Wednesday, February 11, 2026
Wednesday, February 11, 2026
Home Blog Page 88

S.N.Chennabasappa ಶಿವಮೊಗ್ಗದಲ್ಲಿ ಹೆಚ್ಚುತ್ತಿರುವ ಮಾದಕ ವಸ್ತು ಬಳಕೆ,ನಾಗರಿಕರ ಮೇಲಿನ ನಿರಂತಹಲ್ಲೆಗಳ ಬಗ್ಗೆ ಗೃಹಸಚಿವರು & ಪೊಲೀಸ್ ಉನ್ನತ ಅಧಿಕಾರಿಗಳ ಗಮನಕ್ಕೆ ತಂದ ಶಾಸಕ ಚನ್ನಬಸಪ್ಪ

0

S.N.Chennabasappa ಶಿವಮೊಗ್ಗ ಮಹಾನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ ಗಂಭೀರವಾಗಿ ಹಾಳಾಗಿರುವ ಹಿನ್ನೆಲೆಯಲ್ಲಿ, ಇಂದು ಬೆಂಗಳೂರಿನಲ್ಲಿ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್, ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರು (DG ಮತ್ತು IGP) ಡಾ. ಎಂ.ಎ. ಸಲೀಮ್ ಹಾಗೂ ಅಪರ ಪೊಲೀಸ್ ಮಹಾ ನಿರ್ದೇಶಕರಾದ (ADGP) ಶ್ರೀ ಹಿತೇಂದ್ರ ಕುಮಾರ್ ಅವರನ್ನು ಶಾಸಕ ಚನ್ನಬಸಪ್ಪ ಭೇಟಿಯಾದರು.

ಜಿಲ್ಲಾ ಪೊಲೀಸ್ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿ ಕರ್ತವ್ಯ ನಿರ್ವಹಣೆಯ ಬಗ್ಗೆ ಶಿಸ್ತು ಕ್ರಮ ಕೈಗೊಳ್ಳಲು ಆಗ್ರಹಿಸಿದರು.

ಕಳೆದ ಎರಡು ವರ್ಷಗಳಿಂದ ನಗರದಲ್ಲಿ ನಾಗರಿಕರ ಮೇಲೆ ನಡೆಯುತ್ತಿರುವ ನಿರಂತರ ಹಲ್ಲೆಗಳು, ಮಾದಕ ವಸ್ತುಗಳ ಮಿತಿಮೀರಿದ ಬಳಿಕೆ ಮತ್ತು ಅಪರಾಧ ಕೃತ್ಯಗಳ ವಿಪರೀತ ಹೆಚ್ಚಳಕ್ಕೆ ಸಂಬಂಧಿಸಿದಂತೆ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್, ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರು (DG ಮತ್ತು IGP) ಡಾ. ಎಂ.ಎ. ಸಲೀಮ್ ಹಾಗೂ ಅಪರ ಪೊಲೀಸ್ ಮಹಾ ನಿರ್ದೇಶಕರಾದ (ADGP) ಶ್ರೀ ಹಿತೇಂದ್ರ ಕುಮಾರ್ಅವರೊಂದಿಗೆ ವಿಸ್ತೃತವಾಗಿ ಚರ್ಚಿಸಲಾಯಿತು. ಇತ್ತೀಚೆಗೆ ನಗರದ ನಿವಾಸಿಯಾದ ಶ್ರೀ ಹರೀಶ್ ಎಂಬುವರ ಮೇಲೆ ಮುಸಲ್ಮಾನ ಗೂಂಡಾಗಳಿಂದ ನಡೆದ ಹಲ್ಲೆ ಪ್ರಕರಣದ ಕುರಿತು ವಿಶೇಷವಾಗಿ ಗಮನ ಸೆಳೆದರು

ಶಾಸಕ ಚನ್ನಬಸಪ್ಪನವರ ಮನವಿಗೆ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್, ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರು (DG ಮತ್ತು IGP) ಡಾ. ಎಂ.ಎ. ಸಲೀಮ್ ಹಾಗೂ ಅಪರ ಪೊಲೀಸ್ ಮಹಾ ನಿರ್ದೇಶಕರಾದ (ADGP) ಶ್ರೀ ಹಿತೇಂದ್ರ ಕುಮಾರ್ ತಕ್ಷಣವೇ ಮತ್ತು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶಿವಮೊಗ್ಗದ ಕಾನೂನು ಸುವ್ಯವಸ್ಥೆಯ ಗಂಭೀರತೆಯನ್ನು ಮನಗಂಡು, ಶಿವಮೊಗ್ಗದ ಸುರಕ್ಷತೆ ಮತ್ತು ಸಾರ್ವಜನಿಕ ಶಾಂತಿಯ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿ, ತಕ್ಷಣದ ಕ್ರಮಕ್ಕೆ ಸೂಚಿಸಿದರು.

S.N.Chennabasappa ಈ ಹಿನ್ನೆಲೆಯಲ್ಲಿ, ಜಿಲ್ಲೆಯ ಕಾನೂನು ಸುವ್ಯವಸ್ಥೆಯ ವಾಸ್ತವ ಪರಿಸ್ಥಿತಿ ಮತ್ತು ಪೊಲೀಸ್ ಅಧಿಕಾರಿಗಳ ಕಾರ್ಯಕ್ಷಮತೆಯನ್ನು ಸಮಗ್ರವಾಗಿ ಪರಿಶೀಲಿಸಿ, ಅವಶ್ಯಕ ತಿದ್ದುಪಡಿ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ, ಪೂರ್ವ ವಲಯ, ದಾವಣಗೆರೆ ಐ.ಜಿ.ಪಿ (IGP) ಶ್ರೀ ರವಿ ಕಾಂತೇಗೌಡ ಐ.ಪಿ.ಎಸ್. ಅವರು ನಾಳೆ (ಗುರುವಾರ, ನವೆಂಬರ್ 20, 2025) ಶಿವಮೊಗ್ಗ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು. ಈ ಭೇಟಿಯ ಮೂಲಕ ಪೊಲೀಸ್ ಇಲಾಖೆಯಲ್ಲಿ ನಿರ್ಲಕ್ಷ್ಯಕ್ಕೆ ಶೂನ್ಯ ಸಹಿಷ್ಣುತಾ ನೀತಿಯನ್ನು ಜಾರಿಗೊಳಿಸಿ, ಹೊಣೆಗಾರಿಕೆ ಮತ್ತು ಶಿಸ್ತನ್ನು ಮರುಸ್ಥಾಪಿಸುವ ಭರವಸೆ ಇದೆ ಎಂದು ಶಾಸಕ ಚೆನ್ನಿ ನುಡಿದರು.

ಶಿವಮೊಗ್ಗದ ಅಭಿವೃದ್ಧಿ, ಸುರಕ್ಷತೆ, ಮತ್ತು ಗೌರವಕ್ಕಾಗಿ ಯಾವುದೇ ರಾಜಿ ಇಲ್ಲ. ಎಂತಹ ಸವಾಲು ಎದುರಾದರೂ, ಶಿವಮೊಗ್ಗ ನಗರಕ್ಕಾಗಿ ನಾವು ಸದಾ ಸಿದ್ಧ ಮತ್ತು ಬದ್ಧ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದ್ದಾರೆ.

CM Siddharamaiah ಮೌಢ್ಯ ಹೋಗಲಾಡಿಸಲು ಚಾಮರಾಜನಗರಕ್ಕೆ ಭೇಟಿ, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲೂ ಭದ್ರವಾಗಿರುತ್ತದೆ- ಸಿದ್ಧರಾಮಯ್ಯ

0

CM Siddharamaiah ಮೂಢನಂಬಿಕೆ ಮತ್ತು ಕಂದಾಚಾರಗಳನ್ನು ನಂಬುವುದಿಲ್ಲವಾದ್ದರಿಂದ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುತ್ತೇನೆ. ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಸಮಾನವಾಗಿ ಕಂಡು, ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಚಾಮರಾಜನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.

ನವೆಂಬರ್ ಕ್ರಾಂತಿ ಎನ್ನುವುದು ಮಾಧ್ಯಮಗಳ‌ ಸೃಷ್ಟಿ. ಈ ಬಗ್ಗೆ ಯಾರ ಹೇಳಿಕೆಗೂ ನಾನು ಪ್ರತಿಕ್ರಿಯೆ ನೀಡುವುದಿಲ್ಲ.
ಎಂದು ನವೆಂಬರ್ ಕ್ರಾಂತಿ ಯ ಬಗ್ಗೆ ಅಲ್ಲಗೆಳೆದರು .

ರಾಜ್ಯದಲ್ಲಿ ನಮ್ಮ ಪಕ್ಷವು ಐದು ವರ್ಷ ಆಡಳಿತ ನಡೆಸಲು ಜನಾದೇಶ ಇದೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ನವೆಂಬರ್ ಕ್ರಾಂತಿ ಎಂಬ ವಿಷಯವನ್ನು ಮಾಧ್ಯಮದವರೇ ಸೃಷ್ಟಿಸಿದರು. ಜನರ ಆಸೆಯಂತೆ ಐದು ವರ್ಷ ಸರ್ಕಾರ ನಡೆಸಿ ನಂತರವೂ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ.

ಐದು ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೀನ, ಇಲ್ಲವಾ ಎಂಬುದೇ ಅನಾವಶ್ಯಕ ಚರ್ಚೆ. ಎರಡೂವರೆ ವರ್ಷದ ನಂತರ ಸಂಪುಟ ಪುನರ್ ರಚನೆ ಮಾಡಬಹುದು ಎಂದು ತಿಳಿಸಿದ್ದ ನಂತರವಷ್ಟೇ ಮುಖ್ಯಮಂತ್ರಿ ಬದಲಾವಣೆಯ ವಿಷಯ ಮುನ್ನಲೆಗೆ ಬಂದಿರುವುದು. ಸಂಪುಟ ಪುನರ್ ರಚನೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಬೇಕಿದೆ. ಒಟ್ಟು 34 ಸಚಿವರ ಸ್ಥಾನವಿದ್ದು, ಅದರಲ್ಲಿ ಎರಡು ಸ್ಥಾನಗಳು ಖಾಲಿಯಿದೆ. ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಈ ಖಾಲಿ ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು.

ಬೆಂಗಳೂರಿನಲ್ಲಿ ನಡೆದ ಎಟಿಎಂ ವಾಹನ ದರೋಡೆ ಬಗ್ಗೆ ಸುಳಿವು ಸಿಕ್ಕಿದ್ದು, ಘಟನೆಗೆ ಬಳಸಿದ ಕಾರು ಪೊಲೀಸರಿಗೆ ದೊರಕಿದೆ. ಬ್ಯಾಂಕ್ ದರೋಡೆಯ ಅಪರಾಧಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು.

CM Siddharamaiah ರಾಜ್ಯದಲ್ಲಿ ಅಧಿಕ ಮಳೆಯುಂಟಾಗಿದ್ದು, ಅದರಿಂದ ಹಾನಿಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ ಪರಿಹಾರ ಕೇಳಲಾಗಿದೆ. ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ರೈತರು, ಕಾರ್ಖಾನೆ ಮಾಲೀಕರೊಂದಿಗೆ ನಡೆಸಿದ ಚರ್ಚೆಗಳ ಬಗ್ಗೆ ವಿವರಿಸಲಾಯಿತು. 11.25 ಇಳುವರಿಯಿರುವ ಕಬ್ಬು ಬೆಳೆಯ ಒಂದು ಟನ್ ಗೆ ( ಕಟಾವು ಮತ್ತು ಸಾಗಣೆ ವೆಚ್ಚ ಹೊರತುಪಡಿಸಿ) 3,300 ರೂ. ನೀಡುವ ತೀರ್ಮಾನಕ್ಕೆ ರೈತರು ಹಾಗೂ ಕಾರ್ಖಾನೆಯವರು ಸಮ್ಮತಿಸಿದ್ದಾರೆ ಎಂದು ಸಿದ್ಧರಾಮಯ್ಯ ತಿಳಿಸಿದರು.

ಸಾಮೂಹಿಕ ಮಾಧ್ಯಮಗಳು ಸಾಮಾಜಿಕ ಸುವ್ಯವಸ್ಥೆಗೂ ಸಾಧನವಾಗಬೇಕು- ಡಾ.ಹೆಚ್.ಬಿ.ಮಂಜುನಾಥ್.

0

ಸಮೂಹ ಮಾಧ್ಯಮಗಳು ಕೇವಲ ಮಾಹಿತಿ ಮನರಂಜನೆಗೆ ಬಳಕೆಯಾಗದೆ ಸಾಮಾಜಿಕ ಸುವ್ಯವಸ್ಥೆಗೆ ಸಾಧನವಾಗಬೇಕು ಎಂದು ಹಿರಿಯ ಪತ್ರಕರ್ತ ಡಾ. ಎಚ್ ಬಿ ಮಂಜುನಾಥ ಆಶಯ ವ್ಯಕ್ತಪಡಿಸಿದರು.

ದಾವಣಗೆರೆ ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಸಮಾಜಶಾಸ್ತ್ರ ಉಪನ್ಯಾಸಕರುಗಳಿಗಾಗಿ ಏರ್ಪಾಡಾಗಿದ್ದ ಪುನಶ್ಚೇತನ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ‘ಸಾಮಾಜಿಕ ವ್ಯವಸ್ಥೆಯಲ್ಲಿ ಸಮೂಹ ಮಾಧ್ಯಮಗಳ ಪಾತ್ರ’ ಎಂಬ ವಿಷಯವಾಗಿ ಮಾತನಾಡುತ್ತಾ ವ್ಯಕ್ತಿ ಗುಂಪು ಹಾಗೂ ಸಂಸ್ಥೆಗಳ ನಡುವಿನ ರಚನಾತ್ಮಕ ಸಂಬಂಧಗಳಿಂದ ಆಗುವ ಜಾಲಕ್ಕೆ ಸಮೂಹ ಮಾಧ್ಯಮಗಳು ಪೂರಕವಾಗಿ ಸ್ಪಂದಿಸಬೇಕಿದೆ, ಇದು ಸಮಾಜದ ಸುಸಂಘಟಿತ ಕಾರ್ಯನಿರ್ವಹಣೆಗೆ ಅವಶ್ಯ, ಈ ಪ್ರಕ್ರಿಯೆಯಲ್ಲಿ ಅನೂಚಾನವಾಗಿ ಬಂದ ನಂಬಿಕೆಗಳು ರೂಢಿಗಳಿಗೆ ಘಾಸಿಯಾಗದಂತೆ ನಾಗರೀಕತೆ ಸಂಸ್ಕೃತಿ ಹಾಗೂ ಸಂಸ್ಕಾರಗಳ ಮಹತ್ವವನ್ನು ಮನದಟ್ಟು ಮಾಡುವ ಮೂಲಕ ಕುಟುಂಬ ಸಮುದಾಯ ಊರು ಗ್ರಾಮ ನಗರ ದೇಶ ಪ್ರಪಂಚ ಹಂತದವರೆಗೂ ವ್ಯವಸ್ಥೆಯ ಸುಧಾರಣೆಯಲ್ಲಿ ಸಮೂಹ ಮಾಧ್ಯಮಗಳ ಬಳಕೆಯಾಗಬೇಕಿದೆ ಎಂಬುದನ್ನು ಅಂಕಿ ಅಂಶ ಹಾಗೂ ಉದಾಹರಣೆಗಳ ಸಹಿತ ವಿವರಿಸುತ್ತಾ ಈ ನಿಟ್ಟಿನಲ್ಲಿ ಸಮಾಜ ಶಾಸ್ತ್ರ ಉಪನ್ಯಾಸಕರುಗಳು ವಿಶೇಷವಾಗಿ ಸ್ವಯಂ ಸಿದ್ಧಗೊಂಡು ಪಠ್ಯೇತರವಾಗಿ ವಿದ್ಯಾರ್ಥಿಗಳಿಗೆ ತಿಳಿಸುವ ಕುರಿತಾಗಿಯೂ ವಿವರಿಸಿದರು.

ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಏರ್ಪಾಡಾಗಿದ್ದ ಪುನಶ್ಚೇತನ ಕಾರ್ಯಾಗಾರದ ಸಂಚಾಲಕ ಜಿ ಎಂ ಸಂಗಮೇಶ್ವರಪ್ಪ ಉಪಸ್ಥಿತಿಯಲ್ಲಿ ಉಪನ್ಯಾಸಕ ಪಾಲಾಕ್ಷಿ ಸ್ವಾಗತ ಕೋರುತ್ತಾ ಪರಿಚಯ ಭಾಷಣ ಮಾಡಿದರು. ನಗರ ಹಾಗೂ ಜಿಲ್ಲೆಯ ಎಲ್ಲ ತಾಲೂಕುಗಳಿಂದ ಆಗಮಿಸಿದ್ದ ಸರ್ಕಾರಿ ಪದವಿಪೂರ್ವ ಕಾಲೇಜು ಸಮಾಜಶಾಸ್ತ್ರ ಉಪನ್ಯಾಸಕರುಗಳು ಭಾಗವಹಿಸಿದ್ದರು.

ಡಿಸೆಂಬರ್ 13. ಗಾಜನೂರು ನವೋದಯ ಶಾಲಾ ಆರನೇ ತರಗತಿಗೆ ಪ್ರವೇಶಾತಿ ಪರೀಕ್ಷೆ

0

ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿಗಾಗಿ ಪ್ರವೇಶ ಪರೀಕ್ಷೆಯನ್ನು ಡಿ. 13ರಂದು ನಡೆಸಲಾಗುತ್ತಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು www.navodaya.gov.in ವೆಬ್‌ಸೈಟ್ ಮೂಲಕ ಪ್ರವೇಶ ಪತ್ರವನ್ನು ಪಡೆದುಕೊಂಡು ಪರೀಕ್ಷೆಗೆ ಹಾಜರಾಗುವಂತೆ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿರುತ್ತಾರೆ.

ಅಪರಚಿತ ಶವಪತ್ತೆ.ಶಿವಮೊಗ್ಗ ರೈಲ್ವೆ ಪೊಲೀಸ್ ಮಾಹಿತಿ ಪ್ರಕಟಣೆ

0

ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಶಿವಮೊಗ್ಗ ಮತ್ತು ಕುಂಸಿ ರೈಲು ನಿಲ್ದಾಣಗಳ ಮಧ್ಯೆ ಬರುವ ರೈಲ್ವೆ ಕಿ.ಮೀ.ನಂ.-64/800-900ರಲ್ಲಿ ದಿ: 20/04/2025 ರಂದು ಸುಮಾರು 50 ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ಶವವು ಪತ್ತೆಯಾಗಿದ್ದು, ವ್ಯಕ್ತಿಯ ಹೆಸರು, ವಿಳಾಸ, ವಾರಸುದಾರರ ಬಗ್ಗೆ ಯಾವುದೇ ಸುಳಿವು ಇರುವುದಿಲ್ಲ.
ಮೃತ ವ್ಯಕ್ತಿ ಚಹರೆ 5.4 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಡುಗೋಧಿ ಮೈಬಣ್ಣ, ಕೋಲುಮುಖ ಹೊಂದಿದ್ದು, ಹಿಂದು ಮತಸ್ಥನಂತೆ ಕಂಡು ಬರುವ ಈತನ ಮೈಮೇಲೆ ಕಡು ಗುಲಾಬಿ ಬಣ್ಣದ ಶರ್ಟ್ ಮತ್ತು ಕಪ್ಪು-ಬಿಳಿ ಬಣ್ಣದ ಲುಂಗಿ ಧರಿಸಿರುತ್ತಾರೆ.
ಈ ಚಹರೆಯುಳ್ಳ ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಎಸ್.ಐ.ರವರನ್ನು ಖುದ್ದಾಗಿ ಅಥವಾ ದೂ.ಸಂ.: 08182-222974/ 948082124 ನ್ನು ಸಂಪರ್ಕಿಸುವಂತೆ ರೈಲ್ವೆ ಪೊಲೀಸ್ ತಿಳಿಸಿದೆ.

Radio Shimoga ಮಕ್ಕಳ ದಿನ ,ರೇಡಿಯೊ ಶಿವಮೊಗ್ಗದಲ್ಲಿ ಮಕ್ಕಳೇ ಆರ್ ಜೆ. ಗಳಾಗಿ ಮಿಂಚಿದರು

0

Radio Shimoga ರೇಡಿಯೋ ಶಿವಮೊಗ್ಗ 90.8ಎಫ್.ಎಂ ವತಿಯಿಂದ ಮಕ್ಕಳ ದಿನಾಚರಣೆಯ ಅಂಗವಾಗಿ ನವಂಬರ್-14 ರಂದು ಇಡೀ ದಿನದ ಸಂಪೂರ್ಣ ಕಾರ್ಯಕ್ರಮಗಳು ಮಕ್ಕಳಿಂದಲೇ ಮೂಡಿಬಂದಿತು ಇದು ದೇಶದಲ್ಲಿಯೇ ಮೊಟ್ಟಮೊದಲ ಬಾರಿಗೆ ‘ಜೂನಿಯರ್ ಆರ್.ಜೆ’ ಹೆಸರಿನ ಮಕ್ಕಳಿಗಾಗಿಯೇ ಸಿದ್ಧಪಡಿಸಿದ ವಿಭಿನ್ನ ಕಾರ್ಯಕ್ರಮವಾಗಿತ್ತು. ಬೆಳಗ್ಗೆ 6 ರಿಂದ ರಾತ್ರಿ 8 ಘಂಟೆಯವರೆಗೂ ನಡೆಯುವ ಎಲ್ಲಾ ಕಾರ್ಯಕ್ರಮಗಳು, ಜಾಗೃತಿಯ ಕಾರ್ಯಕ್ರಮಗಳು, ನೇರಪ್ರಸಾರ, ಸುದ್ಧಿ ಸಮಾಚಾರ ಹೀಗೆ ಎಲ್ಲವನ್ನೂ ಮಕ್ಕಳೇ ನಡೆಸಿಕೊಟ್ಟರು.

ಶಿವಮೊಗ್ಗ, ಬೆಂಗಳೂರು, ಹಾವೇರಿ, ತುಮಕೂರು, ದಾವಣಗೆರೆ, ಚಿಕ್ಕಮಗಳೂರು ಹೀಗೆ ವಿವಿಧ ಜಿಲ್ಲೆಯ ೩೫ ಕ್ಕೂ ಹೆಚ್ಚಿನ ಮಕ್ಕಳು ‘ಜೂನಿಯರ್ ಆರ್.ಜೆ’ ಗಳಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಒಟ್ಟಾರೆಯಾಗಿ ೩೫ ಕ್ಕೂ ಹೆಚ್ಚಿನ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಯ ಕಿರಿಯ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು ಸೇರಿ ಇಡೀ ದಿನದ ಎಲ್ಲಾ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು ಜೊತೆಗೆ ಕಾರ್ಯಕ್ರಮಗಳ ಮಧ್ಯೆ ಪ್ರಸಾರ ಆಗುವ ಹಲವು ಹಾಡುಗಳನ್ನು ಮಕ್ಕಳೇ ಹಾಡಿದ್ದರು.

ಇದು ಮಕ್ಕಳಲ್ಲಿ ರೇಡಿಯೋ ಬಗ್ಗೆ ಅಭಿರುಚಿ, ಆಸಕ್ತಿಯನ್ನು ಮೂಡಿಸುವ ಕಾರ್ಯವಾಗಿತ್ತು. ಮಕ್ಕಳ ಪ್ರತಿಭೆಗೊಂದು ಅವಕಾಶವನ್ನು ರೇಡಿಯೋ ಶಿವಮೊಗ್ಗ ನೀಡಿತ್ತು. ಕಾರ್ಯಕ್ರಮದ ಸಂಯೋಜಕರು, ಆರ್.ಜೆ ಗಳು ಎಲ್ಲಾ ಮಕ್ಕಳಿಗೆ ಮಾರ್ಗದರ್ಶನ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಎಲ್ಲಾ ಮಕ್ಕಳನ್ನು ಸಜ್ಜುಗೊಳಿಸಿದ್ದರು.

ಒಂದು ದಿನದ ಸಂಪೂರ್ಣ ಕಾರ್ಯಕ್ರಮವನ್ನು ಮಕ್ಕಳೇ ನಡೆಸಿಕೊಟ್ಟಿರುವುದು ಇದೊಂದು ದಾಖಲೆಯ ಕಾರ್ಯಕ್ರಮವಾಗಿದೆ. ಇದಕ್ಕೆ ಸಹಕರಿಸಿದ ಮಕ್ಕಳ ಪೋಷಕರು, ಶಾಲೆಯ ಶಿಕ್ಷಕರ ಸಹಕಾರ, ರೇಡಿಯೋ ಕೇಂದ್ರದ ಆರ್.ಜೆ ಗಳಾದ ಅರ್ಪಿತ, ಮಹಾಲಕ್ಷ್ಮಿ, ಪವಿತ್ರದಿನೇಶ್, ಶ್ವೇತ, ಶ್ರೀಧರ್, ರಕ್ಷಿತಹೊಳ್ಳ, ದಿನೇಶ್ ಹೊಸನಗರ, ಶ್ರೀಕಾಂತ್ ಇವರುಗಳು ಮಕ್ಕಳನ್ನು ಎಲ್ಲಾ ಕಾರ್ಯಕ್ರಮಕ್ಕೆ ಸಜ್ಜುಗೊಳಿಸಿದ್ದರು.

ನಿಲಯದ ಸಂಯೋಜಕರಾದ ಗುರುಪ್ರಸಾದ್ ಮತ್ತು ನಿಲಯದ ನಿರ್ದೇಶಕರಾದ ಜನಾರ್ಧನ್ ಜಿ.ಎಲ್ ಮತ್ತು ಕಾರ್ಯಕ್ರದ ಸಂಯೋನಾಧಿಕಾರಿ ಚೇತನ್ ಕುಮಾರ್ ಸಿ ಇವರುಗಳ ಮುಂದಾಳತ್ವದಲ್ಲಿ, ಕಛೇರಿ ಸಿಬ್ಬಂದಿಗಳ ನೆರವಿನಿಂದ ಕಾರ್ಯಕ್ರಮ ಯಶಸ್ವಿಯಾಯಿತು.

Radio Shimoga ದಿನದ ಆರಂಭದ ದಿನಚರಿಯನ್ನು ಜೂನಿಯರ್ ಆರ್.ಜೆ ಪೂಜಾ.ಡಿ.ಜಿ, ಚಂದನ್.ಡಿ.ಜಿ, ‘ಅರುಣೋದಯ’ ಈ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ಅಬ್ಧಿ ಆರ್ ನಾಡಿಗ್, ‘ಗಾಂಧಿಓದು’ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ಮೇಘನಾ.ಎ.ಬಿ, ‘ವಚನ ವಿಹಾರ’ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ಪ್ರಯಾಗ್.ಡಿ.ಹೆಚ್, ಸಾನ್ವಿ ಪಿ ದೇವಾಡಿಗ ಮತ್ತು ಸಂಸ್ಕöÈತಿ, ಜೂನಿಯರ್ ಆರ್.ಜೆ ಖುಷಿ ಮತ್ತು ಕೃತಿಕಾ ‘ಮಂಕುತಿಮ್ಮನಕಗ್ಗ’ ದ ವಾಚನ ಮತ್ತು ನಿರೂಪಣೆಯನ್ನು, ಜೂನಿಯರ್ ಆರ್.ಜೆ ನಮಿತಾ ಮತ್ತು ಸನ್ನಿಧಿ ಇವರುಗಳ ಕಥೆಯನ್ನು, ಯೋಗದ ಮಹತ್ವವನ್ನು ಜ್ಞಾನಶ್ರೀ ಸನ್ನಿಧಿ ‘ದಿನದ ವಿಶೇಷ’ ಸುದ್ಧಿಸಮಾಚಾರವನ್ನು ಜೂನಿಯರ್ ಆರ್.ಜೆ ರಮ್ಯಾ, ‘ಪರಿಸರ ಪರಿಚಯ’ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ಇಂಪನ.ಎಂ.ವಿ ಇವರು ಪರಿಸರ ಮಾಲಿನ್ಯದ ಬಗ್ಗೆ, ‘ಟ್ರಾವೆಲ್ಲರ್ ಸ್ ಡೈರೀ’ ಕಾರ್ಯಕ್ರಮವನ್ನು ಬಸರೀಕಟ್ಟೆಯಿಂದ ಜೂನಿಯರ್ ಆರ್.ಜೆ ರುಚಿರ ಜೂನಿಯರ್ ಆರ್.ಜೆ ಆದ್ಯಾ ಆರ್ ಕಷ್ಯಪ್, ಕುಣಿಗಲ್ ನ ಜೂನಿಯರ್ ಆರ್.ಜೆ ಚೆಂದನ್.ಡಿ.ಜಿ, ‘ಸಾಹಿತ್ಯಲೋಕ’ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ಆಲಾಪನ, ‘ಬಿಂದಾಸ್ ಮಾರ್ನಿಂಗ್’ ನೇರಫೋನ್ ಇನ್ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ಗಳಾದ ಅಬ್ಧಿ ಆರ್ ನಾಡಿಗ್, ಸೃತಿ ಭಾರಧ್ವಾಜ್ ನಡೆಸಿಕೊಟ್ಟರು. ‘ಸೋಶಿಯಲ್ ಮೀಡಿಯಾ ಕಥೆಗಳು’ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ಕರಣ್ ನಡೆಸಿಕೊಡಲಿದ್ದಾರೆ.

‘ಅಂಬೇಡ್ಕರ್‌ಓದು’ ಕಾರ್ಯಕ್ರಮವನ್ನು ಹಾವೇರಿಯ ಜೂನಿಯರ್ ಆರ್.ಜೆ ಲಿಖಿತ, ‘ಅಡುಗೆಮನೆಯಲ್ಲೊಂದು ಸುತ್ತು’ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ಆರೋಹಣ, ಸ್ಥಳೀಯ ಸುದ್ಧಿಗಳನ್ನು ತಿಳಿಸುವ ‘ಸುತ್ತಮುತ್ತಾ’ ಸುದ್ಧಿ ಸಮಾಚಾರವನ್ನು ಜೂನಿಯರ್ ಆರ್.ಜೆ ಸಮನ್ವಿತ, ಪಂಚತಂತ್ರ ಕಥೆಯನ್ನು ಜೂನಿಯರ್ ಆರ್.ಜೆ ವೈಷ್ಣವಿ, ವಿಜ್ಞಾನದ ವಿಶೇಷತೆಯ ಜಾಣಸುದ್ದಿ ಬಗ್ಗೆ ಜೂನಿಯರ್ ಆರ್.ಜೆ ವಚನ.ಎಂ.ಬಿ, ಕಾಫಿ ವಿತ್ ಆರ್ ಜೇಸ್, ಸಿನಿಕಹಾನಿ ನೇರ ಫೋನ್‌ಇನ್ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ಗಳಾದ ದಿಶಾ.ಪಿ, ಪ್ರಯಾಗ್ ಮತ್ತು ಪರ್ಣವಿ ಇವರುಗಳು ನಡೆಸಿಕೊಟ್ಟರು.

‘ನಮ್ಮ ನಡಿಗೆ ಪರಿಹಾರದ ಕಡೆಗೆ’ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ಜೀವಿತ ಮೌನೇಶ್, ‘ವಿಸ್ಮಯಜಗತ್ತು’ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ನಿತಿನ್ ಸಾಸ್ವೆಹಳ್ಳಿ, ‘ಬ್ಯುಜಿನೆಜ್ ಬಝ್’ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ.ಸೃತಿ ಭಾರಧ್ವಾಜ್, ‘ನಿಮ್ಮ ಕೃಷಿ ನಮ್ಮ ಖುಷಿ’ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ಪರ್ಣವಿ, ವಿಜ್ಞಾನಿ, ಕೂತುಹಲ ಸಂಗತಿ ಬಗ್ಗೆ ಜೂನಿಯರ್ ಆರ್.ಜೆ ಸಿರಿ.ಎ.ಎಸ್, ಪೇಟೆ ಸಂಚಾರ ಸುದ್ಧಿ ಸಮಾಚಾರವನ್ನು ಜೂನಿಯರ್ ಆರ್.ಜೆ ಅಭಿಜ್ಞ ಭಟ್, ಆವಿಷ್ಕಾರದ ಅಸ್ಮಿತೆ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ಪ್ರಣವ್.ಡಿ.ಹೆಚ್ ಇವರುಗಳು ನಡೆಸಿಕೊಟ್ಟರು. ಇದರಲ್ಲಿ ಕೆಲವು ಆಗಾಗ ನಾವು ಬಂದು ಕಾರ್ಯಕ್ರಮವನ್ನು ಕೊಡುತ್ತೇವೆ.

ನಮಗೂ ಮಾತನಾಡಲು ಒಂದಿಷ್ಟು ಧೈರ್ಯವು ಮೂಡಿದೆ. ಜೊತೆಗೆ ಇಲ್ಲಿಯ ಕಾರ್ಯವು ನಮಗೆ ಖುಷಿ ಕೊಟ್ಟಿದೆ. ಎಂದು ಮಕ್ಕಳು ಹೇಳುವಾಗ ಕಾರ್ಯಕ್ರಮ ಆಯೋಜನೆ ಮಾಡಿದ್ದು ಸಾರ್ಥಕ ಎನ್ನುವ ಭಾವ ನಮ್ಮೆಲ್ಲರಲ್ಲಿ…
ಜನಾರ್ಧನ್.ಜಿ.ಎಲ್
ನಿಲಯದ ನಿರ್ದೇಶಕರು
ರೇಡಿಯೋ ಶಿವಮೊಗ್ಗ 90.8ಎಫ್.ಎಂ, ಶಿವಮೊಗ್ಗ ಅವರು ಹೇಳಿದ್ದಾರೆ.

ಬಯಲು ಬಸವಣ್ಣನಿಗೆ ಸಂಭ್ರಮದ ಕಾರ್ತೀಕ ದೀಪೋತ್ಸವ

0

ಬಯಲು ಬಸವಣ್ಣನಿಗೆ ಕಾರ್ತಿಕ ದೀಪೋತ್ಸವ ಶಿವಮೊಗ್ಗ ಮಹಾನಗರ ಪಾಲಿಕೆಯ ಆವರಣದಲ್ಲಿರುವ ಪುರಾತನ ಪ್ರಸಿದ್ಧ ಬಯಲು ಬಸವಣ್ಣನಿಗೆ’ ಪ್ರತಿವರ್ಷದಂತೆ ಈ ವರ್ಷವೂ ಸಹ ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕಿ ಶ್ರೀಮತಿ ರೇಖಾ ರಂಗನಾಥ್ ರವರ ಕುಟುಂಬಸ್ಥರು ಕಾರ್ತಿಕ ದೀಪೋತ್ಸವ ಮತ್ತು ವಿಶೇಷ ಪೂಜೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಹೆಚ್ ಸಿ ಯೋಗೇಶ್ , ಮಾಜಿ ಮೇಯರ್ ನಾಗರಾಜ್ ಕಂಕಾರಿ , ಮಾಜಿ ಉಪಮೇಯರ್ ಹೆಚ್ ಪಾಲಾಕ್ಷಿ, ಮಾಜಿ ಪಾಲಿಕೆ ಸದಸ್ಯರಾದ ಧೀರಜ್ ಹೋನ್ನವಿಲೆ ಸೂಡ ಸದಸ್ಯರಾದ ಎಂ ಪ್ರವೀಣ್ ಕುಮಾರ್, ಹಾಪ್ ಕಾಮ್ಸ್ ನಿರ್ದೇಶಕ ಶರತ್ ಮರಿಯಪ್ಪ, ಸಿಟಿ ಕೋ ಆಪರೇಟಿವ್ ಬ್ಯಾಂಕ್ ಖಜಾಂಚಿ ಬಿ ಲೋಕೇಶ್ ಯುವ ಕಾಂಗ್ರೆಸ್ ಮುಖಂಡ ಹೆಚ್‍.ಪಿ. ಗಿರೀಶ್, ಪಂಚ ಗ್ಯಾರಂಟಿ ಸದಸ್ಯ ಎಸ್ ಬಸವರಾಜ್ ಪ್ರಮುಖರಾದ ಪುಷ್ಪಕ್ ಕುಮಾರ್, ವಿಜಯ್, ಎಂ.ರಾಕೇಶ್, ಕೆ. ಎಲ್ ಪವನ್ ಮಹೇಂದ್ರ ಜೈನ್ , ಮುಕೇಶ್ , ಮಿಥುನ್ , ಅಕ್ಷಯ್ ,ಹಾಗೂ ಇತರರು ಇದ್ದರು

Karnataka State Roller Institute ಸ್ಕೇಟಿಂಗ್ ಪಂದ್ಯಾವಳಿ. ರಾಷ್ಟ್ರಮಟ್ಟಕ್ಕೆ ಶಿವಮೊಗ್ಗದ ಹಿತಾ ಪ್ರವೀಣ್ ಆಯ್ಕೆ

0

Karnataka State Roller Institute ಕರ್ನಾಟಕ ರಾಜ್ಯ ರೋಲರ್ ಸಂಸ್ಥೆ ನಡೆಸಿದ ರಾಜ್ಯ ಮಟ್ಟದ ಸ್ಕಂಟಿಂಗ್ ಆಯ್ಕೆ ಸ್ಪರ್ಧೆಯಲ್ಲಿ ನಮ್ಮ ಶಿವಮೊಗ್ಗ ರೋಲರ್ ಸ್ಕಂಟಿಂಗ್ ಅಸೋಸಿಯೇನ್ ನ ಕ್ರೀಡಾಪಟು ಹಿತಾ 2 ಬೆಳ್ಳಿ ಪದಕ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ಹಿತಾ ಪ್ರವೀಣ್
6-8 ವಯೋಮಿತಿಯ ಸ್ಪರ್ಧೆಯಲ್ಲಿ ಬಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ಹಿತಾ ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ನಮ್ಮ ಶಿವಮೊಗ್ಗ ಸ್ಕೇಟಿಂಗ್ ಸಂಸ್ಥೆಯ ತರಬೇತುದಾರರಾದ ವಿಶ್ವಾಸ್ ಹಾಗು ಆತೀಶ್ ರವರಿಂದ ಕಲಿಯುತ್ತಿದ್ದಾರೆ.
ಸೌಮ್ಯ ಹಾಗು ಪ್ರವೀಣ್ ದಂಪತಿಯ ಪುತ್ರಿಯಾದ ಹಿತಾ ಸಾಧನೆಗೆ ನಮ್ಮ ಶಿವಮೊಗ್ಗ ಸ್ಕೇಟಿಂಗ್ ಸಂಸ್ಥೆ ಅಭಿನಂದಿಸಿದೆ

ಶಬರಿಮಲೈ ಯಾತ್ರಿಕರಿಗೆ ಆರೋಗ್ಯ ಸುರಕ್ಷಾ ಕ್ರಮ, ಸರ್ಕಾರದಿಂದ ಮುಂಜಾಗ್ರತಾ ಮಾರ್ಗಸೂಚಿ ಪ್ರಕಟಣೆ

0

ಶಿವಮೊಗ್ಗ ಜಿಲ್ಲೆಯಿಂದ ಕೇರಳ ರಾಜ್ಯದ ಶಬರಿಮಲೈಗೆ ತೆರಳುವ ಯಾತ್ರಿಕರಿಗೆ ಮಿದುಳು ತಿನ್ನುವ ಅಮೀಬಾ(ನೇಗ್ಲೇರಿಯಾ ಫೌಲೇರಿ) ಕುರಿತು ಮುನ್ನೆಚ್ಚರಿಕೆ ವಹಿಸಲು ಹಾಗೂ ಸೋಂಕು ತಡೆಯಲು ರಾಜ್ಯ ಸರ್ಕಾರದ ಮಾರ್ಗಸೂಚಿಯನ್ವಯ ಈ ಕೆಳಕಂಡಂತೆ ಸುರಕ್ಷತೆ ಕ್ರಮಗಳನ್ನು ಪಾಲಿಸಲು ಸೂಚಿಸಲಾಗಿದೆ.
ನೇಗ್ಲೇರಿಯಾ ಫೌಲೇರಿ (Naegleria Fowleri) ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಉದಾಹರಣೆ:- ನಿಂತ ನೀರು, ಕೊಳ/ಈಜುಕೊಳಗಳು ಹಾಗೂ ಕೆರೆ. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ.

ನೇಗ್ಲೇರಿಯಾ ಫೌಲೇರಿ (Naegleria Fowleri) ಅತ್ಯಂತ ವಿಷಕಾರಿ (Virulent) ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ (Amoebic Meningoencephalitis) ಎನ್ನುವ ಅಪರೂಪದ ಗಂಭೀರ/ಮಾರಣಾಂತಿಕ ಕಾಯಿಲೆಯನ್ನು ಉಂಟುಮಾಡುತ್ತದೆ. ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ಮೂಗಿಗೆ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್ ಗಳನ್ನು ಬಳಸಿ ಅಥವಾ ನಿಮ್ಮ ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿದು, ಮುನ್ನಚ್ಚರಿಕೆ ವಹಿಸುವುದು,

ಮೈಸೂರಿನಲ್ಲಿ ಒಡಿಸ್ಸಿ ನೃತ್ಯೋತ್ಸವ-2025.ನಾಡಿನ ಶ್ರೇಷ್ಠ ನೃತ್ಯ ಕಲಾವಿದರು ಭಾಗಿ- ಪೃಥೆ ಹವಾಲ್ದಾರ್

0

ಸಾಂಸ್ಕೃತಿಕ ನಗರಿ ಎಂದೆನಿಸಿಕೊಂಡಿರುವ ಮೈಸೂರನಲ್ಲಿ ಕಳೆದ ಇಪ್ಪತ್ತೊಂಭತ್ತು ವರ್ಷಗಳಿಂದ ಒಡಿಸ್ಸಿ ನೃತ್ಯ ಕಲೆÀಯನ್ನು ಪರಿಚಯಿಸುತ್ತಾ, ನೃತ್ಯ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿರುವ ರುದ್ರ ನೃತ್ಯಯೋಗ ಶಾಲೆಯ ನೃತ್ಯಗುರು ಸಿಂಧು ಕಿರಣ್‌ರವರು, ಈಗ ನಾಲ್ಕನೇ ಆವೃತ್ತಿಯ ಮೈಸೂರು ಒಡಿಸ್ಸಿ ಉತ್ಸವವನ್ನು ಸಂಘಟಿಸಿದ್ದಾರೆ ಎಂದು ಗುರು ಸಿಂಧು ಕಿರಣ್‌ರವರ ಶಿಷ್ಯೆ-ನೃತ್ಯ ಕಲಾವಿದೆ ಪೃಥೆ ಹವಾಲ್ದಾರ್ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನ.23, 2025 ರಂದು ಮೈಸೂರು ವಿಜಯ ನಗರದಲ್ಲಿನ ಪ್ರತಿಷ್ಟಿತ ಜಗನ್ನಾಥ್ ಸೆಂಟರ್ ಆರ್ಟ್ ಅಂಡ್ ಕಲ್ಚರ್ (ಜೆಸಿಎಸಿ), ವೇದಿಕೆಯಲ್ಲಿ ಸಂಜೆ 05;30ಕ್ಕೆ ಈ ಮೈಸೂರು ಒಡಿಸ್ಸಿ ಉತ್ಸವವನ್ನು ಆಯೋಜಿಸಲಾಗಿದ್ದು, ಈ ಉತ್ಸವದಲ್ಲಿ ನಾಡಿನ ಹೆಸರಾಂತ ಒಡಿಸ್ಸಿ ನೃತ್ಯ ಕಲಾವಿದರು ಪಾಲ್ಗೊಳ್ಳುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ, ಮೈಸೂರಿನ ಶ್ರೀ ಕೃಷ್ಣ ಗಾನ ಸಭಾದ ಅಧ್ಯಕ್ಷರಾದ ಶ್ರೀ ಶ್ರೀಧರ ರಾಜ್ ಅರಸ್, ಮೈಸೂರಿನ ಪುರಿ ಜಗನ್ನಾಥ ಸಾಂಸ್ಕೃತಿಕ ಮತ್ತು ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಶ್ರೀ ಘನಶ್ಯಾಮ್, ಮೈಸೂರು ಯೋಗ ಒಕ್ಕೂಟದ ಕಾರ್ಯಾಧ್ಯಕ್ಷ ಡಾ. ಬಿ. ಪಿ. ಮೂರ್ತಿ, ಒಡಿಸ್ಸಿ ನೃತ್ಯ ಕಲಾವಿದರು ಹಾಗೂ ಆರಿಯಾಧನಾ -ಫೌಂಡೇಶನ್ ನಿರ್ದೇಶಕರೂ ಆದ ಶ್ರೀಮತಿ ಕೆ. ಜ್ಯೋತಿರ್ಮಯಿ ಪಟ್ನಾಯಕ್, ಮೈಸೂರಿನ ಪ್ರಸಿದ್ಧ ನೃತ್ಯ ಕಲಾವಿದರಾದ ಶ್ರೀ ಬದರಿ ದಿವ್ಯಭೂಷಣ ಪಾಲ್ಗೊಳ್ಳಲಿದ್ದಾರೆ ಎಂದ ಅವರು, ಮೈಸೂರು ಓಡಿಸ್ಸಿ ಉತ್ಸವ 2025 ಅನ್ನು ಪುರಿ ಜಗನ್ನಾಥ್ ಸಾಂಸ್ಕೃತಿಕ ಮತ್ತು ಕಲ್ಯಾಣ ಸಮಾಜದ ಅಧ್ಯಕ್ಷರಾದ ಶ್ರೀ ಘನಶ್ಯಾಮ ಪ್ರಧಾನ್, ಅಸ್ಸಾಂನ ಕಾಜಿರಂಗಾ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಪ್ರಶಾಂತ ಕುಮಾರ ಮಿಶ್ರ, ಮೈಸೂರಿನ ಮನಸ್ಥಳ ಮೈಂಡ್ – ಲಿವಿಂಗ್ ಹಾಗೂ ರುದ್ರ ನೃತ್ಯ ಯೋಗ ಶಾಲಾ ಪರಿವಾರ ಮತ್ತು ವಿದ್ಯಾರ್ಥಿಗಳೊಂದಿಗೆ ನೃತ್ಯ ಗುರು ಸಿಂಧು ಕಿರಣ್ ಆಯೋಜಿಸಿದ್ದಾರೆ ಎಂದರು.
ಗುರು ಸಿಂಧು ಕಿರಣ್‌ರವರು, ಮೈಸೂರಿನ ಗೋಕುಲಂನಲ್ಲಿ ನೃತ್ಯ ತರಗತಿಗಳನ್ನು ನಡೆಸುತ್ತಿದ್ದು, ಕಳೆದ ಇಪ್ಪತ್ತೊಂಬತ್ತು ವರ್ಷಗಳಿಂದ ನೃತ್ಯ ವಿದ್ಯಾರ್ಥಿಗಳಿಗೆ ಒಡಿಸ್ಸಿ ಪರಂಪರೆಯನ್ನು ಪರಿಚಯಿಸುತ್ತಿದ್ದಾರೆ. ಇವರು ಪದ್ಮಭೂಷಣ ಗುರು ಕೇಳುಚರಣ್ ಮಹಾಪಾತ್ರ, ಶ್ರೀಮತಿ ಪ್ರೋತಿಮಾ ಗೌರಿ ಬೆಡಿ ಮತ್ತು ಗುರು ರತಿಕಾಂತ್ ಮಹಾಪಾತ್ರ ಅವರ ಶಿಷ್ಯೆ. ಸಿಂಧು ಕಿರಣ್‌ರವರು, ನೃತ್ಯ ವಿನ್ಯಾಸಕಿಯಾಗಿ, ಕಲಾವಿದೆಯಾಗಿ, ನೃತ್ಯಗುರುವಾಗಿ, ಸಂಪನ್ಮೂಲ ವ್ಯಕ್ತಿಯಾಗಿ ದೇಶ ವಿದೇಶಗಳ ಪ್ರತಿಷ್ಟಿತ ವೇದಿಕೆಗಳಲ್ಲಿ, ನೃತ್ಯೋತ್ಸವಗಳಲ್ಲಿ ಒಡಿಸ್ಸಿ ನೃತ್ಯ ಪ್ರದರ್ಶಿಸಿ, ಶ್ರೇಷ್ಟ ಪರಂಪರೆ ಪ್ರಬಂಧ ಮಂಡಿಸಿ ಗಮನ ಸೆಳೆದಿದ್ದಾರೆ ಎಂದು ಗುರುವಿನ ಪರಿಚಯ ಮಾಡಿಕೊಟ್ಟ ಅವರು, ಮೈಸೂರಿನಲ್ಲಿ ಒಡಿಸ್ಸಿಯನ್ನು ಪರಿಚಯಿಸುವ ಹಾಗೂ ಆಸಕ್ತ ವಿದ್ಯಾರ್ಥಿಗಳಿಗೆ ಕಲಿಸುವ ದೃಷ್ಟಿಯಿಂದ ರುದ್ರ ನೃತ್ಯ ಯೋಗಶಾಲೆಯನ್ನು ಸ್ಥಾಪಿಸಿ, ಆ ಮೂಲಕ ಮುಂದಿನ ಪೀಳಿಗೆಗೆ ನೃತ್ಯ ಪರಂಪರೆಯನ್ನು ಧಾರೆ ಎರೆಯುತ್ತಿದ್ದಾರೆ. ಮೈಸೂರು ಒಡಿಸ್ಸಿ ಉತ್ಸವ ಮೂಲಕ ಅಪರೂಪದ ಈ ಸಾಂಸ್ಕೃತಿಕ ಪರಂಪರೆಗೆ ಜಾಗತಿಕ ಮನ್ನಣೆ ತರುವ ಪ್ರಯತ್ನದಲ್ಲಿದ್ದಾರೆ. ಜೊತೆಗೆ ಈ ಮೈಸೂರು ಉತ್ಸವದ ಮೂಲಕ ಜಗತ್ತಿನಾದ್ಯಾಂತ ಕಲಾವಿದರು ಮೈಸೂರಿಗೆ ಆಹ್ವಾನಿಸಿ ಅವರಿಂದ ನೃತ್ಯ ಪ್ರದರ್ಶನ ನೀಡಿ, ಆ ನೃತ್ಯ ಪರಂಪರೆಯ ಶ್ರೇಷ್ಟತೆಯನ್ನು ಅನಾವರಣಗೊಳಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಉಚಿತವಾಗಿ ನಡೆಯುವ ಈ ಮೈಸೂರು ಒಡಿಸ್ಸಿ ಉತ್ಸವದಲ್ಲಿ ನೃತ್ಯಾಸಕ್ತರು, ನೃತ್ಯ ರಸಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಪತ್ರಿಕಾಗೋಷ್ಟಿಯಲ್ಲಿ ನೃತ್ಯಗುರು ಸಿಂಧು ಕಿರಣ್, ರುದ್ರನೃತ್ಯ ಯೋಗ ಶಾಲೆಯ ಹಿತೈಷಿ, ಪತ್ರಕರ್ತ ವೈದ್ಯನಾಥ್ ಹೆಚ್. ಯು, ಪ್ರ‍್ಸಾನ್ಸ್ನ ನೃತ್ಯ ಕಲಾವಿದೆ ಹಾಗೂ ಗುರು ಸಿಂಧು ಕಿರಣ್‌ರವರ ಶಿಷ್ಯೆ ಅವಿನಾ ಉಪಸ್ಥಿತರಿದ್ದರು.