Wednesday, February 11, 2026
Wednesday, February 11, 2026
Home Blog Page 86

Klive Special Article ನಿಮ್ಮೂರಿನ ಇತಿಹಾಸ ನಿಮಗೆಷ್ಟು ಗೊತ್ತು? ಮಾಹಿತಿ ಸರಣಿ – ಬೆಳಗುತ್ತಿಯ ಅರಸರು

0

ಭಾಗ -1

Klive Special Article ಕರ್ನಾಟಕದಲ್ಲಿ ಆಳಿದ ಅಜ್ಞಾತ ಅರಸೊತ್ತಿಗೆಯಲ್ಲಿ ಹೊನ್ನಾಳಿ ತಾಲೂಕಿನ ಬೆಳಗುತ್ತಿಯೂ ಒಂದು ಗ್ರಾಮವಾಗಿದ್ದು ಶತಮಾನಗಳ ಹಿಂದೆ ಸುಪ್ರಸಿದ್ಧ ರಾಜಧಾನಿಯಾಗಿತ್ತು, ಈ ಬೆಳಗುತ್ತಿಯನ್ನು ಎರಡು ಅರಸುಮನೆತನಗಳು ಆಳ್ವಿಕೆ ನಡೆಸಿವೆ. ಇವರ ಕಾಲದಲ್ಲಿ ಕಟ್ಟಿಸಿದ ದೇವಾಲಯಗಳು, ಕೋಟೆಗಳ, ಅರಮನೆಗಳ‌ ಅವಶೇಷಗಳು ಅನಾಥವಾಗಿವೆ.

ಪ್ರಾಚೀನ ಇತಿಹಾಸ ಕಾಲದಲ್ಲಿ ಬೆಳಗುತ್ತಿ, ತೀರ್ಥ ರಾಮೇಶ್ವರ, ಕಲುಬಿಗಿರಿ ಲಕ್ಷ್ಮೀರಂಗನಾಥ ದೇವಾಲಯಗಳು ಪ್ರಾಚೀನ ಕ್ಷೇತ್ರಗಳೆಂದು ಪರಿಗಣಿಸಲಾಗಿದೆ. ಬೆಳಗುತ್ತಿಗೆ ಶಾಸನಗಳಲ್ಲಿ ಆವಂತಿ, ಬೆಳಗವರ್ತಿ, ಬೆಳಗವತ್ತಿ, ಬೆಳಗುತ್ತಿ ಎಂದು ಉಲ್ಲೇಖವಾಗಿದೆ. ಬೆಳಗುತ್ತಿ ಯಲ್ಲಿ ಮೊದಲು ಆಳಿದ ಅರಸರು ಸಿಂಧರು. ಸಿಂಧರು ಉತ್ತರ ಭಾರತದ ರಾಜವಂಶದವರೆಂದು ತಿಳಿದುಬರುತ್ತದೆ. ಇವರು ಮೊದಲು ಮಹಾರಾಷ್ಟ್ರದ ಇರಂಬರಗೆಯಲ್ಲಿ ಆಳುತ್ತಿದ್ದ .‌ಕ್ರಿ.ಶ. 400 ರಲ್ಲಿ ದೊರೆಯಾಗಿದ್ದ ನಿಡದೋಳ ಸಿಂಧ್ ವಂಶದ ಮೂಲಪುರುಷನೆಂದು ಶಾಸನಗಳಲ್ಲಿ ಉಲ್ಲೇಖವಾಗಿದೆ. ಸಿಂಧ್ ವಂಶವು ಹಲವು ಶಾಖೆಗಳಾಗಿ ಇವರ ವಂಶೀಕರು ಯಲಬುರ್ಗ, ಕುರುಗೋಡು, ಮತ್ತು ಬೆಳಗುತ್ತಿ ಯಲ್ಲಿ ಆಡಳಿತ ನಡೆಸಿದರು. ಕ್ರಿ.ಶ.‌1312ರಲ್ಲಿ ಬೆಳಗುತ್ತಿ ಯಲ್ಲಿ ಆಳುತ್ತಿದ್ದ ಕಾಮಯ್ಯನೇ ಸಿಂಧ್ ವಂಶದ ಕೊನೆಯ ದೊರೆ. ಇವನು ದೇವಗಿರಿಯ ಸಾಮಂತನಾಗಿದ್ದನು. ಬೆಳಗುತ್ತಿ ಇತಿಹಾಸದ ಕಥೆಯನ್ನು ಸುಮಾರು 30ಶಾಸನಗಳು ಕಲ್ಲಿನ ರೂಪದಲ್ಲಿ ನಿಂತು ಸಾರುತ್ತಿವೆ. ಸಿಂಧ್ ನಂತರ ವಿಜಯನಗರದ ಆಡಳಿತವು ಆರಂಭವಾಯಿತು.

Klive Special Article ವಿಜಯನಗರದ ಅರಸ ಬುಕ್ಕರಾಯನ ಆಳ್ವಿಕೆ ಕಾಲದಲ್ಲಿ ಮಲೆನಾಡಿನಲ್ಲಿ ಬೇಡರ ಕನ್ಯಾನಾಯಕ ಎಂಬುವನು ಬೆದರಕೋಟೆ ಮತ್ತು ಚಂದ್ರಗುತ್ತಿಯಲ್ಲಿ ಕೋಟೆಯನ್ನು ಕಟ್ಟಿಸಿ 80ಸಾವಿರ ಯೋಧರ ಪಡೆಯನ್ನು ಕಟ್ಟಿ ಬೆಳಗುತ್ತಿ ಸೇರಿದಂತೆ ಹಲವು ಪ್ರದೇಶವನ್ನು ವಶಪಡಿಸಿಕೊಂಡಿದ್ದ. ಆಗ ಬೆಳಗುತ್ತಿಯಲ್ಲಿ ವೆಂಕಟಾದ್ರಿ ಎಂಬುವವನು ಆಳ್ವಿಕೆ ನಡೆಸುತ್ತಿದ್ದ.
ಬುಕ್ಕರಾಯನ ಮೊಮ್ಮಗನೂ, ದೇವರಾಯನ ಮಗನೆಂದೂ ಕರೆಯಲ್ಪಡುವ ಚಲುವರಂಗಪ್ಪನು ಆನೆಗೊಂದಿಯ ನರಪತಿಯ ಬಿರುದುಗಳೊಂದಿಗೆ ಕ್ರಿ.ಶ.1358 ರಲ್ಲಿ ಹೊನ್ನಾಳಿ ತಾಲ್ಲೂಕಿನ ದಿಡಗೂರಿಗೆ ಬಂದು ಆಳ್ವಿಕೆ ನಡೆಸಿದ. ಆದರೆ ಬುಕ್ಕರಾಯನ ಸೇನಾಪತಿ ವೀರಭದ್ರ ನಾಯಕನು ಬೆಳಗುತ್ತಿಯ ಕನ್ಯಾನಾಯಕನನ್ನು ಸೋಲಿಸಲು ಸಾಧ್ಯವಾಗಲಿಲ್ಲ. ‌ಕ್ರಿ.ಶ.‌ 1361 ರಲ್ಲಿ ಚೆಲುವರಂಗಪ್ಪನು ಕನ್ಯಾನಾಯಕನನ್ನು ಸೋಲಿಸಿ ಸೆರೆಹಿಡಿದು ಇವನಿಂದ ಬೆವುಲೆ ಎಂಬ ಬಿರುದನ್ನು ಹಳದಿ ಧ್ವಜವನ್ನು ಪಡೆದನೆಂದು ತಿಳಿಯುತ್ತದೆ. ಆದರೆ ಇದೇ ಪ್ರಾಂತದ ಅಭ್ರಮಾಧವನ ಮಗನಾದ ವೆಂಕಟಾದ್ರಿ ಯು ಕನ್ಯಾನಾಯಕನನ್ನು ಸೋಲಿಸಿ ಬೆವುಲೆ ಎಂಬ ಬಿರುದನ್ನು ಪಢದನೆಂದು ಕುದುರೆ ರಾಯರ ವೃತ್ತಾಂತದಲ್ಲಿ ಉಲ್ಲೇಖವಾಗಿದೆ.

ಮುಂದುವರೆಯುತ್ತದೆ.

ದಿಲೀಪ್ ನಾಡಿಗ್
ಕಾರ್ಯದರ್ಶಿ
ಮಲೆನಾಡು ಇತಿಹಾಸ ಸಂಶೋಧನಾ ಮತ್ತು ‌ಅಧ್ಯಯನ ವೇದಿಕೆ(ನೋಂ), ಶಿವಮೊಗ್ಗ.

Yakshagana ವೈದ್ಯರಾಗಿ ಐವತ್ತು ವರ್ಷ ಸಾರ್ಥಕ ಸೇವೆ ಸಲ್ಲಿಸಿದ ಡಾ.ಯಶೋದ ಕಾಶಿ ಅವರಿಗೆ ಆತ್ಮೀಯ ಸನ್ಮಾನ

0

Yakshagana ಯಕ್ಷಗಾನ ತಾಳ ಮದ್ದಲೆಯ ಖ್ಯಾತ ಅರ್ಥದಾರಿಗಳು ಹಿರಿಯ ಚಿಂತಗರು ಪ್ರಸಿದ್ಧ ಮಾತುಗಾರರು ಹಾಗೂ ಮಂಗಳೂರಿನ ಕಾಲೇಜು ಪ್ರಿನ್ಸಿಪಾಲರಾಗಿ ನಿವೃತ್ತಿರಾದ ಡಾಕ್ಟರ್ ಪ್ರಭಾಕರ ಜೋಶಿ ಅವರು ಈ ದಿನ ಶಿವಮೊಗ್ಗಕ್ಕೆ ಡಾಕ್ಟರ್ ಯಶೋಧ ಕಾಶಿ ಅವರಿಗೆ ಅವರ ಐವತ್ತು ವರ್ಷದ ವೈದ್ಯ ಸೇವೆಯನ್ನು ಗುರುತಿಸಿ ಅವರ ಮನೆಯಲ್ಲಿ ಗೌರವಿಸಿದರು ಹಾಗೂ ಡಾಕ್ಟರ್ ಯಶೋಧ ಅವರಿಗೆ 75 ವರ್ಷ ತುಂಬಿದ ಸಂದರ್ಭದಲ್ಲಿ ಶುಭ ಹಾರೈಸಿದರು.

Shivamogga Police ವಾರಸುದಾರರಿಲ್ಲದ ನಿರುಪಯುಕ್ತ ವಾಹನಗಳ ವಿಲೇವಾರಿ, ಜಿಲ್ಲಾ ಪೊಲೀಸ್ ಪ್ರಕಟಣೆ

0

Shivamogga Police ಶಿವಮೊಗ್ಗ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ವಾರಸುದಾರಿಲ್ಲದ 21 ವಿವಿಧ ಮಾದರಿಯ ನಿರುಪಯುಕ್ತ ವಾಹನಗಳನ್ನು ಡಿ.01 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಸಾಗರ ರಸ್ತೆಯಲ್ಲಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ ವಿಲೇವಾರಿ ಮಾಡಲು ಉದ್ದೇಶಿಸಿದ್ದು, ಬಹಿರಂಗ ಹರಾಜು ಹಾಕಲಾಗುವುದು. ಆಸಕ್ತರು ನಿಗದಿತ ಸಮಯದಲ್ಲಿ ಭಾಗವಹಿಸುವಂತೆ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಡಿಎಸ್‌ಪಿ ಡಿಎಆರ್ ಶಿವಮೊಗ್ಗ ದೂ.ಸಂ.: 08182-261412 ನ್ನು ಸಂಪರ್ಕಿಸುವುದು.

B.Y.Raghavendra ಸೀಎಂ ಕುರ್ಚಿ ಹಗ್ಗ ಜಗ್ಗಾಟದಲ್ಲಿ ರಾಜ್ಯದ ಅಭಿವೃದ್ಧಿ ಕುಸಿದಿದೆ. ಸಂಸದ ರಾಘವೇಂದ್ರ ಮಾತಿನ ಚಾಟಿ

0

B.Y.Raghavendra ಶಿವಮೊಗ್ಗದಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರು.

ಸಾರ್ವಜನಿಕರಿಗೆ ಒಂದು ಸಂದೇಶ ಕೊಡಬೇಕಿದೆ.
ಡಿಸಿಎಂ ಹೇಳ್ತಾರೆ ಹಿಂದೆ ಸಿಎಂ ಬದಲಾವಣೆ ಒಪ್ಪಂದ ಆಗಿದೆ ಅಂತ.ಆದರೆ ನಾನೇ ಐದು ವರ್ಷ ಸಿಎಂ ಅಂತ ಸಿದ್ದರಾಮಯ್ಯನವರು ಹೇಳ್ತಾರೆ.ಯಾರು ಎಷ್ಟೇ ವರ್ಷ ಇರಲಿ ಆದರೆ ನಿಮ್ಮ ಚರ್ಚೆಯಲ್ಲಿ ಅಭಿವೃದ್ದಿ ವಿಚಾರ ಪ್ರಸ್ತಾಪ ಆಗ್ತಿಲ್ಲ ಎಂದರು.

ನಿಮ್ಮ ಕುರ್ಚಿಯ ಹಗ್ಗಾಜಗ್ಗಾಟದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ.ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭ ಆಗದೆ ರೈತರು ಬೀದಿಗೆ ಬಿದ್ದಿದ್ದಾರೆ.ಬೆಳೆಹಾನಿ ಪರಿಹಾರ ನೀಡಿಲ್ಲ, ರಸ್ತೆ ಗುಂಡಿಗಳು ಮುಚ್ಚುವ ಕೆಲಸ ಆಗಿಲ್ಲ.
ರಾಜ್ಯದ ಜನರು ನಿಮ್ಮನ್ನ ನೋಡಿ ನಗ್ತಾ ಇದ್ದಾರೆ ಎಂದು ಹೇಳಿದರು.

B.Y.Raghavendra ಏನೇ ಮಾಡಿಕೊಂಡರು ನಾಲ್ಕು ಗೋಡೆ ಮಧ್ಯೆ ಮಾತಾಡಿಕೊಂಡು ಆಡಳಿತದ ಕಡೆ ಗಮನ ನೀಡಿ.
ನೂರಕ್ಕೆ ನೂರು ಸಿಎಂ ಬದಲಾವಣೆ ಆಗುತ್ತೆ.
ಈಗ ಮತ್ತೆ ಮಾಧ್ಯಮದಲ್ಲಿ ಸಂಕ್ರಾತಿ ನಂತರ ಅಂತಾ ಬರ್ತಿದೆ.
ನಮಗೇನು ಯಾರು ಸಿಎಂ ಆದರೂ ರಾಜ್ಯಕ್ಕೆ ಉತ್ತಮ ಆಡಳಿತ ಕೊಡಲಿ ಅಂತ ಒತ್ತಾಯ ಮಾಡ್ತೇನೆ.
ರಾಜ್ಯಾಧ್ಯಕ್ಷರ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ.
ವಿಜಯೇಂದ್ರ ಅವರು ತಮ್ಮ ಪೂರ್ಣ ಅವಧಿವರೆಗೆ ಮುಂದುವರಿಯುತ್ತಾರೆ ಎಂದು ಹೇಳಿದರು.

Lok Adalats 1991-92 ರಿಂದ 2019-20 ವರ್ಷದೊಳಗೆ ದಾಖಲಾಗಿರುವ ಸಂಚಾರಿ ವಾಹನ ದಂಡ ಬಾಕಿ ಪಾವ್ತಿ.ಶೇ.50 ರಿಯಾಯಿತಿ. ಡಿಸೆಂಬರ್12ಕೊನೇ ದಿನಾಂಕ

0

Lok Adalats ದಿನಾಂಕ 13-12-2025 ರಂದು ಈ ವರ್ಷದ ನಾಲ್ಕನೇ ರಾಷ್ಟ್ರೀಯ ಲೋಕ ಅದಾಲತನ್ನು ದೇಶದ ಎಲ್ಲಾ ನ್ಯಾಯಾಲಯಗಳಲ್ಲಿ ಏರ್ಪಡಿಸಲಾಗಿದ್ದು ಅದರ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಗೌರವಾನ್ವಿತ ಸದಸ್ಯ ಕಾರ್ಯದರ್ಶಿಗಳು, ಕರ್ನಾಟಕ ಸರ್ಕಾರವನ್ನು ಉದ್ದೇಶಿಸಿ ದಿನಾಂಕ 18-10-2025 ರಂದು ಪತ್ರದ ಮುಖೇನ ಕರ್ನಾಟಕ ರಾಜ್ಯದಲ್ಲಿ ಬಾಕಿ ಉಳಿದಿರುವ ಟ್ರಾಫಿಕ್ ಈ ಚಲನ ಪ್ರಕರಣಗಳ ಪಾವತಿಗೆ ಶೇಕಡ 50ರಷ್ಟು ರಿಯಾಯಿತಿಯನ್ನು ನಿಗದಿಪಡಿಸುವುದಕ್ಕೆ ಕೋರಿಕೊಂಡ ಮೇರೆಗೆ ಕರ್ನಾಟಕ ಸರ್ಕಾರವು ಆ ಪತ್ರವನ್ನು ಪರಿಶೀಲಿಸಿ ದಂಡದ ಮೊತ್ತ ಪಾವತಿ ಬಾಕಿ ಇರುವ ಪ್ರಕರಣಗಳನ್ನು ಗಮನದಲ್ಲಿರಿಸಿಕೊಂಡು ಪೊಲೀಸ್ ಇಲಾಖೆಯ ಸಂಚಾರಿ ಈ ಚಲನ್ನಲ್ಲಿ ದಾಖಲಾಗಿರುವ ದಂಡದ ಪ್ರಕರಣಗಳು ಹಾಗೂ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20 ಅವಧಿಯಲ್ಲಿ ದಾಖಲಾಗಿ, ಪಾವತಿಗೆ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡ 50ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ದಿನಾಂಕ 21-11-2025 ರಿಂದ ದಿನಾಂಕ 12-12-2025 ರವರೆಗೆ ಕಾಲಾವಕಾಶ ನೀಡಿ ಸಾರಿಗೆ ಇಲಾಖೆಯಿಂದ ಆದೇಶವನ್ನು ಹೊರಡಿಸಿ ಅದಕ್ಕೆ ಆರ್ಥಿಕ ಇಲಾಖೆಯ ಸಹಮತಿಯನ್ನು ಸಹ ಸೂಚಿಸಿ ಅಧಿಸೂಚನೆಯನ್ನು ಹೊರಡಿಸಿದೆ.

ಆದ್ದರಿಂದ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಈ ಚಲನ್ ನಲ್ಲಿ ದಾಖಲಾದ ದಂಡದ ಪ್ರಕರಣಗಳು ಹಾಗೂ ಸಾರಿಗೆ ಇಲಾಖೆಯಲ್ಲಿ 1991 ರಿಂದ 2019 ಅವಧಿಯಲ್ಲಿ ದಾಖಲಾಗಿರುವ ಮತ್ತು ಪಾವತಿಗೆ ಬಾಕಿ ಇರುವ ಪ್ರಕರಣಗಳಲ್ಲಿ ದಂಡದ ಮೊತ್ತದಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಿ ಹೊರಡಿಸಲಾದ ಆದೇಶದ ಸದುಪಯೋಗವನ್ನು ಮತ್ತು ಅಧಿಕ ಲಾಭವನ್ನು ಅಂತಹ ದಂಡದ ಮೊತ್ತವನ್ನು ದಿನಾಂಕ 12.12.2025ರ ಒಳಗೆ ಸಂಬಂಧಪಟ್ಟ ಇಲಾಖೆ ಕಛೇರಿಯಲ್ಲಿ ಪಾವತಿಸಿ ಸಾರ್ವಜನಿಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಆದೇಶದ ಲಾಭವನ್ನು ಪಡೆಯಬೇಕೆಂದು ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿರುವ ಶ್ರೀ ಸಂತೋಷ್ ಎಂ. ಎಸ್., ರವರು ಪತ್ರಿಕಾ ಪ್ರಕಟಣೆಯ ಮೂಲಕ ಕೋರಿಕೊಂಡಿದ್ದಾರೆ.

Indian Medical Association ಸಂಬಂಧಗಳ ನಿರ್ವಹಣೆ ಮಾಡಿ.ಮೊಬೈಲ್- ಇಂಟರ್ನೆಟ್ ಗಳಿಂದ ದೂರವಿರಿ- ಮನೋವೈದ್ಯ ಡಾ.ಎಸ್.ಟಿ.ಅರವಿಂದ್.

0

Indian Medical Association ಜೀವನದಲ್ಲಿ ಗುರಿ ಸಾಧಿಸಲು ನಿರಂತರ ಪರಿಶ್ರಮ ವಹಿಸುವುದು ಅತ್ಯಂತ ಅವಶ್ಯಕ ಎಂದು ಮನೋವೈದ್ಯ ಡಾ. ಎಸ್.ಟಿ.ಅರವಿಂದ ಹೇಳಿದರು.

ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆ ರಾಜ್ಯಾಧ್ಯಕ್ಷ ಡಾ. ವೀರಭದ್ರಯ್ಯ.ಟಿ.ಎ ಅವರ ಮುಂದಾಳತ್ವದಲ್ಲಿ ಶಿವಮೊಗ್ಗ ಘಟಕದಿಂದ ಗಾಡಿಕೊಪ್ಪದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ “ಐಎಂಎ ನಡಿಗೆ, ಶಾಲೆಯ ಕಡೆಗೆ” ಕಾರ್ಯಕ್ರಮದಲ್ಲಿ ಹದಿಹರೆಯದ ವಯಸ್ಸಿನ ಮಾನಸಿಕ ತುಮುಲಗಳ ಬಗ್ಗೆ ಮಾತನಾಡಿದರು.

ವೃತ್ತಿಕ್ಷೇತ್ರದಲ್ಲಿ ಮುನ್ನಡೆಯುವಾಗ ಅನೇಕ ರೀತಿ ಸಮಯ ವ್ಯರ್ಥ ಆಗುವ ಆಕರ್ಷಣೆಗಳಿಗೆ ಒಳಗಾಗುತ್ತೇವೆ. ಚಂಚಲ ಮನಸ್ಥಿತಿ ಎದುರಿಸಬೇಕಾಗುತ್ತದೆ. ಸಮಯ ವ್ಯರ್ಥವಾಗುವ ಆಕರ್ಷಣೆಗಳಿಂದ ದೂರ ಇರಬೇಕು. ಕೋಪ ನಿಯಂತ್ರಣ ಸಾಧಿಸಬೇಕು. ಸಂಬಂಧಗಳ ನಿರ್ವಹಣೆ ಸರಿಯಾಗಿರಬೇಕು. ಮೊಬೈಲ್, ಇಂಟರ್‌ನೆಟ್ ಗೀಳಿನಿಂದ ದೂರವಿರಬೇಕು ಎಂದು ಸಲಹೆ ನೀಡಿದರು.

ಐಎಂಎ ಶಿವಮೊಗ್ಗ ಕಾರ್ಯದರ್ಶಿ, ಮನೋವೈದ್ಯೆ ಡಾ. ಕೆ ಎಸ್ ಶುಭ್ರತಾ ಅವರು ಹದಿಹರೆಯದ ಮಾನಸಿಕ ಆರೋಗ್ಯದ ಕುರಿತು ಮಾತನಾಡಿ, ಹದಿಹರೆಯದ ವಯಸ್ಸಿನಲ್ಲಿ ಎದುರಿಸುವಂತಹ ಭಾವನಾತ್ಮಕ ಬದಲಾವಣೆಗಳು, ತನ್ನತನದ ಹುಡುಕಾಟ, ಸಮಾಜದ ಒತ್ತಡಗಳನ್ನ ಎದುರಿಸುವುದು, ಇವೆಲ್ಲದರ ಬಗ್ಗೆ ವಿದ್ಯಾರ್ಥಿಗಳು ಅರಿವು ಹೊಂದಬೇಕು ಎಂದು ತಿಳಿಸಿದರು.

ಐಎಂಎ ಶಿವಮೊಗ್ಗ ಅಧ್ಯಕ್ಷ ಡಾ. ಕೆ.ಆರ್.ರವೀಶ್ ಮಾತನಾಡಿ, ಐಎಂಎ ನಡಿಗೆ, ಶಾಲೆಯ ಕಡೆಗೆ ಘೋಷವಾಕ್ಯದೊಂದಿಗೆ ವಿವಿಧ ಶಾಲೆಗಳಲ್ಲಿ ಆರೋಗ್ಯ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಇದರ ಭಾಗವಾಗಿ ಐಎಂಎ ಶಿವಮೊಗ್ಗ ಈಗಾಗಲೇ ಎರಡು ಸರ್ಕಾರಿ ಶಾಲೆಗಳಲ್ಲಿ ಆರೋಗ್ಯದ ಅರಿವು ಕಾರ್ಯಕ್ರಮ ನಡೆಸಿದೆ ಎಂದು ತಿಳಿಸಿದರು.

Indian Medical Association ಶಿವಮೊಗ್ಗ ನಗರದ ಯಾವುದೇ ಸರ್ಕಾರಿ ಶಾಲೆ ಅಥವಾ ಖಾಸಗಿ ಶಾಲೆಗಳಿಗೆ ನುರಿತ ವೈದ್ಯರಿಂದ ಅರಿವಿನ ಕಾರ್ಯಕ್ರಮಗಳ ಅಗತ್ಯ ಇದ್ದರೆ ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಸದಾ ಸಿದ್ಧವಿದೆ ಎಂದರು.

ಗಾಡಿಕೊಪ್ಪದ ಸರ್ಕಾರಿ ಪ್ರೌಢಶಾಲೆ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಅನಿತಾ ಮತ್ತು ಇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಬಿಳಕಿಯ ಬಸಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಆಯೋಜಿಸಿದ್ದ ಸಂವಾದದಲ್ಲಿ ಮುಖ್ಯೋಪಾಧ್ಯಾಯ ಕಿಶೋರ್ ಕುಮಾರ್ ಮತ್ತು ಇತರ ಉಪಾಧ್ಯಾಯರು ಉಪಸ್ಥಿತರಿದ್ದರು.

Chamber of Commerce Shivamogga ಕ್ರಾಫ್ಟ್ಸ್ ಆಫ್ ಮಲ್ನಾಡ್” ಎಂಬ ವಿಚಾರವಾಗಿ ವಿಚಾರ ಸಂಕಿರಣ

0

Chamber of Commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಮತ್ತು ಲಘು ಉದ್ಯೋಗ್ ಭಾರತಿ ಕರ್ನಾಟಕ ಚಾಪ್ಟರ್‌ನ ವತಿಯಿಂದ ದಿನಾಂಕ: 25.11.2025ನೇ ಮಂಗಳವಾರ ಸಂಜೆ 4:30 ಕ್ಕೆ ವಿಶೇಷ ವಿಚಾರ ಸಂಕಿರಣವನ್ನು ಸಂಘದ ಶಾಂತಲಾ ಸ್ಪೇರೋಕ್ಯಾಸ್ಟ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದು, ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಶ್ರೀ ಹೇಮಂತ್ ಎನ್. ಮುಖ್ಯ ಅತಿಥಿಗಳಾಗಿ ಆಗಮಿಸಿ ಉದ್ಘಾಟಿಸಲಿದ್ದಾರೆ. Chamber of Commerce Shivamogga ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಬಿ.ಗೋಪಿನಾಥ್‌ರವರು ವಹಿಸಲಿರುವರು ಮತ್ತು ಲಘು ಉದ್ಯೋಗ್ ಭಾರತಿ ಶಿವಮೊಗ್ಗ ಛಾಪ್ಟರ್‌ನ ಅಧ್ಯಕ್ಷರಾದ ಶ್ರೀ ಹರ್ಷ ರುದ್ರೇಗೌಡರವರು ಉಪಸ್ಥಿತರಿರುತ್ತಾರೆ. ಸಂಘದ ಮಾನ್ಯ ಗೃಹ ಕೈಗಾರಿಕಾ ಘಟಕಗಳು, ಗುಡಿ ಕೈಗಾರಿಕೆಗಳ ಘಟಕಗಳ ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ ಹಾಗೂ ಕಾರ್ಯಕ್ರಮಕ್ಕೆ ಸಂಘದ ಸದಸ್ಯ ವಾಣಿಜ್ಯೋದ್ಯಮಿಗಳು, ಕೈಗಾರಿಕೋದ್ಯಮಿಗಳು, ಲೆಕ್ಕಪರಿಶೋಧಕರು, ತೆರಿಗೆ ಸಲಹೆಗಾರರು, ವೃತ್ತಿಪರರು, ಲಘು ಉದ್ಯೋಗ್ ಭಾರತಿ ಸಂಸ್ಥೆಯ ಸದಸ್ಯರುಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಗೌರವ ಕಾರ್ಯದರ್ಶಿ ಶ್ರೀ ಎ.ಎಂ. ಸುರೇಶ್‌ರವರು ಸಂಘದ ಕೋರಿದ್ದಾರೆ.

Sri Sathya Sai Baba ಶಿವಮೊಗ್ಗದಲ್ಲಿ ನವೆಂಬರ್ 23 ರಂದು ಶ್ರೀಸತ್ಯಸಾಯಿಬಾಬಾ ಜನ್ಮ ಶತಮಾನೋತ್ಸವ

0

Sri Sathya Sai Baba ಭಗವಾನ್ ಶ್ರೀ ಸತ್ಯಸಾಯಿಬಾಬಾ ಅವರ ಜನ್ಮ ಶತಮಾನೋತ್ಸವವು ವೈಭವಯುತವಾಗಿ ಪುಟ್ಟಪರ್ತಿಯಲ್ಲಿ ನಡೆಯುತ್ತಿರುವುದರಿಂದ ಆ ದಿವ್ಯ ಸನ್ನಿಧಿಯಲ್ಲಿ ಹಲವಾರು ಭಕ್ತರು ಸೇರಿರುವುದರಿಂದ ಪ್ರತಿವರ್ಷ ನ.23ರಂದು ಬಸವನಗುಡಿ 3ನೇ ತಿರುವಿನಲ್ಲಿನ ಶ್ರೀ ಆನಂದಸಾಯಿ ಶಿಕ್ಷಣ ಸಂಸ್ಥೆಯಲ್ಲಿ ನಡೆಯುವ ಶ್ರೀ ಸತ್ಯ ಸಾಯಿಬಾಬಾ ಅವರ ಜನ್ಮದಿನದ ಆಚರಣೆಯನ್ನು ಈ ಬಾರಿ ಡಿ.07ರಂದು ಆಚರಿಸಲಾಗುತ್ತಿದೆ.

ಜನ್ಮಶತಮಾನೋತ್ಸವ ಅಂಗವಾಗಿ ಡಿ.5ರಂದು ಮಹಿಳಾ ದಿನಾಚರಣೆ ನಡೆಯಲಿದೆ. ಅಂದು ಬೆಳಗ್ಗೆ 10ಕ್ಕೆ ವೃದ್ಧಾಶ್ರಮ ಮತ್ತು ಅನಾಥಾಶ್ರಮದಲ್ಲಿ ಹಣ್ಣು ಮತ್ತು ಪ್ರಸಾದ ವಿತರಣೆ, ಸಂಜೆ 5ಕ್ಕೆ ವೇದ ಪಠಣ, ಮಹಿಳೆಯರಿಂದ ಭಕ್ತಿ ಸಂಗೀತ ಕಾರ್ಯಕ್ರಮ, ಸತ್ಸಂಗ ಮತ್ತು ಭಜನೆ ಇರುತ್ತದೆ. ಡಿ.06ರಂದು ಸಂಗೀತ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ. ಸಂಜೆ 6ರಿಂದ 6:30ರವರೆಗೆ ವೇದಘೋಷ, 6:30ರಿಂದ 7:30ರವರೆಗೆ ಆನಂದ ಸಾಯಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, 7:30ರಿಂದ 8:15ರವರೆಗೆ ಗುರುಗುಹ ಮಹಾವಿದ್ಯಾಲಯ ಮಕ್ಕಳಿಂದ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಡಿ.07ರಂದು ಭಗವಾನ್ ಶ್ರೀ. ಸತ್ಯಸಾಯಿ ಬಾಬಾಅವರ ಜನ್ಮಶತಮಾನೋತ್ಸವ ಅಂಗವಾಗಿ ಬೆಳಗ್ಗೆ 9:30ರಿಂದ 10:30ರವರೆಗೆ ಬಾಲವಿಕಾಸ ಮಕ್ಕ. ರ‍್ಯಾಲಿ, 10:30ರಿಂದ 12ರವೆರೆಗೆ ಶ್ರೀ ಸಾಯಿ ಸತ್ಯನಾರಾಯಣ ಪೂಜೆ, ನಂತರ ಭಜನೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಇರುತ್ತದೆ.

Sri Sathya Sai Baba ಸಂಜೆ 6:30ರಿಂದ 07ರವರೆಗೆ ವೇದಘೋಷ, ಸಂಜೆ 07ರಿಂದ 7:30ರವೆರೆಗೆ ವಿವಿಧ ಶಾಲೆಗಳಲ್ಲಿ ನಡೆದ ವಲಯಮಟ್ಟದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ಪ್ರದಾನ ಹಾಗೂ 7:30ರಿಂದ 8:30ರವರೆಗೆ ಶ್ರೀ ಜಗನ್ನಾಥ್ ನಾಡಿಗರ್ ಅವರಿಂದ ಉಪನ್ಯಾಸ ಇರುತ್ತದೆ ಎಂದು ಶ್ರೀ ಸತ್ಯಸಾಯಿ ಸೇವಾ ಸಮಿತಿ ತಿಳಿಸಿದೆ.

B.Y.Raghavendra ಇಂದಿನ ಯುವ ಸಮೂಹವು ಸ್ವಾತಂತ್ರ್ಯ ಯೋಧರು & ಹೆಮ್ಮೆಯ ಸೈನಿಕರನ್ನ ಗೌರವಿಸಬೇಕು- ಸಂಸದ ಬಿ.ವೈ.ರಾಘವೇಂದ್ರ

0

B.Y.Raghavendra ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ತಮ್ಮ ಪ್ರಾಣವನ್ನೇ ಬಲಿದಾನ ಮಾಡಿದ ನಾಯಕರನ್ನು ಸ್ಮರಿಸಿಕೊಂಡು ನಾವೆಲ್ಲ ಅವರ ಮಾರ್ಗದಲ್ಲಿ ಸಾಗುವ ಮೂಲಕ ಅವರಿಗೆ ಗೌರವವನ್ನು ಸಲ್ಲಿಸಬೇಕು ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಕರೆ ನೀಡಿದರು.

ಶಿವಮೊಗ್ಗ ನೆಹರು ಕ್ರೀಡಾಂಗಣದಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲರ 150 ನೇ ಜನ್ಮದಿನೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಏಕತಾ ನಡಿಗೆ ಜಾಥಾವನ್ನು ಗೋವು ಪೂಜೆ ಮಾಡುವ ಮೂಲಕ ಚಾಲನೆ ನೀಡಿ ಅವರು ಮತಾನಾಡಿದರು.

ಭಾರತ ದೇಶ ಸ್ವತಂತ್ರಗೊಂಡ ನಂತರ ದೇಶದ 552 ಸಂಸ್ಥಾನಗಳನ್ನು ಒಟ್ಟುಗೂಡಿಸಿದ ಕೀರ್ತಿ ದೇಶದ ಉಕ್ಕಿನ ಮನುಷ್ಯ ಎಂದೇ ಖ್ಯಾತಿಯಾಗಿರುವ ಸರ್ದಾರ್ ವಲ್ಲಭಬಾಯಿ ಪಟೇಲರಿಗೆ ಸಲ್ಲುತ್ತದೆ. ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಕಾಶ್ಮೀರದ ರಾಜಾ ಹರಿಸಿಂಗ್ ಅವರ ಮನವೊಲಿಸಿ ಕಾಶ್ಮೀರವನ್ನು ಭಾರತ ದೇಶದ ಸಂವಿಧಾನದ ಅಡಿಯಲ್ಲಿ ಸೇರ್ಪಡೆ ಮಾಡಲಾಯಿತು.

ಇಂದಿನ ಯುವ ಸಮೂಹವು ನಮ್ಮ ಸ್ವಾತಂತ್ರö್ಯ ಯೋಧರು ಮತ್ತು ಹೆಮ್ಮೆಯ ಸೈನಿಕರನ್ನು ಗೌರವಿಸಬೇಕು. ಈ ದೇಶದ ಮಣ್ಣಿನಲ್ಲಿ ಎಲ್ಲಾ ರೀತಿಯ ಶಕ್ತಿಯಿದೆ. ಅದನ್ನು ಸರಿಯಾದ ರೀತಿಯಲ್ಲಿ ನಾವೆಲ್ಲಾ ಬಳಸಿಕೊಳ್ಳಬೇಕು. ಹಾಗೂ ಒಂದಾಗಿ ಸದೃಢ ಭಾರತ ದೇಶವನ್ನು ನಿರ್ಮಾಣ ಮಾಡುವಂತಹ ಕೆಲಸ ಮಾಡಬೇಕಿದೆ ಎಂದರು.

ಶಾಸಕರಾದ ಎಸ್ ಎನ್ ಚನ್ನಬಸಪ್ಪ ಮಾತಾನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದವರನ್ನು ಸ್ಮರಿಸಿಕೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಸರ್ದಾರ್ ವಲ್ಲಭಬಾಯಿ ಪಟೇಲರ ಏಕತಾ ಪ್ರತಿಮೆಯನ್ನು ನಿರ್ಮಾಣ ಮಾಡಿದರು ಎಂದ ಅವರು ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಭಗತ್ ಸಿಂಗ್, ರಾಜಗುರು, ಸುಖದೇವ್, ಚಂದ್ರಶೇಖರ್ ಆಜಾದ್ ಅವರಂತಹ ನಾಯಕರ ಜೀವನ ಚರಿತ್ರೆಯನ್ನು ಇಂದಿನ ಯುವಕರು ತಿಳಿದುಕೊಳ್ಳುವ ಅವಶ್ಯಕತೆಯಿದೆ ಎಂದರು.

ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಮಾತಾನಾಡಿ, ನಾವೆಲ್ಲಾ ಒಂದೇ ಎಂದು ಹೇಳಲು ಕಾರಣ ಪಟೇಲರು. 1928 ರಲ್ಲಿ ಗುಜರಾತಿನಲ್ಲಿ ನಡೆದ ಬಾರ್ಡೋಲಿ ರೈತ ಚಳುವಳಿಯಲ್ಲಿನ ವಲ್ಲಭಬಾಯಿ ಪಟೇಲರ ನಾಯಕತ್ವವನ್ನು ಮೆಚ್ಚಿ ಬಾರ್ಡೋಲಿಯ ರೈತರು ಅವರಿಗೆ “ಸರ್ದಾರ್” ಎಂಬ ಬಿರುದು ನೀಡಿದರು. ಭಾರತದ ಪ್ರಥಮ ಗೃಹ ಸಚಿವರಾಗಿ ದೇಶದ ಎಲ್ಲಾ ರಾಜ್ಯಗಳನ್ನು ಒಗ್ಗೂಡಿಸುವ ಕೆಲಸವನ್ನು ಮಾಡಿದರು.

ಇದರ ಫಲವಾಗಿ ‘ನಾವೆಲ್ಲಾ ಒಂದೇ’ ಎಂಬ ‘ಏಕ್ ಭಾರತ್ ಶ್ರೇಷ್ಠ ಭಾರತ್’ ಏಕತಾ ನಡಿಗೆ ಮಾಡುತ್ತಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ನಾವೆಲ್ಲಾ ಒಂದೇ ಎಂಬ ಹಾಗೂ ನಶೆಮುಕ್ತ ಭಾರತ್ ಅಭಿಯಾನದ ಪ್ರತಿಜ್ಞಾವಿಧಿಗಳನ್ನು ಬೋಧಿಸಲಾಯಿತು.

B.Y.Raghavendra ಜಾಥಾ ನಗರದ ನೆಹರು ಸ್ಟೇಡಿಯಂ ನಿಂದ ಹೊರಟು ಮಹಾವೀರ ಸರ್ಕಲ್, ಜೈಲ್ ಸರ್ಕಲ್, ದುರ್ಗಿಗುಡಿ ಮಾರ್ಗವಾಗಿ ಫ್ರೀಡಂ ಪಾರ್ಕ್ ತಲುಪಿತು. ‘ಭಾರತ್ ಮಾತಾಕೀ ಜೈ’ ಎಂಬ ಘೋಷಣೆ ಮೂಲಕ ಯುವಜನರಲ್ಲಿ ದೇಶ ಪ್ರೇಮದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಏಕತಾ ಜಾಥಾದಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಅಧಿಕಾರಿಗಳು, ವಿವಿಧ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ಶಿವಮೊಗ್ಗದಲ್ಲಿ ಹೆಚ್ ಡಿ ಎಫ್ ಸಿ ಮ್ಯೂಚುಯಲ್ ಫಂಡ್ ನೂತನ ಕಛೇರಿಗೆ ಚಾಲನೆ

0

ಶಿವಮೊಗ್ಗ ನಗರದ ಜೆಪಿಎನ್ ರಸ್ತೆ ಮಾನಸ ನರ್ಸಿಂಗ್ ಹೋಂ ಪಕ್ಕ ಇಂದು ಹೆಚ್‌ಡಿಎಫ್‌ಸಿ ಮ್ಯೂಚಲ್ ಫಂಡ್ ನೂತನ ಕಛೇರಿಗೆ ಸೌತ್ ಜೋನ್ ಹೆಡ್ ರಾಜೇಶ್ ಎಸ್. ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ರೀಜನಲ್ ಹೆಡ್ ರಘು ಬಿ.ಜಿ., ಕ್ಲಸ್ಟರ್ ಹೆಡ್ ಅವಿನಾಶ್ ಡಿಸೋಜ, ಬ್ರಾಂಚ್ ಮ್ಯಾನೇಜನರ್ ಮನೋಜ್ ಭಟ್, ಮ್ಯೂಚಲ್ ಫಂಡ್ ವಿತರಕರು ಮತ್ತು ಸಿಬ್ಬಂಧಿ ವರ್ಗದವರು ಹಾಜರಿದ್ದರು.