Tuesday, February 10, 2026
Tuesday, February 10, 2026
Home Blog Page 72

S.N. Channabasappa ಅವಕಾಶ ದೊರೆತರೆ ವಿಕಲಚೇತನರು ಏನು ಬೇಕಾದರೂ ಸಾಧಿಸುತ್ತಾರೆ- ಶಾಸಕ ಚನ್ನಬಸಪ್ಪ

0

S.N. Channabasappa ವಿಕಲಚೇತನರಿಗೆ ಅನುಕಂಪವಲ್ಲ-ಅವಕಾಶ ಬೇಕಾಗಿದ್ದು, ಅದು ದೊರೆತಲ್ಲಿ ಏನು ಬೇಕಾದರೂ ಸಾಧಿಸುತ್ತಾರೆಂದು ತೊರಿಸಿಕೊಟ್ಟಿದ್ದಾರೆ ಎಂದು ಶಾಸಕರಾದ ಎಸ್.ಎನ್. ಚನ್ನಬಸಪ್ಪ ನುಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಶಿವಮೊಗ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲೆಯಲ್ಲಿ ವಿಕಲಚೇತನರ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿರುವ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಕುವೆಂಪು ರಂಗಮಂದಿರದಲ್ಲಿ “ಸಾಮಾಜಿಕ ಪ್ರಗತಿಯನ್ನು ಸಾಧಿಸಲು ವಿಕಲಚೇತನರನ್ನು ಒಳಗೊಂಡ ಸಮಾಜವನ್ನು ರೂಪಿಸುವುದು” ಎಂಬ ಘೋಷವಾಕ್ಯದಡಿ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೇವಲ ವಿಶೇಷಚೇತನರು ಮಾತ್ರವಲ್ಲದೆ ಇಡೀ ಮನುಕುಲವೇ ನೆನಪಿಡುವಂತಹ ದಿನ ಇವತ್ತಾಗಿದೆ. “ಮನಸ್ಸಿದ್ದರೆ ಮಾರ್ಗ” ಎಂಬ ನಾಣ್ಗುಡಿಯಂತೆ ವಿಶೇಷಚೇತನ ಮಹಿಳೆಯರು ಸಾಧನೆ ಮಾಡುತ್ತಿದ್ದಾರೆ. ಕ್ರಿಕೆಟ್‌ನಲ್ಲಿ ಕಾವ್ಯ, ಕುಸ್ತಿಯಲ್ಲಿ ಗೌರಮ್ಮ, ಥ್ರೋಬಾಲ್‌ನಲ್ಲಿ ಜ್ಯೋತಿ ಇಂತಹ ವಿಶೇಷಚೇತನ ಮಹಿಳೆಯರು ಅವಕಾಶ ಸಿಕ್ಕರೆ ಇಡೀ ಜಗತ್ತನ್ನೆ ಗೆಲ್ಲುತ್ತೇವೆ ಎಂದು ತೋರಿಸಿದ್ದಾರೆ.

ಜಿಲ್ಲೆಯ ಮಹಿಳೆಯರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ಈ ದೇಶಕ್ಕೆ ಕೀರ್ತಿ ಮತ್ತು ಗೌರವ ತಂದಿದ್ದಾರೆ. ದೇಹದ ಎಲ್ಲಾ ಅಂಗಗಳು ಸರಿಯಾಗಿದ್ದೂ ಸಾಧನೆ ಮಾಡಲು ಹಿಂಜರಿಯುವ ಪೀಳಿಗೆಗೆ ವಿಶೇಷಚೇತನರು ಮಾದರಿಯಾಗಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ನಮ್ಮ ಸಮಾಜದಲ್ಲಿ ತಾಯಿಗಿಂತ ದೊಡ್ಡ ಶಕ್ತಿ ಇನ್ನೊಂದಿಲ್ಲ. ಆಕೆಗೆ ಬದಲಿ ವ್ಯವಸ್ಥೆಯೂ ಇಲ್ಲ. ಇಂತಹ ವಿಶೇಷಚೇತನ ಮಕ್ಕಳನ್ನು ಸಾಕಿ, ಸಲುಹಿ ಸಾಧನೆ ಮಾಡಲು ಮಾನಸಿಕವಾಗಿ ಸಿದ್ದಗೊಳಿಸಿದ ತಾಯಂದಿರೆಲ್ಲರಿಗೂ ಅಭಿನಂದನೆಗಳು. ಇಂತಹ ಮಕ್ಕಳು ಇರುವ ಮನೆಗಳು ಬಲಯುತವಾಗಿರುತ್ತದೆ.

ವಿಶೇಷಚೇತನರು ಇತರರ ಮೇಲೆ ಅವಲಂಬಿತವಾಗದೆ ತಮ್ಮ ಸಾಧನೆಯ ಹಾದಿಯನ್ನು ರೂಪಿಸಿಕೊಳ್ಳಬೇಕು. ಅದಕ್ಕೆಂದೇ ನಿಮ್ಮ ಕುಟುಂಬಗಳು, ಸರ್ಕಾರಗಳು ಬೆಂಬಲವಾಗಿ ನಿಂತು, ಅನೇಕ ಸವಲತ್ತುಗಳನ್ನು ನೀಡುತ್ತಿವೆ ಎಂದರು.

ವಿಧಾನ ಪರಿಷತ್ ಶಾಸಕರಾದ ಧನಂಜಯ ಸರ್ಜಿ ಮಾತನಾಡಿ, ವಿಕಲಚೇತನರಲ್ಲ ಇವರು ವಿಶೇಷಚೇತನರು. ಇವರಿಗೆ ಅನುಕಂಪ ಬೇಕಾಗಿಲ್ಲ, ಬದುಕುವ ಹಕ್ಕು ನೀಡಬೇಕು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಈ ಮೂರೂ ವಿಶೇಷಚೇತನರನ್ನು ವೇದಿಕೆಗೆ ಆಹ್ವಾನಿಸಿರುವುದು ಈ ಕಾರ್ಯಕ್ರಮದ ಗೌರವವನ್ನು ಹೆಚ್ಚಿಸಿದೆ ಎಂದರು.

ವೈಫಲ್ಯತೆ ದೇಹಕ್ಕೆ ಬರಬಹುದು, ಮನಸ್ಸಿಗಲ್ಲ. ದೇಹಕ್ಕೆ ಮಿತಿ ಇರಬಹುದು, ಕನಸಿಗಲ್ಲ. ಅದಕ್ಕೆ ಪ್ರತ್ಯಕ್ಷ ಸಾಕ್ಷಿ ಕಾವ್ಯ, ಗೌರಮ್ಮ, ಜ್ಯೋತಿ. ಮನಸ್ಸು ಮಾಡಿದರೆ ಸಾಧನೆಗೆ ಯಾವುದ್ದೇ ಅಡ್ಡಿ ಇಲ್ಲ ಎಂಬುದಕ್ಕೆ ಈ ಮೂವರು ಉತ್ತಮ ಉದಾಹರಣೆ. ನೀವೆಲ್ಲಾ ಉದಾತ್ತ ಕನಸುಗಳನ್ನು ಕಾಣಬೇಕು. ಅದನ್ನು ಸಾಧಿಸುವಲ್ಲಿ ಪ್ರಯತ್ನಿಸಬೇಕು. ಕಣ್ಣಿದ್ದರೂ ಕಣ್ಣೆತ್ತಿ ನೋಡದವರು ನಿಜವಾದ ಕುರುಡರು. ಸಾಧನೆ ಮಾಡದೇ ಇರುವುದು ನಿಜವಾದ ಅಂಗವಿಕಲ್ಯ ಎಂದರು.

ವಿಧಾನ ಪರಿಷತ್ ಶಾಸಕಿ ಬಲ್ಕೀಶ್ ಬಾನು ಮಾತನಾಡಿ, ವಿಕಲಚೇತನರ ಬಗ್ಗೆ ಅಪಾರ ಪ್ರೀತಿ ಮತ್ತು ಕಾಳಜಿ ಹೊಂದಿದ್ದ ವಿಶ್ವ ಆರೋಗ್ಯ ಸಂಸ್ಥೆ 1992 ರಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಮಾಡಲು ನಿರ್ಧರಿಸಿತು. ವಿಕಲಚೇತನ ಮಹಿಳೆಯರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ಶಿವಮೊಗ್ಗಕ್ಕೆ ಕೀರ್ತಿ ತಂದಿದ್ದಾರೆ.

ಈ ಸಾಧನೆ ಮಾಡಲು ಮಾನಸಿಕವಾಗಿ ಹಾಗೂ ದೈಹಿಕವಾಗಿ ಶಕ್ತಿ ಕೊಟ್ಟಿರುವ ನಿಮ್ಮ ಪೋಷಕರು, ಶಿಕ್ಷಕರು ಹಾಗೂ ಶ್ರಮಿಸಿದ ನಿಮಗೆ ಯಶಸ್ಸಿನ ಗೌರವ ಸಲ್ಲಬೇಕು ಎಂದ ಅವರು ಇವರನ್ನು ಲಾಲನೆ ಪಾಲನೆ ಮಾಡುವ ತಾಯಂದಿರಿಗೆ ಗೌರವಧವನ್ನು ಹೆಚ್ಚಿಸಬೇಕು. ಈ ಬಗ್ಗೆ ಸರ್ಕಾರಕ್ಕೆ ಮನವಿಯನ್ನು ಮಾಡುತ್ತೇವೆ ಎಂದರು.

S.N. Channabasappa ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್, ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷ ತಾಜುದ್ದೀನ್‌ಖಾನ್, ಡಿಸಿ ಕಚೇರಿ ತಹಸೀಲ್ದಾರ್ ಪ್ರದೀಪ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿಯ ಇಲಾಖೆಯ ಉಪ ನಿರ್ದೇಶಕಿ ಭಾರತಿ ಬಣಕಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸುವರ್ಣ ವಿ. ನಾಯ್ಕ್, ಅಂತರಾಷ್ಟ್ರೀಯ ಮಹಿಳಾ ದೃಷ್ಟಿವಿಕಲಚೇತನ ವಿಶ್ವಕಪ್ ಕ್ರೀಡಾಪಟು ಕಾವ್ಯ, ಅಂತರಾಷ್ಟ್ರೀಯ ಪಂಜುಕುಸ್ತಿ ಕ್ರೀಡಾಪಟು ಗೌರಮ್ಮ, ಅಂತರಾಷ್ಟ್ರೀಯ ಥ್ರೋಬಾಲ್ ಕ್ರೀಡಾಪಟು ಜ್ಯೋತಿ, ವಿವಿಧ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

TET Exam ಗಮನಿಸಿ. ಡಿಸೆಂಬರ್ 7. ಶಿವಮೊಗ್ಗದಲ್ಲಿ2025 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ

0

TET Exam 2025 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು (ಕೆಎಆರ್‌ಟಿಇಟಿ-2025) ಡಿ.07 ರ ಭಾನುವಾರದಂದು ಶಿವಮೊಗ್ಗ ನಗರದಲ್ಲಿ ನಡೆಯಲಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಅಧಿವೇಶನಕ್ಕೆ 3169 ಅಭ್ಯರ್ಥಿಗಳು ಹಾಗೂ ಪೇಪರ್ -2 ಕ್ಕೆ 8677 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಬೆಳಗಿನ ಅವಧಿಗೆ 11 ಪರೀಕ್ಷಾ ಕೇಂದ್ರಗಳು ಮತ್ತು 2ನೇ ಅವಧಿಗೆ ಒಟ್ಟು 31 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ.

ಬೆಳಗಿನ ಅವಧಿಯು ಬೆಳಿಗ್ಗೆ 90.30 ರಿಂದ 12 ಮತ್ತು ಮಧ್ಯಾಹ್ನದ ಅವಧಿಯು 2.00 ರಿಂದ ಸಂಜೆ 4.30 ರವರೆಗೆ ನಡೆಯಲಿದೆ.

ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿಗಳು ಘೋಷಿಸಿರುತ್ತಾರೆ.

TET Exam ಪರೀಕ್ಷಾರ್ಥಿಗಳು ಪ್ರವೇಶ ಪತ್ರದ ಜೊತೆಗೆ ಕಡ್ಡಾಯವಾಗಿ ಯಾವುದಾದರೂ ಗುರುತಿನ ಚೀಟಿಯನ್ನು ತರಬೇಕು (ಆಧಾರ್ ಕಾರ್ಡ್, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್) ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು(ಆಡಳಿತ) ತಿಳಿಸಿದ್ದಾರೆ.

Klive Special Article ಸದ್ ‘ವಿನಯ’ ವಂತ, ಸಿಹಿಮೊಗೆಯ ಸಾಂಸ್ಕೃತಿಕ ದನಿ ಈತ-ಡಾ.ಮೈತ್ರೇಯಿ ಆದಿತ್ಯ ಪ್ರಸಾದ್

0

Klive Special Article ಶಿವಮೊಗ್ಗೆಯಲ್ಲಿ ಅರಳಿದ ಮೊಗ್ಗುಗಳು – 4
ಕಲಾರಾಧನೆಲ್ಲಿ ವಿನಯ ಸಂಪನ್ನರಾದ ವಿನಯ್ ಶಿವಮೊಗ್ಗ

ಸಾಹಿತ್ಯ ಸಂಗೀತ ಕಲಾವಿಹೀನಃ ಸಾಕ್ಷಾತ್ ಪಶುಃ ಪುಚ್ಛ ವಿಷಾಣ ಹೀನಃ l ಎನ್ನುವ ಸಂಸ್ಕೃತದ ಸುಭಾಷಿತ ಮನುಷ್ಯನಿಗಿರಬೇಕಾದ ಕಲಾಸಕ್ತಿಯ ಕುಳಿತು ಕುರಿತು ತಿಳಿಸುತ್ತದೆ. ಇದನ್ನು ನೋಡಿದಾಗ ನನಗೆ ನೆನಪಾಗುವ ವ್ಯಕ್ತಿ ಕಲಾಕ್ಷೇತ್ರದಲ್ಲಿ ಅತಿ ಹೆಚ್ಚು ಆಸಕ್ತಿಯಿಂದಿದ್ದು ತಮ್ಮದೇ ಆದ ಕೊಡುಗೆ ನೀಡುತ್ತಲೇ ಶಿವಮೊಗ್ಗಕ್ಕೆ ಆಸ್ತಿಯಂತಾದ ಹೆಮ್ಮೆಯ ಪ್ರತಿಭೆ. ಅದೇನೋ ಒಮ್ಮೊಮ್ಮೆ ಕಲಾ ಸರಸ್ವತಿ ತನ್ನೆಲ್ಲ ಪ್ರಾಕಾರಗಳನ್ನು ಒಬ್ಬರಿಗೆ ಧಾರೆ ಎರೆದು ಬಿಡುತ್ತಾಳೆನೋ? ಏಕೆ ಈ ಮಾತೆಂದರೆ ನಾನು ಅನೇಕರನ್ನು ನೋಡಿದ್ದೇನೆ ಕೆಲವರಿಗೆ ನೃತ್ಯ ಇಷ್ಟವಾದರೆ ಇನ್ನು ಕೆಲವರಿಗೆ ಸಂಗೀತ. ಮತ್ತೆ ಕೆಲವರಿಗೆ ಸಾಹಿತ್ಯ. ಒಂದಷ್ಟು ಜನಕ್ಕೆ ನಾಟಕ, ಯಕ್ಷಗಾನ, ಸಿನಿಮಾ. ಒಂದು ಕಡೆ ಕೇವಲ ಇಷ್ಟವಷ್ಟೇ ಅಲ್ಲ ಅದರ ಒಂದೊಂದು ವಿಭಾಗದಲ್ಲೂ ಜ್ಞಾನವನ್ನು ಪಡೆದಿರುವ ವ್ಯಕ್ತಿಗಳಿರುತ್ತಾರೆ. ಆದರೆ ಅಂಥವರು ಬೆರಳೆಣಿಕೆಯಷ್ಟು ಮಂದಿ ಮಾತ್ರ. ಎಲ್ಲವೂ ಇಷ್ಟ, ಎಲ್ಲದರಲ್ಲೂ ಆಳವಾದ ಜ್ಞಾನ ಅಂತಹ ಕೆಲವೇ ಕೆಲವು ವ್ಯಕ್ತಿಗಳಲ್ಲಿ ನಾನು ನೋಡಿದ ಒಬ್ಬ ವ್ಯಕ್ತಿ ವಿನಯ್ ಶಿವಮೊಗ್ಗ. ತನ್ನ ಹೆಸರಿಗೆ ಊರು ಸೇರಿಸಿ ಊರನ್ನು ಪ್ರಸಿದ್ಧಿಯಾಗಿಸಿದ ಹೆಮ್ಮೆ ಇವರದು.

ವಿನಯ್ ಶಿವಮೊಗ್ಗ ಅವರ ಜನನ ಅಪ್ಪಟ ಮಲೆನಾಡಿನ ಭಾಗದಲ್ಲಾದರೆ ಓದಿದ್ದು ಶಿವಮೊಗ್ಗದಲ್ಲಿ.

ತಂದೆ ಶಿವಮೊಗ್ಗದ ಪ್ರಖ್ಯಾತ ರಮ್ಯಾ ಮೆಡಿಕಲ್ಸ್ ನ ಮಾಲೀಕರೂ ಹಾಗೂ 100ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ ಶ್ರೀ ಯಜ್ಞನಾರಾಯಣ. ತಾಯಿ ವಿಜಯ ಆಕಾಶವಾಣಿಯಲ್ಲಿ ಅನೇಕ ಸುಗಮಸಂಗೀತಗಳನ್ನು ಹಾಡಿದ ಕಲಾವಿದೆಯಾಗಿದ್ದಾರೆ. ವಿನಯ್ ಅವರು ಉನ್ನತ ಅಧ್ಯಯನದ ಕಾರಣದಿಂದ ಉದ್ಯೋಗ ಅರಸಿ ಹೋದದ್ದು ಬೆಂಗಳೂರಿಗೆ. ಅಲ್ಲದೇ ಹಲವಾರು ದೇಶ-ವಿದೇಶಗಳನ್ನು ಸುತ್ತಿದ ಅನುಭವ ಇವರಿಗಿದೆ. ಅಲ್ಲೇ ಹಲವಾರು ವರ್ಷಗಳು ಇದ್ದು ನಂತರ ತಂದೆಯ ಅನಾರೋಗ್ಯ ಎಂದು ತನ್ನ ಕೆಲಸವನ್ನು ತೊರೆದು ತಂದೆ ತಾಯಿಯ ಆರೈಕೆಗಾಗಿ ಶಿವಮೊಗ್ಗಕ್ಕೆ ಬಂದರು. ಹೆತ್ತವರ ಮೇಲೆ ಅದೆಂತ ಪ್ರೀತಿ ಎಂದರೆ, ಇಳಿ ವಯಸ್ಸಿನಲ್ಲಿ ಅವರನ್ನು ನೋಡುತ್ತಾ ನೋಡುತ್ತಾ ತಮಗೂ ಜೀವನದ ವೈರಾಗ್ಯ ಬರಲು ಸಾರ್ಥಕ ಎನ್ನುವ ಭಾವದಿಂದ ಆರೈಕೆ ಮಾಡಿದರು. ಅವರದು ಸಂಗೀತ, ಸಾಹಿತ್ಯ ಕ್ಷೇತ್ರದಲ್ಲಿ ಒಳ್ಳೆಯ ಹೆಸರು ಮಾಡಿದ ಮನೆತನ. ಸುಗಮ ಸಂಗೀತ ಕ್ಷೇತ್ರದ ಗಾರುಡಿಗ ಶಿವಮೊಗ್ಗ ಸುಬ್ಬಣ್ಣ ಇವರ ದೊಡ್ಡಪ್ಪನಾದರೆ, ತಾಯಿ ಸೋಜುಗಾದ ಸೂಜು ಮಲ್ಲಿಗೆ ಎಂಬ ಹಾಡನ್ನು ಬಹು ವರ್ಷಗಳ ಹಿಂದೆಯೇ ಪ್ರಥಮ ಬಾರಿಗೆ ಹಾಡಿದ ಹೆಗ್ಗಳಿಕೆ ಉಳ್ಳವರು. ಹಾಗಾಗಿ ಈ ಎಲ್ಲದರಲ್ಲೂ ಆಸಕ್ತಿ ರಕ್ತದಲ್ಲಿಯೇ ಇತ್ತೇನೋ. ತಂದೆಯ ಮೆಡಿಕಲ್ ಶಾಪ್ ಶಿವಮೊಗ್ಗಕ್ಕೆ ಪ್ರಸಿದ್ಧಿ ಆಗಿತ್ತು. ಹಾಗಾಗಿ ಇವರ ಉದ್ಯೋಗ ಅದೇ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದೆಯಾದರೂ ಇವರ ಒಲವು ಹೆಚ್ಚಿದ್ದಿದ್ದು ಕಲಾರಾಧನೆಯಲ್ಲಿ.

Klive Special Article ಸಾಹಿತ್ಯ, ಹಾಡು, ನಾಟಕ, ಯಕ್ಷಗಾನ, ನೃತ್ಯ, ನಟನೆ ಹೀಗೆ ಎಲ್ಲ ಕಲಾ ಪ್ರಾಕಾರಗಳಲ್ಲೂ ಆಳವಾದ ಪಾಂಡಿತ್ಯ ಹಾಗೇ ಅವಿರತವಾಗಿ ದುಡಿದ ಪ್ರತಿಭೆ. ನನಗೆ ವಿನಯಣ್ಣ ಪರಿಚಿತರಾದದ್ದು ಚಕ್ರವರ್ತಿ ಅವರು ಗೀತೆಯ ಪುಸ್ತಕವನ್ನು ತಮ್ಮ ಯುವಾ ಬ್ರಿಗೇಡ್ ವತಿಯಿಂದ ಬಿಡುಗಡೆ ಮಾಡಿ ಅದನ್ನು ಎಲ್ಲರಿಗೂ ತಲುಪಿಸಬೇಕೆಂಬ ಉದ್ದೇಶದಲ್ಲಿದ್ದಾಗ ನನ್ನ ಮಗನ ಚೌಲದ ಕಾರ್ಯಕ್ರಮಕ್ಕೆ ಉಡುಗೊರೆಯಾಗಿ ಅದನ್ನೇ ನೀಡೋಣ ಎಂದು ವಿಚಾರಿಸಿದಾಗ ದೊರೆತ ಸಂಖ್ಯೆಯೇ ವಿನಯಣ್ಣನದು. ಅಂದು ಮಾತನಾಡಿಸಿದಾಗ ಸಾಮಾನ್ಯರಂತೆ ಅನಿಸಿದ್ದು ಸುಳ್ಳಲ್ಲ. ನಂತರವೇ ತಿಳಿದದ್ದು ಇದು ಅಸಾಮಾನ್ಯ ಪ್ರತಿಭೆ ಎಂದು.
ಇವರು ಕವಿಗಳ, ಸಾಹಿತಿಗಳ ಕುರಿತು ಪರಿಚಯಿಸುವಾಗ ಅವರೆಲ್ಲರೂ ನಮ್ಮೆದುರಿಗೆ ಇದ್ದಾರೆಯೇನೋ ಎಂದು ಅನಿಸಿಬಿಡುವುದಂತೂ ಸುಳ್ಳಲ್ಲ. ತುಂಗಾರತಿಗಾಗಿ ಸಾಹಿತ್ಯ ರಚಿಸಿ ಹಾಡಿದ ಹಾಡಂತೂ ಅತ್ಯದ್ಭುತ. ಕನ್ನಡಕ್ಕಾಗಿ ಇವರು ವಿಕಸನದಲ್ಲಿ ಹಾಡಿದ ಹಾಡು, ಭಾಷೆಯ ಸೊಗಡು ಬಹು ಚೆನ್ನಾಗಿ ತಿಳಿಯುವಂತಿದೆ. ಮೋದಿ 2.0ನಲ್ಲಿ ಅವರಿಗಾಗಿ ರಚಿಸಿದ ಸಾಹಿತ್ಯ, ಅದರ ಸ್ವರ ಸಂಯೋಜನೆ ಮಾಡಿದ್ದಂತು ನಿಜಕ್ಕೂ ಮೋಡಿ ಮಾಡುತ್ತದೆ. ಪ್ರತಿ ಬಾರಿಯೂ ಹೊಸದರ ಆಲೋಚನೆ ಅಷ್ಟೇ ಅಲ್ಲ ಅದನ್ನು ಸಾಕಾರಗೊಳಿಸುವುದು ಇವರ ವಿಶೇಷ.

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಯ ಸಮಯಕ್ಕೆ ರಾಮಾಯಣದ ಘಟನೆ ಆಧಾರಿತವಾಗಿ ಬರೆದ ಲೇಖನಗಳಂತೂ ಅದೆಷ್ಟೋ ಜನರನ್ನು ಸೆಳೆಯಿತು. ಆ ಸಮಯದಲ್ಲಿ ನಮ್ಮ ಮನೆಯಲ್ಲಿ ನಿತ್ಯ ಸಂಜೆ ರಾಮ ಭಜನೆ ಮಾಡುತ್ತಿದ್ದೆವು ಆಗ ಈ ಲೇಖನದ ತುಣುಕನ್ನು ಓದಿದಾಗ ಎಲ್ಲರೂ ತಲೆದೂಗಿದವರೇ. ಇನ್ನು ಮನೆಯಲ್ಲಿಯೇ ಸ್ವಾತಂತ್ರ್ಯ ದಿನವನ್ನು ಹಬ್ಬವಾಗಿ ಆಚರಿಸುವ ಚಂದ್ರಶೇಖರ್ ಬಾಯರ್ ಅವರ ಮನೆಗೆ ಹೊಸತನದ ಕಾರ್ಯಕ್ರಮಕ್ಕಾಗಿ ವಿನಯಣ್ಣನ ಸಂಪರ್ಕಿಸಿದರೆ, ಅವರು ನೀಡಿದ ತಾಯಿ ಭಾರತೀಯ ಗಾನಸುಧೆ ಎಲ್ಲರ ಮನಕಾವರಿಸಿತು.

ವಿನಯ್ ಅವರ ಗರಡಿಯಲ್ಲಿ ಅದೆಷ್ಟು ಶಿವಮೊಗ್ಗದ ದೈತ್ಯ ಪ್ರತಿಭೆಗಳು ಬೆಳೆದಿದ್ದಾರೋ? ಎಲ್ಲರ ಬೆಳವಣಿಗೆಗೆ ಬೆಂಬಲ ಇವರದು. ನಗರದ ವಿವಿಧ ಕಾರ್ಯಕ್ರಮಗಳಲ್ಲಿ ತಾಯಂದಿರಿಗಾಗಿ ಹಾಡಿಸಿದ ಸಾವರ್ಕರ್ ಹಾಡಿದ ಜಯೋಸ್ತುತೆ… ತುಂಬಾ ಜನಪ್ರಿಯ ಕಾರ್ಯಕ್ರಮಗಳಲ್ಲಿ ಒಂದು. ಕವಿ ಹೆಚ್ಚೆಸ್ವಿ ಅಗಲಿದಾಗ ಅವರ ನುಡಿ ನಮನವಂತು ಮನಮುಟ್ಟುವಂತಿತ್ತು. ಹಾಗೆ ನಗರದ ಅನೇಕ ಮಹನೀಯರ ಕುರಿತು ಬರೆದ ಲೇಖನಗಳು ಅವರ ಸಾಹಿತ್ಯದ ಆಳ ಹಾಗೂ ಭಾಷಾ ಪ್ರಯೋಗಗಳ ಪ್ರೌಢಿಮೆಗೆ ಹಿಡಿದ ಕೈಗನ್ನಡಿ.

ಸಾಂಸ್ಕೃತಿಕ ಪ್ರಪಂಚದ ದಿಗ್ಗಜರ ಒಡನಾಟ ಇವರಿಗೆ ತುಸು ಹೆಚ್ಚೇ. ಉಪನ್ಯಾಸಕಿ ವೀಣಾ ಬನ್ನಂಜೆ, ಶತಾವಧಾನಿ ರಾ. ಗಣೇಶ್, ಚಕ್ರವರ್ತಿ ಸೂಲಿಬೆಲೆ, ನಿರುಪಮಾ ರಾಜೇಂದ್ರ ಹೀಗೆ ಹಲವಾರು ಮಹನೀಯರು ಇವರಿಗೆ ಚಿರಪರಿತರು. ಯಾವುದೇ ಕಾರ್ಯಕ್ರಮಕ್ಕೆ ಒಳ್ಳೆಯ ಅತಿಥಿ ಬೇಕೆಂದರೆ ನಾನಿವರನ್ನೇ ಕೇಳುವುದು. ಏಕೆಂದರೆ ಅವರ ಸಂಪರ್ಕ ಇದ್ದೇ ಇರುತ್ತದೆ ಎಂದು.

ಇವರು ನಗರದ ಅನೇಕ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ನಿರಂತರವಾಗಿ ತೊಡಗಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಕಲಾತ್ಮ ಎಂಬ ಸಂಗೀತ ಶಾಲೆಯನ್ನು ನಡೆಸುತ್ತಿದ್ದಾರೆ. ಕಲಾ ಹಾಗೂ ಸಾಹಿತ್ಯ ಪ್ರಾಕಾರಗಳಿಗೆ ಇವರು ತೋರಿದ ಒಲವು ಹಾಗೂ ಜ್ಞಾನದ ಕಾರಣದಿಂದಾಗಿ ಕರ್ನಾಟಕ ಸಂಘದ ಸದಸ್ಯರಾಗಿ, ನಿರ್ದೇಶಕರಾಗಿ ಈಗ ಕಾರ್ಯದರ್ಶಿಯಾಗಿ ತಮ್ಮ ಸೇವೆ ಸಲ್ಲಿಸುವಂತಾಗಿದೆ. ಹಾಗಾಗಿ ವಿನೂತನವಾದ ಕಾರ್ಯಕ್ರಮಗಳು ಆಯೋಜನೆಯಾಗಿ ಜನರನ್ನು ಕರ್ನಾಟಕ ಸಂಘ ಸೆಳೆಯುತ್ತಿರುವುದು ಕಂಡಿದ್ದೇವೆ. ಅಲ್ಲದೇ ನಗರದ ಶ್ರೀಗಂಧ, ಅಭಿರುಚಿ ಹಾಗೂ ಅಜೇಯ ಸಂಸ್ಕೃತಿ ಬಳಗ ಮತ್ತು ಜಿ. ಎಸ್. ಎಸ್. ಪ್ರತಿಷ್ಠಾನಗಳಲ್ಲಿ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. 30 ಕ್ಕೂ ಹೆಚ್ಚು ಕಿರುಚಿತ್ರಗಳಲ್ಲಿ ಅಭಿನಯಿಸಿದ ಇವರಿಗೆ ‘ಬೆಳ್ಳಿಮಂಡಲ’ದವರು ನೀಡುವ “ಅಂಬೆಗಾಲು” ಕಿರುಚಿತ್ರಕ್ಕೆ ನೀಡುವ ಪುರಸ್ಕಾರದಲ್ಲಿ ಉತ್ತಮ ಮೋಷಕ ನಟ ಎನ್ನುವ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಇನ್ನಷ್ಟು ಸಾಹಿತ್ಯ ಸೇವೆ ಇವರನ್ನು ಅರಸಿ ಬರಲಿ. ಪ್ರಶಸ್ತಿಗೆ ಭಾಜನರಾಗಿ ಕನ್ನಡದ ಹಿರಿಮೆ ಹೆಚ್ಚಿಸಲಿ ಎನ್ನುವ ಆಶಯ ನನ್ನದು.

ಡಾ. ಮೈತ್ರೇಯಿ ಆದಿತ್ಯ
ಸಂಸ್ಕೃತ ಉಪನ್ಯಾಸಕರು
ಪೇಸ್ ಕಾಲೇಜ್, ಶಿವಮೊಗ್ಗ

Department of Kannada and Culture ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೋಂದಾಯಿತ ಸಂಸ್ಥೆ ಮತ್ತು ಕಲಾವಿದರು ಸಹಾಯಧನ ಪಡೆಯಲು ಅರ್ಜಿ ಆಹ್ವಾನ

0

Department of Kannada and Culture ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ರಾಜ್ಯಾದ್ಯಂತ ಮತ್ತು ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ಶಿಲ್ಪಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು 2025-26ನೇ ಸಾಲಿನ ಸಾಮಾನ್ಯ/ಪ.ಜಾ/ಪ.ಪಂ. ಉಪಯೋಜನೆಯಡಿ ಸೇವಾಸಿಂದು ಮುಖಾಂತರ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಸೇವಾಸಿಂಧು sevesindhu.karnataka.gov.in ಮೂಲಕ ಡಿ.30ರೊಳಗಾಗಿ ಅರ್ಜಿ ನ್ನು ಸಲ್ಲಿಸುವುದು ಹಾಗೂ ಮಾರ್ಗ ಸೂಚಗಾಗಿ ಇಲಾಖೆ ವೆಬ್ಸೈಟ್ www.kannadasiri.karnataka.gov.in ನ್ನು ಮತ್ತು ಸೇವಾಸಿಂದು ಪೋರ್ಟಲ್‌ನ್ನು ಸಂಪರ್ಕಿಸುವುದು.

Department of Kannada and Culture ಹೆಚ್ಚಿನ ಮಾಹಿತಿಗಾಗಿ 08024410547/8792662814/8792662816/08022213530/9986837037/9900337738/9449436877/9480197511/9916600027/08022241325 ಗಳನ್ನು ಹಾಗೂ ಆಯಾ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಆಯಾ ಜಿಲ್ಲೆಯ ವ್ಯವಸ್ಥಾಪಕರು, ಸೇವಾಸಿಂಧು ಇವರನ್ನು ಸಂಪರ್ಕಿಸುವಂತೆ ಶಿವಮೊಗ್ಗ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ .

Chamber of Commerce Shivamogga ಡಿಸೆಂಬರ್ 4. ಶಿವಮೊಗ್ಗದಲ್ಲಿ ಕೈಗಾರಿಕಾ ಇಲಾಖೆಯಿಂದ ಇನ್ಕ್ಯುಬೇಷನ್ ಯೋಜನೆ ಅರಿವು ಕಾರ್ಯಕ್ರಮ

0

Chamber of Commerce Shivamogga ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಮೊಗ್ಗ ಮತ್ತು ಕೆಸಿಟಿಯು ಬೆಂಗಳೂರು ಹಾಗೂ ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ ಇವರ ಸಹಯೋಗದೊಂದಿಗೆ ಡಿ.4 ಬೆಳಿಗ್ಗೆ 10.30 ಕ್ಕೆ ಸಾಗರ ರಸ್ತೆಯಲ್ಲಿರುವ ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ ಕಾಲೇಜಿನಲ್ಲಿ ಎಂಎಸ್‌ಎಂಇಗಳ ಕಾರ್ಯಕ್ರಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು ಯೋಜನೆಯಡಿ ಇನ್‌ಕ್ಯೂಬೆಷನ್ ಯೋಜನೆ ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.

ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಜೋಯಿಸ್ ರಾಮಾಚಾರ್ ಕಾರ್ಯಾಗಾರದ ಉದ್ಘಾಟನೆಯನ್ನು ನೆರವೇರಿಸಲಿದ್ದು, ಅಧ್ಯಕ್ಷೆತೆಯನ್ನು ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ ಕಾಲೇಜಿನ ಪ್ರಾಂಶುಪಾಲರು ಡಾ.ಸ್ವಾಮಿ ಡಿ.ಆರ್ ವಹಿಸಿರುವರು.

Chamber of Commerce Shivamogga ಪಿಇಎಸ್ ಟ್ರಸ್ಟ್ ಮುಖ್ಯ ಆಡಳಿತ ಸಂಯೋಜಕ ಡಾ.ನಾಗರಾಜ.ಆರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆ‌ರ್.ಗಣೇಶ್‌, ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಹನುಮಂತಪ್ಪ.ಪಿ ಗೌರವಾನ್ವಿತ ಉಪಸ್ಥಿತಿ ವಹಿಸಿಲಿದ್ದು, ಜಿಲ್ಲಾ ಕೈಗಾರಿಕಾ ಕೇಂದ್ರ ಉಪ ನಿರ್ದೇಶಕ ಹೆಚ್.ಸುರೇಶ್, ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ ಕಾಲೇಜಿನ ಪ್ರಾಧ್ಯಪಕರಾ ಡಾ.ಅರ್ಜುನ್.ಯು ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವರು.

Sagara Photographic Society ಡಿಸೆಂಬರ್ 25 ರಿಂದ ಸಾಗರ ಫೋಟೋಗ್ರಫಿಕ್ ಸೊಸೈಟಿಯಿಂದ ಕಲಾತ್ಮಕ ಛಾಯಾಚಿತ್ರ ಕಾರ್ಯಾಗಾರ

0

Sagara Photographic Society ಸಾಗರ ಫೋಟೋಗ್ರಾಫಿಕ್ ಸೊಸೈಟಿ (SPS) ಪ್ರತಿ ವರ್ಷದಂತೆ ಇದೇ ಡಿಸೆಂಬರ್ 25 ರಿಂದ 28 ರ ವರೆಗೆ, ನೀನಾಸಮ್ ಹೆಗ್ಗೋಡು ಇವರ ಸಹಯೋಗದೊಂದಿಗೆ ನಾಲ್ಕು ದಿನಗಳ ಕಲಾತ್ಮಕ ಛಾಯಾಚಿತ್ರ ಕಾರ್ಯಾಗಾರವನ್ನು ಆಯೋಜಿಸಿದೆ.

ಫೋಟೋಗ್ರಫಿಯಲ್ಲಿ ಆಸಕ್ತಿಯುಳ್ಳವರು ಮೊಬೈಲ್ ನಂ. 9448627878 ಗೆ ಸಂಪರ್ಕಿಸಬಹುದು.

Karnataka Institute of Management Training ಸಹಕಾರ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

0

Karnataka Institute of Management Training ಕರ್ನಾಟಕ ಇನ್ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್ ತರಬೇತಿ ಸಂಸ್ಥೆಯಲ್ಲಿ ಜನವರಿ ಒಂದು 2026 ರಿಂದ ಪ್ರಾರಂಭವಾಗುವ ಡಿಪ್ಲೋಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ರೆಗ್ಯುಲರ್ ಮತ್ತು ದೂರ ಶಿಕ್ಷಣದ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಪಡೆಯಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು
ಡಿಸೆಂಬರ್ 15
ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಪಿಯುಸಿ ಉತ್ತೀರ್ಣರಾಗಿರಬೇಕು.

ಪಿಯುಸಿ ಮೇಲ್ಪಟ್ಟ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಬಹುದು. ಸದರಿ ತರಬೇತಿಯು ಸಹಕಾರ ಕ್ಷೇತ್ರದ ನೇಮಕಾತಿ ಪರೀಕ್ಷೆಗಳಿಗೆ ಅನುಕೂಲಕರ ಹಾಗೂ ತರಬೇತಿ ಪಡೆಯುವ ಎಲ್ಲಾ ಅಭ್ಯರ್ಥಿಗಳಿಗೂ ಮಾಹೆಯಾನ ಶಿಷ್ಯವೇತನ ನೀಡಲಾಗುವುದು.

Karnataka Institute of Management Training ಅರ್ಜಿಯನ್ನು ಪಡೆಯುವ ವಿಳಾಸ: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋರ್ಟಿ ಮ್ಯಾನೇಜ್ಮೆಂಟ್ ನಂಬರ್ 1/2, ಎರಡನೇ ಮಹಡಿ ಮೂರನೇ ಮುಖ್ಯರಸ್ತೆ, ಚಾಮರಾಜಪೇಟೆ, ಬೆಂಗಳೂರು -18
ಹೆಚ್ಚಿನ ಮಾಹಿತಿಗಾಗಿ 9449007661 ಹಾಗೂ 08035541407 ಸಂಪರ್ಕಿಸಬಹುದು ಎಂದು ತಿಳಿಸಿದೆ.

ಡಿಸೆಂಬರ್ 24 &25 ಶಿವಮೊಗ್ಗದಲ್ಲಿ ಜನಪದ ಗೀತಗಾಯನ ತರಬೇತಿ ಶಿಬಿರ

0

ಶಿವಮೊಗ್ಗ ನಗರದ ಕರ್ನಾಟಕ ಸಂಘದಲ್ಲಿ ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ವತಿಯಿಂದ ಕರ್ನಾಟಕ ಸಂಘ ಶಿವಮೊಗ್ಗದ ಸಹಯೋಗದಲ್ಲಿ ಡಿಸೆಂಬರ್ 24 ಮತ್ತು 25 ರಂದು ಡಾ. ಅಪ್ಪಗೆರೆ ತಿಮ್ಮರಾಜ್ ಅವರ ನೇತೃತ್ವದಲ್ಲಿ ಶಾಂತಾ ಶೆಟ್ಟಿ ಅವರ ಪ್ರಧಾನ ಸಂಚಾಲಕತ್ವದಲ್ಲಿ ಎರಡು ದಿನದ ಜನಪದ ಗೀತ ಗಾಯನ ತರಬೇತಿ ಶಿಬಿರ ಆಯೋಜಿಸಲಾಗಿದೆ. ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕ, ನಾದಶ್ರೀ ಸಂಗೀತ ಶಾಲೆ, ತರಂಗಿಣಿ ಸಂಗೀತ ಶಾಲೆ, ನಾದಲೀಲೆ ಸಾಂಸ್ಕೃತಿಕ ಟ್ರಸ್ಟ್, ಸ್ವರಾತ್ಮಿಕ ಸಂಗೀತ ವಿದ್ಯಾಲಯ ಹಾಗೂ ನಿನಾದ ಪ್ರತಿಷ್ಠಾನ ಶಿವಮೊಗ್ಗ ಸಹಕಾರ ನೀಡುವರು. ಆಸಕ್ತರು ಹೆಸರನ್ನು ನೋಂದಾಯಿಸಿಕೊಳ್ಳಲು ಮೊ.ಸಂ. 9986281926, 9844633654 ಸಂಪರ್ಕಿಸಬಹುದಾಗಿದೆ.

S.N. Channabasappa ಶಿವಮೊಗ್ಗದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಕಟ್ಟಡಕ್ಕೆ ನಿವೇಶನ ಆಯ್ಕೆ ಸಂಬಂಧ ಶಾಸಕ ಚೆನ್ನಿ ಚರ್ಚೆ

0

S.N. Channabasappa ಶಿವಮೊಗ್ಗ ನಗರಕ್ಕೆ ಆಗಮಿಸಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ವಿ. ರಶ್ಮಿ ಮಹೇಶ್ ಅವರನ್ನು ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ರಾಷ್ಟ್ರೀಯ ಶಿಕ್ಷಣ ಸಮಿತಿಯ ಕಚೇರಿಯಲ್ಲಿ ಭೇಟಿಯಾಗಿ, ಶಿವಮೊಗ್ಗ ನಗರಕ್ಕೆ ಮಂಜೂರಾಗಿರುವಂತಹ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಪದವಿ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವಂತಹ ಜಾಗದ ಲಭ್ಯತೆಗೆ ಸಂಬಂಧಿಸಿದಂತೆ ಈ ಸಂದರ್ಭದಲ್ಲಿ ಮಹತ್ವದ ಚರ್ಚೆ ನಡೆಸಿದರು. ಈಗಾಗಲೇ ನಗರದಲ್ಲಿ ಗುರುತಿಸಲಾಗಿರುವ ಪ್ರೌಢ ಶಾಲಾ ಇಲಾಖೆಯ ವ್ಯಾಪ್ತಿಯ ಜಾಗವನ್ನು ಕಾಲೇಜು ಶಿಕ್ಷಣ ಇಲಾಖೆಗೆ ತ್ವರಿತವಾಗಿ ವರ್ಗಾಯಿಸುವಂತೆ ಕೋರಿ ಅಧಿಕೃತ ಮನವಿ ಸಲ್ಲಿಸಿದರು.

ಮನವಿಯನ್ನು ಆಲಿಸಿದ ಪ್ರಧಾನ ಕಾರ್ಯದರ್ಶಿಗಳು, ವಿದ್ಯಾರ್ಥಿನಿಯರ ಶೈಕ್ಷಣಿಕ ಹಿತದೃಷ್ಟಿಯಿಂದ ಈ ಯೋಜನೆಯ ಮಹತ್ವವನ್ನು ಮನಗಂಡು, ಜಾಗದ ವರ್ಗಾವಣೆಗೆ ಸಂಬಂಧಿಸಿದಂತೆ ಇಲಾಖಾ ಮಟ್ಟದಲ್ಲಿ ಸಕ್ರಿಯವಾಗಿ ಕ್ರಮ ಕೈಗೊಳ್ಳಲು ಮತ್ತು ಅಗತ್ಯ ಸಮ್ಮತಿಯನ್ನು ನೀಡಲು ಒಪ್ಪಿಗೆ ಸೂಚಿಸಿದರು.

S.N. Channabasappa ಭೇಟಿಯ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಶ್ರೀ ಡಿಎಸ್ ಅರುಣ್, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರು ಉಪಸ್ಥಿತರಿದ್ದರು.

ಮಂಡಗದ್ದೆಯಲ್ಲಿ ಡಿಸೆಂಬರ್ 4 ರಂದು ಶ್ರೀದತ್ತ ಜಯಂತಿ ಆಯೋಜನೆ

0

ಶ್ರೀ ದತ್ತಾಶ್ರಮ ಮಾಂಡವ್ಯ ಕ್ಷೇತ್ರ ಮಂಡಗದ್ದೆಯಲ್ಲಿ ಡಿಸೆಂಬರ್ 4 ಗುರುವಾರದಂದು ದತ್ತ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಪ್ರತಿ ವರ್ಷದಂತೆ ಈ ಬಾರಿಯೂ ದತ್ತ ಮಹಾರಾಜರ ರಥೋತ್ಸವ ಹಾಗೂ ಶ್ರೀಪಾದವಲ್ಲಭರ ಪಲ್ಲಕ್ಕಿ ರಾಜಬೀದಿ ಉತ್ಸವವನ್ನು ಹಮ್ಮಿಕೊಂಡಿದ್ದು ಗುರುಭಕ್ತರು ಈ ಕಾರ್ಯಕ್ರಮಕ್ಕೆ ಆಗಮಿಸಿ ಗುರು ಸೇವೆಯಲ್ಲಿ ಸೇರಿಕೊಳ್ಳಬೇಕಾಗಿ ಕೋರಲಾಗಿದೆ.