Shimoga News ಶಿವಮೊಗ್ಗದ ದುರ್ಗಿಗುಡಿ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಟ್ರಸ್ಟಿಗಳಾಗಿ ಅವಿರತ ಸೇವೆ ಸಲ್ಲಿಸುತ್ತಿದ್ದ ಶ್ರೀ ಸಿ.ವಿ.ರಾಘವೇಂದ್ರರಾವ್ ( 81) ಅವರು ನಿಧನರಾಗಿದ್ದಾರೆ.
ದಿವಂಗತರು ನಿವೃತ್ತ ಉಪನ್ಯಾಸಕರಾಗಿದ್ದರು.
ಭಾರತೀಯ ಕುಟುಂಬ ಯೋಜನಾ ಸಂಸ್ಥೆಯ
ಗೌರವ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
Shimoga News ಪತ್ರಿಕಾಕ್ಷೇತ್ರದಲ್ಲಿ ಪಿಟಿಐ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.
ನಾಡಿನ ಇಂಗ್ಲೀಷ್ ದೈನಿಕಗಳಲ್ಲಿ ವಿಶೇಷ ಲೇಖನ ,ವರದಿಗಳನ್ನ ಬರೆಯುವ ನಿಷ್ಣಾತ ಬರಹಗಾರರಾಗಿದ್ದರು.
ಸಿವಿಆರ್ ಎಂದೇ ಆತ್ಮೀಯರಾಗಿದ್ದ ರಾಘವೇಂದ್ರರಾವ್ ಅವರು ಚನ್ನಗಿರಿಯ ಶಾನುಭೋಗ್ ಮನತನದ ಹಿರಿಯರಾಗಿದ್ದರು.
ಅವರು ಪತ್ನಿ, ಪುತ್ರ ಮತ್ತು ಪುತ್ರಿಯನ್ನ ಅಗಲಿದ್ದಾರೆ.
Shimoga News ಹಿರಿಯ ಸಮಾಜಸೇವಾ ಧುರೀಣ ಸಿ.ವಿ.ರಾಘವೇಂದ್ರರಾವ್ ನಿಧನ
Breaking News ಸಿನಿಮಾ ನಿರ್ಮಾಪಕರಿಗೆ ಸಿಹಿ ಸುದ್ದಿ.ಶಿವಮೊಗ್ಗದಲ್ಲಿ ಕಂಠೀರವ ಸ್ಟುಡಿಯೊ ನಿರ್ಮಿಸಲು ಸಿದ್ಧ- ಮೊಹಬೂಬ್ ಭಾಷಾ
Breaking News ಶಿವಮೊಗ್ಗ ಸಿನಿಮಾ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡುತ್ತಿದ್ದು, ಈ ಉದ್ದೇಶದಿಂದ ಶಿವಮೊಗ್ಗದಲ್ಲಿ ಕಂಠೀರವ ಸ್ಟುಡಿಯೋವನ್ನು ನಿರ್ಮಾಣ ಮಾಡಲು ನಿಗಮದಿಂದ ರೂಪರೇಷಗಳನ್ನು ಸಿದ್ದಪಡಿಸಲಾಗುತ್ತಿದೆ ಎಂದು ಕಂಠೀರವ ಸ್ಟುಡಿಯೋ ನಿಗಮದ ಅಧ್ಯಕ್ಷರಾದ ಮೊಹಬೂಬ್ ಭಾಷಾ ತಿಳಿಸಿದರು.
ಭಾನುವಾರ ನಗರದ ಪ್ರತಿಕಾ ಭವನದಲ್ಲಿ ಏರ್ಪಡಿಸಲಾಗಿದ್ದ ಪ್ರತಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು,
ಕಂಠೀರವ ಸ್ಟುಡಿಯೋವನ್ನು ರಾಜ್ಯ ಮಟ್ಟದಲ್ಲಿ ವಿಸ್ತರಣೆ ಮಾಡುವ ಉದ್ದೇಶವನ್ನು ನಿಗಮ ಹೊಂದಿದ್ದು, ಇದಕ್ಕಾಗಿ ಜಿಲ್ಲಾವಾರುಗಳಲ್ಲಿ ಬಹಳಷ್ಟು ಬೇಡಿಕೆಯೂ ಸಹ ಇತ್ತು. ಹಾಗಾಗಿ ಕಂಠೀರವ ಸ್ಟುಡಿಯೋವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ನಿರ್ಮಾಣ ಮಾಡಲು ಸಿದ್ದವಾಗಿದ್ದೇವೆ. ಇದಕ್ಕೆ ಸಂಬಂಧಪಟ್ಟಂತೆ ರಾಜ್ಯ ಹಾಗೂ ಜಿಲ್ಲಾ ಹೆದ್ದಾರಿಯಲ್ಲಿರುವ 25 ಎಕರೆಯ ಅನುಪಯುಕ್ತವಾಗಿರುವ ಭೂಮಿಯನ್ನು ಸ್ಟುಡಿಯೋ ನಿರ್ಮಾಣ ಕೊಡಿ ಎಂದು ಡಿಸಿ ಮನವಿ ಮಾಡಲಾಗಿದೆ ಎಂದರು.
ಶಿವಮೊಗ್ಗ ಕನ್ನಡದಲ್ಲಿ ಶ್ರೀಮಂತ ಜಿಲ್ಲೆ. ಇಲ್ಲಿ ಸಿನಿಮಾ ಕಲಾವಿದರು ತುಂಬಾ ಇದ್ದಾರೆ. ಇವೆಲ್ಲರನ್ನೂ ಜಾಗತೀಕ ಮಟ್ಟಕ್ಕೆ ತೆಗೆದುಕೊಂಡು ಹೋಗುವ ಉದ್ದೇಶದಿಂದ ಈ ಪ್ರಯತ್ನ ಮಾಡಲಾಗುತ್ತಿದೆ. ಹಾಗೂ ಶಿವಮೊಗ್ಗದಲ್ಲಿ ನಡೆಯುವ ಹೊರಾಂಗಣ ಮತ್ತು ಒಳಾಂಗಣ ಚಿತ್ರೀಕರಣಕ್ಕೆ ಇದು ಬಹಳಷ್ಟು ಅನುಕೂಲವಾಗಲಿದೆ. ಇದರಿಂದ ಭಾಷೆ ಉಳಿಯುತ್ತದೆ ಹಾಗೂ ಪ್ರತಿಭೆಗಳು ಬೆಳೆಯುತ್ತಾರೆ. ಉದ್ಯೋಗವೂ ಕೂಡ ಸೃಷ್ಟಿಯಾಗಲಿದೆ ಎಂದರು.
Breaking News ಬೆಂಗಳೂರು ಹಾಗೂ ಮೈಸೂರಿನಿಂದ ದೂರವಿರುವ ಮಧ್ಯ ಕರ್ನಾಟಕ ಭಾಗಗಳಾದ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ವಿಜಯನಗರ ಜಿಲ್ಲೆಗಳಲ್ಲಿ ಸ್ಟುಡಿಯೋ ನಿರ್ಮಿಸುವ ಯೋಜನೆ ಮಾಡಲಾಗಿದ್ದು, ಈಗಾಗಲೇ ಸರ್ಕಾರ ತನ್ನ ಬಜೆಟ್ನಲ್ಲಿ 5 ಕೋಟಿ ಅನುದಾನವನ್ನು ನೀಡಿದೆ. ಇನ್ನೂ ಮೈಸೂರಿನಲ್ಲಿ 160 ಎಕರೆಯಲ್ಲಿ ರಾಮೋಜಿ ಫೀಲ್ಮಿ ಸಿಟಿ ಮಾದರಿಯಂತೆ ಫಿಲ್ಮಿಸಿಟಿ ಯನ್ನು ವಾರ್ತಾ ಇಲಾಖೆಯಿಂದ ನಿರ್ಮಾಣ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಕನ್ನಡದಲ್ಲಿ ಓಟಿಟಿ ಪ್ರಾರಂಭ ಮಾಡಲು ನಿಗಮದಿಂದ ಈಗಾಗಲೇ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದ್ದು, ಇದಕ್ಕೆ ಮುಖ್ಯಮಂತ್ರಿ ಸ್ಪಂದಿಸಿದ್ದಾರೆ. ಕನ್ನಡದ ಕಿರುತೆರೆ, ಬೆಳ್ಳಿ ಪರದೆಗೆ ಹಾಗೂ ಅವುಗಳ ಕಾರ್ಯಗಳಿಗೆ ಓಟಿಟಿ ನಿರ್ಮಾಣ ಮಾಡಲು ಸರ್ಕಾರ 2025 ರ ಅಯವ್ಯಯದಲ್ಲಿ ಅನುದಾನ ನೀಡಲು ಮುಂದಾಗಿದೆ.
ಕನ್ನಡ ಓಟಿಟಿ ಸರ್ಕಾರದ ಕಾರ್ಯಕ್ರಮವಾಗಿದ್ದು, ಅದಕ್ಕೆಂದು ಸಮಿತಿಯನ್ನು ರಚನೆ ಮಾಡಲಾಗಿದೆ. ಈಗಾಗಲೇ ಇದಕ್ಕೆ ಸಂಬಂಧಪಟ್ಟಂತೆ ಎರಡು ಸಭೆಗಳನ್ನು ನಡೆಸಿದ್ದು, ಓಟಿಟಿ ನಿರ್ಮಾಣಕ್ಕೆ ಬೇಕಾದ ಎಲ್ಲಾ ರೂಪರೇಷೆಗಳನ್ನು ತಯಾರಿಸಲಾಗಿದೆ ಎಂದರು.
ಸರ್ಕಾರ ಕನ್ನಡ ಭಾಷೆಯನ್ನು ಬೆಳೆಸಬೇಕು ಹಾಗೂ ಉಳಿಸಬೇಕು ಎಂಬ ನಿಟ್ಟಿನಲ್ಲಿ ಈ ಕಾರ್ಯವನ್ನು ಮಾಡುತ್ತಿದೆ. ಓಟಿಟಿ ಪರಿಣಾಮವಾಗಿ ಕೆಲಸ ಮಾಡಲಿದ್ದು, ಇದರಿಂದ ಜಾಗತೀಕ ಮಟ್ಟದಲ್ಲಿ ಕನ್ನಡಕ್ಕೆ ಸ್ಥಾನಮಾನ ದೊರಕುತ್ತದೆ. ನಮ್ಮ ಮಣ್ಣಿನ ಗ್ರಾಮೀಣ ಶೈಲಿಯ ಬದುಕು ಓಟಿಟಿ ಮೂಲಕ ಇಡೀ ಜಗತ್ತು ನೋಡುವಂತಾಗುತ್ತದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಕಾಂಗ್ರೆಸ್ ಮುಖಂಡ ಎನ್.ರಮೇಶ್ ಹಾಜರಿದ್ದರು.
CM Siddharamaiah ಮೀನುಗಾರಿಕಾ ವಿವಿ ಸ್ಥಾಪನೆಗೆ ಸರ್ಕಾರ ಸಿದ್ಧವಿದೆ- ‘ಸೀಎಂ’ ಸಿದ್ಧರಾಮಯ್ಯ
CM Siddharamaiah ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ.
ಮೀನುಗಾರಿಕಾ ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ. ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ಮೀನುಗಾರಿಕೆ ಇಲಾಖೆ ಇಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ”ದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮುಖ್ಯಮಂತ್ರಿಗಳು ಮಾತನಾಡುತ್ತಿದ್ದರು.
ರಾಜ್ಯದಲ್ಲಿ 320 ಕಿಮೀ ಕರಾವಳಿ ಪ್ರದೇಶ ಇದೆ. 5.5ಲಕ್ಷ ಹೆಕ್ಟೇರ್ ಒಳನಾಡು ಜಲಪ್ರದೇಶ ಇದೆ. ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ. ದೇಶದ ಮೀನು ಉತ್ಪಾದನೆಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ. ಒಟ್ಟಾರೆ ಮೀನುಗಾರಿಕೆಯು 10 ಲಕ್ಷ ಜನರ ಜೀವನಕ್ಕೆ ಆಸರೆಯಾಗಿದೆ.
CM Siddharamaiah ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಯಾಂತ್ರೀಕೃತ ದೋಣಿಗಳ ಡೀಸೆಲ್ ವಾರ್ಷಿಕ ಮಿತಿಯನ್ನು 1.5 ಲಕ್ಷ ಕಿ.ಲೋ ಲೀಟರ್ ನಿಂದ 2 ಲಕ್ಷ ಕಿ.ಲೋ ಲೀಟರ್ ಗೆ ಹೆಚ್ಚಿಸಲಾಗಿದೆ. ನಾಡ ದೋಣಿಗಳಿಗೆ ಕೈಗಾರಿಕಾ ಸೀಮೆಎಣ್ಣೆಯನ್ನು ಪ್ರತೀ ಲೀಟರ್ ಗೆ 35 ರೂ. ರಿಯಾಯಿತಿ ದರದಲ್ಲಿ ವಿತರಣೆ ಮಾಡುತ್ತಿದ್ದೇವೆ.
ಒಟ್ಟಾರೆ ಮೀನುಗಾರ ಸಮುದಾಯದ ಏಳಿಗೆಗೆ ಸರ್ಕಾರ ಪ್ರತೀ ಬಜೆಟ್ ನಲ್ಲೂ ಕಾರ್ಯಕ್ರಮಗಳನ್ನು ನೀಡುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
Kalakuncha Cultural Institute ಪೊಲೀಸ್ ಇಲಾಖೆಯ ಕವಿಹೃದಯಿ ತಿಮ್ಮೇಶಪ್ಪ ಅವರಿಗೆ “ಕರ್ನಾಟಕ ಸಿರಿಗನ್ನಡ ಸಿರಿ ” ಪ್ರಶಸ್ತಿ
Kalakuncha Cultural Institute ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ವತಿಯಿಂದ 70ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕೊಡ ಮಾಡುವ “ಕರ್ನಾಟಕ ಸಿರಿಗನ್ನಡ ಸಿರಿ” ರಾಜ್ಯ ಪ್ರಶಸ್ತಿಗೆ ನಗರದ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಿಮ್ಮೇಶಪ್ಪ ಇವರು ಆಯ್ಕೆಯಾಗಿದ್ದಾರೆ.
ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಇವರ ಸಾಧನೆಗೆ ಈ ಪ್ರಶಸ್ತಿ ದೊರಕಿದೆ.
ಸಂಗೀತ ರಸಿಕರನ್ನ ಸಂತೋಷಿಸಿದ ಉದಯ್ ರಾಣೆಬೆನ್ನೂರು ಅವರ ಗಾಯನ
ಶಿವಮೊಗ್ಗ ನಗರದ ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ ಪಾಠ ಶಾಲೆಯಲ್ಲಿ ಗಾನಲಹರಿ ೧೪೧ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ರಾಜ್ಯ ಪ್ರಶಸ್ತಿ ಪುರಸ್ಕೃತ ಆರ್.ಬಿ. ಸಂಗಮೇಶ್ವರ ಗವಾಯಿಗಳೂ ಅಧ್ಯಕ್ಷತೆ ವಹಿಸಿದ್ದರು. ನವುಲೆಯ ಅರ್ಪಿತಾ ಭಜನಾ ಮಂಡಳಿ ಯಿಂದ ಭಜನಾ ಸೇವೆ ಮತ್ತು ಆಶ್ರಮದ ಅಂಧ ಮಕ್ಕಳಿಂದ ಪ್ರಾರ್ಥನೆ ನಡೆಯಿತು. ದಾವಣಗೆರೆ ಆಶ್ರಮದ ಗಾಯಕ ಉದಯ ರಾಣೆಬೆನ್ನೂರು ಅವರ ಸಂಗೀತ ಕಾರ್ಯಕ್ರಮ ನೋಡುಗರ ಮನ ಸೆಳೆಯಿತು.
Shivamogga Basava Kendra ಸಂಸದ ರಾಘವೇಂದ್ರ ಅವರಿಂದ ” ಚಿಂತನ ಕಾರ್ತೀಕ” ದಲ್ಲಿ ಪುಸ್ತಕ ಲೋಕಾರ್ಪಣೆ.
Shivamogga Basava Kendra ಶಿವಮೊಗ್ಗದ ಬಸವ ಕೇಂದ್ರದಲ್ಲಿ ನಡೆದ “ಚಿಂತನ ಕಾರ್ತಿಕ” ಸಮಾರೋಪ ಸಮಾರಂಭ, ಪುಸ್ತಕ ಬಿಡುಗಡೆ ಮತ್ತು ಗಣಪರ್ವ ಕಾರ್ಯಕ್ರಮದ ಶುಭ ಉದ್ಘಾಟನೆ ಮಾಡಿ, ವಿಶಾಲವಾದ ಸಭೆಯನ್ನು ಉದ್ದೇಶಿಸಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು,
ಈ ಸಂದರ್ಭದಲ್ಲಿ ಡಾ. ಶ್ರೀ ಮರುಳುಸಿದ್ದ ಸ್ವಾಮಿಗಳವರು, ಶ್ರೀ ಮ.ನಿ.ಪ್ರ. ಚನ್ನಬಸವ ಸ್ವಾಮಿಗಳವರು, ಶ್ರೀ ಬಸವ ಶಾಂತಲಿಂಗ ಸ್ವಾಮಿಗಳವರು, ಡಾ. ಜಿ. ಪ್ರಶಾಂತ ನಾಯಕ್ ರವರು, ಶರಣ ಬಿ. ಬೆನಕಪ್ಪ, ಶರಣ ಡಾ. ಮಲ್ಲೇಪುರಂ ಜಿ. ವೆಂಕಟೇಶ್, ಅಯನೂರು ಮಂಜುನಾಥ್, ಯಕ ಚಂದ್ರಶೇಖರಪ್ಪ, ಮಹಾರುದ್ರ, ಯೋಗೇಶ್ ಸೇರಿದಂತೆ ಇತರ ಹಲವು ಗಣ್ಯರು ಉಪಸ್ಥಿತರಿದ್ದರು.
B.Y.Raghavendra ಭಗವದ್ಗೀತಾ ಅಭಿಯಾನದ ಪೂರ್ವಸಿದ್ಧತೆ ಚರ್ಚಿಸಿದ ಸಂಸದ ಬಿ.ವೈ.ರಾಘವೇಂದ್ರ
B.Y.Raghavendra ಶ್ರೀಭಗವದ್ಗೀತಾ ಅಭಿಯಾನ -2025.
ಸಮಿತಿಯ ಪರವಾಗಿ ಸಂಸದ ಬಿ.ವೈ.ರಾಘವೇಂದ್ರ ಅವರನ್ನ ಭೇಟಿ ಮಾಡಿ
ಇದುವರೆಗೂ ಆಗಿರುವ ಸಿದ್ಧತೆಗಳ ಬಗ್ಗೆ ಸಂಸದರ ಗಮನಕ್ಕೆ ತರಲಾಯಿತು.
ಸಂಸದ ಬಿ.ವೈ.ರಾಘವೇಂದ್ರ ಅವರು ಗೀತಾಭಿಮಾನಿಗಳಿಗೆ ತುಂಬುಹೃದದಯದ ಸ್ವಾಗತ ಕೋರಿ ತಮ್ಮ ಕ್ಷೇತ್ರದಲ್ಲಿ ನಡೆಯುತ್ತಿರುವ ಭಗವದ್ಗೀತಾ ಮಹಾಸಮರ್ಪಣೆ ಕಾರ್ಯವು ಒಂದು ಭಾಗ್ಯ ಎಂದು ಹೇಳಿದರು.
B.Y.Raghavendra ಚರ್ಚೆಯಲ್ಲಿ ಭಗವದ್ಗೀತಾ ಅಭಿಯಾನದ ಕಾರ್ಯಧ್ಯಕ್ಷ ಅಶೋಕ. ಜಿ .ಭಟ್, ನಿಕಟಪೂರ್ವ ಅಧ್ಯಕ್ಷ ಲಕ್ಷ್ಮೀನಾರಾಯಣ ಕಾಶಿ.
ಸ್ವಾಗತ ಸಮಿತಿಯ ಕ.ಜಿ.ಮಂಜುನಾಥ ಶರ್ಮ, ಮಾಧ್ಯಮ ಸಂವಹನ ಸಮಿತಿಯ ಡಾ.ಸುಧೀಂದ್ರ
ಉಪಸ್ಥಿತರಿದ್ದರು.
ಬಂದಗದ್ದೆಯಲ್ಲಿ ಉಚಿತ ನೇತ್ರ ತಪಾಸಣೆ. ಶಸ್ತ್ರಚಿಕಿತ್ಸೆಗೆ 56 ಮಂದಿಗೆ ಸಲಹೆ
ಉಚಿತ ನೇತ್ರ ತಪಾಸಣೆ ಮತ್ತು ಕನ್ನಡಕ ವಿತರಣೆ ಶಿಬಿರ ಸಾಗರದ ಬಂದಗದ್ದೆ ಗ್ರಾಮ, ಶಿವಮೊಗ್ಗ ಜಿಪಂ, ತಾಲ್ಲೂಕು ಪಂಚಾಯತ್, ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ, ಜಿಲ್ಲಾ ಅಂಧತ್ವ ನಿಯಂತ್ರಣ ಸಂಘ ಶಿವಮೊಗ್ಗ, ಲಯನ್ಸ್ ಕ್ಲಬ್ ಸಾಗರ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಉಚಿತ ಕನ್ನಡಕ ವಿತರಣೆ ಶಿಬಿರವನ್ನು ಪ್ರಾಥಮಿಕ ಆರೋಗ್ಯ ಕೇಂದ್ರ, ಸಾಗರದ ಬಂದಗದ್ದೆ ಗ್ರಾಮದಲ್ಲಿ ನ. 20 ರಂದು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.
ಈ ಶಿಬಿರದಲ್ಲಿ ವಿವಿಧ ಗ್ರಾಮಗಳಿಂದ ಬಂದ ಸುಮಾರು 250 ಮಂದಿ ರೋಗಿಗಳು ನೇತ್ರ ತಪಾಸಣೆಗಾಗಿ ಭಾಗವಹಿಸಿದರು. ನೇತ್ರ ತಜ್ಞರಿಂದ ಸಮಗ್ರ ದೃಷ್ಟಿ ತಪಾಸಣೆ ನಡೆಯಿತು.
ಅದರಲ್ಲಿ 56 ಮಂದಿ ರೋಗಿಗಳು ಶಸ್ತ್ರಚಿಕಿತ್ಸೆಗೆ ಆಯ್ಕೆಯಾದರು, ಮತ್ತು ಶೀಘ್ರದಲ್ಲೇ ಶಿವಮೊಗ್ಗ ಶಂಕರ್ ಆಸ್ಪತ್ರೆಯಲ್ಲಿ ಉಚಿತ ಶಸ್ತ್ರಚಿಕಿತ್ಸೆ ನಡೆಯಲಿದೆ ಎಂದು ವೈದ್ಯರು ತಿಳಿಸಿದ್ದಾರೆ. ಜೊತೆಗೆ 62 ಮಂದಿಗೆ ಉಚಿತ ಕನ್ನಡಕಗಳನ್ನು ವಿತರಿಸಲಾಯಿತು, ಒಟ್ಟು 260 ಜನ ನೇತ್ರ ತಪಾಸಣೆ ಮಾಡಿಸಿಕೊಂಡರು.
ಇದರಿಂದ ಅವರಿಗೆ ಉತ್ತಮ ದೃಷ್ಟಿ ಪಡೆಯಲು ಸಹಾಯವಾಯಿತು. ಕನ್ನಡಕದ ವಿತರಣೆ ದಾನಿಗಳಾದ ಲಯನ್ಸ್ ಕ್ಲಬ್ ಪ್ರಥಮ ಉಪಾಧ್ಯಕ್ಷರಾದ ಪಿಎಂಜೆಎಫ್ ಲಯನ್ ನಾಗರಾಜ್.ಈ, ವಕೀಲರು ಹಾಜರಿದ್ದರು.
ಕಾರ್ಯಕ್ರಮದಲ್ಲಿ ಸಾಗರ ಲಯನ್ಸ್ ಕ್ಲಬ್ ಅಧ್ಯಕ್ಷ ಡಾ. ಪ್ರಸನ್ನ. ಟಿ ಇವರು ಉಪಸ್ತಿತರಿದ್ದರು. ಡಾ. ಪ್ರಜಕ್ತಾ, ಕಣ್ಣಿನ ತಜ್ಞರು, ಡಾ. ಭರತ್, ಸಹಾಯಕ ವೈದ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರ, ಬಂದಗದ್ದೆ , ಶ್ರೀ ಸಚಿನ್, ಸಾರ್ವಜನಿಕ ಸಂಪರ್ಕ ಅಧಿಕಾರಿಗಳು, ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ ಶ್ರೀಮತಿ ಸವಿತಾ, ಹಿರಿಯ ಮೇಲ್ವಿಚಾರಕರು, ಉಪಸ್ತಿತರಿದ್ದರು.
ಈ ಶಿಬಿರದ ಯಶಸ್ವಿ ಸಂಯೋಜನೆಯನ್ನು ಲಯನ್ ನಂದೀಶ್ ಎನ್.ಟಿ. (ಜಿಲ್ಲಾ ಸಂಯೋಜಕ – ನೇತ್ರ ತಪಾಸಣೆ ಮತ್ತು ಕನ್ನಡಕ ವಿತರಣೆ, ಜಿಲ್ಲೆ 317C) ಅವರು ಶಿವಮೊಗ್ಗ ಆಪ್ಟಿಕಲ್ಸ್ ಸಹಯೋಗದೊಂದಿಗೆ ನಿರ್ವಹಿಸಿದರು.
ನವೆಂಬರ್ 28.ಶಿವಮೊಗ್ಗ ತುಂಗಾ ನಗರ ಆರೋಗ್ಯ ಕೇಂದ್ರದಲ್ಲಿ ಉಚಿತ ನೇತ್ರ ತಪಾಸಣೆ & ಚಿಕಿತ್ಸಾ ಶಿಬಿರ
ಶಿವಮೊಗ್ಗ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಶಿವಮೊಗ್ಗ ಜಿಲ್ಲಾ ಆರೋಗ್ಯ ಕೇಂದ್ರ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಹಾಗೂ ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲಾ 317ಸಿ ಶಿವಮೊಗ್ಗ ಇದರ ವತಿಯಿಂದ ಅಂಧತ್ವ ನಿವಾರಣ ವಿಭಾಗ ಶಿವಮೊಗ್ಗ ಇವರಿಂದ ಉಚಿತ ನೇತ್ರ ತಪಾಸಣೆ ಹಾಗೂ ನೇತ್ರ ಚಿಕಿತ್ಸೆ ಶಿಬಿರವನ್ನು ತುಂಗನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನ.28ರ ಸೋಮವಾರ ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 2:30ವರೆಗೆ ಏರ್ಪಡಿಸಲಾಗಿದೆ.
ಅವಶ್ಯಕತೆ ಇರುವವರು ಇದರ ಸದುಪಯೋಗ ಪಡೆದುಕೊಳ್ಳಲು ನಂದೀಶ್ 94481 49878 ಮತ್ತು ಕುಮಾರ್ ಜಿಎಸ್ 94484 17179 ಮತ್ತು ಶಿವರಾಂ 94491 35895 ಇವರಲ್ಲಿ ಸಂಪರ್ಕಿಸಿ
ಕೆ.ರಂಗನಾಥ್ ಗೆ “ಜಿಲ್ಲಾ ಉತ್ತಮ ಸಹಕಾರಿ” ಪ್ರಶಸ್ತಿ ಪ್ರದಾನ
ಕೆ ರಂಗನಾಥ್ ಗೆ ಜಿಲ್ಲಾ ಉತ್ತಮ ಸಹಕಾರಿ ಪ್ರಶಸ್ತಿ ಪ್ರಧಾನ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿ., ಬೆಂಗಳೂರು, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿ., ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಶಿವಮೊಗ್ಗ ಸಹಕಾರ ಹಾಲು ಒಕ್ಕೂಟ ನಿಯಮಿತ, ಹಾಗೂ ಸಹಕಾರ ಇಲಾಖೆ, ಶಿವಮೊಗ್ಗ ಹಾಗೂ ಎಲ್ಲಾ ಸಹಕಾರಿ ಸಂಘಗಳು ಮತ್ತು ಬ್ಯಾಂಕುಗಳ ಸಂಯುಕ್ತ ಆಶ್ರಯದಲ್ಲಿ ಹೊಸನಗರ ತಾಲೂಕು ರಿಪ್ಪಿನ್ ಪೇಟೆಯಲ್ಲಿ ನಡೆದ ’72ನೇ ಸಹಕಾರ ಸಪ್ತಾಹ ‘ ಸಮಾರೋಪ ಸಮಾರಂಭದಲ್ಲಿ ಸಹಕಾರಿ ಕ್ಷೇತ್ರಗಳ ಬೆಳವಣಿಗೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿ ಸೊಸೈಟಿಯ ಖಜಾಂಚಿಗಳು ಹಾಗೂ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ನಿರ್ದೇಶಕರಾದ ಕೆ.ರಂಗನಾಥ್ ರವರಿಗೆ “ಜಿಲ್ಲಾ ಉತ್ತಮ ಸಹಕಾರಿ” ಪ್ರಶಸ್ತಿ ಪ್ರಧಾನ ಮಾಡಿ ಅಭಿನಂದಿಸಲಾಯಿತು. ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಿದ ಡಿಸಿಸಿ ಬ್ಯಾಂಕಿನ ಅಧ್ಯಕ್ಷರು, ಮಲೆನಾಡು ಪ್ರಾಧಿಕಾರ ಅಧ್ಯಕ್ಷರು ‘ಸಹಕಾರಿ ಕ್ಷೇತ್ರದ ಭೀಷ್ಮ’ ಆರ್. ಎಂ ಮಂಜುನಾಥಗೌಡ, ರವರಿಗೂ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರು ‘ಸಹಕಾರಿ ರತ್ನ ‘ಎಸ್ ಕೆ ಮರಿಯಪ್ಪ, ನವರಿಗೂ , ಶಿಮುಲ್ ಅಧ್ಯಕ್ಷರಾದ ವಿದ್ಯಾಧರ್, ರವರಿಗೂ ಡಿಸಿಸಿ ಬ್ಯಾಂಕ್ ನ ಹಿರಿಯ ನಿರ್ದೇಶಕರಾದ ಜಿ.ಎನ್ ಸುಧೀರ್ ರವರಿಗೂ ಹಾಗೂ ಜಿಲ್ಲೆಯ ಎಲ್ಲಾ ಸಹಕಾರಿ ಬಾಂಧವರಿಗೆ ಕೆ ರಂಗನಾಥ್ ರವರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ
