Friday, May 15, 2026
Friday, May 15, 2026
Home Blog Page 89

Shakti scheme ಇನ್ನುಮುಂದೆ ಫ್ರೀ ಬಸ್ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬದಲಿಗೆ ಸ್ಮಾರ್ಟ್ ಕಾರ್ಡ್

0

Shakti scheme ʼಶಕ್ತಿʼ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡುವ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತ ಪ್ರಯಾಣಿಕರಿಗೆ ರಾಜ್ಯ ಸರ್ಕಾರವು ಉಚಿತವಾಗಿ ಸ್ಮಾರ್ಟ್‌ಕಾರ್ಡ್‌ ನೀಡಲು ನಿರ್ಧರಿಸಿದೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಮೂಲಕ ಸ್ಮಾರ್ಟ್‌ಕಾರ್ಡ್‌ ವಿತರಿಸುವ ನಿರ್ಣಯಕ್ಕೆ ಬರಲಾಗಿದೆ.

Shakti scheme ಇನ್ನುಮುಂದೆ ಆಧಾರ್‌ ಕಾರ್ಡ್‌ ಬದಲು ಸ್ಮಾರ್ಟ್ ಕಾರ್ಡ್‌ ಬಳಸಿ ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು ನಿಶ್ಚಿಂತರಾಗಿ ಪ್ರಯಾಣಿಸಬಹುದಾಗಿದೆ ಎಂದು ಪ್ರಕಟಿಸಲಾಗಿದೆ.

DVS College of Arts, Science and Commerce ಹೃದಯಾಘಾತಕ್ಕೆ ನಮ್ಮ ದವಡೆ ಮತ್ತು ದಂತದಲ್ಲಿನ ರೋಗಲಕ್ಷಣಗಳೂ ಕಾರಣ- ಡಾ.ಎಚ್.ಮಂಜನಾಥ್

0

DVS College of Arts, Science and Commerce ಪ್ರಪಂಚದಲ್ಲಿ ಹೆಚ್ಚುತ್ತಿರುವ ಹೃದಯಾಘಾತಗಳಿಗೆ ಮುಖ್ಯ ಕಾರಣ ನಮ್ಮ ದವಡೆ ಮತ್ತು ದಂತಗಳಲ್ಲಿ ಕಂಡುಬರುವ ರೋಗ ಲಕ್ಷಣಗಳಾಗಿವೆ ಎಂದು ದಂತ ವೈದ್ಯ ಡಾ ಎಚ್.ಮಂಜುನಾಥ್ ಹೇಳಿದರು.

ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಸುಬ್ಬಯ್ಯ ದಂತ ವೈದ್ಯಕೀಯ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ದಂತ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿ, ಯುವಜನರು ಗುಟ್ಕಾ ಸೇವನೆ, ತಂಬಾಕು ಸೇವನೆ ಸೇರಿದಂತೆ ಮಾದಕ ವ್ಯಸನಕ್ಕೆ ದಾಸರಾಗುತ್ತಿರುವುದರಿಂದ ಬಾಯಿ, ದವಡೆ ಹಾಗೂ ದಂತಗಳ ಸವಕಳಿ ಮತ್ತು ರೋಗ ಹೆಚ್ಚಾಗಿ ಅನೇಕ ಕಾಯಿಲೆಗಳಿಗೆ ಕಾರಣವಾಗುತ್ತಿದೆ ಎಂದು ತಿಳಿಸಿದರು.

ಜನರು ಕೆಟ್ಟ ಅಭ್ಯಾಸಗಳನ್ನು ತ್ಯಜಿಸಿ ಸ್ವಚ್ಛತೆಯ ಕಡೆಗೆ ಮತ್ತು ಉತ್ತಮ ಆರೋಗ್ಯದ ಅಭ್ಯಾಸಗಳ ಕಡೆಗೆ ಹೆಚ್ಚಿನ ಗಮನ ನೀಡಬೇಕು ಎಂದು ಸಲಹೆ ನೀಡಿದರು.

ಸುಬ್ಬಯ್ಯ ದಂತ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಶಿವರಾಜ್ ಮಾತನಾಡಿ, ಮುಖ ಮತ್ತು ಬಾಯಿಯ ಆರೋಗ್ಯವನ್ನು ಕಾಪಾಡಿಕೊಳ್ಳುವುದರಲ್ಲಿ ಯುವಜನರ ಪಾತ್ರ ಬಹಳ ಮುಖ್ಯವಾಗಿದೆ. ಇಂದಿನ ಕ್ಯಾನ್ಸರ್ ಹೃದಯಾಘಾತ ಇನ್ನಿತರ ಕಾಯಿಲೆಗಳ ಮೂಲ ನಮ್ಮ ಬಾಯಿಂದಲೇ ಪ್ರಾರಂಭವಾಗುತ್ತವೆ. ಆದ್ದರಿಂದ ಇವುಗಳ ಶುಚಿತ್ವವನ್ನು ಕಾಪಾಡಿಕೊಳ್ಳುವುದು ಜವಾಬ್ದಾರಿಯುತ ವ್ಯಕ್ತಿಗಳ ಕರ್ತವ್ಯವಾಗಿದೆ ಎಂದು ತಿಳಿಸಿದರು.

ದೇಶೀಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ಪಿ.ದಿನೇಶ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಇಂತಹ ಕಾರ್ಯಕ್ರಮಗಳು ಅತ್ಯಂತ ಅಗತ್ಯವಾಗಿದ್ದು, ತಂಬಾಕು ಸೇವನೆ ಮಾಡುವ, ಗುಟ್ಕಾ ತಿನ್ನುವ ಯುವಜನರು ಮುಂದೆ ಸಂಭವಿಸಬಹುದಾದ ಮಾರಕ ರೋಗಗಳ ಬಗ್ಗೆ ಮಾಹಿತಿ ಹೊಂದಿರಬೇಕು. ಕೆಟ್ಟ ಅಭ್ಯಾಸಗಳನ್ನು ಈಗಿನಿಂದಲೇ ತ್ಯಜಿಸಬೇಕು ಎಂದು ಹೇಳಿದರು.

DVS College of Arts, Science and Commerce ದೇಶೀಯ ವಿದ್ಯಾಶಾಲಾ ಸಮಿತಿ ಸಹ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ್ ಶೆಟ್ಟಿ ಮಾತನಾಡಿ, ದಂತ ತಪಾಸಣೆ ಮತ್ತು ಚಿಕಿತ್ಸೆ ವೆಚ್ಚಗಳು ಹೆಚ್ಚಾಗುತ್ತಿದ್ದು, ಆದಷ್ಟು ಕಡಿಮೆ ವೆಚ್ಚದಲ್ಲಿ ಚಿಕಿತ್ಸೆಗಳು ದೊರೆಯುವಂತೆ ಆಗಬೇಕು ಎಂದು ತಿಳಿಸಿದರು.

ಸುಬ್ಬಯ್ಯ ದಂತ ವೈದ್ಯಕೀಯ ವಿಜ್ಞಾನ ಸಂಸ್ಥೆ ಸಹಾಯಕ ಪ್ರಾಧ್ಯಾಪಕಿ ಡಾ. ಆರ್.ಪರಿಮಳಾ, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಪ್ರೊ. ಎನ್.ಕುಮಾರಸ್ವಾಮಿ ಇತರರಿದ್ದರು.

ಫೆ. 17. ವೀರೇಶ್ವರ ಪುಣ್ಯಾಶ್ರಮದಲ್ಲಿ ಕು.ಶ್ರೀಗೌರಿ ಎಂ.ಜೋಷಿ ಅವರ ಗಾಯನ

0

ಶಿವಮೊಗ್ಗ ನಗರದ ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ ಪಾಠ ಶಾಲೆಯಲ್ಲಿ ಗಾನಲಹರಿ ೧೧೭ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ್ಯಕ್ರಮವನ್ನು ಫೆ. ೧೭ರ ಮಂಗಳವಾರ ಸಂಜೆ ೬.೩೦ಕ್ಕೆ ಆಯೋಜಿಸಲಾಗಿದೆ.
ರಾಜ್ಯ ಪ್ರಶಸ್ತಿ ಪುರಸ್ಕೃತ ಆರ್.ಬಿ. ಸಂಗಮೇಶ್ವರ ಗವಾಯಿಗಳೂ ಅಧ್ಯಕ್ಷತೆ ವಹಿಸಿದ್ದರು. ನಗರದ ಶ್ರೀರಾಮ ಕ್ಷತ್ರಿಯ ಭಜನಾ ಮಂಡಳಿಯಿಂದ ಭಜನಾ ಸೇವೆ ಮತ್ತು ಆಶ್ರಮದ ಅಂಧ ಮಕ್ಕಳು ಪ್ರಾರ್ಥಿಸಲಿದ್ದಾರೆ. ದಾವಣಗೆರೆಯ ಗಾಯಕರಾದ ಕು. ಶ್ರೀಗೌರಿ ಎಂ. ಜೋಶಿ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ರಾಜ್ಯ ಪ್ರಶಸ್ತಿ ಪುರಸ್ಕತ ರಾಮಣ್ಣ ಭಜಂತ್ರಿ, ವೀರಭದ್ರಶಾಸ್ತ್ರಿ ವೇದ ಘೋಷ, ವಿನಾಯಕ ಭಟ್ ತಬಲ, ಸಿದ್ದಣ್ಣ ಬಡಿಗೇರ್ ಹಾರ್‍ಮೋನಿಯಂ ಜೊತೆ ಸಾಥ್ ನೀಡಲಿದ್ದಾರೆ. ರೇವಣ್ಣ ಸಿದ್ದಯ್ಯ ಶಾಸ್ತ್ರಿಗಳು ನಿರೂಪಿಸಲಿದ್ದಾರೆ.

Krishna Bhairegowda ಸದ್ದಿಲ್ಲದೇ ನಡೆದ ಕ್ರಾಂತಿ: ರಾಜ್ಯ ಸರ್ಕಾರದ ಭೂ ಗ್ಯಾರಂಟಿ- ಸಚಿವ ಕೃಷ್ಣ ಭೈರೇಗೌಡ

0

Krishna Bhairegowda ದಾಖಲೆ ರಹಿತ ಜನವಸತಿಗಳಿಗೆ ಕಂದಾಯ ಗ್ರಾಮದ ಭಾಗ್ಯ ಇದು ರಾಜ್ಯದ ಕಂದಾಯ ಇಲಾಖೆಯ ಹೊಸ ಉಪಕ್ರಮವಾಗಿದೆ.

ಹಲವು ವರ್ಷಗಳಿಂದ ಗ್ರಾಮದ ಸ್ಥಾನಮಾನವಿಲ್ಲದೆ, ಸೌಲಭ್ಯಗಳಿಂದ ವಂಚಿತರಾಗಿದ್ದ ಜನವಸತಿ ಪ್ರದೇಶಗಳಿಗೆ ದಾಖಲೆಯನ್ನು ಕಲ್ಪಿಸಿ ಅವರ ವಾಸಿಸುವ ಹಕ್ಕನ್ನು ಎತ್ತಿ ಹಿಡಿದಿದೆ.

2023ರ ವರೆಗೆ ಕೇವಲ 1.08 ಲಕ್ಷ ಜನರಿಗೆ ಮಾತ್ರ ಮ್ಯಾನುವಲ್‌ ಹಕ್ಕುಪತ್ರ ನೀಡಲಾಗಿತ್ತು. ಆದರೆ ಇಂದು ಅಂತಹ ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸಿ, ಹಕ್ಕುಪತ್ರ ವಿತರಣೆಗೆ ವೇಗ ನೀಡಲಾಗಿದೆ. ಈ ಮೂಲಕ ಇದೊಂದು ಜನಪರ ಕ್ರಾಂತಿಯಾಗಿ ಬದಲಾಗಿದೆ.

ಹೊಸಪೇಟೆಯಲ್ಲಿ 1,11,111 ಜನರಿಗೆ ಈಗಾಗಲೇ ಡಿಜಿಟಲ್‌ ಹಕ್ಕುಪತ್ರ ನೀಡಲಾಗಿದೆ.
ಫೆಬ್ರವರಿ 14ರಂದು ಹಾವೇರಿಯಲ್ಲಿ 1,06,724 ಜನರಿಗೆ ಡಿಜಿಟಲ್‌ ಹಕ್ಕುಪತ್ರಗಳನ್ನು ವಿತರಿಸಲಾಗಿದೆ

ಕೇವಲ ಹಕ್ಕುಪತ್ರವಲ್ಲ, ನೋಂದಣಿಯೊಂದಿಗೆ ಇ-ಸ್ವತ್ತು ಕೂಡ ಜನರ ಕೈಸೇರುತ್ತಿದೆ. ಶೀಘ್ರದಲ್ಲೇ 1,50,000 ಜನರಿಗೆ ಡಿಜಿಟಲ್‌ ಹಕ್ಕುಪತ್ರ ಸಿಗಲಿದೆ.

Krishna Bhairegowda ಇದು ಸದ್ದಿಲ್ಲದೇ ನಡೆದ ಕ್ರಾಂತಿ. ಪ್ರಣಾಳಿಕೆಯಲ್ಲಿ ಹೇಳದೇ ಜಾರಿ ಮಾಡಿದ ʼಭೂ ಗ್ಯಾರಂಟಿʼ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ..

ಶಿವಮೊಗ್ಗದಲ್ಲಿ ಶಿವರಾತ್ರಿಯ ಸಡಗರ ಶುರು

0

ನಾಡಿನೆಲ್ಲೆಡೆ ಮಹಾ ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲೂ ಶಿವರಾತ್ರಿ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ.

ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ- ಜಾತ್ರೋತ್ಸವ ನಡೆಯುತ್ತಿದೆ. ಶಿವಮೊಗ್ಗ ವಿನೋಬನಗರದ ಶಿವಾಲಯ ಹಾಗೂ ಹರಕರೆ ರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿದವು.ಪುರದಾಳು ಬಸವೇಶ್ವರ ದೇವಾಲಯ, ತೀರ್ಥಹಳ್ಳಿ ರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಶಿವರಾತ್ರಿ ಹಿನ್ನೆಲೆ ಗಣ ಹೋಮ, ಪಂಚಾಮೃತ, ಅಭಿಷೇಕ ಸೇರಿದಂತೆ ವಿಶೇಷ ಪೂಜೆ ನಡೆದವು. ಆಡಳಿತ ಮಂಡಳಿಯ ವತಿಯಿಂದ ಭಕ್ತರಿಗೆ ಉಪಹಾರ- ಪ್ರಸಾದ ವ್ಯವಸ್ಥೆ ಮಾಡಲಾಗಿದೆ.

Sahyadri College of Commerce and Management ಶಾಲಾಕಟ್ಟಡಕ್ಕೆ ಸುಣ್ಣಬಣ್ಣ ಮಾಡಿ ಸೌಂದರ್ಯ ಹೆಚ್ಚಿಸಿದ ಎನ್ಎಸ್ಎಸ್ ಶಿಬಿರಾರ್ಥಿಗಳು

0

Sahyadri College of Commerce and Management ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಎನ್ಎಸ್ಎಸ್ ಘಟಕಗಳ ವತಿಯಿಂದ ಆಯನೂರು ಸಮೀಪದ ದೊಡ್ಡಮತ್ತಲಿ ಗ್ರಾಮದಲ್ಲಿ ಆಯೋಜಿಸಿರುವ ವಾರ್ಷಿಕ ಶಿಬಿರದಲ್ಲಿ ಇಂದು ಶಾಲೆಗೆ ಸುಣ್ಣಬಣ್ಣ ಮಾಡುವುದರ ಜೊತೆಗೆ ಅಲಂಕಾರಿಕವಾಗಿ ಹಸೆ ಚಿತ್ತಾರದ ಕೆಲಸವನ್ನು ಮಾಡಲಾಯಿತು. ಎನ್ಎಸ್ಎಸ್ ನ ಹಿರಿಯ ಸ್ವಯಂಸೇವಕರು, ಶಿಬಿರದ ವಿದ್ಯಾರ್ಥಿಗಳು, ಆಸಕ್ತ ಅಧ್ಯಾಪಕರು ಸೇರಿಕೊಂಡು ಹಸೆ ಚಿತ್ತಾರವನ್ನು ಬಿಡಿಸುತ್ತಿದ್ದಾರೆ. ಮೂರು ದಿನಗಳ ಕಾಲ ಈ ಕಾರ್ಯ ನಡೆಯಲಿದೆ.

ಸಂತ ಸೇವಾಲಾಲ್ ಜಯಂತಿಯಲ್ಲಿ ಪಾಲ್ಗೊಂಡ ಸಂಸದ ರಾಘವೇಂದ್ರ

0

ಬಂಜಾರ ಕಾಶಿ ಸೂರಗೊಂಡನಕೊಪ್ಪದಲ್ಲಿ ಸಂತಗುರು ಸಂತ ಸೇವಾಲಾಲ್ ಮಹಾರಾಜ್ ಅವರ 287ನೇ ಜಯಂತಿ ಮಹೋತ್ಸವ ನಡೆಯಿತು.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಐತಿಹಾಸಿಕ ಪುಣ್ಯಕ್ಷೇತ್ರವಾದ ಸುರಗೊಂಡನಕೊಪ್ಪದಲ್ಲಿ (ಭಾಯಗಡ್) ನಡೆದ ಸಂತಗುರು ಸೇವಾಲಾಲ್ ಮಹಾರಾಜ್ ಅವರ 287ನೇ ಜಯಂತಿ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ , ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್,ದಾವಣಗೆರೆ ಸಂಸದೆ
ಡಾ. ಪ್ರಭಾ ಮಲ್ಲಿಕಾರ್ಜುನ್,
ಶ್ರೀ ಪಿ. ರಾಜೀವ್ ,ಮಾಜಿ ಶಾಸಕರು,
ಶ್ರೀ ಎಂ.ಪಿ. ರೇಣುಕಾಚಾರ್ಯ ,ಮಾಜಿ ಶಾಸಕರು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

CM Siddharamaiah ನೆಮ್ಮದಿಯನ್ನು ಮರುಸ್ಥಾಪಿಸಿದ ಸಂತೃಪ್ತಿ ನಮಗಿದೆ- ಸಿದ್ಧರಾಮಯ್ಯ

0

CM Siddharamaiah ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸುವ ಸಂಕಲ್ಪದೊಂದಿಗೆ ಅಧಿಕಾರ ವಹಿಸಿಕೊಂಡ ನಾವು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ದುಷ್ಟಶಕ್ತಿಗಳ ನಿಯಂತ್ರಣಕ್ಕಾಗಿ ಕೋಮುನಿಗ್ರಹ ಪಡೆ ರಚನೆ ಮಾಡಿದ್ದೇವೆ ಹಾಗೂ ವಿಧಾನ ಮಂಡಲದ ಉಭಯ ಸದನಗಳಲ್ಲಿ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ – 2025ಕ್ಕೆ ಅನುಮೋದನೆ ದೊರೆತಿದೆ.
ಕೋಮುಗಲಭೆ, ಮತೀಯವಾದ ಮುಂತಾದ ಯಾವುದೇ ಅಹಿತಕರ ಘಟನೆಗಳು ನಡೆಯದೆ ಸಮಾಜದಲ್ಲಿ ಶಾಂತಿ – ನೆಮ್ಮದಿಯನ್ನು ಮರುಸ್ಥಾಪಿಸಿದ ಸಂತೃಪ್ತಿ ನಮಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

CM Siddharamaiah 1,000 ದಿನಗಳ ಈ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ನಾಡಿನ ಜನತೆಗೆ ಅರ್ಪಿಸುತ್ತಿದ್ದೇವೆ. ನಿಮ್ಮ ಪ್ರೀತಿ – ಸಹಕಾರ ಮುಂದೆಯೂ ನಮ್ಮೊಂದಿಗಿರಲಿ ಎಂದಿದ್ದಾರೆ

Klive Special Article ಮಂಗಳಕರ ರಾತ್ರಿ…ಶಿವರಾತ್ರಿ ಲೇ: ಎನ್. ಜಯಭೀಮ ಜೊಯ್ಸ್. ಶಿವಮೊಗ್ಗ

0

Klive Special Article ಮಹಾಶಿವರಾತ್ರಿ ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದಾಗಿದೆ. ಈ ಹಬ್ಬದ ವೈಶಿಷ್ಟ್ಯವೆಂದರೆ
ಇಡೀದಿನ ಉಪವಾಸ,ಜಾಗರಣೆಗಳನ್ನು ಮಾಡಿ,
ನಾಲ್ಕು ಯಾಮಗಳಲ್ಲಿಯೂ ಶಿವಪೂಜೆಯನ್ನು ಮಾಡುವುದರ ಮೂಲಕ ಆಚರಿಸಲಾಗುತ್ತದೆ.ಇಡೀ
ಭಾರತದಾದ್ಯಂತ ಬಹುತೇಕ ಎಲ್ಲಾ ಭಾಗಗಳಲ್ಲಿಯೂ ಆಚರಿಸುವ ಹಬ್ಬ ಇದಾಗಿದೆ.
ಶಿವಭಕ್ತರ ಪಾಲಿಗೆ ಮಂಗಳಕರರಾತ್ರಿ. ಸಾಮಾನ್ಯವಾಗಿ ಎಲ್ಲ ಹಬ್ಬಗಳಲ್ಲಿಯೂ ದೇವರಿಗೆ ಹಗಲು
ಹೊತ್ತು ಪೂಜೆ ನಡೆಯುತ್ತದೆ. ರಾತ್ರಿ ಎಂದರೆ ಕತ್ತಲು, ಕತ್ತಲು ಎಂದರೆ ಅಜ್ಞಾನ, ಅಜ್ಞಾನವನ್ನು ಹೋಗಲಾಡಿಸಿ ಸುಜ್ಞಾನವನ್ನು ದಯಪಾಲಿಸು ಎಂದು ಶಿವನನ್ನು ಪ್ರಾರ್ಥಿಸುವ ಶುಭ ದಿನವೇ ಶಿವ
ರಾತ್ರಿ. ಅಜ್ಞಾನವೆಂಬೊ ಅಂಧಕಾರ ತುಂಬಿರುವಲ್ಲಿ ಶಿವನು ತನ್ನ ಕಟಾಕ್ಷದಿಂದ ಅಜ್ಞಾನವನ್ನು ಪರಿಹರಿಸಿ
ಜ್ಞಾನದ ಬೆಳಕನ್ನು ನೀಡುತ್ತಾನೆ ಎಂಬ ದೃಢವಾದ ನಂಬಿಕೆ ಇದೆ.
ಶಿವಪುರಾಣದಲ್ಲಿ ಹೇಳಿರುವ ಪ್ರಕಾರ ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿಅನುಗ್ರಹಮಾಡುವುದಾಗಿ ಸ್ವತ: ಶಿವನೇ ಪಾರ್ವತಿಯಲ್ಲಿ ತಿಳಿಸಿದ್ದಾನೆ. ಹಿಮವಂತನ ಮಗಳು ಪಾರ್ವತಿ ಈ ದಿನದಂದು ರಾತ್ರಿಯಿಡೀ ಶಿವನ ಕುರಿತು ಜಪ ಮಾಡುತ್ತಾ,ತಪಸ್ಸು ಮಾಡಿ ಶಿವನ ಮೆಚ್ಚಿಕೆಗೆ ಪಾತ್ರಳಾಗಿ ವಿವಾಹವಾದಳೆಂಬುದು ಪ್ರತೀತಿ. ಶಿವರುದ್ರ ತಾಂಡವನಾಡಿದ ರಾತ್ರಿಯೂ ಇಂದೇ ಎನ್ನಲಾಗುತ್ತದೆ. ದೇವತೆಗಳು ಹಾಗೂ ಅಸುರರ ನಡುವೆಸಮುದ್ರ ಮಂಥನ ನಡೆದು ವಿಷ ಉದ್ಭವವಾದಾಗ ಅದನ್ನು ಶಿವ ಕುಡಿದ.ವಿಷವನ್ನು ಗಂಟಲೊಳಗಿಂದ ಇಳಿಯದಂತೆ ಪಾರ್ವತೀ ಇಡೀ ರಾತ್ರಿತಡೆದಳು ಎಂದು ತಿಳಿಸುತ್ತದೆ ಶಿವಪುರಾಣ.
ವಿಷಕುಡಿದಪರಿಣಾಮವಾಗಿಶಿವನಕಂಠ(ಗಂಟಲು)ನೀಲಿ ಬಣ್ಣಕ್ಕೆತಿರುಗುತ್ತದೆ. ಆದ್ದರಿಂದಲೇ ಶಿವನನ್ನು “ನೀಲಕಂಠ”ಎಂದು ಕರೆಯುತ್ತಾರೆ. ವಿಷ್ಣುಅಲಂಕಾರ ಪ್ರಿಯನಾದರೆ,ಶಿವ ಅಭಿಷೇಕ ಪ್ರಿಯ,ಸತತ ಜಲಾ
ಭಿಷೇಕ ಪ್ರಿಯನು.
Klive Special Article ಶಿವನು ಭೋಲೇನಾಥ ಅಂದರೆ ಮುಗ್ಧನು. ಬೇಡಿದ್ದ
ನ್ನು ನೀಡುವ ದಯಾಳು.ಲಂಕಾಧೀಶ ರಾವಣನಿಗೆ ಅವನಭಕ್ತಿಗೆ ಮೆಚ್ಚಿ ಆತ್ಮಲಿಂಗವನ್ನೇ ಕೊಡುತ್ತಾನೆ. ಶಿವಭಕ್ತ ಮಾರ್ಕಂಡೇಯನ ಭಕ್ತಿಗೆ ಮೆಚ್ಚಿ ಅವನನ್ನು ಚಿರಂಜೀವಿಯನ್ನಾಗಿ ಮಾಡುತ್ತಾನೆ. ಶಿವಭಕ್ತಸಿರಿಯಾಳನಿಗೂ ಒಲಿದ ಶಿವ. ಕರುಣಾಮಯಿಯಾದ ಶಿವನು ಭಕ್ತಿಗೆ ಒಲಿಯುವನು.
ಶಿವನ ದೇವಾಲಯಗಳಲ್ಲಿ ರಾತ್ರಿಯಿಡೀ ಪೂಜಾದಿಗಳು,ಶಿವನಸ್ತೋತ್ರ ಪಾರಾಯಣ ಎಲ್ಲವೂ ನಡೆಯುವವು. ಶಿವರಾತ್ರಿಯ ಮಾರನೆಯ ದಿನ ಪಾರಣೆಯನ್ನು ಮಾಡಿ ಶಿವರಾತ್ರಿ ಹಬ್ಬವನ್ನು ಆಚರಿಸುವರು.
ಶಿವರಾತ್ರಿ ಹಬ್ಬದಂದು ಭಕ್ತರು ಶಿವನ ದೇವಾಲಯ
ಗಳಿಗೆ ಹೋಗಿ ಶಿವನ ದರ್ಶನ ಮಾಡಿ ಧನ್ಯರಾಗುವರು.
ಶಿವರಾತ್ರಿ ಹಬ್ಬದಂದು ಎಲ್ಲರಿಗೂ ಸನ್ಮಂಗಳವನ್ನು ಕರುಣಿಸುವಂತೆ ಪರಮೇಶ್ವರನಲ್ಲಿ ಭಕ್ತಿಯಿಂದ
ಪ್ರಾರ್ಥನೆ ಮಾಡೋಣ.

ಟಗರು ಕಾಳಗ ಸ್ಪರ್ಧೆಗೆ ಯಶ ಕೋರಿದ ನಟ ಡಾಲಿ ಧನಂಜಯ್

0

ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 15ರಂದು ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಬಾರಿ ಟಗರು ಕಾಳಗದ ದ ‘ಸಂಗೊಳ್ಳಿ ರಾಯಣ್ಣ , ವೀರ ಶಿವಪ್ಪ ನಾಯಕ, ಭಗೀರಥ,ವೀರ ಸಿಂಧೂರ ಲಕ್ಷ್ಮಣ ಟ್ರೋಫಿಗಳನ್ನು ಸ್ಯಾಂಡಲ್‌ವುಡ್‌ನ ನಟರಾಕ್ಷಸ ಡಾಲಿ ಧನಂಜಯ್ ರವರು ಅನಾವರಣಗೊಳಿಸಿ ಶಿವಮೊಗ್ಗ ಮಾರಿ ಜಾತ್ರೆಯ ಟಗರು ಕಾಳವು ಯಶಸ್ವಿಯಾಗಲೆಂದು ಶುಭ ಕೋರಿದರು.

ಈ ಸಂದರ್ಭದಲ್ಲಿ ನಮ್ಮೂರ ಬಳಗದ ಪ್ರಧಾನ ಸಂಚಾಲಕರಾದ ಕೆ. ರಂಗನಾಥ್, ಗೌರವ ಸಂಚಾಲಕರುಗಳಾದ ನಾಗರಾಜ್ ಕಂಕರಿ, ಎಚ್ ಪಾಲಾಕ್ಷಿ, ಐಡಿಯಲ್ ಗೋಪಿ, ಪಿ.ಎಚ್ ಮಾಲ್ತೇಶ್, ಸಂಚಾಲಕರುಗಳಾದ ಹೆಚ್. ಪಿ. ಗಿರೀಶ್, ಎಂ ರಾಕೇಶ್, ರಾಜೇಶ್ ಮಂದಾರ, ಮನ್ವಿತ್ ಹಾಗೂ ಇತರರಿದ್ದರು.