Tuesday, May 5, 2026
Tuesday, May 5, 2026
Home Blog Page 8

ಮೇ.6. ಅಬಕಾರಿ ಇಲಾಖೆ ಮುಟ್ಟುಗೋಲು ಹಾಕಿಕೊಂಡ ಒಂದು ವಾಹನ ಬಹಿರಂಗ ಹರಾಜು

0

ಶಿವಮೊಗ್ಗ ಜಿಲ್ಲಾ ಅಬಕಾರಿ ನಿರೀಕ್ಷಕರವರ ಕಛೇರಿ ವತಿಯಿಂದ ಮೇ 06 ರ ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗ ವಲಯ ನಂ-1 ಕಛೇರಿಯ ಅಬಕಾರಿ ಭವನ ಆವರಣದಲ್ಲಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿರುವ 01 ದ್ವಿ ಚಕ್ರ ವಾಹನವನ್ನು ಯಥಾಸ್ಥಿತಿಯಾಗಿ ಬಹಿರಂಗ ಹರಾಜು ಮಾಡಲಾಗುವುದು.

ಆಸಕ್ತರು ನಿಗದಿತ ಸಮಯಯಲ್ಲಿ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಶಿವಮೊಗ್ಗ ವಲಯ ನಂ.1 ರ ಅಬಕಾರಿ ನಿರೀಕ್ಷಕರು ತಿಳಿಸಿದ್ದಾರೆ.

ಭದ್ರಾವತಿ ತಾಲ್ಲೂಕು ಮಲ್ಲಿಗೇನಹಳ್ಳಿಯಲ್ಲಿ ಸುರಿದ ಮಳೆ: ರೈತ ರಂಗಧಾಮಯ್ಯ ಅಡಿಕೆ ತೋಟಕ್ಕೆ ಅಪಾರ ಹಾನಿ

0

ಭದ್ರಾವತಿ ತಾಲ್ಲೂಕಿನ ಮಲ್ಲಿಗೆನಹಳ್ಳಿ ಗ್ರಾಮದಲ್ಲಿ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಯ ಪರಿಣಾಮವಾಗಿ ಅಡಿಕೆ ತೋಟಕ್ಕೆ ಭಾರೀ ಹಾನಿಯಾಗಿದೆ. ಗ್ರಾಮದ ರೈತ ಕೆ. ರಂಗಧಾಮಯ್ಯ ಅವರಿಗೆ ಸೇರಿದ ತೋಟದಲ್ಲಿ ಸುಮಾರು 400ಕ್ಕೂ ಹೆಚ್ಚು ಅಡಿಕೆ ಮರಗಳು ಬೇರುಸಹಿತ ನೆಲಕ್ಕುರುಳಿವೆ.
ಬಿರುಗಾಳಿಯ ಹೊಡೆತಕ್ಕೆ ತತ್ತರಿಸಿದ ಅಡಿಕೆ ಮರಗಳು, ಮಳೆ ನೀರಿನಿಂದ ಮಣ್ಣು ಮೃದುವಾಗಿರುವ ಕಾರಣ ಬೇರು ಹಿಡಿತ ಕಳೆದುಕೊಂಡು ಉರುಳಿವೆ. ಹಲವು ಮರಗಳಲ್ಲಿ ಫಸಲು ಇದ್ದದ್ದರಿಂದ ರೈತನಿಗೆ ನೇರ ಆರ್ಥಿಕ ನಷ್ಟ ಉಂಟಾಗಿದೆ. ಒಂದು ವರ್ಷದ ಆದಾಯದ ಪ್ರಮುಖ ಮೂಲವಾಗಿದ್ದ ಅಡಿಕೆ ಬೆಳೆ ಹಾನಿಗೊಳಗಾಗಿರುವುದರಿಂದ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.
ಸ್ಥಳೀಯರು ತಿಳಿಸಿದಂತೆ, ಸುರಿದ ಭಾರಿ ಮಳೆ ಹಾಗೂ ಗಾಳಿ ವೇಗ ಹೆಚ್ಚಿರುವುದರಿಂದ ಈ ರೀತಿಯ ಹಾನಿ ಸಂಭವಿಸಿದ್ದು, ಇಡೀ ತೋಟವೇ ಹಾನಿಯಾಗಿದೆ.
ರೈತ ರಂಗಧಾಮಯ್ಯ ಅವರು ಸರ್ಕಾರದಿಂದ ತುರ್ತು ಪರಿಹಾರ ನೀಡುವಂತೆ ಮನವಿ ಮಾಡಿಕೊಂಡಿದ್ದು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಾನಿಯ ಪರಿಶೀಲನೆ ನಡೆಸಿ, ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.

Backward Classes Welfare Department ಭಾರತೀಯ ಸೇನೆ/ ಇತರೆ ಯೂನಿಫಾರ್ಮ್ ಸೇವೆಗೆ ಸೇರಬಯಸುವ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ

0

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಭಾರತೀಯ ಸೇನೆ/ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗೆ (ಬಾಲಕರಿಗೆ ಮಾತ್ರ) ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಆಯಾ ಜಿಲ್ಲೆಯ ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆಯ ಮೂಲಕ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಸುವರ್ಣ ವಿಧಾನಸೌಧ, ಹಲಗಾ, ಬೆಳಗಾವಿ-590010 ಇಲ್ಲಿಗೆ ಮೇ.11 ರೊಳಗಾಗಿ ಸಲ್ಲಿಸುವುದು.

ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಮಿತಿ ಪ್ರವರ್ಗ-1ಕ್ಕೆ ರೂ.2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ರೂ.1 ಲಕ್ಷ ಒಳಗೊಂಡಿರಬೇಕು. ಅಭ್ಯರ್ಥಿಯು 10 ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳು ಮತ್ತು ಸರಾಸರಿ ಶೇ.45 ರಷ್ಟು ಅಂಕಗಳನ್ನು ಪಡೆದಿರಬೇಕು.

ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು.

ಜನ್ಮ ದಿನಾಂಕ ಮತ್ತು ವಯಸ್ಸು ದಿ:11-05-2026 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯುಘ ದಿ:11-05-2006 ರಿಂದ ದಿ:11-03-2009 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು. ತರಬೇತಿಯನ್ನು ಬೆಳಗಾವಿಯಲ್ಲಿ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ರ‍್ಯಾಲಿಯಲ್ಲಿ 10ನೇ ತರಗತಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ & ಆದಾಯ ಪ್ರಮಾಣ ಪತ್ರಗಳ ಮೂಲ ದಾಖಲೆಗಳೊಂದಿಗೆ ಭಾಗವಹಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿರುತ್ತಾರೆ.

ತರಬೇತಿ ಅವಧಿಯು 4 ತಿಂಗಳುಗಳಾಗಿದ್ದು, ಅಭ್ಯರ್ಥಿಗಳಿಗೆ ತರಬೇತಿ ನೀಡಲು ತಗಲುವ ವಾಸ್ತವಿಕ ವೆಚ್ಚವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಭರಿಸಲಾಗುತ್ತದೆ. ಒಂದು ಜೊತೆ ಟ್ರಾಕ್ ಸೂಟ್, ಶೂ ಹಾಗೂ ದೈಹಿಕ ತರಬೇತಿಯ ಸಮವಸ್ತ್ರವನ್ನು ನೀಡಲಾಗುವುದು.

Backward Classes Welfare Department ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳು ಕಡ್ಡಾಯವಾಗಿ ತರಬೇತಿ ಕೇಂದ್ರದಲ್ಲಿಯೇ ಉಳಿದುಕೊಳ್ಳಬೇಕಾಗಿದ್ದು, ವಸತಿ ಮತ್ತು ಊಟದ ಸೌಲಭ್ಯವನ್ನು ಉಚಿತವಾಗಿ ನೀಡಲಾಗುವುದು. ತರಬೇತಿಯನ್ನು ಪೂರ್ಣಗೊಳಿಸದೆ ಮೊಟಕುಗೊಳಿಸಿದಲ್ಲಿ ಅಂತಹ ಅಭ್ಯರ್ಥಿಯ ತರಬೇತಿ ವೆಚ್ಚವನ್ನು ಆ ಅಭ್ಯರ್ಥಿ ಮತ್ತು ಅವರ ತಂದೆ/ತಾಯಿ/ಪೋಷಕರಿಂದ ವಸೂಲಿ ಮಾಡಲಾಗುವುದು.

ತರಬೇತಿಗೆ ಆಯ್ಕೆಯಾಗುವ ಅಭ್ಯಥಿಗಳಿಗೆ 4 ತಿಂಗಳ ಅವಧಿಯಲ್ಲಿ ದೈಹಿಕ ಸಹಿಷ್ಣುತೆ ಹಾಗೂ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0831-2225078 ಮತ್ತು 08182-2407221 ಗಳನ್ನು ಸಂಪರ್ಕಿಸುವುದು.

Kuvempu University ಪೊಲೀಸ್ ಮಹಾನಿರೀಕ್ಷಕ ಪಿ.ಎಸ್.ಹರ್ಷ ಅವರಿಗೆ ಕುವೆಂಪು ವಿವಿಯಿಂದ ಪಿಎಚ್ ಡಿ ಪದವಿ ಘೋಷಣೆ

0

Kuvempu University ಕುವೆಂಪು ವಿಶ್ವವಿದ್ಯಾನಿಲಯವು ಪೊಲೀಸ್ ಮಹಾನಿರೀಕ್ಷಕರಾದ ಹರ್ಷ ಪಿ.ಎಸ್ ಅವರಿಗೆ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದಲ್ಲಿನ ಸಂಶೋಧನೆಗಾಗಿ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್‌ಡಿ) ಪದವಿಯನ್ನು ಘೋಷಿಸಿದ್ದು, ಮೇ. 06 ರಂದು ಪಿ.ಹೆಚ್.ಡಿ. ಪ್ರದಾನ ಮಾಡಲಿದೆ.

ಕುವೆಂಪು ವಿಶ್ವವಿದ್ಯಾನಿಲಯದ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದ ಪ್ರಾಧ್ಯಾಪಕ ಡಾ. ವಿಜಯ ಕುಮಾರ್ ಅವರ ಮಾರ್ಗದರ್ಶನದಲ್ಲಿ ಹರ್ಷ ಪಿ.ಎಸ್ ಅವರು ಐದು ವರ್ಷಗಳ ಕಾಲ ಕ್ಷೇತ್ರ ಆಧಾರಿತ ಅಧ್ಯಯನವನ್ನು ನಡೆಸಿದ್ದಾರೆ.

“ನಾಗರಹೊಳೆ, ಬಂಡೀಪುರ ಮತ್ತು ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಹುಲಿಗಳ ಜನಸಂಖ್ಯೆಯ ಸ್ಥಿರತೆಯ ಕುರಿತು ಒಂದು ಅಧ್ಯಯನ, ಮಾನವ-ಹುಲಿ ಸಂಘರ್ಷಕ್ಕೆ ವಿಶೇಷ ಉಲ್ಲೇಖದೊಂದಿಗೆ” ಎಂಬ ಶೀರ್ಷಿಕೆಯ ಅವರ ಡಾಕ್ಟರೇಟ್ ಪ್ರಬಂಧವು ಈ ಸಂರಕ್ಷಿತ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದ ಕ್ಯಾಮೆರಾ ಟ್ರ್ಯಾಪಿಂಗ್ ಮತ್ತು ವಿವರವಾದ ಸಂಘರ್ಷ ತಾಣಗಳ ವಿಶ್ಲೇಷಣೆ ಸೇರಿದಂತೆ ತೀವ್ರವಾದ ಕ್ಷೇತ್ರಕಾರ್ಯವನ್ನು ಆಧರಿಸಿದೆ.

ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಔಪಚಾರಿಕವಾಗಿ ಅನುಮೋದಿಸಿ ಪದವಿ ನೀಡಿದೆ. 2026 ರ ಮೇ 6
ರಂದು ನಡೆಯಲಿರುವ ಕುವೆಂಪು ವಿಶ್ವವಿದ್ಯಾನಿಲಯದ ಘಟಿಕೋತ್ಸವ ಸಮಾರಂಭದಲ್ಲಿ ಪಿಎಚ್‌ಡಿ ಪ್ರಮಾಣಪತ್ರ ನೀಡಲಾಗುವುದು.

S. Madhu Bangarappa ಒಂದೇ ಸಮನೆ ಸುರಿದ ಮಳೆಯಿಂದ ಅನಾಹುತ, ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಸಚಿವ ಮಧು ಬಂಗಾರಪ್ಪ

0

S. Madhu Bangarappa ಬಿರುಗಾಳಿ ಮತ್ತು‌ ಮಳೆಯಿಂದ ಹಾನಿಗೊಳಗಾದ ಅಡಿಕೆ, ತೆಂಗು ತೋಟ ಸೇರಿದಂತೆ ಬೆಳೆ ಹಾನಿಯಾದ ರೈತರಿಗೆ ಮತ್ತು ಮನೆ ಕಳೆದುಕೊಂಡವರಿಗೆ ತಕ್ಷಣವೇ ಸೂಕ್ತ ಪರಿಹಾರ ಬಿಡುಗಡೆ ಮಾಡುವಂತೆ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನಡ ನೀಡಿದರು.
ಗಾಳಿ ಮಳೆ ಹಾನಿಗೊಳಗಾದ ಶಿವಮೊಗ್ಗ ಗ್ರಾಮಾಂತರ ಪ್ರದೇಶಗಳಿಗೆ ಭೇಟಿ ನೀಡಿ ಅವರು ಮಾತನಾಡಿದರು.
ಅರಹತೊಳಲು ಗ್ರಾಮದ ತೋಟಕ್ಕೆ ಭೇಟಿ ನೀಡಿ ಬಿರುಗಾಳಿ‌ ಮತ್ತು ಮಳೆಯಿಂದಾಗಿ ಧರೆಗುರುಳಿದ ಮರಗಳನ್ನು‌ ವೀಕ್ಷಿಸಿ, ಸಂತ್ರಸ್ತ ರೈತರೊಂದಿ ಮಾತನಾಡಿದರು. ಬಿರುಗಾಳಿಗೆ ಧರೆಗುರುಳಿದ ಅಡಿಕೆ ಮರಗಳು, ಹಾನಿಗೊಳಗಾದ ಮನೆಗಳು ವೀಕ್ಷಿಸಿದರು. ಸಂತ್ರಸ್ತ ರೈತರು ಮತ್ತು ಸಾರ್ವಜನಿಕರೊಂದಿಗೆ ಮಾತನಾಡಿ ಅಹವಾಲು ಸ್ವೀಕರಿಸಿದರು.
ನಂತರ ಅರಹತೊಳಲು ವಡ್ಡರಹಟ್ಟಿಗೆ ತೆರಳಿ ಬಿರುಗಾಳಿಗೆ ಹಾನಿಗೊಳಗಾದ ಮನೆಗಳು, ಕೊಟ್ಟಿಗೆಗಳನ್ನು‌ ವೀಕ್ಷಿಸ, ಮನೆಯವರೊಂದಿಗೆ ಮಾತನಾಡಿ, ಅಧಿಕಾರಿಗಳ ಬಳಿ ನಷ್ಟದ ಕುರಿತು ಮಾಹಿತಿ ಪಡೆದುಕೊಂಡು, ತ್ವರಿತ ಪರಿಹಾರಕ್ಕೆ ಕ್ರಮ ವಹಿಸಬೇಕೆಂದು ಸೂಚನೆ ನೀಡುದರು.
ಮಲ್ಲಿಗೇನಹಳ್ಳಿ‌ ಗ್ರಾಮದ ಹಾನಿಗೊಳಗಾದ ಅಡಿಕೆ ತೋಟಗಳನ್ನು ವೀಕ್ಷಿಸಿ
ತ್ವರಿತ ಪರಿಹಾರಕ್ಕೆ ಸೂಚನೆ: ಬಿರುಗಾಳಿ, ಮಳೆಗೆ ಹಾನಿಗೊಳಗಾದ ಬೆಳೆ ಮತ್ತು ಮನೆಗಳ ಮಹಜರ್ ನ್ನು ಶೀಘ್ರದಲ್ಲೇ ಕೈಗೊಂಡು ಸಲ್ಲಿಸಲು ತಿಳಿಸಿದ್ದೇನೆ. ವಿದ್ಯುತ್ ಕಡಿತವಾಗಿ ಕುಡಿಯುವ ನೀರಿಗೆ ತೊಂದರೆಯಾಗಿದ್ದು ತಕ್ಷಣವೇ
ಕುಡಿಯುವ ನೀರು ಮತ್ತು 36 ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ನೀಡುವಂತೆ ಮೆಸ್ಕಾಂ‌ಗೆ ಸೂಚನೆ ನೀಡಿದ್ದೇನೆ
ಅರಹತೊಳಲಿನಲ್ಲಿ ಓರ್ವ ವ್ಯಕ್ತಿ ಸಾವು ಆಗಿದ್ದು ಕಾರಣ ತಿಳಿದು ವರದಿ ನೀಡಲು ಸೂಚನೆ ನೀಡಿದ್ದೇನೆ.
ನಷ್ಟದ ಕುರಿತು ಸಮಗ್ರ ವರದಿ ನೀಡುವಂತೆ ಕಂದಾಯ ಇಲಾಖೆ, ಗ್ರಾ.ಪಂ. ವಿಪತ್ತು ನಿರ್ವಹಣೆ ಇಲಾಖೆ ಸೇರಿದಂತೆ ಸಮನ್ವಯ ಸಾಧಿಸಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ನಾನು ಖುದ್ದಾಗಿ ಹಾನಿ‌ಗೆ ಪರಿಹಾರ ನೀಡುವ ಕುರಿತು‌ ಮಾನ್ಯ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ. ವಡ್ಡರಹಟ್ಟಿ ಭಾಗದ ಹಲವು ಮನೆಗಳಿಗೆ ಇದುವರೆಗೆ ಗ್ರಾ.ಪಂ. ಯಿಂದ ಹಕ್ಕುಪತ್ರ ಲಭ್ಯವಾಗಿಲ್ಲ ಹಕ್ಕು‌ಪತ್ರ ನೀಡುವಂತೆ ಮನವಿ‌ಮಾಡಿದ್ದು ಈ ಕುರಿತು ಅಧಿಕಾರಿಗಳಿಗೆ ಪರಿಶೀಲಿಸಿ ಕ್ರಮ ವಹಿಸುವಂತೆ ಸೂಚನೆ ನೀಡಿದರು.
ಮಳೆಗಾಲದಲ್ಲಿ ಮನೆ ಸುತ್ತ ಮುತ್ತ ದುರ್ಬಲ‌ ಮರಗಳು, ಮನೆಗಳ ಶೀಟ್ ಚಾವಣಿಗಳ ಬಗ್ಗೆ ಸಾರ್ವಜನಿಕರು ಸಹ ಎಚ್ಚರಿಕೆ ವಹಿಸಬೇಕು. ಆಗ ಅದರಿಂದಾಗುವ ಅನಾಹುತ ತಪ್ಪಿಸಬಹುದೆಂದು ತಿಳಿಸಿದರು.
ಮಳೆಯಿಂದ ಮನೆ ಕಳೆದುಕೊಂಡವರಿಗೆ ಮತ್ತು ಬೆಳೆ ಹಾನಿಯಾದ ರೈತರಿಂದ ಮಾಹಿತಿ‌ ಪಡೆದು ವರದಿ ತಯಾರಿಸಿ, ತಕ್ಷಣವೇ ಸೂಕ್ತ ಪರಿಹಾರ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮತ್ತು ತಹಶೀಲ್ದಾರರಿಗೆ ಸ್ಥಳದಲ್ಲೇ ಸೂಚನೆ ನೀಡಿದರು. ಯಾವುದೇ ವಿಳಂಬವಿಲ್ಲದೆ ವೈಜ್ಞಾನಿಕವಾಗಿ ಹಾನಿ ಸಮೀಕ್ಷೆ ನಡೆಸಲು ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದರು .
ಬಿರುಗಾಳಿಯಿಂದಾಗಿ ಅನೇಕ ಕಡೆ ವಿದ್ಯುತ್ ಕಂಬಗಳು ಬಿದ್ದಿದ್ದು, ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಿದೆ. ಇದನ್ನು ಯುದ್ಧೋಪಾದಿಯಲ್ಲಿ ಸರಿಪಡಿಸಿ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಮೆಸ್ಕಾಂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸರ್ಕಾರವು ಸಂತ್ರಸ್ತರ ಪರವಾಗಿದೆ. ಪ್ರಕೃತಿ ವಿಕೋಪದಿಂದ ಉಂಟಾದ ನಷ್ಟಕ್ಕೆ ನಿಯಮಾನುಸಾರ ಗರಿಷ್ಠ ಪರಿಹಾರ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳು ತಳಮಟ್ಟದಲ್ಲಿ ಕೆಲಸ ಮಾಡಿ ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸಬೇಕು,” ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ
ಜಿಲ್ಲಾಧಿಕಾರಿಗಳಾದ(ಪ್ರ) ಹೇಮಂತ್ ಎನ್, , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಎಸಿ ಸತ್ಯನಾರಾಯಣ, ತಹಶಿಲ್ದಾರರು, ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಮೇ.1. ಬುದ್ಧಜಯಂತಿ ಆಚರಣೆ, ಜಿಲ್ಲಾಡಳಿತದಿಂದ ಮಾಹಿತಿ

0


ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮೇ 01 ರ ಬೆಳಗ್ಗೆ 11.00 ಕ್ಕೆ ಕುವೆಂಪು ರಂಗಮಂದಿರದಲ್ಲಿ ಭಗವಾನ್ ಶ್ರೀ ಬುದ್ಧರ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.ಸಾಗರದ ಸಿರಿವಂತೆ – “ಚಿತ್ರಸಿರಿ”, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಎನ್. ರವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ ಎಂದು ತಿಳಿಸಿದೆ.

ಶಿವಮೊಗ್ಗದ ಎಂ.ಎನ್.ವೆಂಕಟೇಶ್ ಅವರಿಂದ 80 ನೇ ಬಾರಿಗೆ ರಕ್ತದಾನ

0

ಭಾವಸಾರ ವಿಷನ್ ಪ್ರೇರಣಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ, ರೋಟರಿ ಶಿವಮೊಗ್ಗದ ಸ್ಥಾಪಕ, ಫ್ರೆಂಡ್ಸ್ ಸೆಂಟರ್ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ, ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ಎಂ.ಎನ್.ವೆಂಕಟೇಶ ರವರು ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಇಂದು ಎಂ.ಎನ್.ವೆಂಕಟೇಶ ರವರು ಜೆಪಿಎನ್ ರಸ್ತೆಯಲ್ಲಿನ ರೆಡ್ ಕ್ರಾಸ್ ಸಂಜೀವಿನಿ ರಕ್ತನಿಧಿಯಲ್ಲಿ 80ನೇ ಬಾರಿ ರಕ್ತದಾನ ಮಾಡಿ ಮಾನವೀಯತೆಯನ್ನು ಮೆರೆದಿದ್ದಾರೆ. ನಿರಂತರವಾಗಿ ರಕ್ತದಾನ ಮಾಡುತ್ತಾ ಹಾಗೂ ರಕ್ತದಾನದ ಬಗ್ಗೆ ಸ್ನೇಹಿತರಿಗೆ ಬಂಧುಗಳಿಗೆ ಜಾಗೃತಿ ಮಾಡಿಸಿ ಅವರಿಗೂ ರಕ್ತದಾನ ಮಾಡಲು ಪ್ರೇರೇಪಿಸುತ್ತಿರುವ ಎಂ.ಎನ್.ವೆಂಕಟೇಶ ರವರು ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇದೇ ಸಂದರ್ಭದಲ್ಲಿ 120 ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಧರಣೇಂದ್ರ ದಿನಕರ ಉಪಸ್ಥಿತರಿದ್ದರು.

Rotary Shivamogga ಸಂಘ ಸಂಸ್ಥೆಗಳು ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಕರ್ಯ ಒದಗಿಸಬೇಕು- ಕೆ.ಫಾಲಾಕ್ಷ

0

Rotary Shivamogga ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದು ಅವಶ್ಯಕ ಎಂದು ರೋಟರಿ ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ ಹೇಳಿದರು.

ಸೋಗಾನೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಸಂಘ ಸಂಸ್ಥೆಗಳು ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಕರ್ಯಗಳ ನೆರವು ಒದಗಿಸಬೇಕು ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಲಿ ಎಂದು ಆಶಿಸಿದರು. ಶಾಲೆಗೆ 3 ಬೋರ್ಡ್, 25 ಡಿಕ್ಷನರಿ, 50 ನೋಟ್ ಪುಸ್ತಕಗಳನ್ನು ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ವಿತರಿಸಲಾಯಿತು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಡಿ.ಕಿಶೋರ್‌ಕುಮಾರ್ ಮಾತನಾಡಿ, ಗ್ರಾಮೀಣ ಶಾಲೆಗಳಿಗೆ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಹೆಚ್ಚಿನ ಸೌಕರ್ಯಗಳನ್ನು ಒದಗಿಸುತ್ತದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಮುಖ್ಯಶಿಕ್ಷಕಿ ಸುಮತಿ ಕುಮಾರಸ್ವಾಮಿ ಮಾತನಾಡಿ, ಗ್ರಾಮೀಣ ಭಾಗದ ಶಾಲೆಗಳನ್ನು ಗುರುತಿಸಿ ಮಕ್ಕಳಿಗೆ ಅನುಕೂಲ ಒದಗಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ಹೇಳಿದರು.

Rotary Shivamogga ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಬಿ.ಆರ್.ಧನಂಜಯ ಮಾತನಾಡಿ, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ವ್ಯವಸ್ಥೆ ಕಲ್ಪಿಸಲು ಶ್ರಮಿಸುತ್ತಿರುವ ಶಿಕ್ಷಕರ ಕೊಡುಗೆ ಅಪಾರ ಎಂದು ತಿಳಿಸಿದರು.

ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್, ಶ್ರೀಕಾಂತ್, ಡಾ. ಗುಡದಪ್ಪ ಕಸಬಿ, ಗಣೇಶ್, ಲಕ್ಷ್ಮಣ್, ಸಹಾಯಕ ಗವರ್ನರ್ ಲಕ್ಷ್ಮಣ ಗೌಡ, ವಲಯ ಸೇನಾನಿ ಕಿರಣ್‌ಕುಮಾರ್, ವಲಯ ಕಾರ್ಯದರ್ಶಿ ರಾಧಕೃಷ್ಣ, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.

Kuvempu University ಕುವೆಂಪು ವಿವಿ, ಸಮಾಜಕಾರ್ಯ ವಿಭಾಗದಿಂದ ಪ್ರಶಿಕ್ಷಣ ಶಿಬಿರ

0

Kuvempu University ಕುವೆಂಪು ವಿಶ್ವವಿದ್ಯಾಲಯ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದಿಂದ ಕೋಮಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರ ಕಾಚಗೊಂಡನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾದ ಸಮಾಜಕಾರ್ಯ ಗ್ರಾಮೀಣ ಶಿಬಿರದ ಗ್ರಾಮೀಣ ಜನರ ಸಹಭಾಗಿತ್ವದೊಂದಿಗೆ ಸಮುದಾಯದ ಮೌಲ್ಯಮಾಪನ ಮತ್ತು ಸಮಸ್ಯೆಗಳ ಪರಿಹಾರಕ್ಕಾಗಿ ಸಂಪನ್ಮೂಲ ವ್ಯಕ್ತಿಗಳಾದ ಮಿತ್ರ ಆಪ್ತಸಮಾಲೋಚಕರು ಮತ್ತು ತುಮಕೂರು ತರಬೇತಿ ಕೇಂದ್ರ ಅಧ್ಯಕ್ಷರಾದ ಪಾವಟೆ ಉಪನ್ಯಾಸ ನೀಡಿದರು. ಕಾರ್ಯಕ್ರಮವು ಪ್ರಶಿಕ್ಷಣಾರ್ಥಿಗಳ ಭವಿಷ್ಯವನ್ನು ಉಜ್ವಲವಾಗಿ ರೂಪಿಸಿಕೊಳ್ಳಲು ಉತ್ತಮ ಮಾರ್ಗದರ್ಶನ ನೀಡಿದರು. ಸಂದರ್ಭದಲ್ಲಿ ಗ್ರಾಮಸ್ಥರು, ಸಮಾಜಕಾರ್ಯ ವಿಭಾಗದ ಪ್ರಶಿಕ್ಷಣಾರ್ಥಿಗಳು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

Dream Dance Academy ಸಂಗೀತ ಮತ್ತು ನೃತ್ಯದಂತಹ ಕಲೆಗಳು ಮಕ್ಕಳ ಮನೋವಿಕಾಸಕ್ಕೆ ಪೂರಕ- ಫಾ.ರಾಬರ್ಟ್ ಡಿ’ ಮೆಲ್ಲೊ

0

Dream Dance Academy ಸಂಗೀತ ಮತ್ತು ನೃತ್ಯದಂತಹ ಕಲೆಗಳು ಮಕ್ಕಳ ಮನೋವಿಕಾಸಕ್ಕೆ ಪೂರಕವಾಗಿದ್ದು, ಪೋಷಕರಾದವರು ಮಕ್ಕಳ ಮೇಲೆ ಒತ್ತಡ ಹೇರುವುದು ಸಲ್ಲದು ಎಂದು ಹೊಸಪೇಟೆ ಬಡಾಣವೆಯ ಸಂತ ಸೆಬಾಸ್ಟಿಯನ್ ಚರ್ಚ್ನ ಧರ್ಮಗುರು ಫಾದರ್ ರಾಬರ್ಟ್ ಡಿ’ಮೆಲ್ಲೋ ಹೇಳಿದರು.
ಪಟ್ಟಣದ ರಂಗಮಂದಿರದಲ್ಲಿ ಡ್ರೀಮ್ ಡ್ಯಾನ್ಸ್ ಅಕಾಡೆಮಿಯ ದಶಮಾನೋತ್ಸವ ಅಂಗವಾಗಿ ಹಮ್ಮಿಕೊಂಡ ಸೊರಬ ನೃತ್ಯೋತ್ಸವ-2026 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಲೆಗಳಲ್ಲಿ ತೊಡಗುವುದರಿಂದ ಮಕ್ಕಳಲ್ಲಿ ಸೋದರತೆಯ ಬಾಂಧವ್ಯದ ಜೊತೆ ಉತ್ತಮ ಸಂಸ್ಕಾರ ಮತ್ತು ಸ್ಪರ್ಧಾತ್ಮಕ ಮನೋಭಾವ ಬೆಳೆಯುತ್ತದೆ. ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಿದಾಗ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಲಿದ್ದಾರೆ. ಗ್ರಾಮೀಣ ಭಾಗದ ಅನೇಕ ಪ್ರತಿಭೆಗಳನ್ನು ರಾಜ್ಯ ಮಟ್ಟಕ್ಕೆ ಪರಿಚಯಿಸಿದ ಕೀರ್ತಿ ಡಿಡಿ ಅಕಾಡೆಮಿಗೆ ಸಲ್ಲುತ್ತದೆ ಎಂದರು.
ಸಮಾಜ ಸೇವಕ ಡಾ. ಎಚ್.ಇ. ಜ್ಞಾನೇಶ್ ಮಾತನಾಡಿ, ಮಕ್ಕಳನ್ನು ಅಂಕಗಳಿಕೆಗೆ ಮಾತ್ರ ಸೀಮಿತಗೊಳಿಸದೇ ಅವಲ್ಲಿನ ಸೃಜನಾತ್ಮಕ ಕಲೆಗಳನ್ನು ಗುರುತಿಸಬೇಕು. ಈ ಮೂಲಕ ಅವರನ್ನು ಸಮಾಜದ ಸತ್ಪçಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಇದೆ. ಮಕ್ಕಳನ್ನು ಸಂಸ್ಕಾರವAತರನ್ನಾಗಿಸಿದಾಗ ವೃದ್ಧಾಶ್ರಮಗಳ ಸಂಖ್ಯೆ ಕುಂಠಿತವಾಗಲಿದೆ ಎಂದರು.
ಡ್ರೀಮ್ಸ್ ಡ್ಯಾನ್ಸ್ ಅಕಾಡೆಮಿ ಮುಖ್ಯಸ್ಥ ಹಾಗೂ ಡ್ಯಾನ್ಸ್ ಮಾಸ್ಟರ್ ಸ್ಟೀವನ್ ಮಾತನಾಡಿ, ನ್ಯತ್ಯ ತರಬೇತಿ ಸಂಸ್ಥೆಯನ್ನು ಆರಂಭಿಸಿದಾಗ ಹಲವಾರು ಸಮಸ್ಯೆಗಳು ಎದುರಾದವು. ಅವುಗಳನ್ನು ನಿವಾರಿಸಿಕೊಂಡು ನೂರಾರು ವಿದ್ಯಾರ್ಥಿಗಳಿಗೆ ನ್ಯತ್ಯವನ್ನು ಕಲಿಸಲಾಗಿದೆ. ಕೋವಿಡ್ ನಂತಹ ಸಂದರ್ಭದಲ್ಲಿ ಸಂಸ್ಥೆಯನ್ನು ನಡೆಸುವುದೇ ದುಸ್ಥರವಾಗಿತ್ತು. ಈ ವೇಳೆ ಉದ್ಯಮಿ ನಾಗರಾಜ ಗುತ್ತಿ ಅವರು ಮಾಡಿದ ಸಹಾಯವನ್ನು ಮರೆಯುವಂತಿಲ್ಲ. ಅಲ್ಲದೇ, ಹೊಸಪೇಟೆ ಬಡಾವಣೆಯ ಪರಶುರಾಮ್ ಮತ್ತು ವಿದ್ಯಾರ್ಥಿಗಳ ಪೋಷಕರ ಸಹಕಾರದಿಂದ ಸಂಸ್ಥೆಯು ಹತ್ತು ವರ್ಷಗಳನ್ನು ಪೂರೈಸಿ ಮುನ್ನೆಡೆಯುತ್ತಿರುವುದು ಸಂತಸ ತಂದಿದೆ ಎಂದರು.
Dream Dance Academy ಇದೇ ಸಂದರ್ಭದಲ್ಲಿ ಕಿರುತೆರೆ ಕಲಾವಿದೆ ಅನಘಾ, ಸಂಸ್ಥೆಯ ಹಳೇ ವಿದ್ಯಾರ್ಥಿಗಳಾದ ನಿವೇದಿತಾ ಹಾಗೂ ಸ್ಪಂದನಾ, ಶಿವಮೊಗ್ಗದ ಡ್ಯಾನ್ಸ್ ಸ್ಟೆಪ್ ಹೋಲ್ಡರ್‌ನ ಅರುಣ್ ರಾಜ್ ಶೆಟ್ಟಿ, ನೃತ್ಯ ತರಬೇತುದಾರರಾದ ಪ್ರಶಾಂತ್, ಮೂರ್ತಿ ಅವರನ್ನು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಸಂಸ್ಥೆಯ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ನಡೆಯಿತು.
ಡ್ಯಾನ್ಸ್ ಸ್ಟೆಪ್ ಹೋಲ್ರ‍್ಸ್ನ ಅರುಣ್ ರಾಜ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗುಂಡಶೆಟ್ಟಿಕೊಪ್ಪದ ಜ್ಞಾನ ಸಹ್ಯಾದಿ ಇಂಟರ್‌ನ್ಯಾಷನಲ್ ಸ್ಕೂಲ್‌ನ ಪ್ರಾಂಶುಪಾಲೆ ಡಾ. ಮೋನಿಕಾ ಡಿಸೋಜಾ, ಸಮಾಜ ಸೇವಕ ಶಂಕರ್ ಶೇಟ್, ರೋಟರಿ ಕ್ಲಬ್ ಅಧ್ಯಕ್ಷ ಜೆ.ಎಸ್. ಮಹಾಂತೇಶ್, ಮಾಜಿ ಅಧ್ಯಕ್ಷ ರಾಜು ಹಿರಿಯಾವಲಿ, ಉದ್ಯಮಿ ನಾಗರಾಜ ಗುತ್ತಿ, ಡಿ.ಎಸ್. ಪ್ರಶಾಂತ್ ದೊಡ್ಮನೆ ಸೇರಿದಂತೆ ಇತರರಿದ್ದರು. ನಾಗರಾಜ್ ಸಂಜನ್, ಕವನಾ ನಿರ್ವಹಿಸಿದರು.