Wednesday, February 11, 2026
Wednesday, February 11, 2026
Home Blog Page 82

Women’s Cricket ಅಂಧರ ಕ್ರಿಕೆಟ್ ವಿಶ್ವಕಪ್ ಗೆದ್ದ ತಂಡದಲ್ಲಿ ರಿಪ್ಪನ್ ಪೇಟೆ ಯುವತಿಯ ಕಮಾಲ್

0

Women’s Cricket ಮಹಿಳಾ ಅಂಧರ T20 ವಿಶ್ವಕಪ್ ಪ್ರಶಸ್ತಿಯನ್ನು ಭಾರತದ ಮಹಿಳಾ ಅಂಧರ ಕ್ರಿಕೆಟ್ ತಂಡ ಪಡೆದಿದೆ.

ಮೊದಲ ಬಾರಿಗೆ ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತದ ಮಹಿಳೆಯರ ತಂಡ ದ ಆನಂದಕ್ಕೆ ಪಾರವೇ ಇಲ್ಲ.

ಭಾನುವಾರ ಶ್ರೀಲಂಕಾದ ಕೊಲಂಬೊದಲ್ಲಿ ನಡೆದ ರೋಚಕ ಫೈನಲ್‌ನಲ್ಲಿ ದೀಪಿಕಾ ಟಿ.ಸಿ. ಅವರ ನಾಯಕತ್ವದ ಭಾರತ ತಂಡ
ನೇಪಾಳವನ್ನು ಏಳು ವಿಕೆಟ್‌ಗಳಿಂದ ಮಣಿಸಿತು.

ಕರ್ಣಾಟಕದ ಮೂವರಲ್ಲಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್ ಪೇಟೆಯ ಕಾವ್ಯಾ, ವಿ.‌ಕ್ರಿಕೆಟ್ ಕ್ಷೇತ್ರದಲ್ಲಿ ಗಮನ ಸೆಳೆದಿದ್ದಾರೆ

ಗೆಲುವಿಗೆ ಕೈಜೋಡಿಸಿದ ರಿಪ್ಪನ್ ಪೇಟೆಯ ಪ್ರತಿಭೆ ಕಾವ್ಯಾ .ವಿ .

ಕಾವ್ಯಾ ವಿ ರಿಪ್ಪನ್ ಪೇಟೆಯ ಬರುವೆ ಗ್ರಾಮದ ಆಚಾರ್ ಕೇರಿ ನಿವಾಸಿ
ಜಯಮ್ಮ–ವೆಂಕಟೇಶ್ ಆಚಾರ್ ದಂಪತಿಯ ಪುತ್ರಿ .
ನಾಲ್ಕನೇ ತರಗತಿಯವರೆಗೂ ಪಟ್ಟಣದ ಬರುವೆ ಗ್ರಾಮದ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದಾರೆ.

Women’s Cricket ದೃಷ್ಟಿಯಲ್ಲಿ ಸಮಸ್ಯೆಯುಂಟಾದ ಕಾರಣ ‌ಕಾವ್ಯ ಅವರು ಶಿವಮೊಗ್ಗದ ಗೋಪಾಲ ಬಡಾವಣೆಯ ಶಾರದ ಅಂಧರ ಶಾಲೆಯಲ್ಲಿ 2009–2015 ರವರೆಗೆ ಶಿಕ್ಷಣ ಪಡೆದರು.

ಬಳಿಕ ಬೆಂಗಳೂರಿನ ಸಮರ್ಥನಂ ಅಂಧರ ವಿಕಾಸ ಕೇಂದ್ರದಲ್ಲಿ ಬಿ.ಎ ಪದವಿ ಪೂರೈಸಿದ್ದಾರೆ.
ಪ್ರಸ್ತುತ ಜ್ಞಾನಭಾರತಿ ಎಜುಕೇಶನ್ ಸೊಸೈಟಿಯಲ್ಲಿ ಕಾವ್ಯ ಅವರು
ಎಂ.ಎ ವ್ಯಾಸಂಗ ಮಾಡುತ್ತಿದ್ದಾರೆ

ಐದು ಹೆಣ್ಣುಮಕ್ಕಳ ಬಡ ಕುಟುಂಬದಲ್ಲಿ ಬೆಳೆದ ಕಾವ್ಯಾ
ಪೋಷಕರಿಗೆ ಗ್ರಾಮಸ್ಥರ ವತಿಯಿಂದ ಅಭಿಮಾನಪೂರ್ವಕ ಸನ್ಮಾನಮಾಡಲಾಯಿತು.

ಈ ಸಂಧರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ , ಪತ್ರಕರ್ತ ರಫ಼ಿ ರಿಪ್ಪನ್ ಪೇಟೆ ಅವರು ಭಾಗಿಯಾಗಿದ್ದರು.

Sri Harakere Kalikamba Devasthana ಹರಕೆರೆ ಶ್ರೀಕಾಳಿಕಾಂಬ ದೇಗುಲದಲ್ಲಿ ದೀಪೋತ್ಸವ.

0

Sri Harakere Kalikamba Devasthana ಗಾಂಧಿ ಬಜಾರ್ ನ ಶ್ರೀ ಹರಕೆರೆ ಕಾಳಿಕಾಂಬ ದೇವಸ್ಥಾನ ಸಮಿತಿಯಿಂದ ನ. ೨೬ರ ನಾಳೆ ಕಡೆಯ ಕಾರ್ತಿಕ ದೀಪೋತ್ಸವದ ನಿಮಿತ್ತ ಶ್ರೀ ಕಾಳಿಕಾಂಬ ದೇವಿಗೆ ವಿಶೆಷ ಪೂಜಾ ಅಲಂಕಾರ ಹಾಗೂ ಸಂಜೆ ೬ಗಂಟೆಗೆ ದೇವಿಯ ಸನ್ನಿಧಿಯಲ್ಲಿ ದೀಪಗಳನ್ನು ಎಲ್ಲಾ ಭಕ್ತಾದಿ ಗಳಿಂದ ಬೆಳಗಿಸುವ ದೀಪೋತ್ಸವ ವನ್ನು ಹಮ್ಮಿಕೊಳ್ಳಲಾಗಿದೆ.

Sri Harakere Kalikamba Devasthana ದೀಪೋತ್ಸವ ನಂತರ ಮಹಾ ಮಂಗಳಾರತಿ ಹಾಗೂ ಪ್ರಸಾದ ವಿನಿಯೋಗವಿರುತ್ತದೆ. ಸಮಸ್ತ ಸಮಾಜ ಬಾಂಧವರು ದೀಪೋತ್ಸವ ದಲ್ಲಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗಲು ಸಮಿತಿಯ ಅಧ್ಯಕ್ಷ ಎಂ. ಶ್ರೀನಿವಾಸ ಮೂತಿ, ಪ್ರಧಾನ ಕಾರ್ಯದರ್ಶಿ ಕೆ. ಮೌನೇಶ್ವ ರಾಚಾರ್ ಮತ್ತು ಖಜಾಂಚಿ ಎಸ್. ಜಗನ್ನಾಥ ಅವರು ಕೋರಿದ್ದಾರೆ

IMA KARNATAKA ಸ್ಟೆಥಾಸ್ಕೋಪ್ ಹಿಡಿದ‌ ಕೈ ,ಕವನ ಬರೆದಾಗ…

0

IMA KARNATAKA ಮುಂದಿನ ದಿನಗಳಲ್ಲಿ ನಮ್ಮ ಮಕ್ಕಳು ಕನ್ನಡ ಪುಸ್ತಕಗಳನ್ನು ರದ್ದಿಗೆ ಕೊಡದಂತೆ ಆಗದಿರಲಿ. ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕವಯಿತ್ರಿ, ಸಾಹಿತಿ ಸವಿತಾ ನಾಗಭೂಷಣ ಹೇಳಿದರು.

ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗದ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ವಿಶೇಷ ಕವಿಗೋಷ್ಠಿಯಲ್ಲಿ ಮಾತನಾಡಿ, ವೈದ್ಯರಾದವರು ಕವನ ರಚನೆಯಲ್ಲಿ ಇಷ್ಟು ತೊಡಗಿಸಿಕೊಂಡಿರುವುದು ವಿಶೇಷವಾಗಿದೆ ಎಂದು ತಿಳಿಸಿದರು.

ಪದ್ಯ, ಕವಿತೆ ರಚನೆಗೆ ಇಂತಹ ವೃತ್ತಿ ಎಂಬುದಿಲ್ಲ. ಸೂಕ್ಷ್ಮ ಮನಸ್ಸಿನವರು ಇರುವವರೆಗೂ ಕಾವ್ಯಗಳು ಹುಟ್ಟುತ್ತದೆ. ಕಾವ್ಯಗಳು ರಚನೆಯಾಗುವವರೆಗೂ ಬದುಕಿನಲ್ಲಿ ಮತ್ತು ವಿಶ್ವದಲ್ಲಿ ಶಾಂತಿ ನೆಲೆಸಿರುತ್ತದೆ. ಕವಿತೆಗಳಿಗೆ ಪ್ರಾಣ ಪ್ರತಿಷ್ಠಾಪನೆ ಮಾಡುವವನು ಓದುಗ. ಓದುಗನ ಹೃದಯಕ್ಕೆ ಕವಿತೆ ಸ್ಪಂದಿಸಿತೆಂದರೆ ಅದಕ್ಕೆ ಜೀವ ಬಂದಂತೆ ಎಂದರು.

ಕವಯಿತ್ರಿ, ಸಾಹಿತಿ ಸವಿತಾ ನಾಗಭೂಷಣ ಅವರು ಕಾವ್ಯರಚನೆಯ ಬಗ್ಗೆ, ಕನ್ನಡ ಭಾಷೆಯ ಉಳಿವಿನ ಬಗ್ಗೆ ಮಾತನಾಡಿದರು. ಡಾ. ಚಿತ್ರ ಶ್ರೀನಿವಾಸ್ ಪ್ರಾರ್ಥನೆ ನಡೆಸಿದರು. ಡಾ. ವಿನಯ ಶ್ರೀನಿವಾಸ ಅವರು ಕಾರ್ಯಕ್ರಮ ನಿರ್ವಹಿಸಿದರು.

IMA KARNATAKA ಡಾ. ಗುರುದತ್ತ.ಕೆ.ಎನ್., ಡಾ. ವೈ.ಜೆ.ಅನುಪಮ, ಡಾ. ಡೋ.ನ.ವೆಂಕಟೇಶ್, ಡಾ. ವಿಜಯಲಕ್ಷ್ಮೀ ರವೀಶ್, ಡಾ. ಕೌಸ್ತುಭ ಅರುಣ್, ಡಾ. ಭಾರತಿ.ಎಚ್.ಜಿ., ಡಾ. ಅರವಿಂದನ್, ಡಾ. ಶಾಂತಲಾ ಮತ್ತು ಡಾ. ಚಂದ್ರಕಾಂತ್.ಎಸ್.ಎಸ್ ಸ್ವರಚಿತ ಕವಿತೆಗಳನ್ನು ಓದಿದರು.

ಐಎಂಎ ಶಿವಮೊಗ್ಗದ ಅಧ್ಯಕ್ಷ ಡಾ. ಕೆ.ಆರ್.ರವೀಶ್, ಕಾರ್ಯದರ್ಶಿ ಡಾ. ಕೆ.ಎಸ್.ಶುಭ್ರತಾ, ಮಹಿಳಾ ಘಟಕದ ಅಧ್ಯಕ್ಷೆ ಡಾ. ಕೌಸ್ತುಭಾ ಅರುಣ್ ಮತ್ತು ಇತರ ವೈದ್ಯರು ಉಪಸ್ಥಿತರಿದ್ದರು.

Lions Club Shimoga ಲಯನ್ಸ್ ಕ್ಲಬ್ ನಿಂದ ತುಂಗಾನಗರದಲ್ಲಿ ಉಚಿತ ನೇತ್ರ ತಪಾಸಣೆ & ಕನ್ನಡಕ ವಿತರಣೆ.

0

Lions Club, Shimoga ಜಿ.ಪಂ. ತಾ.ಪಂ. ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ, ಜಿಲ್ಲಾ ಅಂಧತ್ವ ನಿಯಂತ್ರಣ ಸಂಘ ಹಾಗೂ ಲಯನ್ಸ್ ಕ್ಲಬ್ ಆಶ್ರಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ತುಂಗನಗರದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಉಚಿತ ಕನ್ನಡಕ ವಿತರಣೆ ಶಿಬಿರ ಯಶಸ್ವಿಯಾಗಿ ನಡೆಯಿತು.

ಈ ಶಿಬಿರಕ್ಕೆ ವಿವಿಧ ಗ್ರಾಮಗಳಿಂದ ಬಂದ ಸುಮಾರು ೧೮೫ ರೋಗಿಗಳು ನೇತ್ರ ತಪಾಸಣೆಗೆ ಭಾಗವಹಿಸಿದರು. ನೇತ್ರ ತಜ್ಞರಿಂದ ಸಂಪೂರ್ಣ ದೃಷ್ಟಿ ಪರೀಕ್ಷೆ ನಡೆಯಿತು. ತಪಾಸಣೆಯ ನಂತರ ೪೮ರೋಗಿಗಳು ಮುತ್ತಿನ ಬಿಂದು (ಕ್ಯಾಟರ್‍ಯಾಕ್ಟ್) ಶಸ್ತ್ರಚಿಕಿತ್ಸೆಗೆ ಆಯ್ಕೆಯಾಗಿದ್ದು, ಶೀಘ್ರದಲ್ಲೇ ಶಿವಮೊಗ್ಗ ಶಂಕರ ಆಸ್ಪತ್ರೆಯಲ್ಲಿ ಉಚಿತ ಶಸ್ತ್ರಚಿಕಿತ್ಸೆ ಮಾಡಿಕೊಡಲಾಗು ವುದು ಎಂದು ತಿಳಿಸಲಾಯಿತು.

ಇದೇ ವೇಳೆ ೬೬ರೋಗಿಗಳಿಗೆ ಉಚಿತ ಕನ್ನಡಕಗಳನ್ನು ವಿತರಿಸಲಾ ಯಿತು. ಪ್ರದೇಶ ಅಧ್ಯಕ್ಷ ಎಂ.ಜೆ.ಎಫ್. ಗಿರೀಶ್ ಕೆ. ನಾಯಕ್, ಶಿವರಾಮ ಜಿ.ಪಿ., ಎಂಜೆಎಫ್. ಕುಮಾರ್ ಜಿ.ಎಸ್., ಎಂ.ಜೆ.ಎಫ್. ಡಾ. ಉಮಾದೇವಿ ಎಸ್. ಬಿರಾದಾರ್, ಐರಿನ್ ಗೋವಿಯಾಸ್, ಎಂಜೆಎಫ್ ಪೌಲ್ ಗೋವಿಯಾಸ್.ಶಂಕರ ಆಸ್ಪತ್ರೆ ಸಿಬ್ಬಂದಿ, ಡಾ. ಲಕ್ಷಿತಾ (ನೇತ್ರ ತe), ಸಚಿನ್ ಎ.ಆರ್., ಭಾರ್ಗವಿ, ಅನುಷಾ, ಕಂಚನಾ (ಜಿಎನ್‌ಎಂ), ಪ್ರವೀಣ್ ಕೆ. ಶಿಬಿರ ಉದ್ಘಾಟಿಸಿದ ೧ನೇ ಉಪ ರಾಜ್ಯಪಾಲ (ವಿಡಿಜಿ) ಅಭ್ಯರ್ಥಿ ಎಂ.ಜೆ.ಎಫ್. ಲಯನ್ ಡಾ. ಎಸ್.ಐ. ಬಿರಾದಾರ್ ಅವರು ಲಯನ್ಸ್ ಕ್ಲಬ್ ಕೈಗೊಂಡಿರುವ ಸಾಮಾಜಿಕ ಆರೋಗ್ಯ ಸೇವೆಗಳ ಮಹತ್ವವನ್ನು ಪ್ರಶಂಸಿಸಿ, ಇಂತಹ ಶಿಬಿರಗಳು ಗ್ರಾಮೀಣ ಜನತೆಗೆ ಮಹತ್ತರವಾದ ನೆರವು ಆಗುತ್ತಿವೆ ಎಂದು ಹೇಳಿದರು.

Lions Club, Shimoga ಈ ಶಿಬಿರದ ಯಶಸ್ವಿ ಸಂಯೋಜನೆ ಯನ್ನು ಲಯನ್ ನಂದೀಶ್ ಎನ್.ಟಿ., ಜಿಲ್ಲಾ ಸಂಯೋಜಕ ನೇತ್ರ ತಪಾಸಣೆ ಮತ್ತು ಕನ್ನಡಕ ವಿತರಣೆ (೩೧೭ಸಿ) ಅವರು ಶಿವಮೊಗ್ಗ ಆಪ್ಟಿಕಲ್ಸ್ ಸಹಯೋಗದಲ್ಲಿ ಅತ್ಯುತ್ತ ಮವಾಗಿ ನಿರ್ವಹಿಸಿ ಮಾತನಾಡಿ, ಈ ವರ್ಷ ಲಯನ್ಸ್ ಜಿಲ್ಲೆ ೩೧೭ಅ ನಲ್ಲಿ ೩೦೦೦ ( ಬೆಲೆ ೫೪೦೦೦೦ )ಕ್ಕೂ ಹೆಚ್ಚು ಉಚಿತ ಕನ್ನಡಕಗಳನ್ನು ವಿತರಿಸುವ ಗುರಿ ಹೊಂದಿದ್ದೇವೆ. ಈಗಾಗಲೇ ಸಾಗರ, ಸಾಗರ ಶ್ರೀಗಂಧ, ಸೊರಬ, ಶಿವಮೊಗ್ಗ, ಭದ್ರಾವತಿ ಮತ್ತು ಶುಗರ್ ಟೌನ್ ಲಯನ್ಸ್ ಕ್ಲಬ್‌ಗಳ ಮೂಲಕ ೭೫೦(ಬೆಲೆ ೧೩೫೦೦೦)ಕ್ಕೂ ಹೆಚ್ಚು ಕನ್ನಡಕ ವಿತರಣೆ ಹಾಗೂ ೮೦೦ಕ್ಕೂ ಹೆಚ್ಚು ಮುತ್ತಿನಬಿಂದು (ಕ್ಯಾಟರ್‍ಯಾಕ್ಟ್) ಶಸ್ತ್ರಚಿಕಿತ್ಸೆಗಳು ನೆರವೇರಿವೆ ಎಂದು ತಿಳಿಸಿದರು. ಲಯನ್ಸ್ ಜಿಲ್ಲೆ ೩೧೭ ಜಿಲ್ಲಾ ಸಂಯೋ ಜಕರಾದ ಲಯನ್ ನಂದೀಶ್ ಎನ್.ಟಿ. ಅವರು ನೇತ್ರ ಶಿಬಿರ ಮತ್ತು ಕನ್ನಡಕ ವಿತರಿಸಿದರು.

B. Y. Raghavendra ಹುಣಸೆಕೊಪ್ಪದಲ್ಲಿ ಸಂಸದರಿಂದ ಅಂಗನವಾಡಿ ಕೇಂದ್ರದ ಉದ್ಘಾಟನೆ

0

B. Y. Raghavendra ಇಂದು ಹಿತ್ತಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಣಸೆಕೊಪ್ಪದಲ್ಲಿ ಹೊಸ ಅಂಗನವಾಡಿ ಕೇಂದ್ರವನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು ಮತ್ತು ಹಿತ್ತಲ ಹಾಗೂ ಹುಣಸೇಕೊಪ್ಪದ ಗ್ರಾಮಸ್ಥರು ಉಪಸ್ಥಿತರಿದ್ದರು.

Friends Center Shivamogga ನವೆಂಬರ್ 28. ಶಿವಮೊಗ್ಗದಲ್ಲಿ ಸಿರಿಧಾನ್ಯ ಅಡುಗೆ ಸ್ಪರ್ಧೆ

0

Friends Center Shivamogga ಫ್ರೆಂಡ್ಸ್ ಸೆಂಟರ್ ಮಹಿಳಾ ವಿಭಾಗದ ವತಿಯಿಂದ ನಗರದ ಎಟಿಎನ್‌ಸಿಸಿ ಕಾಲೇಜಿನ ಫ್ರೆಂಡ್ಸ್ ಸಭಾಂಗಣದಲ್ಲಿ ನವೆಂಬರ್ 28ರಂದು ಬೆಳಗ್ಗೆ 11.30ಕ್ಕೆ ಅಡುಗೆ ಸ್ಪರ್ಧೆ ಏರ್ಪಡಿಸಲಾಗಿದೆ. ಮೊದಲ 50 ಸ್ಪರ್ಧಿಗಳಿಗೆ ಆದ್ಯತೆ ನೀಡಲಾಗುವುದು. ಸಿರಿಧಾನ್ಯಗಳಿಂದ ತಯಾರಿಸಿದ ಒಂದು ಸಿಹಿ ಮತ್ತು ಒಂದು ಖಾರದ ಖಾದ್ಯವನ್ನು ಮನೆಯಲ್ಲೇ ತಯಾರಿಸಿಕೊಂಡು ಬಂದು ಆಕರ್ಷಕವಾಗಿ ಪ್ರದರ್ಶಿಸಬೇಕು. ಸ್ಪರ್ಧೆಯ ವಿಜೇತರಿಗೆ ಆಕರ್ಷಕ ನಗದು ಬಹುಮಾನಗಳನ್ನು ನೀಡಲಾಗುತ್ತದೆ. ಶುಚಿ, ರುಚಿ Friends Center Shivamogga ಹಾಗೂ ಅಚ್ಚುಕಟ್ಟಾಗಿ ಪ್ರದರ್ಶಿಸುವ ಖಾದ್ಯಗಳನ್ನು ಪರಿಗಣಿಸಲಾಗುವುದು. 100 ರೂ. ಪ್ರವೇಶ ಶುಲ್ಕ ಇರುತ್ತದೆ. ಮಾಹಿತಿಗೆ 8088882425, 9449230127, 9481500004 ಸಂಪರ್ಕಿಸಬಹುದಾಗಿದೆ ಎಂದು ಫ್ರೆಂಡ್ಸ್ ಸೆಂಟರ್ ಮಹಿಳಾ ವಿಭಾಗದ ಅಧ್ಯಕ್ಷೆ ಸ್ವಪ್ನಾ ಬದ್ರಿನಾಥ್ ತಿಳಿಸಿದ್ದಾರೆ.

ಫೋಟೊ: ಸ್ವಪ್ನಾ ಬದ್ರಿನಾಥ್

Sri Sri Sri Dr.Nirmalanandanatha Maha Swamiji ನಮ್ಮ ಭಾರತೀಉ ಸಂಸ್ಕೃತಿಯು ಕಲೆಗೆ ಹೆಚ್ಚು ಮಹತ್ವ ನೀಡಿದೆ- ಶ್ರೀನಾದಮಯಾನಂದನಾಥಶ್ರೀ

0

Sri Sri Sri Dr.Nirmalanandanatha Maha Swamiji ಪ್ರತಿಭೆ ಎಲ್ಲಾ ಮಕ್ಕಳಲ್ಲಿ ಅಡಗಿರುತ್ತದೆ.ಅದನ್ನು ಹೊರ ತೆಗೆಯುವುದಕ್ಕಾಗಿಯೇ ವಿವಿಧ ಸಾಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.
ಅವರು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಶಿವಮೊಗ್ಗ, ಹಾಗೂ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ರ (ರಿ). ಶಿವಮೊಗ್ಗ, ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಶಿವಮೊಗ್ಗ.ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳು ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ನಮ್ಮ ಭಾರತೀಯ ಸಂಸ್ಕೃತಿ, ಕಲೆಗೆ ಹೆಚ್ಚು ಮಹತ್ವ ನೀಡಿದೆ,ನಮ್ಮ ಗ್ರಾಮೀಣ ಜನಪದ ಕಲೆಗಳ ಸೊಗಡು ತುಂಬಾ ಅಭೂತ ಪೂರ್ವವಾದದು. ಪ್ರತಿಯೊಂದು ಮಗುವಿನಲ್ಲಿಯೂ ಪ್ರತಿಭೆ ಎನ್ನುವುದು ಬೂದಿ ಮುಚ್ಚಿದ ಕೆಂಡದಂತಿರುತ್ತದೆ ಎಂದರು.
ಪ್ರತಿಯೊಬ್ಬ ವಿದ್ಯಾರ್ಥಿಯು ಆತ್ಮ ಸಾಕ್ಷಿಯಾಗಿ ತಮ್ಮಲ್ಲಿರುವ ಕಲೆಯನ್ನು ಪ್ರದರ್ಶಿಸಬೇಕು ಎಂದ ಅವರು, ನಿಮ್ಮ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಉಪನ್ಯಾಸಕರ ಹಾಗೂ ಪೋಷಕರ ಆದ್ಯ ಕರ್ತವ್ಯವಾಗಿದೆ ಎಂದರು.
ಗೆಲುವು ಸೋಲುಗಳನ್ನು ನಮ್ಮ ಪ್ರಯತ್ನದ ಮೂಲಕ ನೋಡುತ್ತೇವೆ. ಸೋಲು ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಸ್ಪರ್ಧೆಯನ್ನು ಸ್ಪರ್ಧೆಯಾಗಿ ನೋಡಬೇಕೆಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ,ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್.ವಿ. ಗುರುರಾಜ್ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ, ವ್ಯವಸ್ಥಿತವಾಗಿ ಆಯೋಜಿಸಿದ್ದು, ಉತ್ತಮವಾಗಿ ನಡೆಸಿ ಕೊಡಲಿದ್ದೇವೆ ಎಂದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಕೊಳಿಗೆ ವಾಸಪ್ಪ ಗೌಡ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಿ.ಎಫ್.ಕುಟ್ರಿ, ಎಸ್.ಎ.ವಿ. ಪಿಯು ಕಾಲೇಜಿನ ಭದ್ರಾವತಿಯ ಪ್ರಾಚಾರ್ಯರಾದ ಡಾ.ಹರಿಣಾಕ್ಷಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
Sri Sri Sri Dr.Nirmalanandanatha Maha Swamiji ಸಂಜೆ 4 ಗಂಟೆಗೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ಪ್ರಬಾನ್ವಿತರಿಗೆ ಅತ್ಯಾಕರ್ಷಕ ಪ್ರಶಸ್ತಿ ಪತ್ರ, ಬಹುಮಾನಗಳನ್ನು ನೀಡಿ ಪೂಜ್ಯರಿಂದ ಗೌರವಿಸಲಾಯಿತು. ಸಮಗ್ರ ಪ್ರಶಸ್ತಿಯನ್ನು ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿಪೂರ್ವ ಕಾಲೇಜು ಶರಾವತಿ ನಗರ ಶಿವಮೊಗ್ಗ ಇವರು ಪಡೆದುಕೊಂಡಿರುತ್ತಾರೆ.
ಕು. ಅನನ್ಯ ಪ್ರಾರ್ಥಿಸಿ. ಸೋಹನ್ ಸಂಗಡಿಗರು ನಾಡಗೀತೆ ಪ್ರಸ್ತುತಪಡಿಸಿ, ಉಪನ್ಯಾಸಕಿ ಪ್ರಿಯಾಂಕ ನಿರೂಪಿಸಿ. ಮುಖ್ಯ ಶಿಕ್ಷಕಿ ಸುಜಾತ ವಂದಿಸಿದರು.
ಬಾಕ್ಸ್:
ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕದ ಜ್ಞಾನದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ, ಸಾಂಸ್ಕೃತಿ ಕಾರ್ಯಕ್ರಮಗಳು ಅತ್ಯವಶ್ಯಕವಾಗಿವೆ. ನಮ್ಮ ನಾಡು,ನುಡಿ, ಸಾಹಿತ್ಯ, ಸಂಸ್ಕೃತಿ, ಪರಂಪರೆ,ಕಲೆ ಶ್ರೀಮಂತವಾಗಿದೆ. ಇಂದಿನ ವಿದ್ಯಾರ್ಥಿಗಳು ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಂದ ದೂರವಾಗುತ್ತಿದ್ದು, ಹೆಚ್ಚು ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಮೂಲಕ ನಮ್ಮ ದೇಶದ ಶ್ರೀಮಂತ ಸಂಸ್ಕೃತಿ ಪರಂಪರೆಯನ್ನು ಉಳಿಸಬೇಕೆಂದರು.

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ)ಉಪನಿರ್ದೇಶಕ ಚಂದ್ರಪ್ಪ ಎಸ್. ಗುಂಡಪಲ್ಲಿ . ಶಿವಮೊಗ್ಗ.

Podar International School ರಾಜ್ಯಮಟ್ಟದ ಚಿತ್ರಕಲೆಯಲ್ಲಿ ಕು.ಆರ್ನಗೆ ಬಹುಮಾನ

0

Podar International School ಸೆಂಟ್ರಲ್ ಫವರ್ ರೀಸರ್ಚ್ ಇನ್ಸಸ್ಟಿಟ್ಯೂಟ್ ನಡೆಸಿದ ರಾಜ್ಯಮಟ್ಟದ ಚಿತ್ರಕಲೆ (painting) ಸ್ಪರ್ಧೆಯಲ್ಲಿ ಶಿವಮೊಗ್ಗದ ಪೋದಾರ್ ಇಂಟರ್ನ್ಯಾಷನಲ್ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಆರ್ನ ಎಸ್. ಗೆ ಬಹುಮಾನ ಲಭಿಸಿದೆ.
ಆರ್ನ ಶಿವಮೊಗ್ಗ ಸರ್ಜಿ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ. ದ್ರಾಕ್ಷಾಯಿಣಿ ಸಿ.ಎಲ್. ಹಾಗೂ ಮೆಟ್ರೋ ಆಸ್ಪತ್ರೆಯ ಹೃದಯ ರೋಗ ತಜ್ಞರಾದ ಡಾ. ಶಿವಶಂಕರ್ ಟಿ.ಹೆಚ್. ಅವರ ಪುತ್ರಿ.
Podar International School ಆರ್ನ ಈಗಾಗಲೇ ಶಿವಮೊಗ್ಗದಲ್ಲಿ ನಡೆದ ಹಲವಾರು ಚಿತ್ರಕಲಾ ಸ್ಪರ್ಧೆಯಲ್ಲಿ ಬಹುಮಾನವನ್ನು ಪಡೆದಿರುತ್ತಾಳೆ.

Canara Bank ಸಂಚಾರಿ ವಾಹನ ದಂಡ ಶುಲ್ಕ ವಿನಾಯಿತಿ. ಜಿಲ್ಲಾ ಸಾರಿಗೆ ಇಲಾಖೆ ಪ್ರಕಟಣೆ

0

Canara Bank ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಡಿ.15 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ.
ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಆಸಕ್ತಿಯುಳ್ಳ ಶಿಬಿರಾರ್ಥಿಗಳು ಡಿ.04 ಬೆಳಗ್ಗೆ 9.30 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, Canara Bank ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ವಿದ್ಯಾರ್ಹತೆಗಳೊಂದಿಗೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ಡಿ. 04 ರೊಳಗೆ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050, 9591514154, 9686248369, 9505894247 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆAದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Gurudutt Hegde ಕ್ರೀಡೆಗಳು ಪ್ರತಿವ್ಯಕ್ತಿಯ ಮಾನಸಿಕ & ದೈಹಿಕ ಆರೋಗ್ಯಕ್ಕೆ ಸಹಕಾರಿ- ‘ಡೀಸಿ’ಗುರುದತ್ತ ಹೆಗಡೆ

0

Gurudutt Hegde ಕ್ರೀಡೆಗಳು ಪ್ರತಿ ವ್ಯಕ್ತಿಯ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಸಹಕರಿಯಾಗಿವೆ ಎಂದು ಜಿಲ್ಲಾಧಿಕಾರಿ ಡಾ. ಗುರುದತ್ತ ಹೆಗಡೆ ಅವರು ಹೇಳಿದರು.

ಅವರು ಇಂದು ನಗರದ ಡಿ. ಎ. ಆರ್. ಕವಾಯತು ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಬಲೂನುಗಳನ್ನು ಹಾರಿ ಬಿಡುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.

ಪೊಲೀಸ್ ಇಲಾಖೆಯ ವತಿಯಿಂದ ಪ್ರತಿ ವರ್ಷ ಆಯೋಜಿಸಲಾಗುತ್ತಿರುವ ಕ್ರೀಡಾಕೂಟವು ವ್ಯವಸ್ಥಿತವಾಗಿ ಆಯೋಜಿಸಲಾಗುತ್ತಿದ್ದು, ಇತರರು ಅನುಸರಿಸುವಂತಿದೆ. ಅದನ್ನು ಜಿಲ್ಲೆಯಲ್ಲಿ ಕಂದಾಯ ಇಲಾಖೆಯ ನೌಕರರು ಕೂಡ ಕ್ರೀಡೆಯನ್ನು ಪೊಲೀಸ್ ಕ್ರೀಡಾಕೂಟವನ್ನು ಅನುಸರಿಸುತ್ತಿರುವುದು ಸಂತೋಷ ಎನಿಸಿದೆ ಎಂದರು.

ಕ್ರೀಡೆ ಸ್ಫೂರ್ತಿದಾಯಕ ಆಗಿರುವಂತೆ ಪ್ರೇರಣಾದಾಯಕವಾಗಿದೆ. ದೈಹಿಕ ಸದೃಢತೆಗೆ ಸಹಕಾರಿಯಾಗಿದೆ ಎಂದ ಅವರು ಸದಾ ಲವಲವಿಕೆಯಿಂದಿರಲು, ಉತ್ಸುಕರಾಗಿರಲು ಪೂರಕವಾಗಿದೆ ಎಂದರು.

Gurudutt Hegde ಪೊಲೀಸರು ತಮ್ಮ ದೈನಂದಿನ ಕಾರ್ಯದಲ್ಲಿ ಎದುರಾಗುವ ಸಮಸ್ಯೆ- ಸವಾಲುಗಳನ್ನು ಎದುರಿಸಲು, ಉತ್ತಮ ಸೇವೆ ಸಲ್ಲಿಸುವಲ್ಲಿ ಕ್ರೀಡೆ ಸಹಾಯಕವಾಗಿದೆ ಎಂದರು.

ಜಿಲ್ಲೆಯಲ್ಲಿ ಶಾಂತಿ – ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ, ಕೋಮುಗಲಭೆ ಮತ್ತಿತರ ಕುಕೃತ್ಯಗಳನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ಸಮರ್ಥವಾಗಿ ಕಾರ್ಯನಿರ್ವಹಿಸಿ ರಾಜ್ಯಕ್ಕೆ ಮಾದರಿಯಾಗಿರುವುದು ಪ್ರಶಂಸನೀಯ ಸಂಗತಿ ಎಂದರು.

ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟ ಅಧಿಕಾರಿ ಜಿ. ಕೆ. ಮಿಥುನ್ ಕುಮಾರ್, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಗಳಾದ ಎ.ಜಿ.ಕಾರಿಯಪ್ಪ, ರಮೇಶ್ ಗೌಡ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಮಹಿಳಾ ಮತ್ತು ಪುರುಷ ಅಧಿಕಾರಿ – ಸಿಬ್ಬಂಧಿಗಳು, ಪೊಲೀಸ್ ಕ್ರೀಡಾ ಪಟುಗಳು ಉಪಸ್ಥಿತರಿದ್ದರು.