Wednesday, February 11, 2026
Wednesday, February 11, 2026
Home Blog Page 91

Rotary Shivamogga ಕಲೋತ್ಸವದಲ್ಲಿ ಕರೋನಾ ಕುರಿತು ಜಾಗೃತಿಗಾಗಿ ಕಿರು ಪ್ರಹಸನ

0

Rotary Shivamogga ರೋಟರಿ ವಲಯ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ಕಲೋತ್ಸವದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ ರೊಟೇರಿಯನ್ ಹಾಗೂ ಇನ್ನರ್ ವೀಲ್ ಸದಸ್ಯನಿಯರಿಂದ ಕರೋನಾ ಬಗ್ಗೆ ಸಾರ್ವಜನಿಕರಿಗೆ ಹಾಗೂ ಸದಸ್ಯರಿಗೆ ಕಿರು ಪ್ರಹಸನದ ಮುಖಾಂತರ ಜಾಗೃತಿಯನ್ನು ಮೂಡಿಸಿ ಮಾಹಿತಿ ನೀಡಲಾಯಿತು.

Rotary Shivamogga ಈ ಕಿರು ಪ್ರಹಸನದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ ಅಧ್ಯಕ್ಷರಾದ ನೆಪ್ಚೂನ್ ಕಿಶೋರ್ ಮಾಜಿ ಅಧ್ಯಕ್ಷರಾದ ಜಿ ವಿಜಯಕುಮಾರ್. ಡಾಕ್ಟರ್ ಅರುಣ್. ಸುಮತಿ ಕುಮಾರಸ್ವಾಮಿ. ಅರುಣ್ ದೀಕ್ಷಿತ್. ಡಾಕ್ಟರ್ ಅವಿನಾಶ್. ಬಿಂದು ವಿಜಯ ಕುಮಾರ್. ಡಾಕ್ಟರ್ ಧನಂಜಯ ರಾಂಪುರ. ವೀಣಾ ಕಿಶೋರ್. ಗಿರಿಜಾ ರಾಂಪುರ. ಹಾಗು ಮಕ್ಕಳು ಅಭಿನಯಸಿ ಅಪಾರ ಜನ ಮೆಚ್ಚುಗೆಗೆ ಪಾತ್ರರಾದರು.

MESCOM ನ. 19, ಹೊಳೆಬೆನವಳ್ಳಿ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

MESCOM ಶಿವಮೊಗ್ಗ ಎಂ.ಆರ್.ಎಸ್. ವಿ ವಿ ಕೇಂದ್ರದ ಪಿಳ್ಳಂಗಿರಿ ಮತ್ತು ಜಾವಳ್ಳಿ ಐ.ಪಿ. ಮಾರ್ಗಗಳಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ. 19 ರಂದು ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ಹೊಳೆಬೆನವಳ್ಳಿ, ದೊಡ್ಡತಾಂಡ, ಹಒಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ,

MESCOM ಅಬ್ಬರಘಟ್ಟ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Sri Adichunchangiri Education Trust ಗುರುಪುರದ ಶ್ರೀವೀರಸೋಮೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ತೀಕ ವೈಭವ

0

Sri Adichunchangiri Education Trust ಶ್ರೀ ಆದಿಚುಂಚನ ಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ಹೊರವಲಯದ ಗುರುಪುರದ ಪುರಾತನ ಕಾಲದ”ಶ್ರೀ ವೀರಸೋಮೇಶ್ವರಸ್ವಾಮಿ ದೇವಾಲಯ” ದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ಆಯೋಜಿಸಲಾಗಿದ್ದ ಪಂಚಾಮೃತ ಅಭಿಷೇಕ, ವಿಶೇಷ ಪೂಜಾ ಕೈಂಕರ್ಯಗಳನ್ನು ಶ್ರೀ ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು.

ಕಾರ್ತಿಕ ದೀಪೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದ್ದು ಕಾರ್ಯಕ್ರಮದಲ್ಲಿ ಪೂಜ್ಯರು, ಪತ್ರಕರ್ತರಾದ ಸಂತೋಷ್ ಕಾಚಿನಕಟ್ಟೆ ಯವರು ದೀಪ ಬೆಳಗಿಸುವುದರ ಮೂಲಕ ಕಾರ್ತಿಕೋತ್ಸವಕ್ಕೆ ಚಾಲನೆ ನೀಡಿದರು.

Sri Adichunchangiri Education Trust ಈ ಪೂಜಾ ಕಾರ್ಯಕ್ರಮದಲ್ಲಿ ಗಣ್ಯರು, ಪ್ರಾಂಶುಪಾಲರು, ಸಿಬ್ಬಂದಿ ವರ್ಗದವರು, ಪೋಷಕರು,ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.

Women and Child Development Department ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯ ಪ್ರೋತ್ಸಾಹ ಧನಕ್ಕಾಗಿ & ಉದ್ಯೋಗ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

0

Women and Child Development Department ಮಹಿಳಾ ಮತು ಮಕ್ಕಳ ಅಭಿವೃದ್ಧಿ ಇಲಾಖೆಯು 2025-26ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಚೇತನ ಯೋಜನೆ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆಯ ಪ್ರೋತ್ಸಾಹಧನಕ್ಕಾಗಿ ಹಾಗೂ ಉದ್ಯೋಗಿನ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿದೆ
ಆಸಕ್ತರು ಗ್ರಾಮ ಒನ್, ಶಿವಮೊಗ್ಗ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಡಿ. 15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದೂ.ಸಂ.: 08182-295514 ನ್ನು ಸಂಪರ್ಕಿಸುವುದು.

ಗಾಂಧೀಜಿ ಮತ್ತು ವಿನೊಬಾ ಭಾವೆ ಅವರ ಸಾಧನೆ ಅಗಣಿತ- ಎಂ.ಎನ್. ಸುಂದರರಾಜ್

0

ನಾವೀಗ ರಾಷ್ಟ್ರಪಿತ ಗಾಂಧೀಜಿ ಸ್ವಾತಂತ್ರಕ್ಕೋಸ್ಕರವಾಗಿ ಹೋರಾಡಿದ ಅನೇಕ ಮಹನೀಯರು ಭೂದಾನದ ಹರಿಕಾರ ವಿನೋಬಾ ಬಾವೆ ಮುಂತಾದವರನ್ನು ಮರೆಯುತ್ತಿದ್ದೇವೆ ಇದು ಸರ್ವತ ಒಳ್ಳೆಯದಲ್ಲ. ಈ ಮಹನೀಯರುಗಳು ದೇಶದ ಸ್ವಾತಂತ್ರ್ಯಕ್ಕೆ ಮತ್ತು ಒಗ್ಗಟ್ಟಿಗೆ ಅನೇಕ ಮಹತ್ತರ ಕೆಲಸಗಳನ್ನು ಮಾಡಿ ತಮ್ಮ ಆದರ್ಶಗಳನ್ನು ಬಿಟ್ಟು ಹೋಗಿದ್ದಾರೆ ಅವರೆಲ್ಲರನ್ನ ಸ್ಮರಿಸುವ ಮತ್ತು ಅವರು ತೋರಿದ ಹಾದಿಯಲ್ಲಿ ನಡೆಯುವ ಕಾರ್ಯ ಮುಂದಿನ ಯುವ ಜನಾಂಗಕ್ಕೆ ಆಗಬೇಕಿದೆ ಎಂದು ಸಾಹಿತಿ ಎಂ ಎನ್ ಸುಂದರರಾಜ್ ತಿಳಿಸಿದ್ದಾರೆ.

ಅವರು ಗೋಪಾಲದ ರಾಮಕೃಷ್ಣ ಶಾಲೆಯ ಆವರಣದಲ್ಲಿ ನಡೆದ ಜಿಲ್ಲಾ ಸರ್ವೋದಯ ಮಂಡಲ ಏರ್ಪಡಿಸಿದ್ದ ಪ್ರಬಲ ಭಾಷಣ ಸ್ಪರ್ಧೆಯಲ್ಲಿ ಉದ್ಘಾಟಕರಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸರ್ವೋದಯ ಮಂಡಲದ ಅಧ್ಯಕ್ಷ ಮನೋಹರ್ ಮಾತನಾಡಿ ಮುಂದೆಯೂ ಸಹ ಇಂತಹ ಅನೇಕ ಕಾರ್ಯಕ್ರಮಗಳನ್ನು ಜಿಲ್ಲಾದ್ಯಂತ ಏರ್ಪಡಿಸಿ ಗಾಂಧೀಜಿಯವರ ತತ್ವಗಳನ್ನು ಪ್ರಚಾರ ಮಾಡಲಾಗುವುದು ಎಂದು ತಿಳಿಸಿದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಕಾರ್ಯದರ್ಶಿ ಜಿ ವಿಜಯಕುಮಾರ್ ಕಾರ್ಯಕ್ರಮದ ಉದ್ದೇಶಗಳನ್ನು ವಿವರಿಸಿ ಹೇಳಿದರು ಕಾರ್ಯಕ್ರಮದಲ್ಲಿ ಅಂಜನ್ ರಾಮ್ ತಿವಾರಿ ಮತ್ತು ಆರತಿ ತಿವಾರಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರಾದ ತೀರ್ಥೇಶ್ ಅವರು ಎಲ್ಲರನ್ನು ಸ್ವಾಗತಿಸಿ ಒಂದು ಕೊನೆಗೆ ವಂದಿಸಿದರು.

ಗಾಂಧೀಜಿಯವರ ಸಪ್ತ ಸಾಮಾಜಿಕ ಪಾದಕಗಳಲ್ಲಿ ಒಂದರ ಕುರಿತು ವಿದ್ಯಾರ್ಥಿಗಳಿಗಾಗಿ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು ಈ ಸ್ಪರ್ಧೆಯಲ್ಲಿ ಒಟ್ಟು 12ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು ಅಂತಿಮವಾಗಿ ಈ ಕೆಳಕಂಡವರಿಗೆ ಬಹುಮಾನ ನೀಡವಾಯಿತು. ಸೂಕ್ತಿ ಎಸ್ ಟಿ, ಸೃಜನ್ ಎಸ್ ಪವಾರ್, ಅನುಷ್ಕಾ ಆರ್ ಗೌಡ
ಇವರಿಗೆ ಕ್ರಮವಾಗಿ 500, 400 ಮತ್ತು 300 ರೂ. ನಗದು. ಪುಸ್ತಕಗಳು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

Veterinary College ದೇಶಿ ಮತ್ತು ಮಿಶ್ರಹೈನು ತಳಿಗಳ ಪಾಲನೆ ಬಗ್ಗೆ ಉಚಿತ ತರಬೇತಿ

0

Veterinary College ಗ್ರಾಮೀಣ ಪ್ರದೇಶದ ರೈತರು / ರೈತ ಮಹಿಳೆಯರು / ನಿರುದ್ಯೋಗ ಯುವಕ ಯುವತಿಯರಿಗೆ, ಪಶು ವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇವರ ವತಿಯಿಂದ ನ. 21 ರಂದು ದೇಶಿ ಮತ್ತು ಮಿಶ್ರ ಹೈನು ತಳಿಗಳ ವೈಜ್ಞಾನಿಕ ಪಾಲನೆ ಮತ್ತು ಪೋಷಣೆ ಕುರಿತಾಗಿ 1 ದಿನದ ಉಚಿತ ತರಬೇತಿ ಕಾರ್ಯಕ್ರಮವನ್ನು ಮಲೆನಾಡು ಗಿಡ್ಡ ತಳಿ ಸಂಶೋದನ ಮತ್ತು ಮಾಹಿತಿ ಕೇಂದ್ರ, ಜಾನುವಾರು ಸಾಕಾಣಿಕ ಸಂಕೀರ್ಣ, ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ತರಬೇತಿಯಲ್ಲಿ ದೇಶಿ ಹಸು ತಳಿಗಳು, ಹಸುಗಳ ಕೊಟ್ಟಿಗೆ ನಿರ್ಮಾಣ, ಹಸುಗಳ ಆಹಾರ ನಿರ್ವಹಣೆ, ಸಂತಾನೋತ್ಪತ್ತಿ, ರೋಗಗಳು, ಮಾರುಕಟ್ಟೆ ಮುಂತಾದ ವಿಷಯಗಳ ಬಗ್ಗೆ ಮಾಹಿತಿ ಪ್ರಧಾನ ಮತ್ತು ಪ್ರಾತ್ಯಕ್ಷತೆಯನ್ನು ಹಮ್ಮಿಕೊಳ್ಳಲಾಗುವುದು.

ಆಸಕ್ತಿಯುಳ್ಳವರು ತಮ್ಮ ಹೆಸರನ್ನು ನ. 20 ರೊಳಗೆ ನೋಂದಾಯಿಸಿಕೊಳ್ಳುವುದು. ತರಬೇತಿಯಲ್ಲಿ 25 ಶಿಬಿರಾರ್ಥಿಗಳಿಗೆ ಅವಕಾಶವಿದ್ದು, ಮೊದಲು ಹೆಸರು ನೊಂದಾಯಿಸಿದವರಿಗೆ ಆದ್ಯತೆ ನೀಡಲಾಗುವುದು ಎಂದು ಕಾಲೇಜಿನ ಡೀನ್ ಡಾ. ಎನ್. ಪ್ರಕಾಶ್ ತಿಳಿಸಿದ್ದಾರೆ.

Veterinary College ಹೆಚ್ಚಿನ ಮಾಹಿತಿಗಾಗಿ ಡಾ. ಸತೀಶ್.ಜಿ.ಎಮ್., ಸಹಾಯಕ ಪ್ರಾಧ್ಯಪಕರು, ಜಾನುವಾರು ಸಾಕಾಣಿಕ ಸಂಕೀರ್ಣ, ಪಶುವೈದ್ಯಕೀಯ ಮಹಾ ವಿದ್ಯಾಲಯ, ವಿನೋಬನಗರ, ಶಿವಮೊಗ್ಗ 577204. ಮೊಬೈಲ್: 9448224595, 9916208462, 9035618565 ಇವರನ್ನು ಸಂಪರ್ಕಿಸುವುದು.

Kuvempu University ಕುವೆಂಪು ವಿವಿಯಲ್ಲಿ” ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ” ವಿಚಾರ ಸಂಕಿರಣ

0

Kuvempu University ಶ್ರೀ ಭಗವದ್ಗೀತಾ ಅಭಿಯಾನ 2025ರ ಅಂಗವಾಗಿ ನ.18ರಂದು ಕುವೆಂಪು ವಿಶ್ವವಿದ್ಯಾಲಯದ ಬಸವ ಸಭಾಭವನದಲ್ಲಿ “ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ” ಕುರಿತು ಒಂದು ದಿನದ ವಿಚಾರ ಸಂಕಿರಣ ಏರ್ಪಡಿಸಲಾಗಿದೆ.
ಕುವೆಂಪು ವಿಶ್ವವಿದ್ಯಾಲಯ ಮತ್ತು ಶಿವಮೊಗ್ಗದ ಸ್ವರ್ಣರಶ್ಮಿ ಟ್ರಸ್ಟ್ ಮತ್ತು ಶ್ರೀ ಭಗವದ್ಗೀತಾ ಅಭಿಯಾನ ಜಿಲ್ಲಾ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ವಿಚಾರ ಸಂಕಿರಣವನ್ನು ಅಂದು ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಉಚ್ಛನ್ಯಾಯಾಲಯದ ನಿವೃತ್ತ ನ್ಯಾ.ಮೂ. ಎಚ್.ಬಿಲ್ಲಪ್ಪ , ಕುವೆಂಪು ವಿವಿ ಕುಲಸಚಿವ ಎ.ಎಲ್.ಮಂಜುನಾಥ ಉದ್ಘಾಟಿಸಲಿದ್ದು ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಮಜ್ಜಗದ್ಗುರು ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಅಭಿಯಾನದ ಜಿಲ್ಲಾ ಸಮಿತಿಯ ಅಧ್ಯಕ್ಷ ಹಾಗೂ ಶಾಸಕರಾದ ಡಿ.ಎಸ್.ಅರುಣ್, ಜಿಲ್ಲಾ ಸಮಿತಿಯ ಕಾರ್ಯಾಧ್ಯಕ್ಷ ಅಸದೋಕ್ ಜಿ.ಭಟ್ ಉಪಸ್ಥಿತರಿರುವರು.
ಪ್ರಥಮ ಗೋಷ್ಠಿಯಲ್ಲಿ ಖ್ಯಾತ ಮನರೋಗ ತಜ್ಞ ಡಾ.ಕೆ.ಆರ್.ಶ್ರೀಧರ್ ಮನ:ಶಾಸ್ತ್ರ ದೃಷ್ಟಿಯಿಂದ ಭಗವದ್ಗೀತೆಯನ್ನು ಅಪರಾಧ ನಿಯಂತ್ರಣಕ್ಕೆ ಹೇಗೆ ಉಪಯೋಗಿಸಿಕೊಳ್ಳಬಹುದು ಎಂಬ ವಿಷಯದ ಕುರಿತಾಗಿಯೂ ಎರಡನೇ ಗೋಷ್ಟಿಯಲ್ಲಿ ಅಪರಾಧಶಾಸ್ತ್ರ ದೃಷ್ಟಿಯಿಂದ ಭಗವದ್ಗೀತೆಯನ್ನು ಅಪರಾಧ ನಿಯಂತ್ರಣಕ್ಕೆ ಹೇಗೆ ಪ್ರಯೋಗಿಸಬಹುದು ಎಂಬ ವಿಷಯದ ಬಗ್ಗೆ ಬೆಂಗಳೂರಿನ ಪೋಲಿಸ್ ವರಿಷ್ಠಾಧಿಕಾರಿ ಡಾ.ರಾ.ಕೃಷ್ಣ ಮುದ್ದಪಾಲ್ ಉಪನ್ಯಾಸ ನೀಡುವರು. ಭೋಜನಾ ನಂತರ ನಡೆಯುವ ಮೂರನೇ ಗೋಷ್ಠಿಯಲ್ಲಿ ಬೆಂಗಳೂರಿನ ಉಚ್ಛ ನ್ಯಾಯಾಲಯದ ಹಿರಿಯ ವಕೀಲರಾದ ವಿಕ್ರಂ ಫಡ್ಕೆ ಅವರು ಕಾನೂನಿನ ದೃಷ್ಠಿಯಿಂದ ಭಗವದ್ಗೀತೆಯನ್ನು ಅಪರಾಧ ನಿಯಂತ್ರಣಕ್ಕೆ ಹೇಗೆ ಪ್ರಯೋಗಿಸಬಹುದು ಎಂಬ ವಿಷಯದ ಕುರಿತಾಗಿಯೂ ನಾಲ್ಕನೇ ಗೋಷ್ಠಿಯಲ್ಲಿ ನಿವೃತ್ತ ಕುಲಪತಿ ಡಾ.ರಾಮಚಂದ್ರ ಭಟ್ ಕೋಟೆಮನೆ ಅವರು ಭಗವದ್ಗೀತೆಯ ಪ್ರಚೀನ ಪದ್ಧತಿಗಳಾದ ಯೋಗಗಳ ಮೂಲಕ ಭಗವದ್ಗೀತೆಯನ್ನು ಅಪರಾಧ ನಿಯಂತ್ರಣಕ್ಕೆ ಹೇಗೆ ಬಳಸಿಕೊಳ್ಳಬಹುದು ಎಂಬ ವಿಷಯದ ಬಗ್ಗೆ ಮಾತನಾಡುವರು. ಬಳಿಕ ಸಂವಾದ ಕಾರ್ಯಕ್ರಮವಿರುತ್ತದೆ.
ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಮಜ್ಜಗದ್ಗುರು ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಹಾಗೂ ಶ್ರೀ ಬೆಕ್ಕಿನ ಕಲ್ಮಠದ ಜಗದ್ಗುರು ಡಾ.ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸುವರು.
Kuvempu University ಕುವೆಂಪು ವಿವಿ ಕುಲಸಚಿವ ಎ.ಎಲ್.ಮಂಜುನಾಥ್ ಅಧ್ಯಕ್ಷತೆ ವಹಿಸುವರು. ಮೌಲ್ಯಮಾನ ಪುಲಸಚಿವ ಪ್ರೊ.ಆರ್. ತಿಮ್ಮರಾಯಪ್ಪ, ಶಾಸಕ ಹಾಗೂ ಅಭಿಯಾನ ಸಮಿತಿಯ ಅಧ್ಯಕ್ಷ ಡಿ.ಎಸ್.ಅರುಣ್, ಕಾರ್ಯಧ್ಯಕ್ಷ ಅಶೋಕ್ ಜಿ.ಭಟ್ಟ ಉಪಸ್ಥಿತರಿರುವರು ಎಂದು ಭಗವದ್ಗೀತಾ ಅಭಿಯಾನ ಜಿಲ್ಲಾ ಸಮಿತಿಯ ಪ್ರಕಟಣೆ ತಿಳಿಸಿದೆ.

Agricultural University ರೈತರಿಗೆ ಕೃಷಿಯಿಂದ ಆದಾಯ ಹೆಚ್ಚಬೇಕು.ಕೃಷಿಯಲ್ಲಿ ಆಂದೋಲನವಾಗಬೇಕು- ಸಚಿವ ಎನ್.ಚಲುವರಾಯ ಸ್ವಾಮಿ

0

Agricultural University ಸರ್ಕಾರದ ವಿವಿಧ ಕಾರ್ಯಕ್ರಮಗಳು, ಯೋಜನೆಗಳು, ಕೃಷಿ ವಿಶ್ವವಿದ್ಯಾನಿಲಯದ ಸಂಶೋಧನೆ,
ಹೊಸ ತಳಿಗಳು, ಆಧುನಿಕ ತಾಂತ್ರಿಕತೆಯಿಂದ ಕೃಷಿ ಕ್ಷೇತ್ರವು ಸಮೃದ್ಧಿಯಿಂದ ಕೂಡಿದೆ. ಇದರಿಂದ ಸಾರ್ವಜನಿಕರು ಸಹ ಕೃಷಿಯಲ್ಲಿ ಆಸಕ್ತಿ ಹೊಂದಿದ್ದಾರೆ ಎಂದು ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಅವರು ತಿಳಿಸಿದರು

ಇಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಜಿ.ಕೆ.ವಿ.ಕೆ ಯಲ್ಲಿ ಹಮ್ಮಿಕೊಳ್ಳಲಾದ “ಕೃಷಿ ಮೇಳ – 2025”ರ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು ನಗರದ ಜನರು, ಐಟಿಬಿಟಿ ಕಂಪನಿಯಲ್ಲಿ ಕೆಲಸ ಮಾಡುವವರು ಸಹ ಕೃಷಿಯಲ್ಲಿ ಆಸಕ್ತಿವಹಿಸುತ್ತಿದ್ದಾರೆ.ರೈತರಿಗೆ ಕೃಷಿಯಿಂದ ಆದಾಯ ಹೆಚ್ಚಾಗಬೇಕು. ಕೃಷಿಯಲ್ಲಿ ಆಂದೋಲನವಾಗಬೇಕು ಎಂದು ಹೇಳಿದರು.

ಸಾಲುಮರದ ತಿಮ್ಮಕ್ಕ ಅವರು 5000 ಕ್ಕೂ ಹೆಚ್ಚು ಗಿಡ ನೆಟ್ಟಿದ್ದಾರೆ. ಪರಿಸರವನ್ನು ಸಂರಕ್ಷಿಸಿದ ಮಹಿಳೆಯನ್ನು ಸದಾ ಸ್ಮರಿಸಬೇಕು.
ಕೃಷಿ ಮೇಳದಲ್ಲಿ 750 ಕ್ಕೂ ಹೆಚ್ಚು ಮಳಿಗೆಗಳಿದ್ದು ಲಕ್ಷಾಂತರ ಜನರಿಗೆ ಅನುಕೂಲವಾಗಿದೆ ಎಂದರು.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ ಬೆಂಗಳೂರಿನ ಕೃಷಿ ಮೇಳದಲ್ಲಿ ಜಾತ್ರೆಯ ರೀತಿಯಲ್ಲಿ ಲಕ್ಷಾಂತರ ಜನರು ಭಾಗವಹಿಸುತ್ತಿದ್ದಾರೆ. ಇದನ್ನು ಆಯೋಜಿಸಿದ ಕೃಷಿ ಸಚಿವರಿಗೆ ಹಾಗೂ ವಿಶ್ವವಿದ್ಯಾನಿಲಯದ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.

ಕೃಷಿ ಮೇಳವು ಮಾದರಿ ಕೃಷಿಕರನ್ನು ಗುರುತಿಸಿ ಅವರಿಗೆ ಪ್ರಶಸ್ತಿ ನೀಡುವ ಮುಖಾಂತರ ಬೇರೆ ರೈತರಿಗೆ ಸ್ಫೂರ್ತಿ ಮೂಡಿಸುವ ಪ್ರಯತ್ನ ವಾಗಿದೆ ಎಂದರು.

ಇಂದು ದೇಸೀಯ ತಳಿಗಳು ಮತ್ತು ಕೃಷಿ ಪದ್ದತಿಗಳು ಕುರಿತು ರೈತರಿಂದ ರೈತರಿಗಾಗಿ ಚರ್ಚಾ ಗೋಷ್ಠಿ ಹಾಗೂ ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ಡಾ. ಎಂ. ಹೆಚ್. ಮರೀಗೌಡ ರಾಷ್ಟ್ರೀಯ ದತ್ತಿ ಅತ್ಯುತ್ತಮ ತೋಟಗಾರಿಕಾ ಸಂಶೋಧನ ಪ್ರಶಸ್ತಿ, ಡಾ.ಎಂ.ಹೆಚ್. ಮರೀಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ, ಡಾ.ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Agricultural University ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ.ಎಸ್.ವಿ.ಸುರೇಶ, ಕುಲಸಚಿವರಾದ ಡಾ.ಕೆ.ಸಿ.ನಾರಾಯಣಸ್ವಾಮಿ ಹಾಗೂ ವ್ಯವಸ್ಥಾಪನಾ ಮಂಡಳಿಯ ಸದಸ್ಯರುಗಳು, ರೈತ ಪ್ರಶಸ್ತಿ ಪುರಸ್ಕೃತರು, ಮತ್ತಿತರರು ಉಪಸ್ಥಿತರಿದ್ದರು.

ಮಾಹಿತಿ ಹಕ್ಕು ಕೋರಿ ಬರುವ ಅರ್ಜಿಗಳಿಗೆ ನಿಗದಿತ ಅವಧಿಯೊಳಗೆ ಮಾಹಿತಿ ನೀಡಿ- ಆಯುಕ್ತ ರುದ್ರಣ್ಣ ಹರ್ತಿಕೋಟೆ

0

ಮಾಹಿತಿ ಹಕ್ಕು ಅಧಿನಿಯಮದ ಅಡಿಯಲ್ಲಿ ಮಾಹಿತಿ ಕೋರಿ ಬರುವ ಅರ್ಜಿಗಳಿಗೆ ನಿಗಧಿತ ಅವಧಿಯೊಳಗೆ ಮಾಹಿತಿ ನೀಡುವಂತೆ ರಾಜ್ಯ ಮಾಹಿತಿ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಾಸನ ಜಿಲ್ಲೆಯ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲ ಸಾರ್ವಜನಿಕ ಮಾಹಿತಿ ಅಧಿಕಾರಿಗಳೊಂದಿಗೆ ಮಾಹಿತಿ ಹಕ್ಕು ಅಧಿನಿಯಮ ಕುರಿತು ಜಾಗೃತಿ, ಸಂವಾದ, ಸಾರ್ವಜನಿಕರೊಂದಿಗೆ ಕಾಯ್ದೆಯ ಸದ್ಬಳಕೆ ಕುರಿತು ಚರ್ಚಿಸುವ ಸಂಬಂಧ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಮಾಹಿತಿ ಹಕ್ಕು ಕಾಯ್ದೆ ಜಾರಿಗೆ ಬಂದು ಕಳೆದ ಅಕ್ಟೋಬರ್ 12 ಕ್ಕೆ 20 ವರ್ಷಗಳು ಪೂರ್ಣಗೊಂಡಿದ್ದು, ಅನೇಕ ಬದಲಾವಣೆಗಳು ಕೂಡ ಆಗಿದೆ. ಸಾರ್ವಜನಿಕರು ಹಾಗೂ ಸರ್ಕಾರದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು.

ಆಡಳಿತದಲ್ಲಿ ಪಾರದರ್ಶಕತೆ ತರಲು ಹಾಗೂ ಸಾರ್ವಜನಿಕರಿಗೆ ಮಾಹಿತಿ ಕಲ್ಪಿಸುವುದರ ಜತೆಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ನಿರ್ಮೂಲನೆಗೆ ಸಹಕಾರಿಯಾಗಿದೆ ಎಂದು ಹೇಳಿದರು.

ಕಾರ್ಯಗಾರದ ಮೂಲ ಉದ್ದೇಶ ಬದಲಾವಣೆ, ಆಯೋಗ ಮತ್ತು ನ್ಯಾಯಾಲಯದಲ್ಲಿ ತೀರ್ಪು ಪ್ರಕಟವಾಗಿರುವುದನ್ನು ಪುನರ್ ಮನನ ಮಾಡುವ ದೃಷ್ಟಿಯಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ತರಬೇತಿ ಕಾರ್ಯಾಗಾರ ನಡೆಸುವ ಮೂಲಕ ಅಧಿಕಾರಿಗಳಿಗೆ ಉತ್ತೇಜನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಈಗಾಗಲೇ 15 ಜಿಲ್ಲೆಗಳಲ್ಲಿ ತರಬೇತಿ ನಡೆಸಲಾಗಿದೆ ಎಂದರು.
ಕಾಯ್ದೆ ದುರ್ಬಳಕೆ ಆಗದಂತೆ ಕಾಪಾಡುವ ಹೊಣೆಗಾರಿಕೆ ನಾಗರೀಕರ ಮೇಲಿದೆ. ಈ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ನಿಯಮಗಳ ಬಗ್ಗೆ ಅರಿವು ಪಡೆದುಕೊಳ್ಳುವುದು ಅತ್ಯಗತ್ಯ ಎಂದರಲ್ಲದೆ, ನಮೂನೆ 6(1) ಓದಿದರೆ ಮಾಹಿತಿ ನೀಡಲು ಹಾಗೂ ಅರ್ಜಿಗಳ ವಿಲೇವಾರಿಗೆ ಸಹಾಯವಾಗುತ್ತದೆ ಎಂದು ತಿಳಿಸಿದರು.

ಮಾಹಿತಿ ಹಕ್ಕು ಅಧಿನಿಯಮದಡಿ ಸ್ವೀಕಾರವಾದ ಅರ್ಜಿಗಳ ವಿಲೇವಾರಿಗೆ ಉದಾಸಿನ ಮಾಡದೆ 30 ದಿನದೊಳಗೆ ಮಾಹಿತಿ ನೀಡುವಂತೆ ತಿಳಿಸಿದರಲ್ಲದೆ, ವಿಳಂಬ ಮತ್ತು ನಿರ್ಲಕ್ಷೃಕ್ಕೆ ಅವಕಾಶ ನೀಡದೆ ಕಚೇರಿಯಲ್ಲಿ ಲಭ್ಯವಿರುವ ಮಾಹಿತಿಯನ್ನು ನೀಡಲು ತಿಳಿಸಿದರು.

ಆಯೋಗದ ಮತ್ತು ನ್ಯಾಯಾಲಯದ ತೀರ್ಪುಗಳನ್ನು ಅಧ್ಯಯನ ಮಾಡಿದರೆ ಅಧಿಕಾರಿಗಳು ಮಾಹಿತಿ ನೀಡಲು ನೆರವಾಗುತ್ತದೆ. ಅರ್ಜಿದಾರರಿಗೆ ಮಾಹಿತಿ ನೀಡಲು ಎಷ್ಟು ಪುಟಗಳಿವೆ, ಎಷ್ಟು ಹಣ ಪಾವತಿ ಮಾಡಬೇಕು ಎಂದು ನಿಗದಿತ ಅವಧಿಯಲ್ಲಿ ತಿಳಿಸಿ, ಮಾಹಿತಿ ಲಭ್ಯವಿಲ್ಲದಿದ್ದಲ್ಲಿ ಸೂಕ್ತ ಹಿಂಬರಹ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಕಚೇರಿಗೆ ಬರುವ ನಾಗರೀಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಮಾಹಿತಿ ಹಕ್ಕು ಅಧಿನಿಯಮ ಪರಿಣಾಮವಾಗಿ ಅನುಷ್ಟಾನ ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ. ಇದರಿಂದ ಅರ್ಜಿದಾರರಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಅರ್ಜಿದಾರರು ಬಿಪಿಎಲ್ ಕಾರ್ಡ್‌ದಾರರಾಗಿದ್ದಲ್ಲಿ ಉಚಿತ ಮಾಹಿತಿ ಪಡೆಯಲು ಕಡ್ಡಾಯವಾಗಿ ಬಿಪಿಎಲ್ ಕಾರ್ಡ್ ಮತ್ತು ಆದಾಯ ಪ್ರಮಾಣ ಪತ್ರ ಲಗತ್ತಿಸಿದ್ದಲ್ಲಿ ನೂರು ಪುಟಗಳು ಉಚಿತ ಮಾಹಿತಿ ನೀಡಬಹುದು. ಎರಡು ದಾಖಲೆಗಳನ್ನು ಲಗತ್ತಿಸಿದ್ದಾರಯೇ ಎಂದು ಪರಿಶೀಲನೆ ಮಾಡುವಂತೆ ತಿಳಿಸಿದರು. ಆದಾಯ ಪ್ರಮಾಣ ಪತ್ರದ ಮೂಲ ಪ್ರತಿ ಲಗತ್ತಿಸಿರಬೇಕು ಎಂದು ತಿಳಿಸಿದರು.

ಎಲ್ಲಾ ಕಚೇರಿಗಳಲ್ಲಿ 4(1)(ಎ) (ಬಿ) ಅನ್ನು ಕಚೇರಿ ಫಲಕಗಳಲ್ಲಿ ಪ್ರಕಟಣೆ ಮಾಡಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಥಮ ಮೇಲ್ಮನವಿ ಪ್ರಾಧಿಕಾರದಲ್ಲಿ ವಿಚಾರಣೆ ನಡೆಸಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಆದ್ಯತೆ ನೀಡಿ ಎಂದು ತಿಳಿಸಿದರು. ಜಿಲ್ಲೆಯಲ್ಲಿ ನಡೆಯುವ ಕೆಡಿಪಿ ಮತ್ತು ತ್ರೈಮಾಸಿಕ ಸಭೆಗಳಲ್ಲಿ ಮಾಹಿತಿ ಹಕ್ಕು ಅಧಿನಿಯಮದಡಿ ಮಾಹಿತಿ ಕೋರಿ ಸಲ್ಲಿಕೆಯಾದ ಅರ್ಜಿಗಳ ವಿಲೇವಾರಿ ಕುರಿತು ಪರಿಶೀಲನೆ ಮಾಡುವಂತೆ ತಿಳಿಸಿದರು.

7191 ಅರ್ಜಿ ವಿಲೇ
ಜಿಲ್ಲೆಯಲ್ಲಿ ಜ.1ರಿಂದ ಅ.10ರವರೆಗೆ 7335 ಅರ್ಜಿಗಳು ಸಲ್ಲಿಕೆಯಾಗಿದ್ದು, 7191 ಅರ್ಜಿಗಳು ವಿಲೇವಾರಿ ಆಗಿದ್ದು, 144 ಬಾಕಿಯಿವೆ. 1059 ಅರ್ಜಿಗಳು ಪ್ರಥಮ ಮೇಲ್ಮನವಿಗೆ ಹೋಗಿದ್ದು, ಅದರಲ್ಲಿ 984 ವಿಲೇವಾರಿ ಆಗಿದ್ದು 75 ಬಾಕಿ ಇದೆ ಎಂದರು. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ತೃಪ್ತಿದಾಯಕವಾಗಿದೆ ಎಂದು ತಿಳಿಸಿದರು.

ದ್ವಿತೀಯ ಮೇಲ್ಮನವಿಗೆ ಹಾಸನ ಜಿಲ್ಲೆಯ 307 ಪ್ರಕರಣ ಆಯೋಗದಲ್ಲಿವೆ ಎಂದು ರುದ್ರಣ್ಣ ಹರ್ತಿಕೋಟೆ ತಿಳಿಸಿದರು.

10 ಕೋಟಿ ರೂ.ದಂಡ
ನಿಗದಿತ ಸಮಯದಲ್ಲಿ ಮಾಹಿತಿ ನೀಡದೆ ಇದ್ದಲ್ಲಿ ದಂಡ ವಿಧಿಸಲು ಹಾಗೂ ಇಲಾಖಾ ತನಿಖೆಗೆ ಆದೇಶಿಸಲು ಅವಕಾಶವಿದೆ ಎಂದು ರುದ್ರಣ್ಣ ಹರ್ತಿಕೋಟೆ ಹೇಳಿದರು. ಆಯೋಗದಿಂದ 10719 ಪ್ರಕರಣಗಳಿಗೆ 10.13 ಕೋಟಿ ರೂಪಾಯಿಗಳ ದಂಡ ವಿಧಿಸಲಾಗಿದೆ. 3084 ನೌಕರರು 2.70 ಕೋಟಿ ರೂಪಾಯಿ ದಂಡ ಪಾವತಿಸಿದ್ದಾರೆ.

ಇದರಲ್ಲಿ ಜಿಲ್ಲೆಯ 217 ಅಧಿಕಾರಿಗಳಿಗೆ 18.09 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಇದರಲ್ಲಿ 45 ಪ್ರಕರಣಗಳಲ್ಲಿ 4.44 ಲಕ್ಷ ದಂಡ ಪಾವತಿಯಾಗಿದೆ ಎಂದು ತಿಳಿಸಿದರು.
ತಾವು ಅಧಿಕಾರ ಸ್ವೀಕರಿಸಿದ ಸಂದರ್ಭ ಆಯೋಗದಲ್ಲಿ 55,498 ಅರ್ಜಿಗಳು ಬಾಕಿಯಿತ್ತು, ನಿಗದಿತವಾಗಿ ವಿಚಾರಣೆ ನಡೆಸುವ ಮೂಲಕ 35,344 ಕ್ಕೆ ಇಳಿಸಲಾಗಿದೆ ಎಂದು ತಿಳಿಸಿದರಲ್ಲದೆ, ಆದಷ್ಟು ಬೇಗ ಅರ್ಜಿಗಳ ವಿಲೇವಾರಿಗಾಗಿ ಜಿಲ್ಲೆಗಳಿಗೂ ಹೋಗಿ ಅರ್ಜಿ ವಿಲೇವಾರಿ ಮಾಡಲು ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದರು.

ಮಾಹಿತಿ ಪಡೆಯುವುದು ಮೂಲ ಹಕ್ಕು
ಮತ್ತೋರ್ವ ಆಯುಕ್ತರಾದ ಎಸ್.ರಾಜಶೇಖರ್ ಮಾತನಾಡಿ, ಮಾಹಿತಿ ಪಡೆಯುವುದು ಮೂಲ ಹಕ್ಕು. ಯಾರು ಮಾಹಿತಿ ನೀಡಲು ನಿರಾಕರಿಸುವಂತಿಲ್ಲ, ನಿಗಧಿತ ಅವಧಿಯಲ್ಲಿ ಮಾಹಿತಿ ನೀಡಿದರೆ ಅರ್ಜಿದಾರರಿಗೆ ಉಪಯೋಗವಾಗುತ್ತದೆ ಎಂದರು.
ಮಾಹಿತಿ ಹಕ್ಕು ಕಾಯ್ದೆಯಲ್ಲಿ 25 ಸೆಕ್ಷನ್‌ಗಳಿವೆ ಸರಿಯಾಗಿ ಓದಿ ಅರ್ಥ ಮಾಡಿಕೊಂಡು ಅರ್ಜಿಗಳ ವಿಲೇವಾರಿಗೆ ಕ್ರಮವಹಿಸಿ, ಅರ್ಜಿ ತಿರಸ್ಕಾರ ಮಾಡಬಹುದಾದ ಸಂದರ್ಭದಲ್ಲಿ ಸ್ಪಷ್ಟವಾದ ಸಕಾರಣ ನೀಡಬೇಕು ಎಂದರು.

ಅಧಿಕಾರಿಗಳು ನಿರ್ದಿಷ್ಟ ಸಮಯದಲ್ಲಿ ಮಾಹಿತಿ ನೀಡಿ ಬ್ಲಾಕ್ ಮೇಲ್ ಮಾಡಲು ಅವಕಾಶ ಕಲ್ಪಿಸಬೇಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಕೆಲವರು ತೊಂದರೆ ಕೊಡಲು ಮಾಹಿತಿ ಕೇಳುತ್ತಾರೆ. ನೀವು ಎಚ್ಚರವಹಿಸಿ ಮಾಹಿತಿ ನೀಡಿ ಎಂದರು.

ಈ ಕಾರ್ಯಕ್ರಮದ ಪ್ರಾರಂಭದಲ್ಲಿ ಎರಡು ನಿಮಿಷಗಳ ಕಾಲ ಮೌನ ಆಚರಿಸುವ ಮೂಲಕ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ಕೋರಲಾಯಿತು.

ಅಪರ ಜಿಲ್ಲಾಧಿಕಾರಿ ಮಂಜುನಾಥ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ ಇದ್ದರು. ಕಾರ್ಯಗಾರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಶಿವಮೊಗ್ಗದಲ್ಲಿ ಯಶಸ್ವಿಯಾಗಿ ನಡೆದ ಕಿಡ್ನಿ ತಪಾಸಣಾ ಶಿಬಿರ

0

ಶಿವಮೊಗ್ಗ ನಗರದ ದುರ್ಗಿಗುಡಿಯಲ್ಲಿರುವ ತೃಪ್ತಿ ಕ್ಲೀನಿಕ್ ನಲ್ಲಿ ಗಾಂಧಿ ಬಜಾರಿನ ಶ್ರೀರಾಮ ಬಾವಸಾರ ಕ್ಷತ್ರೀಯ ಸೊಸೈಟಿಯ ಪದಾಧಿಕಾರಿಗಳಿಗೆ ಮತ್ತು ಸದಸ್ಯರುಗಳಿಗೆ ಕಿಡ್ನಿ ಮತ್ತು ಇನ್ನಿತರ ಕಾಯಿಲೆಗಳಿಗೆ ಉಚಿತ ತಪಾಸಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥಾಪಕ ಡಾ. ಚಂದ್ರಶೇಖರ್ ಹಾಗೂ ಸೊಸೈಟಿ ಪದಾಧಿಕಾರಿಗಳಿದ್ದರು.