Friday, May 15, 2026
Friday, May 15, 2026
Home Blog Page 87

Shivamogga Rangayana “ಸ್ವಾತಂತ್ರ್ಯದ ಓಟ” ನಾಟಕ ಕುರಿತು ಮಾತಾಡಿ, ಉದ್ಘಾಟಿಸಿದ ಅಂಕಣಕಾರ ಬಿ.ಚಂದ್ರೇಗೌಡ

0

Shivamogga Rangayana ಶಿವಮೊಗ್ಗ ರಂಗಾಯಣವು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬೊಳುವಾರು ಮೊಹಮ್ಮದ್ ಕುಂಞ ಅವರ ‘ಸ್ವಾತಂತ್ರ‍್ಯದ ಓಟ’ ಕಾದಂಬರಿಯನ್ನು ನಾಟಕ ರೂಪದಲ್ಲಿ ನಿರ್ಮಾಣ ಮಾಡಿ ರಾಜ್ಯಾದ್ಯಂತ ಪ್ರದರ್ಶನ ನೀಡಲು ಫೆ.17 ರಂದು ಬೆಳಿಗ್ಗೆ 11.00 ಲಂಕೇಶ್ ಪತ್ರಿಕೆಯ ವರದಿಗಾರರು ಮತ್ತು ಖ್ಯಾತ ಅಂಕಣಕಾರ ಬಿ.ಚಂದ್ರೇಗೌಡ ಇವರು ಸ್ವಾತಂತ್ರ‍್ಯದ ಓಟ ಕಾದಂಬರಿಯ ಕುರಿತು ಮಾತಾನಾಡುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ‘ಸ್ವಾತಂತ್ರ‍್ಯದ ಓಟ’ ನಾಟಕ ನಿರ್ದೇಶಕಾರದ ನಟರಾಜ್ ಹೊನ್ನವಳ್ಳಿ, ಶಿವಮೊಗ್ಗ ರಂಗಾಯಣದ ನಿರ್ದೇಶಕ ಪ್ರಸನ್ನ ಡಿ ಸಾಗರ, ಆಡಳಿತಾಧಿಕಾರಿ ಡಾ.ಶೈಲಜಾ ಎ.ಸಿ., ಕಲಾವಿದರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಿವಮೊಗ್ಗ ಸೀಗೆಹಟ್ಟಿಯಿಂದ ಪ್ರಕಾಶ್ ಎಂಬ ವ್ಯಕ್ತಿ ನಾಪತ್ತೆ

0

ಸೀಗೆಹಟ್ಟಿ ಗಣಪತಿ ದೇವಸ್ಥಾನದ ಎದುರು ಸ್ನೇಹ ಹೇರ್ ಡ್ರೆಸಸ್ ಶಾಪ್ ಮಾಲೀಕ ಪ್ರಕಾಶ್ ಜಿ.ಬಿ. ಎಂಬ 53 ವರ್ಷದ ವ್ಯಕ್ತಿ ಫೆ.11 ರಂದು ಅಂಗಡಿಯಿಂದ ಸಾಲದ ಸುಳಿಯಲ್ಲಿ ಸಿಲುಕಿ ಬೇಸರಗೊಂದು ಮನೆಬಿಟ್ಟು ಹೋಗುತ್ತಿದ್ದೇನೆ ಎಂದು ಪತ್ರ ಬರೆದಿಟ್ಟು ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ.

ಈತನ ಚಹರೆ 4.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಬಿಳಿಬಣ್ಣ, ದುಂಡುಮುಖ ಹೊಂದಿದ್ದು, ಮನೆಯಿಂದ ಹೋಗುವಾಗ ಲೈಟ್ ಪಿಂಕ್ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.
ಈತನ ಬಗ್ಗೆ ಸುಳಿವು ದೊರೆತಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414 / 9480803345/ 9663919643 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Bharat Scouts and Guides ಪಿ.ಜಿ.ಆರ್.ಸಿಂಧ್ಯಾ ಅವರಿಗೆ ಗುಲಬರ್ಗಾ ವಿವಿಯ ಗೌರವ ಡಾಕ್ಟರೇಟ್

0

Bharat Scouts and Guides ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಧಾನ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಅವರಿಗೆ ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡುತ್ತಿದೆ.

ಫೆಬ್ರವರಿ 24ರಂದು ಬೆಳಗ್ಗೆ 10.30ಕ್ಕೆ ಗುಲಬರ್ಗಾ ವಿಶ್ವವಿದ್ಯಾಲಯದ ಡಾ. ಅಂಬೇಡ್ಕರ್ ಭವನದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಪದವಿ ಪ್ರದಾನ ಮಾಡುವರು.

Bharat Scouts and Guides ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತ ಪಿಜಿಆರ್ ಸಿಂಧ್ಯಾ ಅವರಿಗೆ ಶಿವಮೊಗ್ಗ ಜಿಲ್ಲಾ ಶಾಖೆ ಹಾಗೂ ಸ್ಥಳೀಯ ಸಂಸ್ಥೆ ವತಿಯಿಂದ ಅಭಿನಂದನೆ ತಿಳಿಸಿದ್ದಾರೆ. ಪ್ರಧಾನ ಆಯುಕ್ತ ಶಕುಂತಲಾ ಚಂದ್ರಶೇಖರ್, ಆಯುಕ್ತ ಎಸ್.ಜಿ.ಆನಂದ್, ಕೆ.ರವಿ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ವೀರೇಶಪ್ಪ, ರಾಜೇಶ್ ಅವಲಕ್ಕಿ, ಮಲ್ಲಿಕಾರ್ಜುನ್, ಚೂಡಾಮಣಿ ಈ ಪವಾರ್, ಲಕ್ಷ್ಮೀ ಕೆ.ರವಿ, ಜಿಲ್ಲಾ ಕಾರ್ಯದರ್ಶಿ ಕೆ.ವಿ.ಚಂದ್ರಶೇಖರಯ್ಯ, ವೇಣುಗೋಪಾಲ್, ಸರಸ್ವತಿ ನಾಗರಾಜ್ ಹಾಗೂ ಮಲೆನಾಡು ಓಪನ್ ಗ್ರೂಪ್ ಮತ್ತು ಸ್ಕೌಟ್ಸ್ ಅಂಡ್ ಗೈಡ್ ಪದಾಧಿಕಾರಿಗಳು ಶುಭಾಶಯ ತಿಳಿಸಿದ್ದಾರೆ

Nijasharan Ambigara Chowdarya Development Corporation ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಆಹಾರ ವಾಹಿನಿ ಸೌಲಭ್ಯ ಪ್ರಕಟಣೆ

0

Nijasharan Ambigara Chowdarya Development Corporation ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಜನರಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಲ್ಲಿ ನಿಗಮದಿಂದ ವಾಹನ ಖರೀದಿಗೆ ರೂ.3.00 ಲಕ್ಷಗಳ ಸಹಾಯಧನವನ್ನು ಪಡೆಯಲು ಸೇವಾಸಿಂಧು ಪೋರ್ಟೆಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಅಲೆಮಾರಿ/ಅರೆಅಲೆಮಾರಿ ಸಮುದಾಯ,, ಒಕ್ಕಲಿಗೆ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪಜಾತಿ ಸಮುದಾಯಗಳನ್ನು ಹೊರತುಪಡಿಸಿ ನಿಜಶರಣ ಅಂಬಿಗರ ಚೌಡಯ್ಯ ಸಮುದಾಯಕ್ಕೆ ಮಾತ್ರ ಸೇರಿದವರಾಗಿರಬೇಕು.
ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಆಧಾರ್ ಕಾರ್ಡನಲ್ಲಿರುವಂತೆ ಅರ್ಜಿದಾರರ ಹೆಸರು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಕ್ ಪಾಸ್ ಪುಸ್ತಕದಲ್ಲಿಯೂ ಇರುವಂತೆ ಹೊಂದಾಣಿಕೆಯಾಗಬೇಕು. ಕುಟುಂಬದ ವಾರ್ಷಿಕ ವರಮಾನ 3.00 ಲಕ್ಷಗಳ ಒಳಗಿರಬೇಕು ಮತ್ತು ವಯಸ್ಸು 21 ರಿಂದ 45 ವರ್ಷ ಒಳಗಿನವರಾಗಿಬೇಕು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಯಾವುದಾದರು ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು. ಸರ್ಕಾರದ ವಿವೇಚನಾ ಕೋಟಾ/ನಿಗಮದ ಅಧ್ಯಕ್ಷರು/ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಲ್ಲಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‌ಲೈನ್‌ನಲ್ಲಿಯೇ ಅರ್ಜಿಯನ್ನು ಸಲ್ಲಿಸಬೇಕು.
Nijasharan Ambigara Chowdarya Development Corporation ಆಸಕ್ತರು ಸೇವಾಸಿಂಧು ಪೋರ್ಟಲ್ http://sevasindhukarnataka.gov.in ನ ಗ್ರಾಮ್ ಒನ್, ಬೆಂಗಳೂರು ಒನ್, ಕರ್ನಾಟಕ ಒನ್‌ಗಳ ಮೂಲಕ ಆನ್‌ಲೈನ್ ಮೂಲಕ ಮಾರ್ಚ್ 8 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದರೆ.
ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ https://ambigaradevelopment.karnataka.gov.in ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬಾಲರಾಜ್ ಅರಸ್ ರಸ್ಥೆ, ಕೆ.ಇ.ಬಿ. ಸರ್ಕಲ್ ಹತ್ತಿರ,ಶಿವಮೊಗ್ಗ. ದೂ,ಸಂ: 08182-229634 ನ್ನು ಸಂಪರ್ಕಿಸುವುದು

MESCOM ಶಿವಮೊಗ್ಗ ಅನುಪಿನ ಕಟ್ಟೆ ಸುತ್ತಮುತ್ತ ಫೆ.19 ರಂದು ವಿದ್ಯುತ್ ನಿಲುಗಡೆ

0

MESCOM ಶಿವಮೊಗ್ಗ ಗ್ರಾಮೀಣ ಉಪವಿಭಾಗ ಗಾಜನೂರು 11 ಕೆವಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿದ್ದು, ಅನುಪಿನಕಟ್ಟೆ, ಪುರದಾಳು, ಅಗಸವಳ್ಳಿ, ಕಲ್ಲೂರು, ಗೋವಿಂದರಾಜಪುರ, ಹನುಮಂತಾಪುರ, ಬೆಳ್ಳೂರು, ಶೆಟ್ಟಿಹಳ್ಳಿ, ಚಿತ್ರಶೆಟ್ಟಿಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಫೆ. 19 ಮತ್ತು 20 ರಂದು ಬೆಳಗ್ಗೆ 09.00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

S.N. Channabasappa ಶಿವಮೊಗ್ಗ ನಗರದ ಒಂದನೇ ವಾರ್ಡಿನ ಜನಸಮಸ್ಯೆ ಬಗ್ಗೆ ಶಾಸಕರಿಂದ ಪರಿಶೀಲನೆ. ಅಧಿಕಾರಿಗಳಿಗೆ ಸೂಚನೆ

0

S.N. Channabasappa ಶಿವಮೊಗ್ಗ ನಗರದ 1ನೇ ವಾರ್ಡ್ ವ್ಯಾಪ್ತಿಯ ಆದರ್ಶ ಕಾಲೋನಿಯ ನಿವಾಸಿಗಳು ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸುವಂತೆ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇಂದು ಬೆಳಿಗ್ಗೆ ಮಹಾನಗರ ಪಾಲಿಕೆಯ ಅಧಿಕಾರಿಗಳ ತಂಡದೊಂದಿಗೆ ಬಡಾವಣೆಯ ನಿವಾಸಿಗಳೊಂದಿಗೆ ಸಭೆ ನಡೆಸಿದ ಶಾಸಕರು, ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ವೇಳೆ ಬಡಾವಣೆಯಲ್ಲಿ ವಿದ್ಯುತ್ ಏರುಪೇರಿನಿಂದಾಗಿ ಗೃಹೋಪಯೋಗಿ ವಸ್ತುಗಳು ಹಾನಿಯಾಗುತ್ತಿರುವುದು ಬಗ್ಗೆ ಮಾಹಿತಿ ಪಡೆದು ಇಂತಹ ತಾಂತ್ರಿಕ ದೋಷಗಳನ್ನು ಅಧಿಕಾರಿಗಳು ತಕ್ಷಣವೇ ಸರಿಪಡಿಸುವಂತೆ ಸೂಚಿಸಿದರು.

ಜೊತೆಗೆ, ಬಡಾವಣೆಯ ಪಾರ್ಕ್ ಅಭಿವೃದ್ಧಿಪಡಿಸುವುದು, ಕುಡಿಯುವ ನೀರಿನ ಸಮರ್ಪಕ ಪೂರೈಕೆ, ಬೀದಿ ದೀಪಗಳ ದುರಸ್ತಿ ಹಾಗೂ ಪ್ರಮುಖ ರಸ್ತೆಗಳಿಗೆ ನಾಮಫಲಕಗಳನ್ನು ಅಳವಡಿಸುವ ಕಾರ್ಯಗಳನ್ನು ಕೂಡಲೇ ಆರಂಭಿಸಲು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

S.N. Channabasappa ಈ ಸಂದರ್ಭದಲ್ಲಿ ಪಾಲಿಕೆಯ ಇಂಜಿನಿಯರ್‌ಗಳು, ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು

ಭರಮಸಾಗರದಲ್ಲಿ ಭಕ್ತಿಪೂರ್ಣ ಶಿವರಾತ್ರಿ ಆಚರಣೆ

0

ಮಹಾಶಿವರಾತ್ರಿ ಅಂಗವಾಗಿ ಭರಮಸಾಗರದಲ್ಲಿ ಸ್ಥಾಪಿತವಾಗಿರುವ ಈಶ್ವರ ಸ್ವರೂಪದ ಶ್ರೀ ಸಿಬಾರ ಮೈಲಾರಲಿಂಗ ಸ್ವಾಮಿಗೆ ಭಕ್ತಿಭಾವಪೂರ್ಣ ವಿಶೇಷ ಪೂಜೆ ಹಾಗೂ ರುದ್ರಾಭಿಷೇಕ ಕಾರ್ಯಕ್ರಮಗಳು ವೈಭವದಿಂದ ನೆರವೇರಿದವು.

ಪ್ರತಿವರ್ಷದಂತೆ ಈ ವರ್ಷವೂ ನಾಡಿಗೇರ್ ಮನೆತನದವರಿಂದ ಭಕ್ತಿಪೂರ್ವಕವಾಗಿ ಸಾಂಗವಾಗಿ ಪೂಜಾ ಕೈಂಕರ್ಯಗಳನ್ನು ಆಯೋಜಿಸಲಾಗಿತ್ತು.

ಭರಮಸಾಗರದ ಐತಿಹಾಸಿಕ ಕೆರೆಯನ್ನು ಬಿಚ್ಚುಗತ್ತಿ ಭರಮಣ್ಣ ನಾಯಕರು ನಿರ್ಮಿಸಿದ್ದರೆಂದು ಪ್ರಸಿದ್ಧಿ ಹೊಂದಿದ್ದು, ಅದರ ತಟದಲ್ಲಿರುವ ಶ್ರೀ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ 2006ರಲ್ಲಿ ಈ ಪವಿತ್ರ ಸಿಬಾರ ಕಟ್ಟೆ ಪ್ರತಿಷ್ಠಾಪಿಸಲಾಯಿತು. ಭರಮಸಾಗರದ ದಿವಂಗತ ಶ್ರೀ ಭೀಮರಾವ್ ನಾಡಿಗೇರ್ ಹಾಗೂ ದಿವಂಗತ ಶ್ರೀ ಮಾಲತೇಶರಾವ್ ನಾಡಿಗೇರ್ ಅವರು ಲೋಕಕಲ್ಯಾಣಾರ್ಥವಾಗಿ ಈ ದೇವರ ಪ್ರತಿಷ್ಠಾಪನೆ ನಡೆಸಿದದ್ದು ವಿಶೇಷವಾಗಿದೆ.

ಅಂದಿನಿಂದಲೂ ಪ್ರತಿವರ್ಷ ಶಿವರಾತ್ರಿ ಸಂದರ್ಭದಲ್ಲಿ ವಿಶೇಷ ಪೂಜೆ, ರುದ್ರಾಭಿಷೇಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ ಭಕ್ತಿಯಿಂದ ನಡೆಯುತ್ತಿವೆ.

ಈ ವರ್ಷದ ಮಹಾಶಿವರಾತ್ರಿ ಸಂದರ್ಭದಲ್ಲಿ ಮುಂಜಾನೆಯಿಂದಲೇ ವೇದಘೋಷಗಳ ನಡುವೆ ಅಭಿಷೇಕ, ಅಲಂಕಾರ, ನೈವೇದ್ಯ ಹಾಗೂ ಮಹಾಮಂಗಳಾರತಿ ನೆರವೇರಿಸಲಾಯಿತು. ವಿಶೇಷವಾಗಿ ರುದ್ರಪಠಣದೊಂದಿಗೆ ನಡೆದ ರುದ್ರಾಭಿಷೇಕ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಆಶೀರ್ವಾದ ಪಡೆದರು.

ಶ್ರೀ ಮಲ್ಲಾರಿರಾವ್, ಶ್ರೀ ನಾಗಭೂಷಣರಾವ್, ಶ್ರೀ ವಿಜಯಕುಮಾರ, ಶ್ರೀ ಚಂದ್ರಶೇಖರ್ ಹಾಗೂ ಶ್ರೀ ಮುರುಳೀಧರ ನಾಡಿಗೇರ್ ಅವರು ಪೂಜಾ ವಿಧಿಗಳನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಭಕ್ತರು ಹಾಗೂ ಕುಟುಂಬ ಸದಸ್ಯರು ಉಪಸ್ಥಿತರಿದ್ದು ಧಾರ್ಮಿಕ ಭಾವನೆಯಲ್ಲಿ ತೊಡಗಿದರು.
ಸಂಜೆಯ ವೇಳೆಗೆ ಭಕ್ತರಿಗೆ ಪ್ರಸಾದ ವಿತರಣೆ ವ್ಯವಸ್ಥೆ ಮಾಡಲಾಗಿತ್ತು. ಶಿವನಾಮಸ್ಮರಣೆ ಹಾಗೂ ಭಜನೆಗಳೊಂದಿಗೆ ಭಕ್ತಿಭಾವದ ವಾತಾವರಣ ನಿರ್ಮಾಣಗೊಂಡಿದ್ದು, ಕಾರ್ಯಕ್ರಮವು ಶಾಂತಿಯುತವಾಗಿ ಹಾಗೂ ಭಕ್ತಿಯುತವಾಗಿ ಸಮಾಪ್ತಿಗೊಂಡಿತು.
ಶಿವರಾತ್ರಿಯ ಪವಿತ್ರ ಸಂದರ್ಭದಲ್ಲಿ ಭಕ್ತರ ಮನಸ್ಸಿನಲ್ಲಿ ಆಧ್ಯಾತ್ಮಿಕ ಚೈತನ್ಯ ಮೂಡಿಸುವ ಈ ಕಾರ್ಯಕ್ರಮ ಭರಮಸಾಗರದ ಧಾರ್ಮಿಕ ಪರಂಪರೆಯ ಪ್ರತೀಕವಾಗಿ ಮತ್ತೊಮ್ಮೆ ಬೆಳಗಿತು.

ಮುರುಳೀಧರ್ ನಾಡಿಗೇರ್

MESCOM ಫೆಬ್ರವರಿ 18. ಶಿವಮೊಗ್ಗದ ಬೊಮ್ಮನಕಟ್ಟೆ ಎ& ಬಿ ಬ್ಲಾಕ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ

0

MESCOM 11 ಕೆವಿ ಮಾರ್ಗದ ನಿರ್ವಹಣಾ ಕೆಲಸವಿರುವುದರಿಂದ ಬೊಮ್ಮನಕಟ್ಟೆ ಎ ಮತ್ತು ಬಿ ಬ್ಲಾಕ್, ಸಾನ್ವಿ ಲೇಔಟ್, ನಿಗಡೆ ಲೇಔಟ್, ಎಂ.ಬಿ.ಎಸ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಫೆ. 18 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.30 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿವಿ ಮೌಲ್ಯಾಧಾರಿತ ಜೀವನವನ್ನು ಉತ್ತೇಜಿಸುತ್ತಿದೆ- ಎಸ್.ಎನ್.ಚನ್ನಬಸಪ್ಪ

0

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಸ್ಥೆಯು ವಿಶ್ವಾದ್ಯಂತ ಆಧ್ಯಾತ್ಮಿಕ ಜಾಗೃತಿ, ವೈಯಕ್ತಿಕ ಜೀವನದಲ್ಲಿ ಸಕರಾತ್ಮಕ ಪರಿವರ್ತನೆ ಗುಣವನ್ನು ಬೆಳೆಸುವ ಒಂದು ಸಾಮಾಜಿಕ ಮತ್ತು ಆಧ್ಯಾತ್ಮಿಕ ಸೇವಾ ಸಂಸ್ಥೆಯಾಗಿದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ಮಹಾಶಿವರಾತ್ರಿ ಮಹೋತ್ಸವದ ಪ್ರಯುಕ್ತ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕಾಶಿ ವಿಶ್ವನಾಥ ದರ್ಶನ ಸ್ವರ್ಣೀಮ ಭಾರತ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಂತರಾಷ್ಟ್ರೀಯ ಸರ್ಕಾರೇತರ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಶಿಕ್ಷಣ ಮತ್ತು ಸಮುದಾಯ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಶಾಂತಿ, ಏಕತೆ ಮತ್ತು ಮೌಲ್ಯಾಧಾರಿತ ಜೀವನವನ್ನು ಉತ್ತೇಜಿಸುತ್ತಿದೆ ಎಂದು ತಿಳಿಸಿದರು.

ಶಿವಮೊಗ್ಗ ನಗರದ ಬ್ರಹ್ಮಕುಮಾರಿ ಈಶ್ವರೀ ವಿಶ್ವವಿದ್ಯಾಲಯದ ರಾಜಯೋಗಿನಿ ಬ್ರಹ್ಮಕುಮಾರಿ ಸ್ವಾತಿ ಮಾತನಾಡಿ, ಪ್ರಜಾಪಿತಾ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ 1937ರಲ್ಲಿ ಸ್ಥಾಪನೆಯಾಗಿ ವಿಶ್ವಾದ್ಯಂತ ಆಧ್ಯಾತ್ಮಿಕ ಮತ್ತು ರಾಜಯೋಗ ಧ್ಯಾನದ ಮೇಲೆ ಕೇಂದ್ರೀಕರಿಸಿದೆ. ಪ್ರಮುಖವಾಗಿ ಮಹಿಳೆಯರೇ ನೇತೃತ್ವ ವಹಿಸುತ್ತಿರುವ ಇದು, 150 ದೇಶಗಳಲ್ಲಿ 10,000ಕ್ಕೂ ಹೆಚ್ಚಿನ ಕೇಂದ್ರಗಳನ್ನು ಹೊಂದಿದೆ ಎಂದರು.

ಶಿವಮೊಗ್ಗದ ಎಲ್ಲ ಶಿವಭಕ್ತರಿಗೆ ಮುಂದಿನ ದಿನಗಳಲ್ಲಿ ಶಿವರಾತ್ರಿ ಹಬ್ಬದಲ್ಲಿ ಜ್ಯೋತಿರ್ಲಿಂಗಗಳ ಮಾದರಿ ಸ್ಥಾಪಿಸಿ ಅವುಗಳ ದರ್ಶನ ಮಾಡಿಸುವ ಯೋಜನೆ ಇದೆ ಎಂದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ಹಬ್ಬಗಳು ನಮ್ಮಲ್ಲಿ ಆಧ್ಯಾತ್ಮಿಕ ಚೈತನ್ಯವನ್ನು ಮೂಡಿಸುವುದರ ಜೊತೆಗೆ ದೇಶಭಕ್ತಿಯನ್ನು ಹಾಗೂ ಸಂಸ್ಕೃತಿಯ ಪರಂಪರೆಯನ್ನು ಬಲಪಡಿಸುತ್ತವೆ ಎಂದು ತಿಳಿಸಿದರು.

ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಮಾತನಾಡಿ, ಸಂಸ್ಥೆಯು ಶಾಂತಿಯ “ಜಾಗತಿಕ ಸಂಸ್ಕೃತಿ”ಯನ್ನು ಬೆಳೆಸುತ್ತದೆ. ಜಾತಿ, ಮತ, ಧರ್ಮದ ಭೇದ ಇಲ್ಲದೆ ಸರ್ವ ಧರ್ಮದ ಪ್ರತೀಕವಾಗಿದೆ ಎಂದರು.

S.N. Channabasappa ಅಂಚೆ ಅಧೀಕ್ಷಕ ಎಂ.ಕುಮಾರಸ್ವಾಮಿ ಮಾತನಾಡಿ, ಸಂಸ್ಥೆಯು ಸೇವಾನಿರತ ಅಂಚೆ ಇಲಾಖೆಯ ಪೋಸ್ಟ್ ಮ್ಯಾನ್ ಮತ್ತು ಎನ್ ಟಿ ಎಸ್ ನೌಕರರನ್ನು ಗುರುತಿಸಿ ಸನ್ಮಾನಿಸಿರುವುದು ಮಾದರಿಯಾಗಿದೆ ಎಂದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ವೈದ್ಯ ಡಾ. ಪ್ರಸನ್ನ ಬಸವರಾಜಪ್ಪ, ಡಾ. ಆಕಾಶ್ ಹೊಸ್ತೋಟ, ವಾಹನ ನಿರೀಕ್ಷಕ ಪಿ.ಎಂ.ಮಲ್ಲೇಶಪ್ಪ, ಉಪ ತಹಸೀಲ್ದಾರ್, ಗಿರಿರಾಜ್ ಎಸ್.ಒ, ಶ್ರೀ ಸರಸ್ವತಿ ಸಂಗೀತ ವಿಶ್ವವಿದ್ಯಾಲಯ ಬಿ.ಕೆ.ವಿಜಯಲಕ್ಷ್ಮೀ ರಾಘು, ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘ ನಿರ್ದೇಶಕ ಪಿ.ರುದ್ರೇಶ್, ಲೆಕ್ಕಪರಿಶೋಧಕ ಆರ್.ಮನೋಹರ, ತೋಟಗಾರಿಕಾ ಮಹಾವಿದ್ಯಾಲಯ ಡೀನ್ ಡಾ. ಡಿ.ತಿಪ್ಪೇಶ್ ಇತರರಿದ್ದರು.

Shivaganga Yoga Center ಹಿಂದೂಗಳ ಪವಿತ್ರ ಹಬ್ಬ, ಶಿವರಾತ್ರಿ- ಎಸ್.ರುದ್ರೇಗೌಡ

0

Shivaganga Yoga Center ಹಿಂದುಗಳ ಬಹಳ ವಿಶೇಷವಾದ ಪವಿತ್ರ ಹಬ್ಬ ಮಹಾಶಿವರಾತ್ರಿ. ಈ ಪವಿತ್ರ ದಿನ ಮಾಡುವ ಎಲ್ಲಾ ಕೆಲಸಗಳು ಶಿವನಿಗೆ ಸಮರ್ಪಣೆ ಆಗುತ್ತವೆ ಎಂದು ಮಾಜಿ ಎಂಎಲ್‌ಸಿ, ಶಿವಗಂಗಾ ಯೋಗ ಕೇಂದ್ರದ ಅಧ್ಯಕ್ಷ ಎಸ್.ರುದ್ರೇಗೌಡ ಹೇಳಿದರು.

ಕಲ್ಲಳ್ಳಿಯಲ್ಲಿ ಶ್ರೀ ಶಿವಗಂಗಾ ಯೋಗ ಕೇಂದ್ರದ “ಸಂಪೂರ್ಣ ಯೋಗ ಆರೋಗ್ಯ ಧಾಮ ” ಆವರಣದಲ್ಲಿ ಇರುವ ಧ್ಯಾನಸಕ್ತ ಆದಿ ಯೋಗಿ ಶಿವನ ಮೂರ್ತಿಗೆ ಅರ್ಚನೆ, ಕ್ಷೀರಾಭಿಷೇಕ, ಬಿಲ್ವಾರ್ಚನೆ ಹಾಗೂ ವಿಶೇಷ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶಾದ್ಯಂತ ಸಡಗರ ಸಂಭ್ರಮದಿಂದ ಮಹಾಶಿವರಾತ್ರಿಯನ್ನು ಭಕ್ತಿಯಿಂದ ಆಚರಣೆ ಮಾಡಲಾಗುತ್ತಿದೆ. ಯೋಗ, ಪ್ರಾಣಾಯಾಮ, ಧ್ಯಾನದ ಜೊತೆಗೆ ಶಿವನ ಪೂಜೆಯು ಮನಸ್ಸಿಗೆ ಶಾಂತಿ ನೆಮ್ಮದಿಯನ್ನು ನೀಡುತ್ತದೆ. ಇಂತಹ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳು ನಮ್ಮಲ್ಲಿ ಜೀವನೋತ್ಸಾಹ ಹೆಚ್ಚಿಸುತ್ತವೆ ಎಂದು ತಿಳಿಸಿದರು.

ಟ್ರಸ್ಟಿ, ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಅವರು ಯೋಗ ಕೇಂದ್ರದ ಎಲ್ಲಾ ಶಿಬಿರಾರ್ಥಿಗಳಿಗೆ ಹಾಗೂ ಯೋಗಪಟುಗಳಿಗೆ ಶಿವರಾತ್ರಿ ಹಬ್ಬದ ಶುಭಾಶಯಗಳು ತಿಳಿಸಿ ಶಿವಪೂಜೆಯಲ್ಲಿ ದಂಪತಿ ಸಮೇತ ಪಾಲ್ಗೊಂಡಿದ್ದರು. ಪ್ರೊ. ಎ.ಎಸ್.ಚಂದ್ರಶೇಖರ್ ಹಾಗೂ ಭಾರತಿ ಚಂದ್ರಶೇಖರ್ ಶಿವಪೂಜೆಯಲ್ಲಿ ಪಾಲ್ಗೊಂಡಿದ್ದರು.

ಶಿವನಿಗೆ ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಹೂವಿನ ಅಲಂಕಾರಗಳನ್ನ ಮಾಡಿ ಭಕ್ತಿಯಿಂದ ಪೂಜಿಸಲಾಯಿತು. ನಂತರ ಎಲ್ಲರಿಗೂ ಪ್ರಸಾದ ವಿನಿಯೋಗ ಮಾಡಲಾಯಿತು.

ಯೋಗ ಶಿಕ್ಷಣಾರ್ಥಿಗಳೇ ತಯಾರಿಸಿದ ಸುಂದರವಾದ ಎಕ್ಕದ ಹೂವಿನ ಮಾಲೆ ಬಹುಆಕರ್ಷಿತವಾಗಿತ್ತು. ಅಭಿಷೇಕಗೊಂಡು ಭಸ್ಮ, ಗಂಧ, ಅರಿಶಿಣ, ಕುಂಕುಮ, ಬಿಲ್ವಪತ್ರೆ ಪುಷ್ಪಗಳಿಂದ ಅಲಂಕೃತವಾಗಿದ್ದ ಧ್ಯಾನಸ್ಥ ಶಿವನ ಮೂರ್ತಿ ದರ್ಶನ ಆಕರ್ಷಕವಾಗಿತ್ತು. ಬ್ರಾಹ್ಮಿ ಕಾಲದಲ್ಲೇ ಯೋಗ ಶಿಕ್ಷಣಾರ್ಥಿಗಳಿಂದ ಸಾಮೂಹಿಕ ಭಜನೆ ಭಕ್ತಿಗೀತೆಗಳಿಂದ ಮಹಾಶಿವರಾತ್ರಿಯಂದು ಭಕ್ತಿ ಸಮರ್ಪಣೆ ಆರಂಭವಾಗಿತ್ತು.

Shivaganga Yoga Center ಕಾರ್ಯಕ್ರಮದಲ್ಲಿ ಮಂತ್ರ ಸಹಿತ ಸಹಸ್ರ ಬಿಲ್ವಾರ್ಚನೆಯನ್ನು ನೆರೆದಿದ್ದಂತಹ ಭಕ್ತವೃಂದ, ಯೋಗ ಶಿಕ್ಷಣಾರ್ಥಿಗಳು, ವಿಶ್ವಸ್ಥ ಮಂಡಳಿ ಮತ್ತು ಪೋಷಕ ಸಮಿತಿ ಸದಸ್ಯರು ಮತ್ತು ಆಗಮಿಸಿದ ಎಲ್ಲಾ ಸಾರ್ವಜನಿಕರು ವೈಯಕ್ತಿಕವಾಗಿ ಆದಿ ಯೋಗಿ ಶಿವನ ಮೂರ್ತಿಗೆ ಪುಷ್ಪ ಬಿಲ್ವಾರ್ಚನೆಯೊಂದಿಗೆ ಭಕ್ತಿ ಸಮರ್ಪಿಸಿಲು ಅವಕಾಶ ನೀಡಲಾಯಿತು.

ಯೋಗಾಚಾರ್ಯ ಡಾ. ಸಿ.ವಿ. ರುದ್ರರಾಧ್ಯ, ಯೋಗ ಕೇಂದ್ರದ ಕಾರ್ಯದರ್ಶಿ ಎಚ್.ಎಮ್. ಚಂದ್ರಶೇಖರಯ್ಯ, ಯೋಗ ಶಿಕ್ಷಕರಾದ ಕಾಟನ್ ಜಗದೀಶ್, ನೀಲಕಂಠ ರಾವ್, ಜಿಎಸ್ ಓಂಕಾರ್ ಮೂರ್ತಿ, ಪರಿಸರ ನಾಗರಾಜ್. ರೋಟರಿ ಜಿ.ವಿಜಯಕುಮಾರ್. ವಿಜಯ ಬಾಯರ್, ನಾಗರತ್ನಮ್ಮ ಹಾಗೂ ಯೋಗಪಟುಗಳು ಇದ್ದರು.