Thursday, May 14, 2026
Thursday, May 14, 2026
Home Blog Page 76

ಸರ್ಕಾರದ ಸೌಲಭ್ಯ ಪಡೆಯುವುದು ಪ್ರತಿಯೊಬ್ಬ ವಿದ್ಯಾರ್ಥಿಯಹಕ್ಕು- ಸಿ,ಎಸ್.ಚಂದ್ರಭೂಪಾಲ್

0

ಸರ್ಕಾರದ ಸೌಲಭ್ಯ ಪಡೆದುಕೊಳ್ಳುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಹಕ್ಕು ಮತ್ತು ಕರ್ತವ್ಯವಾಗಿದೆ, ಸರ್ಕಾರ ನೀಡಿರುವ ಯುವನಿಧಿ ಯೋಜನೆಯಂತಹ ಸೌಲಭ್ಯ ಸವಲತ್ತು ಪಡೆದುಕೊಂಡು ಸದ್ಬಳಕೆಮಾಡಿಕೊಳ್ಳಿ ಎಂದು ಜಿಲ್ಲಾ ಗ್ಯಾರಂಟಿ ಯೊಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ. ಎಸ್. ಚಂದ್ರಭೂಪಾಲ್ ಹೇಳಿದರು.

ಅವರು ಕೈಗಾರಿಕಾ ತರಬೇತಿ ಇಲಾಖೆ ಮತ್ತು ಉದ್ಯೋಗ ಇಲಾಖೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಹ್ಯಾದ್ರಿ ಪ್ರಥಮ ದರ್ಜೆ ವಿಜ್ಞಾನ ಕಾಲೇಜು ಮತ್ತು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಸಹ್ಯಾದ್ರಿ ಪ್ರಥಮ ದರ್ಜೆ ವಿಜ್ಞಾನ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಯುವನಿಧಿ ಯೋಜನೆಯ ಪ್ರಚಾರ ಕಾರ್ಯಕ್ರಮ ಉದ್ಘಾಟಿಸಿ ಪೊಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು.

ಇಚ್ಚಾಶಕ್ತಿಯಿಂದ ವಿದ್ಯಾರ್ಥಿಗಳು ವಿದ್ಯ್ಯಾಭ್ಯಾಸ ಮತ್ತು ಉದ್ಯೋಗದ ಮೇಲೆ ಗಮನಹರಿಸಿ ಯೋಜನೆ ಸದುಪಯೋಗ ಪಡೆದುಕೊಂಡು ಪೋಷಕರ ಆಸೆಗಳನ್ನು ಇಡೇರಿಸಬೇಕು. ಕೌಶಲ್ಯಾಭಿವೃದ್ಧಿ ತರಬೇತಿ ಪಡೆಯುವಾಗ ವಿದ್ಯಾರ್ಥಿಗಳಿಗೆ ಬರುವ ಯುವನಿಧಿ ಹಣಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲವಾದ್ದರಿಂದ ಆತಂಕ ಪಡಬೇಕಾಗದ ಅವಶ್ಯಕತೆ ಇಲ್ಲಾ ಎಂದು ಅವರು ಹೇಳಿದರು.

ಸರ್ಕಾರವು ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಉದ್ಯೋಗ ಹುಡುಕಲು ಸಹಕಾರಿಯಾಗಲಿ ಎಂಬ ಉದ್ದೇಶದಿಂದ 2 ವರ್ಷ ಅವಧಿವರೆಗೆ ಯುವನಿಧಿ ಯೋಜನೆಯಡಿ ಎಲ್ಲಾ ವಿದ್ಯಾರ್ಥಿಗಳು ಪದವಿ ಮುಗಿದ ತಕ್ಷಣ ಗ್ರಾಮ್ ಒನ್, ಕರ್ನಾಟಕ ಒನ್, ಮೂಲಕ ಅರ್ಜಿ ಸಲ್ಲಿಸಿದ 6 ತಿಂಗಳ ನಂತರ ಪ್ರತಿ ತಿಂಗಳು ರೂ. 3000 ಹಣವನ್ನು ಯಾವುದೇ ಮಧ್ಯವರ್ತಿ ಇಲ್ಲದೇ ಖಾತೆಗೆ ನೇರವಾಗಿ ವರ್ಗಾವಣೆಯಾಗುತ್ತದೆ ಎಂದರು.

ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಧು ಹೆಚ್‌ಎಂ ಮಾತನಾಡಿ, ಪದವಿ ಮುಗಿಸಿ ಉದ್ಯೋಗ ಪಡೆಯುವಂತ ಯುವಕರಿಗೆ ಸರ್ಕಾರ ನೀಡುವ ಯುವನಿಧಿಯಿಂದ ಬರುವಂತ ರೂ.3000 ಸಹಾಯಧನ ಅತ್ಯಮೂಲ್ಯವಾಗಲಿದೆ ಹಾಗೂ ಸರ್ಕಾರ ನೀಡಿರುವ ಈ ಯೋಜನೆಗಳ ಸದುಪಯೋಗ ಪಡೆದು ಉನ್ನತ ವಿದ್ಯಾಭ್ಯಾಸಕ್ಕೆ ಒತ್ತು ನೀಡಿ. ಪದವಿ ಮುಗಿಸಿದ ನಂತರ ಉದ್ಯೋಗ ಪಡೆಯುವ ತನಕ ಜೀವನಕ್ಕೆ ಯುವನಿಧಿ ಸಹಾಯಕವಾಗಿದೆ ಎಂದರು.

ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸುರೇಶ ಮಾತನಾಡಿ ವಿದ್ಯಾರ್ಥಿಗಳು ತಮ್ಮದೇ ಆದಂತ ಕೌಶಲ್ಯ ಬೆಳೆಸಿಕೊಂಡು ಉದ್ಯೋಗವನ್ನು ಪಡೆದುಕೊಳ್ಳಿ, ಕೌಶಲ್ಯಾಭಿವೃದ್ದಿಯಲ್ಲಿ ಯುವನಿಧಿಯ ಎಲ್ಲಾ ಫಲಾನುಭವಿಗಳಿಗೆ ಉಚಿತ ತರಬೇತಿ ನೀಡಲಾಗುತ್ತಿದ್ದು, ಅದರ ಸದ್ಬಳಕೆ ಪಡೆದುಕೊಳ್ಳಿ. ಕೌಶಲ್ಯವು ವಿದ್ಯಾರ್ಥಿಗಳಿಗೆ ಉದ್ಯೋಗ ಪಡೆಯಲು ಮುಖ್ಯವಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ವೆಬ್ ಡಿಸೈನಿಂಗ್, ಡಾಟಾ ಎಂಟ್ರಿ ಇವುಗಳಿಗೆ ತುಂಬಾ ಬೇಡಿಕೆಯಿದೆ. ಆದ್ದರಿಂದ ವಿದ್ಯಾರ್ಥಿಗಳು ಕಂಪ್ಯೂಟರ್ ಜ್ಞಾನ ಬೆಳೆಸಿಕೊಳ್ಳಿ ಎಂದರು.

ಉದ್ಯೋಗ ಇಲಾಖೆಯ ಉದ್ಯೋಗ ಅಧಿಕಾರಿಗಳಾದ ಮಂಜುನಾಥ ಮಾತನಾಡಿ, ಯುವನಿಧಿಯಡಿಯಲ್ಲಿ ಒಟ್ಟು 57258 ಫಲಾನುಭವಿಗಳಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ 11569 ಅಭ್ಯರ್ಥಿ ಯುವನಿಧಿ ಹಣ ನೊಂದಾಯಿಸಿಕೊAಡಿದ್ದಾರೆ. ಒಟ್ಟು ರೂ.29,04,20,100/- ಹಣ ಶಿವಮೊಗ್ಗ ಜಿಲ್ಲೆಯ ಯುವನಿಧಿ ಫಲಾನುಭವಿಗಳಿಗೆ ನೇರವಾಗಿ ವರ್ಗಾವಣೆಯಾಗಿದೆ ಎಂದರು. ಪದವಿಧರರಿಗೆ ರೂ, 3000 ಡಿಪ್ಲೋಮಾ ವಿದ್ಯಾರ್ಥಿಗಳಿಗೆ ರೂ.1500 ಯುವನಿಧಿಯಡಿ ಸಹಾಯಧನ ನೀಡಲಾಗುತ್ತದೆ, ಪದವಿ ವಿದ್ಯಾರ್ಥಿಗಳು ತಮ್ಮ ಫಲಿತಾಂಶ ಬಂದು ಅರ್ಜಿ ಸಲ್ಲಿಸಿದ 180 ದಿನಗಳೊಳಗೆ ಯುವನಿಧಿ ಹಣ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸುವಾಗ ಸಮಸ್ಯೆ ಕಂಡು ಬಂದಾಗ ಜಿಲ್ಲಾ ಗ್ಯಾರಂಟಿ ಅಡಿಯಲ್ಲಿ ದೂರನ್ನು ನೀಡಬಹುದು ಎಂದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಸದಸ್ಯರಾದ ಜಯಪ್ಪ, ಜಿಲ್ಲಾ ಕೌಶಲ್ಯಭಿವೃದ್ದಿ ಅಧಿಕಾರಿ ಸುರೇಶ, ಉದ್ಯೋಗ ಇಲಾಖೆಯ ಉದ್ಯೋಗ ಅಧಿಕಾರಿಗಳಾದ ಮಂಜುನಾಥ, ಸಹ್ಯಾದ್ರಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ರಾಜೇಶ್ವರಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮಾರ್ಚ್ 3. ಜಿಲ್ಲಾಡಳಿತದಿಂದ ಶ್ರೀಯೋಗಿ ನಾರೇಯಣ ಯತೀಂದ್ರ ಜಯಂತಿ ಆಯೋಜನೆ

0

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಹಾಗೂ ಜಿಲ್ಲಾ ಬಲಿಜ ಸೇವಾ ಸಂಘ ಇವರುಗಳ ಸಂಯಕ್ತಾಶ್ರಯದಲ್ಲಿ ಮಾ.03 ರ ಬೆಳಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ ಏರ್ಪಡಿಸಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ ಬಲಿಜ ಸೇವಾ ಸಂಘದ ಅಧ್ಯಕ್ಷರು/ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಶಿವಮೊಗ್ಗದ ಸಹ್ಯಾದ್ರಿ ವಿಜ್ಞಾನ ಕಾಲೇಜು ಪ್ರಾಧ್ಯಾಪಕರಾದ ಡಾ. ಛಾಯಾ ಕುಮಾರಿ ಈ. ಇವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ.

ಮಾರ್ಚ್ 3. ಬೆಕ್ಕಿನಕಲ್ಮಠದ ಸಮಾರಂಭದಲ್ಲಿ ‌’ ನೆಲ- ಮುಗಿಲು’ಕವನ ಸಂಕಲನ ಬಿಡುಗಡೆ

0

ಮಸರೂರು ದಿ.ರೇಣುಕಪ್ಪ ಗೌಡ ಪ್ರತಿಷ್ಠಾನ ಪ್ರಕಟಿಸಿರುವ ಹಾರನಹಳ್ಳಿ ಕರಿಬಸವಯ್ಯ ಅವರು ಬರೆದಿರುವ ನೆಲ-ಮುಗಿಲ ಮೌನ ಕವನ ಸಂಕಲನವನ್ನು ಮಾರ್ಚ್ 03 ರಂದು ಸಂಜೆ 6:30ಕ್ಕೆ ಶಿವಮೊಗ್ಗ ಶ್ರೀ ಬೆಕ್ಕಿನಕಲ್ಮಠದಲ್ಲಿ ನಡೆಯುವ 1158 ನೇ ಶಿವಾನುಭವ ಗೋಷ್ಠಿಯಲ್ಲಿ ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರು ಬಿಡುಗಡೆ ಮಾಡಲಿದ್ದಾರೆ.

ಪುಸ್ತಕ ಕುರಿತು ಜಾವಳ್ಳಿ ಜ್ಞಾನದೀಪ ಶಾಲೆಯ ಅಧ್ಯಾಪಕ ತುರುವನೂರು ಮಲ್ಲಿಕಾರ್ಜನ ಅವರು ಮಾತನಾಡಲಿದ್ದಾರೆ. ಈ ಸಂದರ್ಭದಲ್ಲಿ ಸುವರ್ಣ ದಾಂಪತ್ಯ ಜೀವನ ಪೂರೈಸಿದ ಪ್ರೊ.ಸಿ.ಯು.ಸೋಮಶೇಖರ್ ದಂಪತಿಯನ್ನು ಸನ್ಮಾನಿಸಲಾಗುತ್ತದೆ. ನಿವೃತ್ತ ಉಪನ್ಯಾಸಕ ಡಾ.ಎಂ .ರಾಜಶೇಖರಯ್ಯ, ಮಸರೂರು ದಿ.ರೇಣುಕಪ್ಪ ಪ್ರತಿ಼ಷ್ಠಾನದ ಕಾರ್ಯದರ್ಶಿ ಡಾ.ಗಣೇಶ್ ಕೆಂಚನಾಲ ಉಪಸ್ಥಿತರಿರುತ್ತಾರೆ. ಕಲಾವಿದರಾದ ನಾಗರತ್ನಮ್ಮ ಚಂದ್ರಶೇಖರಯ್ಯ ,ಸುಮಾಹೆಗಡೆ ಕಾವ್ಯ ಗಾಯನ ನಡೆಸಿಕೊಡಲಿದ್ದಾರೆ. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.

Rotary Club Shimoga ರೋಟರಿ ಕ್ಲಬ್ ವತಿಯಿಂದ ಸ್ವಯಂಚಾಲಿತ ರಕ್ತಸಂಗ್ರಹ ಯಂತ್ರದ ಉದ್ಘಾಟನೆ

0

Rotary Club Shimoga ರೋಟರಿ ಕ್ಲಬ್ ಶಿವಮೊಗ್ಗ ಉತ್ತರ ವತಿಯಿಂದ ರೆಡ್‌ ಕ್ರಾಸ್ ಸಂಜೀವಿನಿ ರಕ್ತ ಕೇಂದ್ರಕ್ಕೆ ರೋಟರಿ ಗ್ಲೋಬಲ್ ಗ್ರಾಂಟ್ ಮೂಲಕ ಸ್ವಯಂಚಾಲಿತ ರಕ್ತ ಸಂಗ್ರಹ ಯಂತ್ರವನ್ನು ಕೊಡುಗೆಯಾಗಿ ನೀಡಿದ್ದು, ಇದರ ಉದ್ಘಾಟನಾ ಸಮಾರಂಭ ಮಾ.1ರಂದು ಬೆಳಗ್ಗೆ 11 ಗಂಟೆಗೆ ಶಿವಮೊಗ್ಗದ ಜೆಎನ್‌ಎನ್‌ಸಿಇ ಎಂಬಿಎ ಸಭಾಂಗಣದಲ್ಲಿ ನಡೆಯಲಿದೆ ಎಂದು ರೋಟರಿ ಮಾಜಿ ಜಿಲ್ಲಾ ಗವರ್ನರ್ ಪ್ರೊ.ಎ.ಎಸ್. ಚಂದ್ರಶೇಖರ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಯಂತ್ರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ರೋಟರಿ ನಿರ್ದೇಶಕ ಕೆ.ಪಿ. ನಾಗೇಶ್, ಜಿಲ್ಲಾ ಗವರ್ನರ್ ಪಾಲಾಕ್ಷ, ಜಿಲ್ಲಾ ಚೇರ್ಮನ್ ಡಿ.ಎಸ್. ರವಿ, ಪ್ರೊ. ಎ.ಎಸ್. ಚಂದ್ರಶೇಖರ್, ಕೆ.ಪಿ. ಶೆಟ್ಟಿ, ಎಸ್.ಪಿ. ದಿನೇಶ್, ಎ.ಎನ್. ಶಾಂತರಾಜಪ್ಪ, ಆ‌ರ್. ಬಸವರಾಜಪ್ಪ ಭಾಗವಹಿಸಲಿದ್ದಾರೆ ಎಂದರು.

ಕೊಡುಗೆಯಾಗಿ ನೀಡಿದ ರಕ್ತ ಸಂಗ್ರಹಣಾ ಹಾಗೂ ವಿಂಗಡಣಾ ಯಂತ್ರ ಮತ್ತು ದಾನಿಗಳ ಮಂಚದ ಬೆಲೆ 42.90 ಲಕ್ಷ ರೂ. ಆಗಿದ್ದು, ಈ ಹಣವನ್ನು ಸಂಪೂರ್ಣವಾಗಿ ಅಮೆರಿಕದ ಮೋಡೆಸ್ಟ್ ರೋಟರಿ ಕ್ಲಬ್ ಅಮೆರಿಕದ ರೋಟರಿ ಜಿಲ್ಲೆ 5220 ಹಾಗೂ ರೋಟರಿ ಪ್ರತಿಷ್ಠಾನ ನೀಡಿದೆ ಎಂದರು.

ಈ ಯಂತ್ರದಿಂದ ಹಲವು ಪ್ರಯೋಜನಗಳಿದ್ದು, ಒಂದು ರಕ್ತ ಸಂಗ್ರಹಣವನ್ನು ವಿವಿಧ ಬಗೆಯಲ್ಲಿ ಸಂಗ್ರಹಿಸಬಹುದಾಗಿದೆ. ಪ್ಲೇಟೆಟ್ ಮತ್ತು ಪ್ಲಾಸ್ಮಾ ಲಭ್ಯತೆಯಲ್ಲಿ ಹೆಚ್ಚಳವಾಗಲಿದೆ. ಕ್ಯಾನ್ಸರ್, ಅಪಘಾತ ಗಳು ಹಾಗೂ ಡೆಂಗ್ಯೂ ಚಿಕಿತ್ಸೆಗಳಲ್ಲಿ ಅಗತ್ಯವಿರುವ ಪ್ಲೇಟೆಟ್ ಹಾಗೂ ಪ್ಲಾಸ್ಮಾಗಳನ್ನು ನಿರಂತರವಾಗಿ ಇದು ಒದಗಿಸುತ್ತದೆ. ಸೋಂಕು ಗಳು ಹಾಗೂ ಪ್ರತಿರೋಧಕ ಪ್ರತಿಕ್ರಿಯೆಗಳ ಅಪಾಯ ಕಡಿಮೆ ಇರುತ್ತದೆ. ಅಗತ್ಯ ಇರುವ ರಕ್ತ ಘಟಕಗಳನ್ನು ಮಾತ್ರ ಸಂಗ್ರಹಿಸಲಾಗು ತದೆ. ಸಮಯ ಹಾಗೂ ಸಂಪನ್ಮೂಲ ಉಳಿತಾಯವಾಗುತ್ತದೆ. ಉನ್ನತ ಮಟ್ಟದ ವೈದ್ಯಕೀಯ ಚಿಕಿತ್ಸೆಗೆ ಬೆಂಬಲವಾಗುತ್ತದೆ. ಹೆಚ್ಚು ಶುದ್ಧ ಹಾಗೂ ಪರಿಣಾಮಕಾರಿ ಪ್ಲಾಸ್ಮಾ ಲಭಿಸುತ್ತದೆ. ಹಾಗಾಗಿ ಈ ಯಂತ್ರವು ಬಹು ಉಪಯೋಗಿ ಯಂತ್ರವಾಗಿದೆ ಎಂದರು.

Rotary Club Shimoga ಇದಲ್ಲದೇ ರೋಟರಿ ಉತ್ತರ ಕ್ಲಬ್ ಹಲವು ಸಾಮಾಜಿಕ ಕಾರ್ಯ ಕ್ರಮಗಳನ್ನು ನಡೆಸುತ್ತಾ ಬಂದಿದೆ. ಶಾಲೆಗಳಲ್ಲಿ ಪೀಠೋಪಕರಣಗಳು, ಶುದ್ಧ ಕುಡಿಯುವ ನೀರಿನ ಘಟಕ, ಕಂಪ್ಯೂಟರ್, ಪ್ರಾಜೆಕ್ಟ್ ಮುಂತಾದವುಗಳನ್ನು ನೀಡಲು ಸುಮಾರು 25 ಶಾಲೆಗಳಿಗೆ 26.50 ಲಕ್ಷ ರೂ. ವೆಚ್ಚ ಮಾಡಲಾಗಿದೆ. ಸುಮಾರು 5 ಸಾವಿರ ಮಕ್ಕಳು ಇದರಿಂದ ಪ್ರಯೋಜನ ಪಡೆಯಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಭಾರತಿ ಚಂದ್ರಶೇಖರ್, ಶ್ರೀನಾಥ್ ಗಿರಿಮಾಜಿ, ಕೆ.ಪಿ. ಶೆಟ್ಟಿ, ಶಿವಕುಮಾರ್, ಜಿ. ವಿಜಯ ಕುಮಾರ್, ಜೆ.ಕೆ. ಶ್ರವಣ್, ಶ್ರೀಧರ್, ಎಸ್.ಜಿ. ರಮೇಶ್, ಬಸವರಾಜಪ್ಪ, ಮೈತ್ರಿ ಇದ್ದರು.

DVS Institute ಆಧುನಿಕ ಬದುಕಿನ ಶೈಲಿಯು ಯಾಂತ್ರಿಕವಾಗಿದ್ದು, ಮಾನವೀಯ ಸಂಬಂಧಗಳಿಗೆ ಬೆಲೆ ಇಲ್ಲದಂತಾಗಿದೆ:ಆಯನೂರು ಮಂಜುನಾಥ್

0

DVS Institute ಆಧುನಿಕ ಯುಗದಲ್ಲಿ ಕೃತಕ ಬುದ್ಧಿಮತ್ತೆಯೊಂದಿಗೆ ಮನುಷ್ಯ ಕಾಲದೊಂದಿಗೆ ವೇಗವಾಗಿ ಹೆಜ್ಜೆ ಇಡುತ್ತಿದ್ದಾನೆ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಹೇಳಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1, 2 ಮತ್ತು 3ರ ವತಿಯಿಂದ ಕೋಹಳ್ಳಿ ಆಯನೂರಿನಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಆಧುನಿಕ ಬದುಕಿನ ಶೈಲಿಯು ಯಾಂತ್ರಿಕವಾಗಿದ್ದು, ಮಾನವೀಯ ಸಂಬಂಧಗಳಿಗೆ ಬೆಲೆ ಇಲ್ಲದಂತಾಗಿದೆ ಎಂದು ತಿಳಿಸಿದರು.
ಡಿವಿಎಸ್ ಸಂಸ್ಥೆ ಕಾರ್ಯದರ್ಶಿ ಎಸ್.ಪಿ.ದಿನೇಶ್ ಮಾತನಾಡಿ, ವಿದ್ಯಾರ್ಥಿಗಳು ಗ್ರಾಮೀಣ ಜೀವನದ ಉತ್ತಮ ಜೀವನ ಶೈಲಿಯನ್ನು ರೂಢಿಸಿಕೊಳ್ಳಲು ಶಿಬಿರಗಳು ಉಪಯುಕ್ತವಾಗಿವೆ. ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಜೀವನ ಕೌಶಲ್ಯಗಳನ್ನು ಪಡೆದುಕೊಳ್ಳಲು ಒಂದು ಉತ್ತಮ ವೇದಿಕೆಯಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಿವಿಎಸ್ ಸಂಸ್ಥೆಯ ಅಧ್ಯಕ್ಷ ಕೆ.ಬಸಪ್ಪಗೌಡ ಮಾತನಾಡಿ, ಭಾರತ ದೇಶವು ಬಹು ಸಂಸ್ಕೃತಿಯ ನಾಡಾಗಿದೆ. ಇಲ್ಲಿ ಅನೇಕ ವೈಶಿಷ್ಟಗಳಿವೆ. ಗಾಂಧೀಜಿ ಅವರ ಕನಸಾದ ಗ್ರಾಮ ಸ್ವರಾಜ್ಯದ ಕನಸನ್ನು ನನಸಾಗಿಸಬೇಕಿದೆ, ಅದಕ್ಕಾಗಿ ಎನ್‌ಎಸ್‌ಎಸ್ ಉದ್ದೇಶಗಳು ದೇಶವನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
DVS Institute ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಮಂಜುನಾಥ ಶೆಟ್ಟಿ ಅವರು ಕೋಹಳ್ಳಿ ದೇವಸ್ಥಾನದ ಇತಿಹಾಸ ಮತ್ತು ಮಹತ್ವವನ್ನು ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಕೇಶವನ್ ನಾಯರ್ ಎನ್.ವಿ., ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಪ್ರಾಸ್ತಾವಿಕ ಭಾಷಣ ಮಾಡಿದರು.
ಐಕ್ಯೂಎಸಿ ಸಂಚಾಲಕ ಪ್ರೊ. ಎನ್.ಕುಮಾರಸ್ವಾಮಿ, ಕಾರ್ಯಕ್ರಮಾಧಿಕಾರಿ ಡಾ. ಡಿ.ಬಿ.ಶಿವರುದ್ರಪ್ಪ, ಅರ್ಪಿತಾ ಪಿ, ಡಾ. ಶಿವಶಂಕರ್ ಎಂ.ಕಿನ್ನಾಳ್, ಅಧ್ಯಾಪಕರಾದ ಕೇತನಾ ಆರ್ತಿ, ಡಾ. ದುರ್ಗಪ್ಪ ಮುಂಡಗಿ, ಡಾ. ಮಂಜುನಾಥ್, ಡಾ. ಶ್ರೀನಿವಾಸ್ ಲಮಾಣಿ, ಸಚಿನ್ ಕೆ ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

ರಾಜ್ಯದಲ್ಲಿ ಮಾನ್ಯತೆ ಪಡೆದ ಪತ್ರಕರ್ತರಿಗೆ ರೈಲ್ವೆ ರಿಯಾಯಿತಿ ಇತ್ಯಾದಿ‌ ಬೇಡಿಕೆಗಳ ಬಗ್ಗೆ ಇಲಾಖೆಯೊಂದಿಗೆ ಚರ್ಚೆ- ಸಚಿವ ಎಲ್.ಮುರುಗನ್

0

ರಾಜ್ಯದಲ್ಲಿ ಮಾನ್ಯತೆ ಪಡೆದ ಪತ್ರಕರ್ತರಿಗೆ ರೈಲ್ವೆ ರಿಯಾಯಿತಿ, ಆನ್‌ಲೈನ್ ಬುಕಿಂಗ್ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆ ಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ರಾಜ್ಯ ಸಚಿವ ಡಾ. ಮುರುಗನ್ ಭರವಸೆ ನೀಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ವಾರ್ತಾ ಸಚಿವರಾದ ಅಶ್ವಿನ್ ವೈಷ್ಣವ್, ರೈಲ್ವೆ ಸಚಿವರು ಸೇರಿದಂತೆ ಸಂಬಂದಿಸಿದ ಸಚಿವರನ್ನು ಭೇಟಿ ಮಾಡಿ ಬೇಡಿಕೆಗಳ ಕುರಿತಾಗಿ ಗಮನ ಸೆಳೆಯಲಾಗುವುದು ಎಂದರು.
ನೂತನ ಜಾಹೀರಾತು ನೀತಿ ಗೊಂದಲಗಳನ್ನು ನಿವಾರಿಸುವ ನಿಟ್ಟಿನಲಿ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದ ಅವರು, ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರ ಹಿತ ಕಾಯಲು ಬದ್ಧ ಎಂದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿವರ ಕೇಳಿ ಪಡೆದ ಅವರು, ಪತ್ರಕರ್ತರ ಹಿತ ಕಾಯುವಲ್ಲಿ ಸಂಘವು ನಡೆಸುತ್ತಿರುವ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಸದ ಬಿ. ವೈ. ರಾಘವೇಂದ್ರ, ಶಾಸಕ ಎಸ್. ಎನ್. ಚನ್ನಬಸಪ್ಪರವರು, ಪತ್ರಕರ್ತರ ಬೇಡಿಕೆಗಳ ಕುರಿತಾಗಿ ಸಚಿವರಲ್ಲಿ ಸಹಾನುಭೂತಿಯಿಂದ ಮಾತನಾಡಿದರು.
ಸಚಿವರ ಜೊತೆಗೆ ಸಂಸದ ಬಿ. ವೈ. ರಾಘವೇಂದ್ರರವರಿಗೂ ಮನವಿ ಅರ್ಪಿಸಲಾಯಿತು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ವೈದ್ಯನಾಥ್ ಅವರ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗದಲ್ಲಿ ಪ್ರಧಾನ ಕಾರ್ಯದರ್ಶಿ ಹಾಲಸ್ವಾಮಿ, ಕಾರ್ಯದರ್ಶಿ ಸೋಮನಾಥ್, ದೀಪಕ್ ಸಾಗರ್, ಸತ್ಯನಾರಾಯಣಪ್ಪ, ನಾಗರಾಜ ಶಣೈ, ಅತೀಕ್ ಉಲ್ಲಾ ಖಾನ್, ಶಿವಮೊಗ್ಗ ಯೋಗರಾಜ್, ಸ್ಪಂದನ ಚಂದ್ರು, ಶಿವಮೊಗ್ಗ ನಾಗರಾಜ್, ಎಸ್. ಕೆ. ದಿನೇಶ್, ರಾಘು, ಮಂಜುನಾಥ್ ಸೇರಿದಂತೆ ಪತ್ರಕರ್ತರು, ಪತ್ರಿಕಾ ಛಾಯಾಗ್ರಾಹಕರು, ವಿದ್ಯುನ್ಮಾನ ಮಾಧ್ಯಮ ಮಾಧ್ಯಮ ಮಿತ್ರರು ಉಪಸ್ಥಿತರಿದ್ದರು.

ಮಾರ್ಚ್ 1. ಕುವೆಂಪು ರಂಗಮಂದಿರದಲ್ಲಿ ಶ್ರೀರೇಣುಕಾಚಾರ್ಯ ಜಯಂತಿ

0

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಹಾಗೂ ಜಿಲ್ಲಾ ಜಂಗಮ ಹಾಗೂ ಬೇಡ ಜಂಗಮ ಸಮಾಜ ಇವರುಗಳ ಸಂಯಕ್ತಾಶ್ರಯದಲ್ಲಿ ಮಾ.01 ರ ಬೆಳಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗಮAದಿರದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ- ಯುಗಮಾನೋತ್ಸವವನ್ನು ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ ಮತ್ತು ತಾಲೂಕು ಜಂಗಮ ಸಮಾಜಗಳ ಹಾಗೂ ಬೇಡ ಜಂಗಮ ಸಮಾಜಗಳ ಅಧ್ಯಕ್ಷರುಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಶಿವಮೊಗ್ಗದ ಜ್ಞಾನದೀಪ ಶಾಲೆಯ ಕನ್ನಡ ಉಪನ್ಯಾಸಕ ತುರುವನೂರು ಮಲ್ಲಿಕಾರ್ಜುನ ಎಂ.ವಿ. ಇವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ.

ಕುರಿ/ ಮೇಕೆ ಘಟಕಕ್ಕೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

0

ಶಿವಮೊಗ್ಗ ಜಿಲ್ಲೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕುರಿ/ಮೇಕೆ ಘಟಕ ಸ್ಥಾಪಿಸಲು ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿದಾರರು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿರುವ 18 ರಿಂದ 60 ವರ್ಷದೊಳಗಿನವರಾಗಿದ್ದು, ಜಾತಿ ಪ್ರಮಾಣ ಹೊಂದಿರಬೇಕು ಮತ್ತು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡಿರಬೇಕು. ಮಹಿಳೆಯರಿಗೆ ಶೇ. 33.3 ರಷ್ಟು ಮತ್ತು ವಿಶೇಷಚೇತನರಿಗೆ ಶೆ. 3 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲೆಯ ಎಲ್ಲಾ ತಾಲೂಕು ಪಶು ಆಸ್ಪತ್ರೆ ಅಥವಾ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಮಾ. 10 ರೊಳಗಾಗಿ ಜಿಲ್ಲಾ ಅನುಷ್ಠಾನಾಧಿಕಾರಗಳ ಕಚೇರಿಗೆ ಸಲ್ಲಿಸುವಂತೆ ನಿಗಮದ ಸಹಾಯಕ ನಿರ್ದೇಶಕರು ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿ/ ಪಶುವೈದ್ಯ ಸೇವಾ ಸಂಸ್ಥೆಗಳ ಕಚೇರಿಯನ್ನು ಸಂಪರ್ಕಿಸುವುದು.

Akashavani Bhadravati ಆಕಾಶವಾಣಿ ಭದ್ರಾವತಿ ಈಗ ಎಫ್.ಎಮ್. ತರಂಗಾಂತರದಲ್ಲಿ ಎಂಟು ಜಿಲ್ಲೆಗಳ ಪ್ರಸಾರ ಸಾಮರ್ಥ್ಯ ಹೆಚ್ಚಿಸಿಕೊಂಡಿದೆ: ಕೇಂದ್ರ ಸಚಿವ ಎಲ್.ಮುರುಗನ್

0

Akashavani Bhadravati ರೇಡಿಯೋ ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ಸಂವಹನ ಮಾಧ್ಯಮವಾಗಿದ್ದು ನೂತನವಾಗಿ ಭದ್ರಾವತಿ ಆಕಾಶವಾಣಿಗೆ ಎಫ್.ಎಂ ಅಳವಡಿಸುವ ಮೂಲಕ ಕಡೆಯ ವ್ಯಕ್ತಿಯನ್ನು ತಲುಪುವ ದೃಢ ಹೆಜ್ಜೆಯನ್ನು ಇಡಲಾಗಿದೆ ಎಂದು ಕೇಂದ್ರದ ಮಾಹಿತಿ ಹಾಗೂ ಪ್ರಸಾರ ಮತ್ತು ಸಂಸದೀಯ ವ್ಯವಹಾರಗಳ ಖಾತೆಯ ರಾಜ್ಯ ಸಚಿವರಾದ ಎಲ್.ಮುರುಗನ್ ತಿಳಿಸಿದರು.
ಶಿವಮೊಗ್ಗದ ವಿದ್ಯಾನಗರದಲ್ಲಿ ಗುರುವಾರ ಭದ್ರಾವತಿ ಆಕಾಶವಾಣಿಗೆ ನೂತನವಾಗಿ ಅಳವಡಿಸಲಾದ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಪ್ರೇಷಕದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.
ಭದ್ರಾವತಿ ಆಕಾಶವಾಣಿಗೆ ಇದೊಂದು ಉಡುಗೊರೆಯಾಗಿದ್ದು, ಜಿಲ್ಲೆಯ ಮೂಲೆ ಮೂಲೆ ಸೇರಿದಂತೆ 8 ಜಿಲ್ಲೆಗಳನ್ನು ತಲುಪಲಿದೆ. ರೇಡಿಯೋ ಒಂದು ಶಕ್ತಿಯುತವಾದ ಸಂವಹನ ಮಾಧ್ಯವಾಗಿದ್ದು ಕೇಂದ್ರ ಸರ್ಕಾರವು ಡಿಜಿಟಲ್ ಮತ್ತು ಸಂವಹನ ಮಾಧ್ಯಮಗಳ ಮೂಲಭೂತ ಸೌಕರ್ಯಗಳ ಅಭಿವೃದ್ದಿ ಮತ್ತು ಗುಣಮಟ್ಟ ವೃದ್ದಿಗಾಗಿ ರೂ.2000 ಕೋಟಿ ಖರ್ಚು ಮಾಡುತ್ತಿದೆ.
ರೇಡಿಯೋ ಆಧುನಿಕ ತಂತ್ರಜ್ಞಾನ ಬಳಕೆ ಮಾಡಿಕೊಂಡು ಅತಿ ಹೆಚ್ಚು ಜನರನ್ನು ತಲುಪುತ್ತಿದ್ದು ಶೇ.92 ಭಾಗವನ್ನು ತಲುಪುತ್ತಿರುವ ಬಹುದೊಡ್ಡ ಪ್ರಸಾರ ಮಾಧ್ಯಮವಾಗಿದೆ. ಕೇಂದ್ರವು ಕಲೆ, ಸಂಸ್ಕೃತಿ, ವಿನ್ಯಾಸ, ಚಲನಚಿತ್ರ, ಸಂಗೀತ, ಸಾಫ್ಟ್ವೇರ್ ಮತ್ತು ಗೇಮಿಂಗ್‌ನAತಹ ಸೃಜನಶೀಲ ಉದ್ಯಮಗಳನ್ನು ಒಳಗೊಂಡಿರುವ ಆರ್ಥಿಕ ವ್ಯವಸ್ಥೆ ‘ಆರೆಂಜ್ ಎಕಾನಮಿಗೆ ಹೆಚ್ಚಿನ ಒತ್ತು ನೀಡುತ್ತಿದೆ. 25 ಸಾವಿರ ಶಾಲೆಗಳಿಗೆ ಕ್ರಿಯೇಟಿವ್ ಲ್ಯಾಬ್‌ನ್ನು ನೀಡುತ್ತಿದೆ ಎಂದರು.
Akashavani Bhadravati ರೇಡಿಯೋ ಒಂದು ಶಕ್ತಿಯುತ ಮತ್ತು ಪರಿಣಾಮಕಾರಿ ಸಂವಹನ ಮಾಧ್ಯಮ ಮಾತ್ರವಲ್ಲದೇ ನೈಜ, ಸತ್ಯ ಮತ್ತು ಸಮರ್ಪಕವಾದ ಸುದ್ದಿ, ವಿಷಯಗಳನ್ನು ನೀಡುವ ಮೂಲಕ ಜನರ ನಂಬಿಕೆ ಉಳಿಸಿಕೊಂಡಿದೆ. ಜೊತೆಗೆ ಸ್ಥಳೀಯ ಕಲಾವಿದರನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಲು ಒಂದು ವೇದಿಕೆ ನಿರ್ಮಾಣ ಮಾಡಿದೆ. ಹೊಸತನಕ್ಕೆ ಸ್ಪೂರ್ತಿಯಾಗಿದೆ.
ರೇಡಿಯೋ 23 ಭಾಷೆಗಳು ಮತ್ತು 182 ಉಪಭಾಷೆಗಳಲ್ಲಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಾ, ಗಡಿನಾಡು, ಗುಡ್ಡಗಾಡು, ಮತ್ತು ದೂರದ ಪ್ರದೇಶಗಳನ್ನು ತಲುಪುತ್ತಿದೆ. ಎಲ್ಲ ವರ್ಗ ಮತ್ತು ವಯೋಮಾನ ಹಾಗೂ ಎಲ್ಲ ಕ್ಷೇತ್ರಗಳಿಗೆ ಸಂಬAಧಿಸಿದ ಕಾರ್ಯಕ್ರಮಗಳು ಬಿತ್ತರವಾಗುತ್ತವೆ. ಆಕಾಶವಾಣಿ ಪಾಡ್‌ಕಾಸ್ಟ್ ಸಹ ಶುರುವಾಗಿದ್ದು ಕಮ್ಯುನಿಟಿ ರೇಡಿಯೋ ಸಹ ಬಹು ದೊಡ್ಡ ಪಾತ್ರ ವಹಿಸುತ್ತಿದೆ. 550 ಕಮ್ಯುನಿಟಿ ರೇಡಿಯೋ ಕೆಲಸ ಮಾಡುತ್ತಿದೆ. ಭದ್ರಾವತಿ ಆಕಾಶವಾಣಿ ಎಫ್ ಎಂ 25ನೇ ಪ್ರೇಷಕವಾಗಿದ್ದು 3500 ಚ ಕಿ.ಮೀ ನ್ನು ಕವರ್ ಮಾಡುತ್ತದೆ ಎಂದರು.
ಸಂಸದರು, ಶಾಸಕರು ಮನವಿ ಮಾಡಿದಂತೆ ನಗರದ ಪಾರ್ಕುಗಳಲ್ಲಿ ಬಾನುಲಿ ಕೇಳುವಂತಹ ವ್ಯವಸ್ಥೆ ಮಾಡಲು ಇಲ್ಲಿ ಪೈಲಟ್ ಯೋಜನೆಯಾಗಿ ಅನುಷ್ಟಾನಗೊಳಿಸಲಾಗುವುದು ಎಂದು ಇದೇ ವೇಳೆ ಭರವಸೆ ನೀಡಿದರು.
ಸಂಸದರಾದ ಬಿ.ವೈ.ರಾಘವೇಂದ್ರ ಮಾತನಾಡಿ, ಎಫ್.ಎಂ ಪ್ರೇಷಕ ಅಳವಡಿಕೆಗೆ 2024 ರ ಜನವರಿಯಲ್ಲಿ ಅಡಿಗಲ್ಲು ಹಾಕಲಾಗಿತ್ತು. ಇದೀಗ ಅದು ಸಾಕಾರಗೊಂಡಿದ್ದು ಆಕಾಶವಾಣಿ ಭದ್ರಾವತಿ ಕೇಂದ್ರ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ 101.4 ತರಂಗಾAತರ ಎಫ್ ಎಂ ಪ್ರೇಷಕದ ಅಳವಡಿಕೆಯಿಂದಾಗಿ ಶಿವಮೊಗ್ಗದ ಸುತ್ತಲಿನ ಎಂಟು ಜಿಲ್ಲೆಗಳಿಗೆ ಪ್ರಸಾರ ವ್ಯಾಪ್ತಿ ಹೆಚ್ಚಿಸಿಕೊಳ್ಳುತ್ತಿದೆ. ಸುಮಾರು 1 ಕೋಟಿ ಜನರಿಗೆ ಈ ಸೇವೆ ಲಭ್ಯವಾಗುತ್ತಿದ್ದು ಭದ್ರಾವತಿ ಆಕಾಶವಾಣಿಯ ವಜ್ರ ಮಹೋತ್ಸವದ ಉಡುಗೊರೆ ಇದಾಗಿದೆ.
ಆಕಾಶವಾಣಿಯು ಆರಂಭಿಕ ಹಂತದಿAದ ಹಂತ ಹಂತವಾಗಿ ಬೆಳೆಯುತ್ತಾ ಬಂದಿದೆ. ಡಿಜಿಟಲ್ ಮತ್ತು ಸಂವಹನ ಕ್ರಾಂತಿಗೆ ಕೇಂದ್ರ ಸರ್ಕಾರ ಒತ್ತು ನೀಡಿದ್ದು, ಸಂಪೂರ್ಣ ಕನ್ನಡಿಗರನ್ನು ತಲುಪುವ ಏಕೈಕ ಕೇಂದ್ರವಾಗಿ ಭದ್ರಾವತಿ ಆಕಾಶವಾಣಿ ಹೊರಹೊಮ್ಮಿದೆ. ವಿದ್ಯಾನಗರದ 150 ಮೀಟರ್ ದೂರದರ್ಶನ ಟವರ್ ನ್ನು ಬಳಕೆ ಮಾಡಿಕೊಂಡು 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ ಪ್ರೇಷಕ ಅಳವಡಿಸಲಾಗಿದೆ ಎಂದರು.
ಇನ್ನು ಮುಂದೆ ನಗರದ ಎಲ್ಲ ಪಾರ್ಕುಗಳಲ್ಲಿ ರೇಡಿಯೋ ಸ್ಟೇಷನ್‌ಗಳನ್ನು ಅಳವಡಿಸಲು ಕೇಂದ್ರ ಸಚಿವರು ಇದೇ ಸಂದರ್ಭದಲ್ಲಿ ಒಪ್ಪಿಗೆ ನೀಡಿರುವುದು ಅಭಿನಂದನೀಯ ಎಂದರು.
ಶಾಸಕರಾದ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಎಫ್.ಎಂ ಪ್ರಸಾರಕ್ಕಾಗಿ ಶಿವಮೊಗ್ಗದ ಜನತೆ ಬಹಳ ವರ್ಷಗಳಿಂದ ಕಾಯುತ್ತಿದ್ದರು. ಇದೀಗ ಎಫ್.ಎಂ. ಪ್ರೇಷಕದ ಅಳವಡಿಕೆಯು ಜನರಲ್ಲಿ ಸಂತೋಷ ತಂದಿದೆ. ನಿಗದಿತ ಸಮಯಕ್ಕೆ ಆರಂಭವಗುವ ಆಕಾಶವಾಣಿ ಕಾರ್ಯಕ್ರಮಗಳು ಎಲ್ಲರ ಮನೆ ಮಾತಾಗಿವೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವರು ಭದ್ರಾವತಿ ಆಕಾಶವಾಣಿಗೆ ಎಫ್.ಎಂ ತರಲು ಸಹಕರಿಸಿದ್ದು ಅವರಿಗೆ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ನಗರದ ಎಲ್ಲ ಪಾರ್ಕ್ಗಳಲ್ಲಿ ಜನರಿಗೆ ಬಾನುಲಿ ಪ್ರಸಾರ ಮಾಡುವ ಬಗ್ಗೆ ಚಿಂತಿಸಲಾಗುತ್ತಿದ್ದು, ಕೇಂದ್ರದ ಸಚಿವರು ಈ ಕುರಿತು ಸಹಕಾರ ನೀಡಬೇಕು ಎಂದರು.
ಆಕಾಶವಾಣಿ ಮಹಾ ನಿರ್ದೇಶಕರಾದ ರಾಜೇಂದ್ರ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಆಕಾಶವಾಣಿ ಇದೀಗ ತಲುಪಲಾರದ ಪ್ರದೇಶಗಳನ್ನು ತಲುಪುವ ಪ್ರಯತ್ನ ಮಾಡುತ್ತಿದೆ. ಹಾಗೂ ಎಲ್ಲೆಡೆ ಮಾಹಿತಿ, ಶಿಕ್ಷಣ ಮತ್ತು ರಂಜನೆಯನ್ನು ಒದಗಿಸುತ್ತಾ ಬಂದಿದ್ದು, ರಾಷ್ಟಿçÃಯ ಐಕ್ಯತೆಯ ಪ್ರತೀಕವಾಗಿದೆ ಮತ್ತು ವಿಶ್ವಾಸಾರ್ಹ ಧ್ವನಿಯಾಗಿ ಹೊರಹೊಮ್ಮಿದೆ ಎಂದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ, ಪ್ರಸಾರ ಭಾರತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೌರವ್ ದ್ವಿವೇದಿ, ಮಾಜಿ ಶಾಸಕರಾದ ಕುಮಾರಸ್ವಾಮಿ, ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, ದಕ್ಷಿಣ ವಲಯ(ಬ್ರಾಡ್‌ಕಾಸ್ಟ್ ಆಪರೇಷನ್ಸ್)ದ ಅಪರ ಮಹಾ ನಿರ್ದೇಶಕಿ ಗೀತಾ ರಾಣಿ, ಆಕಾಶವಾಣಿ ಭದ್ರಾವತಿಯ ಮುಖ್ಯಸ್ಥರಾದ ಎಸ್. ಆರ್ ಭಟ್, ಚೇಂಬರ್ ಆಫ್ ಕಾಮರ್ಸ್ನ ಅಧ್ಯಕ್ಷರಾದ ಗೋಪಿನಾಥ್, ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

CM Siddharamaiah ಸರ್ಕಾರಿ ನೇಮಕಾತಿ ಬಗ್ಗೆ ಈ ಸಲದ ಬಜೆಟ್ ನಲ್ಲಿ ತಿಳಿಸಲಾಗುವುದು: ಸಿದ್ಧರಾಮಯ್ಯ

0

CM Siddharamaiah ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸವನ್ನು ಮಾಡದೇ, ಈಗ ವಿರೋಧ ಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತರಾಗಿದ್ದಾರೆ ಎಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯನವರು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರು.

ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸವನ್ನು ಮಾಡದೇ, ಈಗ ವಿರೋಧ ಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತರಾಗಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರು 2 ಕೋಟಿ ಉದ್ಯೋಗ ನೀಡುವುದಾಗಿ ತಿಳಿಸಿದರೇ ಹೊರತು, ಯಾರಿಗೂ ಉದ್ಯೋಗ ದೊರೆಯಲಿಲ್ಲ. ರಾಜ್ಯದಲ್ಲಿ ಬಿಜೆಪಿಯವರು ಆಡಳಿತ ನಡೆಸಿದ ಸಂದರ್ಭದಲ್ಲಿ ಯಾವುದೇ ಉದ್ಯೋಗಗಳನ್ನು ನೀಡಲಿಲ್ಲ. ಆದ್ದರಿಂದ ನಮ್ಮ ಸರ್ಕಾರವನ್ನು ಪ್ರಶ್ನಿಸಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಹೇಳಿದರು.

CM Siddharamaiah ಸರ್ಕಾರಿ ನೇಮಕಾತಿಗಳಲ್ಲಿ ಒಳಮೀಸಲಾತಿಯ ಸಮಸ್ಯೆಯಿಂದ ವಿಳಂಬವಾಗಿತ್ತಾದರೂ, ಸದ್ಯದಲ್ಲಿಯೇ ನೇಮಕಾತಿಯನ್ನು ಪ್ರಾರಂಭಿಸಿ, ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ನಮ್ಮ ಸರ್ಕಾರ ನುಡಿದಂತೆ ನಡೆದು ಸರ್ಕಾರಿ ನೇಮಕಾತಿಗಳನ್ನು ಮಾಡಲಿದ್ದು, ಈ ಬಗ್ಗೆ ಬಜೆಟ್ ನಲ್ಲಿಯೂ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.