Thursday, August 6, 2026
Thursday, August 6, 2026
Home Blog Page 82

ಮೋದೀಜಿ ಮನ್ ಕಿ ಬಾತ್ ಕೇಳೋಣ. ಸಂವಾದಕ್ಕೆಆಸಕ್ತರು ಹೆಸರು ನೋಂದಾಯಿಸಿ.

0

ಶಿವಮೊಗ್ಗ ನಗರದ ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿರುವ ತೃಪ್ತಿ ಹೆಲ್ತ್ ಕೇರ್ ಸೆಂಟರ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನ್‌ಕಿ ಬಾತ್ ಕೇಳೋಣ ಮತ್ತು ಮನ್‌ಕಿ ಬಾತ್ ಹೇಳೋಣ ಜೊತೆಗೆ ಭಾರತದ ಪ್ರಸಕ್ತ ವಿದ್ಯಾಮಾನಗಳ ಕುರಿತು ಮೇ 31ರ ಭಾನುವಾರ ಬೆಳಿಗ್ಗೆ 11ಗಂಟೆಯಿಂದ ಮಧ್ಯಾಹ್ನ 1ಗಂಟೆವರೆಗೆ ಸಂವಾದ ನಡೆಯಲಿದೆ.

ಈ ಸಂದರ್ಭದಲ್ಲಿ ಸೆಂಟರ್‌ನ ಸಂಸ್ಥಾಪಕ ಕಿಡ್ನಿ ಮತ್ತು ಮೂತ್ರ ಕೋಶ ರೋಗಗಳ ತಜ್ಞರಾದ ಡಾ| ಚಂದ್ರಶೇಖರ್ ಅವರ ನೇತೃತ್ವದಲ್ಲಿ ಸಂವಾದ ಕಾರ್ಯಕ್ರಮ ನಡೆಯ ಲಿದ್ದು, ಆಸಕ್ತರು ಮೊ. 9513878265, 8453475775 ಅಥವಾ 9483414449ರಲ್ಲಿ ನೊಂದಾಯಿಸಬಹುದು.

Karnataka State Legal Services Authority ಮೇ 30. ಬಂಜಾರ ಸಮುದಾಯದವರಿಗೆ ಕಾನೂನು ಅರಿವು ಮತ್ತು ಆರೋಗ್ಯ ತಪಾಸಣಾ ಶಿಬಿರ

0

Karnataka State Legal Services Authority ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಮೇ.30ರ ಬೆಳಗ್ಗೆ 9.30 ಕ್ಕೆ ನಗರದ ಬಂಜಾರ ಕನ್ವೆನ್ಷನ್ ಹಾಲ್‌ನಲ್ಲಿ ಬಂಜಾರ ಸಮುದಾಯದವರಿಗೆ ಕಾನೂನು ಅರಿವು ಹಾಗೂ ಆರೋಗ್ಯ ತಪಾಸಣಾ ಶಿಬಿರ ಮತ್ತು ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಗ್ರಂಥಪಾಲಕರುಗಳಿಗೆ ಒಂದು ದಿನದ ರಾಜ್ಯ ಮಟ್ಟದ ತರಬೇತಿ ಕಾರ್ಯಗಾರವನ್ನು ಏರ್ಪಡಿಸಲಾಗಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ಅನು ಸಿವರಾಮನ್‌ರವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು
ಹಾಗೂ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್‌ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿಗಳಾದ ವೆಂಕಟೇಶ್ ನಾಯ್ಕ್ ಟಿ.ರವರು ಕಾರ್ಯಕ್ರಮದ ಘನ ಉಪಸ್ಥಿತಿ‌ ವಹಿಸುವರು.
Karnataka State Legal Services Authority ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಶಶಿಧರ ಶೆಟ್ಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎ. ಮಂಜುನಾಥ, ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರಾದ ಎನ್.ಜಯದೇವ ನಾಯ್ಕ, ಜಿ.ಪಂ.ಸಿಇಓ ಹೇಮಂತ್ ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ ರವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ನಿಯಮಿತ ವ್ಯವಸ್ಥಾಪಕರಾದ ಎನ್.ರಾಜು, ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್ ಮತ್ತು ಅಧಿಕಾರಿಗಳು, ಮುಖಂಡರು ಪಾಲ್ಗೊಳ್ಳುವರು.

Friends Center ಐತಿಹಾಸಿಕ,ಪಾರಂಪರಿಕ ಸ್ಥಳಗಳಿಗೆ ಪ್ರವಾಸ:ಅನೇಕ ವಿಷಯಗಳ ಪರಿಚಯ,- ಬಿ.ಜಿ.ಧನರಾಜ್.

0

Friends Center ಐತಿಹಾಸಿಕ ಹಿನ್ನೆಲೆ ಹೊಂದಿರುವ ಪಾರಂಪರಿಕ ಸ್ಥಳಗಳಿಗೆ ಭೇಟಿ ನೀಡುವುದರಿಂದ, ಅಲ್ಲಿನ ಅನೇಕ ವಿಷಯಗಳ ಪರಿಚಯವಾಗಿ ಜ್ಞಾನ ವೃದ್ಧಿಗೆ ಸಹಕಾರಿ ಆಗುತ್ತದೆ ಎಂದು ಫ್ರೆಂಡ್ಸ್ ಸೆಂಟರ್ ನ ಅಧ್ಯಕ್ಷರಾದ ಬಿ.ಜಿ.ಧನರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು.

ಫ್ರೆಂಡ್ಸ್ ಸೆಂಟರ್ ವತಿಯಿಂದ ಮಂಗಳವಾರ ಸದಸ್ಯರು ಮಹಿಳೆಯರು ಸೇರಿದಂತೆ ಪ್ರವಾಸವನ್ನು ಆಯೋಜಿಸಲಾಗಿತ್ತು. ಅಂದು ಬೆಳಿಗ್ಗೆ 6.00 ಗಂಟೆಗೆ ಪ್ರವಾಸ ಆರಂಭಿಸಲಾಯಿತು.
ಆನಂದಪುರದ ಸಮೀಪವಿರುವ ಮಲಂದುಾರು ಎಂಬಲ್ಲಿ 435 ವರ್ಷ ಇತಿಹಾಸವುಳ್ಳ ಅತೀ ಸುಂದರ ಪುಷ್ಕರಣಿ ಇರುವ “ಚಂಪಕ ಸರಸು” ಎಂಬ ಸ್ಥಳ ವೀಕ್ಷಿಸಿ ನಂತರ
ಸಾಗರ ಮಾರ್ಗದ ಎಡಭಾಗದಲ್ಲಿರುವ ಸುಮಾರು 800 ವರ್ಷಗಳ ಹಿಂದಿನ ಕಲ್ಲಿನ ವಾಸ್ತುಶಿಲ್ಪದ “ಉಮಾಶಂಕರ” ದೇವರ ದರ್ಶನ ಪಡೆದು, ಇಲ್ಲಿಂದ ಅರ್ಧ ಕಿಲೆುಾೕಮೀಟರ್ ದುಾರದ ಕಾಡಿನ ನಡುವೆ ಇರುವ 1300 ವರ್ಷದ ಹಿಂದೆ ನಿರ್ಮಾಣಗುಾಂಡ ಕೇರಳ ಶೈಲಿಯ ದೇಗುಲದಲ್ಲಿ ಕುಳಿತಿರುವ “ಕಂಚಿ ಕಾಳಮ್ಮ” ದೇವಿಯ ದರ್ಶನ ಪಡೆದು
ಹಾಗೆಯೇ ಮಾರ್ಗ ಮದ್ಯದಲ್ಲಿ ಐದು ಜನ ಸೇರಿ ಬಾಚಿ ಹಿಡಿದರುಾ ಸಿಗದಂತ 800 ವರ್ಷದ “ಹಳೆಯ ವೃಕ್ಷ” ವೀಕ್ಷಿಸಿ, ನಂತರ ದಾರಿಯಲ್ಲಿ ಬಯಲಲ್ಲಿ ಕುಳಿತಿರುವ “ಅನಂತನಾಗ” ದೇವರ ದರ್ಶನ ಪಡೆದು, ಇಕ್ಕೇರಿಯ ಪುರಾತನ ಕಾಲದ ಸುಪ್ರಸಿದ್ದ ವಾಸ್ತುಶಿಲ್ಪದ ಶಿಲಾಮಂದಿರವಾದ “ಶ್ರೀ ಅಘೆುಾರೇಶ್ವರ” (ಎಡಭಾಗದಲ್ಲಿ ಸೆುಾೕಮಸುಾತ್ರ ಇರುವ ಅಪರುಾಪದ ಶಿವ) ದೇವರ ಹಾಗುಾ “ಅಖಿಲಾಂಡೇಶ್ವರಿ” ದೇವಿಯ ದರ್ಶನ ಪಡೆದು ಅಲ್ಲಿಂದ ಸಿಗಂದುಾರಿಗೆ ತೆರಳಿದೆವು.
Friends Center ಮಾರ್ಗ ಮದ್ಯದಲ್ಲಿ ಚಂದ್ರಚಕೆುಾೕರಿ ಚಿತ್ರದ ಶುಾಟಿಂಗ್ ಸ್ಪಾಟ್ ಆದ “ಮಡೆನುಾರು” ಮರಳಿನ ಸೇತುವೆಯನ್ನು ವೀಕ್ಷಿಸಿ ಕಣ್ಮನ ತುಂಬಿಕೆುಾಂಡರು. ಹಾಗೆಯೇ “ಸಿಗಂದುಾರು ಚೌಡೇಶ್ವರಿ ದೇವಿ”ಯ ದರ್ಶನ ಪಡೆದು ಕಣ್ತುಂಬಿಕೆುಾಂಡು, ನಂತರ ಬರುವಾಗ ಸುಪ್ರಸಿದ್ದ ಸಿಗಂದುಾರು ನುಾತನವಾಗಿ ನಿರ್ಮಿಸಿರುವ ಸೇತುವೆ ಹಾಗುಾ ಪ್ರಕೃತಿ ಸೌಂದರ್ಯ ಸವಿದೆವು ಎಂದು ಅತ್ಯಂತ ಉತ್ಸುಕದಿಂದ ಪ್ರವಾಸದ ಪರಿಯನ್ನು ವಿವರಿಸಿದರು.
ಅಲ್ಲಿಂದ ಕಡೆಯದಾಗಿ ಶಕ್ತಿಕೇಂದ್ರವಾದ ವರದಳ್ಳಿಯ ಶ್ರೀಧರ ಆಶ್ರಮಕ್ಕೆ ಬಂದು, ಅಲ್ಲಿನ ಬೆಟ್ಟದ ತಪ್ಪಲಲ್ಲಿರುವ 280 ಮೆಟ್ಟಿಲೇರಿ ಬಸವಣ್ಣನ ಬಾಯಿಂದ ಬರುವ ಶ್ರೀಧರ ತೀರ್ಥ ಸ್ನಾನ ಮಾಡಿ ನಂತರ ಶ್ರೀಧರ ಗುರುಗಳಿದ್ದ ಮಂದಿರದಲ್ಲಿ ದರ್ಶನ
ಶಿವಮೆಾಗ್ಗದ ಕಡೆಗೆ ಮುಖ ಮಾಡಿದರು.
ಈ ವೇಳೆ ಫ್ರೆಂಡ್ಸ್ ಸೆಂಟರ್ ನ ಸದಸ್ಯರು ಪ್ರವಾಸದಲ್ಲಿ ಅತ್ಯಂತ ಉತ್ಸುಕದಿಂದ ಪಾಲ್ಗೊಂಡಿದ್ದರು.

ಬಸ್ಸು ಮತ್ತು ಬೈಕ್ ಢಿಕ್ಕಿ. ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

0

ಶಿವಮೊಗ್ಗ ತಾಲೂಕಿನ ಸುತ್ತುಕೋಟೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಬೈಕ್‌ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಬೈಕ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಆತಂಕ ಮೂಡಿಸಿದೆ.


ಶಿವಮೊಗ್ಗ ತಾಲೂಕಿನ ಸುತ್ತುಕೋಟೆಯ ಶ್ರೀ ಸಪ್ತಕೋಟಿ ಪೆಟ್ರೋಲ್ ಬಂಕ್‌ ಸಮೀಪ ಈ ದುರ್ಘಟನೆ ನಡೆದಿದೆ. ಶಿಕಾರಿಪುರದಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ, ಶಿವಮೊಗ್ಗದಿಂದ ಶಿಕಾರಿಪುರದ ಕಡೆಗೆ ತೆರಳುತ್ತಿದ್ದ ಪಲ್ಸರ್ ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ಪರಿಣಾಮ ಬೈಕ್‌ ನೇರವಾಗಿ ಬಸ್ಸಿನ ರೇಡಿಯೇಟರ್ ಭಾಗಕ್ಕೆ ಗುದ್ದಿ ಅಲ್ಲಿ ಸಿಲುಕಿಕೊಂಡಿದೆ. ಅಪಘಾತದ ತೀವ್ರತೆಗೆ ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಬೈಕಿನಲ್ಲಿದ್ದ ಸವಾರರ ದೇಹಗಳಿಗೂ ಬೆಂಕಿ ತಗುಲಿರುವುದು ಸ್ಥಳದಲ್ಲಿದ್ದವರನ್ನು ಬೆಚ್ಚಿಬೀಳಿಸಿದೆ.

ಘಟನೆಯಲ್ಲಿ 23 ವರ್ಷದ ಅಬ್ನಾನ್‌ ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಇದೇ ವೇಳೆ ಬಸ್‌ನೊಳಗಿದ್ದ ಪ್ರಯಾಣಿಕರು ಬೆಂಕಿ ಕಾಣುತ್ತಿದ್ದಂತೆಯೇ ಆತಂಕಕ್ಕೊಳಗಾಗಿ, ಎಮರ್ಜನ್ಸಿ ಡೋರ್ ಹಾಗೂ ಕಿಟಕಿಗಳ ಮೂಲಕ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತದ ಪರಿಣಾಮ ಸವಳಂಗ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳಕ್ಕೆ ಡಿವೈಎಸ್‌ಪಿ ಸಂಜೀವ್ ಕುಮಾರ್‌, ಕುಂಸಿ ಠಾಣೆಯ ಪಿಎಸ್‌ಐ ಪಾರ್ವತಿ ಬಾಯಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

B.Y. Raghavendra ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಬೃಹತ್ ಸೇತುವೆ ಕಾಮಗಾರಿ ಪರಿಶೀಲಿಸಿದ ಸಂಸದ ರಾಘವೇಂದ್ರ.

0

B.Y. Raghavendra ನಮ್ಮ ಭಾಗದ ಸಂಪರ್ಕ ಕ್ರಾಂತಿಗೆ ಅತ್ಯಂತ ನಿರ್ಣಾಯಕವಾಗಿರುವ ರಾಷ್ಟ್ರೀಯ ಹೆದ್ದಾರಿ-766C (NH-766C) ರಸ್ತೆ ಅಭಿವೃದ್ಧಿ ಯೋಜನೆಯಡಿ, ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ತಲೆಎತ್ತಲಿರುವ ಎರಡು ಪ್ರಮುಖ ಬೃಹತ್ ಸೇತುವೆಗಳ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಇಂದು ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ವಲಯದ ಹಿರಿಯ ಇಲಾಖಾ ಅಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಜಂಟಿ ಸ್ಥಳ ಪರಿಶೀಲನೆ ನಡೆಸಿದರು.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ (MoRTH) ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಒಟ್ಟು 13.832 ಕಿ.ಮೀ ಉದ್ದದ ಸಂಪೂರ್ಣ ಮರು-ಜೋಡಣೆ ಒಳಗೊಂಡಿರುವ ಈ ಬೃಹತ್ ಯೋಜನೆಯ ಒಟ್ಟು ಮಂಜೂರಾದ ವೆಚ್ಚ ₹313.56 ಕೋಟಿ ರೂ.ಗಳಾಗಿದೆ. ಮಲೆನಾಡಿನ ಸಾರಿಗೆ ವ್ಯವಸ್ಥೆಯನ್ನೇ ಬದಲಾಯಿಸಲಿರುವ ಈ ಯೋಜನೆಯ ಪ್ರಗತಿಯನ್ನು ವೇಗಗೊಳಿಸಲು ಇಲಾಖೆಯ ಮುಖ್ಯ ಇಂಜಿನಿಯರ್‌ಗಳು ಮತ್ತು ಗುತ್ತಿಗೆದಾರರೊಂದಿಗೆ ಸವಿಸ್ತಾರವಾಗಿ ಚರ್ಚೆ‌ ನಡೆಯಿತು.

ಸೇತುವೆಗಳ ತಾಂತ್ರಿಕ ವಿವರ ಹಾಗೂ ವಿಶೇಷತೆ:

ಸೇತುವೆ 1 (ಚೈನೇಜ್ 2+010 ಕಿ.ಮೀ ನಿಂದ 3+550 ಕಿ.ಮೀ): ಕಾಮಗಾರಿ ಸ್ಥಳ ವೀಕ್ಷಿಸಿ ಗುಣಮಟ್ಟ ಪರಿಶೀಲನೆ ನಡೆಯಿತು. ಈ ಸೇತುವೆಯು ಸಾರ್ವಜನಿಕರ ಅನುಕೂಲಕ್ಕಾಗಿ ಫುಟ್‌ಪಾತ್ ವ್ಯವಸ್ಥೆಯೊಂದಿಗೆ ಒಟ್ಟು 16.00 ಮೀಟರ್ ಅಗಲವನ್ನು (11.00 ಮೀಟರ್ ಕ್ಯಾರೇಜ್ ವೇ) ಹೊಂದಿರಲಿದೆ.

ಸೇತುವೆ 2 (ಚೈನೇಜ್ 6+730 ಕಿ.ಮೀ ನಿಂದ 7+430 ಕಿ.ಮೀ): ಹಿನ್ನೀರಿನ ಮತ್ತೊಂದು ಪ್ರಮುಖ ಕೊಂಡಿಯಾಗಿರುವ ಈ ಭಾಗದ ಕಾಮಗಾರಿಯ ತಾಂತ್ರಿಕ ಸ್ಥಿತಿಗತಿಯನ್ನು ಸಂಸದ ರಾಘವೇಂದ್ರ ಪರಿಶೀಲಿಸಿದರು.
ಇದು ಸಹ ಫುಟ್‌ಪಾತ್ ಸೇರಿದಂತೆ ಒಟ್ಟು 16.00 ಮೀಟರ್ ವೈಜ್ಞಾನಿಕ ಅಗಲದೊಂದಿಗೆ ನಿರ್ಮಾಣವಾಗುತ್ತಿದೆ.

ಅಧಿಕಾರಿಗಳಿಗೆ ಸಂಸದ. ರಾಘವೇಂದ್ರ ನೀಡಿದ ಸೂಚನೆಗಳು:

B.Y. Raghavendra ನಿಗದಿಪಡಿಸಲಾದ ಅವಧಿಯೊಳಗೆ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲು ವೇಗವನ್ನು ಹೆಚ್ಚಿಸಬೇಕು..

ಹಿನ್ನೀರು ಪ್ರದೇಶವಾಗಿರುವುದರಿಂದ ಪರಿಸರ ಸಮತೋಲನ ಕಾಯ್ದುಕೊಂಡು, ಅತ್ಯುನ್ನತ CV ಗುಣಮಟ್ಟದ ಇಂಜಿನಿಯರಿಂಗ್ ಮಾನದಂಡಗಳೊಂದಿಗೆ ಸುಸ್ಥಿರ ಸೇತುವೆಗಳನ್ನು ನಿರ್ಮಿಸುವುದು ಅಗತ್ಯವಾಗಿದೆ.

B.Y. Raghavendra ಮಣ್ಣಿನ ಫಲವತ್ತತೆ , ಆರೋಗ್ಯ ತಿಳಿಯಲು ಮಣ್ಣು ಪರೀಕ್ಷೆ ಸಹಕಾರಿ- ಬಿ.ವೈ.ರಾಘವೇಂದ್ರ

0

B.Y. Raghavendra ‘ಸಮೃದ್ಧ ಮಣ್ಣು, ಸುಸ್ಥಿರ ಕೃಷಿ’ ಎನ್ನುವ ಆಶಯದೊಂದಿಗೆ, ಶಿರಾಳಕೊಪ್ಪದ ಉಡುತಡಿ ರೈತ ಉತ್ಪಾದಕ ಕಂಪನಿ ಲಿಮಿಟೆಡ್ ಆವರಣದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಭವ್ಯ ಕಾರ್ಯಕ್ರಮದಲ್ಲಿ “ನೂತನ ಮಣ್ಣು ಪರೀಕ್ಷಾ ಕೇಂದ್ರವನ್ನು” ಅಧಿಕೃತವಾಗಿ ಉದ್ಘಾಟಿಸಿ ಲೋಕಾರ್ಪಣೆ ಮಾಡಲಾಯಿತು.

ನಮ್ಮ ಭಾಗದ ರೈತ ಬಾಂಧವರು ತಮ್ಮ ಜಮೀನಿನ ಮಣ್ಣಿನ ಫಲವತ್ತತೆ ಮತ್ತು ಆರೋಗ್ಯವನ್ನು ವೈಜ್ಞಾನಿಕವಾಗಿ ಅರಿತು, ಅದಕ್ಕನುಗುಣವಾಗಿ ಸೂಕ್ತ ಗೊಬ್ಬರ ಹಾಗೂ ಬೆಳೆಗಳನ್ನು ಆಯ್ಕೆ ಮಾಡಿಕೊಳ್ಳಲು ಈ ಕೇಂದ್ರವು ಅತ್ಯಂತ ಸಹಕಾರಿಯಾಗಲಿದೆ.

ಅನುದಾನ ಮತ್ತು ಅನುಷ್ಠಾನ: ನಮ್ಮ ಕೃಷಿ ಇಲಾಖೆ (ಶಿವಮೊಗ್ಗ) ಇವರ ಅನುಷ್ಠಾನದೊಂದಿಗೆ, 2023-24ನೇ ಸಾಲಿನ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (MPLADS) ಅನುದಾನದ ಅಡಿಯಲ್ಲಿ ಈ ಅತ್ಯಾಧುನಿಕ ಮಣ್ಣು ಪರೀಕ್ಷಾ ಕೇಂದ್ರವನ್ನು ನಿರ್ಮಿಸಲಾಗಿದೆ.

ಧ್ಯೇಯ: “ನಿಮ್ಮ ಮಣ್ಣನ್ನು ತಿಳಿಯಿರಿ” (Know Your Soil) ಎಂಬ ಮಂತ್ರದೊಂದಿಗೆ ನಮ್ಮ ತಾಲ್ಲೂಕಿನ ಪ್ರತಿಯೊಬ್ಬ ರೈತನಿಗೂ ಡಿಜಿಟಲ್ ಹಾಗೂ ವೈಜ್ಞಾನಿಕ ಕೃಷಿಯ ಸೌಲಭ್ಯವನ್ನು ಹತ್ತಿರವಾಗಿಸುವುದು ನಮ್ಮ ಮೂಲ ಉದ್ದೇಶವಾಗಿದೆ.

ರೈತರ ಆದಾಯ ದ್ವಿಗುಣಗೊಳಿಸಲು ಮತ್ತು ಮಣ್ಣಿನ ಗುಣಮಟ್ಟ ಕಾಪಾಡಲು ಇಂತಹ ತಾಂತ್ರಿಕ ಸೌಲಭ್ಯಗಳು ತಳಮಟ್ಟದಲ್ಲಿ ಸಿಗುವಂತಾಗಬೇಕು. ಈ ನೂತನ ಕೇಂದ್ರದ ಸೌಲಭ್ಯವನ್ನು ಶಿರಾಳಕೊಪ್ಪ ಹಾಗೂ ಸುತ್ತಮುತ್ತಲಿನ ಸಮಸ್ತ ರೈತ ಬಾಂಧವರು ಸದುಪಯೋಗಪಡಿಸಿಕೊಳ್ಳಬೇಕಾಗಿ ವಿನಂತಿಸುತ್ತೇನೆ.

B.Y. Raghavendra ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು, ಉಡುತಡಿ ರೈತ ಉತ್ಪಾದಕ ಕಂಪನಿಯ ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ನೂರಾರು ಪ್ರಗತಿಪರ ರೈತರು ಉಪಸ್ಥಿತರಿದ್ದರು.

ಮಂಡಗದ್ದೆ ಸಮೀಪದ ಕಣಗಲಕೊಪ್ಪದ ಮನೆಯೊಂದರಲ್ಲಿ ಕಾಳಿಂಗ ಸರ್ಪ ಪ್ರತ್ಯಕ್ಷ : ಹಿಡಿದು ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

0

ಶಿವಮೊಗ್ಗ ಜಿಲ್ಲೆಯ ಮಂಡಗದ್ದೆ ಶಾಖೆಯ ಕಣಗಲಕೊಪ್ಪ ಗ್ರಾಮದ 17ನೇ ಮೈಲಿಗಲ್ಲಿನ ಸಮೀಪದ ಮನೆಯೊಂದರಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತು.

ಮಾಹಿತಿ ತಿಳಿದ ತಕ್ಷಣ ಉರಗ ತಜ್ಞ ಸ್ನೇಕ್ ಕಿರಣ್ ಸ್ಥಳಕ್ಕೆ ಧಾವಿಸಿ ಯಶಸ್ವಿಯಾಗಿ ಹಾವನ್ನು ರಕ್ಷಣೆ ಮಾಡಿದ್ದಾರೆ.

ಮಂಡಗದ್ದೆ ಶಾಖೆಯ ಕಣಗಲಕೊಪ್ಪ ಗ್ರಾಮದ ಮನೆಯೊಂದರ ಸೌದೆ ಬಲೆಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಮನೆಯವರು ಆತಂಕಗೊಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಅರಣ್ಯಾಧಿಕಾರಿಗಳ ಸೂಚನೆಯ ಮೇರೆಗೆ ಉರಗ ತಜ್ಞ ಸ್ನೇಕ್ ಕಿರಣ್ ತಕ್ಷಣ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಹಲವು ನಿಮಿಷಗಳ ಕಾರ್ಯಾಚರಣೆಯ ಬಳಿಕ ಸುಮಾರು 15 ಅಡಿ ಉದ್ದ ಹಾಗೂ 8.5 ಕೆಜಿಗೂ ಅಧಿಕ ತೂಕವಿದ್ದ ಬೃಹತ್ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿಯುವಲ್ಲಿ ಯಶಸ್ವಿಯಾದರು.

CM Siddharamaiah ರಾಜಿನಾಮೆ ಸಲ್ಲಿಸುವ ಮುನ್ನ ಸೀಎಂ ಸಿದ್ಧರಾಮಯ್ಯ ಜಾಲತಾಣದಲ್ಲಿ ಹೇಳಿದ್ದೇನು?

0

CM Siddharamaiah ಇಂದು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ.

ಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ನಾನು ಮುಂದೊಂದು ದಿನ ಈ ರಾಜ್ಯದ ಶಾಸಕ, ಮಂತ್ರಿ, ವಿರೋಧ ಪಕ್ಷದ ನಾಯಕ, ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ. ಇಂತದ್ದೊಂದು ದುಬಾರಿಯಾದ ಕನಸು ನನಸಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಿಂದ.

ಬುದ್ಧ, ಬಸವ, ಬಾಬಾ ಸಾಹೇಬರು, ಮಹಾತ್ಮ ಗಾಂಧಿಯವರೇ ನನ್ನ ಆದರ್ಶ. ನನ್ನ ನಲವತ್ತೆಂಟು ವರ್ಷಗಳ ರಾಜಕೀಯ ಜೀವನದಲ್ಲಿ ನಾಡಿನ ಅವಕಾಶ ವಂಚಿತ, ಶೋಷಿತ, ಬಡ ಜನರ ಪರವಾಗಿ ಪ್ರಾಮಾಣಿಕವಾಗಿ ದುಡಿದ ಸಂತೃಪ್ತಿಯಿದೆ.

ನನ್ನನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆರಿಸಿ, ಈ ವರೆಗೆ ಮುಖ್ಯಮಂತ್ರಿಯಾಗಿ ಜನಸೇವೆಗೆ ಅವಕಾಶ ಮಾಡಿಕೊಟ್ಟ ಪಕ್ಷದ ಶಾಸಕರಿಗೆ, ನನ್ನ ಹೆಗಲಿಗೆ ಹೆಗಲಾಗಿ ದುಡಿದ ಸಂಪುಟ ಸಹೋದ್ಯೋಗಿಗಳಿಗೆ, ಅವಕಾಶ ನೀಡಿದ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಗೂ ನನ್ನ ರಾಜಕೀಯ ಬದುಕಿನುದ್ದಕ್ಕೂ ಪ್ರೀತಿ ತುಂಬಿದ, ಅಭಿಮಾನಿಸಿದ, ಇಲ್ಲಿಯ ತನಕ ಕೈಹಿಡಿದು ನಡೆಸಿದ ಹೃದಯವಂತ ಕನ್ನಡಿಗರಿಗೆ ನಾನು ಚಿರಋಣಿ.

CM Siddharamaiah ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು. ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರವೇ ಸೀಮಿತ, ಸಕ್ರಿಯ ರಾಜಕಾರಣಕ್ಕಲ್ಲ.

ನನ್ನ ಜೀವದ ಕೊನೆಯುಸಿರು ಇರುವ ವರೆಗೂ ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಂವಿಧಾನ ವಿರೋಧಿ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡುತ್ತೇನೆ.
ಧನ್ಯವಾದ
-ಎಂದು ನಿರ್ಗಮಿತ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ‌

High Court ಶಿವಮೊಗ್ಗದಲ್ಲೇ ಹೈಕೊರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಲಿ- ಡಿ.ಜಿ.ನಾಗರಾಜ್.

0

High Court ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ ಕಳೆದ ಹಲವು ದಿನಗಳಿಂದ ಶಿವಮೊಗ್ಗ ವಕೀಲರ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ, ಶಿವಮೊಗ್ಗ ಘಟಕದಿಂದ ಬೆಂಬಲ ನೀಡಲಾಗಿದೆ. ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು ಎಂಬುದು ನಮ್ಮ ಒತ್ತಾಯ ಕೂಡಾ ಆಗಿದೆ ಎಂದು ಘಟಕದ ಜಿಲ್ಲಾಧ್ಯಕ್ಷ ಡಿ.ಜಿ.ನಾಗರಾಜ ಇವರು ವಕೀಲರ ಸಂಘಕ್ಕೆ ಬೆಂಬಲ ಪತ್ರ ನೀಡಿ ತಿಳಿಸಿದ್ದಾರೆ.

ಅವರು ಇಂದು ತಮ್ಮ ಪತ್ರಕರ್ತರ ಸಂಘದ ಬೆಂಬಲಿಗರೊಂದಿಗೆ ಪ್ರತಿಭಟನಾ ಸ್ಥಳಕ್ಕೆ ತೆರಳಿ ಪ್ರತಿಭಟನೆಯಲ್ಲಿ ಭಾಗವಹಿಸಿ ತಮ್ಮ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು.

ಮಲೆನಾಡು ಮತ್ತು ಮಧ್ಯ ಕರ್ನಾಟಕದ ಲಕ್ಷಾಂತರ ಜನರ ನ್ಯಾಯ ಪ್ರಾಪ್ತಿಯ ಹಕ್ಕಿಗಾಗಿ ಪಕ್ಷಾತೀತವಾಗಿ ಒಗ್ಗೂಡಲು ನಮ್ಮ ಪತ್ರಿಕಾ ಸಂಘದ ಎಲ್ಲಾ ಪದಾಧಿಕಾರಿಗಳ, ಸದಸ್ಯರುಗಳ ಬೆಂಬಲ ಇದೆ. ಮಂಗಳೂರು ಪೀಠಕ್ಕೆ ಶಿವಮೊಗ್ಗ ಸೇರಿಸುವ ಪ್ರಸ್ತಾವನೆಗೆ ನಮ್ಮ ತೀವ್ರ ವಿರೋಧ ಇದೆ ಎಂದು ತಿಳಿಸಿದರು.

ನಮ್ಮ ಮಲೆನಾಡು ಮತ್ತು ಸುತ್ತ-ಮುತ್ತಲಿನ ಜಿಲ್ಲೆಗಳ ಜನರ ಸ್ವಾಭಿಮಾನದ ಹಾಗೂ ನ್ಯಾಯದ ಸಾಕಾರಗೊಳಿಸಲು ಶಿವಮೊಗ್ಗದಲ್ಲಿ ಪೀಠ ಸ್ಥಾಪನೆಯಾಗುವುದು ಅತ್ಯಗತ್ಯವಾಗಿದೆ ಎಂದು ತಿಳಿಸಿದರು.

High Court ಕರ್ನಾಟಕದ ಹೃದಯಭಾಗವಾದ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಸಾರ್ವಜನಿಕರು, ರೈತರು, ಕಾರ್ಮಿಕರು ಹಾಗೂ ತಾಯಂದಿರು ಸಣ್ಣಪುಟ್ಟ ವ್ಯಾಜ್ಯಗಳಿಗೂ 300ಕ್ಕೂ ಹೆಚ್ಚು ಕಿಲೋಮೀಟರ್ ದೂರದ ಬೆಂಗಳೂರಿಗೆ ಅಲೆಯುವ ಪರಿಸ್ಥಿತಿ ಇದೆ. ಶಿವಮೊಗ್ಗವು ಕೇವಲ ಒಂದು ಜಿಲ್ಲೆಯಲ್ಲ, ಇದು ಚಿತ್ರದುರ್ಗ, ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಬೆಸೆಯುವ ಮಧ್ಯಬಿಂದು. ಹಾಗಾಗಿ ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು ಎಂದು ಒತ್ತಾಯಿಸಿದರು.

ನ್ಯಾಯಯುತ ಬೇಡಿಕೆಗಳನ್ನು ಈಡೇರಿಕೆಗೆ ವಕೀಲರು ಕಳೆದ ಹಲವು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದು, ಶಿವಮೊಗ್ಗ ಕೇಂದ್ರವಾಗಿರಿಸಿ ಹೈಕೋರ್ಟ್ ಸಂಚಾರಿ ಪೀಠ ಬೇಕು ಎನ್ನುವ ಅವರ ಬೇಡಿಕೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ, ಶಿವಮೊಗ್ಗ ಘಟಕದ ಸಂಪೂರ್ಣ ಬೆಂಬಲವಿದ್ದು, ಕೊನೆಯವರೆಗೂ ನಾವು ವಕೀಲರ ಸಂಘದೊಂದಿಗೆ ಬೆಂಬಲವಾಗಿ ನಿಲ್ಲಲಿದ್ದೇವೆ ಎಂದು ಜಿಲ್ಲಾಧ್ಯಕ್ಷ ಡಿ.ಜಿ.ನಾಗರಾಜ ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ, ಶಿವಮೊಗ್ಗ ಘಟಕದ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಮೊದಲಾದವರು ಹಾಜರಿದ್ದರು.

Gruhalakshmi Yojana ಗೃಹಲಕ್ಷ್ಮಿ ಯೋಜನೆಯಲ್ಲಿ ಬ್ಯಾಂಕ್ ಖಾತೆ ಜೋಡಣೆ ಸಮಸ್ಯೆಯಿಂದ ಬಾಕಿಯಿರುವ ಪ್ರಕರಣತಕ್ಷಣ ಇತ್ಯರ್ಥ ಪಡಿಸಿ- ಎಚ್.ಎಂ.ಮಧು.

0

Gruhalakshmi Yojana ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳು ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಯಾವುದೇ ವಿಳಂಬವಿಲ್ಲದೆ ತಲುಪುವಂತೆ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಶಿವಮೊಗ್ಗ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮಧು ಹೆಚ್ ಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಐದು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಗೃಹಲಕ್ಷ್ಮಿ ಯೋಜನೆಯಡಿ ತಾಂತ್ರಿಕ ಕಾರಣಗಳಿಂದ ಅಥವಾ ಬ್ಯಾಂಕ್ ಖಾತೆ ಜೋಡಣೆ ಸಮಸ್ಯೆಯಿಂದ ಬಾಕಿ ಉಳಿದಿರುವ ಮಹಿಳೆಯರ ಖಾತೆಗಳಿಗೆ ಶೀಘ್ರವಾಗಿ ಹಣ ಜಮಾ ಆಗಲು ಕ್ರಮ ಕೈಗೊಳ್ಳಬೇಕು ಎಂದ ಅವರು ಬಾಕಿ ಇರುವ ಅರ್ಜಿಗಳನ್ನು ತಕ್ಷಣವೇ ಇತ್ಯರ್ಥಪಡಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ತಾಲ್ಲೂಕಿನಲ್ಲಿ ಈವರೆಗೆ 108159 ಫಲಾನುಭವಿಗಳು ನೋಂದಣಿಯಾಗಿದ್ದು, 42 ಫಲಾನುಭವಿಗಳ ಎನ್‌ಪಿಸಿಐ ಬಾಕಿ ಇದೆ. 2044 ಐಟಿ/ಜಿಎಸ್‌ಜಿ ಫಲಾನುಭವಿಗಳಿದ್ದು 304 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮರಣ ಹೊಂದಿರುವ ಬಗ್ಗೆ 332 ಅರ್ಜಿ ಸ್ವೀಕರಿಸಲಾಗಿದೆ.
ಗೃಹಲಕ್ಷ್ಮಿ ಯೋಜನೆಯಲ್ಲಿ ತಂತ್ರಜ್ಞಾನ ಆಧಾರಿತ ಬದಲಾವಣೆಯೊಂದನ್ನು ತರಲಿದ್ದು ಫಲಾನುಭವಿಗಳು ತಮ್ಮ ಖಾತೆಯನ್ನು ಬಯೋಮೆಟ್ರಿಕ್ ಹಾಗೂ ಮೊಬೈಲ್ ಸಂಖ್ಯೆಯೊAದಿಗೆ ಮರು ನೋಂದಣಿ ಮಾಡಿಕೊಳ್ಳಬೇಕಿದೆ. ಈ ಕುರಿತು ರಾಜ್ಯ ಸರ್ಕಾರ ಶೀಘ್ರದಲ್ಲೇ ಆದೇಶ ಹೊರಡಿಸಲಿದೆ ಎಂದು ತಿಳಿಸಿದರು.
ಹಾಗೂ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಾಲ ನೀಡುವುದರ ಮಾಹಿತಿ ಸುಳ್ಳಾಗಿದ್ದು ಫಲಾನುಭವಿಗಳು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದರು.

Gruhalakshmi Yojana ತಾಲ್ಲೂಕಿನಲ್ಲಿ ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರದ 2013ರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ಮೇ ಮತ್ತು ಜೂನ್ ತಿಂಗಳ 5ಕೆಜಿ ಅಕ್ಕಿ ಬಂದಿದೆ. ಅದೇ ರಿತಿ ರಾಜ್ಯ ಸರ್ಕಾರ ನಿಡಬೇಕಿದ್ದ ಮೇ ಮತ್ತು ಜೂನ್ ತಿಂಗಳ ಅಕ್ಕಿಯು ಮುಂದಿನ ತಿಂಗಳು ನೀಡಲಾಗುವುದು.
ಬಿಪಿಎಲ್ ಕಾರ್ಡ್ ರದ್ದಾಗಿ ಎಪಿಎಲ್ ಕಾರ್ಡ್ ಆಗಿ ಪರಿವರ್ತನೆಯಾಗಿರುವ 4260 ಕಾರ್ಡ್ಗಳಲ್ಲಿ 4057 ಕಾರ್ಡ್ಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗಿದೆ. 203 ಕಾರ್ಡ್ಗಳು ಬಾಕಿ ಉಳಿದಿದ್ದು ಇದರಲ್ಲಿ 114 ಜನರು ಆದಾಯ ತೆರಿಗೆ ಫೈಲ್ ಮಾಡಿ 45 ದಿನಗಳಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಕಾರ್ಡುದಾರರ ಕಾರ್ಡ್ಗಳನ್ನು ಬಿಪಿಎಲ್ ಕಾರ್ಡ್ಗಳಾಗಿ ಪರಿವರ್ತನೆ ಮಾಡಲಾಗಿದೆ ಮತ್ತು ಪಡಿತರದಾರರು ನಿಗದಿತ ದಾಖಲೆಗಳಾದ ರೂ.1,20,000 ದೊಳಗಿನ ಆದಾಯದ ಕುರಿತು ಐಟಿ ಫೈಲ್ ಮಾಡುವುದು ಮತ್ತು 10 ಚದರ ಅಡಿಯೊಳಗೆ ಮನೆ ಇದ್ದರೆ ಬಿಪಿಎಲ್ ಕಾರ್ಡ್ ಪರಿವರ್ತನೆಗೆ ಅರ್ಜಿಯನ್ನು ಸಲ್ಲಿಸಬಹುದು ಎಂದು ತಿಳಿಸಿದರು.

ತಾಲ್ಲೂಕಿನಲ್ಲಿ ಶೂನ್ಯ ವಿದ್ಯುತ್ ಬಿಲ್ ಪಡೆಯುತ್ತಿರುವ ಗ್ರಾಹಕರ ವಿವರಗಳನ್ನು ಪಡೆದ ಅಧ್ಯಕ್ಷರು, ತಾಂತ್ರಿಕ ದೋಷಗಳಿಂದ ವಂಚಿತರಾದ ಗ್ರಾಹಕರ ಸಮಸ್ಯೆಗಳನ್ನು ಮೆಸ್ಕಾಂ ಅಧಿಕಾರಿಗಳು ಸ್ಥಳದಲ್ಲೇ ಪರಿಹರಿಸಬೇಕು ಎಂದರು.

ಯುವನಿಧಿ ಮತ್ತು ಶಕ್ತಿ ಯೋಜನೆ: ಪದವಿ ಮುಗಿಸಿ ನಿರುದ್ಯೋಗಿಗಳಾಗಿರುವ ಯುವಕ-ಯುವತಿಯರಿಗೆ ಭತ್ಯೆ ತಲುಪುತ್ತಿರುವ ಬಗ್ಗೆ ಮಾಹಿತಿ ಪಡೆದ ಅವರು ತಾಲ್ಲೂಕಿನಲ್ಲಿ ಈವರೆಗೆ 3551 ಫಲಾನುಭವಿಗಳಿಗೆ ರೂ.9,32,14,500 ಹಣವನ್ನು ಜಮಾ ಮಾಡಲಾಗಿದೆ ಎಂದರು.

ತಾಲ್ಲೂಕಿನಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣದ ಯಶಸ್ವಿ ಅನುಷ್ಠಾನದ ಕುರಿತು ಸಾರಿಗೆ ಸಂಸ್ಥೆಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.
ಸಭೆಯಲ್ಲಿ ತಾಲ್ಲೂಕು ಗ್ಯಾರಂಟಿ ಸಮಿತಿ ಸದಸ್ಯರು, ತಾಲ್ಲೂಕು ಇಓ ಪರಮೇಶ್ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.