Thursday, May 14, 2026
Thursday, May 14, 2026
Home Blog Page 77

CM Siddharamaiah ಸರ್ಕಾರಿ ನೇಮಕಾತಿ ಬಗ್ಗೆ ಈ ಸಲದ ಬಜೆಟ್ ನಲ್ಲಿ ತಿಳಿಸಲಾಗುವುದು: ಸಿದ್ಧರಾಮಯ್ಯ

0

CM Siddharamaiah ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸವನ್ನು ಮಾಡದೇ, ಈಗ ವಿರೋಧ ಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತರಾಗಿದ್ದಾರೆ ಎಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯನವರು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರು.

ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸವನ್ನು ಮಾಡದೇ, ಈಗ ವಿರೋಧ ಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತರಾಗಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರು 2 ಕೋಟಿ ಉದ್ಯೋಗ ನೀಡುವುದಾಗಿ ತಿಳಿಸಿದರೇ ಹೊರತು, ಯಾರಿಗೂ ಉದ್ಯೋಗ ದೊರೆಯಲಿಲ್ಲ. ರಾಜ್ಯದಲ್ಲಿ ಬಿಜೆಪಿಯವರು ಆಡಳಿತ ನಡೆಸಿದ ಸಂದರ್ಭದಲ್ಲಿ ಯಾವುದೇ ಉದ್ಯೋಗಗಳನ್ನು ನೀಡಲಿಲ್ಲ. ಆದ್ದರಿಂದ ನಮ್ಮ ಸರ್ಕಾರವನ್ನು ಪ್ರಶ್ನಿಸಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಹೇಳಿದರು.

CM Siddharamaiah ಸರ್ಕಾರಿ ನೇಮಕಾತಿಗಳಲ್ಲಿ ಒಳಮೀಸಲಾತಿಯ ಸಮಸ್ಯೆಯಿಂದ ವಿಳಂಬವಾಗಿತ್ತಾದರೂ, ಸದ್ಯದಲ್ಲಿಯೇ ನೇಮಕಾತಿಯನ್ನು ಪ್ರಾರಂಭಿಸಿ, ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ನಮ್ಮ ಸರ್ಕಾರ ನುಡಿದಂತೆ ನಡೆದು ಸರ್ಕಾರಿ ನೇಮಕಾತಿಗಳನ್ನು ಮಾಡಲಿದ್ದು, ಈ ಬಗ್ಗೆ ಬಜೆಟ್ ನಲ್ಲಿಯೂ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.

ಅಪರಿಚಿತ ವ್ಯಕ್ತಿಯ ಸಾವು.ಭದ್ರಾವತಿ ನ್ಯೂಟೌನ್ ಪೊಲೀಸ್ ಪ್ರಕಟಣೆ

0

ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಭದ್ರಾವತಿ ಸರ್ಕಾರಿ ಬಸ್ ನಿಲ್ದಾಣದಲ್ಲಿ ಸುಸ್ತಾಗಿ ಬಿದ್ದಿದ್ದ 45-50 ವರ್ಷದೊಳಗಿನ ವ್ಯಕ್ತಿಯೊಬ್ಬರನ್ನು ಬೊಮ್ಮಕಟ್ಟೆ ವೃದ್ಧಾಶ್ರಮಕ್ಕೆ ಸೇರಿಸಿದ್ದು, ಈ ವ್ಯಕ್ತಿಯ ವೃದ್ದಾಶ್ರಮದಲ್ಲಿ ಫೆ. 23 ರಂದು ಮಲಗಿದ್ದಲ್ಲೆ ಮೃತಪಟ್ಟಿರುತ್ತಾರೆ.
ಮೃತನ ಚಹರೆ 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಬಲಗೈ ಮುಂಗೈಯಲ್ಲಿ ರಂಗಮ್ಮ ಎಂದು ಹಚ್ಚೆ ಇರುತ್ತದೆ. ಮೈಮೇಲೆ ಬಿಳಿ-ಕಂದು ಮಿಶ್ರಿತ ತುಂಬು ತೋಳಿನ ಚೆಕ್ಸ್ ಶರ್ಟ್, ನೀಲಿ ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ.
ಈ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ತಿಳಿದಲ್ಲಿ ನ್ಯೂ ಟೌನ್ ಪೊಲೀಸ್ ಠಾಣೆ ದೂ.ಸಂ.: 9480803355/ 9480803381 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

Rotary Club Shivamogga ಸೇವಾ ಮನೋಭಾವ ಬೆಳೆಸುತ್ತಿರುವ ರೋಟರಿ ಸೇವೆ ಶ್ಲಾಘನೀಯ: ಓಂಗಣೇಶ್ ಉಪ್ಪುಂದ

0

Rotary Club Shivamogga ರೋಟರಿ ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ನಡೆಸುವ ಮೂಲಕ ವಿಶ್ವಾದ್ಯಂತ ಸೇವಾ ಕಾರ್ಯ ನಡೆಸುತ್ತಿದೆ ಎಂದು ನಟ ಓಂಗಣೇಶ್ ಉಪ್ಪುಂದ ಹೇಳಿದರು.

ಶಿವಮೊಗ್ಗ ನಗರದ ಕಾಸ್ಮೋ ಕ್ಲಬ್‌ನಲ್ಲಿ ರೋಟರಿ ಕ್ಲಬ್ ವಲಯ 10 ಮತ್ತು 11ರ ವತಿಯಿಂದ ಆಯೋಜಿಸಿದ್ದ ವಿಶ್ವ ತಿಳವಳಿಕೆ ಮತ್ತು ಶಾಂತಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಎಲ್ಲರನ್ನು ಒಳಗೊಂಡು ಸೇವಾ ಮನೋಭಾವ ಬೆಳೆಸುವ ಕೆಲಸ ಮಾಡುತ್ತಿರುವ ರೋಟರಿ ಸೇವೆ ಶ್ಲಾಘನೀಯ ಎಂದು ತಿಳಿಸಿದರು.

ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್ ಮಾತನಾಡಿ, ರೋಟರಿ ಸಂಸ್ಥೆಯಲ್ಲಿ ಎಲ್ಲರೂ ಒಟ್ಟಾಗಿ ಸೇವಾ ಕಾರ್ಯಗಳನ್ನು ನಡೆಸುತ್ತಿದ್ದು, ರೋಟರಿ ಸದಸ್ಯರ ಸಂಖ್ಯೆ ಹೆಚ್ಚಿಸುವಲ್ಲಿ ಆದ್ಯತೆ ನೀಡಬೇಕು ಎಂದು ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಅಧ್ಯಕ್ಷ ಪ್ರಕಾಶ್ ಮೂರ್ತಿ ಮಾತನಾಡಿ, ರೋಟರಿ ಸದಸ್ಯರ ವಿಸ್ತರಣೆಗೆ ರೋಟರ‍್ಯಾಕ್ಟ್ ಕ್ಲಬ್‌ಗಳ ವಿಸ್ತರಣೆ ಬಹು ಮುಖ್ಯ. ರೋಟರಿ ವಿಶ್ವ ತಿಳುವಳಿಕೆ ಮತ್ತು ಶಾಂತಿ ದಿನದಂದು ಸಂಸ್ಕೃತಿ, ರಾಷ್ಟ್ರ ಮತ್ತು ನಂಬಿಕೆಗಳಾದ್ಯಂತ ಜನರನ್ನು ಸಂಪರ್ಕಿಸಿವ ಏಕತೆ ಮನೋಭಾವವನ್ನು ನಾವು ಆಚರಿಸುತ್ತೇವೆ ಎಂದು ಹೇಳಿದರು.

ನಿಜವಾದ ಶಾಂತಿ ಇತರರಿಗೆ ತಿಳುವಳಿಕೆ. ಸಹಾನುಭೂತಿ ಮತ್ತು ಸೇವೆಯಿಂದ ಪ್ರಾರಂಭವಾಗುತ್ತದೆ ಎಂದು ರೋಟರಿ ನಮಗೆ ನೆನಪಿಸುತ್ತದೆ. ಒಂದುಗೊಡಿ ಕೆಲಸ ಮಾಡುವ ಮೂಲಕ ಮತ್ತು ಸೇವೆಯನ್ನು ಹೆಚ್ಚಾಗಿ ಮಾಡುವ ಮೂಲಕ ನಾವು ಸ್ನೇಹದ ಸೇತುವೆಗಳನ್ನು ನಿರ್ಮಿಸಿ ಭವಿಷ್ಯದ ಪೀಳಿಗೆಗೆ ಹೆಚ್ಚು ಶಾಂತಿಯುತ ಮತ್ತು ಭರವಸೆಯ ಜಗತ್ತನ್ನು ರಚಿಸಬಹುದು ಎಂದು ತಿಳಿಸಿದರು.

Rotary Club Shivamogga ರೋಟರಿ ಸಹಾಯಕ ಗವರ್ನರ್ ಕೆ.ಪಿ.ಶೆಟ್ಟಿ, ಲಕ್ಷ್ಮಣ್ ಗೌಡ, ತರಬೇತುದಾರ ನಾಗರಾಜ್, ಸುರೇಶ, ವಲಯ ಕಾರ್ಯದರ್ಶಿ ಮೋಹನ್, ಜೆ.ರಾಧಾಕೃಷ್ಣ, ಶಂಕರ್, ಜಗದೀಶ ಸರ್ಜಾ, ರಂಗರಾಜನ್, ಕಿರಣಕುಮಾರ್, ಚಂದ್ರಶೇಖರ್, ಪ್ರಕಾಶ್ ಜಿ.ಎನ್., ಕಾರ್ಯದರ್ಶಿ ರಶ್ಮಿ, ಇವೆಂಟ್ ಕಾರ್ಯದರ್ಶಿ ಮಂಜುಳಾ ರಾಜು, ರೋಟರಿ ಸದಸ್ಯರು ಮತ್ತಿತರರು ಪಾಲ್ಗೊಂಡಿದ್ದರು.

D.K. Shivakumar ಹಿಮೋಫೀಲಿಯ ಪೀಡಿತ ಒಬ್ಬ ರೋಗಿಗೆ ವರ್ಷಕ್ಕೆ ರೂ 5 ಲಕ್ಷ ಖರ್ಚಾಗುತ್ತದೆ : ಡೀಸಿಎಂ ಡಿ.ಕೆ.ಶಿವಕುಮಾರ್

0

D.K. Shivakumar ಹಿಮೋಫಿಲಿಯಾ ಅಪರೂಪದ ಕಾಯಿಲೆ. ಹಿಮೋಫಿಲಿಯಾ ರೋಗಿಗಳಿಗೆ ತಿಂಗಳಿಗೆ ಒಂದು ಇಂಜೆಕ್ಷನ್‌ ಕೊಡಬೇಕು, ವರ್ಷಕ್ಕೆ ಒಬ್ಬ ರೋಗಿಗೆ 5 ಲಕ್ಷ ರೂ. ಖರ್ಚಾಗುತ್ತದೆ. ಜನರಿಗೆ ಅನುಕೂಲವಾಗಲಿ ಎಂದು ಹಿಮೋಫಿಲಿಯಾ ರೋಗ ನಿರೋಧಕ ಚಿಕಿತ್ಸೆ ನೀಡಲು ನಮ್ಮ ಸರ್ಕಾರ ಮುಂದೆ ಬಂದಿದೆ. ಇಡೀ ದೇಶದಲ್ಲಿ ಯಾವ ಸರ್ಕಾರವೂ ಮಾಡದ ಕೆಲಸವನ್ನೂ ನಮ್ಮ ಸರ್ಕಾರ ಮಾಡುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಹಿಮೋಫೀಲಿಯ ರೋಗಿಗಳಿಗೆ ವಿಶೇಷವಾಗಿ ಇರುವ ಅಂಬ್ಯುಲೆನ್ಸ್ ವಾಹನಗಳನ್ನ ಲೋಕಾರ್ಪಣಗೊಳಿಸಿದ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು.

ಹಿಮೋಫಿಲಿಯಾದಿಂದ ಬಳಲುತ್ತಿರುವ ಮಕ್ಕಳು ಹಾಗೂ ದೊಡ್ಡವರು ಯಾರೂ ಕೂಡ ವಿಶ್ವಾಸವನ್ನು ಕಳೆದುಕೊಳ್ಳಬಾರದು. ಈ ಕಾಯಿಲೆ ಬಂದ ಕೂಡಲೇ ನಮ್ಮ ಕೈಯಿಂದ ಏನೂ ಮಾಡಲು ಆಗುವುದಿಲ್ಲ ಎಂಬ ಭಾವನೆ ಬರಬಾರದು. ಎಷ್ಟೇ ಖರ್ಚಾದರೂ ಮಕ್ಕಳ ಜೊತೆಗೆ ಹಾಗೂ ಪೋಷಕರ ಜೊತೆಗೆ ಸರ್ಕಾರ ಇದೆ. ನಿಮ್ಮ ಬದುಕಿಗೆ ಹೊಸ ಶಕ್ತಿ ತುಂಬುವುದೇ ಸರ್ಕಾರದ ಉದ್ದೇಶವಾಗಿದೆ.

D.K. Shivakumar ನಮ್ಮ ಆರೋಗ್ಯ ಇಲಾಖೆ ಇಡೀ ದೇಶಕ್ಕೆ ಮಾದರಿಯಾಗಿದೆ. ಹಿಮೋಫಿಲಿಯಾ ರೋಗಿಗಳಿಗೆ ಚಿಕಿತ್ಸೆ ನೀಡಲು ಮುಂದಾಗುವ ಮೂಲಕ ಕ್ರಾಂತಿಕಾರಕ ಹೆಜ್ಜೆಯನ್ನಿಟ್ಟಿದೆ ಎಂದು ಉಪಮುಖ್ಯಮಂತ್ರಿಗಳು ಹೇಳಿದರು.

Krishna Bhairegowda ಸಂಪೂರ್ಣ – ಸರಳ ಏಕೀಕೃತ ಭೂ- ನಿರ್ವಹಣಾ ವ್ಯವಸ್ಥೆಗೆ ಸರ್ಕಾರದ ದಿಟ್ಟ ಹೆಜ್ಜೆ- ಸಚಿವ ಕೃಷ್ಣ ಭೈರೇಗೌಡ

0

Krishna Bhairegowda ಭೂಮಿಗೆ ಸಂಬಂಧಿಸಿದ ಸರ್ಕಾರದ ಎಲ್ಲಾ ಸೇವೆಗಳನ್ನು ಒಂದೇ ವ್ಯವಸ್ಥೆಯ ಅಡಿಯಲ್ಲಿ ತರುವ ಮಹಾತ್ವಕಾಂಕ್ಷಿ ULMS (Unified Land Management System) ಯೋಜನೆಯ ಅನುಷ್ಠಾನಕ್ಕೆ ಸರ್ಕಾರದ ದೃಢ ಹೆಜ್ಜೆಯನ್ನು ಇಟ್ಟಿದೆ. ಈ ಕುರಿತಂತೆ ಎಲ್ಲಾಸಂಬಂಧಿಸಿದ (ಕಂದಾಯ, ನಗರಾಭಿವೃದ್ಧಿ, ನೋಂದಣಿ, ಲೋಕೋಪಯೋಗಿ, ನೀರಾವರಿ, ವಸತಿ, ಬೃಹತ್‌ ಮತ್ತು ಮಧ್ಯಮಕೈಗಾರಿಕಾ ಹಾಗೂ ಇತ್ಯಾದಿ ಇಲಾಖೆಗಳ) ಹಿರಿಯ ಅಧಿಕಾರಿಗಳ ಸಭೆಯನ್ನು ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ULMS ಗಣಕೀಕೃತ ಏಕ ವ್ಯವಸ್ಥೆಯಡಿ ಸರ್ವೆ, ಭೂ ಪರಿವರ್ತನೆ, ಬಡಾವಣೆ ಪ್ಲಾನ್‌ ಮಂಜೂರಿ, ಮನೆ ಪ್ಲಾನ್‌ ಮಂಜೂರಿ, ನಿವೇಶನ ಮಾರಾಟ, ಇ-ಖಾತಾ ಸೃಜನೆ (ಸ್ಥಳೀಯಸಂಸ್ಥೆಯಲ್ಲಿ), ಆಸ್ತಿ ತೆರಿಗೆ ಸಂಗ್ರಹ, ಭೂಸ್ವಾಧೀನ ಹಾಗೂ ಇನ್ನೂ ಅನೇಕ ಭೂ ಸಂಬಂಧಿತ ಚಟುವಟಿಕೆಗಳನ್ನು ಸರಾಗ, ಸುಲಭ, ಪಾರದರ್ಶಕ ಮತ್ತು ಜನಸ್ನೇಹಿಯಾದ ಒಂದೇ ಆನ್‌ಲೈನ್‌ ವ್ಯವಸ್ಥೆಗೆತರುವ ಯೋಜನೆಯಾಗಿದೆ. ಇದರಿಂದ ಜನರಿಗೆ ಬೇರೆ ಬೇರೆ ಕಛೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ ಭೂಮಿಗೆ ಸಂಬಂಧಿಸಿದ ಸೇವೆಗಳನ್ನು ಸರಳವಾಗಿ ಪಡೆದುಕೊಳ್ಳಬಹುದಾದ ಅತ್ಯಂತ ಪ್ರಮುಖ ಆಡಳಿತ ಸುಧಾರಣಾ ಕ್ರಮವಾಗಿದೆ.

ULMS ಮುಖಾಂತರ ಭೂ ಮಾಲಿಕತ್ವದ ಮೂಲ ದಾಖಲೆಗಳನ್ನು ದೃಢಪಡಿಸುವುದು, ಸರ್ವೆ ನಕ್ಷೆಯನ್ನು ಡಿಜಿಟಸೂಚಿಸಲಾಗಿದೆ ದಲ್ಲಿ ಒದಗಿಸುವುದು, ಭೂ ಪರಿವರ್ತನೆ, ಬಡಾವಣೆಗಳಅನುಮೋದನೆ, ಕಟ್ಟಡ ನಕ್ಷೆ ಅನುಮೋದನೆ, ಖಾತೆ ಪಡೆಯುವುದು ಇತ್ಯಾದಿ ಪ್ರಕ್ರಿಯೆಗಳನ್ನು ಏಕೀಕೃತ ನೇರ ಆನ್‌ಲೈನ್‌ ವ್ಯವಸ್ಥೆಯಡಿಯಲ್ಲಿ ತರಲಾಗುವುದು. ಇದರಿಂದ ಭೂಮಿ ಬಡಾವಣೆ ನಿವೇಶನದ ದಾಖಲೆಗಳು ಒಂದೇ ಕಡೆ ದೊರೆಯುವಂತಾಗುತ್ತದೆ. ಒಂದು ಹಂತದಿಂದ ಮತ್ತೊಂದು ಹಂತಕ್ಕೆ ಸರಾಗವಾಗಿ, ವಿವಿಧಕಛೇರಿ ಇಲಾಖೆಗಳಿಗೆ ಆನ್‌ಲೈನ್‌ನಲ್ಲಿ ಪ್ರತ್ಯೇಕ ಅರ್ಜಿಗಳನ್ನುಸಲ್ಲಿಸುವ ಅವಶ್ಯಕತೆ ಇಲ್ಲದೆ, ಸ್ವಯಂಚಾಲಿತವಾಗಿ ಕಡತ ಸಾಗುವವ್ಯವಸ್ಥೆ ಇದು. ಕಾಲಮಿತಿಯೊಳಗೆ ತೀರ್ಮಾನಿಸುವ ವ್ಯವಸ್ಥೆಯಿರುವುದರಿಂದ ವಿಳಂಬಕ್ಕೆ ಕಡಿವಾಣ ಬೀಳಲಿದೆ. ಈ ವ್ಯವಸ್ಥೆಯಿಂದ ನಕಲಿ/ಅಕ್ರಮ ಭೂ ವ್ಯವಹಾರಗಳಿಗೆ ಕಡಿವಾಣಬೀಳಲಿದೆ. ಹಾಗೆಯೇ ಇದು ಅಮಾಯಕರಿಗೆ ವಂಚನೆಯಿಂದ ರಕ್ಷಣೆ ನೀಡಲಿದೆ. ಇದರಿಂದ ಭೂ ವ್ಯವಹಾರ, ಮಾಲಿಕತ್ವದ ಗೊಂದಲಗೋಜುಗಳಿಗೆ ಮುಕ್ತಿ ನೀಡಿ ವ್ಯಾಜ್ಯಗಳನ್ನು ತಗ್ಗಿಸಿ, ಭೂಮಾಲಿಕತ್ವದ ಖಚಿತತೆ ಸಾಧಿಸಬಹುದು.

ಹಾಲಿ ವ್ಯವಸ್ಥೆಯಲ್ಲಿ ದಾಖಲೆಗಳ ಖಚಿತತೆ, ದೃಢೀಕರಣ ಸಮರ್ಪಕವಾಗಿ ಆಗುತ್ತಿಲ್ಲ ಮತ್ತು ಕಾಗದದಲ್ಲಿ ದೃಢೀಕರಣ ಮಾಡುವ ಪದ್ಧತಿ ನೈಜತೆಯನ್ನು ಖಾತ್ರಿಪಡಿಸುತ್ತಿಲ್ಲ. ಆನ್‌ಲೈನ್‌ ವ್ಯವಸ್ಥೆಯಲ್ಲಿ ಮೂಲ ದಾಖಲೆಗಳನ್ನು ನೇರವಾಗಿ ಅಧಿಕೃತ ಅಧಿಕಾರಿಯಿಂದ ಪಡೆಯಲಾಗುವುದು. ಬಲ್ಲ/ನಂಬಿಕಾರ್ಹ ಮೂಲ/ಅಧಿಕಾರಿ/ಪ್ರಾಧಿಕಾರದ ಮೂಲಕ ದಾಖಲೆ ಪಡೆಯಲಾಗುವುದರಿಂದ ಕಾಗದಗಳ ನೈಜತೆಯ ಅನುಮಾನಕ್ಕೆ ಮುಂದೆಅವಕಾಶವಿರುವುದಿಲ್ಲ. ಸರ್ವೆ ನಕ್ಷೆಯನ್ನು ಸಂಬಂಧಿಸಿದ ಅಧಿಕಾರಿನೇರವಾಗಿ ಒದಗಿಸಬೇಕಾಗಿರುತ್ತದೆ. ಇದರಿಂದ ಸ್ಪಷ್ಟ ಜವಾಬ್ದಾರಿ ನಿಗದಿಯಾಗುವುದರಿಂದ ತಪ್ಪುಗಳಿಗೆ ಕಡಿವಾಣ ಬೀಳಲಿದೆ. ಮೂಲ ದಾಖಲೆಗಳ ಅಸಲೀತನ ಖಾತರಿಪಡಿಸಿಕೊಂಡರೆ ಮುಂದೆ ಆಗಬಹುದಾದ ಅನೇಕ ತಕರಾರು, ವ್ಯಾಜ್ಯಗಳನ್ನು ತಪ್ಪಿಸಿನೆಮ್ಮದಿಯ ಮಾಲಿಕತ್ವ ನೀಡಬಹುದು.

Krishna Bhairegowda ದಾಖಲೆಗಳು ದೃಢೀಕೃತವಾದರೆ, ನಕಲಿ/ಅಕ್ರಮ/ವ್ಯಾಜ್ಯಗಳು ತಗ್ಗಿದರೆ ಭ್ರಷ್ಟಾಚಾರವೂ ತಗ್ಗುತ್ತದೆ. ಸರಾಗವಾಗಿ ಭೂ ವ್ಯವಹಾರ ನಡೆಸಲುಇದು ಸಹಕಾರಿಯಾದ ಹೆಜ್ಜೆ. ಇದರಿಂದ ಭೂಮಿಯ ನೈಜ ಆರ್ಥಿಕಮೌಲ್ಯ ಮತ್ತು ಆದಾಯ ಹೆಚ್ಚಾಗುತ್ತದೆ. ಇತರೆ ಆರ್ಥಿಕಚಟುವಟಿಕೆಗಳಿಗೂ ಪ್ರೋತ್ಸಾಹವಾಗುತ್ತದೆ ಹಾಗೂ ಆಡಳಿತ ಸರಳೀಕರಣವಾಗುತ್ತದೆ. ಒಂದೇ ಕಡೆ ಆಸ್ತಿ ವ್ಯವಹಾರ/ಖರೀದಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಲಭ್ಯವಾಗುವುದರಿಂದ ದಾಖಲೆ ಪರಿಶೀಲಿಸುವುದು/ದೃಢಪಡಿಸಿಕೊಳ್ಳುವುದು ಸುಲಲಿತವಾಗಲಿದೆ. ಈ ವ್ಯವಸ್ಥೆಯ ಮುಖಾಂತರ ಮುಂದಿನ ಪ್ರತಿಯೊಂದು ಭೂ ಆಸ್ತಿಗೆ ತನ್ನದೇ ಆದಂತ ಏಕಮಾತ್ರ ಭೂಮಿ ಗುರುತಿನ ಸಂಖ್ಯೆ (ULPIN) ಅಥವಾ ಭೂ ಆಧಾರ್‌ ನೀಡುವುದರಿಂದ ಸಂಪೂರ್ಣ ಪಾರದರ್ಶಕತೆ, ಖಚಿತತೆ, ಮಾಲಿಕತ್ವದ ಗ್ಯಾರಂಟಿ ನೀಡಬಹುದು.

ULMS ಭೂಮಿ ವ್ಯವಹಾರ, ನಕ್ಷೆ ಮಂಜೂರಾತಿ ಇಂತಹ ಚಟುವಟಿಕೆಗಳಿಗೂ ಮೀರಿದ ಹಲವು ಹೆಜ್ಜೆ ಮುಂದೆ ಹೋಗಿ ಭೂಸ್ವಾಧೀನ, ಆಸ್ತಿ ತೆರಿಗೆ, ಮಾಸ್ಟರ್‌ ಪ್ಲಾನ್‌, ನಗರಾಭಿವೃದ್ಧಿ ಪ್ರಾಧಿಕಾರಗಳ ನಿವೇಶನ ಹಂಚಿಕೆ ಹೀಗೆ ಅನೇಕ ಸೇವೆ/ಚಟುವಟಿಕೆಗಳನ್ನು ಏಕ ವ್ಯವಸ್ಥೆಗೆ ತರಲಿದೆ. ಇದರಿಂದ ಭೂಸ್ವಾಧೀನ ತ್ವರಿತಗೊಳ್ಳಲಿದೆ ಮತ್ತು ಈ ಪ್ರಕ್ರಿಯೆಯಲ್ಲಿ ನಡೆಯುತ್ತಿರುವ ವವ್ಯವಸ್ಥಿತ ಅಕ್ರಮಗಳಿಗೂ ಕಡಿವಾಣ ಬೀಳಲಿದೆ. ಆಸ್ತಿ ತೆರಿಗೆವ್ಯವಸ್ಥೆಯಲ್ಲಿರುವ ತಾರತಮ್ಯಗಳು ಅಂದರೆ ಅಸ್ತಿ ತೆರಿಗೆ ವಂಚನೆ, ಕಡಿಮೆ ಪಾವತಿಸುವುದು ಇವುಗಳನ್ನು ಸರಿಪಡಿಸಿ, ಗ್ರಾಮಪಂಚಾಯ್ತಿ ಮತ್ತು ನಗರಾಡಳಿತ ಸಂಸ್ಥೆಗಳನ್ನು ಆರ್ಥಿಕ ವಾಗಿಬಲಪಡಿಸುವುದು ಸಾಧ್ಯವಾಗಲಿದೆ.
ಇಂದು ಅನೇಕರಿಗೆ ಭೂ ಮಾಲಿಕತ್ವದ ವ್ಯವಸ್ಥೆ ಆರ್ಥಿಕ ಶಕ್ತಿಮತ್ತು ನೆಮ್ಮದಿ ನೀಡುವುದರ ಬದಲಿಗೆ ಗೊಂದಲ, ಅನಿಶ್ಚಿತತೆ, ವ್ಯಾಜ್ಯಗಳು ಗೂಡಾಗಿ ಪರಿಣಮಿಸಿದೆ. ಹಾಲಿ ವ್ಯವಸ್ಥೆ ಆಸ್ತಿಗಳಆರ್ಥಿಕ ಮೌಲ್ಯ, ಆದಾಯ, ಉತ್ಪಾದನೆಯನ್ನು ತಗ್ಗಿಸುತ್ತಿದೆ.ಜನಗಳಿಗೆ ನೆಮ್ಮದಿಯಿಲ್ಲ ಮತ್ತು ಸಮಾಜಕ್ಕೆ ಲಾಭವಿಲ್ಲ.

ದೇಶದ ನ್ಯಾಯಾಲಯಗಳಲ್ಲಿರುವ ಶೇ. 50ಕ್ಕೂ ಹೆಚ್ಚು ವ್ಯಾಜ್ಯಗಳು ಭೂಮಿ/ಮಾಲಿಕತ್ವ ಸಂಬಂಧಿಸಿದವುಗಳು. ಈ ಭೂವ್ಯಾಜ್ಯಗಳಿಂದ ಮತ್ತು ಅನಿಶ್ಚಿತತೆಯಿಂದ ನಾವು ಭೂ ಗ್ಯಾರಂಟಿಯಡಿಗೆ ಸಾಗಲು ULMS ಪರಿಣಾಮಕಾರಿ ಮಾರ್ಗವಾಗಲಿದೆ. ಇದರಿಂದ ಜನಗಳ ಕೇಂದ್ರಿತ, ಜನಪರ ಆಡಳಿತ ಸುಧಾರಣೆ ಸಾಧ್ಯ. ಈ ಏಕೀಕೃತ ವ್ಯವಸ್ಥೆಯನ್ನು ಸಂಬಂಧಿಸಿದ ಎಲ್ಲಾ ಇಲಾಖೆಗಳು ಮುಂದಿನ 6 ತಿಂಗಳುಗಳಲ್ಲಿ ಅನುಷ್ಠಾನಕ್ಕೆ ತರಬೇಕೆಂದು ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡರ ಕಾರ್ಯಾಲಯ ತಿಳಿಸಿದೆ.

MESCOM ಫೆ.27& 28 ರಂದು ಶಿವಮೊಗ್ಗದ ಕುವೆಂಪು ನಗರ ,ಸೂಡ ಸಿ & ಡಿ ಬ್ಲಾಕ್ ಸುತ್ತಮುತ್ತ ವಿದ್ಯುತ್ ನಿಲುಗಡೆ

0

MESCOM ತಾವರೆಚಟ್ನಹಳ್ಳಿ ವಿ ವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಫೆ. 27 ಮತ್ತು 28 ರಂದು ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ಕುವೆಂಪುನಗರ ಸೂಡ ಸಿ & ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಪ್ರಾ ಸಿಟಿ, ಮ್ಯಾಕ್ಸ್ ಲೇಔಟ್, ಎಂ.ಇ.ಎಸ್. ಲೇಔಟ್, ರೆಡ್ಡಿ ಲೇಔಟ್, ಸವಳಂಗರಸ್ತೆ, ರತ್ನಗಿರಿ ನಗರ ಮತ್ತು ಹುಣಸೋಡು, ಕಲ್ಲಗಂಗೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

ಕಬ್ಬು ಬೆಳೆಗೆ ನೀಡುವ ಆರ್ಥಿಕ ನೆರವಿನ ಪ್ರಕಾರ ರಾಜ್ಯ ಸರ್ಕಾರ ರೂ. 300 ಕೋಟಿ ಬಿಡುಗಡೆ ಮಾಡಿದೆ- ಸಚಿವ ಶಿವಾನಂದ ಪಾಟೀಲ

0

ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ 2025-26ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರಾಜ್ಯದ ರೈತರಿಗೆ ಪ್ರತಿ ಟನ್‌ಗೆ ರೂಂ 50 ಗಳ ಆರ್ಥಿಕ ನೆರವಿನ ಮೊತ್ತ ರೂಂ 300 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಕಳೆದ ನವಂಬರ್‌ 8ರಂದು ಕರೆದಿದ್ದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಸಭೆಯಲ್ಲಿ ಪ್ರತಿ ಟನ್‌ ಕಬ್ಬಿಗೆ ಎಫ್‌ಆರ್‌ಪಿ ಮೇಲೆ ನೂರು ರೂ. ಆರ್ಥಿಕ ನೆರವು ನೀಡುವ ನಿರ್ಧಾರ ಪ್ರಕಟಿಸಿದ್ದರು.

ರೂ 100 ಆರ್ಥಿಕ ನೆರವಿನಲ್ಲಿ ರಾಜ್ಯ ಸರ್ಕಾರ ರೂ 50 ಹಾಗೂ ಸಕ್ಕರೆ ಕಾರ್ಖಾನೆಗಳು ರೂ 50 ನೀಡಬೇಕು ಎಂಬ ತೀರ್ಮಾನವನ್ನು ಕೈಗೊಳ್ಳಲಾಗಿದ್ದು, ಈ ನಿರ್ಧಾರದಂತೆ ರಾಜ್ಯ ಸರ್ಕಾರ ತನ್ನ ಪಾಲಿನ ಆರ್ಥಿಕ ನೆರವಿನ ಹಣ ರೂಂ 300 ಕೋಟಿಗಳನ್ನು ಬಿಡುಗಡೆ ಮಾಡಿದೆ ಎಂದುಸ ಸಚಿವರು ತಿಳಿಸಿದ್ದಾರೆ.

ರಾಜ್ಯದ ಸಕ್ಕರೆ ಕಾರ್ಖಾನೆಗಳ ಪ್ರಸ್ತಾವನೆ ಆಧರಿಸಿ ಕಬ್ಬು ಅಭಿವೃದ್ಧಿ ಆಯುಕ್ತರು ಜಿಲ್ಲಾಧಿಕಾರಿಗಳಿಗೆ ಹಣ ಬಿಡುಗಡೆ ಮಾಡಲಿದ್ದಾರೆ. ರಾಜ್ಯದ ರೈತರು ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಪೂರೈಕೆ ಮಾಡಿದ ಕಬ್ಬಿನ ಪ್ರಮಾಣ ಆಧರಿಸಿ ಅವರ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ ಪ್ರತಿ ಟನ್‌ಗೆ 50 ರೂ.ಗಳಂತೆ ಜಮಾ ಮಾಡಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಅದೇ ರೀತಿ ಕಬ್ಬು ಪೂರೈಕೆ ಮಾಡಿದ ರೈತರಿಗೆ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳು ಪ್ರತಿ ಟನ್‌ ಕಬ್ಬಿಗೆ ರೂ 50 ಆರ್ಥಿಕ ನೆರವು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

2025-26ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನಲ್ಲಿ 81 ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸಿದ್ದು, 29 ಕಾರ್ಖಾನೆಗಳಲ್ಲಿ ಕಬ್ಬು ನುರಿಸುವಿಕೆ ಮುಕ್ತಾಯವಾಗಿದೆ. ಇದುವರೆಗೆ 521 ಲಕ್ಷ ಮೆಟ್ರಿಕ್‌ ಕಬ್ಬು ನುರಿಸಲಾಗಿದ್ದು, ಈ ಹಂಗಾಮಿನಲ್ಲಿ ಸುಮಾರು 600 ಲಕ್ಷ ಮೆಟ್ರಿಕ್‌ ಟನ್‌ ಕಬ್ಬು ನುರಿಸುವ ನಿರೀಕ್ಷೆ ಇದೆ ಎಂದು ಸಚಿವರು ವಿವರಿಸಿದ್ದಾರೆ.

ಮಾರ್ಚ್‌ ಮೊದಲ ವಾರದ ವೇಳೆಗೆ ಪ್ರಸಕ್ತ ಹಂಗಾಮಿನ ಕಬ್ಬು ನುರಿಸುವಿಕೆ ಅಂತ್ಯವಾಗಲಿದ್ದು, 600 ಲಕ್ಷ ಮೆಟ್ರಿಕ್‌ ಟನ್‌ ನುರಿಸುವ ಅಂದಾಜು ಆಧರಿಸಿ ರೂ 300 ಕೋಟಿ ಆರ್ಥಿಕ ನೆರವು ಬಿಡುಗಡೆ ಮಾಡಲಾಗಿದೆ ಎಂದು
ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವಶಿವಾನಂದ ಪಾಟೀಲ ತಿಳಿಸಿದ್ದಾರೆ.

Gruhalakshmi Yojana ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ತೀರಿಕೊಂಡಿದ್ದರೆ ಆ ಮನೆಯ ಅರ್ಹ ಯಜಮಾನಿಯು ಹೊಸದಾಗಿ ಅರ್ಜಿ ಸಲ್ಲಿಸಬೇಕು-ಹೆಚ್.ಎಂ.ಮಧು

0

Gruhalakshmi Yojana ಗೃಹಲಕ್ಷ್ಮಿ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳ ಹೆಸರಿಗೆ ಹಣ ವರ್ಗಾವಣೆಯಾಗುತ್ತಿದ್ದು, ಮನೆಯ ಮುಂದಿನ ಯಜಮಾನಿಯರು ಈ ಬಗ್ಗೆ ತಿಳಿಸಿ ಹೊಸದಾಗಿ ಅರ್ಜಿಗಳನ್ನು ಸಲ್ಲಿಸಬೇಕು ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಮಧು ಹೆಚ್ ಎಂ ತಿಳಿಸಿದರು.
ಶಿವಮೊಗ್ಗ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮರಣ ಹೊಂದಿರುವ ಫಲಾನುಭವಿಗಳ ಖಾತೆಯ ಕುರಿತು ಮಾಹಿತಿ ನೀಡಿ, ಮನೆಯ ಮುಂದಿನ ಯಜಮಾನಿಯರು ಸೌಲಭ್ಯ ಪಡೆಯಲು ಹೊಸದಾಗಿ ಅರ್ಜಿ ಸಲ್ಲಿಸಬೇಕು. ಫಲಾನುಭವಿಯ ವ್ಯಕ್ತಿಯ ಜೀವಂತ ಪ್ರಮಾಣ ಪತ್ರ ಸಲ್ಲಿಸುವ ಬಗ್ಗೆ ಯಾವುದೇ ರೀತಿಯ ಆತಂಕ ಬೇಡ. ಸರ್ಕಾರದ ಆದೇಶ/ಸುತ್ತೋಲೆ ಬಂದ ನಂತರ ಕ್ರಮ ವಹಿಸಬಹುದು ಎಂದರು.
ಗೃಹಲಕ್ಷ್ಮಿ ಯೋಜನೆಯಡಿ ತಾಲ್ಲೂಕಿನಲ್ಲಿ ಜನವರಿ ಮಾಹೆವರೆಗೆ 107841 ಮಹಿಳೆಯರು ನೋಂದಣಿಯಾಗಿದ್ದು, 2044 ಫಲಾನುಭವಿಗಳು ಐಟಿ/ಜಿಎಸ್‌ಟಿ ಎಂದು ಪರಿಣಗಣಿಸಲಾಗಿದೆ. ಈ ಬಗ್ಗೆ ಪರಿಶೀಲಿಸಲು 304 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಹಾಗೂ 42 ಫಲಾನುಭವಿಗಳಿಗೆ ಎನ್‌ಪಿಸಿಐ ಬಾಕಿ ಇದ್ದು ಪರಿಶೀಲಿಸಲಾಗುತ್ತಿದೆ. ಹಾಗೂ ನವೆಂಬರ್ ಮಾಹೆವರೆಗೆ ಹಣವನ್ನು ಜಮಾ ಮಾಡಲಾಗಿದೆ.
ತಾಲ್ಲೂಕಿನಲ್ಲಿ ಅನ್ನಭಾಗ್ಯ ಯೋಜನೆಯಡಿ ಫೆಬ್ರವರಿವರೆಗೆ 54147 ಬಿಪಿಎಲ್ ಪಡಿತರ ಚೀಟಿದಾರರು ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ. 5 ವರ್ಷದಿಂದ ಇಕೆವೈಸಿ ಮಾಡಿಸದೇ ಇರುವ ಪಡಿತರದಾರರು ಇಕೆವೈಸಿ ಮಾಡಿಸಿ ಪಡಿತರ ಪಡೆಯಬೇಕು. ಬಿಪಿಎಲ್ ಕಾರ್ಡ್ ರದ್ದಾಗಿ ಎಪಿಎಲ್ ಕಾರ್ಡ್ ಆಗಿ ಪರಿವರ್ತನೆಯಾಗಿರುವ ಪಡಿತರದಾರರು ನಿಗದಿತ ದಾಖಲೆಗಳಾದ 2 ರಿಂದ 3 ವರ್ಷಗಳ ಐಟಿ ರಿಟರ್ನ್ಸ್ ದಾಖಲೆ, ಪಡಿತರ ಚೀಟಿ ಜೆರಾಕ್ಸ್, ಆದಾಯ ಪ್ರಮಾಣ ಪತ್ರಗಳನ್ನು ನೀಡಿ ಮರು ಅರ್ಜಿ ಸಲ್ಲಿಸಬಹುದಾಗಿದ್ದು, ಇದನ್ನು 1 ರಿಂದ 2 ವಾರದಲ್ಲಿ ಪರಿಶೀಲಿಸಲಾಗುವುದು ಎಂದ ಅವರು ಇತ್ತೀಚಿಗೆ 15 ರಿಂದ 20 ಎಪಿಎಲ್ ಕಾರ್ಡ್ಗಳನ್ನು ಬಿಪಿಎಲ್ ಗೆ ಪರಿವರ್ತಿಸಲಾಗಿದೆ ಎಂದರು.
Gruhalakshmi Yojana ಯುವನಿಧಿ ಯೋಜನೆಯಡಿ ಇಲ್ಲಿಯವರೆಗೆ 11499 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, ಡಿಸೆಂಬರ್ ಮಾಹೆವರೆಗೆ ರೂ.1,02,46,500 ಹಣ ನೀಡಲಾಗಿದೆ. ಗೃಹಜ್ಯೋತಿ ಯಶಸ್ವಿಯಾಗಿ ಜಾರಿಯಾಗಿದ್ದು, 177290 ಫಲಾನುಭವಿಗಳಿಗೆ ರೂ.1080678819 ಸಬ್ಸಿಡಿ ನೀಡಲಾಗಿದೆ. ಶಕ್ತಿ ಯೋಜನೆಯಡಿ ಈವರೆಗೆ ತಾಲ್ಲೂಕಿನಲ್ಲಿ 25437543 ಬಾರಿ ಮಹಿಳೆಯರು ಪ್ರಯಾಣಿಸಿದ್ದು ಶೇ.63.3 ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿರುತ್ತಾರೆ. ಶೇ.38.2 ಆದಾಯ ಮಹಿಳಾ ಪ್ರಯಾಣಿಕರಿಂದ ಲಭಿಸಿರುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ತಾಲ್ಲೂಕು ಗ್ಯಾರಂಟಿ ಸಮಿತಿ ಸದಸ್ಯರು, ತಾಲ್ಲೂಕು ಇಓ ಪರಮೇಶ್, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

Bharat Scouts and Guides ಎಲ್ಲರೂ ಸ್ನೇಹದಿಂದಿದ್ದರೆ ಪರಸ್ಪರ ಒಮ್ಮತ ,ಸಹಬಾಳ್ವೆ ಸಾಧ್ಯ: ಶಕುಂತಲಾ ಚಂದ್ರಶೇಖರ್

0

Bharat Scouts and Guides ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಸಂಸ್ಥೆ ಮತ್ತು ಸ್ಥಳೀಯ ಸಂಸ್ಥೆಯ ವತಿಯಿಂದ ಜಿಲ್ಲಾ ಸ್ಕೌಟ್ ಭವನದಲ್ಲಿ ಆಯೋಜಿಸಲಾಗಿದ್ದ ಸ್ಕೌಟ್ ಗೈಡ್ ಚಳುವಳಿಯ ಸಂಸ್ಥಾಪಕರ ದಿನಾಚರಣೆಯಲ್ಲಿ ಮಾತನಾಡುತ್ತಿದ್ದರು. ಸ್ಕೌಟ್ ಚಳುವಳಿಯ ಸಂಸ್ಥಾಪಕರಾದ ಲಾರ್ಡ್ ಬೇಡೆನ್ ಪೋವೆಲ್ ರವರ 169ನೇ ಮತ್ತು ಲೇಡಿ ಬೇಡೆನ್ ಪೋವೆಲ್ ರವರ 139ನೇ ಜನ್ಮದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಈ ಸಂಸ್ಥಾಪಕ ದಿನಾಚರಣೆ ಮತ್ತು ಚಿಂತನ ಕಾರ್ಯಕ್ರಮದಲ್ಲಿ ಈ ವರ್ಷದ ಧ್ಯೇಯ ವಾಕ್ಯವಾದ
” ನಮ್ಮ ಸ್ನೇಹ ” ಕುರಿತು ಮಾತನಾಡಿದರು. ಸರ್ವರೂ ಸ್ನೇಹದಿಂದಿದ್ದು ಪರಸ್ಪರ ಚರ್ಚೆಯ ಮೂಲಕ ಒಮ್ಮತದಿಂದ ಬಾಳ್ವೆ ನಡೆಸಿದರೆ ಬಹಳಷ್ಟು ಸಮಸ್ಯೆಗಳನ್ನು ಸೌಹಾರ್ದದಿಂದ ಬಗೆಹರಿಸಿಕೊಳ್ಳಬಹುದೆಂದು ಹೇಳಿದರು.
ಕಾರ್ಯಕ್ರಮವು ಸ್ಕೌಟ್ ಗೈಡ್ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಜಿಲ್ಲಾ ಸಹಕಾರ್ಯದರ್ಶಿ ಶ್ರೀ ವೈ. ಆರ್. ವೀರೇಶಪ್ಪ ಸರ್ವರನ್ನು ಸ್ವಾಗತಿಸಿದರು. ಸಂಸ್ಥಾಪಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಜಿಲ್ಲಾ ತರಬೇತಿ ಆಯುಕ್ತ ಶ್ರೀ ಶಿವಶಂಕರ ರವರು ಪ್ರತಿಜ್ಞೆ ಬೋಧಿಸಿದರು. ಶ್ರೀಮತಿ ಲಕ್ಷ್ಮೀ ರವರು ಚಿಂತನ ದಿನದ ಮಹತ್ವದ ಬಗ್ಗೆ ಮನೋಜ್ಞಾವಾಗಿ ತಿಳಿಸಿಕೊಟ್ಟರು. ವಿವಿಧ ಶಾಲೆಯ ಮಕ್ಕಳು ಸ್ಕೌಟಿಂಗ್ ಗೈಡಿಂಗ್ ಚಳುವಳಿ ಸೇರಿಕೊಂದಡಿರುದರಿಂದ ತಮ್ಮ ಜೀವನದಲ್ಲಿ ಆಗಿರುವ ಬದಲಾವಣೆ ಬಗ್ಗೆ ತಿಳಿಸಿದರು. ಸ್ಕೌಟ್ ಶಿಕ್ಷಕರಾದ ಶ್ರೀ ವೆಂಕಟೇಶ್ ರವರು ಸ್ಕೌಟ್ ಗೈಡ್ ಮಕ್ಕಳು ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆ ಯಲ್ಲಿ ಹೇಗೆ ತೊಡಗಿಸಿಕೊಳ್ಳ ಬೇಕೆಂಬ ಮಾಹಿತಿಯನ್ನು ನೀಡಿದರು. Bharat Scouts and Guides ಸಮಾರಂಭದಲ್ಲಿ ಜಿಲ್ಲಾ ಸ್ಕೌಟ್ ಆಯುಕ್ತ ಶ್ರೀ ಎಸ್. ಜಿ. ಆನಂದ್, ಜಿಲ್ಲಾ ರೋವರ್ ಆಯುಕ್ತ ಶ್ರೀ ಕೆ. ರವಿ, ಜಿಲ್ಲಾ ಗೈಡ್ ಆಯುಕ್ತೆ ಶ್ರೀಮತಿ ಲಕ್ಷ್ಮಿ, ಹಿರಿಯ ಸ್ಕೌಟ್ ಶಿಕ್ಷಕರಾದ ಶ್ರೀ ರುದ್ರಪ್ಪ ಚೀಲೂರ್, ಶ್ರೀ ರಾಜಕುಮಾರ್, ಹಿರಿಯ ಗೈಡ್ ಶಿಕ್ಷಕಿರವರಾದ ಶ್ರೀಮತಿ ಶಾಂತಮ್ಮ, ಶ್ರೀಮತಿ ದಾಕ್ಷಾಯಿಣಿ ರಾಜಕುಮಾರ್, ಕಚೇರಿ ಸಿಬ್ಬಂದಿ ಹಾಗೂ ನಗರದ ವಿವಿಧ ಶಾಲೆಗಳ ಕಬ್, ಬುಲ್ಬುಲ್, ಸ್ಕೌಟ್ ಗೈಡ್ ಮಕ್ಕಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾನವ ಸರಪಳಿ ಮಾಡಿ ಈ ವರ್ಷದ ಧ್ಯೇಯ ವಾಕ್ಯವನ್ನು ಪುನಃರುಚ್ಚರಿಸಲಾಯಿತು. ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀ ರಾಜೇಶ್ ಅವಲಕ್ಕಿರವರು ಕಾರ್ಯಕ್ರಮದ ನಿರೂಪಣೆ ಮಾಡಿ ವಂದಿಸಿದರು.

B.Y. Raghavendra “ಸೇವಾತೀರ್ಥ” ಕಾರ್ಯಸೌಧಕ್ಕೆ ಚಾಲನೆ. ಮೊದಲ ಸಭೆ ಭಾರತದ ಭವಿಷ್ಯವನ್ನ ರೂಪಿಸುವ ಐತಿಹಾಸಿಕ ಕ್ಷಣ- ಸಂಸದ ಬಿ.ವೈ.ರಾಘವೇಂದ್ರ

0

B.Y. Raghavendra ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ 24 ಫೆಬ್ರವರಿ 2026 ರಂದು ನೂತನ ಪ್ರಧಾನಮಂತ್ರಿ ಕಚೇರಿ ‘ಸೇವಾ ತೀರ್ಥ’ದಲ್ಲಿ ಕೇಂದ್ರ ಸಚಿವ ಸಂಪುಟದ ಐತಿಹಾಸಿಕ ಮೊದಲ ಸಭೆ ನಡೆಯಿತು.

‘ಸೇವಾ ತೀರ್ಥ’ ಕೇವಲ ಒಂದು ಕಟ್ಟಡವಲ್ಲ, ಕರ್ತವ್ಯ, ಸೇವೆ ಮತ್ತು ಸಮರ್ಪಣಾ ಮನೋಭಾವದ ಮೇಲೆ ಆಧಾರಿತವಾದ ನವ ಭಾರತದ ನಾಗರಿಕ-ಕೇಂದ್ರಿತ ಆಡಳಿತ ಸಂಸ್ಕೃತಿಯ ಸಂಕೇತವಾಗಿದೆ.

ಇಲ್ಲಿ ತೆಗೆದುಕೊಳ್ಳಲಾಗುವ ಪ್ರತಿಯೊಂದು ನಿರ್ಧಾರವು 140 ಕೋಟಿ ದೇಶವಾಸಿಗಳಿಗೆ ಸೇವೆ ಸಲ್ಲಿಸುವ ಮನೋಭಾವ, ಸಾಂವಿಧಾನಿಕ ಮೌಲ್ಯಗಳು ಮತ್ತು ರಾಷ್ಟ್ರ ನಿರ್ಮಾಣದ ದೀರ್ಘಕಾಲೀನ ಗುರಿಗಳಿಂದ ಪ್ರೇರಿತವಾಗಿರುತ್ತದೆ.

B.Y. Raghavendra ವಿಕಸಿತ ಭಾರತ 2047 ರ ಸಂಕಲ್ಪದೊಂದಿಗೆ ನಡೆದ ಈ ಮೊದಲ ಸಭೆಯು ಭಾರತದ ಭವಿಷ್ಯವನ್ನು ರೂಪಿಸುವ ಐತಿಹಾಸಿಕ ಕ್ಷಣವಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ತಮಗಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.