Wednesday, February 11, 2026
Wednesday, February 11, 2026
Home Blog Page 87

Kannada Rajyotsava ಹಳ್ಳಿಹೆಬ್ಬಾಗಿಲು ಮನೆಯಲ್ಲಿ ಪಾರಂಪರಿಕ ಯಕ್ಷಗಾನ ಪ್ರದರ್ಶನ

0

Kannada Rajyotsava ಶ್ರೀ ಬ್ರಹ್ಮಲಿಂಗೇಶ್ವರ ಯಕ್ಷಗಾನ ಕಲಾ ಮಂಡಳಿ ಮಾರಣಕಟ್ಟೆ ಅವರ ಸಂಯೋಜನೆ ಮತ್ತು ನಿರ್ದೇಶನದಲ್ಲಿ ಅದ್ಧೂರಿಯಾಗಿ ಯಕ್ಷಗಾನ ಪ್ರದರ್ಶನ ನಡೆಯಿತು.

ಹಳ್ಳಿ ಹೆಬ್ಬಾಗಿಲು ಮನೆಯಲ್ಲಿ ಪ್ರತಿವರ್ಷ ನಿಷ್ಠೆಯ ಪರಂಪರೆಯೊಂದಿಗೆ ಆಯೋಜಿಸಲಾಗುವ ಪಾರಂಪರಿಕ ಕಟ್ಟು ಕಟ್ಟಳೆ ಯಕ್ಷಗಾನ ಆಟ ನಡೆಸಲಾಯಿತು.

ಹಳ್ಳಿ ಹೆಬ್ಬಾಗಿಲು ಮನೆ ಕೊಡುಗೆ ಅಪಾರವಾಗಿದ್ದು, ಕರ್ನಾಟಕದ ಯಕ್ಷಗಾನ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಅವರು ನಿರಂತರವಾಗಿ ಶ್ರದ್ಧೆ ಮತ್ತು ನಿಷ್ಠೆಯನ್ನು ತೋರಿಸಿದ್ದಾರೆ ಎಂಬುದನ್ನು ವಿಶೇಷವಾಗಿ ಸ್ಮರಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಏರ್‌ಬೈಲ್ ಆನಂದ ಶೆಟ್ಟಿ ಮತ್ತು ಯಳಬೇರು ಶೇಖರ ಶೆಟ್ಟಿ ಅವರನ್ನು ವಿಶೇಷ ಗೌರವಾರ್ಥವಾಗಿ ಸನ್ಮಾನಿಸಲಾಯಿತು.

Kannada Rajyotsava ಇದೇ ಸಂದರ್ಭದಲ್ಲಿ ಹಳ್ಳಿ ಹೆಬ್ಬಾಗಿಲು ಮನೆ ಕುಟುಂಬದ ಹಿರಿಯ ಸದಸ್ಯರಾದ ಶೇಖರ ಶೆಟ್ಟಿ, ಸುಧಾರಾಮ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಅಶೋಕ್ ಶೆಟ್ಟಿ, ರವಿ ಶೆಟ್ಟಿ ಮತ್ತು ಜಯಶೀಲ ಶೆಟ್ಟಿ ಅವರು ಕಾರ್ಯಕ್ರಮದಲ್ಲಿ ಹಾಜರಾಗಿ ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಿದರು

Kencharayaswamy Temple ಶ್ರೀಕೃಷ್ಣನ ಅಲಂಕಾರದಲ್ಲಿ ಶೋಭಿಸಿದ ಶ್ರೀಕೆಂಚರಾಯಸ್ವಾಮಿ

0

Kencharayaswamy Temple ಶಿವಮೊಗ್ಗ ನಗರದ ಸೀಗೆಹಟ್ಟಿ ಶ್ರೀ ಕೆಂಚರಾಯಸ್ವಾಮಿ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಶ್ರೀ ಕೆಂಚರಾಯ ಸ್ವಾಮಿಗೆ ಕಾರ್ತಿಕ ದೀಪೋತ್ಸವದ ಅಂಗವಾಗಿ ಶ್ರೀ ಕೃಷ್ಣನ ಅಲಂಕಾರ ಮಾಡಲಾಗಿತ್ತು.
ಕಾರ್ತಿಕ ಮತ್ತು ದೀಪೋತ್ಸವ ಕಾರ್ಯಕ್ರಮದಲ್ಲಿ ಅಧಿಕ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡು ಶ್ರೀ ಕೆಂಚರಾಯನ ಕೃಪೆಗೆ ಪಾತ್ರರಾದರು. ನಂತರ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಶ್ರೀ ಕೃಷ್ಣನ ಅಲಂಕಾರದಲ್ಲಿ ಕಲಾವಿದ ಆರ್.ಮಲ್ಲಿಕಾರ್ಜುನ್ ಭಾಗಿಯಾಗಿದ್ದರು.

ನವೆಂಬರ್ 30. ಸರ್ವ ಜಾತಿ- ಜನಾಂಗಗಳ ವಿಧುರ- ವಿಧವೆಯರ ಸಮಾಲೋಚನಾ ಸಭೆ

0

“ಮರಳಿ ಯತ್ನವ ಮಾಡು ಮರಳಿ ಯತ್ನವ ಮಾಡು” ಎಂಬ ತತ್ವಪದದಂತೆ ಶಿವಮೊಗ್ಗ ನಗರದ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಇದೇ ನವೆಂಬರ್-30 ರಂದು ಭಾನುವಾರ ಸವ೯ ಜಾತಿ-ಜನಾಂಗಗಳ ವಿಧುರ-ವಿಧವೆ ಪುನರ್ವಿವಾಹ ಸಮಾಲೋಚನೆ ಸಭೆ ಏಪ೯ಡಿಸಲಾಗಿದೆ.
ಇದೊಂದು ಮಾನವೀಯ ಸಂಬಂಧ ಹಾಗು ಸಾಮಾಜಿಕ ಕಳಕಳಿಯ ಹೊಸ ದಿಕ್ಕಿನ ಕಡೆಗಿನ ಪ್ರಯತ್ನವಾಗಿದ್ದು ನಾಡಿನ ನಾನಾ ಕಡೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಅಂದು ಬೆಳಿಗ್ಗೆ 11:00 ಗಂಟೆಗೆ ವಿವಿಧೆಡೆಗಳಿಂದ ವಿಧುರ-ವಿಧವೆ ಹಾಗು ಪರಿತ್ಯಕ್ತರು ಭಾಗವಹಿಸಲಿದ್ದಾರೆ.
ಆಸಕ್ತರು ಆರ್.ಟಿ. ನಟರಾಜ್ ಶ್ರೀಕಲಾ ಕೌಶಲ್ಯಾಭಿವೃದ್ಧಿ ಕೇಂದ್ರ, ಒಂದನೆ ಮಹಡಿ, ಜಿಲ್ಲಾ ನಿವೃತ್ತ ನೌಕರರ ಸಂಘದ ಕಟ್ಟಡ, ಪ್ರೆಸ್ ಕ್ಲಬ್ ಎದುರು, ಆರ್.ಟಿ.ಒ. ಆಫೀಸ್ ರಸ್ತೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಶಿವಮೊಗ್ಗ. ಮೊಬೈಲ್ : 9448143165/9449552635/9342158359/6363002259 ಇವರಲ್ಲಿ ಹೆಸರು ನೊಂದಾಯಿಸಿಕೊಂಡು ಪೋಸ್ಟ್ ಕಾಡ್೯ ಸೈಜ್ ಫೋಟೋ, ಆಧಾರ್ ಕಾಡ್೯, ಇತರೆ ಸಮಂಜಸ ದಾಖಲೆಗಳ ಸಹಿತ ಕಾಯ೯ಕ್ರಮದಲ್ಲಿ ಭಾಗವಹಿಸಬಹುದು.

Kateel Ashok Pai College ಭಾಷೆ, ನಮ್ಮ ಸಂಸ್ಕೃತಿ ದೇಶ ಸಮುದಾಯವನ್ನು ಪ್ರತಿನಿಧಿಸುತ್ತದೆ- ಕುಮಾರ ಚಲ್ಯ

0

Kateel Ashok Pai College ಮಾನಸ ಟ್ರಸ್ಟ್ ಕಟೀಲ್ ಅಶೋಕ್ ಪೈ ಮೆಮೋರಿಯಲ್ ಕಾಲೇಜ್ ಶಿವಮೊಗ್ಗ ಹಾಗೂ ಐ.ಕ್ಯೂ.ಎ.ಸಿ. ಸಹಯೋಗದಲ್ಲಿ ಕಾಲೇಜಿನಲ್ಲಿ 70ನೇ ಕನ್ನಡ ರಾಜ್ಯೋತ್ಸವ “ನುಡಿಯ ದೀಕ್ಷೆ ನಾಡಿನ ರಕ್ಷೆ” ಸಂಭ್ರಮಾಚರಣೆಯು ವಿಜೃಂಭಣೆಯಿಂದ ನೆರವೇರಿತು.

ಕಾರ್ಯಕ್ರಮವು ದೀಪ ಬೆಳಗುವುದರ ಮೂಲಕ ಮತ್ತು ಕನ್ನಡ ಭುವನೇಶ್ವರಿಗೆ ಪುಷ್ಪವನ್ನು ಅರ್ಪಿಸಿವುದರ ಮೂಲಕ ಉದ್ಘಾಟನೆಗೊಂಡು ವಿದ್ಯಾರ್ಥಿಗಳ ಪ್ರಾರ್ಥನಾ ನೃತ್ಯದೊಂದಿಗೆ ಪ್ರಾರಂಭವಾಯಿತು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಮೋಹನ್ ಕುಮಾರ್ ಅವರು ಎಲ್ಲರನ್ನು ಸ್ವಾಗತಿಸಿ ಮಾತನಾಡಿ ನಿಸಾರ್ ಅಹಮದ್ ಅವರ ಕವಿತೆಯ ಸಾಲುಗಳನ್ನು ಉಲ್ಲೇಖಿಸಿ ರಕ್ತ ಸಂಬಂಧಕ್ಕಿಂತ ಭಾವ ಸಂಬಂಧವೂ ಮುಖ್ಯವಾಗುತ್ತದೆ ಯಾವುದೇ ಸರ್ಕಾರವು ಒಂದು ಭಾಷೆಯನ್ನು ಬೆಳೆಸಬೇಕು ಸರ್ಕಾರವೇ ಅದರ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎನ್ನುವುದಕ್ಕಿಂತ ಆ ಭಾಷಿಕರು ಕನ್ನಡ ಭಾಷೆಯನ್ನು ಉಳಿಸುವುದಕ್ಕಿಂತ ಬೆಳೆಸುವ ಮತ್ತೆ ಬಳಸುವ ವ್ಯವಸ್ಥೆ ಆಗಬೇಕು ಎಂಬುದನ್ನು ವಿವರಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುವೆಂಪು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಕುಮಾರಚಲ್ಯ ಅವರು ಮಾತನಾಡಿ ಈ ಸೆಲ್ಫಿ ಸಂಸ್ಕೃತಿಯ ಸಂದರ್ಭದಲ್ಲಿ ನಾವು ನಮ್ಮನ್ನೇ ಅತಿ ಮುಖ್ಯವಾಗಿ ಬಿಂಬಿಸಿಕೊಳ್ಳುವಕತಹ ಆತಂಕಕಾರಿ ಬೆಳವಣಿಗೆ ಆಗುತ್ತಿದೆ.

ಈ ಸಂದರ್ಭದಲ್ಲಿ ಬೆಳಕನ್ನು ಆರಿಸುವಂತಹ ಸಂಸ್ಕೃತಿ ಬೇಕಿಲ್ಲ್ಲ ಬೆಳಕನ್ನು ಹೊತ್ತಿಸುವ ಸಂಸ್ಕೃತಿ ಮತ್ತೆ ಬೆಳಕನ್ನು ಪಸರಿಸುವ ಸಂಸ್ಕೃತಿ ಹೆಚ್ಚಾಗಬೇಕು, ಕನ್ನಡವೂ ಸಾಂಸ್ಕೃತಿಕ ಬೆಳಕಾಗಬೇಕೆ ಹೊರತು ಸಂಘರ್ಷದ ಕಿಡಿಯಾಗಬಾರದು. ಒಬ್ಬರಿಂದ ಒಬ್ಬರಿಗೆ ಈ ಬೆಳಕನ್ನು ದಾಟಿಸುವ ವಿಶಾಲ ಮನಸ್ಥಿತಿ ಬರಬೇಕು. ನಮ್ಮ ಕನ್ನಡ ಸಂಸ್ಕೃತಿ ದೇಶಿಯ ಸಂಸ್ಕೃತಿಯ ಆಗಿ ಇರುವುದೇ ಹೊರತು ಅದು ಆಧುನಿಕ ಸಂಸ್ಕೃತಿ ಅಲ್ಲ ಈ ದೇಶಿಯ ಸಂಸ್ಕೃತಿಗೆ ದೀಪ ಹತ್ತಿಸುವುದು ಸಂಕೇತ. ಈ ದೀಪ ಹತ್ತಿಸಲಿಕ್ಕೆ ಬೇಕಾದಂತಹ ಹಣತೆ, ಬತ್ತಿ, ಎಣ್ಣೆ ಇವುಗಳನ್ನ ಮಾಡುವವರು ಬೇರೆ ಬೇರೆ ವರ್ಗಗಳಿಗೆ ಸೇರಿದವರಾದರು ಅದರಿಂದ ಹೊಮ್ಮುವ ಬೆಳಕು ಮಾತ್ರ ಎಲ್ಲರಿಗೆ ಬೇಕಾಗುವಂತದ್ದು. ಈ ಭಾಷೆ ಅನ್ನುವುದು ಯಾವುದೇ ಕುಲಕ್ಕೆ ಜಾತಿಗೆ ಧರ್ಮಕ್ಕೆ ಸೀಮಿತವಾಗಿಲ್ಲ ಈ ರಾಜ್ಯೋತ್ಸವ ಕನ್ನಡ ರಾಜ್ಯೋತ್ಸವ ಅಲ್ಲ ಅದು ಕರ್ನಾಟಕ ರಾಜ್ಯೋತ್ಸವವಾಗಬೇಕು ವಿಭಿನ್ನ ವರ್ಗಗಳ ಎಲ್ಲರೂ ಒಟ್ಟಿಗೆ ಸೇರಿ ಸಂಭ್ರಮವನ್ನು ಆಚರಿಸುವಂತಹ ರಾಜ್ಯೋತ್ಸವವಾಗಬೇಕು ಅವಾಗ ಮಾತ್ರ ನಿಜವಾದ ಕರ್ನಾಟಕ ರಾಜ್ಯೋತ್ಸವವಾಗುತ್ತದೆ. ಕರ್ನಾಟಕ ರಾಜ್ಯವು ವಿಭಿನ್ನ ಸಂಸ್ಕೃತಿಯ ನೆಲೆಯಾಗಿದೆ ಈ ವಿಭಿನ್ನ ಸಂಸ್ಕೃತಿಯ ನೆಲೆಯಲ್ಲಿ ಎಲ್ಲರೂ ಒಟ್ಟಿಗೆ ಇದ್ದೇವೆ.

ಒಟ್ಟಿಗೆ ಭಾಷೆಯನ್ನು ಬೆಳೆಸಬೇಕಾಗಿದೆ, ವಿವೇಕದಿಂದ ಭಾಷೆಯನ್ನು ಬೆಳೆಸುವುದರಿಂದ ಆ ಭಾಷೆಯು ಬೆಳೆಯುತ್ತದೆ ಎಂದು ಅಭಿಪ್ರಾಯಪಟ್ಟರು. ಭಾಷೆಯನ್ನು ಲಘುವಾಗಿ ತೆಗೆದುಕೊಳ್ಳಬಾರದು ಅದು ಸಂವಹನಕ್ಕೆ ಮಾತ್ರ ಎಂಬ ಒಂದು ಭಾವನೆ ಇರಬಾರದು ಅದು ನಮ್ಮ ಸಂಸ್ಕೃತಿ ದೇಶ ಸಮುದಾಯವನ್ನು ಪ್ರತಿನಿಧಿಸುತ್ತದೆ ಭಾಷೆಯು ಒಂದು ಗಟ್ಟಿಯಾದಂತಹ ಸಂಸ್ಕೃತಿಯ ನೆಲಮೂಲವನ್ನು ತಿಳಿಸುತ್ತದೆ ಎಂದು ಅಭಿಪ್ರಾಯವನ್ನು ಪಟ್ಟರು.

Kateel Ashok Pai College ಕನ್ನಡ ಭಾಷೆಯನ್ನು ಅಕ್ಷರಸ್ಥರು ಕೂಡ ಬೆಳೆಸುತ್ತಿಲ್ಲ ಎಂಬುದು ಕಳವಳಕಾರಿಯಾಗಿದೆ. ಹೊಸ ಭಾಷೆಯನ್ನು ಕಲಿಯಲು ಯಾವುದೇ ಅಭ್ಯಂತರಗಳು ಇರಬಾರದು. ಯಾಕೆಂದರೆ ಕನ್ನಡವೂ ಅನೇಕ ಅನ್ಯ ಭಾಷೆಗಳ ಪದಗಳಿಂದ ಸಮೃದ್ಧವಾದಂತಹ ಭಾಷೆ. ಹಾಗಾಗಿ ಕನ್ನಡ ಭಾಷೆಯು ಸಾಮರಸ್ಯದ, ಸಂಸ್ಕೃತಿಯ ಭಾಷೆಯಾಗಿ ರೂಪುಗೊಂಡಿದೆ. ಕನ್ನಡದ ಮೇರು ಸಾಹಿತಿಗಳಾದ ಮಾಸ್ತಿ, ಡಿ.ವಿ.ಜಿ., ಪು.ತೀ.ನ. ಅವರು ಮೂಲ ಅನ್ಯಭಾಷಿಕರಾದರೂ ಕನ್ನಡಕ್ಕೆ ಕೀರ್ತಿಯನ್ನು ತಂದ ಮಹನೀಯರು ಎಂದು ತಿಳಿಸಿದರು.

ಕರ್ನಾಟಕ ಬಹು ಭಾಷೆಗಳ ವೈವಿಧ್ಯತೆಯನ್ನು ಒಳಗೊಂಡಿರುವ ಪ್ರದೇಶ ಹಾಗಾಗಿ ಸಾಮರಸ್ಯವೂ ಅದರ ಒಂದು ಅವಿಭಾಜ್ಯ ಅಂಗವಾಗಿದೆ ಎಂದು ಅಭಿಪ್ರಾಯ ಪಟ್ಟರು. ಆವೇಶದಿಂದ ಯಾವುದೇ ಭಾಷೆಯನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ತಿಳಿಸಿದರು.

ಕನ್ನಡ ರಾಜ್ಯೋತ್ಸವವು ತಿಂಗಳ ನಾಟಕದ ರಾಜ್ಯೋತ್ಸವವಾಗದೆ, ಸಂಘರ್ಷ ಮತ್ತು ದ್ವೇಷಗಳಿಂದ ದೂರವಿರುವ ಸಾಮರಸ್ಯದ ರಾಜ್ಯೋತ್ಸವವಾಗಬೇಕು ಎಂದು ತಿಳಿಸಿದರು.

ಅಧ್ಯಕ್ಷೀಯ ನುಡಿಗಳನ್ನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿ ರವರು ಕನ್ನಡವನ್ನು ಮನಸ್ಸಿನಲ್ಲಿ, ಹೃದಯದಲ್ಲಿ ಇಳಿಸಿಕೊಳ್ಳಬೇಕಾದರೆ, ಭಾಷೆಯ ಬಳಕೆ ಅತಿ ಮುಖ್ಯವಾಗಿರುತ್ತದೆ. ಕರ್ನಾಟಕ ರಾಜ್ಯೋತ್ಸವದ ಸಂಭ್ರಮ, ಸಾಮರಸ್ಯ, ಗೌರವ, ಪ್ರೀತಿಯ ಸಂಭ್ರಮವಾಗಬೇಕು. ರಾಜ್ಯೋತ್ಸವವು ಎಲ್ಲಾ ಧರ್ಮ ಜಾತಿ ಕಟ್ಟುಪಾಡುಗಳನ್ನು ಮೀರಿದ ಒಂದು ಉತ್ಸವವಾಗಬೇಕು. ಇದೊಂದು ಎಲ್ಲರೂ ಆಚರಿಸುವ ಹಬ್ಬವಾಗಬೇಕು. ಆ ಮೂಲಕ ಕನ್ನಡ ಸಂಸ್ಕೃತಿಯನ್ನು ಬೆಳೆಸೋಣ ವಿಶಾಲಗೊಳಿಸೋಣ ಜಗತ್ತಿನಾದ್ಯಾಂತ ಕನ್ನಡ ಮನಸ್ಸನ್ನ ಕಟ್ಟೋಣ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮವು ಕು. ತನ್ಮಯೀ ಮತ್ತು ಸಂಗಡಿಗರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಕು. ವೈಷ್ಣವಿ, ದ್ವಿತೀಯ ಬಿ.ಎಸ್ಸಿ. ಅವರು ಸ್ವಾಗತ ನೃತ್ಯವನ್ನು ಮಾಡಿದರು.

ಇದೇ ಸಂದರ್ಭದಲ್ಲಿ ಪ್ರೊ. ಕುಮಾರಚಲ್ಯ ಅವರನ್ನು ಹಾಗೂ ಮಣಿಪಾಲ್ ಆಕಾಡೆಮಿಯ ಡಾ. ರಾಜಲಕ್ಷಿö್ಮರವರನ್ನು ಕಾಲೇಜಿನ ಪರವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಾನಸ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ. ರಾಜೇಂದ್ರ ಚೆನ್ನಿ ಅವರು, ಶೈಕ್ಷಣಿಕ ಆಡಳಿತಾಧಿಕಾರಿಗಳಾದ ಪ್ರೊ. ರಾಮಚಂದ್ರ ಬಾಳಿಗ, ಐ.ಕ್ಯೂ.ಎ.ಸಿ. ಸಂಯೋಜಕರಾದ ಡಾ. ಆರ್ಚನಾ ಭಟ್ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಉಪನ್ಯಾಸಕರಾದ ಡಾ. ಮಧು ಟಿ. ಅವರು ವಂದನಾರ್ಪಣೆಯನ್ನು ಮಾಡಿದರು

. ಕು. ಸ್ಪೂರ್ತಿ ವೈ.ಎಚ್., ತೃತೀಯ ಬಿ.ಎಸ್.ಡಬ್ಲೂ. ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ಎಲ್ಲಾ ಬೋಧಕ-ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

ಅಂಬಾರಿಯಲ್ಲಿ ಕನ್ನಡ ಕಳಶ. ವರ್ಣಮಯ ರಾಜ್ಯೋತ್ಸವ ಆಚರಣೆ

0

ಅಂಬಾರಿಯ ಪ್ರತಿ ಕೃತಿಯಲ್ಲಿ ಕನ್ನಡ ಕಳಶವನ್ನು ಸ್ಥಾಪಿಸುವ ಮೂಲಕ ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ಬಾಪೂಜಿ ವಿದ್ಯಾ ಸಂಸ್ಥೆಯ ಲೇಕ್ ವ್ಯೂನ ಹೈಟೆಕ್ ಕಾಲೇಜಿನಲ್ಲಿಂದು ನೆರವೇರಿಸಿದ್ದು ಆಕರ್ಷಣೀಯವಾಗಿತ್ತು.

ಕಾಲೇಜಿನ ಪ್ರಾಚಾರ್ಯ ಡಾ. ಬಿ. ವೀರಪ್ಪನವರು ನಿರ್ದೇಶಕ ಡಾ. ಸ್ವಾಮಿ ತ್ರಿಭುವನಾನಂದ ಹೆಚ್ ವಿ, ಮುಖ್ಯ ಅತಿಥಿಗಳಾದ ಕನ್ನಡ ಉಪನ್ಯಾಸಕ ಹಾಲಸ್ವಾಮಿ ಬೆಳ್ಳಿಗನೋಡು ಹಾಗೂ ವಿದ್ಯಾರ್ಥಿಗಳು, ಶಿಕ್ಷಕ ಮತ್ತು ಶಿಕ್ಷಕೇತರ ವರ್ಗ ಒಡಗೂಡಿ ವಿದ್ಯಾರ್ಥಿಗಳೇ ನಿರ್ಮಿಸಿದ ಅಂಬಾರಿಯ ಪ್ರತಿಕೃತಿಯಲ್ಲಿ ಕನ್ನಡ ಕಳಶ ಸ್ಥಾಪಿಸಿದರು.

ಬಾಪೂಜಿ ಎಂಬಿಎ ಕಾಲೇಜಿನ ಸಭಾಂಗಣದಲ್ಲಿಂದು ಭುವನೇಶ್ವರಿ ಪೂಜೆಯ ನಂತರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಕನ್ನಡ ಉಪನ್ಯಾಸಕ ಹಾಲಸ್ವಾಮಿ ಬೆಳ್ಳಿಗನೋಡು ಪ್ರತಿಯೊಬ್ಬರೂ ದಿನನಿತ್ಯ ತಾವೆಷ್ಟು ಶುದ್ಧ ಕನ್ನಡದಲ್ಲಿ ಮಾತನಾಡುತ್ತಿದ್ದೇವೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಹುಟ್ಟುವಾಗ ವಿಶ್ವಮಾನವರಾದ ನಾವು ಬೆಳೆಯುತ್ತಾ ಸ್ವಾರ್ಥದಿಂದಾಗಿ ಅಲ್ಪ ಮಾನವರಾಗುತ್ತಿದ್ದೇವೆ ಎಂದರು.

ಸ್ವಾಗತ ಕೋರುತ್ತಾ ಪ್ರಾಸ್ತಾವಿಕ ನುಡಿಗಳನಾಡಿದ ಕಾಲೇಜಿನ ನಿರ್ದೇಶಕ ಡಾ. ಸ್ವಾಮಿ ತ್ರಿಭುವನಾನಂದ ಹೆಚ್ ವಿ ಕನ್ನಡ ಅಭಿಮಾನವು ಕೇವಲ ನವೆಂಬರ್ ತಿಂಗಳಿಗೆ ಮೀಸಲಾಗದೆ ನಿರಂತರವಾಗಿ ಇರಬೇಕು ಎಂದರು. ಅಧ್ಯಕ್ಷೀಯ ನುಡಿಗಳ ನಾಡಿದ ಪ್ರಾಂಶುಪಾಲ ಡಾ ಬಿ ವೀರಪ್ಪನವರು ನೆರೆ ರಾಜ್ಯಗಳು ಹಾಗೂ ಹೊರದೇಶದವರನ್ನು ಆತ್ಮೀಯತೆಯಿಂದ ಪ್ರೀತಿಸುವ ಮನೋಭಾವ ನಮ್ಮ ಕನ್ನಡಿಗರದ್ದು ಎಂದರು.

ಜಿ.ರಕ್ಷಿತಾ ಮತ್ತು ತನ್ಮಯಿ ನಿರೂಪಿಸಿದರೆ ಕನ್ನಡ ನುಡಿ ನಾದ ನಮನವನ್ನು ಮಾನಸ ಬಿ ಎಂ ಮತ್ತು ತಂಡದವರು ಸಮರ್ಪಿಸಿದರು. ಸಂಜನಾ, ಅನುಷಾ, ಸಿಂಧು ಮತ್ತು ಪ್ರಾರ್ಥನಾ ತಂಡದವರು ಕನ್ನಡ ನೃತ್ಯಗಳನ್ನು ಪ್ರಸ್ತುತಪಡಿಸಿದರು. ವರದಿಯನ್ನು ವಂದನಾ ಟಿ ವಾಚಿಸಿದರು. ಶ್ರಾವಣಿ ವಿ ರಾಜ್ಯೋತ್ಸವದ ಹಿನ್ನೆಲೆ ಕುರಿತಾಗಿ ಮಾತನಾಡಿದರು. ಅತಿಥಿಗಳ ಪರಿಚಯವನ್ನು ದೀಪಾ ಎಚ್ ಎಸ್ ಹಾಗೂ ಶ್ರೇಯಾ ಟಿ ಮಾಡಿದರು. ವಿವಿಧ ಸ್ಪರ್ಧೆಗಳ ಬಹುಮಾನ ವಿತರಣಾ ನಿರ್ವಹಣೆಯನ್ನು ಸಿಂಚನಾ ಬಿ ಮತ್ತು ಸೃಷ್ಟಿ ಎ ಜೈನ್ ಮಾಡಿದರೆ ಮಾನಸ ಎಸ್ ವಂದನೆ ಸಲ್ಲಿಸಿದರು. ಮೈಸೂರು ಅರಮನೆ,ವಿಜಯನಗರದ ಗೋಳಗುಮ್ಮಟ, ಹಂಪಿ ದೇವಾಲಯ ಗೋಪುರ,ರಾಜ್ಯದ ಜಿಲ್ಲೆಗಳ ವಿಶೇಷತೆಗಳ ಮಾದರಿಗಳಲ್ಲದೇ ಆಕರ್ಷಕ ರಂಗೋಲಿಗಳನ್ನೂ ವಿದ್ಯಾರ್ಥಿಗಳು ನಿರ್ಮಿಸಿದ್ದರು.

-ಚಿತ್ರ ಹಾಗೂ ವರದಿ: ಡಾ. ಎಚ್.ಬಿ.ಮಂಜುನಾಥ, ಹಿರಿಯ ಪತ್ರಕರ್ತರು-

Nidhi Apke Nikat ನವೆಂಬರ್ 27.ಶಿವಮೊಗ್ಗ & ದಾವಣಗೆರೆ ಜಿಲ್ಲೆಗಳಲ್ಲಿ‌ “ನಿಧಿ ಆಪ್ ಕೆ ನಿಕಟ್” ಕಾರ್ಯಕ್ರಮ

0

Nidhi Apke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ನ. 27 ರಂದು ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಮೆಟ್ರೋ ಯುನೈಟೆಡ್ ಆಸ್ಪತ್ರೆ, ಶಿವಮೂತಿ ಸರ್ಕಲ್, ಸವಳಂಗ ರಸ್ತೆ, ಶಿವಮೊಗ್ಗ ಜಿಲ್ಲೆ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಶಾ ಇನ್ಟ್ರಾ ಟವರ್ಸ್ ಪ್ರೈ..ಲಿ., ಕರೂರ್ ಕೈಗಾರಿಕಾ ಪ್ರದೇಶ, ಪಿ.ಬಿ.ರಸ್ತೆ, ದಾವಣಗೆರೆ, ಇಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ.
ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಿಗಳು ಮತ್ತು ಪಿಂಚಣಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.

Lions Club ಉಜ್ಜಯಿನಿಪುರ ಆರೋಗ್ಯಕೇಂದ್ರದಲ್ಲಿ ಉಚಿತ ನೇತ್ರ ತಪಾಸಣೆ, 68 ಮಂದಿಗೆ ಉಚಿತ ಕನ್ನಡಕ ವಿತರಣೆ

0

Lions Club ಭದ್ರಾವತಿ ಜಿ.ಪಂ., ತಾ.ಪಂ., ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ, ಜಿಲ್ಲಾ ಅಂಧತ್ವ ನಿಯಂತ್ರಣ ಸಂಘ ಲಯನ್ಸ್ ಕ್ಲಬ್ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಉಚಿತ ಕನ್ನಡಕ ವಿತರಣೆ ಶಿಬಿರವನ್ನು ಭದ್ರಾವತಿಯ ಉಜ್ಜಯಿನಿಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆಯಿತು.

ಈ ಶಿಬಿರದಲ್ಲಿ ಭದ್ರಾವತಿ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಬಂದ ಸುಮಾರು 215 ಮಂದಿ ಜನರು ನೇತ್ರ ತಪಾಸಣೆಗೆ ಹಾಜರಾಗಿದ್ದು, ನೇತ್ರ ತಜ್ಞರ ತಂಡದಿಂದ ಸಮಗ್ರ ದೃಷ್ಟಿ ಪರೀಕ್ಷೆ ನಡೆಯಿತು. ತಪಾಸಣೆಯಲ್ಲಿ 58 ಮಂದಿ ರೋಗಿಗಳು ಶಸ್ತ್ರಚಿಕಿತ್ಸೆಗೆ ಆಯ್ಕೆಯಾಗಿದ್ದು, ಅವರಿಗೆ ಶೀಘ್ರದಲ್ಲೇ ಶಿವಮೊಗ್ಗ ಶಂಕರ ಐ ಕೇರ್ ಆಸ್ಪತ್ರೆಯಲ್ಲಿ ಸಂಪೂರ್ಣ ಉಚಿತ ಶಸ್ತ್ರಚಿಕಿತ್ಸೆ ವ್ಯವಸ್ಥೆ ಮಾಡಲಾಗುವುದು ಎಂದು ವೈದ್ಯಾಧಿಕಾರಿಗಳು ತಿಳಿಸಿದರು. ಜೊತೆಗೆ ದೃಷ್ಟಿದೋಷ ಹೊಂದಿದ್ದ 68 ಮಂದಿಗೆ ಉಚಿತ ಕನ್ನಡಕಗಳನ್ನು ವಿತರಿಸಲಾಗಿದ್ದು, ಇದರಿಂದ ಅವರು ಉತ್ತಮ ದೃಷ್ಟಿ ಹೊಂದಲು ಸಹಾಯವಾಯಿತು. ಲಯನ್ ನಾಗರಾಜ ಶೆಟ್, ಲಯನ್ ದರ್ಶನ ಜಿ.ಪಿ. ಲಯನ್ ನಟರಾಜ್ ಬಿ. ಲಯನ್ ಕಾರ್ತಿಕ್ ಎ.ಎನ್. ಝೆನ್ ಅಧ್ಯಕ್ಷರು ಭಾಗವಹಿಸಿ ಶಿಬಿರದ ಕಾರ್ಯ ವೈಖರಿ ಮೆಚ್ಚಿದರು. ಅಧ್ಯಕ್ಷ ಲಯನ್ ನಾಗರಾಜ ಶೆಟ್ ಅವರು ಸಮಾಜ ಮುಖಿ ಕಾರ್ಯಕ್ರಮಗಳಲ್ಲಿ ಲಯನ್ಸ್ ಕ್ಲಬ್ ನೀಡುತ್ತಿರುವ ಸೇವೆಯನ್ನು ಶ್ಲಾಘಿಸಿ ಮಾತನಾಡಿದರು.

ಲಯನ್ ಕಾರ್ತಿಕ್ ಎ.ಎನ್. ಝೆನ್ ಅಧ್ಯಕ್ಷರು ಅವರು ಉಚಿತ ನೇತ್ರ ಶಿಬಿರಗಳ ಮಹತ್ವ ತಿಳಿಸಿದರು. ಈ ವರ್ಷ ಲಯನ್ಸ್ ಜಿಲ್ಲೆ ೩೧೭ಅ ಯಲ್ಲಿ ೩೦೦೦ ಕ್ಕೂ ಹೆಚ್ಚು ಉಚಿತ ಕನ್ನಡಕಗಳನ್ನು ವಿತರಿಸುವ ಗುರಿ ಹೊಂದಲಾಗಿದೆ ಎಂದು ಘೋಷಿಸಿ ದರು. ಈ ಶಿಬಿರದ ಯಶಸ್ವಿ ಸಂಯೋ ಜನೆಯನ್ನು ಲಯನ್ ನಂದೀಶ್ ಎನ್.ಟಿ. (ಜಿಲ್ಲಾ ಸಂಯೋಜಕ ನೇತ್ರ ತಪಾಸಣೆ ಮತ್ತು ಕನ್ನಡಕ ವಿತರಣೆ, ಜಿಲ್ಲೆ ೩೧೭) ಅವರು ಶಿವಮೊಗ್ಗ ಆಪ್ಟಿಕಲ್ಸ್ ಸಹಯೋಗದೊಂದಿಗೆ ಸಮರ್ಪಕವಾಗಿ ನಿರ್ವಹಿಸಿದರು. ಲಯನ್ ನಂದೀಶ್ ಎನ್.ಟಿ. ಜಿಲ್ಲಾ ಸಂಯೋಜಕರು, ನೇತ್ರ ತಪಾಸಣೆ ಮತ್ತು ಕನ್ನಡಕ ವಿತರಿಸಿದರು.

Shivamogga Municipal Corporation ಬೀದಿ ನಾಯಿಗಳ ಕಾಟ ತಡೆಯಲು ಮಹಾನಗರ ಪಾಲಿಕೆಯಿಂದ ಸಾರ್ವಜನಿಕ ಮಾಹಿತಿ ಪ್ರಕಟಣೆ

0

Shivamogga Municipal Corporation ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂರ್ಕೀಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಆವರಣದಲ್ಲಿ ಬೀದಿ ನಾಯಿಗಳು ವಾಸವಿದ್ದಲ್ಲಿ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಲಿಖಿತವಾಗಿ ಆಯುಕ್ತರು/ಸಹಾಯಕ ಕಾರ್ಯಪಾಲಕ ಅಭಿಯಂತರರು (ಪರಿಸರ)/ಪರಿಸರ ಅಭಿಯಂತರರು, ಶಿವಮೊಗ್ಗ ಮಹಾನಗರ ಪಾಲಿಕೆ ಇವರುಗಳಿಗೆ ತಿಳಿಸುವುದು ಹಾಗೂ healthcitycorporation@gmail.com ಗೆ ಇ-ಮೇಲ್ ಮಾಡುವಂತೆ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸಂಸ್ಥೆಯ ಆವರಣದಲ್ಲಿ ಬೀದಿನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರವೇಶ ನಿಯಂತ್ರಿಸಲು ಕ್ರಮ ವಹಿಸುವುದು. ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಭಂದಿಸುವುದನ್ನು ಮೇಲ್ವಿಚಾರಣೆ ಮಾಡಲು ಸಂಸ್ಥೆಯ ವತಿಯಿಂದ ಒಬ್ಬ ಜವಾಬ್ಧಾರಿಯುವ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವುದು. ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಸಂಸ್ಥೆಯ ವ್ಯಾಪ್ತಿಯಲ್ಲಿ ಪುನಃ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಛವನ್ನು ಆ ಸಂಸ್ಥೆಯಿಂದಲೇ ವಸೂಲಿ ಮಾಡಲಾಗುವುದು. ನ್ಯಾಯಾಲಯದ ಆದೇಶವನ್ನು ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ಅವರ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ತಿಳಿಸಿದೆ.

Shivamogga police ಶಿವಮೊಗ್ಗದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ, ಕೋಟೆ ಪೊಲೀಸ್ ಠಾಣೆ ಪ್ರಕಟಣೆ

0

Shivamogga police ಶಿವಮೊಗ್ಗದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಗರದ ಮಥುರಾ ಪ್ಯಾರಡೇಸ್ ಎದುರು ಟ್ಯಾಕ್ಸಿ ಸ್ವ್ಯಾಂಡ್ ಬಳಿ ಸುಮಾರು ನ.19 ರಂದು 35-40 ವರ್ಷ ವಯಸ್ಸಿನ ಅಪರಿಚಿತ ಗಂಡಸು ಅನಾರೋಗದಿಂದ ಮಲಗಿದ್ದು, ಸಾರ್ವಜನಿಕರ ಸಹಾಯದಿಂದ ಅಂಬ್ಯುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿದ್ದು, ವೈದ್ಯರು ಪರೀಕ್ಷಿಸಿ ವ್ಯಕ್ತಿ ಮೃತಪಟ್ಟಿರುವುದಾಗಿ ದೃಢಪಡಿಸಿರುತ್ತಾರೆ.
ಈ ವ್ಯಕ್ತಿಯ ಚಹರೆ 5.4 ಅಡಿ ಎತ್ತರ, ದುಂಡುಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಬಲಗೈ ಒಳಭಾಗದಲ್ಲಿ ಹಾರ್ಟ್ ಚಿತ್ರವುಳ್ಳ ಟ್ಯಾಟೂ ಇರುತ್ತದೆ. ಮೈ ಮೇಲೆ ಬಿಳಿ ಮತ್ತು ಬೂದು ಬಣ್ಣದ ಚೌಕಾಕಾರದ ತುಂಬು ತೋಳಿನ ಶರ್ಟ್, ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ.
Shivamogga police ಶಿವಮೊಗ್ಗದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ ಈ ವ್ಯಕ್ತಿ ವಾರಸುದಾರರು ಇದ್ದಲ್ಲಿ ಕೋಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

ಕೆಎಸ್ಆರ್ ಪಿ ಪಡೆಗೆ ಬ್ಲೂ ಕ್ಯಾಪ್ ವಿತರಣೆ

0

ಕರ್ನಾಟಕ ರಾಜ್ಯ ಸರ್ಕಾರದ ಆದೇಶದಂತೆ 8ನೇ ಪಡೆ, ಕೆ.ಎಸ್.ಆರ್.ಪಿ, ಮಾಚೇನಹಳ್ಳಿ, ಶಿವಮೊಗ್ಗ ಘಟಕದ 500 ಆರ್‌ಹೆಚ್‌ಸಿ ಹಾಗೂ ಆರ್‌ಪಿಸಿ ರವರಿಗೆ ಕೆಎಸ್‌ಆರ್‌ಪಿ ಕಮಾಂಡೆಂಟ್ ಆದ ಎಸ್. ಯುವಕುಮಾರ್‌ರವರು ಹೊಸ ನೇವಿ ಬ್ಲೂ ಪೀಕ್ ಕ್ಯಾಪ್‌ನ್ನು ಎಲ್ಲಾ ಸಿಬ್ಬಂದಿಗಳಿಗೂ ವಿತರಿಸಿದರು. ಈ ಸಮಾರಂಭದಲ್ಲಿ ಡೆಪ್ಯೂಟಿ ಕಮಾಂಡೆಂಟ್ಎಸ್. ಚಂದ್ರಶೇಖರ್, ಹಾಗೂ ಸಹಾಯಕ ಕಮಾಂಡೆಂಟ್ ರಾಚಪ್ಪ ಬಿ. ಕಾಜಗಾರ, ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.