Chandragutti Festival ಸೊರಬ ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಫೆ.24 ಮತ್ತು 25 ರಂದು ಶ್ರೀ ರೇಣುಕಮ್ಮ ದೇವಿ ಜಾತ್ರೆ ನಡೆಯುತ್ತಿದ್ದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಈ 2 ದಿನಗಳ ಕಾಲ ಬೆತ್ತಲೆ ಸೇವೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಆದೇಶಿಸಿದ್ದಾರೆ.
ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರನ್ವಯ ರೇಣುಕಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ವರದಾ ನದಿಯಲ್ಲಿ ಧಾರ್ಮಿಕ ಸ್ನಾನ ಮಾಡುವುದು, ದೇವರಿಗೆ ಮುಡಿ ಕೊಡುವುದು, ಪಡ್ಲಿಗಿ ತುಂಬಿಸುವುದು ಮತ್ತು ‘ಬೆತ್ತಲೆ ಸೇವೆ’ ಯನ್ನು ನಿಷೇಧಿಸಿ ಆದೇಶ ಹೊರಡಿಸಿರುತ್ತಾರೆ. ಈ ನಿಷೇಧಾಜ್ಞೆಯು ಶ್ರೀ ರೇಣುಕಮ್ಮ ದೇವಿಯ ರಥೋತ್ಸವ, ಪೂಜಾ ಕಾರ್ಯಗಳು ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನಡೆಸುವುದಕ್ಕೆ ಅನ್ವಯಿಸುವುದಿಲ್ಲವೆಂದು ತಿಳಿಸಿದ್ದಾರೆ
Chandragutti Festival ಚಂದ್ರಗುತ್ತಿ ದೇವಿಜಾತ್ರೆಯಲ್ಲಿ ಬೆತ್ತಲೆ ಸೇವೆ ನಿಷೇಧಿಸಿ ಡೀಸಿ ಅವರ ಆದೇಶ
Dinesh Gundu Rao ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದವರು ಯಾರೂ ‘ ಔಷಧ ಇಲ್ಲ” ಎಂದು ವಾಪಾಸ್ ಹೋಗಬಾರದು- ಸಚಿವ ದಿನೇಶ್ ಗುಂಡೂರಾವ್
Dinesh Gundu Rao ಕರ್ನಾಟಕ ಸಾರ್ವತ್ರಿಕ ಆರೋಗ್ಯ ಆಂದೋಲನ ವತಿಯಿಂದ ಬೆಂಗಳೂರಿನ ಗಾಂಧಿಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಆರೋಗ್ಯ ಹಕ್ಕಿನ ಜಾಥಾ-2026ರ ಸಮಾರೋಪ ಕಾರ್ಯಕ್ರಮದಲ್ಲಿ ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಾಲ್ಗೊಂಡು ಮಾತನಾಡಿದರು.
2025-26ನೇ ಸಾಲಿನ ವಾರ್ಷಿಕ ಬೇಡಿಕೆ ಪಟ್ಟಿಗೆ ಸಂಬಂಧಿಸಿದಂತೆ ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯವಿರುವ ಔಷಧಿಗಳನ್ನು ಒದಗಿಸಲು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ (ಕೆಎಸ್ಎಂಸಿಎಲ್) ವತಿಯಿಂದ ಔಷಧಿಗಳ ಖರೀದಿ ಪ್ರಕ್ರಿಯೆ ಆರಂಭಿಸಲಾಗಿದ್ದು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು
.
ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಆಗಮಿಸುವ ಯಾರೊಬ್ಬರೂ “ಔಷಧ ಇಲ್ಲ” ಎಂದು ವಾಪಸ್ ಹೋಗಬಾರದು. ಆ ನಿಟ್ಟಿನಲ್ಲಿ ನಮ್ಮ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿದ್ದು, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿಯೂ ಸಮರ್ಪಕ ಔಷಧಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳುತ್ತಿದೆ. ತಂತ್ರಜ್ಞಾನ ಬಳಸಿಕೊಂಡು ಯಾವ ಆಸ್ಪತ್ರೆಗಳಲ್ಲಿ ಯಾವ ಔಷಧಗಳ ಸಂಗ್ರಹ ಎಷ್ಟಿದೆ ಎಂಬುದನ್ನು ಟ್ರ್ಯಾಕ್ ಮಾಡುತ್ತಿದ್ದು, ಈ ಪ್ರಕ್ರಿಯೆ ಕೂಡ ಇನ್ನಷ್ಟು ಸರಳವಾಗಲಿದೆ.
ನಮ್ಮ ಸರ್ಕಾರ ಆರೋಗ್ಯ ವ್ಯವಸ್ಥೆಯಲ್ಲಿ ಅಮೂಲಾಗ್ರ ಸುಧಾರಣೆಗಳನ್ನು ನಿರಂತರವಾಗಿ ತರುತ್ತಿದ್ದು, ಗುಣಮಟ್ಟದ ಔಷಧ ಪೂರೈಕೆಯ ಬದ್ಧತೆಯೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ಸಚಿವರು ತಿಳಿಸಿದರು
Karnataka Janapada Parishath ಶಿವಮೊಗ್ಗ ಜಿಲ್ಲಾ ಏಳನೇ ಜಾನಪದ ಸಮ್ಮೇಳನ: ಹಿರಿಯ “ಜನಪದ ಧ್ವನಿ” ಕೆ. ಯುವರಾಜ್ ಸರ್ವಾಧ್ಯಕ್ಷತೆ
Karnataka Janapada Parishath ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಮಾ.21 ರಂದು ಶನಿವಾರ ಆಲದಹಳ್ಳಿ ಸೋಮಿನ ಕೊಪ್ಪದಲ್ಲಿ ಜಿಲ್ಲಾ ಮಟ್ಟದ 7 ನೇ , ಸರ್ವಾಧ್ಯಕ್ಷರಾಗಿ ಜಾನಪದ ಗಾಯಕ ಕೆ. ಯುವರಾಜ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ತಿಳಿಸಿದ್ದಾರೆ.
ಕಜಾಪ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮ್ಮೇಳನ ಸರ್ವಾಧ್ಯಕ್ಷರ ಆಯ್ಕೆ ಮಾಡಲಾಯಿತು. ಜಿಲ್ಲೆಯ ಸುಮಾರು ಇಪ್ಪತ್ತು ವಿವಿಧ ಪ್ರಕಾರದ ಜಾನಪದ ಕಲಾ ತಂಡಗಳು ಸಮ್ಮೇಳನದಲ್ಲಿ ಭಾಗವಹಿಸಲಿದೆ ಎಂದು ತಿಳಿಸಿದ್ದಾರೆ.
ಫೆ.19, 20 & 21 ರಂದು ತಾವರೆಚಟ್ನಳ್ಳಿ ವಿದ್ಯುತ್ ಕೇಂದ್ರದ ನಿರ್ವಹಣೆ ಕಾರ್ಯ : ಕುವೆಂಪು ನಗರದ ಸೂಡಾ ಸಿ & ಡಿ ಬ್ಲಾಕ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ
ಫೆ.19, 20 ಮತ್ತು 21 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ತಾವರೆಚಟ್ನಹಳ್ಳಿ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕುವೆಂಪುನಗರದ ಸೂಡಾ ಸಿ ಮತ್ತು ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಫಾ ಸಿಟಿ, ಮ್ಯಾಕ್ಸ್ ಲೇಔಟ್, ಎಂಇಎಸ್ ಲೇಔಟ್, ರೆಡ್ಡಿ ಲೇಔಟ್, ಸವಳಂಗ ರಸ್ತೆ ಹಾಗೂ ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಹಳ್ಳಿ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂದಿ ಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಆಹಾರವಾಹಿನಿ ಸೌಲಭ್ಯ ಯೋಜನೆ: ಸಹಾಯಧನಕ್ಕೆ ಅರ್ಜಿ ಆಹ್ವಾನ
ಕರ್ನಾಟಕ ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ದಿ ನಿಗಮದ ವತಿಯಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಲ್ಲಿ ನಿಗಮದಿಂದ ವಾಹನ ಖರೀದಿಗೆ ರೂ.3.00 ಲಕ್ಷಗಳ ಸಹಾಯಧನವನ್ನು ಪಡೆಯಲು ಸೇವಾಸಿಂದು ಪೋರ್ಟೆಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಅಲೆಮಾರಿ/ಅರೆಅಲೆಮಾರಿ ಸಮುದಾಯ, ಒಕ್ಕಲಿಗ, ಅಂಬಿಗ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪಜಾತಿ ಸಮುದಾಯಗಳನ್ನು ಹೊರತುಪಡಿಸಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಮಾತ್ರ ಸೇರಿದವರಾಗಿರಬೇಕು.
ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು, ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇರುವಂತೆ ಹೊಂದಾಣಿಕೆಯಾಗಬೇಕು.ಕುಟುಂಬದ ವಾರ್ಷಿಕ ವರಮಾನ ರೂ.3.00 ಲಕ್ಷಗಳ ಒಳಗಿರಬೇಕು ಹಾಗೂ ಅರ್ಜಿದಾರರ ವಯಸ್ಸು 21 ರಿಂದ 45 ವರ್ಷ ಒಳಗಿನವರಾಗಿರಬೇಕು.
ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸುವಂತಿಲ್ಲ. ಸರ್ಕಾರದ ವಿವೇಚನಾ ಕೋಟಾ/ನಿಗಮದ ಅಧ್ಯಕ್ಷರು/ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಲ್ಲಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ಲೈನ್ನಲ್ಲಿಯೇ ಅರ್ಜಿಯನ್ನು ಸಲ್ಲಿಸಬೇಕು.
ಆಸಕ್ತರು ಸೇವಾಸಿಂದು ಪೋರ್ಟೆಲ್ http://sevasindhukarnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್, ಸೇವಾ ಕೇಂದ್ರಗಳಲ್ಲಿ ಮಾ. 06 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ http://kvldcl.karnataka.gov.in ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಟ್ಟಡ, ಬಾಲರಾಜ್ ಅರಸ್ ರಸ್ತೆ, ಕೆ.ಇ.ಬಿ. ಸರ್ಕಲ್ ಹತ್ತಿರ, ಶಿವಮೊಗ್ಗ,ದೂ. ಸಂ:08182-229634ನ್ನು ಸಂಪರ್ಕಿಸುವುದು.
‘ತರಕಾರಿ ಬೀಜಗಳ ಕಿಟ್ ‘ ಪಡೆಯಲು ಆಸಕ್ತ ರೈತರಿಂದ ಅರ್ಜಿ ಆಹ್ವಾನ
ಶಿವಮೊಗ್ಗ ತಾಲ್ಲೂಕು ತೋಟಗಾರಿಕೆ ಇಲಾಖೆಯ ವತಿಯಿಂದ 2025-26 ನೇ ಸಾಲಿನಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ‘ತರಕಾರಿ ಬೀಜಗಳ ಕಿಟ್’ ಗಳನ್ನು ರೈತರಿಗೆ ವಿತರಿಸಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಫೆ.23 ಕಡೆಯ ದಿನವಾಗಿದ್ದು ರೈತರು ತಮ್ಮ ಜಮೀನಿಗೆ ಸಂಬಂಧಪಟ್ಟ ಪ್ರಸ್ತುತ ವರ್ಷದ ಪಹಣಿ/ಆರ್ಟಿಸಿ, ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕು.
ಆಸಕ್ತ ರೈತರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಗಾಂಧಿಪಾರ್ಕ್, ಶಿವಮೊಗ್ಗ ಇವರನ್ನು ಅಥವಾ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಪಡೆದು ಸಲ್ಲಿಸಬಹುದು ಎಂದು ಶಿವಮೊಗ್ಗ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
MESCOM ಶಿವಮೊಗ್ಗ ಗ್ರಾಮೀಣ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ.20 ರಂದು ಜನಸಂಪರ್ಕ ಸಭೆ
MESCOM ಶಿವಮೊಗ್ಗ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ಬರುವಂತಹ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸಲು ಮತ್ತು ತುರ್ತು ಕ್ರಮಗಳನ್ನು ತೆಗದುಕೊಳ್ಳುವ ಸಲುವಾಗಿ ಫೆ.20 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿ)ರವರ ಕಚೇರಿ, ಪಾಲನೆ ಮತ್ತು ನಿರ್ವಹಣೆ ಗ್ರಾಮೀಣ ಉಪವಿಭಾಗ, ಬಾಲರಾಜ್ ಅರಸ್ ರಸ್ತೆ, ರೈಲ್ವೇ ಸ್ಟೇಷನ್ ಹತ್ತಿರ, ಮೆಸ್ಕಾಂ, ಶಿವಮೊಗ್ಗ ಇಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದ್ದು ಈ ವ್ಯಾಪ್ತಿಯ ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಕುಂದು ಕೊರತೆಗಳನ್ನು ನಿವಾರಿಸಿಕೊಳ್ಳಬಹುದೆಂದು ಮೆಸ್ಕಾಂ ತಿಳಿಸಿದೆ.
ಶಿಕಾರಿಪುರದಲ್ಲಿ ಬೈಕ್ ಡಿಕ್ಕಿಯಾಗಿ ಪೊಲೀಸ್ ಸಿಬ್ಬಂದಿಗೆ ಗಾಯ.
ಶಿಕಾರಿಪುರದಲ್ಲಿ ಕರ್ತವ್ಯ ನಿರತ ಪೊಲೀಸ್ ಗೆ ಬೈಕ್ ನಲ್ಲಿ ಯುವಕರು – ಡಿಕ್ಕಿ ಹೊಡೆದ ಘಟನೆ ನಡೆದಿದೆ.ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಗಾಯಳುವನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿಕಾರಿಪುರದ ಅಕ್ಕಮಹಾದೇವಿ ವೃತ್ತದಲ್ಲಿ ಪಾರ್ಕಿಂಗ್ ಲಾಟ್ ನಲ್ಲಿ ವಾಹನ ತೆಗೆಸುತ್ತಿದ್ದ ಶಂಕರ್ ಎಂಬ ಪೊಲೀಸ್ ಗೆ
ಬೈಕ್ ನಲ್ಲಿದ್ದ ಬರುತ್ತಿದ್ದ ಮೂವರು ಸವಾರು ಬೈಕ್ ನಿಂದ ಡಿಕ್ಕಿ ಹೊಡೆದಿದ್ದಾರೆ.
ಕುಡಿದು ವಾಹನ ಚಲಾಯಿಸುತ್ತಿದ್ದ ಯುವಕರನ್ನು ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
ನೃತ್ಯ ಮತ್ತು ಚಲನೆಯ ಚಿಕಿತ್ಸಾ ಶಿಬಿರಗಳು ಮಕ್ಕಳಿಗೆ ಉಪಯುಕ್ತ- ನ್ಯಾ. ದೀಪಾ
ಶಿವಮೊಗ್ಗ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಬಾಲನ್ಯಾಯ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ ಫೆ. 13 ರಂದು ಸರ್ಕಾರಿ ಬಾಲಕಿಯರ ಬಾಲಮಂದಿರದ ಮಕ್ಕಳಿಂದ ನೃತ್ಯ ಮತ್ತು ಚಲನೆಯ ಚಿಕಿತ್ಸಾ ಪ್ರಾತ್ಯಕ್ಷಿಕೆ ಯಶಸ್ವಿಯಾಗಿ ನಡೆಯಿತು.
ಡಾ.ಕೆ.ಎಸ್.ಪವಿತ್ರಾರ ನಿರ್ದೇಶನದಲ್ಲಿ ನಡೆದ ಈ ಶಿಬಿರದಲ್ಲಿ 3 ತಿಂಗಳುಗಳ ಕಾಲ ಕಲಿತ ನೃತ್ಯ ಚಲನೆಯ ವಿವಿಧ ಅಂಶಗಳನ್ನು ಮಕ್ಕಳು ಪ್ರದರ್ಶಿಸಿದರು.
ಬಾಲನ್ಯಾಯ ಮಂಡಳಿಯ ಅಧ್ಯಕ್ಷರು ಮತ್ತು ಹಿರಿಯ ನ್ಯಾಯಾಧೀಶರಾದ ಶ್ರೀಮತಿ ದೀಪಾ ರವರು ಕಾರ್ಯಕ್ರಮ ಉದ್ಘಾಟಿಸಿ ಇಂತಹ ಶಿಬಿರಗಳು ಅಪೇಕ್ಷಣೀಯ. ಮಕ್ಕಳ ಸಾಮರ್ಥ್ಯವನ್ನು ಹತ್ತು ಹಲವು ರೀತಿಗಳಲ್ಲಿ ಬೆಳೆಸುತ್ತವೆ ಎಂದು ಅಭಿಪ್ರಾಯ ಪಟ್ಟರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ್ ಮಾತನಾಡಿ ಇಂತಹ ಪ್ರಯತ್ನಗಳನ್ನು ಎಲ್ಲಾ ಬಾಲಮಂದಿರಗಳಿಗೂ ವಿಸ್ತರಿಸಬೇಕಾದ ಅವಶ್ಯಕತೆಯ ಬಗ್ಗೆ ಗಮನಸೆಳೆದರು.
ಶಿಬಿರದ ನಿರ್ದೇಶಕಿ ಮತ್ತು ಬಾಲ ನ್ಯಾಯ ಮಂಡಳಿಯ ಸದಸ್ಯೆ ಡಾ.ಕೆ.ಎಸ್.ಪವಿತ್ರ. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ತಾಜುದ್ದೀನ್ ಖಾನ್, ಡಾ.ಪ್ರೀತಿ ಪೈ. ಡಾ.ಅರ್ಚನಾ ಭಟ್, ಶ್ರೀಮತಿ ಜ್ಯೋತಿಕಲಾ ಮತ್ತು ಬಾಲ ನ್ಯಾಯ ಮಂಡಳಿಯ ಸಿಬ್ಬಂದಿ ಭಾಗವಹಿಸಿ ಮಕ್ಕಳನ್ನು ಶ್ಲಾಘಿಸಿದರು.
