ್ತು ವೃತ್ತಿಪರ ಜೀವನವು ಯಶಸ್ವಿಯಾಗಲಿ- ಅನುಪ್ ಕುಮಾರ್

0

VISL ವಿಐಎಸ್‌ಎಲ್ ಉದ್ಯೋಗಿಗಳ ಪ್ರತಿಭಾವಂತ ಮಕ್ಕಳಿಗೆ ಸನ್ಮಾನ
ಸೈಲ್ ಸಂಸ್ಥೆಯು ತನ್ನ ಉದ್ಯೋಗಿಗಳ ಮಕ್ಕಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಸಂಪ್ರದಾಯವನ್ನು ರೂಡಿಸಿಕೊಂಡು ಬರುತ್ತಿದ್ದು, ಅದರ ಅಂಗವಾಗಿ, ಸೈಲ್-ವಿಐಎಸ್‌ಎಲ್ ವತಿಯಿಂದ 2026ರ ಜೂನ್ 05ರಂದು ಭದ್ರಾವತಿಯ ಭದ್ರಾ ಅತಿಥಿಗೃಹದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಆಯೊಜಿಸಲಾಗಿತ್ತು.

2025-26ನೇ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ (೧೦ನೇ ತರಗತಿ) ಮತ್ತು ದ್ವಿತೀಯ ಪಿ.ಯು.ಸಿ (12ನೇ ತರಗತಿ) ಪರೀಕ್ಷೆಯಲ್ಲಿ 90% ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ವಿಐಎಸ್‌ಎಲ್ ಕಾರ್ಖಾನೆಯ ಉದ್ಯೋಗಿಗಳ ಮಕ್ಕಳನ್ನು ಈ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.

ಒಟ್ಟು ಹತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮವು ಸಾಂಪ್ರದಾಯಿಕವಾಗಿ ಜ್ಯೋತಿ ಬೆಳಗುವ ಮೂಲಕ ಆರಂಭವಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಅನುಪ್ ಕುಮಾರ್, ಕಾರ್ಯಪಾಲಕ ನಿರ್ದೇಶಕರು, ಸೈಲ್-ವಿಐಎಸ್‌ಎಲ್, ವಿದ್ಯಾರ್ಥಿಗಳ ಅತ್ಯುತ್ತಮ ಶೈಕ್ಷಣಿಕ ಸಾಧನೆಯನ್ನು ಅಭಿನಂದಿಸಿ, ಪ್ರಶಂಸಾ ಪತ್ರಗಳು ಹಾಗೂ ನಗದು ಬಹುಮಾನಗಳನ್ನು ವಿತರಿಸಿದರು.

VISL ಜೊತೆಗೆ ಅವರ ಮುಂದಿನ ಶೈಕ್ಷಣಿಕ ಹಾಗೂ ವೃತ್ತಿಪರ ಜೀವನವು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶ್ರೀ ಬಿ. ವಿಶ್ವನಾಥ, ಮುಖ್ಯ ಮಹಾಪ್ರಬಂಧಕರು (ಮಾನವ ಸಂಪನ್ಮೂಲ), ಶ್ರೀ ಅಮೃತ್ ಕುಮಾರ್, ಅಧ್ಯಕ್ಷರು, ವಿಐಎಸ್‌ಎಲ್ ಕಾರ್ಮಿಕರ ಸಂಘ ಸೇರಿದಂತೆ, ವಿಐಎಸ್‌ಪಿಯ ಹಿರಿಯ ಅಧಿಕಾರಿಗಳು, ವಿಐಎಸ್‌ಎಲ್ ಕಾರ್ಮಿಕರ ಸಂಘ ಮತ್ತು ಅಧಿಕಾರಿಗಳ ಸಂಘದ ಪದಾಧಿಕಾರಿಗಳು, ನೌಕರರು ಹಾಗೂ ಅವರ ಕುಟುಂಬದ ಸದಸ್ಯರು, ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ತಮ್ಮ ಅನುಭವಗಳನ್ನು ಹಂಚಿಕೊಂಡು, ತಮ್ಮ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಿದ ಸೈಲ್-ವಿಐಎಸ್‌ಎಲ್ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು.

ಶ್ರೀ ನವೀನ್ ರಾಹುಲ್, ಸಹಾಯಕ ಮಹಾಪ್ರಬಂಧಕರು (ನಗರಾಡಳಿತ ಮತ್ತು ಸಾರ್ವಜನಿಕ ಸಂಪರ್ಕ) ಕಾರ್ಯಕ್ರಮವನ್ನು ನಿರೂಪಿಸಿದರು.

SHARATH ANANTHAMURTHY ಶಿಕ್ಷಣದ ಜೊತೆ ಕೌಶಲ್ಯಾಭಿವೃದ್ಧಿ ಹೊಂದದಿದ್ದರೆ ಅದು ಅಪೂರ್ಣ- ಪ್ರೊ.ಶರತ್ ಅನಂತ ಮೂರ್ತಿ.

0

SHARATH ANANTHAMURTHY ಶಿಕ್ಷಣದ ಜೊತೆಗೆ ಕೌಶಲ್ಯಾಭಿವೃದ್ಧಿ ಹೊಂದದಿದ್ದರೆ ಅದು ಅಪೂರ್ಣವಾಗಿರುತ್ತದೆ. ಕೇವಲ ಪದವಿ ವ್ಯಕ್ತಿಗೆ ಪರಿಚಯ ನೀಡಬಹುದೇ ಹೊರತು ಉದ್ಯೋಗದ ಭರವಸೆ ನೀಡುವುದಿಲ್ಲ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಾ. ಶರತ್ ಅನಂತಮೂರ್ತಿ ಅಭಿಪ್ರಾಯಪಟ್ಟರು.

ಶಿವಮೊಗ್ಗ ನಗರದಲ್ಲಿ ಮಲನಾಢ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಶಿಕ್ಷಣದ ಜೊತೆಗೆ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಭಾರತದಲ್ಲಿ ಸಂಪನ್ಮೂಲಗಳ ಕೊರತೆಯಿಲ್ಲದಿದ್ದರೂ ಅವುಗಳನ್ನು ಸಮರ್ಪಕವಾಗಿ ಬಳಸುವಲ್ಲಿ ನಾವು ಹಿಂದುಳಿದಿದ್ದೇವೆ ಎಂದು ಅವರು ಹೇಳಿದರು. ಜಿಡಿಪಿ ಏರಿಕೆಯಾಗುತ್ತಿದೆ ಎನ್ನಲಾಗುತ್ತಿದ್ದರೂ ಅದರ ಲಾಭ ಕೆಲವೇ ಬಂಡವಾಳಶಾಹಿಗಳಿಗೆ ಸೀಮಿತವಾಗಿದ್ದು, ನೆಲಮಟ್ಟದಲ್ಲಿ ಉದ್ಯೋಗಾವಕಾಶಗಳು ಕಡಿಮೆಯಾಗುತ್ತಿರುವುದು ಕಳವಳಕಾರಿ ಸಂಗತಿ ಎಂದರು.

ಯುವಕರು ನಿರಂತರ ಪರಿಶ್ರಮದ ಮೂಲಕ ತಮ್ಮ ಪ್ರತಿಭೆಯನ್ನು ಸರಿಯಾದ ದಿಕ್ಕಿನಲ್ಲಿ ಬಳಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಪ್ರಾಯೋಗಿಕ ಜ್ಞಾನ ಹಾಗೂ ಕೌಶಲ್ಯವನ್ನು ಬೆಳೆಸಿಕೊಂಡರೆ ತಮ್ಮ ಜೀವನದ ಜೊತೆಗೆ ದೇಶದ ಆರ್ಥಿಕತೆಯನ್ನೂ ಬಲಪಡಿಸಬಹುದು ಎಂದು ತಿಳಿಸಿದರು. ಮಲನಾಢ್ ಎಜುಕೇಶನಲ್ ಟ್ರಸ್ಟ್ ನಡೆಸುತ್ತಿರುವ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ರಾಜ್ಯಕ್ಕೆ ಮಾದರಿಯಾಗಿದ್ದು, ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮ್ಯಾಕ್ಸ್ ಆಸ್ಪತ್ರೆಯ ಹಿರಿಯ ಮನೋವೈದ್ಯ ಡಾ. ಆಫ್ತಾಬ್ ಮಾಲ್ದಾರ್, ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ಸಾಧನೆಯ ನಂತರವೂ ನಿರಂತರ ಪರಿಶ್ರಮವನ್ನು ಮುಂದುವರಿಸಬೇಕು. ಯಶಸ್ಸಿನೊಂದಿಗೆ ವಿನಯಶೀಲತೆಯನ್ನು ಬೆಳೆಸಿಕೊಳ್ಳಬೇಕು ಹಾಗೂ ಸಾಮಾಜಿಕ ಜಾಲತಾಣಗಳ ಅನಗತ್ಯ ಬಳಕೆಯಿಂದ ದೂರವಿದ್ದು ಶಿಕ್ಷಣ ಮತ್ತು ವ್ಯಕ್ತಿತ್ವ ವಿಕಾಸದತ್ತ ಗಮನಹರಿಸಬೇಕು ಎಂದು ಸಲಹೆ ನೀಡಿದರು.

SHARATH ANANTHAMURTHY ಮಲನಾಢ್ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಎಂಜಿನಿಯರ್ ಮೊಹಮ್ಮದ್ ಇಬ್ರಾಹಿಂ ಮಾತನಾಡಿ, ಶಿಕ್ಷಣ, ಕೌಶಲ್ಯ ಮತ್ತು ಸಹೋದರತ್ವವನ್ನು ಬೆಳೆಸುವುದು ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ ಎಂದರು. ಕಳೆದ ಆರು ವರ್ಷಗಳಿಂದ ಟ್ರಸ್ಟ್ ಈ ದಿಕ್ಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಶೈಕ್ಷಣಿಕ ಹಾಗೂ ಸಾಮಾಜಿಕ ಯೋಜನೆಗಳನ್ನು ಇನ್ನಷ್ಟು ವಿಸ್ತರಿಸಲಾಗುವುದು ಎಂದು ತಿಳಿಸಿದರು.

ಟ್ರಸ್ಟ್ ಆಡಳಿತಾಧಿಕಾರಿ ಏಜಾಜ್ ಅಹ್ಮದ್ ಸಂಸ್ಥೆಯ ಉದ್ದೇಶಗಳು ಮತ್ತು ಕಾರ್ಯಚಟುವಟಿಕೆಗಳ ಕುರಿತು ವಿವರಿಸಿ, ಬಡ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ಶಿಕ್ಷಣ ಸೌಲಭ್ಯ ಒದಗಿಸುವುದು ಟ್ರಸ್ಟ್‌ನ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಮುದಸ್ಸಿರ್ ಅಹ್ಮದ್, ನಿರ್ದೇಶಕ ಇಫ್ತಿಖಾರ್ ಅಹ್ಮದ್ ಖಾನ್, ಮೊಹಮ್ಮದ್ ಲಿಯಾಖತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರಾಂಶುಪಾಲ ಫಿರೋಜ್ ಖಾನ್ ಹಾಗೂ ಉಪನ್ಯಾಸಕಿ ಮುಸ್ಕಾನ್ ರಾಠೋಡ್ ನಿರೂಪಿಸಿದರು.

ಸಮಾರಂಭದಲ್ಲಿ ಪಿಯುಸಿಯ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಏಳು ವಿದ್ಯಾರ್ಥಿಗಳು ಮತ್ತು ಎಸ್‌ಎಸ್‌ಎಲ್‌ಸಿಯ ಐದು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು. ಜೊತೆಗೆ 15 ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು.

Shimoga News ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆಮೂತ್ರ ತಪಾಸಣೆ, ಬಿ.ಪಿ. ಕಿಡ್ನಿ, ಮಧುಮೇಹ ಪತ್ತೆ ಉಚಿತ ತಪಾಸಣೆ ಮಾಡಲಾಗುವುದು- ಡಾ.ಚಂದ್ರಶೇಖರ್.

0

Shimoga News ಶಿವಮೊಗ್ಗದ ತೃಪ್ತಿ ಹೆಲ್ತ್ ಕೇರ್ ಆಶ್ರಯದಲ್ಲಿ ಭಾವಸಾರ ವಿಜನ್ ಇಂಡಿಯ ವೈಭವ್ ಸೀನಿಯರ್ ಸಿಟಿಜನ್ ಸಮಾಜದವರಿಗೆ ಉಚಿತ ಮೂತ್ರ ರೋಗ, ಮೂತ್ರಕೋಶ ತಪಾಸಣೆ ಮತ್ತು ಮಾಹಿತಿ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮೂತ್ರ ರೋಗ ತಜ್ಞ ಡಾ| ಚಂದ್ರ ಶೇಖರ್ ಅವರು, ಆರೋ ಗ್ಯವೇ ಭಾಗ್ಯ, ಆರೋಗ್ಯವಿಲ್ಲದಿದ್ದರೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಆದ್ದರಿಂದ ಪ್ರತಿಯೊಬ್ಬರು ಆರೋಗ್ಯದ ಕಡೆ ಹೆಚ್ಚು ಗಮನ ಕೊಡಬೇಕು ಎಂದರು.

Shimoga News ಶಿವಮೊಗ್ಗದ ದುರ್ಗೀಗುಡಿ ಯಲ್ಲಿರುವ ನಮ್ಮ ಸೆಂಟರ್‌ನಲ್ಲಿ ಆರ್ಥಿಕವಾಗಿ ಸಂಕಷ್ಠದಲ್ಲಿರುವವರಿಗೆ ಮತ್ತು ಹಲವಾರು ಸಂಘ ಸಂಸ್ಥೆಗಳಿಗೆ ಉಚಿತವಾಗಿ ಮೂತ್ರ ರೋಗ, ಬಿ.ಪಿ. ಕಿಡ್ನಿ, ಮಧುಮೇಹ ಮತ್ತಿತರ ತಪಾಸಣೆಗಳನ್ನು ನಡೆಸಲಾಗುತ್ತಿದ್ದು, ರೋಗಿಗಳು ಇದರ ಸದುಪಯೋಗ ಪಡೆಯಲು ತಿಳಿಸಿದರು. ತಪಾಸಣೆಯಲ್ಲಿ 26ಕ್ಕೂ ಹೆಚ್ಚು ಜನರು ಇದರ ಪ್ರಯೋಜನ ಪಡೆದರು.

ಆಸ್ಪತ್ರೆ ಪ್ರಾರಂಭವಾದಾಗಿನಿಂದ ಇದುವರೆಗೆ 2224ಕ್ಕೂ ಹೆಚ್ಚು ಜನರು ಇದರ ಪ್ರಯೋಜನ ಪಡೆದರು. ಹೆಲ್ತ್ ಕೇರ್‌ನ ರಜಿನಿ, -ಸುಶ್ಮಾ, ರಕ್ಷಿತಾ ಅವರು ಕಾರ್ಯಕ್ರಮ ನಡೆಸಿಕೊಟ್ಟರು.

Backward Classes Welfare Department 2026-27 ನೇ ಸಾಲಿಗೆ ಸರ್ಕಾರದ ಬುಡಕಟ್ಟು ಆಶ್ರಮ ವಸತಿ ಶಾಲೆಗೆ ಒಂದು ವರ್ಷ ಅವಧಿಗೆ 8 ಅತಿಥಿ ಶಿಕ್ಷಕರ ನೇಮಕಾತಿ.

0

Backward Classes Welfare Department 2026-27ನೇ ಸಾಲಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಆಶ್ರಮ ವಸತಿಶಾಲೆ-ಹಕ್ಕಿಪಿಕ್ಕಿ ಕ್ಯಾಂಪ್, ಸದಾಶಿವಪುರ ಶಿವಮೊಗ್ಗ ತಾಲೂಕು ಹಾಗೂ ಹಿರೇಮನೆ, ಸಾಗರ ತಾಲೂಕು ಇಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಒಂದು ವರ್ಷದ ಅವಧಿಗೆ ಖಾಲಿಯಿರುವ 8 ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.

ಕನ್ನಡ, ಇಂಗ್ಲೀಷ್, ಗಣಿತ, ವಿಜ್ಞಾನ, ಹಿಂದಿ, ಸಮಾಜವಿಜ್ಞಾನ ಹಾಗೂ ದೈಹಿಕ ಶಿಕ್ಷಣ ವಿಷಯಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು, ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಪಿ.ಯು.ಸಿ., ಡಿ.ಇಡಿ ಮತ್ತು ಟಿಇಟಿ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಬಿಎ/ಬಿಎಸ್ಸಿ, ಬಿ.ಇಡಿ ಹಾಗೂ ಟಿಇಟಿ ವಿದ್ಯಾರ್ಹತೆ ಕಡ್ಡಾಯವಾಗಿದೆ.

Backward Classes Welfare Department ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜೂ. 10 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-200266 ಹಾಗೂ ಶಿವಮೊಗ್ಗ ಮತ್ತು ಸಾಗರ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವುದು.