Thursday, May 14, 2026
Thursday, May 14, 2026
Home Blog Page 73

Shivaganga Yoga Center ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿ ದಿನ ಯೋಗಾಭ್ಯಾಸ ಅವಶ್ಯ: ಎಸ್.ರುದ್ರೇಗೌಡ

0

Shivaganga Yoga Center ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಪ್ರತಿ ದಿನ ಯೋಗ ಅಭ್ಯಾಸ ಮಾಡಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ ಹೇಳಿದರು.

ಶಿವಗಂಗಾ ಯೋಗಕೇಂದ್ರದ 38 ಯೋಗ ಶಾಖೆಗಳ ಶಿಕ್ಷಕರಿಗೆ ಆಯೋಜಿಸಿದ್ದ ಮಾಸಿಕ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಒತ್ತಡದ ಬದುಕಿನಿಂದ ಮುಕ್ತರಾಗಲು ಯೋಗಾಭ್ಯಾಸವು ಅತ್ಯಂತ ಮುಖ್ಯ. ಗುರುಗಳ ಮಾರ್ಗದರ್ಶನದಿಂದ ಯೋಗವನ್ನು ಕಲಿಯಬೇಕು ಎಂದರು.

30 ವರ್ಷದಿಂದ ಸಾವಿರಾರು ಜನರಿಗೆ ಉಚಿತವಾಗಿ ಯೋಗ ಅಭ್ಯಾಸ ಕಲಿಸುವ ಮೂಲಕ ಜನರ ಆರೋಗ್ಯ ಕಾಪಾಡುತ್ತಿರುವ ಶಿವಗಂಗಾ ಯೋಗಕೇಂದ್ರದ ಕಾರ್ಯ ಶ್ಲಾಘನೀಯ. ಬೃಹತ್ ಸಂಸ್ಥೆಯಾಗಿ ಬೆಳೆದಿದ್ದು, ಇದನ್ನು ಮುನ್ನಡೆಸಿಕೊಂಡು ಹೋಗಬೇಕಿರುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿ ಡಾ. ಗಾಯತ್ರಿ ಸಜ್ಜನ್ ಮಾತನಾಡಿ, ದಿನನಿತ್ಯದ ಬದುಕಿನಲ್ಲಿ ನಾವು ಎದುರಿಸುತ್ತಿರುವ ಆತಂಕ, ಭಯ, ಒತ್ತಡ ಹಾಗೂ ಮಾನಸಿಕ ಸಮಸ್ಯೆಗಳಿಂದ ದೂರವಾಗಲು ಭಕ್ತಿಯೋಗ ತುಂಬಾ ಸಹಕಾರಿಯಾಗಿದೆ ಎಂದು ಹೇಳಿದರು.

Shivaganga Yoga Center ಎಂಎಲ್‌ಸಿ ಡಾ. ಧನಂಜಯ ಸರ್ಜಿ ಮಾತನಾಡಿ, ಒತ್ತಡದ ಬದುಕಿನಲ್ಲಿ ನಿದ್ರಾಹೀನತೆ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಆಳವಾದ ಉಸಿರಾಟ, ಗಾಢ ನಿದ್ರೆ ಮನುಷ್ಯನಿಗೆ ತೀರಾ ಅಗತ್ಯ. ಯಾಂತ್ರಿಕ ಬದುಕಿನಲ್ಲಿ ಸಿಲುಕಿರುವ ಕುಟುಂಬಗಳು ಯೋಗಾಭ್ಯಾಸದಿಂದ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದರು.

ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರಯ್ಯ, ಸಂಸ್ಥೆಯ ಪೋಷಕರಾದ ಮೋಹನ್‌ಕುಮಾರ್ ಬಾಳೆಕಾಯಿ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಹೂವೇಗೌಡ, ಶಿವಗಂಗಾ ಯೋಗಕೇಂದ್ರದ ನಿಕಟಪೂರ್ವ ಕಾರ್ಯದರ್ಶಿ ಎಸ್.ಎಸ್.ಜ್ಯೋತಿಪ್ರಕಾಶ್ ಮತ್ತಿತರರು ಪಾಲ್ಗೊಂಡಿದ್ದರು.

Yakshasamvardana Trust ಶಿವಮೊಗ್ಗದ ಯಕ್ಷ ಸಂವರ್ಧನಾ ಸಂಸ್ಥೆಯ ವಾರ್ಷಿಕೋತ್ಸವ ಯಕ್ಷಸಿಂಚನ ಯಶಸ್ವಿ

0

Yakshasamvardana Trust ಶಿವಮೊಗ್ಗದ ಯಕ್ಷಸಂವರ್ಧನಾ ಸಂಸ್ಥೆಯ ವಾರ್ಷಿಕೋತ್ಸವ ಯಕ್ಷಸಿಂಚನ-2026 ನಿನ್ನೆ ಮತ್ತು ಇಂದು ಸೋಮಿನಕೊಪ್ಪದ ಶ್ರೀ ಪಂಚಮುಖಿ ಆಂಜನೇಯ ಮತ್ತು ಬನಶಂಕರಿ ಅಮ್ಮನವರ ದೇವಸ್ಥಾನ ಮತ್ತು ರವೀಂದ್ರ ನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ನಡೆಯಿತು.
ನಿನ್ನೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಪಂಚಮುಖಿ ಆಂಜನೇಯ ದೇವಸ್ಥಾನದ ಧರ್ಮದರ್ಶಿ ಶ್ರೀ ರವೀಂದ್ರ ಭಟ್ ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು.

ಯಕ್ಷಗಾನ ಎಂಬ ನಾಲ್ಕು ಅಕ್ಷರದ ಪದದಲ್ಲಿ ಹಾಡು, ಸಂಭಾಷಣೆ, ನೃತ್ಯ, ಅಭಿನಯ, ವೇಷಭೂಷಣ ಎಂಬ ಐದು ಅಂಶಗಳು ತುಂಬಿವೆ. ಇದು ಯಾವುದೇ ರಂಗಭೂಮಿ ಪ್ರಕಾರದಲ್ಲೂ ಇಲ್ಲ. ಯಕ್ಷಗಾನಕ್ಕೆ ಸರಿಸಾಟಿಯಾದ ಕಲೆ ಮತ್ತೊಂದಿಲ್ಲ ಎಂದು ಶ್ರೀ ರವೀಂದ್ರ ಭಟ್ ಅಭಿಪ್ರಾಯಪಟ್ಟರು.

ಯಕ್ಷಗುರು ಐನಬೈಲು ಶ್ರೀ ಪರಮೇಶ್ವರ ಹೆಗಡೆಯವರು ಮಾತನಾಡಿ, ತಾನು ಭಯದಿಂದ ಶಿವಮೊಗ್ಗಕ್ಕೆ ಬಂದೆ, ಆದರೆ ಇಂದು ಪುರುಸೋತ್ತಿಲ್ಲದಷ್ಟು ಯಕ್ಷಗಾನ ಕಲಿಸುವ ಅವಕಾಶ ಗಳು ಬರುತ್ತಿವೆ. ಯಕ್ಷಗಾನ ಯಾವುದೇ ಅಡೆತಡೆ ಇದ್ದರೂ ಅದನ್ನು ಮೆಟ್ಟಿ ನಿಲ್ಲುವ ಕಲೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ರೋಟರಿ ಸೆಂಟ್ರಲ್ ಶಿವಮೊಗ್ಗದ ಕಾರ್ಯದರ್ಶಿ ಶ್ರೀ ಜಯಶೀಲ ಶೆಟ್ಟಿ ಮಾತನಾಡಿ ಯಕ್ಷಗಾನ ಕಲೆಯನ್ನು ಬೆಳೆಸಲು ತನ್ನಿಂದಾದ ಸಹಾಯ ನೀಡುವ ಭರವಸೆ ನೀಡಿದರು.
ಅನಾರೋಗ್ಯ ಪೀಡಿತ ಯಕ್ಷಗಾನ ಕಲಾವಿದ ಶ್ರೀ ಶಶಿಕಾಂತ ಶೆಟ್ಟಿ ಕಾರ್ಕಳ ಮತ್ತು ಶಿವಮೊಗ್ಗ ವಿಕಾಸ ಶಾಲೆಯ ವಿದ್ಯಾರ್ಥಿ ಎಚ್ ಪ್ರಥಮ್ ಅವರಿಗೆ ಸಂಸ್ಥೆಯು ನೀಡಿದ ಆರ್ಥಿಕ ನೆರವನ್ನು ಈ ಸಂದರ್ಭದಲ್ಲಿ ತಿಳಿಸಲಾಯಿತು.

ಮಕ್ಕಳ ಯಕ್ಷಗಾನ ಕಲಿಕೆಗೆ ಪ್ರೋತ್ಸಾಹ ನೀಡುತ್ತಿರುವ ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕ ಡಾ.ಸತೀಶ್ ಕುಮಾರ್ ಅಂಡಿಂಜೆ ಮತ್ತು ಶ್ರೀಮತಿ ವಿನಯಾ ಕುಮಾರಿ ದಂಪತಿ ಹಾಗೂ ಶಿವಮೊಗ್ಗ ನಾರಾಯಣ ಹೃದಯಾಲಯದ ವೈದ್ಯರಾದ ಡಾ.ಶ್ರೀವತ್ಸ ನಾಡಿಗ್ ಮತ್ತು ಡಾ.ಅಪರ್ಣಾ ಶ್ರೀವತ್ಸ ದಂಪತಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಸತೀಶ್ ಕುಮಾರ್ ಅಂಡಿಂಜೆಯವರು ಇಂದಿನ ಮಕ್ಕಳನ್ನು ಮೊಬೈಲ್ ಪ್ರಭಾವದಿಂದ ದೂರವಿಡಲು ಪೋಷಕರು ಯಕ್ಷಗಾನದಂತಹ ಕಲೆಗಳಲ್ಲಿ ತೊಡಗಿಸಿಕೊಳ್ಳಬೇಕು. ಮಕ್ಕಳಿಗೆ ಆಸ್ತಿ ಮಾಡುವ ಬದಲು ಅವರಿಗೆ ಕಲೆ, ಸಂಸ್ಕೃತಿಗಳನ್ನು ಕಲಿಸಿ ಸುಸಂಸ್ಕೃತರನ್ನಾಗಿ ಮಾಡಬೇಕೆಂದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಆನಂದ ಶೆಟ್ಟಿಯವರು ಮಾತನಾಡಿ ಮುಂದಿನ ವರ್ಷದಿಂದ ಆಸಕ್ತರಿಗೆ ಉಚಿತ ಯಕ್ಷಗಾನ ಕಲಿಸುವ ಯೋಜನೆ ಇದೆ ಎಂದರು.

Yakshasamvardana Trust ಸಂಸ್ಥೆಯ ನಿರ್ದೇಶಕಿ ಶ್ರೀಮತಿ ಭಾರತಿ ಸುದರ್ಶನ್ ಸ್ವಾಗತಿಸಿ, ಖಜಾಂಚಿ ಶ್ರೀ ಗೋವಿಂದರಾಯ ನಾಯಕ್ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಶ್ರೀ ಶ್ರೀನಿವಾಸ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

ಸಹಕಾರ್ಯದರ್ಶಿ ಶ್ರೀಮತಿ ಮಲ್ಲಿಕಾ ಆರ್ ಭಟ್ ಮತ್ತು ಕುಮಾರಿ ಪ್ರಗತಿ ಶೆಟ್ಟಿ ಪ್ರಾರ್ಥಿಸಿದರು.
ನಂತರ ಮಕ್ಕಳಿಂದ ದ್ರುಪದ ಗರ್ವಭಂಗ ಮತ್ತು ಗುರುದಕ್ಷಿಣೆ ಯಕ್ಷಗಾನ ಪ್ರಸಂಗದ ಪ್ರದರ್ಶನ ನಡೆಯಿತು.

ಇಂದು ಪುರುಷರು ಮತ್ತು ಮಹಿಳಾ ಕಲಾವಿದರಿಂದ ಶಮಂತಕಮಣಿ ವಿಲಾಸ ಮತ್ತು ವಿಂದಾನುವಿಂದ ಕಾಳಗ ಯಕ್ಷಗಾನ ಪ್ರಸಂಗದ ಪ್ರದರ್ಶನ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಗುರು ಐನಬೈಲು ಶ್ರೀ ಪರಮೇಶ್ವರ ಹೆಗಡೆ, ಶ್ರೀ ನಾಗರಾಜ ಆರ್, ಮದ್ದಳೆಯಲ್ಲಿ ಶ್ರೀ ಶರತ್ ಹೆಗ್ಗೋಡು, ಶ್ರೀ ಗಣಪತಿ ಪ್ರಭು, ಚೆಂಡೆಯಲ್ಲಿ ಶ್ರೀ ಕಿರಣ್ ಬಾವಿಗದ್ದೆ ಮತ್ತು ನವೀನ್ ಎನ್. ಜೆ. ಸಹಕರಿಸಿದರು.

ಮಲೆನಾಡು ಇತಿಹಾಸ ಮತ್ತು ಅಧ್ಯಯನ ವೇದಿಕೆಯ ಸರ್ವ ಸದಸ್ಯರ ಸಭೆ ಯಶಸ್ವಿ

0

ಮಲೆನಾಡು ಇತಿಹಾಸ ಮತ್ತು ಅಧ್ಯಯನ ವೇದಿಕೆಯ ಸರ್ವ ಸದಸ್ಯರ ಸಭೆ ಭಾನುವಾರ ಮಥುರಾ ಪ್ಯಾರಾಡೈಸ್ ಹೋಟೆಲ್ ನಲ್ಲಿ ನಡೆಯಿತು. ವೇದಿಕೆಯ ಅಧ್ಯಕ್ಷರಾದ ಡಾ. ಎಸ್. ಜಿ. ಸಾಮಕ್ ಅಧ್ಯಕ್ಷತೆ ವಹಿಸಿದ್ದರು.
ಸಭೆಯ ಆರಂಭದಲ್ಲಿ ಇತ್ತೀಚೆಗೆ ಅಗಲಿದ ಇತಿಹಾಸ ಸಂಶೋಧಕರೂ, ಪುರಾತತ್ವ ಇಲಾಖೆಯ ನಿರ್ದೇಶಕರೂ ಆಗಿದ್ದ ಶ್ರೀಯುತ ಟಿ.ಎಮ್. ಕೇಶವ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕಳೆದ ವರ್ಷದಲ್ಲಿ ನಡೆದ ವೇದಿಕೆಯ ಚಟುವಟಿಕೆಗಳನ್ನು ಕುರಿತು ಚರ್ಚಿಸಲಾಯಿತು. ತಾಳಗುಂದ ಉತ್ಖನನ, ಅಲ್ಲಿ ದೊರೆತಿದ್ದ ಸಿಂಹ ಕತಾಂಜನ ಶಾಸನ ಕುರಿತು ಪುರಾತತ್ವ ಇಲಾಖೆ ಸೂಚನಾ ಫಲಕ ಹಾಕಲು ಈ ಹಿಂದೆ ಎಂ. ಪಿ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅದ ತೀರ್ಮಾನವನ್ನು ಮತ್ತೊಮ್ಮೆ ಜ್ಞಾಪಿಸಲು ತೀರ್ಮಾನಿಸಲಾಯಿತು. ಅದೇ ರೀತಿ ಪುರಂದರ ದಾಸರ ಜನ್ಮ ನೆಲೆಯಂದು ಬಿಂಬಿತವಾಗಿರುವ ಆರಗ ಹಾಗೂ ಸುತ್ತ ಮುತ್ತಲಿನ ಪ್ರದೇಶದಲ್ಲಿ ವಿಸ್ತೃತ ಅಧ್ಯಯನ ಕೈಗೊಳ್ಳಬೇಕು ಬೇಕೆಂದು ನಿರ್ಣಯಿಸಲಾಯಿತು.
ಹಾಗೆಯೆ ಕಳೆದ ಸಾಲಿನಲ್ಲಿ ಮತ್ತು ಇದೇ 2026 ರಲ್ಲಿ ನಡೆದ ಹಂಪಿ ಉತ್ಸವದಲ್ಲಿ ಪ್ರಭಂಧ ಮಂಡಿಸಿದ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸಲಾಯಿತು.
ಕಾರ್ಯದರ್ಶಿ ದಿಲೀಪ್ ನಾಡಿಗ್ ಕಳೆದ ಸಾಲಿನ ಆಯ- ವ್ಯಯ ಮಂಡಿಸಿದರು. ಆದಿತ್ಯ ನಂಜವಳ್ಳಿ ವಂದನಾರ್ಪಣೆ ನೆರವೇರಿಸಿದರು.

Shivamogga District Chamber of Commerce and Industry ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ ಅಗತ್ಯ: ಉಮಾ ರೆಡ್ಡಿ

0

Shivamogga District Chamber of Commerce and Industry ರಾಜ್ಯದಲ್ಲಿ 2ನೇ ಹಂತದ ನಗರಗಳಲ್ಲಿನ ಕೈಗಾರಿಕಾ ವಸಹಾತು ಪ್ರದೇಶಗಳಲ್ಲಿ ಇನ್ನೂ ಹೆಚ್ಚಿನ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಕೆಲಸ ಸರ್ಕಾರದ ಮಟ್ಟದಿಂದ ಆಗಬೇಕಿದೆ ಎಂದು ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷೆ ಉಮಾ ರೆಡ್ಡಿ ತಿಳಿಸಿದರು .

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಆಯೋಜಿಸಿದ್ದ ಸಂಸ್ಥಾಪಕರ ದಿನಾಚರಣೆ 2025 ರ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರ ಎಂಎಸ್ ಎಂ ಇ ಗಳಿಗೆ ಇನ್ನು ಹೆಚ್ಚಿನ ಪ್ರಾಮುಖ್ಯತೆ ನೀಡಿ ಪ್ರೋತ್ಸಾಹಿಸಬೇಕಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚಿನ ಅವಕಾಶ ಇದೆ. ಸರ್ಕಾರವು ಇದಕ್ಕೆ ಸಹಕರಿಸಬೇಕು ಎಂದು ತಿಳಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಏಪ್ರಿಲ್ 24ರಿಂದ 26ರವರೆಗೆ ಎಫ್ಕೆಸಿಸಿಐ ವತಿಯಿಂದ ಗ್ಲೋಬಲ್ ಅಗ್ರಿಟೆಕ್ ಸಮ್ಮಿಟ್ ಹಮ್ಮಿಕೊಳ್ಳಲಾಗುವುದು. ಕೃಷಿ ಮತ್ತು ಆಹಾರ ಕ್ಷೇತ್ರ ಉತ್ತೇಜಿಸಲು ಕಾರ್ಯಕ್ರಮ ಆಯೋಜಿಸಲಾಗುವುದು. ಮೇ 29ರಿಂದ 31ರವರೆಗೆ ಗ್ಲೋಬಲ್ ಎಂಎಸ್ಎಂಇ ಕಾನ್ಕ್ಲೇವ್ ಆಯೋಜಿಸಲಾಗುತ್ತಿದೆ. 400ಕ್ಕೂ ಹೆಚ್ಚು ಪ್ರದರ್ಶನ ಮಳಿಗೆಗಳನ್ನು ಏರ್ಪಡಿಸಲಾಗುತ್ತದೆ. ಇದರಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮತ್ತು ಸಂಘವು ಸಕ್ರಿಯವಾಗಿ ಭಾಗವಹಿಸಿ ಎಂದು ಕರೆ ನೀಡಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮಾತನಾಡಿ, ಜಿಲ್ಲೆಯಲ್ಲಿನ ವಾಣಿಜ್ಯ ಮತ್ತು ಕೈಗಾರಿಕಾ ಸಮಸ್ಯೆಗಳಿಗೆ ಪರಿಹಾರ ಕೊಂಡುಕೊಳ್ಳಲು ಹಾಗೂ ಸರ್ಕಾರದ ಮಟ್ಟದಲ್ಲಿ ಕೊಂಡಿಯಾಗಿ ಕೆಲಸ ಮಾಡುತ್ತ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘವು ಮಾಜಿ ಅಧ್ಯಕ್ಷರು ನಡೆದ ಹಾದಿಯಲ್ಲಿ ಸಾಗುತ್ತಿದೆ ಎಂದು ತಿಳಿಸಿದರು.

ನಮ್ಮ ಸಂಘದಲ್ಲಿ ಸಂಸ್ಥಾಪಕ ಅಧ್ಯಕ್ಷರಿಂದ ಹಿಂದಿನ ಅಧ್ಯಕ್ಷರವರೆಗೂ ಪ್ರತಿಯೊಬ್ಬರೂ ಸಂಘವನ್ನು ಕಟ್ಟಿ ಬೆಳೆಸಿದ್ದಾರೆ. ಅವರ ಶ್ರಮ ಮತ್ತು ಸಾಧನೆಯಿಂದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಘವು ಹೆಮ್ಮೆರ ವಾಗಿ ಬೆಳೆಯಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಎಂ.ಶಂಕರರಾವ್, ಎಸ್.ರುದ್ರೇಗೌಡ, ಕೆ.ವಿ.ವಸಂತ್ಕುಮಾರ್, ಟಿ.ಆರ್.ಅಶ್ವತ್ಥ್ ನಾರಾಯಣ ಶೆಟ್ಟಿ, ಎಚ್.ಮಹೇಂದ್ರಪ್ಪ, ಡಿ.ಎಸ್.ಅರುಣ್, ಡಿ.ಎಂ.ಶಂಕರಪ್ಪ, ಜೆ.ಆರ್.ವಾಸುದೇವ್ ಹಾಗೂ ಎನ್.ಗೋಪಿನಾಥ್ ಅವರಿಗೆ ಗೌರವಿಸಲಾಯಿತು.

Shivamogga District Chamber of Commerce and Industry ನ್ಯೂ ಕಿಶನ್ ಹ್ಯಾಂಡಿಕ್ರಾಫ್ಟ್, ಲಕ್ಷ್ಮೀ ಮೆಡಿಕಲ್ಸ್ ಹಾಗೂ ರವಿ ಟ್ರೇಡರ್ಸ್ೆ ಸಂಸ್ಥೆಗಳಿಗೆ 2025ನೇ ಸಾಲಿನ ಹೆಮ್ಮೆಯ ವಾಣಿಜ್ಯೋದ್ಯಮಿ ಪ್ರಶಸ್ತಿ ನೀಡಲಾಯಿತು. ಬಿ.ಆರ್.ಸಂತೋಷ್, ಎಸ್.ಪಿ.ಮಧುಕರ್ ಶೆಟ್ಟಿ, ಎ.ಜಿ.ಪ್ರಕಾಶ್ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ತೆರಿಗೆ ಸಲಹೆಗಾರ ಯು.ಮಧುಸೂದನ್ ಐತಾಳ್ ಅವರಿಗೆ ವಿಶೇಷ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ್, ಸಂಘದ ನಿರ್ದೇಶಕರು, ಸಂಯೋಜಿತ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸದಸ್ಯರು ಹಾಜರಿದ್ದರು.

DVS College of Arts, Science and Commerce ಸಂಶೋಧನಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದು ಅವಶ್ಯಕ :ವರುಣ್ ಕುಮಾರ್ ಆರ್.ಎಸ್

0

DVS College of Arts, Science and Commerce ಅಂತರಾಷ್ಟ್ರೀಯ ಮಟ್ಟದ ಮನ್ನಣೆಗಳನ್ನು ಪಡೆಯಲು ಮತ್ತು ಸಮಾಜಕ್ಕೆ ಕೊಡುಗೆ ನೀಡಲು ಸಂಶೋಧನಾ ಕ್ಷೇತ್ರವು ಅತ್ಯಂತ ಮಹತ್ವದ್ದಾಗಿದೆ ಎಂದು ಮಲೇಷ್ಯಾದ ಸನ್‌ವೇ ವಿಶ್ವವಿದ್ಯಾಲಯದ ಗಣಿತಶಾ ಸ್ತ್ರ ವಿಭಾಗದ ಉಪನ್ಯಾಸಕ ಡಾ. ವರುಣ್ ಕುಮಾರ್ ಆರ್.ಎಸ್. ಹೇಳಿದರು.

ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಗಣಿತಶಾಸ್ತ್ರ ವಿಭಾಗ ಮತ್ತು ಐಕ್ಯೂಎಸಿ ವತಿಯಿಂದ ಆಯೋಜಿಸಿದ್ದ ಗಣಿತಶಾಸ್ತ್ರದಲ್ಲಿ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅವಕಾಶಗಳ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಗಣಿತಶಾಸ್ತ್ರದಲ್ಲಿ ಇರುವ ಅವಕಾಶಗಳ ಬಗ್ಗೆ ಹೆಚ್ಚಿನ ಮಾಹಿತಿ ಹೊಂದಬೇಕು. ಅಂತರಾಷ್ಟ್ರೀಯ ಮಟ್ಟದಲ್ಲೂ ಸಾಧನೆ ಮಾಡಲು ಸಾಧ್ಯತೆಗಳಿವೆ. ಪದವಿ ಶಿಕ್ಷಣ ಪಡೆಯುತ್ತಿರುವ ಹಂತದಲ್ಲಿಯೇ ಪೂರಕ ಸಿದ್ಧತೆ ನಡೆಸಬೇಕು. ಹಂತ ಹಂತವಾಗಿ ಗುರಿ ಸಾಧಿಸಬೇಕು ಎಂದು ತಿಳಿಸಿದರು.

ಉಪನ್ಯಾಸದಲ್ಲಿ ಭಾರತ ಮತ್ತು ವಿದೇಶಗಳಲ್ಲಿನ ವಿಶ್ವವಿದ್ಯಾಲಯಗಳಲ್ಲಿನ ಉನ್ನತ ಶಿಕ್ಷಣ ಕೋರ್ಸ್ ಗಳ ಕುರಿತು ಬಿಎಸ್‌ಸಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಸಂಶೋಧನೆಗಾಗಿ ಇರುವ ಫೆಲೋಶಿಪ್ ಯೋಜನೆಗಳನ್ನು ವಿವರಿಸಿದರು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಡಾ. ಎಂ. ವೆಂಕಟೇಶ್ ಮಾತನಾಡಿ ಗಣಿತ ಮತ್ತು ತತ್ವಶಾಸ್ತ್ರದ ನಡುವಿನ ಸಂಬಂಧದ ಕುರಿತು ಕಾರ್ಯಕ್ರಮದ ಅಧ್ಯಕ್ಷೀಯ ಭಾಷಣದಲ್ಲಿ ವಿವರಿಸಿದರು. ಜೀವನದಲ್ಲಿ ಜಾಗತಿಕ ಮಟ್ಟಕ್ಕೆ ಬೆಳೆಯಲು ಗಣಿತಶಾಸ್ತ್ರದಲ್ಲಿ ಇರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.

DVS College of Arts, Science and Commerce ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಚಂದ್ರು ಕೆ. ಪ್ರಾಸ್ತಾವಿಕ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕಿ ಲಾವಣ್ಯ ಟಿ.ಪಿ. ನಿರೂಪಿಸಿದರು. ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕ ಎನ್.ಕುಮಾರಸ್ವಾಮಿ, ಮಲ್ಲಿಕಾರ್ಜುನ ಎ.ಎನ್., ಅನಿರುದ್ಧ ಎಸ್., ನಂದಿತಾ ಎ, ಅನು ಆರ್ ಗುರುಮೂರ್ತಿ ಉಪಸ್ಥಿತರಿದ್ದರು.

Reserve Bank of India ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

0

Reserve Bank of India ಭಾರತೀಯ ರಿಸರ್ವ್ ಬ್ಯಾಂಕ್ ವತಿಯಿಂದ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
www.rbi.org.in/ ಎಂಬ ಬ್ಯಾಂಕಿನ ಜಾಲತಾಣದಲ್ಲಿ recruitment for the post of assistant-panel year 2025 ಎಂಬುದನ್ನು ಕ್ಲಿಕ್ ಮಾಡುವುದರ ಮೂಲಕ ಮಾರ್ಚ್ 08 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಬ್ಯಾಂಕಿನ ವೆಬ್‌ಸೈಟ್ www.rbi.org.in ನ್ನು ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು(ಪ್ರಭಾರ) ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

Shikshana Ratna Awards ಶಿಕ್ಷಣ ಸಂಯೋಜಕ ಬಿ.ನಾಗರಾಜ್ ಗೆ “ಶಿಕ್ಷಣ ರತ್ನ” ಪ್ರಶಸ್ತಿ.

0

Shikshana Ratna Awards ತೀರ್ಥಹಳ್ಳಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಕಳೆದ ನಾಲ್ಕು ವರ್ಷದಿಂದ ಶಿಕ್ಷಣ ಸಂಯೋಜಕರಾಗಿ ಸೇವೆ ಸಲ್ಲಿಸುತ್ತಿರುವ ಬಿ. ನಾಗರಾಜ್‌ಗೆ
ಶನಿವಾರ ತಮಿಳುನಾಡಿನ ಹೊಸೂರಿನಲ್ಲಿ ಏಷಿಯನ್ ಇಂಟರ್ ನ್ಯಾಷನಲ್ ಕಲ್ಚರ್ ಅಕಾಡೆಮಿ ವತಿಯಿಂದ ಶಿಕ್ಷಣ ರತ್ನ ಅವಾರ್ಡ್ ನೀಡಿ ಗೌರವಿಸಲಾಯಿತು.

CM Siddaramaiah ಹದಿನೇಳನೆ ಬಾರಿಗೆ ಬಜೆಟ್ ಮಂಡಿಸಲಿರುವ ಪ್ರಯುಕ್ತ ಆಶೀರ್ವಾದ ಪಡೆಯಲು ಮಾರಿಕಾಂಬೆಗೆ”ಮಡ್ಲಕ್ಕಿ” ಅರ್ಪಣೆ.

0

CM Siddaramaiah ಮಾರ್ಚ್ 6 ರಂದು 17ನೇ ಬಾರಿ ಬಜೆಟ್ ಮಂಡನೆ ಮಾಡುತ್ತಿರುವ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ ಹೆಗ್ಗಳಿಕೆಗೆ ಪಾತ್ರರಾಗುತ್ತಿರುವ ಈ ಸುಸಂದರ್ಭದಲ್ಲಿ ಅವರು ರಾಜ್ಯದ ಜನರಿಗೆ ಇನ್ನು ಹೆಚ್ಚು ಯೋಜನೆಗಳನ್ನು ನೀಡಿ ರಾಜ್ಯದ ಆಡಳಿತವನ್ನು ಸುದೀರ್ಘವಾಗಿ ನಡೆಸಲೆಂದು ಆಶಿಸಿ, ಇಂದು ಕೋಟೆ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ರವರ ನೇತೃತ್ವದಲ್ಲಿ ಕರುನಾಡ ದೊರೆ ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ಕೋಟೆ ಶ್ರೀ ಮಾರಮ್ಮನಿಗೆ “ಮಡ್ಲಕ್ಕಿ ಸಮರ್ಪಿಸಿ -ವಿಶೇಷ ಪೂಜೆ”ಸಲ್ಲಿಸಲಾಯಿತು

CM Siddaramaiah ಈ ಸಂದರ್ಭದಲ್ಲಿ ಯುವ ಮುಖಂಡರಾದ ಕೆ ರಂಗನಾಥ್, ಸೂಡ ಸದಸ್ಯರಾದ ಎಂ ಪ್ರವೀಣ್ ಕುಮಾರ್, ಹಾಪ್ ಕಾಮ್ಸ್ ನಿರ್ದೇಶಕ ಶರತ್ ಮರಿಯಪ್ಪ, ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಬಿ ಲೋಕೇಶ್, ಗ್ಯಾರೆಂಟಿ ಪ್ರಾಧಿಕಾರದ ಸದಸ್ಯರಾದ ಎಸ್ ಕುಮಾರೇಶ್, ಎಸ್ ಬಸವರಾಜ್ ಪ್ರಮುಖರಾದ ಹೆಚ್ .ಪಿ. ಗಿರೀಶ್, ಎಂ .ರಾಕೇಶ್, ಕೆ. ಎಲ್. ಪವನ್, ಗುರುಪ್ರಸಾದ್, ಮನ್ವಿಕ್ ಜೈನ್ , ಚೇತನ್, ಸುಹಾಸ್ ,ನಾಗೇಶ, ಹರೀಶ್, ಪ್ರಜ್ವಲ್ ,ಭವಿತ್ ಹಾಗೂ ಇತರರು ಇದ್ದರು

B. Y. Raghavendra ಶಿಕಾರಿಪುರ ತಾಲ್ಲೂಕಿನ ಸಾಹಿತ್ಯಾಸಕ್ತ ಪ್ರತಿಭೆಗಳಿಗೆ ಸಾಹಿತ್ಯ ಭವನ ಉತ್ತಮ ವೇದಿಕೆಯಾಗಲಿ- ಸಂಸದ ರಾಘವೇಂದ್ರ.

0

B. Y. Raghavendra ನಮ್ಮ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪಾತ್ರ ಅನನ್ಯವಾದುದು. ಶಿಕಾರಿಪುರದ ಜನತೆಯ ಬಹುದಿನಗಳ ಕನಸಾಗಿದ್ದ ಸುಸಜ್ಜಿತ ಕನ್ನಡ ಸಾಹಿತ್ಯ ಪರಿಷತ್ ಸಭಾ ಭವನವನ್ನು ಸಂಸದ ಬಿ.ವೈ.ರಾಘವೇಂದ್ರಇಂದು ಸಂಭ್ರಮದಿಂದ ಉದ್ಘಾಟಿಸಿದರು.

ಕನ್ನಡದ ಸಾಹಿತ್ಯಿಕ ಚಟುವಟಿಕೆಗಳಿಗೆ, ವಿಚಾರಗೋಷ್ಠಿಗಳಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಈ ನೂತನ ಭವನವು ಸಾಕ್ಷಿಯಾಗಲಿದ್ದು, ನಮ್ಮ ತಾಲ್ಲೂಕಿನ ಸಾಹಿತ್ಯಾಸಕ್ತರಿಗೆ ಮತ್ತು ಯುವ ಪ್ರತಿಭೆಗಳಿಗೆ ಉತ್ತಮ ವೇದಿಕೆಯನ್ನು ಕಲ್ಪಿಸಿಕೊಡಲಿ ಎಂದು ಬಿ.ವೈ.ರಾಘವೇಂದ್ರ ಹಾರೈಸಿದರು.

B. Y. Raghavendra ಈ ಸಂದರ್ಭದಲ್ಲಿ ಶಿಕಾರಿಪುರ ಕ್ಷೇತ್ರದ ಜನಪ್ರಿಯ ಶಾಸಕರಾದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ. ವೈ. ವಿಜಯೇಂದ್ರ ಅವರು, ಮುಖಂಡರಾದ ಶ್ರೀ ಮಂಜುನಾಥ್, ಶ್ರೀ ರಮೇಶ್, ಶ್ರೀ ಎಂ.ಎಂ. ಸ್ವಾಮಿ, ಶ್ರೀ ಶಿವಾನಂದ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.

Shimoga News ಯುವಜನತೆ ಹಾದಿ ತಪ್ಪಿದಷ್ಟೂ ಕಂಪನಿಗಳಿಗೆ ಲಾಭ- ಎ.ಹೆಚ್.ಸಾಗರ್.

0

Shimoga News ನೈಜ ಪ್ರಪಂಚವನ್ನು ಕಾಣದೆ ಮೊಬೈಲ್ ಮೂಲಕವೇ ಜಗತ್ತನ್ನು ಅರ್ಥ ಮಾಡಿಕೊಳ್ಳುವ ಇಂದಿನ ಯುವ ಜನತೆಯ ಹಾದಿ ತಪ್ಪಿಸಿ ಲಾಭ ಮಾಡಿಕೊಳ್ಳುವ ಕಂಪನಿಗಳ ಪ್ರವೃತ್ತಿಯು ಪ್ರಸ್ತುತ ಔದ್ಯಮಿಕ ರಂಗದಲ್ಲಿ ಅಧಿಕವಾಗುತ್ತಿದೆ ಎಂದು ಅಂತಾರಾಷ್ಟ್ರೀಯ ಶಿಕ್ಷಣ ತಜ್ಞ ಹಾಗೂ ತತ್ವಜ್ಞ ಎ.ಹೆಚ್. ಸಾಗರ್ ಆತಂಕ ವ್ಯಕ್ತಪಡಿಸಿದರು.

ಅವರಿಂದು ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಶನ್ ನ ಬಿಸಿಎ ಪದವಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಾ ಕಲಿತ ವಿಷಯದಿಂದ ಬೇರೆ ವಿಷಯಗಳ ಸಮಸ್ಯೆಗಳನ್ನು ನಿವಾರಿಸುವ ಸಾಮರ್ಥ್ಯವಿದ್ದರೆ ಮಾತ್ರ ಮುಂದೆ ಭವಿಷ್ಯವಿದೆ, ಇದಕ್ಕಾಗಿ ವಿಮರ್ಶಾತ್ಮಕ ಚಿಂತನೆ ಮಾಡುವುದನ್ನು ರೂಡಿಸಿಕೊಳ್ಳಬೇಕು, ಸುಖವಾಗಿ ಇರಬೇಕೆಂಬ ವಲಯದಿಂದ ಹೊರಬಂದು ಸವಾಲುಗಳನ್ನು ಸ್ವೀಕರಿಸುವ ವಲಯಕ್ಕೆ ಹೋಗಿ ಜ್ಞಾನಾರ್ಜನೆಯ ವಲಯವನ್ನು ಪ್ರವೇಶಿಸಿದರೆ ಅಭಿವೃದ್ಧಿಯ ವಲಯವು ಪ್ರಾಪ್ತವಾಗುತ್ತದೆ ಎಂದರಲ್ಲದೆ ಶೈಕ್ಷಣಿಕ ದೆಸೆಯಲ್ಲಿ ಪಠ್ಯ ವಿಷಯಗಳನ್ನು ಪ್ರೀತಿಸಬೇಕೇ ಹೊರತು ಹುಡುಗ ಹುಡುಗಿಯರನ್ನು ಪ್ರೀತಿಸುವುದಲ್ಲ, ಮನೋದ್ವೇಗಗಳಿಂದ ಉಂಟಾಗುವ ಸಮಸ್ಯೆಗಳಿಗೆ ಹಾಸ್ಯಪ್ರಜ್ಞೆಯು ಪರಿಹಾರವಾಗಬಲ್ಲದು, ಭಾಷೆಗಳನ್ನು ಸರಿಯಾಗಿ ಕಲಿಯದಿದ್ದಲ್ಲಿ ಮತ್ತೊಬ್ಬರು ಹೇಳಿದ್ದನ್ನೆಲ್ಲ ಒಪ್ಪಬೇಕಾಗುತ್ತದೆ, ಕಲಿತರೆ ಎಲ್ಲವೂ ಸ್ವಯಂ ಅರ್ಥವಾಗುತ್ತದೆ ಎಂಬುದನ್ನು ಉದಾಹರಣೆಗಳ ಮೂಲಕ ವಿವರಿಸಿದರು.

Shimoga News ಕಾಲೇಜಿನ ಚೇರ್ಮನ್ ಖ್ಯಾತ ಲೆಕ್ಕಪರಿಶೋಧಕ ಡಾ ಅಥಣಿ ಎಸ್ ವೀರಣ್ಣನವರ ಅಧ್ಯಕ್ಷತೆಯಲ್ಲಿ ಕಾಲೇಜನ ಪ್ರಾಂಶುಪಾಲ ಡಾ.ಬಿ ವೀರಪ್ಪ, ಡಾ. ಸ್ವಾಮಿ ತ್ರಿಭುವನಾನಂದರ ಉಪಸ್ಥಿತಿಯಲ್ಲಿ ರಾಂಕ್ ವಿಜೇತರನ್ನು ಸನ್ಮಾನಿಸಿ ಪದವೀಧರರಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಬೋಧಕ ವರ್ಗದ ಚನ್ನೇಗೌಡ ಕೆ ಮತ್ತು ನಾಗರಾಜ ಬಿ ಎಸ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದ ಪ್ರಾರ್ಥನೆಯನ್ನು ಶ್ರಾವಣಿ ಮತ್ತು ತಂಡ ಹಾಡಿದರೆ ಬಿ ಎಂ ಪ್ರಶಾಂತಿನಿ ಸ್ವಾಗತ ಕೋರಿದರು. ಎನ್ ಜ್ಯೋತಿ ಅತಿಥಿಗಳ ಪರಿಚಯ ಮಾಡಿದರು. ಹೆಚ್ ನವೀನ್ ಪ್ರತಿಜ್ಞಾವಿಧಿ ಬೋಧಿಸಿದರು. ಕೆ ಸಿದ್ದಲಿಂಗಪ್ಪ ಅತಿಥಿಗಳನ್ನು ಸನ್ಮಾನಿಸಿದರೆ ಎಂ ಎಸ್ ಪೂಜಾ ವಂದನೆಗಳನ್ನು ಸಮರ್ಪಿಸಿದರು.

ಚಿತ್ರ ಹಾಗೂ ವರದಿ: ಡಾ. ಎಚ್.ಬಿ. ಮಂಜುನಾಥ, ಹಿರಿಯ ಪತ್ರಕರ್ತರು.