Wednesday, February 11, 2026
Wednesday, February 11, 2026
Home Blog Page 89

Swami Vivekananda International ಬೆಳಗಾವಿ ಗಣರಾಜ್ಯೋತ್ಸವ ಬ್ಯಾಂಡ್ ಸ್ಪರ್ಧೆಗೆ ಶಿವಮೊಗ್ಗ ಸ್ವಾಮಿ ವಿವೇಕಾನಂದ ಶಾಲಾ ಮಕ್ಕಳ ತಂಡದ ಆಯ್ಕೆ

0

Swami Vivekananda International 2026ರ ಜನವರಿ ಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ನಿಮಿತ್ತ ಬೆಳಗಾವಿಯಲ್ಲಿ ನ. 20ರ ನಾಳೆ ಮತ್ತು 21ರಂದು ರಾಜ್ಯಮಟ್ಟದ ಶಾಲಾ ಬ್ಯಾಂಡ್ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಗೆ ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಶಾಲೆ ಸ್ವಾಮಿ ವಿವೇಕಾನಂದ ಇಂಟರ್ ನ್ಯಾಷನಲ್ ಶಾಲಾ ಮಕ್ಕಳು ಆಯ್ಕೆಯಾಗಿದ್ದಾರೆ.

Swami Vivekananda International ರಾಜ್ಯ ಮಟ್ಟದ ಶಾಲಾ ಬ್ಯಾಂಡ್ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆಯ ವಿಷಯ. ಈ ಬೃಹತ್ ವೇದಿಕೆಯಲ್ಲಿ ತಮ್ಮ ಪ್ರತಿಭೆ, ಶಿಸ್ತಿನ ಪ್ರದರ್ಶನ ಮತ್ತು ತಂಡದ ಪ್ರಭಾವ ವನ್ನು ತೋರಿಸಲು ಮುಂದಾಗಿರುವ ಮಕ್ಕಳಿಗೆ ಮತ್ತು ತರಬೇತುದಾರರಿಗೆ ಯಶಸ್ವಿಯಾಗಿ ಬರಲಿ ಎಂದು ಶಾಲಾ ಸಮಿತಿಯ ಗೌರವ ಅಧ್ಯಕ್ಷರಾದ ಅನೂಪ್ ಪಟೇಲ್ ಮತ್ತು ಉಪಾಧ್ಯಕ್ಷೆ ರಾಗಿಣಿ ಸಿಂಗ್, ಮುಖ್ಯೋಪಾಧ್ಯಾಯಿನಿ ರೂಪಶ್ರೀ, ಶಿಕ್ಷಕರು ಮತ್ತು ಸಿಬ್ಬಂಧಿ ವರ್ಗದವರು ಶುಭ ಹಾರೈಸಿದ್ದಾರೆ.

ಕರ್ನಾಟಕವು ನುರಿತ ಮಾನವ ಸಂಪನ್ಮೂಲದಿಂದ ಐಟಿ & ತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕ ಗಮನ ಸೆಳೆದಿದೆ-ಶಾಲಿನಿ ರಜನೀಶ್

0

ಚೆನ್ನೈನ ಅಮೆರಿಕದ ಕಾನ್ಸಲ್ ಜನರಲ್ ಕ್ರಿಸ್ಟೋಫರ್ ಡಬ್ಲ್ಯೂ. ಹೋಡ್ಜಸ್ ಅವರು ಇಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರೊಂದಿಗೆ ಸೌಹಾರ್ದಯುತ ಭೇಟಿ ಮಾಡಿದರು.

ಅಮೆರಿಕಾ ಮತ್ತು ಕರ್ನಾಟಕದ ನಡುವಿನ ಬಲವಾದ ಹಾಗೂ ವಿಸ್ತರಿಸುತ್ತಿರುವ ಸಂಬಂಧ ಬಗ್ಗೆ ಹೋಡ್ಜಸ್ ಒತ್ತಿ ಹೇಳಿದರಲ್ಲದೆ, ಶಿಕ್ಷಣ, ತಂತ್ರಜ್ಞಾನ, ಆವಿಷ್ಕಾರ ಮತ್ತು ಜನರಿಂದ-ಜನರಿಗೆ ಹೊಂದಿರುವ ನಂಬಿಕೆಯ ಕ್ಷೇತ್ರಗಳು ಎರಡೂ ಕಡೆಗೂ ಪ್ರಮುಖವಾಗಿವೆ ಎಂದು ಕ್ರಿಸ್ಟೋಫರ್ ಡಬ್ಲ್ಯೂ. ಹೋಡ್ಜಸ್ ಅವರು
ಹೇಳಿದರು.

ಭಾರತೀಯ ಮತ್ತು ಅಮೆರಿಕದ ವಿಶ್ವವಿದ್ಯಾಲಯಗಳು ಹಾಗೂ ಕೈಗಾರಿಕಾ ವಲಯಗಳು ವಾಣಿಜ್ಯ ಸಂಶೋಧನೆ ಮತ್ತು ಶೈಕ್ಷಣಿಕ ಫಲಿತಾಂಶಗಳನ್ನು ಉತ್ತಮಗೊಳಿಸಲು ಪರಸ್ಪರವಾಗಿ ಇನ್ನಷ್ಟು ಸಮೀಪದಿಂದ ಕೆಲಸ ಮಾಡುವ ಅವಕಾಶಗಳಿವೆ ಎಂದು ಅವರು ಚರ್ಚಿಸಿದರು.

ಕರ್ನಾಟಕವು ತನ್ನ ನುರಿತ ಮಾನವ ಸಂಪನ್ಮೂಲದ ಆಧಾರದ ಮೇಲೆ, ವಿಶೇಷವಾಗಿ ಐಟಿ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ, ಜಾಗತಿಕ ಆಸಕ್ತಿಯನ್ನು ಸೆಳೆಯುತ್ತಿದೆ. ಅಮೆರಿಕದ ಇನ್ನಷ್ಟು ತೀವ್ರವಾದ ಸಹಭಾಗಿತ್ವ ರಾಜ್ಯದ ಪರಿಸರವನ್ನು ಮತ್ತಷ್ಟು ಬಲಪಡಿಸಿ ಹೊಸ ಸಹಕಾರದ ಅವಕಾಶಗಳನ್ನು ತೆರೆದಿಡಬಹುದು ಎಂದು ಡಾ.ಶಾಲಿನಿ ರಜನೀಶ್ ಹೇಳಿದರು.

Karnataka State Human Rights Commission ಮಾನವೀಯ ಹಕ್ಕುಗಳ ರಕ್ಷಣೆ ಸಮಾಜದ ಒಟ್ಟಾರೆ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ- ಟಿ.ಶ್ಯಾಮಭಟ್

0

Karnataka State Human Rights Commission ಮಾನವ ಹಕ್ಕುಗಳು ಜನಾಂಗ, ಲಿಂಗ, ಧರ್ಮ, ರಾಷ್ಟ್ರೀಯತೆ ಯಾವುದೇ ಭೇದವಿಲ್ಲದೆ ಪ್ರತಿಯೊಬ್ಬ ವ್ಯಕ್ತಿಗೂ ಅನ್ವಯಿಸುವ ಮತ್ತು ಜೀವನ, ಸ್ವಾತಂತ್ರ್ಯ, ಶಿಕ್ಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದಂತಹ ಮೂಲಭೂತ ಹಕ್ಕುಗಳನ್ನು ಒಳಗೊಂಡಿವೆ ಮಾತ್ರವಲ್ಲ ಸಮಾಜದಲ್ಲಿ ನ್ಯಾಯ, ಶಾಂತಿ ಮತ್ತು ಸಮಾನತೆಯನ್ನು ಉತ್ತೇಜಿಸುವಲ್ಲಿ ಹಾಗೂ ಸರ್ವರಿಗೂ ಸಮಾನತೆ, ಸ್ವಾತಂತ್ರ್ಯ ಮತ್ತು ಘನತೆಯನ್ನು ಹೆಚ್ಚಿಸುವಲ್ಲಿ ಆಯೋಗ ಕಾರ್ಯನಿರ್ವಹಿಸಲಿದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ್‌ಭಟ್‌ಅವರು ಹೇಳಿದರು.
ಅವರು ಶಿವಮೊಗ್ಗ ನಗರದ ಮೆಗ್ಗಾನ್‌ಆಸ್ಪತ್ರೆ, ನಗರದ ಕೆ.ಎಸ್.ಆರ್.ಟಿ.ಸಿ. ಬಸ್‌ನಿಲ್ದಾಣ, ಕೇಂದ್ರ ಕಾರಾಗೃಹ ಮತ್ತು ಶಿವಪ್ಪನಾಯಕ ಅರಮನೆಗೆ ಭೇಟಿ ಮಾಡಿ ಅಲ್ಲಿನ ವ್ಯವಸ್ಥೆಗಳ ಕುರಿತು ಪರಿಶೀಲಿಸಿದ ನಂತರ ಜಿಲ್ಲಾ ಪಂಚಾಯಿತಿ ಅಬ್ದುಲ್‌ನಜೀರ್‌ಸಾಬ್‌ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ವಿಚಾರಣೆ ಕಾರ್ಯಕ್ರಮದ ನಂತರ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ
ಚರ್ಚಿಸಿ ಮಾಹಿತಿ ಪಡೆದು ಮಾತನಾಡುತ್ತಿದ್ದರು.
ಶಿಕ್ಷಣದ ಹಕ್ಕು ಮತ್ತು ಆರೋಗ್ಯ ಸೇವೆಗಳಿಗೆ ಪ್ರವೇಶದಂತಹ ಹಕ್ಕುಗಳು ಸಮಾಜದ ಒಟ್ಟಾರೆ ಅಭಿವೃದ್ಧಿಗೆ ಕೊಡುಗೆ ನೀಡುತ್ತವೆ ಎಂದ ಅವರು ಮಾನವ ಹಕ್ಕುಗಳ ರಕ್ಷಣೆಯು ನ್ಯಾಯ, ಸಮಾನತೆ ಮತ್ತು ಶಾಂತಿಯುತ ಸಮಾಜವನ್ನು ನಿರ್ಮಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಮಾತ್ರವಲ್ಲ ಎಲ್ಲಾ ರೀತಿಯ ಅಸಮಾನತೆಗಳು ಮತ್ತು ಶೋಷಣೆಗಳ ವಿರುದ್ಧ ಹೋರಾಡುತ್ತದೆ ಎಂದವರು ನುಡಿದರು.
ಮಹಿಳೆಯರು, ಮಕ್ಕಳು, ಶೋಷಿತರು ಮತ್ತು ಅಲ್ಪಸಂಖ್ಯಾತರು ಸೇರಿದಂತೆ ದುರ್ಬಲ ಗುಂಪುಗಳ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ಹಾಗೂ ಜೀವನ ಮತ್ತು ಸ್ವಾತಂತ್ರ್ಯದ ಹಕ್ಕು, ಗುಲಾಮಗಿರಿ ಮತ್ತು ಚಿತ್ರಹಿಂಸೆಯಿಂದ ಮುಕ್ತಿ, ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಹಕ್ಕನ್ನು ಮಾವನ ಹಕ್ಕುಗಳು ಪ್ರತಿಪಾದಿಸುತ್ತವೆ ಎಂದವರು ನುಡಿದರು.
ಜೈಲಧಿಕಾರಿಗಳು ವಿಚಾರಣಾಧೀನ ಖೈದಿಗಳಿಗೆ ಎಣ್ಣೆ, ಸೋಪು, ಪೇಸ್ಟ್‌, ಚಪ್ಪಲಿ, ಇತ್ಯಾದಿ ಅಗತ್ಯ ವಸ್ತುಗಳನ್ನು ಮಾನವೀಯ ನೆಲೆಯಲ್ಲಿ ಒದಗಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಿ. ಬಂಧೀಖಾನೆಯಿಂದ ಆಸ್ಪತ್ರೆ, ನ್ಯಾಯಾಲಯಕ್ಕೆ ಹೋಗಿ ಹಿಂದಿರುವ ಖೈದಿಗಳಿಗೆ ನಿಯಮಾನುಸಾರ ತಪಾಸಣೆಗೆ ಒಳಪಡಿಸಿ.
–ಎಸ್‌.ಕೆ.ವಂಟಿಗೋಡಿ. ಸದಸ್ಯರು, ಮಾನವ ಹಕ್ಕುಗಳ ಆಯೋಗ.
ಯಾವುದೇ ಇಲಾಖೆಯ ಅಧಿಕಾರಿಗಳು ತಮ್ಮ ಕಚೇರಿಗಳಿಗೆ ಸೌಲಭ್ಯವನ್ನು ಅರಸಿ ಬರುವ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಬೇಕು. ಇದರಿಂದಾಗಿ ಶೇ.50ರಷ್ಟು ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಅಲ್ಲದೇ ಸಾರ್ವಜನಿಕರಿಗೆ ಸಮಾಧಾನ ದೊರೆಯಲಿದೆ ಎಂದರು.
ಆಯೋಗದಲ್ಲಿ ದಾಖಲಾದ ಪ್ರಕರಣಗಳಲ್ಲಿ ಕಳೆದ ವರ್ಷದಿಂದೀಚೆಗೆ ಸುಮಾರು 13000ಕ್ಕೂ ಹೆಚ್ಚಿನ ಪ್ರಕರಣಗಳ ವಿಚಾರಣೆ ನಡೆಸಿ, ಇತ್ಯರ್ಥಗೊಳಿಸಲಾಗಿದೆ. ದಾಖಲಾಧ ಒಟ್ಟು ಪ್ರಕರಣಗಳಲ್ಲಿ ಅಕ್ಟೋಬರ್‌ಮಾಸಾಂತ್ಯದವರೆಗೆ ಇನ್ನೂ3413ಪ್ರಕರಣಗಳು ಬಾಕಿ ಉಳಿದಿವೆ. ಜಿಲ್ಲೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾದ ಬಗ್ಗೆ ಸುಮಾರು 100ಮೊಕದ್ದಮೆಗಳು ದಾಖಲಾಗಿದ್ದು, ಅವುಗಳಲ್ಲಿ 50ಪ್ರಕರಣಗಳ ವಿಚಾರಣೆ ನಡೆಸಲಾಗಿದ್ದು, ಉಳಿದವುಗಳನ್ನು ಹಂತಹಂತವಾಗಿ ವಿಚಾರಣೆ ನಡೆಸಿ, ಸೂಕ್ತ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದ ಅವರು ದಾಖಲಾದ ಪ್ರಕರಣಗಳಲ್ಲಿ ಶೇ. 80ರಷ್ಟು ಪ್ರಕರಣಗಳು ಪೊಲೀಸ್‌ಇಲಾಖೆಗೆ ಸೇರಿದ್ದವುಗಳೇ ಆಗಿರುತ್ತವೆ ಎಂದವರು ನುಡಿದರು.
Karnataka State Human Rights Commission ಆಯೋಗದ ಸದಸ್ಯ ಎಸ್.ಕೆ.ವಂಟಿಗೋಡಿ ಅವರು ಮಾತನಾಡಿ, ಅಧಿಕಾರಿಗಳ ಭೇಟಿಗಾಗಿ ಆಗಮಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಚೇರಿಗಳಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದ ಅವರು, ಮೆಗ್ಗಾನ್‌ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗುವ ರೋಗಿಗಳ ಸಂಬಂಧಿಗಳು ಉಳಿದುಕೊಳ್ಳಲು ಅನುಕೂಲವಾಗುವಂತೆ ವಿಶ್ರಾಂತಿಗೃಹ ನಿರ್ಮಾಣದ ಅಗತ್ಯವನ್ನು ಗಮನಿಸಲಾಗಿದ್ದು, ಅದನ್ನು ಒದಗಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಇಂದಿನ ಸ್ಥಳ ಭೇಟಿ ಸಂದರ್ಭದಲ್ಲಿ ಗಮನಿಸಿರುವಂತೆ ನಗರದ ಖಾಸಗಿ ಬಸ್‌ನಿಲ್ದಾಣದ ಸ್ವಚ್ಚತೆ ಮತ್ತು ಶೌಚಾಲಯ ನಿರ್ವಹಣೆ ಕುರಿತು ಖಾಸಗಿ ಬಸ್ಸುಗಳ ಮಾಲೀಕರೊಂದಿಗೆ ಕೂಡಲೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಖೈದಿಗಳ ಭೇಟಿಗೆ ತೆರಳುವ ಸಾರ್ವಜನಿಕರು ಹಾಗೂ ಕುಟುಂಬದ ಸದಸ್ಯರ ಅನುಕೂಲಕ್ಕಾಗಿ ಬಸ್‌ಸಂಪರ್ಕ ವ್ಯವಸ್ಥೆ ಕಲ್ಪಿಸುವಂತೆಯೂ ಸಾರಿಗೆ ನಿಗಮದ ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.
ಮಾನವ ಹಕ್ಕುಗಳ ಆಯೋಗಕ್ಕೆ ಸಮಾನವಾಗಿರುವಂತೆ ಹೆಸರಿನ ಸಂಸ್ಥೆಗಳ ಹೆಸರಿನಲ್ಲಿ ಅನೇಕರು ಅಧಿಕಾರಿಗಳ ಮೇಲೆ ಬೆದರಿಕೆ, ದೌರ್ಜನಕ್ಕೆ ಮುಂದಾಗಿರುವ ಬಗ್ಗೆ ದೂರುಗಳು ಆಯೋಗಕ್ಕೆ ಬಂದಿವೆ ಇಂತಹ ಸಂಸ್ಥೆ, ವ್ಯಕ್ತಿಗಳ ಬಗ್ಗೆ ಸಾರ್ವಜನಿಕರು ಹಾಗೂ ಅಧಿಕಾರಿಗಳು ಎಚ್ಚರದಿಂದಿರುವಂತೆ ಅವರು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತಹೆಗಡೆ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಎ.ಜಿ.ಕಾರಿಯಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ನಿನ್ನೆ ಸಂಜೆ ಪರಿಶಿಷ್ಟ ಜಾತಿ ಪಂಗಡಗಳ ಕಲ್ಯಾಣ ಇಲಾಖೆ, ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲಾಗುತ್ತಿರುವ ಮೆಟ್ರಿಕ್‌ಪೂರ್ವ ವಸತಿನಿಲಯಗಳು, ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಇಂದು ನಗರದ ಮೆಗ್ಗಾನ್‌ಆಸ್ಪತ್ರೆ, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣ, ಕೇಂದ್ರ ಕಾರಾಗೃಹ ಮತ್ತು ಶಿವಪ್ಪನಾಯಕನ ಬೇಸಿಗೆ ಅರಮನೆಗಳಿಗೆ ಸಂಬಂಧಿತ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.
ಭೇಟಿ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್‌ವಿ., ಮೆಗ್ಗಾನ್‌ಅಧೀಕ್ಷಕ ಡಾ|| ಸಿದ್ಧನಗೌಡ, ಕೆ.ಎಸ್.ಆರ್.ಟಿ.ಸಿ. ಡಿ.ಸಿ. ನವೀನ್‌ಕುಮಾರ್‌, ಡಿ.ಟಿ.ಒ. ದಿನೇಶಕುಮಾರ್‌, ಜೈಲಧಿಕಾರಿ ಡಾ|| ಪಿ.ರಂಗನಾಥ್‌, ಉಪವಿಭಾಗಾಧಿಕಾರಿ ಸತ್ಯನಾರಾಯಣ, ತಹಶೀಲ್ದಾರ್‌ರಾಜೀವ್‌ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.

Rotary Shivamogga ಸಮಾಜಮುಖಿ ಕಾರ್ಯಗಳಿಂದ ಜೀವನದಲ್ಲಿ ನೆಮ್ಮದಿ- ಕೆ.ಪಾಲಾಕ್ಷ

0

Rotary Shivamogga ಸಮಾಜಮುಖಿ ಕಾರ್ಯಗಳಲ್ಲಿ ತೊಡಗುವುದು ಜೀವನದಲ್ಲಿ ನಿಜವಾದ ನೆಮ್ಮದಿಯನ್ನು ನೀಡುತ್ತದೆ. ಇಂದಿನ ತಂತ್ರಜ್ಞಾನ ಪ್ರಭಾವಿತ ಒತ್ತಡದ ಯುಗದಲ್ಲಿ ಸಮಾಜ ಸೇವೆಯೇ ಮಾನವನನ್ನು ಮನುಷ್ಯನಾಗಿರಿಸುತ್ತದೆ,” ಎಂದು ರೋಟರಿ ಜಿಲ್ಲಾ 3182ರ ಜಿಲ್ಲಾ ಗವರ್ನರ್ ಕೆ. ಪಾಲಾಕ್ಷ ಆಶಯ ವ್ಯಕ್ತಪಡಿಸಿದರು.

ಪಟ್ಟಣದ ರೋಟರಿ ಸಭಾಭವನದಲ್ಲಿ ನಡೆದ ಜಿಲ್ಲಾ ಗವರ್ನರ್‌ರ ಅಧಿಕೃತ ಭೇಟಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ವಿಶ್ವದ 220 ರಾಷ್ಟ್ರಗಳಲ್ಲಿ 11 ಲಕ್ಷಕ್ಕೂ ಹೆಚ್ಚು ರೋಟರಿಯನ್ನರು ಆರೋಗ್ಯ, ಶಿಕ್ಷಣ ಮತ್ತು ಸಮಾಜಮುಖಿ ಚಟುವಟಿಕೆಗಳಲ್ಲಿ ತನ್ನ ಸೇವೆ ಸಲ್ಲಿಸುತ್ತಿದ್ದಾರೆ. ಜಗತ್ತಿನಲ್ಲಿ ಪೋಲಿಯೋ ನಿರ್ಮೂಲನದ ಮಹಾ ಕಾರ್ಯಕ್ಕೆ ರೋಟರಿ ನೀಡಿರುವ ಕೊಡುಗೆ ಅಪಾರ,” ಎಂದು ಅಭಿಪ್ರಾಯಪಟ್ಟರು.
ಮಲೆನಾಡಿನ ಮಣ್ಣಿನಲ್ಲಿ ಸೇವಾ ಮನೋಭಾವ ‘ರಕ್ತಗತ’ವಾಗಿರುವುದನ್ನು ಉಲ್ಲೇಖಿಸಿದ ಅವರು, “ಸಮಾಜಮುಖಿ ಕಾರ್ಯಗಳಲ್ಲಿ ತೊಡಗಲು ಆಸಕ್ತಿ ಇರುವ ಪ್ರತಿಯೊಬ್ಬರಿಗೂ ರೋಟರಿ ತೆರೆಯಲ್ಪಟ್ಟಿದೆ,” ಎಂದು ತಿಳಿಸಿದರು.

ರೋಟರಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಹಾಗೂ ಅಸಿಸ್ಟೆಂಟ್ ಗವರ್ನರ್ ಎಂ.ಬಿ. ಲಕ್ಷ್ಮಣಗೌಡ ಮಾತನಾಡಿ, “ಕಳೆದ 15 ವರ್ಷಗಳಿಂದ ರಿಪ್ಪನ್ ಪೇಟೆ ರೋಟರಿ ಕ್ಲಬ್ ಆರೋಗ್ಯ, ಶಿಕ್ಷಣ, ಕೃಷಿ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಫಲಪ್ರದ ಸೇವೆ ನೀಡುತ್ತಿದೆ,” ಎಂದು ಹೇಳಿದರು. ಆರೋಗ್ಯ ತಪಾಸಣಾ ಶಿಬಿರ, ನೇತ್ರ ತಪಾಸಣೆ, ರಕ್ತದಾನ, ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ, ಸಂಚಾರ ಸುರಕ್ಷತಾ ಜಾಗೃತಿ, ರೈತರಿಗೆ ಉಚಿತ ಕೃಷಿ ಪರಿಕರ ವಿತರಣೆ, ಮಹಿಳೆಯರಿಗೆ ಹೊಲಿಗೆ ಯಂತ್ರದಾನ, ಪ್ರತಿಭಾ ಪುರಸ್ಕಾರ ಸೇರಿದಂತೆ ಅನೇಕ ಸೇವಾಕಾರ್ಯಗಳನ್ನು ವಿವರಿಸಿದರು.

Rotary Shivamogga ಕಾರ್ಯಕ್ರಮದಲ್ಲಿ ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ ಅವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಿದರು. ಕೃಷಿ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದ ಅನಂತಮೂರ್ತಿ ಜವಳಿ, ಸಹಕಾರಿ ಕ್ಷೇತ್ರದ ರಾಜ್ಯ ಪ್ರಶಸ್ತಿ ಪುರಸ್ಕೃತ ಎಂ. ಪರಮೇಶ್, ಸಮಾಜ ಸೇವೆಗೆ ಸುನಂದ, ಗಿನ್ನಿಸ್ ದಾಖಲೆ ಪಡೆದ ಕವನಶ್ರೀ, ಶಿಕ್ಷಣ ಸಾಧನೆಗಾಗಿ ಐಶ್ವರ್ಯ ಡಾಕಪ್ಪ ಮತ್ತು ಕ್ರೀಡಾ ಕ್ಷೇತ್ರದ ಪಂಚಮಿ ರವಿಶಂಕರ್ ಅವರಿಗೆ ಗೌರವ ಸಲ್ಲಿಸಲಾಯಿತು.

ಕ್ಲಬ್ ಅಧ್ಯಕ್ಷ ಕೃಷ್ಣರಾಜ ಎ.ಎಂ ಸಭಾಧ್ಯಕ್ಷತೆ ವಹಿಸಿದರು. ವಲಯ ಸೇನೆ ಭರತ್ ಎಂ. ಕೂಡ್ಲು, ಕಾರ್ಯದರ್ಶಿ ರಾಧಾಕೃಷ್ಣ ಜೆ. ರೋಟರಿ ಜಿಲ್ಲಾ 31 82ರ ಪ್ರಥಮ ಮಹಿಳೆ ರೇಖಾ ಪಲಾಕ್ಷ ಪಾಲ್ಗೊಂಡರು.
ಕಾರ್ಯಕ್ರಮದಲ್ಲಿ ಸವಿತಾ ರಾಧಾಕೃಷ್ಣ ಮತ್ತು ಅಮಿತ್ ಬಲ್ಲಾಳ್ ಪ್ರಾರ್ಥನೆ ಸಲ್ಲಿಸಿದರು. ಕಾರ್ಯದರ್ಶಿ ರವೀಂದ್ರ ಬಲ್ಲಾಳ್ ವರದಿ ವಾಚಿಸಿದರು. ಗಣೇಶ್ ಆರ್., ಸಬಾಸ್ಟಿನ್, ಎಂಬಿ ಮಂಜುನಾಥ್ ನಿರೂಪಣೆ ನಿರ್ವಹಿಸಿದ್ದು, ರಾಧಾಕೃಷ್ಣ ಜೆ. ವಂದನೆ ಸಲ್ಲಿಸಿದರು.

ನವೆಂಬರ್ 25 ರಿಂದ 27. ಶಿವಮೊಗ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ

0

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ನ.25 ರಿಂದ 27 ರವರೆಗೆ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕವಾಯತು ಮೈದಾನ, ಅಶೋಕನಗರ ಇಲ್ಲಿ ವಾರ್ಷಿಕ ಕ್ರೀಡಾಕೂಟ – 2025 ನ್ನು ಆಯೋಜಿಸಲಾಗಿದೆ.
ನ.25 ರ ಬೆಳಿಗ್ಗೆ 09 ಗಂಟೆಗೆ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ನ.27 ರ ಸಂಜೆ 4 ಗಂಟೆಗೆ ಪೂರ್ವವಲಯದ ಪೊಲೀಸ್ ಮಹಾನಿರೀಕ್ಷಕರಾದ ಡಾ.ಬಿ.ಆರ್.ರವಿಕಾಂತೇಗೌಡ ಇವರು ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಎ.ಜಿ.ಕಾರಿಯಪ್ಪ, ಹೆಚ್ಚುವರಿ ಪೊಲೀಸ್ ಅಧೀಕ್ಷಕ-2 ಎಸ್ ರಮೇಶ್ ಕುಮಾರ್ ಪಾಲ್ಗೊಳ್ಳುವರು.

ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ‌ನಗರದ ಫುಟ್ ಪಾತ್ ತೆರವು ಮಾಡಿ ನಿಗದಿತ ಸ್ಥಳದಲ್ಲಿ ವಾಹನ ಪಾರ್ಕಿಂಗ್, ಸಾರ್ವಜನಿಕರಿಗೆ ಸೂಚನೆ

0

ಶ್ರೀ ಮಿಥುನ್ ಕುಮಾರ್ ಜಿ.ಕೆ. ಐ.ಪಿ.ಎಸ್. ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ಶಿವಮೊಗ್ಗ ರವರು ಶಿವಮೊಗ್ಗ ಸ್ಮಾರ್ಟ ಸಿಟಿಯಿಂದ ವಾಹನ ನಿಲುಗಡೆಗಾಗಿ ಅಭಿವೃದ್ಧಿ ಪಡಿಸಿರುವ ಕನ್ಸರ್ವೆನ್ಸಿ ಸ್ಥಳಗಳಾದ, ಪಾರ್ಕ ಬಡಾವಣೆ ಮುಖ್ಯ ರಸ್ತೆ, ನೆಹರು ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿರುತ್ತಾರೆ. ಸ್ಥಳದಲ್ಲಿ ಹಾಜರಿದ್ದ ಸಾರ್ವಜನಿಕರು , ವರ್ತಕರು, ಆಸ್ಪತ್ರೆಯ ಮುಖ್ಯಸ್ಥರನ್ನು ಉದ್ದೇಶಿಸಿ ಕನ್ಸರ್ವೆನ್ಸಿ ರಸ್ತೆಗಳನ್ನು ವಾಹನಗಳ ಪಾರ್ಕಿಂಗ್ ಗೆ ಬಳಸಿಕೊಳ್ಳುವ ಸಲುವಾಗಿ ಕೆಳಕಂಡಂತೆ ಸೂಚನೆಗಳನ್ನು ನೀಡಿರುತ್ತಾರೆ.

  1. ಸಾರ್ವಜನಿಕರು ತಮ್ಮ ವಾಹನಗಳನ್ನು ನಿಗಧಿಪಡಿಸುವ ಕನ್ಸರ್ ವೆನ್ಸಿ ನಿಲುಗಡೆ ಸ್ಥಳದಲ್ಲಿಯೇ ನಿಲುಗಡೆ ಮಾಡುವುದು.
  2. ಆಸ್ಪತ್ರೆಗಳಿಗೆ ಬೇರೆ ಬೇರೆ ಕಡೆಗಳಿಂದ ಬರುವ ವಾಹನ ಸವಾರರು ನಿಗಧಿಪಡಿಸಿದ ಕನ್ಸರ್ವೆನ್ಸಿ ವಾಹನ ನಿಲುಗಡೆ ಸ್ಥಳದಲ್ಲಿ ವಾಹನಗಳನ್ನು ನಿಲುಗಡೆ ಮಾಡುವುದು.
  3. ಕನ್ಸರ್ವೆನ್ಸಿ ಗಳಲ್ಲಿ ವಾಹನ ನಿಲುಗಡೆ ಮಾಡುವುದರಿಂದ ಸರ್ಜಿ ಆಸ್ಪತ್ರೆ, ಮ್ಯಾಕ್ಸ್ ಆಸ್ಪತ್ರೆ, ನಂಜಪ್ಪ ಆಸ್ಪತ್ರೆ, ವಾತ್ಸಲ್ಯ ಆಸ್ಪತ್ರೆ, ಮಲ್ನಾಡ್ ಆಸ್ಪತ್ರೆ ಹಾಗು ಮೆಟ್ರೋ ಆಸ್ಪತ್ರೆ ಗಳಿಗೆ ಬರುವ ವಾಹನ ಸವಾರರಿಗೆ ಹಾಗು ಸ್ಥಳೀಯ ನಾಗರೀಕರಿಗೆ ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಅನುಕೂಲವಾಗಲಿದೆ. ಸಾರ್ವಜನಿಕರು ಇದನ್ನು ಬಳಸಿಕೊಂಡು ನಗರದ ಪ್ರಮುಖ ರಸ್ತೆಗಳಾದ ಪಾರ್ಕ ಬಡಾವಣೆ, ದುರ್ಗಿಗುಡಿ, ರಾಘವೇಂಧ್ರ ಸ್ವಾಮಿ ಮಠ ರಸ್ತೆ, ಭಾಗದಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಸೂಚಿಸಿರುತ್ತಾರೆ. ಮಾನ್ಯ ಎಸ್.ಪಿ. ರವರ ಮಾರ್ಗದರ್ಶನದಲ್ಲಿ ಸಂಚಾರಿ ಪೊಲೀಸ್ ವೃತ್ತ ನಿರೀಕ್ಷಕ ಶ್ರೀ. ದೇವರಾಜ್ ರವರ ನೇತೃತ್ವದಲ್ಲಿ ಸುಮಾರು 20 ಜನ ಟ್ರಾಪಿಕ್ ಸಿಬ್ಬಂದಿಗಳು ಹಾಗು ಮಹಾನಗರ ಪಾಲಿಕೆ ಸಿಬ್ಬಂದಿ ಜಂಟಿ ಕಾರ್ಯಚರಣೆ ನಡೆಸಿ, ಫುಟ್ ಫಾತ್ ಒತ್ತುವರಿ ತೆರವು ಕಾರ್ಯಚರಣೆ, ವಾಹನಗಳನ್ನು ನಿಗದಿತ ಸ್ಥಳದಲ್ಲಿ ನಿಲುಗಡೆ ಮಾಡುವಂತೆ ಮತ್ತು ಕನ್ಸರ್ವೆನ್ಸಿ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲುಗಡೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಮುಂದಿನ ದಿನಗಳಲ್ಲಿ ಸದರಿ ಪಾರ್ಕ ಬಡಾವಣೆಯಲ್ಲಿ ಸುಗಮ ಸಂಚಾರ ವ್ಯವಸ್ಥೆ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಸಂದರ್ಭದಲ್ಲಿ ಶ್ರೀ. ಕಾರಿಯಪ್ಪ ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ. ದೇವರಾಜ್ ಟಿ.ವಿ. ಸಿಪಿಐ ಸಂಚಾರ ವೃತ್ತ, ಶ್ರೀಮತಿ ಸ್ವಪ್ನ ಪಿ.ಎಸ್.ಐ.-1 & ಶ್ರೀಮತಿ ಭಾರತಿ ಬಿ.ಹೆಚ್. ಪಿ.ಎಸ್.ಐ.-2 ಪಶ್ಚಿಮ ಸಂಚಾರ ಠಾಣೆ, ಶ್ರೀ. ಅಕ್ಬರ್ ಮುಲ್ಲಾ ಪಿ.ಎಸ್.ಐ. -1 & ಶ್ರೀ. ಶಿವಣ್ಣನವರ್ ಪಿ.ಎಸ್.ಐ-2 ಪೂರ್ವ ಸಂಚಾರ ಠಾಣೆ ಮತ್ತು ಶಿವಮೊಗ್ಗ ನಗರ ಪಾಲಿಕೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

MESCOM ನವೆಂಬರ್ 21.ಎಮ್.ಆರ್.ಎಸ್ ವ್ಯಾಪ್ತಿಯ ಚಿಕ್ಕಲ್ಲು, ಗುರುಪುರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

MESCOM ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ನ.21 ರಂದು ಬೆಳಗ್ಗೆ 09.00 ರಿಂದ ಸಂಜೆ 5.00 ರವರೆಗೆ ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ್ವರನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗ್ರಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹಮದ್ ವೃತ್ತದವರೆಗೆ), MESCOM ಬಾಲ್‌ರಾಜ್ ಅರಸು ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ ಸರ್.ಎಂ.ವಿ.ರಸ್ತೆ, (ವೀರಭದ್ರೇಶ್ವರ ಟಾಕೀಸ್‌ನಿಂದ ಮಹಾವೀರ್ ವೃತ್ತದವರೆಗೆ), (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂದಿಪಾರ್ಕ್, ಲೂರ್ದು ನಗರ, ಕಾನ್ವಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ ರಸ್ತೆ, ಕುವೆಂಪು ರಂಗಮಂದಿರ, ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್ ಅರಸ್ ರಸ್ತೆ, ಮೆಹದಿ ನಗರ, ಬಾಪೂಜಿನಗರ, ಬಸವನಗುಡಿ, ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್ ರಸ್ತೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ.ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

CM Siddharamaiah ಮಾಜಿ ಪ್ರಧಾನಿ ಇಂದಿರಾ‌ಗಾಂಧಿ ಜನ್ಮದಿನ, ಸಿದ್ಧರಾಮಯ್ಯ ಅವರಿಂದ ಐಕ್ಯತಾ ಸಪ್ತಾಹದ ಪ್ರಮಾಣ ವಚನ ಬೋಧನೆ

0

CM Siddharamaiah ಭಾರತ ದೇಶದ ಮೊದಲ ಮಹಿಳಾ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರ ಜನ್ಮ ದಿನದ ಅಂಗವಾಗಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಪ್ರಮಾಣ ವಚನ ಬೋಧಿಸಿದರು.

CM Siddharamaiah ಈ‌ ಸಂದರ್ಭಗಳಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಬಿ.ಬಿ.ಕಾವೇರಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿ ಜಗದೀಶ ಸೇರಿದಂತೆ ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಗೂ ನೌಕರರು ಉಪಸ್ಥಿತರಿದ್ದರು.

ರಾಷ್ಟ್ರೀಯ ಐಕ್ಯತೆ ಸರಂಕ್ಷಿಸಲು ಜಿಲ್ಲಾಡಳಿತ ಕಛೇರಿಯಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ

0

ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆಯವರು ಕಚೇರಿಯ ಅಧಿಕಾರಿ, ಸಿಬ್ಬಂದಿಗಳಿಗೆ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನವನ್ನು ಬೋಧಿಸಿದರು.
ರಾಷ್ಟ್ರೀಯ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಸಂರಕ್ಷಿಸಲು ಮತ್ತು ಬಲಪಡಿಸಲು ಅರ್ಪಣಾ ಮನೋಭಾವದಿಂದ ಕೆಲಸ ಮಾಡುತ್ತೇನೆ. ಅಲ್ಲದೇ ನಾನು ಎಂದಿಗೂ ಹಿಂಸಾಚಾರದಲ್ಲಿ ತೊಡಗುವುದಿಲ್ಲವೆಂದು ಮತ್ತು ಮತ, ಭಾಷೆ, ಪ್ರದೇಶ ಅಥವಾ ಇತರ ರಾಜಕೀಯ ಅಥವಾ ಆರ್ಥಿಕ ಕುಂದು ಕೊರತೆಗಳ ಬಗೆಗಿನ ಭಿನ್ನಾಭಿಪ್ರಾಯಗಳನ್ನು ಮತ್ತು ವಿವಾದಗಳನ್ನು ಶಾಂತಿಯುತವಾಗಿ ಹಾಗೂ ಸಂವಿಧಾನಾತ್ಮಕ ರೀತಿಯಲ್ಲಿ ಬಗೆಹರಿಸಿಕೊಳ್ಳುವ ದಿಸೆಯಲ್ಲಿ ನನ್ನ ಪ್ರಯತ್ನವನ್ನು ಮುಂದುವರೆಸುತ್ತೇನೆ, ಪ್ರಮಾಣ ಮಾಡುತ್ತೇನೆ’ ಎಂಬ ಪ್ರಮಾಣ ವಚವನ್ನು ಅವರು ಬೋಧಿಸಿದರು.
ಈ ವೇಳೆ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರಾದ ಪ್ರದೀಪ್, ಜಿಲ್ಲಾಡಳಿತ ಕಚೇರಿ ಇತರೆ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು

MESCOM ನವೆಂಬರ್ 21.ಎಮ್.ಆರ್.ಎಸ್ ವ್ಯಾಪ್ತಿಯ ಚಿಕ್ಕಲ್ಲು,ಗುರುಪುರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

MESCOM ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ನ.21 ರಂದು ಬೆಳಗ್ಗೆ 09.00 ರಿಂದ ಸಂಜೆ 5.00 ರವರೆಗೆ ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ್ವರನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗ್ರಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹಮದ್ ವೃತ್ತದವರೆಗೆ), ಬಾಲ್‌ರಾಜ್ ಅರಸು ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ ಸರ್.ಎಂ.ವಿ.ರಸ್ತೆ, (ವೀರಭದ್ರೇಶ್ವರ ಟಾಕೀಸ್‌ನಿಂದ ಮಹಾವೀರ್ ವೃತ್ತದವರೆಗೆ), (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂದಿಪಾರ್ಕ್, ಲೂರ್ದು ನಗರ, ಕಾನ್ವಂಟ್ ರಸ್ತೆ, ಬಾಪೂಜಿನಗರ, ಚರ್ಚ್ MESCOM ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ ರಸ್ತೆ, ಕುವೆಂಪು ರಂಗಮಂದಿರ, ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್ ಅರಸ್ ರಸ್ತೆ, ಮೆಹದಿ ನಗರ, ಬಾಪೂಜಿನಗರ, ಬಸವನಗುಡಿ, ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್ ರಸ್ತೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ.ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.