Thursday, August 6, 2026
Thursday, August 6, 2026
Home Blog Page 80

ಜೂನ್ 1 ಶಾಲಾರಂಭಕ್ಕೆ ಹಬ್ಬದ ಮೆರುಗು

0

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 2026-27 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಆರಂಭೋತ್ಸವವು ಜೂನ್‌ 1 ರಂದು ನಡೆಯಲಿದ್ದು, ಹಬ್ಬದಂತೆ ಆರಂಭೋತ್ಸವ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಶಾಲೆಗಳನ್ನು ಸ್ವಚ್ಛಗೊಳಿಸಿ, ತಳಿರು ತೋರಣಗಳಿಂದ ಅಲಂಕರಿಸಲಾಗುತ್ತದೆ. ಅಕ್ಷರ ದಾಸೋಹದ ಕಾರ್ಯಕ್ರಮದಡಿ ಮಧ್ಯಾಹ್ನದ ಬಿಸಿ ಊಟದ ಕಾರ್ಯಕ್ರಮವನ್ನು ಶುಚಿಯಾದ ಮತ್ತು ರುಚಿಯಾದ ಸಿಹಿ ಊಟದೊಂದಿಗೆ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

Klive Special Article ಭಕ್ತಿಭಾವಗಳಿಂದ ಜಗದ್ಗುರುಗಳನ್ನ ಬೀಳ್ಕೊಟ್ಟ ನೇಪಾಳ ಭಕ್ತವೃಂದ

0

ವಿಶೇಷ ವರದಿ: ಪ್ರಭಾಕರ ಕಾರಂತ.

Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳು ಹತ್ತುದಿನದ ಯಶಸ್ವೀ ಧರ್ಮ ವಿಜಯ ಯಾತ್ರೆ ನೇಪಾಳದಲ್ಲಿ ಮುಗಿಸಿ ಶೃಂಗೇರಿಯತ್ತ ಮರು ಪ್ರಯಾಣ ಆರಂಭಿಸಿದ್ದಾರೆ.ಈ ಯಾತ್ರೆ ಭಾರತ ಮತ್ತು ನೇಪಾಳ ಎಂಬ ಎರಡು ಪುಣ್ಯ ಭೂಮಿಗಳ‌ ಧಾರ್ಮಿಕ ಸಂಪರ್ಕವನ್ನು ಗಟ್ಟಿಗೊಳಿಸಿತು.ಸನಾತನ ಧರ್ಮದ ತ್ಯಾಗ, ತಪಸ್ಸು, ಶಾಂತಿ, ಸಹಬಾಳ್ವೆ,ಆಸ್ತಿಕತೆ,ಸಂದೇಶವನ್ನು
ವಿಶ್ವಕ್ಕೆ ನೇಪಾಳದ ಪುಣ್ಯ ಭೂಮಿಯಲ್ಲಿ ನಿಂತು ಜಗದ್ಗುರುಗಳು ಸಾರಿದರು.ಶಂಕರ ಭಗವತ್ಪಾದರ‌ ಅದ್ವೈತ ತತ್ವವನ್ನು ನೇಪಾಳದ ಆಸ್ತಿಕ ಜನರಲ್ಲಿ ಪುನರುತ್ಥಾನ ಮಾಡಿದರು.ಧರ್ಮದ ಮೂಲಕ ಎರಡೂ ನಾಡಿನ ಬೆಸುಗೆಯನ್ನು ಗಟ್ಟಿಗೊಳಿಸಿದರು.
ತಮ್ಮ ಭವ್ಯ ಗುರುಪರಂಪರೆಯ ಸಮಸ್ತ ತಪೋಬಲದಿಂದ ನೇಪಾಳದ ಸನಾತನ ಅಂತರಾತ್ಮ ಜಾಗೃತಗೊಳಿಸಿದರು.ಅವರ ಉಪದೇಶಗಳು ಜ್ಞಾನಾಮೃತ ವರ್ಷ ವೃಷ್ಟಿ ಮಾಡಿತು.
ಆವರು ಪಾದಸ್ಪರ್ಶವಾದಲ್ಲೆಲ್ಲಾ ಆಧ್ಯಾತ್ಮಿಕತೆ ಪುಟಿದೆದ್ದಿತು.ಕಾಳೀ ಸಪ್ತ ಸಂಗಮದಲ್ಲಿ ಪವಿತ್ರ ತೀರ್ಥಸ್ನಾನ ಮಾಡಿ ಪವಿತ್ರ ಚಕ್ರಶಿಲೆ ಎಂಬ ಮಹಾಕಾಯ ಏಕಶಿಲೆಯ ಮೇಲೆ ವಿರಾಜಮಾನನಾದ ಪರಶಿವನನ್ನು ಪೂಜಿಸಿ ಲೋಕ ಸುರಕ್ಷತೆಯ ಭರವಸೆ ಮೂಡಿಸಿದರು.ದೇವಘಾಟ್ ದಾಮದ ವಸಿಷ್ಠ ಗುಹೆಯಲ್ಲಿ ನಿಂತು ಯೋಗಾ ವಾಸಿಷ್ಠದ ದಿವ್ಯ ಸನ್ನಿವೇಶವನ್ನು ಸ್ಮರಣೆಗೆ ತಂದರು.
ವಾಪಾಸು ತೆರಳುವ ಮುನ್ನಾದಿನ ಅವರು ನೇಪಾಳದ ರಾಜಧಾನಿ ಕಾಟ್ಮಂಡು ತಲುಪಿದಾಗ ಪಶುಪತಿನಾಥನ ಈ ದಿವ್ಯ ಕ್ಷೇತ್ರದಲ್ಲಿ ಹಬ್ಬದ ವಾತಾವರಣ ನಿರ್ಮಾಣ ಆಗಿತ್ತು.ಅಂದು ರಾತ್ರಿ ನಡೆದ ಚಂದ್ರಮೌಳೀಶ್ವರ ಪೂಜೆಯನ್ನು ಹೃದಯ ತುಂಬಿಕೊಳ್ಳಲು ಅಸಂಖ್ಯ ಭಕ್ತರು ನೆರೆದಿದ್ದರು.
ಜಗದ್ಗುರುಗಳು ನೇಪಾಳದಲ್ಲಿ ಆರ್ಷೇಯ ವಿದ್ಯೆಯ ಉನ್ನತಿಗೆ ಶೃಂಗೇರಿಯ ಸಹಾಯಹಸ್ತ ಒದಗಿಸಿದರು.ತಮ್ಮ ಗುರುಗಳು ಮತ್ತು ಪರಮ ಗುರುಗಳ ನೆನಪಿನಲ್ಲಿ ವೇದ ವಿದ್ಯೆಯನ್ನು ಆರಿಸಿ ಸಾಧಿಸಿದವರಿಗೆ ಅನವರತ ಪ್ರೋತ್ಸಾಹ ನೀಡುವ ವಾಗ್ದಾನ ಇತ್ತರು.ಭಗವತ್ಪಾದರ ಸಭಾಂಗಣ ನಿರ್ಮಾಣಕ್ಕೆ ಆಶೀರ್ವಾದಿಸಿದರು.ನೇಪಾಳದಲ್ಲಿ ಶೃಂಗೇರಿಯ ಶಂಕರಮಠ ಆರಂಭಕ್ಕೆ ತಮ್ಮ ಗುರುಗಳಲ್ಲಿ ಪ್ರಾರ್ಥಿಸುವ ವಾಗ್ದಾನವಿತ್ತರು.
Klive Special Article ಸನ್ನಿಧಾನಂಗಳು ಯಾತ್ರೆಯ ಕಡೆಯಲ್ಲಿ ನೀಡಿದ ಸಂದೇಶವಂತೂ ಕಣ್ತೆರೆಸುವಂತಿತ್ತು.”ಈ ಧರ್ಮ ವಿಜಯ ಯಾತ್ರೆ ತಮ್ಮ ಗುರುಗಳ ಆಜ್ಞೆಯಂತೆ ಆವರ ಆಶೀರ್ವಾದದಿಂದಲೇ ನಡೆದಿದೆ.ಈ ಯಾತ್ರೆಗೆ ಭಾರತದ ಸರ್ಕಾರ ಅದರಲ್ಲೂ ವಿಶೇಷವಾಗಿ ಪ್ರಧಾನಮಂತ್ರಿ ಕಾರ್ಯಾಲಯ,ಗೃಹ, ವಿಮಾನಯಾನ,ವಿದೇಶಾಂಗ ಸಚಿವಾಲಯ, ದೆಹಲಿಯ ನೇಪಾಳದ ರಾಯಭಾರ ಕಚೇರಿ, ನೇಪಾಳದ ಸರ್ಕಾರ,ಅಲ್ಲಿನ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿ, ಸಂಸ್ಕೃತಿ ಇಲಾಖೆ, ಭಾರತದ ರಾಯಭಾರಿ ಕಚೇರಿ, ನೇಪಾಳದ ರಕ್ಷಣಾ ಇಲಾಖೆ, ಪೊಲೀಸ್ ಇಲಾಖೆ ಮತ್ತು ಎಲ್ಲ ಭಕ್ತರೂ ಸಹಯೋಗ ನೀಡಿದ್ದಾರೆ.ಅವರೆಲ್ಲರಿಗೂ ಶಾರದಾ ಚಂದ್ರಮೌಳೀಶ್ವರ ಮತ್ತು ನಮ್ಮ ಗುರುಗಳ ಆಶೀರ್ವಾದ ದೊರೆಯಲಿ.ನೇಪಾಳ ಭಾರತ ಭಾಂದವ್ಯ ಗಟ್ಟಿಗೊಳ್ಳಲಿ.ಇಲ್ಲಿನ ನಾಗರೀಕರು ದೇಶದ ಏಳ್ಗೆಗೆ ಶ್ರಮಿಸಬೇಕು.ಒಗ್ಗಟ್ಟು ಕಾಯ್ದುಕೊಳ್ಳಬೇಕು.ಮಕ್ಕಳು ಮತ್ತು ಯುವಕರೇ ದೇಶದ ಆಸ್ತಿ.ಯುವಕರು ನೇಪಾಳವನ್ನು ಸಮರ್ಥವಾಗಿ ಮುನ್ನೆಡೆಸಬೇಕು.”
ಹೀಗೆ ಸಂದೇಶ ನೀಡುವ ಮೂಲಕ ಅವರು ನೇಪಾಳದ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದರು.ನೇಪಾಳದಿಂದ ಭಕ್ತರು ಹಲವು ಬಾರಿ ಶೃಂಗೇರಿಗೆ ಬಂದು ಜಗದ್ಗುರುಗಳನ್ನು ಆಹ್ವಾನಿಸಿದ್ದರು.ಅಂತೂ ಮೂರನೇ ಬಾರಿಗೆ ಯಾತ್ರೆ ಯಶಸ್ವಿಯಾಗಿ ನಡೆಯಿತು.ಈ ದೇಶದ ಜನರ ಶ್ರದ್ಧೆ ಮತ್ತು ಭಕ್ತಿ ನೋಡಿದರೆ ಆಗಾಗ ಈ ದೇಶಕ್ಕೆ ಬರುತ್ತಿರಬೇಕು ಎಂದು ಅನಿಸಿದೆ ಎಂದು ಅನುಗ್ರಹ ಭಾಷಣದಲ್ಲಿ ಜಗದ್ಗುರುಗಳು ಹೇಳಿದ್ದರು.ಅಲ್ಲಿನ ಆಸ್ತಿಕರು ಇದನ್ನೇ ಸ್ಮರಣೆಗೆ ತಂದುಕೊಳ್ಳುತ್ತಾ ಜಗದ್ಗುರುಗಳ ಪುನರಾಗಮನಕ್ಕೆ ಭಕ್ತಿಯಿಂದ ಕಾಯುವುದಂತೂ ಸತ್ಯ.

ಗೋಪಾಲಗೌಡ ಬಡಾವಣೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

0

ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯ ಎ. ಬ್ಲಾಕ್ ನಿವಾಸಿಗಳ ಸಂಘದ ವತಿಯಿಂದ ಸುಬ್ಬಯ್ಯ ಮೆಡಿಕಲ್ ಕಾಲೇಜ್ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ಶಿಬಿರವನ್ನು
ಶಿವಮೊಗ್ಗ -ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಉದ್ಘಾಟಿಸಿದರು.
. ಈ ಸಂದರ್ಭದಲ್ಲಿ ಬಡಾವಣೆ ನಿವಾಸಿಗಳು ಉಚಿತ ಆರೋಗ್ಯ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.

ರಸ್ತೆಗೆ ಅಡ್ಡಬಿದ್ದ ಅಡಿಕೆಮರಕ್ಕೆ ಬೈಕ್ ಡಿಕ್ಕಿ, ಸವಾರ ಸಾವು

0

ಶಿವಮೊಗ್ಗ ಜಿಲ್ಲೆಯಲ್ಲಿ ದುರ್ಘಟನೆ ಸಂಭವಿಸಿದೆ. ರಸ್ತೆಗೆ ಏಕಾಏಕಿ ಬಿದ್ದಿದ್ದ ಅಡಿಕೆ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಬಾಳಗಾರು ಸಮೀಪ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬಾಳಗಾರು ಸಮೀಪ ಈ ದುರ್ಘಟನೆ ನಡೆದಿದೆ. ಮಾಯಕ್ಕಣ್ಣನ್ (55) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಮೃತರು ಬೈಕ್‌ನಲ್ಲಿ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ವೇಳೆ, ರಸ್ತೆಗೆ ಏಕಾಏಕಿ ಬಿದ್ದಿದ್ದ ಅಡಿಕೆ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್‌ನಿಂದ ಕೆಳಗೆ ಬಿದ್ದ ಅವರು ಗಂಭೀರವಾಗಿ ಗಾಯಗೊಂಡಿದ್ದರು.

ಘಟನೆಯ ಬಳಿಕ ಸ್ಥಳೀಯರು ಹಾಗೂ ಸಾರ್ವಜನಿಕರು ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಈ ದುರ್ಘಟನೆ ಕಳೆದ ಸಂಜೆ ನಡೆದಿದ್ದು, ಪ್ರಕರಣ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ನಿರಂತರ ಮಾದಕವಸ್ತು ‌ಕಳ್ಳಸಾಗಣೆ, ಸಮಾಜಘಾತುಕ ಚಟುವಟಿಕೆ ನಡಸಿದರೆ ಪಿಐಟಿ ಎನ್ ಡಿಪಿಎಸ್ ಕಾಯಿದೆ ಪ್ರಕಾರ ದಸ್ತಗಿರಿ

0

ಯಾವುದೇ ವ್ಯಕ್ತಿ ನಿರಂತರವಾಗಿ ಮಾದಕ ವಸ್ತುಗಳ ಕಳ್ಳಸಾಗಣೆ ಮತ್ತು ಮಾರಾಟದಲ್ಲಿ ತೊಡಗಿದ್ದರೆ, ಇಂತಹ ಸಮಾಜ ಘಾತುಕ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ, PIT NDPS Act ನ ಅಡಿಯಲ್ಲಿ Preventive Detention ಆದೇಶದ ನಂತರ ಆತನನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುತ್ತದೆ ಎಂದು‌ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯ ಪ್ರಕಟಣೆ ಜಾಲತಾಣದಲ್ಲಿ ಮಾಹಿತಿ‌ ನಿಡಿದೆ.

Department of Mining Geology ಅಕ್ರಮ ಮರಳುಗಾರಿಕೆ ದಂಧೆ: ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ದಾಳಿ.

Department of Mining Geology ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.

ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ಅಕ್ರಮ ಮರಳುಗಾರಿಕೆ ಕುರಿತು ನಿರಂತರವಾಗಿ ದೂರುಗಳು ಕೇಳಿಬಂದ ಹಿನ್ನೆಲೆ, ಲೋಕಾಯುಕ್ತ ನ್ಯಾಯಮೂರ್ತಿಗಳ ಆದೇಶದ ಮೇರೆಗೆ ಇಂದು ಶಿವಮೊಗ್ಗ ಜಿಲ್ಲೆಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.

ತೀರ್ಥಹಳ್ಳಿ, ಸಾಗರ, ಹೊಸನಗರ, ಭದ್ರಾವತಿ ಹಾಗೂ ಶಿವಮೊಗ್ಗ ಗ್ರಾಮಾಂತರ ಪ್ರದೇಶಗಳಲ್ಲಿ ಸುಮಾರು 15 ಸದಸ್ಯರ ಲೋಕಾಯುಕ್ತ ತಂಡ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

Department of Mining Geology ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಯುತ್ತಿರುವ ಪ್ರದೇಶಗಳು ಹಾಗೂ ಸಂಗ್ರಹಿಸಿ ಇಡಲಾಗಿದ್ದ ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಸ್ಥಳೀಯ ಮಟ್ಟದಲ್ಲಿ ಮಾಹಿತಿ ಸಂಗ್ರಹಿಸಿದರು.

ಇದೇ ವೇಳೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಚೇರಿಗೂ ಭೇಟಿ ನೀಡಿದ ತಂಡ, ಸಂಬಂಧಿತ ಕಡತಗಳು ಹಾಗೂ ದಾಖಲೆಗಳನ್ನು ಪರಿಶೀಲಿಸಿತು.

ಕಾರ್ಯಾಚರಣೆಯ ವೇಳೆ ವಿಐ, ಆರ್‌ಐ, ತಹಸೀಲ್ದಾರ್, ಎಸಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿ, ಅಕ್ರಮ ಮರಳುಗಾರಿಕೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಂಡರು.

Breaking News ಬೇಲಿ ಜಗಳ: ದಂಪತಿಗಳ ಮೇಲೆ ಮಾರಣಾಂತಿಕ ಹಲ್ಲೆ.

0

Breaking News ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕರಡಿಗ ಗ್ರಾಮದಲ್ಲಿ ರಸ್ತೆ ಜಾಗದ ವಿವಾದ ದಂಪತಿಯ ಮೇಲೆ ಮಾರಣಾಂತಿಕ ಹಲ್ಲೆಗೆ ಕಾರಣವಾದ ಘಟನೆ ಬೆಳಕಿಗೆ ಬಂದಿದೆ.

ಈ ಸಂಬಂಧ ಆರು ಮಂದಿ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

ಹಾದಿಗಲ್ಲು ಸಮೀಪದ ಕರಡಿಗ ಗ್ರಾಮದಲ್ಲಿ ಮೇ 27ರಂದು ಬೆಳಿಗ್ಗೆ ಸುಮಾರು 8.15ರ ವೇಳೆಗೆ ಈ ಘಟನೆ ನಡೆದಿದೆ. ಗ್ರಾಮ ಪಂಚಾಯಿತಿ ರಸ್ತೆಗೆ ಬೇಲಿ ಹಾಕುವ ವಿಚಾರವಾಗಿ ಅಮೂಲ್ಯ ಅವರು ಪ್ರಶ್ನೆ ಮಾಡಿದ ಹಿನ್ನೆಲೆ ಗಲಾಟೆ ಆರಂಭವಾಗಿದೆ ಎಂದು ತಿಳಿದುಬಂದಿದೆ.

ಪೊಲೀಸ್ ದೂರಿನ ಪ್ರಕಾರ, ಇದೇ ವೇಳೆ ಹಳೆಯ ದ್ವೇಷವನ್ನು ಮುಂದಿಟ್ಟುಕೊಂಡು ಆರೋಪಿಗಳು ಏಕಾಏಕಿ ಜಗಳಕ್ಕೆ ಮುಂದಾಗಿದ್ದಾರೆ. ಆರೋಪಿಗಳಾದ ಮಂಜುನಾಥ್, ಚಂದ್ರಶೇಖರ, ಜಯಮ್ಮ, ಲೋಲಮ್ಮ, ಸೀಮಾ ಹಾಗೂ ಮತ್ತೋರ್ವ ಚಂದ್ರಶೇಖರ ಒಟ್ಟಾಗಿ ಅಮೂಲ್ಯ ಮತ್ತು ಅವರ ಪತಿ ಶಿವಶಂಕರ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

Breaking News ದಂಪತಿಯನ್ನು ಎಳೆದಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಅಮಾನವೀಯವಾಗಿ ಥಳಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಲ್ಲೆಯ ಪರಿಣಾಮ ಶಿವಶಂಕರ ಅವರು ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ.

ಇದಲ್ಲದೆ, ಮುಂದಿನ ದಿನಗಳಲ್ಲಿ ಪ್ರಾಣ ತೆಗೆಯುವುದಾಗಿ ಆರೋಪಿಗಳು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಆರು ಆರೋಪಿಗಳ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ.

Karnataka State Road Transport Corporation ವಿದ್ಯಾರ್ಥಿಗಳಿಗೆ ಉಚಿತ/ ರಿಯಾಯಿತಿ ಬಸ್ ಪಾಸ್ ವಿತರಣೆ ಆರಂಭ

0

Karnataka State Road Transport Corporation ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‌ಪಾಸ್ ವಿತರಣಾ ಕಾರ್ಯವನ್ನು ಮೇ.29 ರಿಂದ ಆರಂಭಿಸಿದ್ದು, ಪ್ರಸಕ್ತ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್‌ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್ ಲೈನ್ ಅರ್ಜಿ ಸಲ್ಲಿಸಬೇಕಿರುತ್ತದೆ. ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲಾಗುವುದು. ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು URL-https://sevasindhu.karnataka.gov.in/buspassservices ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಕೆಳಕಂಡ ಕ್ರಮಗಳನ್ನು ಅನುಸರಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿರುತ್ತದೆ. ನೆರೆ ರಾಜ್ಯದ ವಿರ್ಧ್ಯಾಥಿನಿಯರು ಕರ್ನಾಟಕ ರಾಜ್ಯದ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಈ ಕ್ರಮಗಳನ್ನು ಅನುಸರಿಸಿ ವಿದ್ಯಾರ್ಥಿ ಪಾಸುಗಳನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ.
ಆನ್ ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ವಿದ್ಯಾರ್ಥಿಗಳು, ಕರ್ನಾಟಕ-ಒನ್ ಮತ್ತು ಗ್ರಾಮ-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸ ಬಹುದಾಗಿದೆ. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ರೂ.30/- ಸೇವಾ ಶುಲ್ಕವನ್ನು ಆ ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶವಿರುತ್ತದೆ. ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು / ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮುಖೇನ ಕಳುಹಿಸಲಾಗುವುದು. ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‌ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್‌ಕಾರ್ಡ್ / ಡೆಬಿಟ್ ಕಾರ್ಡ್/UPI ಮುಖೇನ ಪಾವತಿಸಿ ಪಾಸನ್ನು ಪಡೆಯಬಹುದಾಗಿದೆ. ಪಾಸ್ ವಿತರಣಾ ಕೌಂಟರ್‌ಗಳ ವಿವರಗಳನ್ನು ಹಾಗೂ ಪಾಸಿನ ದರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://ksrtc.karnataka.gov.in / student pass ನಲ್ಲಿ ಒದಗಿಸಲಾಗಿದೆ.
Karnataka State Road Transport Corporation ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ವಿಧ್ಯಾರ್ಥಿಗಳು ಆನ್‌ಲೈನ್ ಅಥವಾ ಗ್ರಾಮ ಒನ್/ಕರ್ನಾಟಕ ಒನ್‌ನಲ್ಲಿ ಅರ್ಜಿ ಸಲ್ಲಿಸಿ ಪಾಸ್ (ಸ್ಮಾರ್ಟ್ಕಾರ್ಡ್) ಪಡೆಯಲು ಕರ್ನಾಟಕಒನ್, ಶಿವಮೊಗ್ಗ, 01 ನೇ ಮಹಡಿ, ಖಾಸಗಿ ಬಸ್ ನಿಲ್ದಾಣ, ಶಿವಮೊಗ್ಗ-577201. ಶಿಕಾರಿಪುರ- ಕರ್ನಾಟಕ ಒನ್, ತಾಲೂಕು ಕಚೇರಿ ಹಿಂಭಾಗ, ಶಿಕಾರಿಪುರ-577427. ಭದ್ರಾವತಿ- ಕರ್ನಾಟಕ ಒನ್, ಅಜೀಜ್ ಡಿಜಿಟಲ್ ಸರ್ವಿಸ್, ಓಲ್ಡ್ ಟೌನ್, ಕೋರ್ಟ್ ರಸ್ತೆ, ತಾಲ್ಲೂಕು ಕಛೇರಿ ಎದುರು, ಭದ್ರಾವತಿ. ಸಾಗರ-ಕರ್ನಾಟಕ ಒನ್, ಜ್ಯೋತಿ ಕಂಪ್ಯೂಟರ‍್ಸ್, ಕೋರ್ಟ್ ರಸ್ತೆ, ತಾಲ್ಲೂಕು ಕಛೇರಿ ಎದುರು, ಸಾಗರ-577401. ಹೊನ್ನಾಳಿ-ಕರ್ನಾಟಕ ಒನ್, ಟಿ.ಎಸ್ ಕಾಂಪ್ಲೆಕ್ಸ್, ಟಿ.ಎಂ ರಸ್ತೆ, ತಾಲ್ಲೂಕು ಕಛೇರಿ ಎದುರು, ಹೊನ್ನಾಳಿ-577217. ಸೊರಬ-ಕರ್ನಾಟಕ ಒನ್, ಮೈಕಾ ಕಂಪ್ಯೂಟರ‍್ಸ್, ನೂರ್ ಕಾಂಪ್ಲೆಕ್ಸ್, ಎಸ್.ಎಸ್ ರಸ್ತೆ, ಸೊರಬ-577429. ಈ ಕರ್ನಾಟಕ ಒನ್ ಕೇಂದ್ರಗಳನ್ನು ಸಂಪರ್ಕಿಸಲು ಕೋರಿದೆ.
ಹೆಚ್ದಿನ ಮಾಹಿತಿಗಾಗಿ ಹಾಗೂ ದೂರುಗಳಿದ್ದಲ್ಲಿ ದೂ.ಸಂ.: 080-24410574/ 8904082030/ 080-49203888/ 080-26252625, ಇ-ಮೇಲ್ : sevasindhu@karnataka.gov.in, onehelpdesk@karnataka.gov.in, callcentre@ksrtc.org ಗಳನ್ನು ಸಂಪರ್ಕಿಸುವುದು.

ಗ್ರಾಮಗಳು ಮತ್ತು ತಾಂಡಾ ವಾಸಿಗಳಿಗೆ ನ್ಯಾಯವು ತಲುಪಬೇಕು- ನ್ಯಾ. ಅನು ಸಿವರಾಮನ್

0

ನ್ಯಾಯ ವ್ಯವಸ್ಥೆಯು ಕೇವಲ ನ್ಯಾಯಾಲಯಗಳು ಮತ್ತು ವಕೀಲರಿಗೆ ಮಾತ್ರ ಸೀಮಿತವಾಗಿರಬಾರದು. ನ್ಯಾಯವು ಗ್ರಾಮೀಣ ಪ್ರದೇಶಗಳು ಮತ್ತು ತಾಂಡಾಗಳಲ್ಲಿರುವ ಸಾಮಾನ್ಯ ಜನರನ್ನು ತಲುಪಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ಅನು ಸಿವರಾಮನ್‌ರವರು ತಿಳಿಸಿದರು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ಬಂಜಾರ ಕನ್ವೆನ್ಷನ್ ಹಾಲ್‌ನಲ್ಲಿ ಬಂಜಾರ ಸಮುದಾಯದವರಿಗೆ ಏರ್ಪಡಿಸಲಾಗಿದ್ದ ಕಾನೂನು ಅರಿವು ಹಾಗೂ ಆರೋಗ್ಯ ತಪಾಸಣಾ ಶಿಬಿರ ಮತ್ತು ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಗ್ರಂಥಪಾಲಕರುಗಳಿಗೆ ಒಂದು ದಿನದ ರಾಜ್ಯ ಮಟ್ಟದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಡತನ ಮತ್ತು ಅರಿವಿನ ಕೊರತೆ ನಿವಾರಣೆಗೆ ಒತ್ತು: ಸಮಾಜದ ಬಡ, ದಲಿತ, ಶೋಷಿತ ಮತ್ತು ದುರ್ಬಲ ವರ್ಗದವರಿಗೆ ನ್ಯಾಯ ತಲುಪಿಸುವುದು ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯ ಉದ್ದೇಶವಾಗಿದೆ. ಬಡತನ, ಶಿಕ್ಷಣದ ಕೊರತೆ ಹಾಗೂ ಭಯದಿಂದಾಗಿ ನ್ಯಾಯಾಲಯಗಳನ್ನು ಸಂಪರ್ಕಿಸಲು ಸಾಧ್ಯವಾಗದ ಜನರ ಮನೆ ಬಾಗಿಲಿಗೆ ಕಾನೂನು ನೆರವು ತಲುಪಿಸಲು ಪ್ರಾಧಿಕಾರ ಶ್ರಮಿಸುತ್ತಿದೆ. ಕಾನೂನು ನೆರವು ಎನ್ನುವುದು ಯಾರದೋ ದಯೆ ಅಥವಾ ಭಿಕ್ಷೆಯಲ್ಲ, ಅದು ಅರ್ಹ ವ್ಯಕ್ತಿಗಳಿಗೆ ಕಾನೂನುಬದ್ಧವಾಗಿ ಸಿಗಬೇಕಾದ ಹಕ್ಕಾಗಿದೆ ಎಂದರು.
ಸAಪನ್ಮೂಲ ವ್ಯಕ್ತಿಗಳ ಪಾತ್ರ ಪ್ರಮುಖ: ತಾಂಡಾ ಸಮುದಾಯಗಳೊಂದಿಗೆ ನೇರವಾಗಿ ಸಂಪರ್ಕ ಹೊಂದಿರುವ ಸಂಪನ್ಮೂಲ ವ್ಯಕ್ತಿಗಳು ತಳಮಟ್ಟದಲ್ಲಿ ಜನರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದಾರೆ. ಇವರು ಸರ್ಕಾರದ ವಿವಿಧ ಯೋಜನೆಗಳು, ಹಕ್ಕುಗಳು ಮತ್ತು ಕಾನೂನು ಪರಿಹಾರಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ವ್ಯವಸ್ಥೆ ಮತ್ತು ಸಾರ್ವಜನಿಕರ ನಡುವೆ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದರು.
ಶಿವಮೊಗ್ಗ ಜಿಲ್ಲೆಯ 4 ತಾಂಡಾಗಳಲ್ಲಿ ವಿಶೇಷ ಸಮೀಕ್ಷೆ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಶಿವಮೊಗ್ಗ ಜಿಲ್ಲೆಯ 3 ತಾಲೂಕುಗಳ 4 ಪ್ರಮುಖ ತಾಂಡಾಗಳಲ್ಲಿ ವಿಶೇಷ ಸಮೀಕ್ಷೆ ನಡೆಸಿದೆ. ಒಟ್ಟು 784 ಕುಟುಂಬಗಳನ್ನು ಸಮೀಕ್ಷೆಗೊಳಪಡಿಸಲಾಗಿದ್ದು, ಈ ಪೈಕಿ ಸೌಲಭ್ಯಗಳ ವಿತರಣೆ ಹಾಗೂ ಕುಂದುಕೊರತೆ ನಿವಾರಣೆಗೆ ಸಂಬAಧಿಸಿದAತೆ ಒಟ್ಟು 541 ಸಮಸ್ಯೆಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.
ಕರ್ನಾಟಕ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿಗಳಾದ ವೆಂಕಟೇಶ್ ನಾಯ್ಕ್ ಟಿ. ಮಾತನಾಡಿ, ನಮ್ಮ ದೇಶದ ಸಂವಿಧಾವು ಯಾವುದೇ ರೀತಿಯ ತಾರತಮ್ಯವಿಲ್ಲದೇ ಎಲ್ಲರಿಗೂ ಸಮಾನ ಕಾನೂನಿನ ಅವಕಾಶ ನೀಡಿದೆ. ದೇಶದ ಯಾವುದೇ ಪ್ರಜೆಗೆ ನ್ಯಾಯವನ್ನು ಪಡೆದುಕೊಳ್ಳುವ ಹಕ್ಕು ಆತನ ಆರ್ಥಿಕ ಸ್ಥಿತಿಯಿಂದಾಗಾಲೀ ಅಥವಾ ಆತನ ಇತರೆ ದೌರ್ಬಲ್ಯದಿಂದಾಗಲಿ ವಂಚಿಸಲ್ಪಡಬಾರದು ಎಂಬ ಸದುದ್ದೇಶದಿಂದ ಕಾನೂನು ಸೇವೆಗಳ ಪ್ರಾಧಿಕಾರ ಕಾಯ್ದೆಯ ಅಡಿಯಲ್ಲಿ ರಾಷ್ಟಿçÃಯ, ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸ್ಥಾಪಿಸಿ ಕಾನೂನು ಅರಿವು ಮತ್ತು ನೆರವನ್ನು ನೀಡಲಾಗುತ್ತಿದೆ. ಹಾಗೂ ಹಲವು ಕಾನೂನು ಶಿಬಿರಗಳು ವಿಚಾರ ಸಂಕಿರಣಗಳು, ಲೋಕ್ ಅದಾಲತ್ ಸೇರಿದಂತೆ ಹಲವಾರು ಕಾರ್ಯಕ್ರಮಗಳ ಮೂಲಕ ಜನರ ಮತ್ತು ನ್ಯಾಯ ವ್ಯವಸ್ಥೆಯ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಿದೆ.
ಬಂಬಾರ ಸಮುದಾಯದವರು ಕಾನೂನಿನ ಅರಿವಿಲ್ಲದೆ ಹಿನ್ನಡೆಯಾಗಿ ಬದುಕು ಕಷ್ಟವಾಗುತ್ತಿದ್ದು ಹಿಂಜರಿಯಬಾರದು. ಹೋರಾಟವಿಲ್ಲದೆ ಯಾವ ಫಲವೂ ಸಿಗುವುದಿಲ್ಲ. ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು. ಹಳ್ಳಿಗಳಲ್ಲಿ ಶಿಕ್ಷಣ ಮತ್ತು ಅಭಿವೃದ್ಧಿ ಕುಂಠಿತವಾಗಿದೆ. ಆದ್ದರಿಂದ ಅಗತ್ಯ ಮೂಲಸೌಲಭ್ಯ ನೀಡಿ ಬಂಜಾರ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ನಿಗಮ ಸ್ಥಾಪಿಸಲಾಗಿದ್ದು, ರಸ್ತೆ, ಚರಂಡಿ ಮೂಲಭೂತ ಸೌಕರ್ಯ ಸೇರಿದಂತೆ ಸಾಕಷ್ಟು ಶೈಕ್ಷಣಿಕ ಕಾರ್ಯಕ್ರಮಗಳು, ಇತರೆ ಯೋಜನೆ, ಸೌಲಭ್ಯಗಳನ್ನು ನೀಡುತ್ತಿದೆ.
ಕಂದಾಯ ಇಲಾಖೆ ಸಮಸ್ಯೆಗಳು: ಕಂದಾಯ ಇಲಾಖೆಗೆ ಸಂಬAಧಪಟ್ಟAತೆ ಸಮುದಾಯ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಜಾತಿ ಪ್ರಮಾಣ ಪತ್ರ ಪಡೆಯಲು, ಜನನ ಮತ್ತು ಮರಣ ಪ್ರಮಾಣ ಪತ್ರ, ಐ ಹೆಚ್ ಸಿ ಖಾತೆ, ಪಾರ್ಟಿಷನ್ ಡೀಡ್, ಪಹಣಿ ತಿದ್ದುಪಡಿ, ಇಖಾತಾ ಪೋರ್ಟಲ್ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳಿವೆ. ಈ ಎಲ್ಲ ಸಮಸ್ಯೆಗಳಿಗೆ ನೈಜ ಪರಿಹಾರವನ್ನು ಒದಗಿಸಬೇಕೆಂದು ಮನವಿ ಮಾಡಿದರು.
ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರಾದ ಎನ್.ಜಯದೇವ ನಾಯ್ಕ ಮಾತನಾಡಿ, ರಾಜ್ಯದಲ್ಲಿನ ಸುಮಾರು 6000 ತಾಂಡಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹೋರಾಟ ಮಾಡಿ ತಾಂಡಾ ಅಭಿವೃದ್ದಿ ನಿಗಮ ಸ್ಥಾಪನೆ ಮಾಡಲಾಗಿದೆ. ಸಮುದಾಯದ ಅರ್ಹರಿಗೆ ವ್ಯಾಪಾರ ಮಾಡಲು ರೂ. 1 ಲಕ್ಷ, ಉದ್ಯಮಶೀಲತೆಗೆ ರೂ. 2 ಲಕ್ಷ , ಕಾರು ಖರೀದಿಗೆ ರೂ. 4 ಲಕ್ಷ ಸಬ್ಸಿಡಿ ಹಾಗೂ ಬೋರ್ ಕೊರೆಸಲು ರೂ. 3.75 ಸಾವಿರ ಬೋರ್ ಸೌಲಭ್ಯ ನೀಡಲಾಗುತ್ತಿದೆ ಹಾಗೂ ಭೂ ಒಡೆತನ ಯೋಜನೆಯಡಿ ಹಳೇ ಮೈಸೂರು ಭಾಗಕ್ಕೆ ರೂ.25 ಲಕ್ಷ ಮತ್ತು ಹೊಸ ಮೈಸೂರು ಭಾಗದ ಫಲಾನುಭವಿಗಳಿಗೆ ರೂ.20 ಲಕ್ಷ ನೀಡಲಾಗುತ್ತಿದೆ. ಮಹಿಳೆಯರಿಗೆ ಗುಂಪು ಸಾಲ ರೂ. 5 ಲಕ್ಷ ನೀಡಲಾಗುತ್ತಿದೆ.
ನಮ್ಮ ಸಮುದಾಯ ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಹಿಂದುಳಿದಿದೆ. ಆದ್ದರಿಂದ ಪ್ರತಿ ಮಕ್ಕಳ ಕೈಯಲ್ಲಿ ಪೆನ್ ನೀಡಬೇಕು. ಅದು ನಮ್ಮ ಊರು, ರಾಜ್ಯ ಮಾತ್ರವಲ್ಲ ಇಡೀ ರಾಷ್ಟ್ರವನ್ನು ಉದ್ದಾರ ಮಾಡುತ್ತದೆ. ದೇಶದ ಭವಿಷ್ಯ ಬದಲಾಗುತ್ತದೆ. ಅದಕ್ಕೆ ಬಹುದೊಡ್ಡ ಉದಾಹರಣೆ ನಮ್ಮ ಸಂವಿಧಾನ ರಚಿಸಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ತಿಳಿಸಿದರು.
ಕಾನೂನಿನ ಅರಿವಿಲ್ಲದೇ ಕಾನೂನಿನ ಸಂಘರ್ಷಕ್ಕೆ ಒಳಗಾಗಬೇಕಾಗುತ್ತದೆ. ಆದ್ದರಿಂದ ಕಾನೂನಿನ ಅರಿವು ಅತ್ಯಗತ್ಯವಾಗಿದ್ದು ಬಾಲ್ಯ ವಿವಾಹ, ಪೋಕ್ಸೋ ಸೇರಿದಂತೆ ಅಗತ್ಯ ಕಾನೂನಗಳ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕು ಎಂದರು.
ಆರೋಗ್ಯ ಹಕ್ಕು : ಆರೋಗ್ಯ ಪ್ರತಿಯೊಬ್ಬರ ಹಕ್ಕು. ಬಡವರಿಗೆ ಇಂದು ಆರೋಗ್ಯ ಸೇವೆ, ಸೌಲಭ್ಯ ಪಡೆಯುವುದು ಅತ್ಯಂತ ಕಷ್ಟವಾಗಿದೆ. ಆದ್ದರಿಂದ ಆರೋಗ್ಯವನ್ನು ಮೂಲಭೂತ ಹಕ್ಕಾಗಿ ಪರಿಗಣಿಸಬೇಕೆಂದು ಈ ಮೂಲಕ ಮನವಿ ಮಾಡುತ್ತೇನೆ ಎಂದರು.
ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಮಾತನಾಡಿ, ಸದೃಢ ಸಮಾಜಕ್ಕೆ ಉತ್ತಮ ಸಂದೇಶ ನೀಡಿ, ಪ್ರಗತಿ ಪಥದತ್ತ ಕೊಂಡೊಯ್ಯಲು ನಾವಿಂದು ಇಲ್ಲಿ ಸೇರಿದ್ದೇವೆ. ಒಂದೇ ಸೂರಿನಡಿ ಬಂಜಾರ ಸಮುದಾಯದವರಿಗೆ ಕಾನೂನು ಅರಿವು, ಯೋಜನೆಗಳ ಬಗ್ಗೆ ಮಾಹಿತಿ, ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಹೀಗೆ ಹಲವಾರು ಕಾರ್ಯಕ್ರಮಗಳನ್ನು ಅತ್ಯುತ್ತಮವಾಗಿ ಆಯೋಜಿಸಲಾಗಿದೆ.
ತುಳಿತಕ್ಕೊಳಗಾದ ಸಮಾಜವನ್ನು ಪ್ರಗತಿ ಪಥದತ್ತ ಒಯ್ಯಲು ಕೆಲಸ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ಕಂದಾಯ ಗ್ರಾಮಗಳನ್ನು ಮಾಡಿ ಜನರಿಗೆ ಹಕ್ಕು ಪತ್ರಗಳನ್ನು ನೀಡಲಾಗುತ್ತಿದ್ದು ಜಿಲ್ಲಾಡಳಿತ ಸಹ ಕಾರ್ಯ ಕೈಗೊಂಡಿದೆ. ಇಂತಹ ಕಾರ್ಯಕ್ರಮಗಳ ಮೂಲಕ ಜನರಿಗೆ ಶೈಕ್ಷಣಿಕ, ಔದ್ಯೋಗಿಕ ಅವಕಾಶಗಳು ಸೇರಿದಂತೆ ಸರ್ಕಾರದಿಂದ ಲಭ್ಯವಾಗುವ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದ್ದು, ಸಮುದಾಯದವರೆಲ್ಲ ಇದರ ಸದುಪಯೋಗ ಪಡೆಯಬೇಕು ಎಂದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎ. ಮಂಜುನಾಥ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯ ವಿವಿಧ ತಾಂಡಾಗಳಲ್ಲಿ 90 ಸಾವಿರ ಜನರು ವಾಸ ಮಾಡುತ್ತಿದ್ದಾರೆ. ಇವರಿಗಾಗಿ ಸರ್ಕಾರ ನೀಡಿರುವ ವಿವಿಧ ಯೋಜನೆಗಳ, ಸೌಲಭ್ಯಗಳ ಮಾಹಿತಿ ಮತ್ತು ಪ್ರಯೋಜನ ನೀಡಲು 23 ವಿವಿಧ ಇಲಾಖೆಗಳು, ಸಂಸ್ಥೆಗಳು ಇಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಳಿಗೆಗಳನ್ನು ಸ್ಥಾಪಿಸಿವೆ.
ಜಿಲ್ಲೆಯಲ್ಲಿ ಬಂಜಾರ ಸಮುದಾಯಕ್ಕೆ ಸಂಬAಧಿಸಿದAತೆ 2023 ರಿಂದ 2026 ರವರೆಗೆ 630 ಅಪರಾಧ ಪ್ರಕರಣಗಳಲ್ಲಿ ಅಪರಾಧಕ್ಕೆ ಒಳಗಾಗಿ ನೊಂದ ವ್ಯಕ್ತಿಗಳಾಗಿದ್ದು, 784 ವ್ಯಕ್ತಿಗಳು ಅಪರಾಧಿ ಸ್ಥಾನದಲ್ಲಿದ್ದಾರೆ. ಇದಕ್ಕೆ ಮುಖ್ಯ ಕಾರಣ ಕಾನೂನಿನ ಅರಿವಿನ ಕೊರತೆಯಾಗಿದೆ. ಆದ್ದರಿಂದ ಕಾನೂನು ಸೇವಾ ಪ್ರಾಧಿಕಾರ ನಿರಂತರವಾಗಿ ಕಾನೂನು ಅರಿವು ಕಾರ್ಯಕ್ರಮ, ಸಲಹೆ ಮತ್ತು ನೆರವು ನೀಡುತ್ತಾ ಬಂದಿದ್ದು, ಕಾನೂನು ಸಲಹೆ ಕೇಂದ್ರಗಳನ್ನು ತೆರೆಯಲಾಗಿದೆ.
ಇಂದಿನ ಕಾರ್ಯಕ್ರಮದಲ್ಲಿ ಬಂಜಾರ ಸಮುದಾಯದವರಿಗೆ ಕಾನೂನು ಅರಿವು, ಕಾನೂನು ಸಲಹೆ, ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ, ಯೋಜನೆಗಳಲ್ಲಿ ಫಲಾನುಭವಿಗಳ ನೋಂದಣಿ, ಕಣ್ಣಿನ ತಪಾಸಣೆ, ಸಾಮಾನ್ಯ ಆರೋಗ್ಯ ತಪಾಸಣೆ, ಕಣ್ಣು, ಮೂಗು, ಗಂಟಲು ತಪಾಸಣೆ, ಕ್ಯಾನ್ಸರ್ ತಪಾಸಣೆ(ಗರ್ಭಕೋಶ) ಹಾಗೂ ರಕ್ತ ದಾನ ಶಿಬಿರ ಆಯೋಜಿಸಲಾಗಿದೆ. ಒಂದೇ ಸೂರಿನಡಿ ಐತಿಹಾಸಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಿದ್ವಾಯಿ, ರೋಟರಿ, ಶಂಕರ ಕಣ್ಣಿನ ಆಸ್ಪತ್ರೆ, ಜಿಲ್ಲಾಸ್ಪತ್ರೆಯ ಸಹಯೋಗವಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಿಎಂ ಸ್ವನಿಧಿ ಯೋಜನೆ, ಗುಂಪು ಸಾಲ, ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಸೌಲಭ್ಯ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಶಶಿಧರ ಶೆಟ್ಟಿ, ಜಿ.ಪಂ.ಸಿಇಓ ಹೇಮಂತ್ ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ನಿಯಮಿತ ವ್ಯವಸ್ಥಾಪಕರಾದ ಎನ್.ರಾಜು, ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್ ಮತ್ತು ಅಧಿಕಾರಿಗಳು, ಮುಖಂಡರು ಪಾಲ್ಗೊಂಡಿದ್ದರು.

ರಾಮಾಯಣ, ವೇದಿಕೆಯಲ್ಲಿ ನಾಟಕ ಜೀವನಕ್ಕೆ ಮಾರ್ಗದರ್ಶಕ, ಮಕ್ಕಳಿಗೋಸ್ಕರ ಕಾರ್ಯಕ್ರಮ ನೋಂದಾಯಿಸಿ

0

ಇಂದಿನ ಮಕ್ಕಳಿಗೆ ರಾಮಾಯಣ ಯಾಕೆ ಬೇಕು?
ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ಮೊಬೈಲ್ ಜಗತ್ತಿನಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ರಾಮಾಯಣವು ಅವರಿಗೆ ಕೇವಲ ಒಂದು ಕಥೆಯಲ್ಲ, ಜೀವನವನ್ನು ಸರಿಯಾದ ದಾರಿಯಲ್ಲಿ ನಡೆಸುವ ಮೌಲ್ಯಗಳ ಮಹಾಗ್ರಂಥವಾಗಿದೆ.
ರಾಮಾಯಣದ ಮೂಲಕ ಮಕ್ಕಳು:
ಸತ್ಯ, ಧರ್ಮ ಮತ್ತು ನೈತಿಕತೆ ಕಲಿಯುತ್ತಾರೆ.
ಆತ್ಮವಿಶ್ವಾಸ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುತ್ತಾರೆ.
ಕುಟುಂಬದ ಮೌಲ್ಯಗಳನ್ನು ಅರ್ಥಮಾಡಿಕೊಳ್ಳುತ್ತಾರೆ.
ಶಿಸ್ತು, ತಾಳ್ಮೆ ಮತ್ತು ಜವಾಬ್ದಾರಿತನವನ್ನು ರೂಢಿಸಿಕೊಳ್ಳುತ್ತಾರೆ.
ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ನಂಟು ಬೆಳೆಸಿಕೊಳ್ಳುತ್ತಾರೆ.
ನಿಮ್ಮ ಮಗುವಿಗೆ ಕೇವಲ ಶಿಕ್ಷಣವಲ್ಲ, ಉತ್ತಮ ವ್ಯಕ್ತಿತ್ವವನ್ನ ಉಡುಗೊರೆಯಾಗಿ ನೀಡಿ.
ರಾಮಾಯಣದ ಮೂಲಕ ಅವರು ಕೇವಲ ಪಾತ್ರಗಳನ್ನು ಅಭಿನಯಿಸುವುದಲ್ಲ, ಜೀವನದ ಅಮೂಲ್ಯ ಪಾಠಗಳನ್ನು ಕಲಿಯುತ್ತಾರೆ.
“ರಾಮಾಯಣ – ವೇದಿಕೆಯಲ್ಲಿ ಒಂದು ನಾಟಕ, ಜೀವನದಲ್ಲಿ ಒಂದು ಮಾರ್ಗದರ್ಶನ.”
ನಿಮ್ಮ ಮಕ್ಕಳನ್ನ ನೊಂದಾಯಿಸಲು ಸಂಪರ್ಕಿಸಿ ಚಂದನ್ ಎನ್ (ನೀನಾಸಂ): 7204697385