Tuesday, February 10, 2026
Tuesday, February 10, 2026
Home Blog Page 73

Canara Bank Rural Self Employment Training Institute ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಕೇಂದ್ರದಿಂದ ತರಬೇತಿಗೆ ಅರ್ಹರಿಂದ ಅರ್ಜಿ ಆಹ್ವಾನ

0

Canara Bank Rural Self Employment Training Institute ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕ ಮತ್ತು ಯುವತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 8ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದ್ದು, ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು.

ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

13 ದಿನಗಳ ಕೃಷಿ ಉದ್ಯಮಿ (ಕುರಿ ಕೋಳಿ, ಹಸು ಸಾಕಾಣಿಕೆ & ಏರೆಹುಳ ಗೊಬ್ಬರ ತಯಾರಿಕೆ, ಇತ್ಯಾದಿ) ತರಬೇತಿಯು 08/12/2025ರಿಂದ ಆರಂಭಗೊಳ್ಳಲಿದೆ.

35 ದಿನಗಳ ಬ್ಯೂಟಿ ಪಾರ್ಲರ್ ಮ್ಯಾನೆಜ್‌ಮೆಂಟ್ ತರಬೇತಿಯು 09/12/2025ರಿಂದ ಆರಂಭಗೊಳ್ಳಲಿದೆ.

Canara Bank Rural Self Employment Training Institute ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-577 216 (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9743429595, 8722384541, 9164411580, 9449371579, 9481955721, 9632961707 ಸಂಪರ್ಕಿಸಬಹುದು.

Shivaganga Yoga Center ಪೋಷಕರು ಮಕ್ಕಳಿಗೆ ಪ್ರತಿ ದಿನ ಸಮಯ ನೀಡಿ ಓದಿನ ಬಗ್ಗೆ ವಿಚಾರಿಸಬೇಕು- ಸಿ.ವಿ.ರುದ್ರಾರಾಧ್ಯ

0

Shivaganga Yoga Center ರಾಯಲ್ ಇಂಗ್ಲೀಷ್ ಮೀಡಿಯಂ ಶಾಲೆ, ವಿನೋಬ ನಗರ ಶಿವಮೊಗ್ಗ ಇದರ ಬೆಳ್ಳಿ ಹಬ್ಬವನ್ನು ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಶಿವಗಂಗಾ ಯೋಗ ಕೇಂದ್ರದ ಗುರುಗಳಾದ ಯೋಗಾಚಾರ್ಯ ಶ್ರೀ ಸಿ.ವಿ. ರುದ್ರಾರಾಧ್ಯ ಅವರು ಮಾತನಾಡಿ ಪೋಷಕರು ಮಕ್ಕಳನ್ನು ಶಾಲೆಗೆ ಸೇರಿಸಿದರೆ ಅವರ ಕೆಲಸ ಮುಗಿಯುವುದಿಲ್ಲ, ಪ್ರತಿದಿನ ಮಕ್ಕಳಿಗೆ ಸಮಯ ನೀಡಬೇಕು ಮತ್ತು ಪರೀಕ್ಷೆ ಬಂದಾಗ ಮಾತ್ರ ಓದುವ ಬದಲು ವರ್ಷಪೂರ್ತಿ ಓದಿ ಪರೀಕ್ಷೆಯನ್ನು ಉತ್ತಮವಾಗಿ ಎದುರಿಸಿ ಯಶಸ್ಸು ಗಳಿಸಲು ಸಾಧ್ಯ ಎಂದು ಹೇಳಿದರು. ರಾಯಲ್ ಇಂಗ್ಲೀಷ್ ಮೀಡಿಯಂ ಶಾಲೆಯು ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ಸಂಸ್ಕಾರಯುತ ಶಿಕ್ಷಣ ನೀಡುತ್ತಿದ್ದು ಪಟ್ಟೇತರ ಚಟುವಟಿಕೆಗಳಲ್ಲೂ ಹೆಚ್ಚಿನ ಗಮನ ವಹಿಸುತ್ತಿರುವುದು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ತಿಳಿಸಿದರು. ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಡಾ. ರಾಹುಲ್ ದೇವರಾಜ್ ವೈದ್ಯರು ಹಾಗೂ ಪ್ರೇರಕ ಭಾಷಣಕಾರರು ಇವರು ಪೋಷಕರು ಮತ್ತು ಮಕ್ಕಳ ನಡುವಿನ ಸಂಬಂಧ ಹೇಗಿರಬೇಕು ಎಂಬುದನ್ನು ಮನಮುಟ್ಟುವ ರೀತಿ ತಿಳಿಸಿಕೊಟ್ಟರು. ಪೋಷಕರ ನಡೆ ನುಡಿ ಮಕ್ಕಳ ಜೀವನದ ಮೇಲೆ ತುಂಬಾ ಪರಿಣಾಮವನ್ನು ಬೀರುತ್ತದೆ ಮಕ್ಕಳು ಪೋಷಕರ ನಡೆನುಡಿಯನ್ನು ಗಮನಿಸುತ್ತಾ ಅದೇ ರೀತಿ ಅವರು ಅನುಕರಿಸಲು ಆರಂಭಿಸುವ ಕಾರಣ ನಮ್ಮ ನಡೆ ನುಡಿ ಬಹಳ ಮುಖ್ಯ. ನಾವು ಬೇರೆಯವರಿಗೆ ಎಷ್ಟು ಗೌರವವನ್ನು ನೀಡುತ್ತೇವೆಯೋ, ಅಷ್ಟು ಗೌರವ ನಮಗೆ ಮರಳಿ ಬರುತ್ತದೆ ಎಂಬುದನ್ನು ಮಕ್ಕಳಿದ್ದಾಗಲೇ ನಾವು ಕಲಿಸಿಕೊಡಬೇಕು. ಸಾಮಾಜಿಕ ಜವಾಬ್ದಾರಿ, ಹಿರಿಯರಿಗೆ ಗೌರವ ಕೊಡುವುದು, ಪರಿಸರ ಸಂರಕ್ಷಣೆ, ಎಲ್ಲರೊಡನೆ ಪ್ರೀತಿಯಿಂದ ಇರುವುದು ಈ ರೀತಿಯ ಮೌಲ್ಯಗಳನ್ನು ಮಕ್ಕಳಿದ್ದಾಗಲೇ ನಾವು ಶಾಲೆಯಲ್ಲಿ ಕಲಿಸಿಕೊಡುವುದರ ಜೊತೆ ಮನೆಯಲ್ಲಿಯೂ ಅಂತಹ ವಾತಾವರಣವನ್ನು ನಿರ್ಮಾಣ ಮಾಡಬೇಕು ಎಂದು ತಿಳಿಸಿದರು. Shivaganga Yoga Center ನಮ್ಮ ದೇಶ ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳಿಗೆ ಹೆಚ್ಚು ಒತ್ತು ನೀಡುವ ದೇಶವಾಗಿದ್ದು ನಮ್ಮ ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ ನಡೆಯುತ್ತಾ ದೇಶ ಸೇವೆಯನ್ನು ಬಾಲ್ಯದಿಂದಲೇ ಅಳವಡಿಸಿಕೊಳ್ಳಲು ಪೋಷಕರು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಹೇಳಿದರು. ಬೆಳೆಯುವ ಪೈರು ಮೊಳಕೆಯಲ್ಲಿ ಎನ್ನುವ ಹಾಗೆ ಚಿಕ್ಕಂದಿನಿಂದಲೇ ಒಳ್ಳೆಯ ಗುಣಗಳನ್ನು ಅಭ್ಯಾಸ ಮಾಡಿಕೊಂಡರೆ ಮನೆಗೆ ಮತ್ತು ಸಮಾಜಕ್ಕೆ ಆಸ್ತಿ ಆಗುವರು. ಮಕ್ಕಳಿಗೆ ಆಸ್ತಿ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡುವ ಹೊಣೆಗಾರಿಕೆ ಪೋಷಕರದ್ದಾಗಿರುತ್ತದೆ. ಶಾಲೆಯಲ್ಲಿ ಶಿಕ್ಷಕರು ಎಷ್ಟೇ ಪ್ರಾಮಾಣಿಕ ಪ್ರಯತ್ನ ಮಾಡಿ ಹೇಳಿಕೊಟ್ಟರೂ ತಂದೆ ತಾಯಿಯ ಜವಾಬ್ದಾರಿಯು ಅಷ್ಟೇ ಇರುತ್ತದೆ ಎಂಬುದನ್ನು ನಾವು ಅರಿತುಕೊಳ್ಳಬೇಕು ಎಂದು ತಿಳಿಸಿದರು. ರಾಯಲ್ ಇಂಗ್ಲೀಷ್ ಮೀಡಿಯಂ ಶಾಲೆಯ ಶಿಕ್ಷಣ ಸಲಹೆಗಾರರಾದ ಡಾ. ನಾಗರಾಜ್ ಪರಿಸರ ಮಾತನಾಡಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಬೇಕಾದಂತಹ ಎಲ್ಲಾ ರೀತಿಯ ಪಟ್ಟೇತರ ಚಟುವಟಿಕೆಗಳಾದ ಯೋಗ, ಚಿತ್ರಕಲೆ, ಅಬಾಕಸ್, ಕರಾಟೆ ವ್ಯಕ್ತಿತ್ವ ವಿಕಸನ, ಸ್ಪೋಕನ್ ಇಂಗ್ಲೀಷ್, ಸಾಂಸ್ಕೃತಿಕ, ಕ್ರೀಡೆ ಹೀಗೆ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅದಕ್ಕೆ ನೀರೆರೆಯುವ ಕೆಲಸವನ್ನು ಈ ಸಂಸ್ಥೆಯು ಮಾಡುತ್ತಾ ಬಂದಿರುವುದು ಈ ಸಂಸ್ಥೆಯ ಹೆಗ್ಗಳಿಕೆ ಎಂದರು. ವೇದಿಕೆಯಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ತಿಪ್ಪೇಸ್ವಾಮಿ, ಗೌರವ ಅಧ್ಯಕ್ಷರಾದ ಶ್ರೀ ಎಸ್. ಎಸ್ ಜ್ಯೋತಿಪ್ರಕಾಶ್, ಆಡಳಿತ ಮಂಡಳಿಯ ಶ್ರೀಮತಿ ಪೂಜಾ ನಾಗರಾಜ್ ಪರಿಸರ, ಶ್ರೀಮತಿ ಶೈಲಜಾ, ಶ್ರೀಮತಿ ವೀಣಾ ಸತೀಶ್ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಶ್ರೀ ಮಂಜುನಾಥ ಶಾಲೆಯ ವಾರ್ಷಿಕ ವರದಿ ಓದಿದರು. ಸಾಂಸ್ಕೃತಿಕ ಸಂಯೋಜಕರಾದ ಶಿಕ್ಷಕಿ ಸೋನಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು. ಶಿಕ್ಷಕಿ ಶ್ರೀಮತಿ ಅನುರಾಧ ಕಾರ್ಯಕ್ರಮ ನಿರೂಪಿಸಿ, ಕುಮಾರಿ ತೇಜಲ್ ಎಲ್ಲರನ್ನೂ ಸ್ವಾಗತಿಸಿ , ಶಿಕ್ಷಕಿ ಅರ್ಪಿತ ಎಲ್ಲರನ್ನು ವಂದಿಸಿದರು.

ಶಿಕಾರಿಪುರ ಸನಿಹ ಶಾಲಾ ಬಸ್ಸು ,ಬೈಕಿಗೆ ಢಿಕ್ಕಿ. ಸ್ಥಳದಲ್ಲೇ ಸವಾರ ಸಾವು

0

ಶಾಲಾ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿಕಾರಿಪುರದ ಹೊರವಲಯದಲ್ಲಿ ನಡೆದಿದೆ.

ಶಿಕಾರಿಪುರ ಪಟ್ಟಣದ ಆಶ್ರಯ ಬಡಾವಣೆ ನಿವಾಸಿ ವಿನಾಯಕ (36) ಮೃತ ವ್ಯಕ್ತಿ
ಶಾಹಿ ಗಾರ್ಮೆಂಟ್ಸ್‌ನಲ್ಲಿ ಉದ್ಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ವಿನಾಯಕ್ ಅವರ ಸ್ನೇಹಿತ್ ಮೋಹನ್‌ರೊಂದಿಗೆ ಕಾರ್ಯನಿಮಿತ್ತ ಬೈಕ್‌ನಲ್ಲಿ ತೆರಳುತ್ತಿದ್ದರು.

ಈ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ಶಾಲಾ ಬಸ್ ವಿನಾಯಕ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೈಕ್‌ನ ಹಿಂಬದಿ ಸವಾರ ಮೋಹನ್ ಗಾಯಗೊಂಡಿದ್ದು, ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಈ ಕುರಿತು ಶಿಕಾರಿಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Keladi Shivappanayaka University of Agricultural and Horticultural Sciences ರೈತರು ವಿಜ್ಞಾನಿ ಮತ್ತು ಉದ್ಯಮಿಯಾಗಿ ಕೃಷಿ ಮಾಡಿದಾಗ ಲಾಭ ಪಡೆಯಲು ಸಾಧ್ಯ- ಡಾ.ಬಿ.ಹೇಮ್ಲಾನಾಯಕ್

0

Keladi Shivappanayaka University of Agricultural and Horticultural Sciences ರೈತ ವಿಜ್ಞಾನಿಯಾದಾಗ ಮತ್ತು ಉದ್ಯಮಿಯಾದಾಗ ಮಾತ್ರ ಲಾಭ ಗಳಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ರೈತರು ಹೊಸ ಬೆಳೆಗಳ ಬಗ್ಗೆ ತಿಳಿದುಕೊಂಡು ವೈಜ್ಞಾನಿಕವಾಗಿ ಬೆಳೆ ಬೆಳೆದು ಲಾಭ ಪಡೆಯಬೇಕು ಎಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕರು ಮತ್ತು ಕುಲಸಚಿವರಾದ ಡಾ.ಬಿ. ಹೇಮ್ಲಾನಾಯ್ಕ ನುಡಿದರು.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಅಡಿಕೆ ಸಂಶೋಧನಾ ಕೇಂದ್ರ, ಶಿವಮೊಗ್ಗ, ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ದಿ ಮಂಡಳಿ, ಹುಬ್ಬಳ್ಳಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಇಂಡಿಯನ್ ಸೊಸೈಟಿ ಆಫ್ ಸ್ಪೈಸಸ್, ಕ್ಯಾಲಿಕಟ್ ಮತ್ತು ಜಿಲ್ಲಾ ಕೃಷಿ ತರಬೇತಿ ಕೇಂದ್ರ ಹಳ್ಳಿಕೆರೆ ಇವರ ಸಹಯೋಗದಲ್ಲಿ ‘ಅಡಿಕೆಯಲ್ಲಿ ಮಿಶ್ರಬೆಳೆಯಾಗಿ ಜಾಯಿಕಾಯಿ’ ಕುರಿತು ನವುಲೆಯ ಕೃಷಿ ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೃಷಿ ಹೊಟ್ಟೆ ತುಂಬಾ ಆಹಾರ ನೀಡಲು ಮಾತ್ರ ಸಾಧ್ಯ. ಕೇವಲ ಕೃಷಿ ಬೆಳೆಗಳಿಂದ ರೈತ ಕೋಟ್ಯಾಧಿಪತಿ ಆಗಲಾರರು. ತೋಟಗಾರಿಕೆ ಬೆಳೆಗಳು ಆರ್ಥಿಕತೆಗೆ ಹೆಚ್ಚಿನ ಉತ್ತೇಜನ ನೀಡುತ್ತವೆ. ಹೊಸ ಬೆಳೆಗಳ ಬಗ್ಗೆ ವೈಜ್ಞಾನಿಕವಾಗಿ ತಿಳಿದುಕೊಂಡು, ತಮ್ಮಲ್ಲಿರುವ ಸ್ವಾಭಾವಿಕ ಮೂಲಗಳನ್ನು ಬಳಸಿಕೊಂಡು ಮಿಶ್ರ ಬೆಳೆಗಳನ್ನು ಬೆಳೆದು ರೈತರು ಲಾಭ ಪಡೆಯಬಹುದು.
ಅಡಿಕೆ, ಕರಿಮೆಣಸು, ಸಾಂಬಾರು ಪದಾರ್ಥಗಳು, ಟೀ, ರಬ್ಬರ್ ನಂತಹÀ ತೋಟಗಾರಿಕೆ ಬೆಳೆಯಿಂದ ಆರ್ಥಿಕತೆ ಸುಧಾರಣೆ ಸಾಧ್ಯ. ನಮ್ಮ ಕೃಷಿ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಶೇ.70 ರಷ್ಟು ತೋಟಗಾರಿಕೆ ಬೆಳೆಗಳಿದ್ದರೆ ಶೇ. 12 ರಷ್ಟು ಕೃಷಿ ಬೆಳೆ ಮತ್ತು ಉಳಿದದ್ದು ಅರಣ್ಯ ಬೆಳೆ ಇದೆ.
ಅಡಿಕೆಗೆ ಈಗಾಗಲೇ ಸಾಕಷ್ಟು ರೋಗಗಳು ಬರುತ್ತಿವೆ. ಈಗ ಅಡಿಕೆಗೆ ಉತ್ತಮ ಬೆಲೆ ಇದೆ. ಆದರೆ ಮುಂದಿನ ದಿನಗಳಲ್ಲಿ ರೈತರ ಕೈ ಹಿಡಿಯಲು ಪರ್ಯಾಯವಾದ ಮಿಶ್ರಬೆಳೆಗಳನ್ನು ಬೆಳೆಯಬೇಕು.
ಅಡಿಕೆಯಲ್ಲಿ ಮಿಶ್ರಬೆಳೆಯಾಗಿ ಜಾಯಿಕಾಯಿ, ಡ್ರ‍್ಯಾಗನ್ ಫ್ರೂಟ್, ಮ್ಯಾಂಗೋಸ್ಟಿನ್, ಕೊಕೊ , ರಂಬುಟನ್‌ ಗಳಂತಹ ಬೆಳೆ ಬೆಳೆಯಲು ಅವಕಾಶವಿದ್ದು ಇದಕ್ಕೆ ಪೂರಕವಾದ ವಾತಾವರಣ ಸೃಷ್ಟಿಸುವುದು ಸಹ ಮುಖ್ಯವಾಗುತ್ತದೆ. ನಮ್ಮಲ್ಲಿ ಅನೇಕ ಪ್ರಗತಿಪರ ರೈತರಿದ್ದು, ವೈಜ್ಞಾನಿಕವಾಗಿ ಮಿಶ್ರಬೆಳೆಯ ಬಗ್ಗೆ ತಿಳಿದು ಅಳವಡಿಸಿಕೊಳ್ಳಬೇಕಿದೆ.
ಜಾಯಿಕಾಯಿ ಒಂದು ಸಾಂಬಾರು ಬೆಳೆಯಾಗಿದ್ದು, ಔಷಧೀಯ ಗುಣವಿರುವ ಕಾರಣ ಉತ್ತಮ ಬೇಡಿಕೆಯೂ ಇದೆ. ಘಮಘಮಿಸುವ ಎಣ್ಣೆಯನ್ನು ತೆಗೆಯಬಹುದು. ಔಷಧೀಯ ಗುಣಗಳಿರುವ ಕಾರಣ ಫಾರ್ಮಾಸಿಟಿಕಲ್ ಉದ್ದಿಮೆ ಹಾಗೂ ಆಯುರ್ವೇದದಲ್ಲಿಯೂ ಇದಕ್ಕೆ ಬೇಡಿಕೆ ಇದೆ. ಇದು ಜೀರ್ಣಕ್ರಿಯೆ ಶಕ್ತಿ ಹೆಚ್ಚಿಸುತ್ತದೆ. ಮೆದುಳನ್ನು ಚುರುಕುಗೊಳಿಸುತ್ತದೆ. ಈಗಾಗಲೇ ಕೇರಳ,ಮಹಾರಾಷ್ಟ್ರ ತಮಿಳುನಾಡಿನಲ್ಲಿ ಬೆಳೆಯಲಾಗುತ್ತಿದೆ.
ರೈತ ಕೃಷಿಕನಾಗಬೇಕು, ವಿಜ್ಞಾನಿಯಾಗಬೇಕು ಜೊತೆಗೆ ವ್ಯಾಪಾರಿಯೂ ಆಗಬೇಕು. ಆಗ ಮಾತ್ರ ಮಾತ್ರ ಲಾಭ ಸಿಗಲು ಸಾಧ್ಯ. ಉಪ ಕಸುಬುಗಳನ್ನು ಮಾಡಬೇಕು ಹಾಗೂ ವ್ಯವಸಾಯ ಉತ್ಪನ್ನ ಸಂಘಗಳ ಸಂಪರ್ಕದಲ್ಲಿರಬೇಕು ಎಂದ ಅವರು ಜಾಯಿಕಾಯಿ ವೈಜ್ಞಾನಿಕ ಬೇಸಾಯ ಕ್ರಮಗಳ ಬಗ್ಗೆ ತಿಳಿಯಲು ಹಲವಾರು ರೈತರು ಮುಂದಾಗಿರುವುದು ಸಂತಸದ ವಿಷಯವಾಗಿದ್ದು ಈ ತರಬೇತಿಯ ಸದುಪಯೋಗ ಪಡೆಯಬೇಕು ಎಂದರು.
ಕರ್ನಾಟಕ ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ದಿ ಮಂಡಳಿ, ಹುಬ್ಬಳ್ಳಿಯ ಪ್ರಧಾನ ವ್ಯವಸ್ಥಾಪಕರಾದ ಡಾ.ರಾಮಚಂದ್ರ ಕೆ ಮಡಿವಾಳ ಮಾತನಾಡಿ, ಭಾರತ ಸಾಂಬಾರು ಪದಾರ್ಥಗಳ ಶ್ರೀಮಂತ ದೇಶ. ಪ್ರಸ್ತುತ ಅಡಿಕೆ ಬೆಳೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಅಡಿಕೆಯೊಂದಿಗೆ ಪೂರಕ ಬೆಳೆ ಬಗ್ಗೆಯೂ ಚಿಂತಿಸಬೇಕಿದೆ. ಯಾವುದೇ ರೀತಿಯ ಆರ್ಥಿಕ ನಷ್ಟವಾಗದಂತೆ ಮಿಶ್ರಬೆಳೆಗೆ ಒತ್ತು ನೀಡಿ, ಆರ್ಥಿಕತೆ ಸುಧಾರಣೆ ಮಾಡಿಕೊಳ್ಳಬೇಕು. ರೈತ ಹೊಸ ಹೊಸ ಬೆಳೆಗಳ ಬಗ್ಗೆ ತಿಳಿದುಕೊಳ್ಳಬೇಕು. ಸಂದರ್ಭಕ್ಕನುಸಾರ ಬದಲಾವಣೆ ತಂದುಕೊಂಡು ಲಾಭ ಹೊಂದಬೇಕು. ರೈತ ಕೇವಲ ಕೃಷಿ ಮಾಡಿದರೆ ಸಾಲದು, ಒಬ್ಬ ಉದ್ದಿಮೆದಾರನಾಗಿ ಹೊರ ಹೊಮ್ಮಬೇಕಿದೆ.
ಅಡಿಕೆಯಲ್ಲಿ ಮಿಶ್ರಬೆಳೆಯಾಗಿ ಜಾಯಿಕಾಯಿಯನ್ನು ವೈಜ್ಞಾನಿಕವಾಗಿ ಬೆಳೆಯುವ ಕುರಿತು ಇಂತಹ ತರಬೇತಿ ಕಾರ್ಯಕ್ರಮಗಳಲ್ಲಿ ರೈತರಿಗೆ ಕೂಲಂಕಷವಾಗಿ ಪರಿಚಯ ಮಾಡಿಕೊಡಬೇಕು. ರೈತರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಅಡಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥರಾದ ಡಾ.ನಾಗರಾಜಪ್ಪ ಅಡಿವಪ್ಪರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯದ 30 ಜಿಲ್ಲೆಗಳಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ದೇಶದ 79% ಅಡಿಕೆ ನಮ್ಮ ರಾಜ್ಯದಲ್ಲಿದೆ. ರೋಗ ಬಂದಾಗ ಸಮಸ್ಯೆಗಳು ಎದುರಾಗುತ್ತವೆ. ಆದ್ದರಿಂದ ನಷ್ಟದಿಂದ ಪಾರಾಗಲು ಅಡಿಕೆಯೊಂದಿಗೆ ಮಿಶ್ರ ಬೆಳೆಗಳನ್ನು ಬೆಳೆಯುವ ಬಗ್ಗೆ ಮಾಹಿತಿ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಅಡಿಕೆಯಲ್ಲಿ ಮಿಶ್ರಬೆಳೆಯಾಗಿ ಜಾಯಿಕಾಯಿ ಕುರಿತು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಈಗಾಗಲೇ ಜಾಯಿಕಾಯಿ ಬೆಳೆದ ರೈತರು ತಮ್ಮ ಅನುಭವ ಹಂಚಿಕೊಳ್ಳುವರು ಎಂದರು.
ಕಾಯಕ್ರಮದಲ್ಲಿ ಅಡಿಕೆಯಲ್ಲಿ ಲಾಭದಾಯಕ ಮಿಶ್ರಬೆಳೆಯಾಗಿ ಜಾಯಿಕಾಯಿ ಕುರಿತಾದ ಮಡಿಕೆಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
ತಾಂತ್ರಿಕ ಗೋಷ್ಟಿ: ಅಡಿಕೆಯಲ್ಲಿ ಮಿಶ್ರಬೆಳೆಯಾಗಿ ಜಾಯಿಕಾಯಿ ಉತ್ಪಾದನಾ ತಾಂತ್ರಿಕತೆಗಳು ವಿಷಯ ಕುರಿತು ಅಡಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ.ನಾಗರಾಜಪ್ಪ ಅಡಿವಪ್ಪರ್, ಜಾಯಿಕಾಯಿಯಲ್ಲಿ ನರ್ಸರಿ ತಾಂತ್ರಿಕತೆಗಳ ಕುರಿತು ಸಹಾಯಕ ಪ್ರಾಧ್ಯಾಪಕ ಡಾ.ಸುದೀಪ್ ಹೆಚ್.ಪಿ, ಜಾಯಿಕಾಯಿಯಲ್ಲಿ ಕೀಟಗಳ ನಿರ್ವಹಣೆ ಕುರಿತು ಸಹಾಯಕ ಪ್ರಾಧ್ಯಾಪಕಿ ಡಾ.ಸ್ವಾತಿ, ಜಾಯಿಕಾಯಿಯಲ್ಲಿ ರೋಗಗಳ ನಿರ್ವಹಣೆ ಕುರಿತು ಸಹಾಯಕ ಪ್ರಾಧ್ಯಾಪಕ ಡಾ.ಕಿರಣ್ ಕುಮಾರ್ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ದಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಡಾ.ಲಕ್ಷ್ಮಿಕಾಂತ ಬೊಮ್ಮಣ್ಣನವರ, ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಹೆಚ್ ಡಿ ದೇವಿಕುಮಾರ್, ಶಶಾಂಕ್, ಸಂಶೋಧನಾ ನಿರ್ದೇಶಕ ಡಾ.ದುಷ್ಯಂತ್ ಕುಮಾರ್, ಕಾಲೇಜಿನ ಡೀನ್ ಡಾ.ಡಿ.ತಿಪ್ಪೇಶ್, ಸಹ ಸಂಶೋಧನಾ ನಿರ್ದೇಶಕ ಡಾ.ಪ್ರದೀಪ್, ಹಿರಿಯ ವಿಜ್ಞಾನಿ ಡಾ.ಪಿ.ಸುನಿಲ್, ಹಳ್ಳಿಕೆರೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕಿ ಡಾ. ಮಮತಾ ಬಿ. ಆರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಯೋಜನಾಧಿಕಾರಿ ಉಲ್ಲಾಸ್ ಮೆಸ್ತಾ ಇತರೆ ಅಧಿಕಾರಿಗಳು, ವಿದ್ಯಾರ್ಥಿಗಳು, ರೈತರು ಹಾಜರಿದ್ದರು.

ವಿಕಲಚೇತನೆ ಗೌರಮ್ಮ ಥೈಲ್ಯಾಂಡ್ ‌ ಸ್ಪರ್ಧೆಯಲ್ಲಿ ಭಾಗವಹಿಸಿ ದೇಶಕ್ಕೇ ಹೆಮ್ಮೆಯ ಪದಕ ಗೆದ್ದಿದ್ದಾರೆ

0

ಥೈಲ್ಯಾಂಡ್ ದೇಶದಲ್ಲಿ ನಡೆದ ಪಂಜ ಕುಸ್ತಿಯಲ್ಲಿ ಪದಕಗಳನ್ನು ಗೆಲ್ಲುವ ಮೂಲಕ ದೇಶಕ್ಕೆ ಹಾಗೂ ನಾಡಿಗೆ ಕೀರ್ತಿ ತಂದ ತಾಲೂಕಿನ ಅಂಬಾರಕೊಪ್ಪ ನಿವಾಸಿ ವಿಕಲಚೇತನ ಗೌರಮ್ಮನಿಗೆ ಅದ್ಭುತ ಸ್ವಾಗತ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು.
ಉದ್ಯಮಿ ಮುಖಂಡ ವೀರೇಶ್ ರವರು ಈ ವೇಳೆ ಮಾತನಾಡಿ ಅತಿ ಕಡು ಬಡತನದಲ್ಲಿ ಇದ್ದರೂ ಕೂಡ ಗೌರಮ್ಮ ಅಂಗವಿಕಲೆ ಆಗಿದ್ದರೂ ಕೂಡ ಛಲ ಬಿಡದ ಪರಾಕ್ರಮಿಯಂತೆ ಹಲವು ಕ್ರೀಡೆಗಳಲ್ಲಿ ಸಾಧನೆ ಗಳಿಸುವ ಮೂಲಕ ತಾಲೂಕಿಗೆ ಕೀರ್ತಿ ತಂದಿದ್ದಾರೆ. ಇವರ ಸಾಧನೆಯನ್ನು ಮೆಚ್ಚಿ ನಾನು ಥೈಲ್ಯಾಂಡ್ ದೇಶಕ್ಕೆ ಕಳುಹಿಸುವ ಮೂಲಕ ಸಣ್ಣ ಆರ್ಥಿಕ ಸಹಾಯ ಮಾಡಿರುತ್ತೇನೆ. ಆದರೆ ಗೌರಮ್ಮನವರು ಪದಕಗಳನ್ನು ಗೆಲ್ಲುವ ಮೂಲಕ ದೊಡ್ಡ ಕೀರ್ತಿಯನ್ನೇ ದೇಶಕ್ಕೆ ನಾಡಿಗೆ ತಾಲೂಕಿಗೆ ತಂದಿದ್ದಾರೆ ಎಂದು ಅಭಿನಂದಿಸಿದರು.
ತಾಲೂಕಿನ ಮುಖಂಡರಾದ ಗೋಣಿ ಮಾಲತೇಶ್, ಭಂಡಾರಿ ಮಾಲತೇಶ್ ರವರು ಗೌರಮ್ಮನ ಸಾಧನೆಗೆ ಆರ್ಥಿಕ ಸಹಾಯದ ಹಾಗೂ ಉದ್ಯೋಗದ ಅವಶ್ಯಕತೆ ಇದ್ದು ಸನ್ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುವುದಾಗಿ ತಿಳಿಸಿದರು.
ಜಯ ಕರ್ನಾಟಕ ಜನಪರ ವೇದಿಕೆಯ ಹುಲಿಗಿ ಕೃಷ್ಣರವರು ಮಾತನಾಡಿ ಕೈ ಕಾಲು ಗಟ್ಟಿ ಇದ್ದವರೇ ಸಾಧನೆ ಮಾಡದೆ ಸುಮ್ಮನಿದ್ದಾರೆ. ಆದರೆ ಗೌರಮ್ಮನವರು ತಮ್ಮ ಆರ್ಥಿಕ, ದೈಹಿಕ ತೊಂದರೆಗಳಿದ್ದರೂ ಕೂಡ ದೇಶಕ್ಕೆ ನಾಡಿಗೆ ಕೀರ್ತಿ ತಂದಿದ್ದಾರೆ.
ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬಿ ಗುಣರಂಜನ್ ಶೆಟ್ಟಿ ರವರ ಹಾಗೂ ಸಂಘಟನೆಯ ನಮ್ಮ ನಾಯಕರದ ಶ್ರೀನಿವಾಸ್ ರವರ ಗಮನಕ್ಕೆ ಈ ಸಾಧಕೀಯ ಬಗ್ಗೆ ವಿವರ ನೀಡುವುದರೊಂದಿಗೆ ಮುಂದಿನ ಕ್ರೀಡೆಗೆ ಸಹಾಯ ಮಾಡಿಸುವುದಾಗಿ ಭರವಸೆ ನೀಡಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಗೌರಮ್ಮನವರು ನನಗೆ ಆರ್ಥಿಕ ತೊಂದರೆ ಇದ್ದರೂ ಕೂಡ ಏನಾದರೂ ಸಾಧಿಸಬೇಕು ಎಂಬುವ ಛಲ ನನ್ನಲ್ಲಿದೆ, ಇದನ್ನು ಗುರುತಿಸಿದ ವೀರೇಶ್ ರವರು ಹಾಗೂ ಎಲ್ಲಾ ಪತ್ರಕರ್ತರು ಮತ್ತು ಥಾಯ್ಲ್ಯಾಂಡ್ ದೇಶಕ್ಕೆ ಹೋಗಲು ನೆರವಾದ ಎಲ್ಲಾ ಮುಖಂಡರಿಗೂ ಅಭಿನಂದನೆ ಸಲ್ಲಿಸುವ ಮೂಲಕ ಈ ಗೌರವವನ್ನು ಅವರಿಗೆ ಸಲ್ಲಿಸುತ್ತೇನೆ ಹಾಗೂ ಮುಂದಿನ ದಿನಗಳಲ್ಲಿ ದೇಶಕ್ಕಾಗಿ ನಾಡಿಗಾಗಿ ಇನ್ನೂ ಹೆಚ್ಚಿನ ಕ್ರೀಡೆಯಲ್ಲಿ ಭಾಗವಹಿಸಿ ಗೆಲುವು ತರುವ ಭರವಸೆ ನನಗಿದೆ ಎಂದರು.
ಈ ಸಂದರ್ಭದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯ ಅಧ್ಯಕ್ಷ ಶಿವಯ್ಯ ಎನ್ ಶಾಸ್ತ್ರಿ, ಗೋಣಿ ಸಂದೀಪ್, ಯುವ ನಿರ್ದೇಶಕ ಹಾಗೂ ಪತ್ರಕರ್ತ ವೈಭವ್, ಯುವರಾಜ್, ಚಂದ್ರಕಾಂತ್ ರೇವಣಕರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್ ನಾಯ್ಕ್, ಕುಮಾರಸ್ವಾಮಿ ಹಿರೇಮಠ್, ಜೆಸಿಐ ನೂತನ ಅಧ್ಯಕ್ಷ ಶಾಂತರಾಮ್, ವೆಂಕಟೇಶ್, ಅಅಗಡಿ ಪ್ರವೀಣ, ಹದಡಿ ಪ್ರವೀಣ್ ಸೇರಿದಂತೆ ಹಲವರಿದ್ದರು.

ಸಂಗೀತ್ ಸಮರ್ಪಣ್ ಟ್ರಸ್ಟ್ 9 ನೇ ವಾರ್ಷಿಕೋತ್ಸವ ವಿಶೇಷ ಸಂಗೀತಧಾರಾ

0

ಸಂಗೀತ್ ಸಮರ್ಪಣ್ ಟ್ರಸ್ಟ್ (ರಿ.) ಸಂಸ್ಥೆ 9 ವರ್ಷಗಳನ್ನು ಪೂರೈಸಿದ ಸಂಭ್ರಮದಲ್ಲಿದೆ.

ಡಿಸೆಂಬರ್ 6ರಂಜು ಸಂಜೆ 5.30ಕ್ಕೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಸಂಗೀತ ಸ್ವರಧಾರಾ – ಆವೃತ್ತಿ 3 ವಿಶೇಷ ಹಿಂದಿ ಹಾಗೂ ಕನ್ನಡ ಸುಮಧುರವಾದ ಚಲನಚಿತ್ರ ಗೀತಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.

Karnataka Institute of Management Training Institute ಬೆಂಗಳೂರಿನ ನಿರ್ವಹಣಾ ತರಬೇತಿ ಸಂಸ್ಥೆಯಿಂದ ರೆಗ್ಯಲರ್ ಮತ್ತು ದೂರಶಿಕ್ಷಣ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

0

Karnataka Institute of Management Training Institute ಕರ್ನಾಟಕ ಇನ್ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್ ತರಬೇತಿ ಸಂಸ್ಥೆಯಲ್ಲಿ ಜನವರಿ ಒಂದು 2026 ರಿಂದ ಪ್ರಾರಂಭವಾಗುವ ಡಿಪ್ಲೋಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ರೆಗ್ಯುಲರ್ ಮತ್ತು ದೂರ ಶಿಕ್ಷಣದ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಪಡೆಯಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು
ಡಿಸೆಂಬರ್ 15
ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಪಿಯುಸಿ ಉತ್ತೀರ್ಣರಾಗಿರಬೇಕು.

ಪಿಯುಸಿ ಮೇಲ್ಪಟ್ಟ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಬಹುದು. ಸದರಿ ತರಬೇತಿಯು ಸಹಕಾರ ಕ್ಷೇತ್ರದ ನೇಮಕಾತಿ ಪರೀಕ್ಷೆಗಳಿಗೆ ಅನುಕೂಲಕರ ಹಾಗೂ ತರಬೇತಿ ಪಡೆಯುವ ಎಲ್ಲಾ ಅಭ್ಯರ್ಥಿಗಳಿಗೂ ಮಾಹೆಯಾನ ಶಿಷ್ಯವೇತನ ನೀಡಲಾಗುವುದು.

Karnataka Institute of Management Training Institute ಅರ್ಜಿಯನ್ನು ಪಡೆಯುವ ವಿಳಾಸ: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋರ್ಟಿ ಮ್ಯಾನೇಜ್ಮೆಂಟ್ ನಂಬರ್ 1/2, ಎರಡನೇ ಮಹಡಿ ಮೂರನೇ ಮುಖ್ಯರಸ್ತೆ, ಚಾಮರಾಜಪೇಟೆ, ಬೆಂಗಳೂರು -18
ಹೆಚ್ಚಿನ ಮಾಹಿತಿಗಾಗಿ 9449007661 ಹಾಗೂ 08035541407 ಸಂಪರ್ಕಿಸಬಹುದು ಎಂದು ತಿಳಿಸಿದೆ.

Vishvesvaraya Iron and Steel Factory ಭದ್ರಾವತಿ ವಿಐಎಸ್ಎಲ್ ಪುನಃಶ್ಚೇತನ ಸಂಬಂಧ ಕೇಂದ್ರ ಸಚಿವ ಹೆಚ್.ಡಿ.ಕುಮಾರ ಸ್ವಾಮಿ ಅವರೊಂದಿಗೆ ಸಂಸದರ ಸಭೆ

0

Vishvesvaraya Iron and Steel Factory ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಅಗತ್ಯ ಬಂಡವಾಳ ಹೂಡಿಕೆ ಹಾಗೂ ಕಾರ್ಖಾನೆಯ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಕಾರ್ಖಾನೆಯ ಆವರಣದ ಕಚೇರಿಯಲ್ಲಿ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವರಾದ ಸನ್ಮಾನ್ಯ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಶಿವಮೊಗ್ಗ ಸಂಸದರಾದ ಬಿ.ವೈ.ರಾಘವೇಂದ್ರ ಅವರು ಭಾಗವಹಿಸಿದರು.

Vishvesvaraya Iron and Steel Factory ಈ ಸಂದರ್ಭದಲ್ಲಿ ಶಾಸಕರುಗಳಾದ ಶ್ರೀಮತಿ ಶಾರದಾ ಪೂರ್ಯನಾಯಕ್, ಶ್ರೀ ಭೋಜೆಗೌಡ, ಶ್ರೀ ಮಂಗೋಟೆ ರುದ್ರೇಶ್, ಶ್ರೀ ಧರ್ಮ ಪ್ರಸಾದ್, ಶ್ರೀಮತಿ ಶಾರದಾ ಅಪ್ಪಾಜಿ ಅವರು ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

SKDRDP ಧರ್ಮಸ್ಥಳ ಸಂಸ್ಥೆಯು ಹಲವಾರು ಮೆಚ್ಚುವಂತಹ ಮಹಿಳಾ ಪರ ಕಾರ್ಯಕ್ರಮ ನಡಸಿದೆ- ಬಿ.ವೈ.ಅರುಣಾದೇವಿ

0

SKDRDP ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದಿನಾಂಕ 29.11.2025ರಂದು ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ನಡೆಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಎಸ್.ವೈ ಅರುಣಾದೇವಿ. ನಿರ್ದೇಶಕರು ಜನಶಿಕ್ಷಣ ಸಂಸ್ಥಾನ ಶಿವಮೊಗ್ಗ ಇವರು ನೆರವೇರಿಸಿ, ಧರ್ಮಸ್ಥಳ ಸಂಸ್ಥೆಯ ಹಲವಾರು ಮಹಿಳಾ ಪರ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆಯನ್ನು ತಿಳಿಸಿದರು.
ಶ್ರೀಯುತ ಸುರೇಶ್ ಬಾಳೆಗುಂಡಿ ಉದ್ಯಮಿ ಶಿವಮೊಗ್ಗ, ಇವರು ಮಾತನಾಡಿ ಪೂಜ್ಯರ ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಆದರ್ಶ ದಾಯಕವಾಗಿದೆ. ಪೂಜ್ಯರ ಮಾರ್ಗದರ್ಶನದಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ ತಲುಪುತ್ತಿವೆ. ಎಂದು ಮಾತನಾಡಿದರು.
ಕಾರ್ಯಕ್ರಮದಲ್ಲಿ ಭಾರತೀಯ ನಾರಿ ಬದುಕಿಗೆ ದಾರಿ ಎಂಬ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಿದ್ದು ಶ್ರೀಮತಿ ಜೆ.ಸಿ ಸವಿತ ರಮೇಶ್, ನ್ಯಾಯವಾದಿಗಳು ಜೆ.ಸಿ.ಐ ಭಾರತದ ರಾಷ್ಟ್ರೀಯ ಸಂಯೋಜಕರು ಹಾಗೂ ವ್ಯಕ್ತಿತ್ವ ವಿಕಸನದ ತರಬೇತುದಾರರು ಹೊಸಪೇಟೆ, ವಿಜಯನಗರ ಜಿಲ್ಲೆ ಇವರು ನಡೆಸಿ, ಸಮಾಜದಲ್ಲಿ ಮಹಿಳೆಯರ ಸವಾಲುಗಳು, ಸ್ವಾವಲಂಬಿ ಬದುಕಿನ ಬಗ್ಗೆ ಪ್ರಶ್ನಾವಳಿಗಳ ಮೂಲಕ ಮಾಹಿತಿ ನೀಡಿದರು.
ಶಿವಮೊಗ್ಗ ತಾಲೂಕಿನ ಸಾಧಕ ಮಹಿಳೆಯರಿಗೆ ಸನ್ಮಾನ ಮಾಡಲಾಯಿತು. ಸದ್ರಿ ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಕೇಂದ್ರದ 650 ಮಹಿಳಾ ಸದಸ್ಯರು ಪಾಲ್ಗೊಂಡಿದ್ದರು.
SKDRDP ಕಾರ್ಯಕ್ರಮದ ವೈಶಿಷ್ಟತೆ : ಜ್ಞಾನವಿಕಾಸ ಸದಸ್ಯರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಆಶು ಅಭಿನಯ ಸ್ಪರ್ಧೆ, ಆಕರ್ಷಕ ವಸ್ತು ಮಳಿಗೆ ಸ್ಪರ್ಧೆ, ಕಿರುಪ್ರಹಸನ, ನೃತ್ಯ ಸ್ಪರ್ಧೆ, ಕಣ್ಣಿಗೆ ಬಟ್ಟೆ ಕಟ್ಟಿ ಮಹಿಳೆಗೆ ಶೃಂಗಾರ ಸ್ಪರ್ಧೆಗಳನ್ನು ಹಾಗೂ ಪುಷ್ಪಗುಚ್ಚ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ಡಾ. ಪಲ್ಲವಿ ಅದ್ವೈತಾ ಆಯರ್ವೇದ ಚಿಕಿತ್ಸಾಲಯ, ವಿನೋಬ ನಗರ ಶಿವಮೊಗ್ಗ, ಶ್ರೀಮತಿ ಪುಷ್ಪಾಶೆಟ್ಟಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸದಸ್ಯರು ಶಿವಮೊಗ್ಗ, ಶ್ರೀಯುತ ಪುರಂದರ ಪೂಜಾರಿ ಯೋಜನಾಧಿಕಾರಿ ಶಿವಮೊಗ್ಗ ತಾಲೂಕು, ಶ್ರೀಮತಿ ರತ್ನ ಜ್ಞಾನವಿಕಾಸ ಯೋಜನಾಧಿಕಾರಿ ಪ್ರಾದೇಶಿಕ ಕಚೇರಿ ಚಿತ್ರದುರ್ಗ, ಶ್ರೀಮತಿ ಚೇತನಾ ಗೌಡ ಜ್ಞಾನವಿಕಾಸ ಸಮನ್ವಯಾಧಿಕಾರಿ ಶಿವಮೊಗ್ಗ ತಾಲೂಕು, ಶಿವಮೊಗ್ಗ ತಾಲೂಕಿನ ಮೇಲ್ವಿಚಾರಕರು ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

Shimoga Fisheries Department ಮತ್ಸ್ಯಸಂಪದ ಯೋಜನೆಯಡಿ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನ

0

Shimoga Fisheries Department ಶಿವಮೊಗ್ಗ ಜಿಲ್ಲಾ ಮೀನುಗಾರಿಕೆ ಇಲಾಖೆಯು 2025-26 ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿಯಲ್ಲಿ ಮೀನು ಕೃಷಿ ಕೊಳಗಳ ನಿರ್ಮಾಣ, ಮೀನುಕೃಷಿ ಕೊಳ ನಿರ್ಮಾಣ ಮಾಡಿ ಮೀನುಕೃಷಿ ಕೈಗೊಂಡವರಿಗೆ ಹೂಡಿಕೆಗಳ ವೆಚ್ಚದ ಮೇಲೆ ಸಹಾಯಧನ, ಮೀನುಮರಿ ಪಾಲನಾ ಘಟಕ ನಿರ್ಮಾಣದ ಬಗ್ಗೆ ಸಹಾಯಧನ ಹಾಗೂ ಸೈಕಲ್ ವಿತ್ ಐಸ್ ಬಾಕ್ಸ್ ಪಡೆಯಲು ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 40 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ. 60 ರಷ್ಟು ಸಹಾಯಧನ ನೀಡಲಾಗುವುದು.
Shimoga Fisheries Department ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಆಯಾ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿ.06 ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.