Karnataka State Brahmin Development Board ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ 2026-27ನೇ ಸಾಲಿನ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ನೇರವಾಗಿ ಸಾಲ ಮತ್ತು ಸಹಾಯಧನ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಮುಂತಾದ ವ್ಯವಹಾರ ವಹಿವಾಟುಗಳನ್ನು ಪ್ರಾರಂಭಿಸಲು ಕನಿಷ್ಠ ರೂ 1.00 ಲಕ್ಷದಿಂದ ಗರಿಷ್ಠ ರೂ.2.00 ಲಕ್ಷಗಳವರೆಗೆ ಆರ್ಥಿಕ ನೆರವು ಒದಗಿಸಲಾಗುತ್ತದೆ. ಈ ಪೈಕಿ ಶೇ. 20ರಷ್ಟು ಸಹಾಯಧನ ಸಿಗಲಿದ್ದು, ಉಳಿಕೆ ಮೊತ್ತ ರೂ.80,000/- ವರೆಗೆ ಶೇ. 4ರಷ್ಟು ವಾರ್ಷಿಕ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ದೊರೆಯಲಿದೆ.
ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ವರ್ಗದ ಪ್ರಮಾಣ ಪತ್ರವನ್ನು ಹೊಂದಿರಬೇಕು.
ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.18 ರಿಂದ 65 ವರ್ಷದೊಳಗಿರಬೇಕು.
ಮಹಿಳೆಯರಿಗೆ ಶೇ. 33 ಹಾಗೂ ದಿವ್ಯಾಂಗದವರಿಗೆ ಶೇ. 5 ರಷ್ಟು ಮೀಸಲಾತಿ ಇರಲಿದಗದು, ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆ ಸೀಡ್ ಆಗಿರಬೇಕು.
Karnataka State Brahmin Development Board ಅರ್ಹ ಆಸಕ್ತರು ದಿ: 31-08-2026ರ ಸಂಜೆ 5:30 ರ ಒಳಗಾಗಿ ಮಂಡಳಿಯ ಅಧಿಕೃತ ವೆಬ್ಸೈಟ್ www.ksbdb.karnataka.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ಸಹಾಯವಾಣಿ (Helpline): 8029605888, 8762249230, 08182 255294 ಹಾಗೂ ಮಂಡಳಿಯ ಫೇಸ್ ಬುಕ್ ಹಾಗೂ ಇನ್ಸ್ಟಾಗ್ರಾಂ ಪುಟಗಳನ್ನು ವೀಕ್ಷಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ತಿಳಿಸಿದ್ದಾರೆ.
Karnataka State Brahmin Development Board ವಿಪ್ರ ಸ್ವ- ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ
ಜುಲೈ 28 ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ
ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜು. 28 ರ ಮಂಗಳವಾರ ರಂದು ಬೆಳಗ್ಗೆ 11 ಗಂಟೆಗೆ ಜನಸಂಪರ್ಕ ಸಭೆ ನಡೆಯಲ್ಲಿದ್ದು, ಈ ಸಭೆಯಲ್ಲಿ ಮೆಸ್ಕಾಂ ನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಗ್ರಾಹಕರು ತಮ್ಮ ಕುಂದುಕೊರತೆಗಳನ್ನು ಚರ್ಚಿಸಲು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಮೊ.ಸಂ.9480833052 ನ್ನು ಸಂಪರ್ಕಿಸಬಹುದೆಂದುಹೊಳೆಹೊನ್ನೂರುಕಾರ್ಯ ಮತ್ತು ಪಾಲನಾ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ), ರವರು ಕೋರಿದ್ದಾರೆ.
ಆರೋಗ್ಯವಂತ ಮಹಿಳೆ, ಆರೋಗ್ಯವಂತ ಕುಟುಂಬದ ನಿರ್ಮಾತೃ- ಎಸ್.ಎಸ್.ಸಂಧ್ಯಾ
ಆರೋಗ್ಯವಂತ ಮಹಿಳೆ ಆರೋಗ್ಯವಂತ ಕುಟುಂಬವನ್ನು ನಿರ್ಮಿಸುತ್ತಾಳೆ, ಇದರಿಂದ ಆರೋಗ್ಯವಂತ ಕುಟುಂಬಗಳು ಸದೃಢ ರಾಷ್ಟ್ರದ ಅಡಿಪಾಯವಾಗುತ್ತವೆ ಡಾ. ಸಂಧ್ಯಾ.ಎಸ್.ಎಸ್ ಎಂದು ತಿಳಿಸಿದರು.
ಶಿವಮೊಗ್ಗ ನಗರದ ರೋಟರಿ ಈಸ್ಟ್ ಶಾಲೆಯಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ವತಿಯಿಂದ ಏರ್ಪಡಿಸಿದ್ದ ಮಾತೃತ್ವ ತಾಯ್ತನ ಆರೋಗ್ಯ ಕುರಿತ ವಾರದ ಸಭೆಯಲ್ಲಿ ಭಾಗವಹಿಸಿ ರೋಟರಿ ಸದಸ್ಯರುಗಳನ್ನುದ್ದೇಶಿಸಿ ಮಾತನಾಡಿದ ಅವರು, ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ, ಯೋಗ, ನಿಯಮಿತ ಆರೋಗ್ಯ ತಪಾಸಣೆಗಳು, ಸಮಯೋಚಿತ ಲಸಿಕಾಕರಣ ಹಾಗೂ ಆರೋಗ್ಯ ವಿಮೆಯ ಮಹತ್ವವನ್ನು ನಾವು ಒತ್ತಿಹೇಳಿದ್ದೇವೆ. ರೋಗಗಳ ತಡೆಗಟ್ಟುವಿಕೆ, ಆರಂಭಿಕ ಹಂತದಲ್ಲೇ ಪತ್ತೆಹಚ್ಚುವಿಕೆ ಮತ್ತು ಆರೋಗ್ಯದ ಕುರಿತು ತಿಳಿವಳಿಕೆಯುಳ್ಳ ನಿರ್ಧಾರಗಳನ್ನು ಕೈಗೊಳ್ಳುವುದು ಜೀವನಪರ್ಯಂತ ಉತ್ತಮ ಆರೋಗ್ಯದ ಪ್ರಮುಖ ಆಧಾರಸ್ತಂಭಗಳಾಗಿವೆ ಎಂದರು.
ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು, ಮುನ್ನೆಚ್ಚರಿಕೆಯ ಆರೋಗ್ಯ ಕಾಳಜಿಯನ್ನು ವಹಿಸುವ ಮೂಲಕ ಆರೋಗ್ಯವಂತ ಮುಂದಿನ ಪೀಳಿಗೆಯನ್ನು ನಿರ್ಮಿಸೋಣ ವೈದ್ಯ ವೃತ್ತಿಯು ಸಾಕಷ್ಟು ಆಧುನಿಕ ಬದಲಾವಣೆಯಾಗುತ್ತಾ ಸುಧಾರಣೆಯನ್ನು ಕಂಡಿದೆ. ರೋಗಿಗಳ ವಿಶ್ವಾಸ ಹೆಚ್ಚಾಗಲು ಡಾಕ್ಟರ್ ಮೇಲಿನ ನಂಬಿಕೆಗಳು ಪ್ರಮುಖ ಪಾತ್ರ ವಹಿಸುತ್ತಿದೆ ಎಂದ ಅವರು, ಈ ಸಂದರ್ಭದಲ್ಲಿ ನಮ್ಮನ್ನ ಗುರುತಿಸಿ ಗೌರವಿಸಿದ ರೋಟರಿ ಸಂಸ್ಥೆಗೆ ಸದಾ ಚಿರಋಣಿಯಾಗಿರುತ್ತೇನೆ ಎಂದು ನುಡಿದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ಉಪಾಧ್ಯಕ್ಷರಾದ ಜಿ.ವಿಜಯ್ ಕುಮಾರ್, 30 ವರ್ಷಗಳ ಸುದೀರ್ಘ ವೈದ್ಯಕೀಯ ಸೇವೆಯ ಅನುಭವ ಹೊಂದಿರುವcಡಾ. ಸಂಧ್ಯಾ.ಎಸ್.ಎಸ್ ಇವರು, 2014 ರಿಂದ ಸರ್ಜಿ ಆಸ್ಪತ್ರೆಯಲ್ಲಿ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗವನ್ನು ಶೂನ್ಯದಿಂದ ಆರಂಭಿಸಿ ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಈ ಅವಧಿಯಲ್ಲಿ 13,000 ಕ್ಕೂ ಹೆಚ್ಚು ಹೆರಿಗೆಗಳನ್ನು ಯಶಸ್ವಿಯಾಗಿ ಮಾಡಿಸಿದ ಕೀರ್ತಿ ಇವರಿಗಿದೆ. ಬಂಜೆತನ ನಿವಾರಣಾ ಚಿಕಿತ್ಸೆ 22 ವಾರಗಳವರೆಗಿನ ಗರ್ಭಾಶಯದ ಸಂಕೀರ್ಣ ಲ್ಯಾಪರೊಸ್ಕೋಪಿ ಶಸ್ತ್ರಚಿಕಿತ್ಸೆಗಳು, ಅಂಡಾಶಯದ ಸರ್ಜರಿಗಳು ಮತ್ತು ಹಿಸ್ಟರೊಸ್ಕೋಪಿ ಚಿಕಿತ್ಸೆಗಳಲ್ಲಿ ಇವರು ಪರಿಣಿತರು. ಅತ್ಯಂತ ಅಪಾಯಕಾರಿ ಗರ್ಭಾವಸ್ಥೆಯ ಸಂದರ್ಭಗಳಲ್ಲಿ ತಕ್ಷಣದ ಹಾಗೂ ದಕ್ಷ ಚಿಕಿತ್ಸೆ ನೀಡುವ ಮೂಲಕ ಪ್ರಸಿದ್ಧರಾಗಿದ್ದಾರೆ. ರೋಗಿಗಳಿಗೆ ಕಷ್ಟದ ಸಮಯದಲ್ಲಿ ಧೈರ್ಯ ತುಂಬುತ್ತಾ, ಅವರ ನಂಬಿಕೆ ಮತ್ತು ಆಶೀರ್ವಾದಗಳನ್ನೇ ತಮಗೊಲಿದ ದೊಡ್ಡ ಪ್ರಶಸ್ತಿ ಎಂದು ಭಾವಿಸಿರುವ ಇವರ ಸೇವಾ ಪ್ರವೃತ್ತಿ ಅನನ್ಯವಾದದ್ದು ಎಂದು ತಿಳಿಸಿದರು.
ಈ ಸಂದಭದಲ್ಲಿ ಚುನಾಯಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್, ಝೋನಲ್ ಲೆಫ್ಟಿನೆಂಟ್ ಮಹೇಶ್ ಆಲೇಮನೆ, ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ನ ಕಾರ್ಯದರ್ಶಿ ಆರ್.ಮನೋಹರ, ಪದಾಧಿಕಾರಿಗಳು, ಮಾಜಿ ಅಧ್ಯಕ್ಷರಾದ ಆದಿಮೂರ್ತಿ.ಹೆಚ್.ಬಿ, ಗಣೇಶ್.ಎಸ್, ಅರುಣ್ ಎಸ್.ದೀಕ್ಷಿತ್, ನಾಗರಾಜ್, ಕೃಷ್ಣಮೂರ್ತಿ ಆರ್, ನಾಗರಾಜ್.ಎಂ.ಪಿ., ಸುರೇಂದ್ರ ಕಾಸಲ, ಲಕ್ಷ್ಮಣ್ ಬಾಬು, ನಿಕಟ ಪೂರ್ವ ಅಧ್ಯಕ್ಷರಾದ ಡಿ.ಕಿಶೋರ್ ಕುಮಾರ್, ನಿಕಟ ಪೂರ್ವ ಕಾರ್ಯದರ್ಶಿ ಬಿ.ಆರ್.ಧನಂಜಯ್, ಶಶಿಕಾಂತ್ ನಾಡಿಗ್, ಸುನಿಲ್ ಕುಮಾರ್ ಜಿ., ರವಿಪ್ರಕಾಶ್ ಕಾಳಾಚಾರ್, ಸಂತೋಷ ಕುಮಾರ್ ಬಿ.ಎನ್., ಡಾ. ಅರುಣ್ ಎಂ.ಎಸ್, ದಿಲೀಪ್ ಜೈನ್ ಗಂಗಪ್ಪ, ಜಗದೀಶ್ ಹಾಗೂ ಹೆಚ್ಚಿನ ಸಂಖ್ಯೆಯ ರೊಟೇರಿಯನ್ಸ್ ಪಾಲ್ಗೊಂಡಿದ್ದರು.
Rotary Club of Shivamogga ವೈದ್ಯರು ಉಚಿತವಾಗಿ ನೀಡುವ ಸಲಹಾ ಸೌಲಭ್ಯ ಬಳಸಿಕೊಳ್ಳಿ- ಎನ್.ಗೋಪಿನಾಥ್
Rotary Club of Shivamogga ವೈದ್ಯರು ಉಚಿತವಾಗಿ ನೀಡುತ್ತಿರುವ ಸಲಹೆಗಳನ್ನು ಬಳಸಿಕೊಳ್ಳಿ ಎಂದು ರೋಟರಿ ಕ್ಲಬ್ ಶಿವಮೊಗ್ಗದ ಅಧ್ಯಕ್ಷರಾದ ಎನ್. ಗೋಪಿನಾಥ್ ನುಡಿದರು. ಅವರು ರೋಟರಿ ಕ್ಲಬ್ ಶಿವಮೊಗ್ಗ ನಿಸರ್ಗ ಮನೆ ಶಿರಸಿಯ ಸಹಯೋಗದಲ್ಲಿ ದಿನಾಂಕ 26.7.26 ರಂದು ನಗರದ ಮಥುರಾ ಪ್ಯಾರಡೈಸ್ ನಲ್ಲಿ ಹಮ್ಮಿಕೊಂಡಿದ್ದ ಉಜಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಮತ್ತೋರ್ವ ಉದ್ಘಾಟಕರಾದ ನಿಸರ್ಗ ಮನೆ ಶಿರಸಿಯ ವೈದ್ಯರಾದ ಡಾ. ವೆಂಕಟರಮಣ ಹೆಗ್ಡೆ ಮಾತನಾಡಿ ಆರೋಗ್ಯಕ್ಕೆ ಪೂರಕವಾದ ಸರಳ ಸೂತ್ರಗಳನ್ನು ತಿಳಿಸಿದರು. 150 ಮಂದಿ ಫಲಾನುಭವಿಗಳು ಉಚಿತ ಚಿಕಿತ್ಸೆ ಪಡೆದರು. ರೋಟರಿ ಕ್ಲಬ್ ಶಿವಮೊಗ್ಗದ ಕಾರ್ಯದರ್ಶಿ ಶ್ರೀ ಶೈಲಿನ್ ಬಾಬು, ಸಹಕಾರ್ಯದರ್ಶಿ ಶ್ರೀ ವಿಜಯಕುಮಾರ್, ಮಾಜಿ ಅಧ್ಯಕ್ಷರುಗಳಾದ ಡಾ. ಬಿ. ವಿ. ಲಕ್ಷ್ಮೀದೇವಿ ಗೋಪಿನಾಥ್ ಹಾಗೂ ಶ್ರೀ ವೀರಣ್ಣ ಹುಗ್ಗಿ ಮತ್ತು ನಿರ್ದೇಶಕರಾದ ಶ್ರೀ ಶ್ರೀನಿವಾಸ್ , ಶ್ರೀ ವಿ. ಜಿ. ಹೆಗ್ಡೆ ಮತ್ತು ನಿಸರ್ಗ ಮನೆ ಶಿರಸಿಯ ವೈದ್ಯರ ತಂಡ ಉಪಸ್ಥಿತರಿದ್ದರು.
ಇಂದಿನ ಮಕ್ಕಳಲ್ಲಿ ಭವಿಷ್ಯದ ಸವಾಲು ಸ್ವೀಕರಿಸಿ ಮುನ್ನುಗ್ಗುವ ಮನೋಭಾವ ಬೆಳೆಸುವ ನೈತಿಕ ಧೈರ್ಯ ತುಂಬ ಬೇಕಿದೆ- ಡಾ.ಅಶೋಕ ಕಾಮತ್
ಇಂದಿನ ಮಕ್ಕಳಲ್ಲಿ ಜೀವನ ಎದುರಿಸುವ, ಸವಾಲುಗಳನ್ನ ಸ್ವೀಕರಿಸಿ ಮುನ್ನುಗ್ಗುವ ಮನೋಭಾವ ಬೆಳಸಬೇಕಿದೆ. ಕೇವಲ ಮಕ್ಕಿಕಾಮಕ್ಕಿ ಬೋಧನೆಯೂ ಕೂಡ ಮಕ್ಕಳ ಸರ್ವತೋಮುಖ ಬೆಳವಣಿಗೆ ಮಾಡಲು ಸಾಧ್ಯವಿಲ್ಲ. ಮಾರ್ಕ್ಸುಗಳಿಂದ, ಶ್ರೇಣಿಗಳಿಂದ ಮಕ್ಕಳ ಬೌದ್ಧಿಕಮಟ್ಟ ಅಳೆಯುವ ಉಪಕ್ರಮ ಯಾವತ್ತಿಗೂ ನಮಗೆ ಒಳ್ಳೆಯ ಫಲ ನೀಡದು ಎಂದು ಉಡುಪಿ ಜಿಲ್ಲಾ ತರಬೇತಿ ಮತ್ತು ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಡಾ.ಅಶೋಕ ಕಾಮತ್ ಹೇಳಿದರು.
ಶಿವಮೊಗ್ಗದ ಸನ್ ಹಾಸ್ಪಿಟಲ್ ನ ಧನ್ವಂತರಿ ಸಭಾಂಗಣದಲ್ಲಿ “ಕಿಶೋರ ದೀಪಿಕಾ” ಪುಸ್ತಕ ಲೋಕಾರ್ಪಣೆಗೊಳಿಸಿ ಮಾತನಾಡುತ್ತಿದ್ದರು.
ಸಂಸ್ಕಾರ ಭಾರತಿ,ಮಂಥನ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಶಿವಮೊಗ್ಗ ಶಾಖೆಯ ಸಹಯೋಗದಲ್ಲಿ ಈ ಕಾರ್ಯಕ್ರಮವಮ್ನ ಏರ್ಪಡಿಸಲಾಗಿತ್ತು. ಜೀವನದಲ್ಲಿ ಒಳ್ಳೆಯದು ಮತ್ತು ಒಳ್ಳೆಯದಲ್ಲದ್ದನ್ನ
ಚಿಂತಿಸಿ ನಿರ್ಧರಿಸುವ ವಿವೇಚನೆಯನ್ನ ಮಕ್ಕಳಲ್ಲಿ ಬೆಳೆಸಬೇಕಿದೆ. ಹದಿಹರೆಯದ ಹಂತದಲ್ಲಿನ ಮಕ್ಕಳಿಗೆ ಪ್ರಸ್ತುತ ” ಕಿಶೋರ ದೀಪಿಕಾ” ಒಂದು ತೋರುದೀಪ ಆಗಲಿದೆ ಎಂಬ ವಿಶ್ವಾಸ ನನ್ನದು. ನೈತಿಕವಾಗಿ ಆಲೋಚಿಸಲು ನೆರವಾಗುವಂತೆ ವಿವೇಚನೆಯ ಬೀಜ ಬಿತ್ತಲು ನೈತಿಕ ಶಿಕ್ಷಣವೇ ಪರಿಹಾರ ಸೂತ್ರ. ಆದರೆ ನಮ್ಮ ಸಮಾಜ ಇದನ್ನ ಸ್ವಲ್ಪ ಅವಧಿ ಅನುಸರಿಸಿತ್ತು. ಆದರೆ ಮುಂದುವರೆಯಲಿಲ್ಲ. ಈಗ ಗಂಭೀರವಾಗಿ ಈ ಬಗ್ಗೆ ಎಲ್ಲರೂ ಆಲೋಚಿಸುವ ಸನ್ನಿವೇಶ ಅನಿವಾರ್ಯ ನಿರ್ಮಾಣವಾಗಿದೆ. “ಕಿಶೋರ ದೀಪಿಕಾ”
ಸದ್ಯ ಕಿಶೋರ ಪೀಳಿಗೆಗೆ ಕಿವಿಮಾತು ಹೇಳಲು ಸಾಕಷ್ಟು ಪೂರಕ ವಿಚಾರಗಳನ್ನ ತುಂಬಿಕೊಂಡಿದೆ ಎಂದು ಡಾ.ಅಶೋಕ್ ಕಾಮತ್ ನುಡಿದರು.
ನಿವೃತ್ತ ಅಧ್ಯಾಪಕಿ ಮತ್ತು ಬಾಲಗೋಕುಲ ನಿರ್ವಹಿಸಿದ ಹಿರಿಯ ಲೇಖಕಿ ಹಾಗೂ “ಕಿಶೋರ ದೀಪಿಕಾ” ಗ್ರಂಥದ ಸಂಪಾದಕಿ ರುಕ್ಮಿಣಿ ನಾಯಕ್ ಅವರು ” ಪ್ರಸ್ತುತ ನಮ್ಮ ಮಕ್ಕಳಿಗೆ ಬಾಲ್ಯದಲ್ಲಿ ಬೆಳೆಸಬೇಕಾದ ಗುಣ ನಡತೆಗಳ ಬೋಧನೆ ಬಗ್ಗೆ ಸಾಕಷ್ಟು ಮಾರ್ಗದರ್ಶಿ ಸಾಹಿತ್ಯ ರಚನೆಯಾಗುತ್ತಿದೆ. ಹದಿಹರೆಯದ ಹಂತದಲ್ಲಿ ಮಕ್ಕಳ ಮನೋಭೂಮಿಕೆಯನ್ನ ಧನಾತ್ಮಕ ರೂಪಿಸಲು ಎಷ್ಟೇ ಸಾಹಿತ್ಯ ಈಗ ಬಂದಿದ್ದರೂ ಬದಲಾಗುತ್ತಿರುವ ಸಾಮಾಜಿಕ ಪರಿಸರದಲ್ಲಿ ಸಾಲದಾಗಿದೆ. ಇಂತಹ ಸಂದರ್ಭದಲ್ಲಿ ಹಿರಿಯರ, ಮಾದರಿ ವ್ಯಕ್ತಿಗಳ ಜೀವನಾದರ್ಶಗಳು ಹಾಗೂ ವರ್ತಮಾನದ ಎಚ್ಚರದೊಂದಿಗೆ ಬರೆದ ಲೇಖನಗಳು ಇಲ್ಲಿವೆ. ವಿವಿಧ ಲೇಖಕರೊಂದಿಗೆ ಸಮಗ್ರವಾಗಿ ದೀರ್ಘಕಾಲ ಸಮಾಲೋಚಿಸಿ “ಕಿಶೋರ ದೀಪಿಕಾ” ಓದುಗರ ಕೈಸೇರಿದೆ.
ಎಂದು ಪುಸ್ತಕದ ಹಿನ್ನೆಲೆ ಬಗ್ಗೆ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಡಾ.ಆಕಾಶ್ ಹೊಸತೋಟ ಅವರು” ಈಗ ಸಂದರ್ಭಕ್ಕೆ ಸರಿಯಾಗಿ ಸ್ಪಂದಿಸುವ ಸಾಮರ್ಥ್ಯವನ್ನ ನಮ್ಮ ಮಕ್ಕಳಲ್ಲಿ ಬೆಳೆಸುವ ಸಮಯ ಬಂದಿದೆ. “ಕಿಶೋರ ದೀಪಿಕಾ” ಈ ದಿಸೆಯಲ್ಲಿ ಒಂದು ಸೂಕ್ತ ದಿಕ್ಸೂಚಿಯಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಿವಮೊಗ್ಗದ “ಬಾಲಗೋಕುಲ” ನಿರ್ಮಾತೃವಾಗಿ ಗಮನಾರ್ಹ ಸೇವೆ ಸಲ್ಲಿಸಿದ , ಸದ್ಯ ಬ್ರಹ್ಮಾವರದಲ್ಲಿರುವ ಹಿರಿಯ ವಕೀಲ ಕಾ.ಗು.ಶ್ರೀಪಾದರಾವ್ ಅವರನ್ನ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಟಿ.ಜೆ .ನಾಗರತ್ನ ಪ್ರಾರ್ಥಿಸಿದರು. ಉಷಾ ನಟೇಶ್ ಕಾಸರವಳ್ಳಿ ಅವರು ಎಲ್ಲರಿಗೂ ಸ್ವಾಗತ ಕೋರಿದರು. ಡಾ.ರಂಜಿನಿ ಬಿದರಳ್ಳಿ ಅವರು ಆಕರ್ಷಕವಾಗಿ ಕಾರ್ಯಕ್ರಮ ನಿರೂಪಿಸಿದರು.
‘ಮಂಥನ’ ಕಾರ್ಯಕರ್ತ ನಿತಿನ್ ಅವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.
ವಿದ್ಯಾರ್ಥಿಗಳು ಮೊಬೈಲ್ ಪಕ್ಕಕ್ಕಿಟ್ಟು ವಾಸ್ತವಗಳನ್ನ ಅರ್ಥಮಾಡಿಕೊಂಡು ನಿಮ್ಮ ಸಾಧನೆಗೆ ಹೊಸ ವೇದಿಕೆ ಸೃಷ್ಟಿಸಿಕೊಳ್ಳಿ- ಮಾಜಿ ಸಚಿವ ಬಿ.ಸಿ.ಪಾಟೀಲ್
ಜೀವನದಲ್ಲಿ ಎದುರಾಗುವ ಕಷ್ಟದ ಪರಿಸ್ಥಿತಿಗಳನ್ನು ಸವಾಲಾಗಿ ಸ್ವೀಕರಿಸಿ ಎದುರಿಸಬೇಕು. ನಿರಂತರ ಪರಿಶ್ರಮ ವಹಿಸಿ ಮುನ್ನಡೆದಾಗ ಸಾಧನೆ ಸಾಧ್ಯ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರತಿಭಾ ಪುರಸ್ಕಾರ ಮತ್ತು ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ನಾನು ಡಿವಿಎಸ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಮುಖ್ಯ ಅತಿಥಿಯಾಗಿ ಭಾಗವಹಿಸಿರುವುದು ಸಂತಸ ತಂದಿದೆ. ವಿದ್ಯಾರ್ಥಿಗಳು ಮೊಬೈಲ್ಗಳನ್ನು ಪಕ್ಕಕ್ಕಿಟ್ಟು ವಾಸ್ತವಗಳನ್ನು ಅರ್ಥ ಮಾಡಿಕೊಂಡು ನಿಮ್ಮ ಸಾಧನೆಗೆ ಹೊಸ ವೇದಿಕೆಗಳನ್ನು ಸೃಷ್ಟಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಬಹಳ ಮುಖ್ಯವಾಗಿ ಇಂದಿನ ವೇಗದ ಜಾಗತಿಕ ಸನ್ನಿವೇಶದಲ್ಲಿ ವಿದ್ಯಾರ್ಥಿಗಳು ಒಳ್ಳೆಯದು ಯಾವುದು ಮತ್ತು ಕೆಟ್ಟದ್ದು ಯಾವುದು ಎಂಬುದನ್ನು ತಿಳಿದುಕೊಳ್ಳುವುದು ಅಷ್ಟು ಸುಲಭದ ಮಾತಲ್ಲ. ಆದ್ದರಿಂದ ಅಂತರ್ಜಾಲ ಮತ್ತು ಸಾಮಾಜಿಕ ಮಾಧ್ಯಮಗಳ ಗೀಳಿಗೆ ಒಳಗಾಗದೆ ಎಲ್ಲರೂ ವಾಸ್ತವ ಜಗತ್ತನ್ನು ಅರಿತುಕೊಳ್ಳಬೇಕು ಎಂದರು.
ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದ ಕಾಲೇಜಿನ ಹಿರಿಯ ವಿದ್ಯಾರ್ಥಿ ರಾಜೇಂದ್ರ, ವಿದ್ಯಾರ್ಥಿಗಳಿಗೆ ಇಂದಿನ ಪರಿಸ್ಥಿತಿಯಲ್ಲಿ ಹೇಗೆ ತಮ್ಮ ವರ್ತನೆಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು ಮತ್ತು ಮಾದಕ ವಸ್ತುಗಳಿಗೆ ಬಲಿಯಾಗದೆ ತಮ್ಮ ಸಾಧ£ ಮಾಡಬೇಕು ಎಂಬುದರ ಬಗ್ಗೆ ವಿವರಿಸಿದರು.
ಚಾಂದಿನಿ ಅವರು ವಿದ್ಯಾರ್ಥಿಗಳಿಗೆ ತೃತೀಯ ಲಿಂಗಿಗಳ ಬಗ್ಗೆ ಇರುವ ಅನುಮಾನ ಮತ್ತು ಗೊಂದಲಗಳನ್ನು ಪರಿಹರಿಸಿದರು. ತೃತೀಯ ಲಿಂಗಿಗಳ ಸಮಸ್ಯೆಗಳು ಪರಿಹಾರ ಕಾಣುತ್ತಿವೆ. ಸರ್ಕಾರ ಅವರಿಗೂ ಸಹ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿದೆ. ಆದರೆ ಅವರ ಬಗ್ಗೆ ಅನೇಕ ರೀತಿಯ ಅಪಪ್ರಚಾರಗಳು ನಡೆಯುತ್ತಿವೆ ಎಂದು ಅಭಿಪ್ರಾಯಪಟ್ಟರು.
ದೇಶೀಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಬಸಪ್ಪ ಗೌಡ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನಲ್ಲಿ ಉತ್ತಮ ಅಧ್ಯಯನ ನಡೆಸಿ ಉನ್ನತ ಸಾಧನೆ ಮಾಡಬೇಕು. ಉನ್ನತ ಸ್ಥಾನ ಅಲಂಕರಿಸಿ ಸಮಾಜಮುಖಿ ಮನೋಭಾವದಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.
ದೇಶೀಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ಪಿ.ದಿನೇಶ್ ಮಾತನಾಡಿ, ತಂತ್ರಜ್ಞಾನ ಯುಗದಲ್ಲಿ ಅವಶ್ಯವಿರುವ ಕೌಶಲ್ಯಗಳನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು. ನಿರಂತರ ಪರಿಶ್ರಮ ವಹಿಸಿದರೆ ಯಶಸ್ಸು ಗಳಿಸಲು ಸಾಧ್ಯ ಎಂದು ಹೇಳಿದರು.
ಅಶೋಕ್ ಪಾಟೀಲ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೇಂದ್ರ, ದೇಶೀಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಜಿ.ಮಧುಸೂದನ್, ಸಹ ಕಾರ್ಯದರ್ಶಿ ಡಾ. ಎ.ಸತೀಶ್ಕುಮಾರ್ ಶೆಟ್ಟಿ, ನಿರ್ದೇಶಕ ಕೆ.ಎನ್.ರುದ್ರಪ್ಪ ಕೊಳಲೆ, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ವೆಂಕಟೇಶ್, ಐಕ್ಯೂಎಸಿ ಸಂಯೋಜಕ ಪ್ರೊ. ಎನ್.ಕುಮಾರಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.
Chamber of commerce Shivamogga ಮಾಜಿ ಶಾಸಕ ‘ಹೆಚ್ಎಂಸಿ’ ನಿಧನಕ್ಕೆಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಸಂಘದಿಂದ ಶ್ರದ್ಧಾಂಜಲಿ
Chamber of commerce Shivamogga ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಮಾಜಿ ಶಾಸಕರ ವೇದಿಕೆಯ ಹಾಲಿ ರಾಜ್ಯಾಧ್ಯಕ್ಷ, ವೀರಶೈವ ಲಿಂಗಾಯತ ಸಮಾಜದ ಮುಖಂಡ ಎಚ್.ಎಂ.ಚಂದ್ರಶೇಖರಪ್ಪ ನಿಧನರಾಗಿದ್ದಕ್ಕೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಅವರು ಸಂತಾಪ ಸೂಚಿಸಿದ್ದಾರೆ.
ಪಾರ್ಥಿವ ಶರೀರಕ್ಕೆ ಹೂಗುಚ್ಚವನ್ನು ಅರ್ಪಿಸಿದರು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ವರ್ಗಕ್ಕೆ ನೋವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ನಿರ್ದೇಶಕರಾದ ಪ್ರದೀಪ್ ವಿ.ಎಲಿ, ವಸಂತ್ ಹೋಬಳಿದಾರ್, ಮಾಜಿ ಅಧ್ಯಕ್ಷ ಡಿ.ಎಂ.ಶಂಕರಪ್ಪ, ಜೆ.ಆರ್.ವಾಸುದೇವ್ ಹಾಜರಿದ್ದರು.
ಶಿವಮೊಗ್ಗದಲ್ಲಿ ನಾಗರಿಕ ಸೌಲಭ್ಯಗಳ ನಿರ್ಲಕ್ಷ್ಯ: ಹಿತರಕ್ಷಣಾ ವೇದಿಕೆಯಿಂದ ಶಾಸಕರಿಗೆ ಮನವಿ ಪತ್ರ
ಶಿವಮೊಗ್ಗ ನಗರದ ವಿವಿಧ ನಾಗರಿಕ ಸಮಸ್ಯೆಗಳ ಕುರಿತು ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟವು ಸರ್ಕಾರ ಮತ್ತು ಜಿಲ್ಲಾಡಳಿತದ ಗಮನವನ್ನು ಮತ್ತೊಮ್ಮೆ ಸೆಳೆದಿದೆ. ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಒಕ್ಕೂಟ ಆರೋಪಿಸಿದೆ.
ಈ ಹಿಂದೆ ಸಭೆ ನಡೆಸುವುದಾಗಿ ಭರವಸೆ ನೀಡಿದ್ದರೂ, ಇದುವರೆಗೆ ಯಾವುದೇ ಸಭೆ ನಿಗದಿಯಾಗಿಲ್ಲ ಎಂದು ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಲಿಖಿತ ಮನವಿ ಸಲ್ಲಿಸಿ, ನಗರದ ಹಲವು ಪ್ರಮುಖ ಸಮಸ್ಯೆಗಳ ಪಟ್ಟಿಯನ್ನು ಜಿಲ್ಲಾಡಳಿತದ ಗಮನಕ್ಕೆ ತಂದಿದೆ.
ಒಕ್ಕೂಟವು ಪ್ರಸ್ತಾಪಿಸಿರುವ ಪ್ರಮುಖ ಸಮಸ್ಯೆಗಳೆಂದರೆ, ನಗರದ ಅಗತ್ಯಕ್ಕೆ ತಕ್ಕ ಹೆಚ್ಚಿನ ಸಾಮರ್ಥ್ಯದ ನೀರು ಶುದ್ಧೀಕರಣ ಘಟಕಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸದಿರುವುದು, ₹300 ಕೋಟಿಗೂ ಅಧಿಕ ವೆಚ್ಚದಲ್ಲಿ ಕಾಮಗಾರಿ ನಡೆದಿದ್ದರೂ ಹಳೆಯ ವಿದ್ಯುತ್ ಕಂಬಗಳನ್ನು ತೆರವುಗೊಳಿಸದಿರುವುದು, ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾದ ಸ್ಮಾರ್ಟ್ ಶೌಚಾಲಯಗಳು ಬಳಕೆಗೆ ಬಾರದಿರುವುದು, ಪಾಲಿಕೆಯಲ್ಲಿ ‘ಖಾತೆ ಬದಲಾವಣೆ ಶುಲ್ಕ’ ಹೆಸರಿನಲ್ಲಿ ನಾಗರಿಕರಿಂದ ಅನಗತ್ಯ ಶುಲ್ಕ ವಸೂಲಿ ನಡೆಯುತ್ತಿರುವುದು, ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳ ಸಮರ್ಪಕ ನಿರ್ವಹಣೆ ಇಲ್ಲದಿರುವುದು ಹಾಗೂ ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರವು ರಸ್ತೆಯಲ್ಲಿ ನಿರ್ಮಿಸಿರುವ ಶೆಡ್ಗಳ ಕುರಿತು ಕ್ರಮ ಕೈಗೊಳ್ಳದಿರುವುದು ಸೇರಿವೆ.
ಈ ಎಲ್ಲ ವಿಚಾರಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಿ, ಸಮಸ್ಯೆಗಳ ಪರಿಹಾರಕ್ಕೆ ಕೈಗೊಳ್ಳುವ ಕ್ರಮಗಳು ಹಾಗೂ ಅವುಗಳಿಗೆ ನಿಗದಿಪಡಿಸುವ ಕಾಲಮಿತಿಯನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಒಕ್ಕೂಟ ಆಗ್ರಹಿಸಿದೆ.
ಸಮಸ್ಯೆಗಳಿಗೆ ಶೀಘ್ರ ಪರಿಹಾರ ನೀಡಬೇಕು. ಇಲ್ಲವಾದರೆ ಸಂಬಂಧಪಟ್ಟ ಅಧಿಕಾರಿಗಳ ವೈಫಲ್ಯಕ್ಕೆ ಹೊಣೆಗಾರಿಕೆಯನ್ನು ನಿಗದಿಪಡಿಸಬೇಕು ಎಂದು ಒತ್ತಾಯಿಸಿರುವ ಒಕ್ಕೂಟ, ಒಂದು ವಾರದೊಳಗೆ ಸರ್ಕಾರದಿಂದ ಸ್ಪಷ್ಟ ಭರವಸೆ ಸಿಗದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಈ ಮನವಿಗೆ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಸಂತಕುಮಾರ್ ಸಹಿ ಹಾಕಿದ್ದಾರೆ.
ಪತ್ರಿಕಾರಂಗವು ಸರ್ಕಾರದ ಯೋಜನೆಗಳ ಮಾಹಿತಿ ಜನಕ್ಕೆ ತಲುಪಿಸುವುದೇ ಅಲ್ಲದೆ ಸಮಾಜ ಅಂಕುಡೊಂಕುಗಳನ್ನ ತಿದ್ದುತ್ತಿದೆ- ಶಾಸಕ ಹೆಚ್.ಡಿ.ತಮ್ಮಯ್ಯ
ಸಂವಿಧಾನದ ನಾಲ್ಕನೇ ಅಂಗವಾಗಿರುವ ಪತ್ರಿಕೋದ್ಯಮ ಸಮಾಜದ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, 2025-26ರ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಹಾಗೂ ಕೆಯುಡಬ್ಲ್ಯೂಜೆ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳನ್ನು ಜನತೆಗೆ ತಲುಪಿಸುವ ಜತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಪತ್ರಿಕಾರಂಗ ಮಾಡುತ್ತಿದೆ. ಸರ್ಕಾರದ ಯೋಜನೆಗಳು ಜನರಿಗೆ ತಲುಪಿಸುವ ಪ್ರಬಲ ಮಾಧ್ಯಮವಾಗಿದೆ. ಪ್ರಸ್ತತ ದಿನಮಾನದಲ್ಲಿ ಸಾಮಾಜಿಕ ಜಾಲತಾಣಗಳ ಅಬ್ಬರದಲ್ಲಿ ಪತ್ರಿಕಾರಂಗ ಆನೇಕ ಸವಾಲುಗಳನ್ನು ಎದುರಿಸುತ್ತಿದೆ ಎಂದು ಹೇಳಿದರು. ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮಾತನಾಡಿ, ಪತ್ರಿಕಾ ರಂಗದ ಸತ್ಯದ ಕೈಗನ್ನಡಿಯಾಗಿದೆ. ಆದರೆ ಇಂದು ಮಾದ್ಯಮಗಳು ಉದ್ಯಮದ ರೂಪ ಪಡೆದಿದ್ದು, ಲಾಭ- ನಷ್ಟ ಎದುರಿಸುತ್ತಿವೆ. ಜತೆಗೆ ತಾಂತ್ರಿಕತೆ ಬೆಳೆದಂತೆ ಮಾಧ್ಯಮಗಳಿಗೆ ಆನೆಣೆ ಸವಾಲುಗಳು ಎದುರಾಗುತ್ತಿವೆ ಎಂದರು.
ಸಮಾಜ ಗಟ್ಟಿಕೊಳ್ಳಬೇಕಾದರೆ ಮಾಧ್ಯಮಗಳ ಪಾತ್ರ ದೊಡ್ಡದಿದೆ ಎಂದ ಅವರು, ಸವಾಲುಗಳ ನಡುವೆ ಸಮಾಜವನ್ನು ಶಿಕ್ಷಣವಂತರನ್ನಾಗಿ ಮಾಡುವುದು ಕೂಡ ಮಾದ್ಯಮಗಳ ಹೊಣೆಗಾರಿಕೆಯಾಗಿದೆ ಎಂದು ಹೇಳಿದರು.
ನಿಕಟಪೂರ್ವ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ಮಾತನಾಡಿ, ಹಿಂದೆ ಮಾದ್ಯಮದಲ್ಲಿ ಕೆಲಸ ಮಾಡುವ ಯುವ ಸಮುದಾಯ ಕಲಿಕೆ ಆಸಕ್ತಿ ಮತ್ತು ಗುರಿ ಇತ್ತು. ಆದರೆ. ಇಂದು ಆಸಕ್ತಿಯೂ ಇಲ್ಲ ಗುರಿಯೂ ಇಲ್ಲವಾಗಿದೆ. ಪತ್ರಕರ್ತರಲ್ಲಿ ಮತ್ತು ಸಮಾಧಾನವಿಲ್ಲದಿರುವುದರಿಂದ ಸತ್ಯದ ಸುದ್ದಿಗಳ ಜತೆ ಜತೆಗೆ ಸುಳ್ಳು ಸುದ್ದಿಗಳು ರಾರಾಜಿಸುತ್ತಿವೆ ಎಂದು ವಿಷಾದಿಸಿದರು.
ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಮಾತನಾಡಿ, ಪತ್ರಿಕೋದ್ಯಮ ಸಮಾಜದದ ಬಳಿಗೆಗೆ ಶ್ರಮಿಸುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಪತ್ರಿಕೆಗಳ ಪಾತ್ರ ಮಹತ್ವದಾಗಿದೆ. ಖಡ್ಗಕ್ಕಿಂತ ಲೇಖನಿ ಹರಿತವಾಗಿದ್ದು ಸಮಾಜದ ಅಂಕುಡೊಂಕುಗಳನ್ನು ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು.
ತರೀಕೆರೆ ಕ್ಷೇತ್ರದ ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿದರು.
ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಸಂಘದ ವತಿಯಿಂದ ಪತ್ರಿಕೋದ್ಯಮದಲ್ಲಿ ಗಣನೀಯ ಸೇವೆ ಸಲ್ಲಿಸಿದವರ ಹೆಸರಿನಲ್ಲಿ ದತ್ತಿ ಪ್ರಶಸ್ತಿ ಇತ್ತೀಚಿನ ವರ್ಷಗಳಿಂದ ನಿರಂತರವಾಗಿ ನೀಡುತ್ತಿದ್ದು ಇಂದು ಐದನೇ ದತ್ತಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ ಎಂದರು.
ಹಿರಿಯ ಪತ್ರಕರ್ತ ರವಿ ಹೆಗಡೆ ಮಾತನಾಡಿ, ಓದುಗರು ಪತ್ರಿಕೋ ದ್ಯಮದ ಮೇಲೆ ಅಪಾರ ವಿಶ್ವಾಸಾರ್ಹತೆ ಇಟ್ಟು ಕೊಂಡಿ ದ್ದಾರೆ. ವಿಶ್ವಾಸಾರ್ಹತೆ ಉಳಿಸಿಕೊಳ್ಳುವ ದೊಡ್ಡ ಜವಾಬ್ದಾರಿಯೂ ಪತ್ರಿಕೋದ್ಯಮದ ಮೇಲಿದೆ. ಈ ನಿಟ್ಟಿನಲ್ಲಿ ಆತ್ಮವಿಮರ್ಶೆ ಮಾಡಿ ಸಿದರು. ಆಧುನಿಕ ತಂತ್ರಜ್ಞಾನದಿಂದ ಮುದ್ರಣ ಮಾಧ್ಯಮ, ದೃಶ್ಯ ಮಾಧ್ಯಮ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದೆ. ಓದುಗರು ಗಟ್ಟಿಯಾಗಿದ್ದರೆ
ಸಂವಾದ ಗಟ್ಟಿಯಾಗಿರುತ್ತಾನೆ. ಹಿನ್ನೆಲೆಯಲ್ಲಿ ನಮ್ಮಲ್ಲಿರುವ ಸಣ್ಣಪುಟ್ಟ ಭಿನ್ನಾಭಿಪ್ರಾಯವನ್ನು ಬದಿಗಿಟ್ಟು ನಾವೆಲ್ಲರೂ ಒಗ್ಗಟ್ಟಾಗುವ ಅಗತ್ಯವಿದೆ. ಆತ್ಮವಿಮರ್ಶೆ ಮಾಡಿಕೊಳ್ಳಬೇಕಿದೆ ಹೊಸ ಸವಾಲುಗಳನ್ನು ಎದುರಿಸಲು ಸನ್ನದ್ದರಾಗಬೇಕಿದೆ ಎಂದು ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅನಿಲ್ ಆನಂದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಮಾರಂಭದಲ್ಲಿ ರಾಷ್ಟ್ರೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಮದನ್ ಗೌಡ, ಕನ್ನಡಪ್ರಭ ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ, ಸಂಪಾದಕ ಜೋಗಿ, ಜಿಲ್ಲಾಧಿಕಾರಿ ಭವರ್ ಸಿಂಗ್ ಮೀನಾ, ಜಿಪಂ ಸಿಇಒ ಎಚ್.ಎಸ್. ಕೀರ್ತನಾ ಇದ್ದರು.
ನೂತನ ಪದಾಧಿಕಾರಿಗಳ ಪದಗ್ರಹಣ ಇದೇ ವೇಳೆ ನಡೆಯಿತು.
ಹಿರಿಯ ಪತ್ರಕರ್ತ ಸ.ಗಿರಿಜಾ ಶಂಕರ್, ಬಿ.ಟಿ.ತಿಪ್ಪೇರುದ್ರಪ್ಪ, ಅಜ್ಜಂಪುರ ಅಪ್ಪಾಜಿ, ತರೀಕೆರೆ ಅನಂತ್ ನಾಡಿಗ್, ಕೊಪ್ಪ ಬಿ.ವಿ.ವಿಶ್ವನಾಥ್ ಶೆಟ್ಟಿ ಕಡೂರು ಎನ್.ಗಿರೀಶ್ ಬೀರೂರು, ಪ್ರಸನ್ನ ಗೌಡನಹಳ್ಳಿ ಮೂಡಿಗೆರೆ, ಯೂಸೂಪ್ ಪಾಟೀಲ್ ಅವರನ್ನು ಸನ್ಮಾನಿಸಲಾಯಿತು.
ವಿಜಯ ಕರ್ನಾಟಕದ ಕೆ.ಎಚ್. ರುದ್ರಯ್ಯ, ಸುವರ್ಣ ನ್ಯೂಸ್ ವಿಜಯವಾಣಿ ತರೀಕೆರೆ ವರದಿಗಾರ ಬಿ.ಉಮೇಶ್ ನಾಯಕ್, ಹಿರಿಯ ಫೋಟೋ ಜರ್ನಲಿಸ್ಟ್ ಅಕ್ರಮ್ ಅಬ್ದುಲ್ ಹಕ್, ಮಂಗಳೂರು ಇಬ್ರಾಹಿಂ ಅಡ್ಡಸ್ಥಳ, ಶಿವಕುಮಾರ್ ಪತ್ತಾರ ಎಚ್.ಪಿ.ರವಿಕುಮಾರ್ ಜನತಾಮಾಧ್ಯಮ ಹಾಸನ ಇವರಿಗೆ ಕೆಡಬ್ಯೂಜೆ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು.
Karnataka Public Service Commission ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ: ದೂರು ದಾಖಲೆಯ ಹಿನ್ನೆಲೆಯಲ್ಲಿ ಆಯೋಗದಿಂದ ಆಂತರಿಕ ತನಿಖಾ ಉಪಸಮಿತಿ ರಚನೆ- ಕೆ.ಜ್ಯೋತಿ
Karnataka Public Service Commission ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ 2026ರ ಜುಲೈ 24ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳು ಮತ್ತು ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವರದಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಲೋಕಸೇವಾ ಆಯೋಗವು 2026ರ ಜುಲೈ 26ರಂದು ತುರ್ತು ಸಭೆ ನಡೆಸಿದೆ.
ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ 2026ರ ಜುಲೈ 24ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳು ಮತ್ತು ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವರದಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಲೋಕಸೇವಾ ಆಯೋಗವು 2026ರ ಜುಲೈ 26ರಂದು ತುರ್ತು ಸಭೆ ನಡೆಸಿದೆ.
ಸಾರ್ವಜನಿಕರ ವಿಶ್ವಾಸವನ್ನು ಕಾಪಾಡುವ ಉದ್ದೇಶದಿಂದ ಹಾಗೂ ಆರೋಪಗಳ ಗಂಭೀರತೆಯನ್ನು ಮನಗಂಡು ಆಯೋಗವು ಕೆಳಕಂಡ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ ಎಂದು ಆಯೋಗದ ಕಾರ್ಯದರ್ಶಿ ಶ್ರೀಮತಿ ಕೆ. ಜ್ಯೋತಿ ಅವರು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪರಿಶೀಲನೆ: 2026ರ ಜುಲೈ 24ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರು, ವಿವಿಧ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಹಾಗೂ 2026ರ ಜುಲೈ 25ರಂದು ಪೊಲೀಸ್ ಇಲಾಖೆ ನೀಡಿರುವ ಪ್ರಾಥಮಿಕ ಮಾಹಿತಿ ವರದಿಯನ್ನು (FIR) ಆಯೋಗವು ಗಂಭೀರವಾಗಿ ಪರಿಗಣಿಸಿದೆ.
ಆಂತರಿಕ ತನಿಖಾ ಉಪಸಮಿತಿ ರಚನೆ: ಆರೋಪಗಳ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಆಯೋಗದ ಹಿರಿಯ ಸದಸ್ಯರ ಅಧ್ಯಕ್ಷತೆಯಲ್ಲಿ ಆಂತರಿಕ ತನಿಖಾ ಉಪಸಮಿತಿಯನ್ನು ರಚಿಸಲಾಗಿದೆ.
ಒಂದು ವಾರದಲ್ಲಿ ವರದಿ ಸಲ್ಲಿಕೆ: ಪರೀಕ್ಷಾ ಪ್ರಕ್ರಿಯೆಯ ಪ್ರತಿಯೊಂದು ಹಂತ ಹಾಗೂ ಸಂಬಂಧಿತ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ವಾಸ್ತವಾಂಶಗಳ ಕುರಿತ ವಿವರವಾದ ವರದಿಯನ್ನು ಒಂದು ವಾರದೊಳಗೆ ಆಯೋಗಕ್ಕೆ ಸಲ್ಲಿಸುವಂತೆ ಉಪಸಮಿತಿಗೆ ನಿರ್ದೇಶನ ನೀಡಲಾಗಿದೆ.
Karnataka Public Service Commission ತನಿಖೆಗೆ ನೋಡಲ್ ಅಧಿಕಾರಿಗಳ ನೇಮಕ: ತನಿಖಾ ಕಾರ್ಯಕ್ಕೆ ಅಗತ್ಯವಾದ ಆಡಳಿತಾತ್ಮಕ ಮಾಹಿತಿ ಮತ್ತು ದಾಖಲೆಗಳನ್ನು ಒದಗಿಸಲು ಕೆಪಿಎಸ್ಸಿ ಕಾರ್ಯದರ್ಶಿಯನ್ನು ಹಾಗೂ ಅಗತ್ಯ ಕಾನೂನು ಸಲಹೆ ನೀಡಲು ಕಾನೂನು ವಿಭಾಗದ ಮುಖ್ಯಸ್ಥರನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದೆ.
ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ: ಆಂತರಿಕ ತನಿಖಾ ಉಪಸಮಿತಿ ತನ್ನ ಅಂತಿಮ ವರದಿಯನ್ನು ಸಲ್ಲಿಸುವವರೆಗೆ, 2026ರ ಜುಲೈ 17ರಂದು ಪ್ರಕಟಿಸಲಾಗಿದ್ದ ಪಶುವೈದ್ಯಾಧಿಕಾರಿಗಳ ಅಂತಿಮ ಆಯ್ಕೆ ಪಟ್ಟಿಯ ಜಾರಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲು ಆಯೋಗವು ನಿರ್ಧರಿಸಿದೆ.
ಆಯೋಗವು ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ನ್ಯಾಯಸಮ್ಮತತೆ ಹಾಗೂ ಸಾರ್ವಜನಿಕರ ವಿಶ್ವಾಸವನ್ನು ಕಾಪಾಡಲು ಬದ್ಧವಾಗಿದ್ದು, ತನಿಖಾ ವರದಿಯ ಆಧಾರದ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಯೋಗದ ಕಾರ್ಯದರ್ಶಿಗಳು ತಿಳಿಸಿದ್ದಾರೆ.
