Wednesday, February 11, 2026
Wednesday, February 11, 2026
Home Blog Page 80

Borlaug Institute of South Asia ಸೈನಿಕ ಹುಳು ಬಾಧೆ ನಿಯಂತ್ರಿಸಲು ಸಮಗ್ರ ಕೀಟ ನಿರ್ವಹಣೆ & ಬಹುವಾರ್ಷಿಕ ಯೋಜನೆ ಅಳವಡಿಸಿ- ಡಾ.ಬಿ.ಎಂ.ಪ್ರಸನ್ನ

0

Borlaug Institute of South Asia ಸೈನಿಕ ಹುಳುಬಾಧೆಯನ್ನು ಸುಸ್ಥಿರವಾಗಿ ನಿಯಂತ್ರಿಸಲು ಸಮಗ್ರ ಕೀಟ ನಿರ್ವಹಣೆ ಪದ್ದತಿ ಮತ್ತು ಬಹುವಾರ್ಷಿಕ ಯೋಜನೆಗಳನ್ನು ಅಳವಡಿಸಿಕೊಳ್ಳಬೇಕಿದೆ ಎಂದು ಏಷಿಯಾದ ಸಿಐಎಂಎಂವೈಟಿ ವಿಶೇಷ ವಿಜ್ಞಾನಿ ಪ್ರಾದೇಶಿಕ ನಿರ್ದೇಶಕ ಹಾಗೂ ಬೊರ್ಲಾಗ್ ಇನ್ಸ್ಟಿಟ್ಯೂಟ್ ಆಫ್ ಸೌತ್ ಏಷಿಯಾದ ಎಂ ಡಿ ಡಾ.ಬಿ.ಎಂ.ಪ್ರಸನ್ನ ಸಲಹೆ ನೀಡಿದರು.

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಸೈನಿಕ ಹುಳುವಿನ ಸುಸ್ಥಿರ ನಿಯಂತ್ರಣ ಕುರಿತಾದ ಅಂತರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಸೈನಿಕ ಹುಳು ಮೊದಲಿಗೆ ಅಮೇರಿಕಾದಲ್ಲಿ ಕಂಡು ಬಂದಿತು. ನಂತರ 2016 ರಲ್ಲಿ ಆಫ್ರೀಕಾದಲ್ಲಿ ಹೆಚ್ಚಿನ ಬಾಧೆ ನೀಡಿತು. ಕಳೆದ 6-7 ವಷಗಳಿಂದ ನಮ್ಮ ದೇಶದಲ್ಲಿ ತೊಂದರೆ ನೀಡುತ್ತಿದೆ. ಸೈನಿಕ ಹುಳು ಬಾಧೆ ನಿಯಂತ್ರಣಕ್ಕೆ ಬಳಸಲಾಗುತ್ತಿರುವ ರಾಸಾಯನಿಕ ಕೀಟನಾಶಕಗಳಿಂದ ಪರಿಸರ ವ್ಯವಸ್ಥೆಗೆ ಹಾನಿಯಾಗುತ್ತಿದೆ.

ಆದ್ದರಿಂದ ಸಮಗ್ರ ಕೀಟ ನಿರ್ವಹಣೆ ಪದ್ದತಿಗೆ ಹೆಚ್ಚಿನ ಆದ್ಯತೆ ನೀಡಬೇಕು.
ಕೀಟ ಬಾಧೆ ಹತೋಟಿಗಾಗಿ ಸಮಗ್ರ ಕೀಟ ನಿರ್ವಹಣೆ ಹಾಗೂ ಬಹು ವಾರ್ಷಿಕ ಯೋಜನೆಗಳನ್ನು ರೂಪಿಸಲು ಸ್ಥಳೀಯ, ರಾಜ್ಯ, ರಾಷ್ಟ್ರ ಅಂತರಾಷ್ಟ್ರೀಯ ಸಂಸ್ಥೆಗಳ ಸಹಭಾಗಿತ್ವ ಬಹಳ ಮುಖ್ಯವಾಗಿದ್ದು ಎಲ್ಲರೂ ಕೈಜೋಡಿಸಬೇಕೆಂದರು.

ಬೆಂಗಳೂರಿನ ಐಸಿಎಆರ್-ಎನ್‌ಬಿಎಐಆರ್ ನ ನಿರ್ದೇಶಕರಾದ ಡಾ.ಎಸ್.ಎನ್ ಸುನಿಲ್ ಮಾತನಾಡಿ, ಸೈನಿಕ ಹುಳು ಸೇರಿದಂತೆ ಕೀಟಗಳನ್ನು ನಿರ್ವಹಿಸಲು ಪರಿಸರ ತನ್ನದೇ ಆದ ವ್ಯವಸ್ಥೆಯನ್ನು ಹೊಂದಿದೆ. ಆದರೆ ನಾವು ಅದಕ್ಕೆ ಅವಕಾಶ ನೀಡದೇ ಅನವಶ್ಯಕವಾಗಿ ಹಲವಾರು ರಾಸಾಯನಿಕ ಕೀಟನಾಶಕಗಳನ್ನು ಸಂಪಡಿಸುತ್ತಲೇ ಇದ್ದೇವೆ.

ಇದರಿಂದ ಸ್ವಾಭಾವಿಕ ಪರಿಸರ ವ್ಯವಸ್ಥೆ ಹಾಳಾಗುತ್ತಿದೆ.
ಪರಿಸರ ವ್ಯವಸ್ಥೆಯನ್ನು ಕಾಪಾಡುವುದು ಅತಿ ಅವಶ್ಯಕವಾಗಿದ್ದು, ಜೈವಿಕ ಸರಪಳಿಯನ್ನು ಬೆಳೆಯಲು ಬಿಡಬೇಕು. ಬೆಳೆಗಳನ್ನು ಯಾವುದೇ ರಾಸಾಯನಿಕ ಕೀಟ ನಾಶಕಗಳನ್ನು ಹಾಕದೇ ಬೆಳೆಯಬಹುದು. ಪರಿಸರ ಕೀಟ ನಿಯಂತ್ರಣಕ್ಕೆ ತನ್ನದೇ ಆದ ವ್ಯವಸ್ಥೆ ಹೊಂದಿದ್ದು, ಆ ಪ್ರಕ್ರಿಯೆಗೆ ಅವಕಾಶ ನೀಡಬೇಕು.

ರೈತರು ಅನವಶ್ಯಕವಾಗಿ ಆತಂಕಕ್ಕೀಡಾಗಿ ರಾಸಾಯನಿಕ ಕೀಟನಾಶಕಗಳ ಬಳಕೆ ಮಾಡುವುದಕ್ಕೆ ಮುಂದಾಗುತ್ತಾರೆ.

ರಾಸಾಯನಿಕ ಕೀಟನಾಶಕಗಳನ್ನು ಬಳಸದೇ ಕೀಟ ನಿಯಂತ್ರಿಸಲು ಹಲವಾರು ವಿಧಾನಗಳಿವೆ. ಜೈವಿಕ ನಿಯಂತ್ರಣ ವಿಧಾನಗಳು, ಜೈವಿಕ ಕೀಟನಾಶಕಗಳನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಬಹುದು. ಸಮಗ್ರವಾಗಿ ಕೀಟ ನಿರ್ವಹಣಾ ಕ್ರಮಗಳನ್ನು ಅನುಸರಿಸುವ ಮೂಲಕ ಕೀಟ ಬಾಧೆಯನ್ನು ಹತೋಟಿಗೆ ತರಬೇಕು ಎಂದರು.

Borlaug Institute of South Asia ವಿಶ್ವದಲ್ಲಿ ವಿವಿಧ ದೇಶಗಳು ಕೃಷಿ ಸಂಶೋಧನೆ ಮತ್ತು ಅಭಿವೃದ್ದಿಗಾಗಿ ಸಾಕಷ್ಟು ಖರ್ಚು ಮಾಡುತ್ತಿದೆ. ಚೀನಾ ದೇಶ ತನ್ನ ಜಿಡಿಪಿಯ ಶೇ.2.1 ರಷ್ಟು, ಇಸ್ರೇಲ್ ದೇಶ ಶೇ. 3.4, ಅಮೇರಿಕಾ 6.8, ಸೌತ್ ಕೊರಿಯಾ ಶೇ.4.6 ರಷ್ಟು ಮಾಡಿದರೆ, ಭಾರತ ಭಾರತ ಶೇ.6 ಮಾಡಿರುತ್ತದೆ ಎಂದು ಮಾಹಿತಿ ನೀಡಿದರು.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಕುಲಪತಿಗಳಾದ ಡಾ.ಆರ್.ಸಿ ಜಗದೀಶ್ ಮಾತನಾಡಿ. ಮೆಕ್ಕೆಜೋಳ, ಭತ್ತ, ಅಡಿಕೆ ಮತ್ತು ಶುಂಠಿ ವಿಶ್ವವಿದ್ಯಾಲಯ ವ್ಯಾಪ್ತಿಯ ಮುಖ್ಯ ಬೆಳೆಗಳಾಗಿದ್ದು, ಈ ಬೆಳೆಗಳಿಗೆ ಕಾಡುವ ಸೈನಿಕ ಹುಳು ನಿಯಂತ್ರಣ ಮಾಡಲು 2018 ರಿಂದ ವಿಶ್ವವಿದ್ಯಾಯಲವು ಹಲವಾರು ಪ್ರಯೋಗಗಳನ್ನು ಮಾಡಿದ್ದು, ಹುಳು ಬಾಧೆ ಕಡಿಮೆ ಆಗುತ್ತಿದೆ. ಈ ಕುರಿತು ಅತ್ಯುತ್ತಮ ಜರ್ನಲ್‌ಗಳನ್ನು ಪ್ರಕಟಿಸಲಾಗಿದ್ದು, ಇತ್ತೀಚಿನ ಸಂಶೋಧನೆಗಳು ಸೈನಿಕ ಹುಳು ನಿಯಂತ್ರಣಕ್ಕೆ ಸಹಕಾರಿಯಾಗಲಿವೆ ಎಂಬ ಭರವಸೆ ಇದೆ. ಸೈನಿಕ ಹುಳು ಸೇರಿದಂತೆ ಕೀಟಗಳ ನಿಯಂತ್ರಣದಲ್ಲಿ ಸರ್ಕಾರಿ ಸಂಸ್ಥೆಗಳು ಮಾತ್ರವಲ್ಲ ಖಾಸಗಿ ಸಂಸ್ಥೆಗಳು, ವಿದ್ಯಾರ್ಥಿಗಳು, ಅಂತರಾಷ್ಟ್ರೀಯ ಸಂಸ್ಥೆಗಳ ಸಹಯೋಗ ಬೇಕು ಎಂದ ಅವರು ಪರಿಸರ ವ್ಯವಸ್ಥೆ ಹಾಳಾಗದಂತೆ ಕೀಟ ನಿಯಂತ್ರಣಕ್ಕಾಗಿ ಶ್ರಮಿಸುತ್ತಿರುವ ಕೀಟಶಾಸ್ತ್ರಜ್ಞರಿಗೆ ಅಭಿನಂದನೆಗಳನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಸೈನಿಕ ಹುಳು ನಿಯಂತ್ರಣ ಕುರಿತಾದ ಕೈಪಿಡಿಯನ್ನು ಬಿಡುಗೆಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಣ ನಿರ್ದೇಶಕ ಡಾ.ಬಿ.ಹೇಮ್ಲಾನಾಯ್ಕ್ ಮಾತನಾಡಿದರು. ಪ್ರಗತಿಪರ ರೈತರುಗಳಾದ ಹೆಚ್.ಡಿ.ದೇವಿಕುಮಾರ್, ಹೆಚ್.ಎಸ್.ಶಶಾಂಕ್,ಕಾಲೇಜಿನ ಬೋಧಕ, ಬೋಧಕೇರ ಸಿಬ್ಬಂದಿ, ವಿವಿಧ ರಾಜ್ಯ, ದೇಶಗಳ ಪ್ರತಿನಿಧಿಗಳು, ಸಂಘಟನಾ ಕಾರ್ಯದರ್ಶಿ ದೇಶ್‌ಮುಖ್ ಭಾಗವಹಿಸಿದ್ದರು.

Narayana Hospital Shimoga ಪ್ರಪ್ರಥಮ ಮೂತ್ರಪಿಂಡ ಕಸಿಶಸ್ತ್ರಚಿಕಿತ್ಸೆ: ನಾರಾಯಣ ಹೆಲ್ತ್ ಸಂಸ್ಥೆ ವೈದ್ಯರ ಜಾಗತಿಕ ದಾಖಲೆ.

0

Narayana Hospital Shimoga ಅತ್ಯಂತ ಅಪರೂಪದ ‘ಸಿವಿಯರ್ ಫ್ಯಾಕ್ಟರ್ VII ಡಿಫಿಷಿಯೆನ್ಸಿ’ ಹೊಂದಿರುವ ರೋಗಿಗೆ ವಿಶ್ವದಲ್ಲೇ ಮೊದಲ ಬಾರಿಗೆ ಯಶಸ್ವಿಯಾಗಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ನಡೆಸಿದ ಮುಕುಂದಪುರದ ನಾರಾಯಣ ಆರ್‌ಎನ್ ಟಾಗೋರ್ ಹಾಸ್ಪಿಟಲ್

ತಂದೆ, ಮಗ ಇಬ್ಬರೂ ಒಂದೇ ಅಪರೂಪದ ಆನುವಂಶಿಕ ತೊಂದರೆ ಹೊಂದಿದ್ದರೂ ತಂದೆಯೇ ತನ್ನ ಮಗನಿಗೆ ಮೂತ್ರಪಿಂಡ ದಾನ ಮಾಡಿದ್ದು, ನಿಜಕ್ಕೂ ಇದೊಂದು ಅಪರೂಪದಲ್ಲಿ ಅಪರೂಪದ ಪ್ರಕರಣವಾಗಿದೆ. ವಿಶ್ವದಲ್ಲೇ ಈ ರೀತಿಯ ಮೊದಲ ಶಸ್ತ್ರಚಿಕಿತ್ಸೆಯಾಗಿದೆ.

ಕೋಲ್ಕತ್ತಾ, 26 ನವೆಂಬರ್ 2025: ಮುಕುಂದಪುರ ನಾರಾಯಣ ಆರ್‌ಎನ್ ಟಾಗೋರ್ ಹಾಸ್ಪಿಟಲ್ ನಾರಾಯಣ ಆರ್‌ಎನ್ ಟಾಗೋರ್ ಹಾಸ್ಪಿಟಲ್ ನ ವೈದ್ಯರ ತಂಡವು ಅತ್ಯಂತ ಅಪರೂಪದ ಆನುವಂಶಿಕ ರಕ್ತಸ್ರಾವ ರೋಗವಾದ ‘ಸಿವಿಯರ್ ಫ್ಯಾಕ್ಟರ್ VII ಡಿಫಿಷಿಯೆನ್ಸಿ’ ಇದ್ದ ಭೂತಾನ್‌ನ ಯುವಕನೊಬ್ಬನಿಗೆ ಯಶಸ್ವಿಯಾಗಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ನಡೆಸಿ ದಾಖಲೆ ಮಾಡಿದೆ. ಇದೊಂದು ವಿಶ್ವದಲ್ಲೇ ಮೊದಲ ಬಾರಿಗೆ ನಡೆದ ಅತ್ಯಂತ ಅಪರೂಪದ ಶಸ್ತ್ರಚಿಕಿತ್ಸೆಯಾಗಿದೆ.

ಜಗತ್ತಿನಲ್ಲಿ ಕೇವಲ 50 ಲಕ್ಷ ಜನರಲ್ಲಿ ಒಬ್ಬರಿಗೆ ಮಾತ್ರ ಕಾಣಿಸುವ ಅತ್ಯಂತ ವಿರಳ ಸಮಸ್ಯೆಯಿಂದ ಆ ಯುವಕ ಬಳಲುತ್ತಿದ್ದ. ಇದುವರೆಗೆ ಜಗತ್ತಿನಲ್ಲಿ ಯಾವುದೇ ಆಸ್ಪತ್ರೆಯಲ್ಲಿ ಇಂತಹ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿರಲಿಲ್ಲ. ಆದರೆ ನಾರಾಯಣ ಹೆಲ್ತ್ ಸಂಸ್ಥೆ ಈ ಮಹಾ ಸಾಧನೆ ಮಾಡಿ ತೋರಿಸಿದ್ದು, ಸಂಕೀರ್ಣ ಮತ್ತು ಅಪಾಯಕಾರಿ ಪ್ರಕರಣಗಳನ್ನು ನಿರ್ವಹಿಸುವಲ್ಲಿ ತಾನು ವಿಶ್ವಮಟ್ಟದ ಪರಿಣತಿ ಹೊಂದಿರುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ರೋಗಿಗೆ ತಂದೆಯ ಹೊರತು ಬೇರೆ ಯಾರೂ ದಾನಿ ಆಗಲು ಸಾಧ್ಯವಿರಲಿಲ್ಲ. ಆದರೆ ತಂದೆಯೂ ಇದೇ ಅಪರೂಪದ ಆನುವಂಶಿಕ ತೊಂದರೆ ಹೊಂದಿದ್ದರು. ಇದರಿಂದ ಈ ಪ್ರಕರಣವು ವೈದ್ಯಕೀಯವಾಗಿ ಮತ್ತು ನೈತಿಕವಾಗಿ ಅತ್ಯಂತ ಸಂಕೀರ್ಣವಾಗಿತ್ತು ಮತ್ತು ಸವಾರಿನದಾಗಿತ್ತು. ಬಹುವಿಭಾಗೀಯ ತಂಡದ ದೀರ್ಘ ಚರ್ಚೆ, ಅಪಾಯ ಮೌಲ್ಯಮಾಪನದ ನಂತರ ಅತ್ಯಂತ ನಿಖರತೆಯೊಂದಿಗೆ ಈ ಅಪರೂಪದ ಶಸ್ತ್ರಚಿಕಿತ್ಸೆಯನ್ನು ನಡೆಸಲಾಯಿತು. ದಾನಿ ಮತ್ತು ಸ್ವೀಕರಿಸುವವರು ಇಬ್ಬರೂ ಒಂದೇ ಆನುವಂಶಿಕ ತೊಂದರೆ ಹೊಂದಿದ್ದು ನಡೆದ ಜಗತ್ತಿನ ಮೊದಲ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ಎಂಬ ಗೌರವಕ್ಕೆ ಈ ಪ್ರಕರಣವು ಪಾತ್ರವಾಗಿದೆ. ವಿಶೇಷವಾಗಿ ವೈದ್ಯಕೀಯ ಇತಿಹಾಸದಲ್ಲಿ ಅತ್ಯಂ ಮಹತ್ವದ ಸಾಧನೆ ಎಂಬ ದಾಖಲೆ ಬರೆದಿದೆ.

Narayana Hospital Shimoga ಈ ಪ್ರಕರಣದ ಸಂಕೀರ್ಣತೆಯ ಕುರಿತು ಮಾತನಾಡಿದ ಮುಕುಂದಪುರದ ನಾರಾಯಣ ಆರ್‌ಎನ್ ಟಾಗೋರ್ ಹಾಸ್ಪಿಟಲ್ ನ ಕನ್ಸಲ್ಟೆಂಟ್ ಮತ್ತು ಚೀಫ್ ನೆಫ್ರಾಲಜಿಸ್ಟ್ (ಮೂತ್ರಪಿಂಡ ಕಸಿ ಯೋಜನೆ) ಡಾ. ದೀಪಕ್ ಶಂಕರ್ ರೇ ಅವರು, “ಈ ಪ್ರಕರಣವು ನಮ್ಮ ವೈದ್ಯಕೀಯ ಸಮನ್ವಯತೆ ಮತ್ತು ಶಸ್ತ್ರಚಿಕಿತ್ಸಾ ಸಾಮರ್ಥ್ಯವನ್ನು ನಿಜವಾಗಿಯೂ ಪರೀಕ್ಷಿಸಿತು. ಚಿಕ್ಕ ರಕ್ತಸ್ರಾವದಿಂದಲೂ ಮರಣ ಹೊಂದಬಹುದಾಗಿದ್ದ ರೋಗಿಗೆ ನಾವು ಮೂತ್ರಪಿಂಡ ಕಸಿ ಮಾಡಬೇಕಾಗಿತ್ತು. ಅರಿವಳಿಕೆಯಿಂದ ಹಿಡಿದು ಹೊಲಿಗೆಯವರೆಗೆ ಪ್ರತಿ ಹಂತವೂ ಬಹಳ ಎಚ್ಚರಿಕೆಯಿಂದ ಮತ್ತು ಬಹಳ ಸಮನ್ವಯತೆಯಿಂದ ನಡೆಯಬೇಕಾಗಿತ್ತು. ಈ ಯಶಸ್ಸು ನಮ್ಮ ಟೀಮ್ ವರ್ಕ್ ಗೆ ಸಿಕ್ಕ ಗೆಲುವಾಗಿದ್ದು, ಅತ್ಯಂತ ಸೂಕ್ಷ್ಮ ಯೋಜನೆ ಮತ್ತು ಕುಟುಂಬದ ಅಚಲ ನಂಬಿಕೆಯ ಫಲಿತಾಂಶವಾಗಿದೆ. ಅತ್ಯಮೂಲ್ಯ ನೆರವನ್ನು ಒದಗಿಸಿ ಈ ಯುವಕನನ್ನು ಬದುಕಿಸಲು ಕಾರಣವಾದ, ಈ ಪ್ರಕರಣದ ಯಶಸ್ಸಿಗೆ ಬಹುಮುಖ್ಯ ಕಾರಣರಾದ ನಮ್ಮ ಬಹುವಿಭಾಗೀಯ ತಂಡದ ವೈದ್ಯರ ಅಪಾರ ಜ್ಞಾನ ಮತ್ತು ಪರಿಶ್ರಮಕ್ಕೆ ನಾವು ಕೃತಜ್ಞರಾಗಿದ್ದೇವೆ. ವಿಶೇಷವಾಗಿ ಶಸ್ತ್ರಚಿಕಿತ್ಸಾ ತಂಡದ ಡಾ. ತರ್ಷಿದ್ ಅಲಿ ಜಹಾಂಗೀರ್ ಮತ್ತು ಅರಿವಳಿಕೆ ತಂಡದ ಡಾ. ತಿತಿಸಾ ಸರ್ಕಾರ್ ಮಿತ್ರಾ ಅವರ ಕೊಡುಗೆಯನ್ನು ಗೌರವಪೂರ್ವಕವಾಗಿ ಸ್ಮರಿಸುತ್ತಿದ್ದೇವೆ” ಎಂದು ಹೇಳಿದರು.

ಈ ಅಪರೂಪದ ರಕ್ತಸ್ರಾವ ತೊಂದರೆಯ ಕುರಿತು ಮಾತನಾಡಿದ ಮುಕುಂದಪುರ ನಾರಾಯಣ ಆರ್‌ಎನ್ ಟಾಗೋರ್ ಹಾಸ್ಪಿಟಲ್ ನ ಹೆಮಟಾಲಜಿ ವಿಭಾಗದ ಕನ್ಸಲ್ಟೆಂಟ್ ಡಾ. ಶಿಶಿರ್ ಕುಮಾರ್ ಪಾತ್ರ ಅವರು, “ಸಿವಿಯರ್ ಫ್ಯಾಕ್ಟರ್ VII ಡಿಫಿಷಿಯೆನ್ಸಿ ಎಷ್ಟು ಅಪರೂಪ ಎಂದರೆ ಜಗತ್ತಿನಲ್ಲಿ ಸುಮಾರು 50 ಲಕ್ಷ ಜನರಲ್ಲಿ ಒಬ್ಬರಿಗೆ ಮಾತ್ರ ಬರುತ್ತದೆ. ಇಂತಹ ಪ್ರಕರಣ ನಿರ್ವಹಣೆ ಅತ್ಯಂತ ಸೂಕ್ಷ್ಮವಾಗಿದೆ. ಫ್ಯಾಕ್ಟರ್ VII ಕಡಿಮೆಯಾದರೆ ಅತಿಯಾದ ರಕ್ತಸ್ರಾವ ಉಂಟಾಗಬಹುದು, ಮತ್ತೂ ಕಡಿಮೆಯಾದರೆ ಅಪಾಯಕಾರಿ ರಕ್ತ ಹೆಪ್ಪುಗಟ್ಟುವಿಕೆ ಉಂಟಾಗಬುದು. ನಾವು ನಿಮಿಷ ನಿಮಿಷಕ್ಕೂ ಅತ್ಯಂತ ಸಣ್ಣ ವಿಚಾರದಲ್ಲಿಯೂ ಸುರಕ್ಷತೆ ನೋಡಿಕೊಳ್ಳಬೇಕಿತ್ತು. ಈಗ ರೋಗಿ ಮತ್ತು ಅವರ ತಂದೆ ಇಬ್ಬರೂ ಚೆನ್ನಾಗಿರುವುದು ನೋಡಿ ತುಂಬಾ ಸಂತೋಷವಾಗುತ್ತಿದೆ” ಎಂದು ಹೇಳಿದರು.

ಶಸ್ತ್ರಚಿಕಿತ್ಸೆಯ ನಂತರವೂ ಬಹಳಷ್ಟು ಸವಾಲುಗಳಿದ್ದುವು. ರೋಗಿಗೆ ಸಣ್ಣ ರಕ್ತ ಹೆಪ್ಪುಗಟ್ಟುವಿಕೆಯಿಂದ ತಾತ್ಕಾಲಿಕ ಪಾರ್ಶ್ವವಾಯು ಬಂದಿತ್ತು. ಆದರೆ ನೆಫ್ರಾಲಜಿ, ನ್ಯೂರಾಲಜಿ ಮತ್ತು ಹೆಮಟಾಲಜಿ ತಂಡಗಳ ಸಂಯುಕ್ತ ಆರೈಕೆಯಲ್ಲಿ ರೋಗಿ ಪೂರ್ಣ ಚೇತರಿಕೆ ಕಂಡಿದ್ದಾರೆ. ಈಗ ಅವರ ಕ್ರಿಯೇಟಿನಿನ್ ಮಟ್ಟ ಸ್ಥಿರವಾಗಿದೆ ಮತ್ತು ಅವರು ಆರೋಗ್ಯಕರವಾಗಿ ಬದುಕುತ್ತಿದ್ದಾರೆ.

ಈ ಸಂದರ್ಭದಲ್ಲಿ ತಮ್ಮ ತಂಡದ ಸಾಧನೆಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ನಾರಾಯಣ ಹೆಲ್ತ್ ಈಸ್ಟ್ ನ ಕೋಲ್ಕತ್ತಾ ಮತ್ತು ಕಾರ್ಪೊರೇಟ್ ಗ್ರೋತ್ ಇನಿಶಿಯೇಟಿವ್ ನ ನಿರ್ದೇಶಕ ಮತ್ತು ಕ್ಲಸ್ಟರ್ ಹೆಡ್ ಶ್ರೀ ಅಭಿಜಿತ್ ಸಿ.ಪಿ. ಅವರು, “ನಮ್ಮ ವೈದ್ಯರು ಕೇವಲ ಅಪರೂಪದ ಶಸ್ತ್ರಚಿಕಿತ್ಸೆ ಮಾತ್ರವೇ ಮಾಡಿಲ್ಲ, ಅತ್ಯಂತ ಅಪರೂಪದ ಮತ್ತು ತೀವ್ರತರವಾದ ಪ್ರಕರಣವನ್ನು ಯಶಸ್ವಿಗೊಳಿಸಿದ್ದಾರೆ. ಒಬ್ಬ ಯುವಕನಿಗೆ ಹೊಸ ಜೀವ ದಾನ ಮಾಡುವ ಜೊತೆಗೆ ರೋಗಿಯ ತಂದೆಯೂ ಸುರಕ್ಷಿತವಾಗಿ ಇರುವಂತೆ ನೋಡಿಕೊಂಡಿದ್ದಾರೆ. ಇಂತಹ ಸಾಧನೆಗಳು ವಿಶ್ವದ ಅತ್ಯುನ್ನತ ವೈದ್ಯಕೀಯ ಸೇವೆ ಹೊಂದಿರುವ ಪ್ರದೇಶಗಳ ಪಟ್ಟಿಯಲ್ಲಿ ಪೂರ್ವ ಭಾರತವನ್ನು ನೆಲೆಗೊಳಿಸುತ್ತದೆ” ಎಂದು ಹೇಳಿದರು.

ಇದಕ್ಕೆ ಪೂರಕವಾಗಿ ಮಾತನಾಡಿದ ನಾರಾಯಣ ಹೆಲ್ತ್ ನ ಗ್ರೂಪ್ ಸಿಓಓ ಶ್ರೀ ಆರ್. ವೆಂಕಟೇಶ್ ಅವರು, “ಅತ್ಯುನ್ನತ ನೈತಿಕ ಮಾನದಂಡಗಳನ್ನು ಕಾಪಾಡಿಕೊಳ್ಳುತ್ತಾ ವೈದ್ಯಕೀಯ ಸಾಮರ್ಥ್ಯದ ಗಡಿಯನ್ನು ಮೀರುವುದರ ಮೇಲೆ ನಾರಾಯಣ ಹೆಲ್ತ್‌ ನಂಬಿಕೆ ಇಟ್ಟಿದೆ. ಈ ಯಶಸ್ವಿ ಕಸಿ ಶಸ್ತ್ರಚಿಕಿತ್ಸೆಯು ನಮ್ಮ ಬಹುವಿಭಾಗೀಯ ಸಹಯೋಗ, ಅಂತಾರಾಷ್ಟ್ರೀಯ ಮಟ್ಟದ ಅತ್ಯುನ್ನತ ಪದ್ಧತಿಗಳು ಮತ್ತು ಅದ್ಭುತವಾದ ಚಿಕಿತ್ಸಾ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತದೆ. ನಮ್ಮ ತಂಡದ ಬಗ್ಗೆ ನಮಗೆ ಹೆಮ್ಮೆ ಇದೆ ಮತ್ತು ನಮ್ಮ ಮೇಲೆ ನಂಬಿಕೆ ಇಟ್ಟ ಕುಟುಂಬಕ್ಕೆ ಕೃತಜ್ಞತೆ” ಎಂದು ಹೇಳಿದರು.

ಈ ಪ್ರಕರಣವು ಈಗಾಗಲೇ ಭಾರತ ಮತ್ತು ವಿದೇಶಗಳ ವೈದ್ಯಕೀಯ ತಜ್ಞರ ಗಮನ ಸೆಳೆದಿರುವುದು ವಿಶೇಷವಾಗಿದೆ.

ನಾರಾಯಣ ಆರ್‌ಎನ್ ಟಾಗೋರ್ ಹಾಸ್ಪಿಟಲ್, ಮುಕುಂದಪುರ, ಕೋಲ್ಕತ್ತಾ ಕುರಿತು

ಕೋಲ್ಕತ್ತಾದ ಪೂರ್ವ ಮೆಟ್ರೋಪಾಲಿಟನ್ ಬೈಪಾಸ್‌ನ ಮುಕುಂದಪುರದಲ್ಲಿರುವ 681 ಹಾಸಿಗೆಗಳ ಈ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಜೆಸಿಐ ಮತ್ತು ಎನ್.ಎ.ಬಿ.ಎಚ್ ಮಾನ್ಯತೆ ಪಡೆದಿದೆ. ಹೃದಯ ವಿಜ್ಞಾನ (ಹೃದಯ ಕಸಿ ಸಹಿತ), ಮೂತ್ರಪಿಂಡ ವಿಜ್ಞಾನ (ಮೂತ್ರಪಿಂಡ ಕಸಿ ಸಹಿತ), ಜೀರ್ಣಾಂಗ ವಿಜ್ಞಾನ (ಯಕೃತ್ತು ಕಸಿ ಸಹಿತ), ನರವಿಜ್ಞಾನ, ಸಮಗ್ರ ಕ್ಯಾನ್ಸರ್ ಆರೈಕೆ, ಆರ್ಥೋಪೆಡಿಕ್ಸ್ ಮತ್ತು ಇತರ ವಿಶೇಷತೆಗಳಲ್ಲಿ ಪೂರ್ವ ಭಾರತದ ಅತ್ಯಂತ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾಗಿದೆ.

Gangadharendra Saraswati Swamiji ಕಾರ್ಮಿಕರೆಂದರೆ ಕರ್ಮ ಯೋಗಿಗಳು- ಶ್ರೀಗಂಗಾಧರೇಂದ್ರ ಸರಸ್ವತಿ ಶ್ರೀ

0

Gangadharendra Saraswati Swamiji ಕಾರ್ಮಿಕರೆಂದರೆ ಕರ್ಮಯೋಗಿಗಳು. ಕರ್ಮ ಮಾಡುವುದೇ ಅವರ ಧ್ಯೇಯ. ಮಾಡಿದ ಕರ್ಮ ಅಂದರೆ ಕೆಲಸಕ್ಕೆ ಪ್ರತಿಫಲ ಪಡೆಯುತ್ತಾರೆ..
ಸಂಪೂರ್ಣ ಕೆಲಸಕ್ಕೆ ಅರ್ಪಿಸಿಕೊಳ್ಳುವ ಅವರ ಕೌಶಲ ಅವರ ಜೀವನಕ್ಕೆ ಆಧಾರ.
ಮಾಲೀಕರು ಮೆಚ್ಚುವಂತೆ ಮಡುವ ಅವರ ಕಾಯಕಕ್ಕೆ ಸೂಕ್ತ ಪ್ರತಿಫಲ ನೀಡುತ್ತಾರೆ. ಕರ್ಮಣ್ಯೇ ವಾಧಿಕಾರಸ್ತೇ ಮಾಫಲೇಷು ಕದಾಚನ
ಎಂಬ ಗೀತಾವಾಕ್ಯ ಅದನ್ನೇ ಸಾರ್ಥಕವಾಗಿ ಹೇಳುತ್ತದೆ. ಕಾರ್ಖಾನೆಗಳಲ್ಲಿ ಮಾಲೀಕರು ಮೆಚ್ಚಿದರೆ
ಪಾರಮಾರ್ಥಿಕ ಅರ್ಥದಲ್ಲಿ ಮಾಲೀಕನೇ ಭಗವಂತ .
ನಮ್ಮ ಜೀವನದಲ್ಲೂ ಅಷ್ಟೆ ನಮ್ಮ ಕರ್ಮವನ್ನು ನಾವು ಮಾಡಬೇಕು. ಪ್ರತಿಫಲ
ಭಗವಂತನೇ ಕೊಡುತ್ತಾನೆ ಎಂದು
ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತಿ‌ ಮಹಾಸ್ವಾಮಿಗಳು ಹೇಳಿದರು.
Gangadharendra Saraswati Swamiji ಶಿವಮೊಗ್ಗದಲ್ಲಿ ನಡೆಯಲಿರುವ ಭಗವದ್ಗೀತಾ ಅಭಿಯಾನ 2025 ರ ಅಂಗವಾಗಿ ವಿಶೇಷ ಕಾರ್ಯಕ್ರಮಗಳ ಸರಣಿಯಲ್ಲಿ ಭಗವದ್ಗೀತೆ ಮತ್ತು ದೈನಂದಿನ ಜೀವನಕ್ಕೆ ಸಂದೇಶಗಳು ವಿಷಯವಾಗಿ
ಜಿಲ್ಲೆಯಾದ್ಯಂತ ಉಪನ್ಯಾಸ,ವಿಚಾರ ಸಂಕಿರಣಗಳು ನಡೆಯುತ್ತಿವೆ.
ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿಯ
ಶಾಂತಲಾ ಫೆರೋಕಾಸ್ಟಿಂಗ್ಸ್ ಸಭಾಂಗಣದಲ್ಲಿ ಕಾರ್ಮಿಕ ವಿಭಾಗಕ್ಕೋಸ್ಕರ ವಿಶೇಷ ಸಮಾರಂಭ ಏರ್ಪಡಿಸಲಾಗಿತ್ತು.
ನಿತ್ಯವೂ ಶ್ರಮಿಸುವ ಕಾಯಕಯೋಗಿಗಳು ಪೂಜ್ಯಶ್ರೀಗಳ ಗೀತಾ ಸಂದೇಶವನ್ನ ಕೇಳಿ ಆನಂದಿಸಿದರು.

ಶಾಂತಲಾ ಫೇರೊಕಾಸ್ಟಿಂಗ್ಸ್ ನ ಮಾಲೀಕರಾದ ಉದ್ಯಮಿ ಮತ್ತು ಮಾಜಿ ಶಾಸಕ ಶ್ರೀ ಎಸ್.ರುದ್ರೇಗೌಡರು
ಪೂಜ್ಯ ಸ್ವಾಮೀಜಿಯವರಿಗೆ ಫಲಪುಷ್ಪ ನೀಡಿ ಗೌರವ ಅರ್ಪಿಸಿದರು.

Dr Shalini Rajneesh IAS ಲೆಕ್ಕಪರಿಶೋಧನೆಯು ಸಾರ್ವಜನಿಕ ಹಿತಕಾಯುವ ನೈತಿಕ ದಿಕ್ಸೂಚಿಯಂತೆ- ಡಾ.ಶಾಲಿನಿ ರಜನೀಶ್.

0

Dr Shalini Rajneesh IAS ಭಾರತೀಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾದ 5ನೇ ಲೆಕ್ಕಪರಿಶೋಧನಾ ದಿವಸ – 2025 ಹಾಗೂ ಲೆಕ್ಕಪರಿಶೋಧನಾ ವಾರವನ್ನು ಇಂದು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ಉದ್ಘಾಟಿಸಿದರು.

“ಬದಲಾವಣೆಯನ್ನು ಮುನ್ನಡೆಸುವುದು ಮತ್ತು ಮೌಲ್ಯಗಳನ್ನು ಪುನಃ ಸ್ಥಾಪಿಸುವುದು: ನಂಬಿಕೆ, ನವೀನತೆ, ಸ್ಥಿರತೆ ಮತ್ತು ಹೊಣೆಗಾರಿಕೆ.” ಈ ವರ್ಷದ ಆಯ್ಕೆಯ ವಿಷಯವಾಗಿದೆ ಎಂದು ತಿಳಿಸಿದ ಮುಖ್ಯ ಕಾರ್ಯದರ್ಶಿಗಳು, 5ನೇ ಲೆಕ್ಕಪರಿಶೋಧನಾ ದಿವಸ 2025ರ ಉದ್ಘಾಟನೆಗೆ ಭಾರತೀಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪರಿಶೋಧನಾ ಇಲಾಖೆಯ ಅಧಿಕಾರಿಗಳೊಂದಿಗೆ ಭಾಗವಹಿಸುವ ಅವಕಾಶ ನನಗೆ ಅಪಾರ ಸಂತೋಷ ನೀಡಿದೆ. ಉತ್ತಮ ಆಡಳಿತಕ್ಕಾಗಿ ಲೆಕ್ಕಪರಿಶೋಧನಾ ಕ್ಷೇತ್ರದ ಸಮರ್ಪಿತ ಸೇವೆಯನ್ನು ನಾನು ಶ್ಲಾಘಿಸುತ್ತೇನೆ ಎಂದು ತಿಳಿಸಿದರು.

ಲೆಕ್ಕಪರಿಶೋಧನೆಯು ಸಾರ್ವಜನಿಕ ಹಿತವನ್ನು ಕಾಯುವ ನೈತಿಕ ದಿಕ್ಕೂಚಿಯಂತೆ, ಸಾರ್ವಜನಿಕ ಸೇವಕರು ಸತ್ಯ ಮತ್ತು ಸತ್ಯನಿಷ್ಠೆಯ ಮಾರ್ಗದಲ್ಲಿ ನಡೆಯುವಂತೆ ಮಾಡುತ್ತದೆ. ಸಾರ್ವಜನಿಕ ಸಂಸ್ಥೆಗಳ ಮೇಲೆ ನಾಗರೀಕರ ನಂಬಿಕೆ ಉಳಿಯುವುದಕ್ಕೆ, ತೆರಿಗೆದಾರರ ಹಣವನ್ನು ಅತ್ಯಂತ ಪ್ರಾಮಾಣಿಕವಾಗಿ ಬಳಸುವುದು ಪ್ರತಿಯೊಬ್ಬ ಅಧಿಕಾರಿಯ ಜವಾಬ್ದಾರಿಯಾಗಿದೆ ಎಂದರು.

Dr Shalini Rajneesh IAS ಲೆಕ್ಕಪರಿಶೋಧನಾ ದಿವಸ ಕೇವಲ ಆಚರಣೆಗೆ ಸೀಮಿತವಾದ ದಿನವಲ್ಲ- ಇದು ಸಾಂವಿಧಾನಿಕ ದೃಷ್ಟಿಕೋನದ ಜ್ಞಾಪನೆಯಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ನಿಯಂತ್ರಕರು ಮತ್ತು ಮಹಾ ಲೆಕ್ಕಪರಿಶೋಧಕರವರನ್ನು “ಬಹುಶಃ ಸಂವಿಧಾನದ ಅತ್ಯಂತ ಮಹತ್ವದ ಅಧಿಕಾರಿ” ಎಂದು ವರ್ಣಿಸಿದ್ದರು. ಸಾರ್ವಜನಿಕ ನಂಬಿಕೆಯ ರಕ್ಷಕ ಮತ್ತು ಸರ್ಕಾರಿ ಹಣಕಾಸಿನ ಪಾಲಕ ಎಂದೂ ಸಹ ಹೇಳಬಹುದು ಎಂದು ತಿಳಿಸಿದರು.

ಭಾರತದ ಸಂವಿಧಾನಿಕ ವಿನ್ಯಾಸದಲ್ಲಿ ಲೆಕ್ಕಪರಿಶೋಧಕ ಹಾಗೂ ಮಹಾ ಲೆಕ್ಕಪರಿಶೋಧಕರ (CAG) ಸ್ಥಾನ ಅತ್ಯಂತ ಮಹತ್ವದ್ದಾಗಿದೆ. ಸಂವಿಧಾನದ 148 ರಿಂದ 151ನೇ ಅನುಚ್ಛೇದಗಳ ಅಡಿಯಲ್ಲಿ ನೀಡಲಾದ ಅಧಿಕಾರದಂತೆ, ಸರ್ಕಾರಗಳ ಹಣಕಾಸು ವ್ಯವಹಾರಗಳಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಶಿಷ್ಟಾಚಾರವನ್ನು ಕಾಪಾಡುವುದು ಸಿಎಜಿ ಅವರ ಜವಾಬ್ದಾರಿಯಾಗಿದೆ. ಆದಾಯ, ವೆಚ್ಚ ಮತ್ತು ಸಾರ್ವಜನಿಕ ವಲಯ ಸಂಸ್ಥೆಗಳ ಪಕ್ಷಪಾತರಹಿತ ಲೆಕ್ಕಪರಿಶೋಧನೆ ನಡೆಸುವ ಮೂಲಕ, ಸಿಎಜಿ ಶಾಸನಾತ್ಮಕ ಮೇಲ್ವಿಚಾರಣೆಯನ್ನು ಬಲಪಡಿಸುತ್ತಾರೆ ಮತ್ತು ಪ್ರಜಾಪ್ರಭುತ್ವ ಆಡಳಿತದ ಮೇಲಿನ ನಂಬಿಕೆಯನ್ನು ದೃಢವಾಗಿಸುತ್ತಾರೆ.

ಸಿಎಜಿ ನಡೆಸುವ ಕಾರ್ಯಕ್ಷಮತೆ, ಅನುಸರಣೆ ಮತ್ತು ಹಣಕಾಸು ಲೆಕ್ಕಪರಿಶೋಧನೆಗಳು ವ್ಯವಸ್ಥಾತ್ಮಕ ಕೊರತೆಗಳನ್ನು ಗುರುತಿಸಲು, ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯನ್ನು ಉತ್ತೇಜಿಸಲು ಮತ್ತು ಸಾರ್ವಜನಿಕ ಆಡಳಿತದಲ್ಲಿ ಆರ್ಥಿಕತೆ ಹಾಗೂ ಪರಿಣಾಮಕಾರಿ ತತ್ವಗಳನ್ನು ಕಾಪಾಡಲು ನೆರವಾಗುತ್ತವೆ. ಸಿಎಜಿ ಅವರ ಸ್ವತಂತ್ರ ಪಾತ್ರವು ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡುವುದಷ್ಟೇ ಅಲ್ಲ, ಸರ್ಕಾರಿ ಇಲಾಖೆಗಳು ಉತ್ತಮ ಹಣಕಾಸು ಶಿಸ್ತಿನಿಂದ ಕಾರ್ಯನಿರ್ವಹಿಸಲು ಮತ್ತು ಸೇವಾ ವಿತರಣೆಯನ್ನು ಸುಧಾರಿಸಲು ದಾರಿದೀಪವಾಗುತ್ತದೆ. ಹೊಣೆಗಾರಿಕೆಗೆ ಸಂಬಂಧಿಸಿದ ಈ ಅಚಲ ಬದ್ಧತೆಯೇ, ಸಿಎಜಿ ಅನ್ನು ಭಾರತದ ಪ್ರಜಾಸತ್ತಾತ್ಮಕ ಮತ್ತು ಆಡಳಿತಾತ್ಮಕ ರಚನೆಯ ಅತ್ಯವಶ್ಯಕ ಸ್ತಂಭವಾಗಿಸಿದೆ.ಇಂದು, ವೇಗವಾಗಿ ಬದಲಾಗುತ್ತಿರುವ ಪರಿಸರ ಮತ್ತು ಸಂಕೀರ್ಣ ಆಡಳಿತ ಸವಾಲುಗಳ ನಡುವಲ್ಲಿ, ಈ ಪಾತ್ರದ ಮಹತ್ವ ಇನ್ನಷ್ಟು ಹೆಚ್ಚಾಗಿದೆ ಎಂದರು.

ಸಿಎಜಿ ಯವರ ಲೆಕ್ಕ ಪರಿಶೋಧನಾ ವರದಿಗಳು ನಮ್ಮ ಸರ್ಕಾರಿ ಇಲಾಖೆಗಳು ಮತ್ತು ಸಾರ್ವಜನಿಕ ಸಂಸ್ಥೆಗಳ ಕಾರ್ಯಕ್ಷಮತೆಯನ್ನು ಇನ್ನಷ್ಟು ಬಲಪಡಿಸಲು ಅಮೂಲ್ಯವಾದ ಒಳನೋಟಗಳು ಮತ್ತು ಪ್ರಾಯೋಗಿಕವಾಗಿ ಉಪಯೋಗಿಸಬಹುದಾದ ಶಿಫಾರಸ್ಸುಗಳನ್ನು ಒದಗಿಸುತ್ತವೆ. ಈ ವರದಿಗಳು ಕೇವಲ ಹೊಣೆಗಾರಿಕೆಯ ಸಾಧನಗಳಷ್ಟೇ ಅಲ್ಲ, ಅವು ಪಾರದರ್ಶಕತೆಯನ್ನು ಹೆಚ್ಚಿಸುತ್ತವೆ. ಸಾರ್ವಜನಿಕ ನಂಬಿಕೆಯನ್ನು ನಿರ್ಮಿಸುತ್ತವೆ. ಆಡಳಿತದಲ್ಲಿ ನಾಗರೀಕರ ನಿಷ್ಠೆ ಮತ್ತು ಪಾಲ್ಗೊಳ್ಳುವಿಕೆಯನ್ನು ಗಾಢಗೊಳಿಸುತ್ತವೆ.

ಸಿಎಜಿ ಲೆಕ್ಕ ಪರಿಶೋಧನೆಗಳು ಕೇವಲ ದೋಷಗಳನ್ನು ಗುರುತಿಸುವುದು ಅಥವಾ ವ್ಯತ್ಯಾಸಗಳನ್ನು ಸೂಚಿಸುವುದಕ್ಕೆ ಮಾತ್ರ ಸೀಮಿತವಾಗಿಲ್ಲ ಎಂಬುದನ್ನು ನಾವೆಲ್ಲರೂ ಮನಗಾಣುವುದು ಅತ್ಯಂತ ಮುಖ್ಯ. ವಾಸ್ತವವಾಗಿ ಕಾರ್ಯಕ್ಷಮತಾ ಲೆಕ್ಕಪರಿಶೋಧನೆಗಳು ಇದಕ್ಕಿಂತ ಭಿನ್ನವಾಗಿವೆ. ಅವು ಯೋಜನೆಗಳು, ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಹೇಗೆ ಜಾರಿಗೊಳಿಸಲಾಗುತ್ತಿದೆ ಎಂಬುದರ ಕುರಿತು ರಚನಾತ್ಮಕ, ಸಾಕ್ಷ್ಯಾಧಾರಿತ ಮೌಲ್ಯಮಾಪನಗಳನ್ನು ಒದಗಿಸುತ್ತವೆ ಮತ್ತು ವ್ಯವಸ್ಥೆಗಳ ಸುಧಾರಣೆಗಾಗಿ, ಹಾಗೂ ನಮ್ಮ ಜನತೆಗೆ ಉತ್ತಮ ಫಲಿತಾಂಶಗಳನ್ನು ನೀಡಲು ಸ್ಪಷ್ಟ ಜಾರಿಗೆ ತರುವಂತ ಶಿಫಾರಸುಗಳನ್ನು ನೀಡುತ್ತವೆ ಎಂದರು.

ಲೆಕ್ಕಪರಿಶೋಧನಾ ದಿವಸವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ಸಿಎಜಿ ಮತ್ತು ಸರ್ಕಾರದ ನಡುವಿನ ದೀರ್ಘಕಾಲದ ಬಾಂಧವ್ಯವನ್ನು ನಾವು ಗಟ್ಟಿಗೊಳಿಸಲು ಇದು ಸೂಕ್ತ ಸಮಯ – ಪರಸ್ಪರ ಗೌರವ ಮತ್ತು ಸಹಕಾರವನ್ನು ಬೆಳೆಸುವ ಬಂಧವಾಗಿದೆ.

Dr. Shalini Rajneesh ರೈತ ಉತ್ಪಾದಕ ಸಂಸ್ಥೆಗಳ ಆಯುಷ್ ಉತ್ಪನ್ನಗಳಿಗೆ ಬ್ರ್ಯಾಂಡ್ ಮಾಡಿ ಮಾರುಕಟ್ಟೆ ವ್ಯವಸ್ಥೆಮಾಡಬೇಕು- ಡಾ.ಶಾಲಿನಿ ರಜನೀಶ್.

0

Dr. Shalini Rajneesh ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ ಪ್ರಕಟಿಸಿರುವ ಔಷಧಿ ಸಸ್ಯಗಳ ಕೃಷಿ ಕೈಪಿಡಿಯ ಮಾಹಿತಿಯನ್ನು ಕೃಷಿ ಇಲಾಖೆಯೊಂದಿಗೆ ಹಂಚಿಕೊಳ್ಳಬೇಕು. ಹೂವುಗಳ ಮಾರಾಟಕ್ಕೆ ರೂಪಿಸಲಾಗಿರುವ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಮಾರುಕಟ್ಟೆ ರೂಪಿಸುವ ಅವಶ್ಯಕತೆ ಇದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ ಮತ್ತು ಅರಣ್ಯ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಚಿತ್ರಕಲಾ ಪರಿಷತ್ತಿನಲ್ಲಿ ಇಂದು ಮತ್ತು ನಾಳೆ ಎರಡುದಿನಗಳ ಕಾಲ ಹಮ್ಮಿಕೊಂಡಿರುವ ಅರಣ್ಯ ಮತ್ತು ಕೃಷಿ ಮೂಲಿಕಾ ಪ್ರದರ್ಶನ 2025ಕ್ಕೆ ಇಂದು ಭೇಟಿ ನೀಡಿದ್ದರು.

ಎಲೆಕ್ಟ್ರಾನಿಕ್ ಮಂಡಿಗಾಗಿ, ವಿವಿಧ ಉತ್ಪಾದನಾ ಪ್ರಕ್ರಿಯೆಯ ಯೋಜನಾ ಉತ್ಪನ್ನಗಳ ಶ್ರೇಣೀಕರಣವನ್ನು ಮಾಡುವ ಪ್ರಬಂಧಗಳಿಗೆ ಪ್ರಾಧಿಕಾರ ತರಬೇತಿ ನೀಡಬೇಕು, ನಂತರ ಮಾತ್ರ ಅದನ್ನು ಮಾರಾಟ ಮಾಡಬಹುದು ಮತ್ತು ಆಯಾ ಖರೀದಿದಾರರು ಮತ್ತು ರಫ್ತುದಾರರಿಗೆ ಮೌಲ್ಯೀಕರಿಸಬಹುದು ಎಂದರು.

ಕರ್ನಾಟಕ ರಾಜ್ಯ ಔಷಧೀಯ ಸಸ್ಯಗಳ ಪ್ರಾಧಿಕಾರವನ್ನು 2002 ರಲ್ಲಿ ಸ್ಥಾಪಿಸಲಾಯಿತು, ಅಂದಿನಿಂದ ಕರ್ನಾಟಕದಲ್ಲಿ 22 ಔಷಧೀಯ ಸಸ್ಯಗಳನ್ನು ಬೆಳೆಸಲಾಗುತ್ತಿದೆ. ಈ ಸಸ್ಯಗಳ ಮಾರಾಟಗಾರರ ಮತ್ತು ಖರೀದಿದಾರರಿಗೆ ಮಾರುಕಟ್ಟೆ ಸಂಬಂಧವನ್ನು ಆಯೋಜಿಸಲಾಗುತ್ತಿದೆ ಎಂದು ಮಾಹಿತಿ ಪಡೆದರು.

Dr. Shalini Rajneesh ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರದಿಂದ ಪ್ರತಿಯೊಂದು ಗಿಡಮೂಲಿಕೆಯ ಬಗ್ಗೆ ಪ್ರಮಾಣೀಕೃತ ಮಾಹಿತಿಯನ್ನು ಪಡೆಯಬೇಕು. ಒಣಗಿದ ಬೀಜ ಮತ್ತು ಎಲೆಗಳು ಅಥವಾ ಹೂವುಗಳಿಂದ ತಯಾರಿಸಲಾದ ಉತ್ಪನ್ನಗಳನ್ನು ಗುರುತಿಸಬೇಕು. ಇದರಿಂದ ಹೆಚ್ಚಿನ ಗಿಡಮೂಲಿಕೆಗಳನ್ನು ಉತ್ಪಾದಿಸಲು ಮತ್ತು ನಿಜವಾದ ಕೇಂದ್ರಗಳನ್ನು ಗುರುತಿಸಲು ರೈತರಲ್ಲಿ ಜಾಗೃತಿ ಮೂಡಿಸಲು ಬಳಸಬಹುದಾಗಿದೆ ಎಂದು ಮುಖ್ಯ ಕಾರ್ಯದರ್ಶಿಗಳು ತಿಳಿಸಿದರು.

ಪ್ರತಿ ವಸತಿ ಶಾಲೆಗಳ ಆವರಣದಲ್ಲಿ ಔಷಧೀಯ ಗುಣಗಳ 22 ಜಾತಿಯ 150 ಸಸ್ಯಗಳನ್ನು ಬೆಳೆಸಲು 402 ಶಾಲೆಗಳಿಗೆ ವಿಸ್ತರಿಸಬೇಕು. ವರ್ಷವಿಡಿ ಎಲ್ಲ ಮಾಹೆಗಳಲ್ಲಿ
ಗಳಲ್ಲಿ ಹಣ್ಣು ಬರುವಾಗ ಪ್ರತಿ ಶಾಲಾ ಆವರಣದಲ್ಲಿ ಔಷಧೀಯ ಗುಣಗಳುಳ್ಳ ಹಣ್ಣು ಗಿಡಗಳನ್ನು ಬೆಳೆಸಿದಲ್ಲಿ ಮಕ್ಕಳು ಮದ್ಯಾಹ್ನದ ಬಿಸಿಯೂಟದೊಂದಿಗೆ ಹಣ್ಣುಗಳನ್ನು ಬಳಸಬಹುದಾಗಿದೆ ಎಂದು ಸಲಹೆ ನೀಡಿದರು.

ಗುಣಪಡಿಸುವ ಗಿಡಮೂಲಿಕೆಗಳನ್ನು ಆಯುಷ್ ಇಲಾಖೆಯೊಂದಿಗೆ ಹಂಚಿಕೊಳ್ಳಬೇಕು ಮತ್ತು ಆಯುಷ್ ವೈದ್ಯರಿಗೆ ಈ ಗಿಡಮೂಲಿಕೆಗಳನ್ನು ಬಳಸಲು ಹೇಳಬೇಕು ಮತ್ತು ಅದು ಜಾಗೃತಿ ಕಾರ್ಯಕ್ರಮದ ಭಾಗವಾಗಿರಬೇಕು. ರೈತ ಉತ್ಪಾದಕ ಸಂಸ್ಥೆಗಳು ತಯಾರಿಸಿದ ಆಯುಷ್ ಉತ್ಪನ್ನಗಳಿಗೆ ಬ್ರ್ಯಾಂಡ್ ಮಾಡಿ ಮಾರುಕಟ್ಟೆ ವ್ಯವಸ್ಥೆ ಮಾಡಬೇಕು ಎಂದರು.

ಕರ್ನಾಟಕವು 17 ಔಷಧೀಯ ಸಸ್ಯಗಳ ಸಂರಕ್ಷಣಾ ಪ್ರದೇಶಗಳನ್ನು ಹೊಂದಿದೆ. ಪಶುವೈದ್ಯಕೀಯ ವಿಜ್ಞಾನ ಅಥವಾ ರೈತರಿಗೆ, ದನಕರುಗಳು ಮತ್ತು ಇತರ ಪ್ರಾಣಿಗಳನ್ನು ಸಾಕಲು ಮತ್ತು ರೋಗಗಳಿಂದ ಗುಣಪಡಿಸಲು ಗಿಡಮೂಲಿಕೆ ಸಸ್ಯಗಳ ಬಳಕೆಯ ಬಗ್ಗೆ ಮಾಹಿತಿಯನ್ನು ಜನಪ್ರಿಯಗೊಳಿಸಬೇಕು. ಪಶ್ಚಿಮ ಘಟ್ಟಗಳ ಬಗ್ಗೆ, ವಿಶೇಷವಾಗಿ ಬೆಟ್ಟ ಗುಡ್ಡಗಾಡು ಪ್ರದೇಶಗಳನ್ನು ಆಧರಿಸಿದ ಔಷಧೀಯ ಸಸ್ಯಗಳ ಬಗೆಗಿನ ಮಾಹಿತಿಯನ್ನು ಬುಡಕಟ್ಟು ಜನರಲ್ಲಿ ಜನಪ್ರಿಯಗೊಳಿಸಬೇಕು ಮತ್ತು ಅದರಿಂದ ಮಾರಾಟ ಮಾಡಬಹುದಾದ ಕೆಲವು ಉತ್ಪನ್ನಗಳನ್ನು ತಯಾರಿಸುವಲ್ಲಿ ಅವರಿಗೆ ತರಬೇತಿ ನೀಡಬೇಕು ಎಂದು ಹೇಳಿದರು.

ಅರಣ್ಯ ಮತ್ತು ಕೃಷಿ ಮೂಲಿಕಾ ಪ್ರದರ್ಶನದಲ್ಲಿ ಒಟ್ಟು 35 ಮಳಿಗೆಗಳು ಭಾಗವಹಿಸಿದ್ದು, ಇದರಲ್ಲಿ ರೈತ ಉತ್ಪಾದಕರು, ಗ್ರಾಮ ಸಮುದಾಯಗಳು, ವ್ಯಾಪಾರಿಗಳು, ರಾಜ್ಯದ ಒಳಗೆ ಅಥವಾ ಹೊರಗಿನ ಸಾವಯವ ರೈತರು ಸೇರಿದ್ದಾರೆ.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ, ಸ್ಮಿತಾ ಬಿಜ್ಜೂರ, ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್ಸಲನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

M.S.Santosh ಬಾಕಿಯಿರುವ ಪ್ರಕರಣಗಳ ವಿಲೇವಾರಿಗೆ ಡಿಸೆಂಬರ್ 13 ರಂದುಲೋಕ ಅದಾಲತ್- ನ್ಯಾ.ಎಂ.ಎಸ್.ಸಂತೋಷ್

0

M.S.Santosh ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಶೀಘ್ರ ವಿಲೇವಾರಿ ಹಾಗೂ ಪಕ್ಷಗಾರರಿಗೆ ತ್ವರಿತ ನ್ಯಾಯದಾನ ನೀಡುವ ಉದ್ದೇಶದಿಂದ ಡಿ.13 ರಂದು ಈ ವರ್ಷದ ಕೊನೆಯ ಲೋಕ್ ಅದಾಲತ್‌ನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ ಎಸ್ ತಿಳಿಸಿದರು.
ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಗುರುವಾರ ಲೋಕ್ ಅದಾಲತ್ ಹಾಗೂ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ಮತ್ತು ಸಾರಿಗೆ ಇಲಾಖೆಯ ದಂಡ ಪಾವತಿ ಬಾಕಿ ಪ್ರಕರಣಗಳಿಗೆ ಶೇ.50 ರಿಯಾಯಿತಿ ನೀಡಿ ಪ್ರಕರಣ ಇತ್ಯರ್ಥಪಡಿಸುವ ಸಂಬಂಧ ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಡಿ.13 ರಂದು ನಡೆಯುವ ಲೋಕ್ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ವೈವಾಹಿಕ ವಿವಾಹದ ವ್ಯಾಜ್ಯಗಳು, ಅಪಘಾತಕ್ಕೆ ಸಂಬಂಧಿಸಿದ ಪರಿಹಾರದ ವ್ಯಾಜ್ಯಗಳು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ವಿವಾದದ ದಾವೆಗಳು, ವೇತನ ಮತ್ತು ಸೇವೆಗೆ ಸಂಬಂಧಿಸಿದ ವ್ಯಾಜ್ಯಗಳು, ರಾಜೀ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಗ್ರಾಹಕರ ವೇದಿಕೆಯ ಪ್ರಕರಣಗಳು, ಸಾಲದ ಪ್ರಕರಣಗಳು, ಪಾಲು ವಿಭಾಗದ ದಾವೆಗಳು, ಸ್ಥಿರ ಆಸ್ತಿ ಸ್ವಾಧೀನದ M.S.Santosh ದಾವೆಗಳು, ಭೂಸ್ವಾಧೀನದ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳ ರಾಜೀ ಸಂಧಾನಕ್ಕಾಗಿ ಉಭಯ ಪಕ್ಷಗಾರರ ಉಪಸ್ಥಿತಿಯಲ್ಲಿ ನ್ಯಾಯಾಧೀಶರು ಮತ್ತು ನ್ಯಾಯಿಕೇತರ ಸಂಧಾನಕಾರರು ರಾಜೀ ಸಂಧಾನದ ಪ್ರಕ್ರಿಯೆಯನ್ನು ಕೈಗೊಂಡು ಪಕ್ಷಗಾರರು ವಿವಾದವನ್ನು ಇತ್ಯರ್ಥಪಡಿಸುವರು. ಅಂದರಂತೆ ಅಂತಿಮ ಆದೇಶವನ್ನು ಅದೇ ದಿನದಂದು ನೀಡಲಾಗುವುದು. ಸಾರ್ವಜನಿಕರು ಮತ್ತು ಪಕ್ಷಗಾರರು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕೋರಿದರು.
ದಿನಾಂಕ: 13.09.2025 ರಂದು ಕೈಗೊಳ್ಳಲಾದ ಈ ವರ್ಷದ 3 ನೇ ರಾಷ್ಟ್ರೀಯ ಲೋಕ್‌ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದ್ದ 14550 ರಷ್ಟು ಪ್ರಕರಣಗಳು ರಾಜೀ ಸಂಧಾನದ ಮೂಲಕ ಕೊನೆಗೊಂಡಿದ್ದು, ಅವುಗಳ ಮೂಲಕ ಪಕ್ಷಗಾರರು ಒಟ್ಟು ರೂ. 36,49,86,652/- ಮೊತ್ತದ ಪರಿಹಾರ ಒಳಗೊಂಡ ವಿವಾದಗಳನ್ನು ರಾಜೀ ಮಾಡಿಕೊಂಡಿರುತ್ತಾರೆ. ಅದೇ ಸಂದರ್ಭದಲ್ಲಿ ಒಟ್ಟು 1,46,464 ವ್ಯಾಜ್ಯ ಪೂರ್ವ ಪ್ರಕರಣಗಳು ಕೊನೆಗೊಂಡಿದ್ದು, ಅವುಗಳ ಮೂಲಕ ಒಟ್ಟು ರೂ. 46,95,49,044/- ಮೊತ್ತದ ಪರಿಹಾರ ಒಳಗೊಂಡ ವಿವಾದಗಳನ್ನು ರಾಜೀ ಮಾಡಿಕೊಂಡಿರುತ್ತಾರೆ ಎಂದು ತಿಳಿಸಿದರು.

B. Y. Raghavendra ಶಿವಮೊಗ್ಗದ ಅಕ್ಕಮಹಾದೇವಿ ವೃತ್ತ ಮೇಲ್ಸೇತುವೆ ಸನಿಹದ ಪ್ರದೇಶಗಳ ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದರಿಂದ ಚಾಲನೆ

0

B. Y. Raghavendra ಶಿವಮೊಗ್ಗದ ಅಕ್ಕಮಹಾದೇವಿ ವೃತ್ತ (ಉಷಾ ನರ್ಸಿಂಗ್ ಹೋಮ್) ಫ್ಲೈಓವರ್ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ!!!

ಶಿವಮೊಗ್ಗದ ಅಕ್ಕಮಹಾದೇವಿ ವೃತ್ತ (ಉಷಾ ನರ್ಸಿಂಗ್ ಹೋಮ್) ಮೇಲ್ಸೇತುವೆ ಸುತ್ತಮುತ್ತಲಿನ ಪ್ರದೇಶಗಳ ಸಮಗ್ರ ಅಭಿವೃದ್ಧಿ ಮತ್ತು ಸುಧಾರಣಾ ಕಾಮಗಾರಿಗಳಿಗೆ ಇಂದು ಶಂಕುಸ್ಥಾಪನೆ ನೆರವೇರಿಸಲಾಯಿತು. ಈ ಕಾರ್ಯಕ್ರಮದ ಮೂಲಕ ನಗರ ಮೂಲಸೌಕರ್ಯ ವಿಕಾಸಕ್ಕೆ ಮತ್ತೊಂದು ಮಹತ್ವದ ಹೆಜ್ಜೆಯನ್ನಿಡಲಾಗಿದೆ.

ಈ ಯೋಜನೆ ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಭಾರತೀಯ ರೈಲ್ವೆ ಇಲಾಖೆಯ ಜಂಟಿ ಆಶ್ರಯದಲ್ಲಿ ಕೈಗೊಳ್ಳಲಾಗುತ್ತಿದ್ದು, ಪ್ರದೇಶದ ಸಂಚಾರ ವ್ಯವಸ್ಥೆ, ಸುರಕ್ಷತೆ ಮತ್ತು ಮೂಲಸೌಕರ್ಯ ಸುಧಾರಣೆಗೆ ಮಹತ್ತರ ಕೊಡುಗೆಯನ್ನು ನೀಡಲಿದೆ.

ಯೋಜನೆಯ ಪ್ರಮುಖ ಕಾರ್ಯಗಳು:

  • ರಸ್ತೆ ಬದಿಯ ಒಳಚರಂಡಿ ನಿರ್ಮಾಣ — ಮಳೆಗಾಲದ ನೀರು ನಿಲ್ಲದಂತೆ ಪರಿಣಾಮಕಾರಿ ವ್ಯವಸ್ಥೆ
  • ಚರಂಡಿಗಳ ಮೇಲೆ ಡೆಕ್ ಸ್ಲಾಬ್ ಅಳವಡಿಕೆ
  • ಸಾರ್ವಜನಿಕರ ರಕ್ಷಣೆಗೆ ಸುರಕ್ಷತಾ ತಡೆಗೋಡೆ ನಿರ್ಮಾಣ
  • ರಾತ್ರಿ ಸಂಚಾರ ಸುಗಮತೆಗೆ ಹೊಸ ಬೀದಿ ದೀಪಗಳ ಅಳವಡಿಕೆ
  • ರಸ್ತೆಗಳ ನವೀಕರಣ ಮತ್ತು ಸುಧಾರಣೆ

B. Y. Raghavendra ಈ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಸಂಚಾರ ದಟ್ಟಣೆ ಕಡಿತ, ಮಳೆಗಾಲದಲ್ಲಿ ಜಲಾವೃತ ಸಮಸ್ಯೆಗೆ ಶಾಶ್ವತ ಪರಿಹಾರ ಮತ್ತು ಸಾರ್ವಜನಿಕರ ಸುರಕ್ಷತೆಗೆ ದೃಢ ಬಲ ನೀಡಲಿವೆ.

ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ಶಾಸಕರಾದ ಶ್ರೀ ಎಸ್. ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ, ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀ ಮಾಯಣ್ಣ ಗೌಡ, ಮಾಜಿ ಸೂಡಾ ಅಧ್ಯಕ್ಷರಾದ ಶ್ರೀ ನಾಗರಾಜ್ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Chess ರಾಷ್ಟ್ರಮಟ್ಟದ ಚೆಸ್ ಪಂದ್ಯಕ್ಕೆ ಅನಘಾ ಪಾಟಿಲ್ ಆಯ್ಕೆ

0

Chess ದಿನಾಂಕ ನವೆಂಬರ್ 23 ಹಾಗೂ 24 ರಂದು ಬೆಂಗಳೂರಿನ ಎಂ ಎಸ್ ರಾಮಯ್ಯ ಪಿ ಯು ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲೆಯ ಚಾಣಕ್ಯ ಚೆಸ್ ಸ್ಕೂಲ್ ವಿದ್ಯಾರ್ಥಿಯಾದ ಅನಘಾ ಪಾಟೀಲ್ 3 ನೇ ಸ್ಥಾನ ಪಡೆದು ರಾಷ್ಟ್ ಮಟ್ಟಕೆ ಆಯ್ಕೆ ಯಾಗಿ ಶಿವಮೊಗ್ಗ ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ, ಇವರಿಗೆ ಚಾಣಕ್ಯ ಚೆಸ್ ಸ್ಕೂಲ್ ವತಿಯಿಂದ ತುಂಬು Chess ಹೃದಯದ ಧನ್ಯವಾದಗಳು. ಡಿಸೆಂಬರ್ ತಿಂಗಳ 5,6, ಹಾಗೂ 7 ರಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಷ್ಟ್ರ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

Ramakrishna Vidyaniketan School ಶ್ರೀರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಿಗೆ ರಾಜ್ಯಮಟ್ಟಕ್ಕೆ ಆಯ್ಕೆ

0

Ramakrishna Vidyaniketan School ಇಲ್ಲಿನ ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯ ಮೂವರು ವಿದ್ಯಾರ್ಥಿನಿಯರು ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿದ್ದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
10ನೇ ತರಗತಿ ವಿದ್ಯಾರ್ಥಿಯಾದ ವೇದಾ ಕೆ ಇವರು ಹ್ಯಾಮರ್ ಥ್ರೋನಲ್ಲಿ ಪ್ರಥಮ ಸ್ಥಾನ,
9 ನೇ ತರಗತಿ ವಿದ್ಯಾರ್ಥಿಗಳಾದ ಧನಲಕ್ಷ್ಮಿ ಎಸ್ ಹ್ಯಾಮರ್ ಥ್ರೋನಲ್ಲಿ ದ್ವಿತೀಯ, ರಕ್ಷಾ ವೈ ಡಿ ತಟ್ಟೆ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
Ramakrishna Vidyaniketan School ಈ ಮೂರು ವಿದ್ಯಾರ್ಥಿಗಳು 2025 ರ ಡಿಸೆಂಬರ್ 5 ರಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ದೆಗೆ ಆಯ್ಕೆಯಾಗಿರುತ್ತಾರೆ.
ಅಂತೆಯೇ, ಪ್ರಣಿತಾ ಪಿ ಥ್ರೋಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ ಎಲ್ಲಾ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ, ಶಿಕ್ಷಕ ವೃಂದದ ಪರವಾಗಿ ಕಾರ್ಯದರ್ಶಿ ಶೋಭಾ ವೆಂಕಟರಮಣ ಅಭಿನಂದಿಸಿದ್ದಾರೆ.

SAIL-VISL ಗ್ರಾಮಾಂತರ ಶಿಕ್ಷಕರ ತರಬೇತಿಯತ್ತ – ಸೈಲ್- ವಿಐಎಸ್ಎಲ್ ನ ಚಿತ್ತ

0

SAIL-VISL ೨೫ನೇ ನವೆಂಬರ್, ೨೦೨೫ ರಂದು ಸೈಲ್- ವಿಐಎಸ್ಎಲ್ ನ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಯೋಜನೆ ಅಡಿಯಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಗ್ರಾಮೀಣ ತರಬೇತಿ ಚಟುವಟಿಕೆಗಳನ್ನು ಹೆಚ್ಚಿಸಲು ಅನುಕೂಲವಾಗುವಂತೆ ‘ಡಿಜಿಟಲ್ ಇಂಟರಾಕ್ಟೀವ್ ಪ್ಯಾನಲ್ ಮತ್ತು ಎರಡು ಕಂಪ್ಯೂಟರ್’ಗಳನ್ನು ಕರ್ನಾಟಕದ ಭದ್ರಾವತಿಯ ಶಿಕ್ಷಣ ಇಲಾಖೆಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ವಿಐಎಸ್ಎಲ್ ವತಿಯಿಂದ ಕಾರ್ಯಪಾಲಕ ನಿರ್ದೇಶಕರಾದ ಶ್ರೀ ಅನೂಪ್ ಕುಮಾರ್, ಶ್ರೀ ಬಿ. ವಿಶ್ವನಾಥ, ಮುಖ್ಯ ಮಹಾಪ್ರಬಂಧಕರು (ಮಾನವ ಸಂಪನ್ಮೂಲ), ಶ್ರೀ ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕರು (ಮಾನವ ಸಂಪನ್ಮೂಲ ಮತ್ತು ಸಾರ್ವಜನಿಕ ಸಂಪರ್ಕ) ಮತ್ತು ಸಿ.ಎಸ್.ಆರ್ ಅಪೆಕ್ಷ್ ಸಮಿತಿಯ ಸದಸ್ಯರು, ಶ್ರೀ ಅಜಯ್ ಡಿ. ಸೋಂಕುವಾರ್, ಉಪ ಮಹಾಪ್ರಬಂಧಕರು ಮತ್ತು ಸಿ.ಎಸ್.ಆರ್ ಅಪೆಕ್ಸ್ ಸಮಿತಿಯ ಸದಸ್ಯರು, ಶ್ರೀ ಎಮ್.ಎಲ್. ಯೋಗೇಶ್, ಕಿರಿಯ ಪ್ರಬಂಧಕರು ಮತ್ತು ಸಿ.ಎಸ್.ಆರ್ ಅಪೆಕ್ಷ್ ಸಮಿತಿಯ ನೋಡಲ್ ಅಧಿಕಾರಿ ಉಪಸ್ಥಿತರಿದ್ದರು. ಹಾಗೆಯೇ ಭದ್ರಾವತಿಯ ಶಿಕ್ಷಣ ಇಲಾಖೆಯಿಂದ ಶ್ರೀ ಎ.ಕೆ. ನಾಗೇಂದ್ರಪ್ಪ, ಕ್ಷೇತ್ರ ಶಿಕ್ಷಣ ಅಧಿಕಾರಿ, ಭದ್ರಾವತಿ, ಶ್ರೀ ಪಂಚಾಕ್ಷರಿ, ಕ್ಷೇತ್ರ ಸಂಪನ್ಮೂಲ ಅಧಿಕಾರಿ, ಮತ್ತು ಶ್ರೀ ದಯಾನಂದ, ಶಿಕ್ಷಣ ಸಂಯೋಜನಾಧಿಕಾರಿ, ಭದ್ರಾವತಿ ಉಪಸ್ಥಿತರಿದ್ದರು.
ಗಿISಐ ನ ಕಾರ್ಯಪಾಲಕ ನಿರ್ದೇಶಕರಾದ ಶ್ರೀ ಅನೂಪ್ ಕುಮಾರ್‌ರವರು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಯೋಜನೆ ಅಡಿಯಲ್ಲಿ ಕೈಗೊಳ್ಳಲಾದ ವಿವಿಧ ಚಟುವಟಿಕೆಗಳನ್ನು ಉದ್ಘಾಟಿಸುತ್ತ, ನಮ್ಮ ಸಂಸ್ಥೆಯ ಪರಿಧಿಯಲ್ಲಿರುವರೆಲ್ಲರ ಮುಖದಲ್ಲಿ ನಗುವನ್ನು ತರುವುದು, ಅವರ ಜೀವನವನ್ನು ಸುಧಾರಿಸುವುದು ಮತ್ತು ನಮ್ಮ ಸಾಮಾಜಿಕ ಜವಾಬ್ದಾರಿಗಳ ಮೂಲಕ ಅರ್ಥಪೂರ್ಣ ಬದಲಾವಣೆಯನ್ನು ತರುವ ಗುರಿಯನ್ನು ಹೊಂದಿದ್ದೇವೆ. ಸೈಲ್- ವಿಐಎಸ್ಎಲ್ ಭವಿಷ್ಯದಲ್ಲಿಯೂ ಸಹ ಇದನ್ನು ಮಾಡಲು ಶ್ರಮಿಸುತ್ತದೆ ಎಂದರು.
SAIL-VISL ಭದ್ರಾವತಿಯ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಎ.ಕೆ. ನಾಗೇಂದ್ರಪ್ಪನವರು ಮಾತನಾಡುತ್ತ, SಂIಐ-ಗಿISಐ ಆಡಳಿತ ಮಂಡಳಿ ಕಳೆದ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಾಧ್ಯಂತ ಸಕಾರಿ ಶಾಲೆಯ ಮಕ್ಕಳಿಗೆ ಬೆಂಚುಗಳು, ಮೇಜುಗಳು, ಬೋರ್ಡ್ಗಳು, ಶಾಲಾ ಪುಸ್ತಕಗಳು ಮತ್ತು ಬ್ಯಾಗ್‌ಗಳು ಮುಂತಾದ ಶೈಕ್ಷಣಿಕ ಉಪಕರಣಗಳು ಮತ್ತು ವಿಶೇಷ ಚೇತನ ಮಕ್ಕಳಿಗೆ ವಿಶೇಷ ಸಹಾಯಕ ಸಾಧನಗಳನ್ನು ಒದಗಿಸುವಲ್ಲಿ ನೀಡಿದ ಎಲ್ಲಾ ಸಹಾಯಕ್ಕಾಗಿ ಧನ್ಯವಾಗಳನ್ನು ಅರ್ಪಿಸಿದರು. ಇದು ಜಿಲ್ಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವಲ್ಲಿ ಬಹಳ ಸಹಾಯ ಮಾಡುತ್ತದೆ. ಕಳೆದ ವರ್ಷ ಸ್ವೀಕರಿಸಿದ ವೀಡಿಯೋ ಕಾನ್ಫರೆನ್ಸ್ ಮತ್ತು ವೆಬ್ ಕ್ಯಾಮೆರಾ ವ್ಯವಸ್ಥೆಯ ಜೊತೆಗೆ ಇಂದು ಸ್ವೀಕರಿಸಿದ ‘ಡಿಜಿಟಲ್ ಇಂಟರಾಕ್ಟೀವ್ ಪ್ಯಾನಲ್ ಮತ್ತು ಕಂಪ್ಯೂಟರ್‌ಗಳು ತಾಲ್ಲೂಕಿನ ೯೨೫ ಶಿಕ್ಷಕರಿಗೆ ಮತ್ತು ೪೬೦೦೦ ವಿದ್ಯಾರ್ಥಿಗಳಿಗೆ ತರಬೇತಿ ನೀಡುವಲ್ಲಿ ಬಹಳ ಸಹಕಾರಿಯಾಗಲಿದೆ ಎಂದರು.
ಶ್ರೀ ಯೋಗೇಶ್,ಎಮ್.ಎಲ್ ಸ್ವಾಗತಿಸಿದರು ಮತ್ತು ಶ್ರೀಮತಿ ವಾಣಿ ಪಾಟೀಲ್ ನಿರೂಪಿಸಿದರು.