Thursday, August 6, 2026
Thursday, August 6, 2026
Home Blog Page 92

CM Siddharamaiah ಪ್ರಗತಿಯತ್ತ ಕರ್ನಾಟಕ- ಮೂರು ವರ್ಷಗಳ ಸಾಧನೆ ಉದ್ಘಾಟಿಸಿದ ಸಿಎಂ ಸಿದ್ಧರಾಮಯ್ಯ

0

CM Siddharamaiah ನುಡಿದಂತೆ ನಡೆದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ನೇತೃತ್ವದ ಕಾಂಗ್ರೆಸ್ ಪಕ್ಷದ ಸರ್ಕಾರಕ್ಕೆ 3 ವರ್ಷಗಳು ಪೂರೈಸಿರುವ ಸಂಭ್ರಮದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಆಯೋಜಿಸಿದ್ದ “ಪ್ರಗತಿಯತ್ತ ಕರ್ನಾಟಕ” ಮೂರು ವರ್ಷಗಳ ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶವನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

“ನವ ಕರ್ನಾಟಕ” ಅಭಿವೃದ್ಧಿ ಮಾದರಿಯ ವಸ್ತು ಪ್ರದರ್ಶನ ಮತ್ತು ತುಮಕೂರು ಜಿಲ್ಲೆಯಲ್ಲಿ ನಡೆದಿರುವ 682 ಕೋಟಿ ಮೊತ್ತದ ಬೃಹತ್ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿಗಳು ನೆರವೇರಿಸಿದರು.

ತುಮಕೂರು ಜಿಲ್ಲೆಯ ಕಂದಾಯ ಇಲಾಖೆಯ ವಿವಿಧ ಕಾರ್ಯಕ್ರಮಗಳಡಿ ಇ-ಪೌತಿ ಆಂದೋಲನಾ – 1,06,000 ; ದರಖಾಸ್ತು ಪೋಡಿ – 24,256; ಕಂದಾಯ ಗ್ರಾಮ ಹಕ್ಕು ಪತ್ರ – 20,666 ಮತ್ತು ಪೋಡಿ ಮುಕ್ತ ಅಭಿಯಾನ – 1570 ಸೇರಿದಂತೆ ಒಟ್ಟು 1,52,592 ಫಲಾನುಭವಿಗಳಿಗೆ ಹಕ್ಕು ಪತ್ರ/ಆದೇಶ ಪತ್ರಗಳನ್ನು ವಿತರಿಸಲಾಯಿತು.

ಅಲ್ಲದೆ, ರಾಜ್ಯದಲ್ಲಿಯೇ ದೊಡ್ಡ ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಒಟ್ಟು 600 ಹುದ್ದೆಗಳ ನೇಮಕಾತಿ ಆದೇಶವನ್ನು ನೀಡಲಾಯಿತು.

CM Siddharamaiah ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ, ಹೆಚ್.ಕೆ.ಪಾಟೀಲ, ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಡಾ. ಹೆಚ್.ಸಿ.ಮಹದೇವಪ್ಪ, ಈಶ್ವರ ಖಂಡ್ರೆ, ಎಂ.ಬಿ.ಪಾಟೀಲ, ಡಾ. ಶರಣ ಪ್ರಕಾಶ ಪಾಟೀಲ ಸೇರಿದಂತೆ ಎಲ್ಲ ಸಚಿವರು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಹಾಗೂ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರುಗಳು ಪಾಲ್ಗೊಂಡಿದ್ದರು.

ಬೇಸೂರು ಅಣುಸ್ಥಾವರ ಪ್ರಸ್ತಾವನೆ ವಿರುದ್ಧ ಜನರ ಅಪಾರ ವಿರೋಧ ಜಾಥಾ

0

ಶಿವಮೊಗ್ಗ ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಯೋಜನೆಗೆ ವಿರೋಧದ ಕಿಚ್ಚು ಮತ್ತೊಮ್ಮೆ ಭುಗಿಲೆದ್ದಿದೆ. ಸಾಗರ ತಾಲೂಕಿನ ಬೇಸೂರಿನಲ್ಲಿ ಅಣು ವಿದ್ಯುತ್ ಯೋಜನೆ ವಿರೋಧಿಸಿ ಸಾವಿರಾರು ರೈತರು ಮತ್ತು ಸಾರ್ವಜನಿಕರು ಭಾರೀ ಪಾದಯಾತ್ರೆ ನಡೆಸಿದ್ದಾರೆ. ಬಿಸಿಲನ್ನೂ ಲೆಕ್ಕಿಸದೆ ನಡೆದ ಈ ಪ್ರತಿಭಟನೆ ಇದೀಗ ಜಿಲ್ಲೆಯಾದ್ಯಂತ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೇಸೂರಿನಲ್ಲಿ ಅಣು ವಿದ್ಯುತ್ ಸ್ಥಾವರ ಯೋಜನೆ ವಿರುದ್ಧ ಜನರ ಆಕ್ರೋಶ ತೀವ್ರಗೊಂಡಿದೆ. ಯೋಜನೆ ಕೈಬಿಡುವಂತೆ ಒತ್ತಾಯಿಸಿ ಬೇಸೂರಿನಿಂದ ಸಾಗರದವರೆಗೆ ಬೃಹತ್ ಪಾದಯಾತ್ರೆ ಆಯೋಜಿಸಲಾಯಿತು.

ಈ ಪಾದಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು, ಮಹಿಳೆಯರು, ಯುವಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದರು. ಅಣು ವಿದ್ಯುತ್ ಯೋಜನೆ ಪರಿಸರ ಮತ್ತು ಕೃಷಿಗೆ ಮಾರಕವಾಗಲಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ತೀವ್ರ ಬಿಸಿಲನ್ನೂ ಲೆಕ್ಕಿಸದೆ ಜನರು ಘೋಷಣೆ ಕೂಗಿ ತಮ್ಮ ವಿರೋಧ ವ್ಯಕ್ತಪಡಿಸಿದರು. ಪಾದಯಾತ್ರೆ ಸಾಗರ ನಗರ ಸಮೀಪಿಸುತ್ತಿದ್ದಂತೆ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿತು.

ಅಣು ವಿದ್ಯುತ್ ಯೋಜನೆ ವಿರುದ್ಧ ಸಾಗರ ತಾಲೂಕಿನ ಜನರ ಹೋರಾಟ ಮುಂದುವರಿದಿದ್ದು, ಸರ್ಕಾರ ಈ ಬಗ್ಗೆ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕಾದು ನೋಡಬೇಕಿದೆ.

ಬೆಳಗೆರೆಯಲ್ಲಿ ಕೃಷ್ಣಶಾಸ್ತ್ರಿಗಳ 111 ನೇ ಜಯಂತಿಗೆ ಸಿದ್ಧತೆ

0

ಈ ವರ್ಷ ಪೂಜ್ಯ ಶಾಸ್ತ್ರೀಜಿಯವರ ಜಯಂತಿಯನ್ನು ಎರಡು ದಿನ ಆಚರಿಸಲಾಗುತ್ತದೆ.
ಮೊದಲಿಗೆ 22-05-2026ರಂದು ಬೆಳಗೆರೆಯಲ್ಲಿ ಅವರ ಸ್ಮಾರಕದ ಗಡಿಸಲಿನಲ್ಲಿ ಬೆಳಗ್ಗೆ 10-30ಕ್ಕೆ ಸರ್ವ ಸಿಬ್ಬಂದಿಗಳು ಶಾಸ್ತ್ರೀಜಿಯವರಿಗೆ ಮಾಲಾರ್ಪಣೆ ಮಾಡಿ ನುಡಿನಮನ ಸಲ್ಲಿಸುತ್ತಾರೆ. ಜೊತೆಗೆ ಉಪಸ್ಥತರೆಲ್ಲರೂ ಶಾಸ್ತ್ರಿಗಳು ಉದ್ದೇಶಿಸಿದಂತೆ ಸಂಸ್ಥೆಯ ಕಾರ್ಯಚಟುವಟಿಕೆಗಳನ್ನು ಅರ್ಥಪೂರ್ಣವಾಗಿ, ಆಚರಿಸುವ ಸಂಕಲ್ಪ ದೀಕ್ಷಿತರಾಗುತ್ತಾರೆ.
ಎರಡನೆಯದಾಗಿ ಶಾಸ್ತ್ರೀಜಿಯವರ ಕರ್ಮಶೀಲತೆಗೆ 1990ರ ದಶಕದ ನಂತರ ಒಂದು ಆರ್ಥಿಕ ಹಾಗೂ ಸಾತ್ವಿಕ ಚೈತನ್ಯ ಒದಗಿಸಿದ್ದು ದಾವಣಗೆರೆಯ ಅಭಿಮಾನಿಗಳ ಬಳಗ. ಹಾಗಾಗಿ ಶಾಸ್ತ್ರೀಜಿಯವರಿಗೆ ಅದು ಅತ್ಯಂತ ಆತ್ಮೀಯ ತಾಣವಾಗಿತ್ತು. ಆದ್ದರಿಂದ ಅವರಿಗೆ ಸಂಬಂಧಿಸಿದ ಅನೇಕ ಪ್ರಮುಖ ಕಾರ್ಯಕ್ರಮಗಳಾದ ʼನಾನಿದ್ದೂ ನನ್ನದೇನಿಲ್ಲʼ, ಪುಸ್ತಕ ಬಿಡುಗಡೆ., ಅವರ ನೂರು ವರ್ಷದ ವರ್ಧಂತಿಯ ಆಚರಣೆ, ಅವರ ಸಮಗ್ರ ಸಾಹಿತ್ಯವನ್ನೊಳಗೊಂಡ ʼನೂರರ ನೆನಪುʼ ಪುಸ್ತಕ ಬಿಡುಗಡೆ. ಇದೆಲ್ಲದರ ಜೊತೆಗೆ ಪ್ರತಿವರ್ಷ 22-5ರ ಸಂಜೆ ಅವರ ಜಯಂತಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಶಾಸಕ ಚನ್ನಿ ಅವರಿಂದ ಗೆಳೆಯರ ಬಳಗ ಸೌಹಾರ್ದ ಸಹಕಾರಿ ಸಂಘದ ಕಛೇರಿ ಉದ್ಘಾಟನೆ

0

ವಿನೋಬಾ ನಗರದ ಕರಿಯಣ್ಣ ಬಿಲ್ಡಿಂಗ್ ಬಳಿ ಈಶ ಕಾಂಪ್ಲೆಕ್ಸ್ನಲ್ಲಿ ಗೆಳೆಯರ ಬಳಗ ಸೌಹಾರ್ದ ಸಹಕಾರಿ ಸಂಘ(ಜಿಬಿಎಸ್‌ಎಸ್‌ಎನ್) ದ ಕಚೇರಿ ಉದ್ಘಾಟನೆ ಆಯಿತು. ಶಿವಮೊಗ್ಗ ಕ್ಷೇತ್ರದ ಶಾಸಕರಾದ ಚನ್ನಬಸಪ್ಪನವರು ಕಚೇರಿಯನ್ನು ಉದ್ಘಾಟಿಸಿದರು.
ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ್ ಸರ್ಜಿ, ದೇಶದ ಆರ್ಥಿಕ ಅಭಿವೃದ್ದಿ ಸಹಕಾರ ಸಂಘಗಳ ಪಾತ್ರ ಅಪಾರವಾದದು. ಸ್ಥಳೀಯ ಜನರ ಆರ್ಥಿಕ ಮತ್ತು ಸಾಮಾಜಿಕ ಬೆಳೆವಣಿಗೆಗೆ ಸಹಕಾರ ಸಂಘಗಳು ಪ್ರೇರಕ ಮತ್ತು ಪೂರಕವಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಸಹಕಾರ ಸಂಘಗಳಿಗೆ ಹೆಚ್ಚು ಉತ್ತೇಜನ ನೀಡುತ್ತಿದ್ದಾರೆ,
ಎಂಆರ್ ಅನಿಲ್ ಕುಂಚಿ ಅವರ ಈ ಸಹಕಾರಿ ಸಂಘ ಸಾರ್ವðಜನಿಕರಿಗೆ ಗುಣಮಟ್ಟದ ಸೇವೆಯನ್ನ ನೀಡಲಿ ಎಂದರು.

ಸಹಕಾರ ಸಂಘದ ಅಧ್ಯಕ್ಷ ಎಂ.ಆರ್ ಅನಿಲ್ ಕುಂಚಿ ಮಾತನಾಡಿ, ಗೆಳೆಯ ಬಳಗವು ಬಡ ಮತ್ತು ಮಧ್ಯಮ ವರ್ಗದವರಿಗೆ ಆರ್ಥಿಕ ನೆರವು ನೀಡುವುದರ ಮೂಲಕ ಸ್ವಾವಲಂಬನೆ ಸಾಧಿಸಲು ಪ್ರೇರಣೆ ನೀಡುವುದಕ್ಕಾಗಿ ಸ್ಥಾಪನೆಗೊಂಡಿದೆ. ಇಲ್ಲಿ ಜಾತಿ, ಮತ, ಧರ್ಮದ ಬೇಧವಿಲ್ಲ. ಕೇವಲ ಆರ್ಥಿಕ ವಹಿವಾಟು ಅಲ್ಲದೆ ಸಾಮಾಜಿಕ ಚಿಂತನೆಗಳನ್ನು ಇಲ್ಲಿ ಬೆಳೆಸಲಾಗುತ್ತದೆ. ಸುಲಭ ದರದಲ್ಲಿ ಸಾಲ ನೀಡುವುದು, ಠೇವಣಿ ಸಂಗ್ರಹಿಸುವುದು ಆ ಮೂಲಕ ದೇಶದ ಆರ್ಥಿಕ ಅಭಿವೃದ್ದಿಗೆ ಪ್ರೋತ್ಸಾಹ ನೀಡುವುದು ನಮ್ಮ ಉದ್ದೇಶವಾಗಿದೆ ಎಂದರು.
ಮಾಜಿ ಉಪ ಮುಖ್ಯಮಂತ್ರಿಗಳಾದ ಈಶ್ವರಪ್ಪ ನವರು, ವಿಧಾನ ಪರಿಷತ್ ಸದಸ್ಯರಾದ ಡಿ ಎಸ್ ಅರುಣ್ ಕಚೇರಿಗೆ ಭೇಟಿ ನೀಡಿ ಶುಭ ಹರಿಸಿದರು. ಕಾರ್ಯಕ್ರಮದಲ್ಲಿ ಸಹಕಾರ ಸಂಘಗಳ ಉಪ ನಿಬಂಧಕ ಶ್ರೀನಿವಾಸ, ಯೋಗ ಗುರು ಸಿ.ವಿ.ರುದ್ರರಾಧ್ಯ, ನಿರ್ದೇಶಕರುಗಳಾದ ವಿ. ಜಯಂತಿ, ಎಂ.ಪುಷ್ಪ, ಹೆಚ್.ಪಿ. ಜಿಶಾನ್ ಅಲಿಖಾನ್, ಲಕ್ಕಪ್ಪ, ರಾಘವೇಂದ್ರ, ದೇವರಾಜ್, ಜಯವರ್ಧನ್, ಲೋಕಯ್ಯ,ಉಮೇಶ್ ನಾಯ್ಕ, ರಾಮಚಂದ್ರಪ್ಪ, ಪ್ರೇಮ, ಸಿಇಓ ಎನ್.ಕೆ.ಪ್ರತೀಕ್ ಮುಂತಾದವರು ಇದ್ದರು.

DC Shivamopgga ಹಸನಾದ ಹೈನುಗಾರಿಕಾ ಕ್ಷೇತ್ರ, ಮೂರು ವರ್ಷದ ಸಾಧನೆ- ಸಿಎಂ ಸಿದ್ಧರಾಮಯ್ಯ

0

DC Shivamopgga ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸುತ್ತಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ‌ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನವರು ತಮ್ಮ ಸರ್ಕಾರದ ಮೂರು ವರ್ಷದ ಸಾಧನೆಗಳನ್ನ ವಿವಿರಿಸುತ್ತಾ ಹೈನುಗಾರಿಕೆ ಕ್ಷೇತ್ರದ ಸಾಧನೆ ತಿಳಿಸಿದ್ದಾರೆ.

ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. ಸಶಕ್ತ, ಸಮೃದ್ಧ, ಸ್ವಾಭಿಮಾನಿ ಕರ್ನಾಟಕದ ಮರುನಿರ್ಮಾಣ ಕಾರ್ಯದಲ್ಲಿ ಬಹಳಷ್ಟು ದೂರ ಕ್ರಮಿಸಿದ್ದೇವೆ, ನಮ್ಮ ಈ ಪ್ರಯತ್ನ ಮುಂದೆ ಇನ್ನಷ್ಟು ಶೀಘ್ರ ಹಾಗೂ ಪರಿಣಾಮಕಾರಿಯಾಗಿರಲಿದೆ.

ಈ ಮೂರು ವರ್ಷಗಳಲ್ಲಿ ನಿಮಗಾಗಿ ನಾವು ಸಲ್ಲಿಸಿದ ಸೇವೆಯ ಮಾಹಿತಿ ಹೀಗಿದೆ..

ತುರ್ತು ಪಶುವೈದ್ಯಕೀಯ ಚಿಕಿತ್ಸೆಯನ್ನು ರೈತರ ಮನೆ ಬಾಗಿಲಲ್ಲಿ ಒದಗಿಸಲು 275 ಸಂಚಾರಿ ಪಶುಚಿಕಿತ್ಸಾ ಘಟಕಗಳ ಸ್ಥಾಪನೆ

8.90 ಲಕ್ಷ ಹಾಲು ಉತ್ಪಾದಕರಿಗೆ 2023-24ನೇ ಸಾಲಿನಲ್ಲಿ ₹1168.07 ಕೋಟಿ, 2024-25ನೇ ಸಾಲಿನಲ್ಲಿ ₹1692.35 ಕೋಟಿ, 2025-26ನೇ ಸಾಲಿನಲ್ಲಿ 9.07 ಲಕ್ಷ ಹಾಲು ಉತ್ಪಾದಕರಿಗೆ ₹1689.65 ಕೋಟಿ ಪ್ರೋತ್ಸಾಹಧನ ನೇರ ವರ್ಗಾವಣೆ

ಡಾ.ಪಂಡಿತ ಪುಟ್ಟರಾಜ ಗವಾಯಿಗಳ ಪುಣ್ಯಾಶ್ರಮದಲ್ಲಿ ಯಶಸ್ವಿಯಾದ ಬಿಂದು ಗುರುಪ್ರಸಾದ್ ಗಾಯನ

0

ಸಾಗರ ರಸ್ತೆ ಡಾ. ಪಂಡಿತ ಪುಟ್ಟರಾಜ ಗವಾಯಿಗಳ ಪುಣ್ಯಾಶ್ರಮದಲ್ಲಿ 119ನೇ ಅಮವಾಸ್ಯೆ ಸಂಗೀತ ಸಂಜೆ ಕಾರ್ಯಕ್ರಮವು ವಿಶೇಷವಾಗಿ ನಡೆಯಿತು. ಅಧ್ಯಕ್ಷ ಸಂಗಮೇಶ್ವರ ಗವಾಯಿಗಳೂ ಅಧ್ಯಕ್ಷತೆ ವಹಿಸಿದ್ದರು. ಸಾಗರದ ಹಿಂದೂಸ್ಥಾನಿ ಗಾಯಕಿ ಶ್ರೀಮಿತಿ ಬಿಂದು ಗುರುಪ್ರಸಾದ್‌ರಿಂದ ಸಂಗೀತ ಸೇವೆ ನಡೆಯಿತು. ರಾಮಣ್ಣ ಬಜಯಂತ್ರಿ, ವೀರಭದ್ರಯ್ಯ ಶಾಸ್ತ್ರಿ, ತುಕಾರಾಮ್ ರಂಗದೋಳ್, ವಿನಾಯಕ್ ಭಟ್, ಸಿದ್ದಣ್ಣ ಬಡಿಗೇರ್ ಕಾರ್ಯಕ್ರಮ ನಡೆಸಿಕೊಟ್ಟರು. ರೇವಣಸಿದ್ದಯ್ಯ ಶಾಸ್ತ್ರಿ ನಿರೂಪಿಸಿದರು.

ಕೆನರಾ ಬ್ಯಾಂಕ್ ಸ್ವ – ಉದ್ಯೋಗ ತರಬೇತಿ ಪಡೆಯಲು ಆಸಕ್ತರಿಂದ ಅರ್ಜಿ‌ ಆಹ್ವಾನ

0

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜೂನ್ 01 ರಿಂದ 31 ದಿನಗಳ ಕಾಲ ನಿರುದ್ಯೋಗಿ ಯುವಕರಿಗೆ ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರವನ್ನು ಏರ್ಪಡಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಶಿಬಿರದಲ್ಲಿ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿಯೊಂದಿಗೆ ಗಿಂಬಲ್ ಹಾಗೂ ಡ್ರೋಣ್ ಬಳಕೆ, ಮಾಡೆಲ್ ಫೋಟೋ ಶೂಟ್, ಪ್ರಾಡೆಕ್ಟ್ ಫೋಟೋಗ್ರಫಿ, ಔಟ್ ಡೋರ್ ಫೋಟೋಶೂಟ್, ಸ್ಟುಡಿಯೋ ಸೆಟ್ ಅಫ್, ಫ್ರೀ ವೆಡ್ಡಿಂಗ್ ಶೂಟ್, ವೆಡ್ಡಿಂಗ್ ಶೂಟ್, ಫೋಟೋ ಮತ್ತು ವಿಡಿಯೋ ಎಡಿಟಿಂಗ್, ಫೋಟೋಶಾಪ್, ಕರಿಷ್ಮಾ ಆಲ್ಬಂ ಬಗ್ಗೆ ಪ್ರಾಯೋಗಿಕವಾಗಿ ತರಬೇತಿ ನೀಡಲಾಗುವುದು.
ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಆಸಕ್ತಿಯುಳ್ಳ ಅಭ್ಯರ್ಥಿಗಳು ಮೇ. 25 ರ ಸೋಮವಾರ ಬೆಳಿಗ್ಗೆ 10.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವುದು. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ:25/05/2026 ರೊಳಗೆ ಸಂಸ್ಥೆಯನ್ನು ದೂರವಾಣಿ ಸಂಖ್ಯೆ 8970476050/ 9591514154/ 6363139123/ 9686248369/ 9505894247 ಗಳನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

ಶಿವಮೊಗ್ಗ ಕ್ಯಾಲಿಬರ್ ಫಿಟ್ನೆಸ್ ಸೆಂಟರ್ ಗೆ ಚಾಲನೆ

0

ಶ್ರೀ ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ನಾದಮಯಾ ನಂದನಾಥ ಸ್ವಾಮೀಜಿ ಯವರಿಂದ ನೂತನವಾಗಿ ಆರಂಭಗೊಂಡಿರುವ ಕ್ಯಾಲಿಬರ್ ಫಿಟ್ನೆಸ್ ಸೆಂಟರ್ ಪೂಜ್ಯರು ಚಾಲನೆ ನೀಡಿ, ಶುಭಾಶಯ ಕೋರಿದರು.
ಶಿವಮೊಗ್ಗದ ಸವಳಂಗ ರಸ್ತೆಯ ನಿಸರ್ಗ ಹೋಟೆಲ್ ಎದುರುಗಡೆ ನೂತನವಾಗಿ ಆರಂಭಗೊಂಡಿರುವ ಕ್ಯಾಲಿಬರ್ ಫಿಟ್ನೆಸ್ ಶಿವಮೊಗ್ಗದ ಜನತೆಗೆ ವಿಶಿಷ್ಟ, ವಿನೂತನವಾಗಿ ಆರಂಭಗೊಂಡಿದ್ದು, ರಿಯಾಯಿತಿ ದರದಲ್ಲಿ ನುರಿತ ಜಿಮ್ ತರಬೇತುದಾರರಾದ ಗೌತಮ್, ಹರೀಶ್ ರವರಿಂದ ತರಬೇತಿ ನೀಡಲಾಗುವುದು ಎಂದು ಕಾರ್ತಿಕ್ ಸ್ವಾಮಿ ತಿಳಿಸಿದರು.
ಅಂದು ನಗರದ ಶಾಸಕರಾದ ಎಸ್. ಎನ್. ಚನ್ನಬಸಪ್ಪನವರು, ವಿಧಾನಪರಿಷತ್ ಸದಸ್ಯರಾದ ಧನಂಜಯ ಸರ್ಜಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಸ್. ಸುಂದರೇಶ್ ಭೇಟಿ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕೆ.ಜಿ. ಮಠಪತಿ, ಶೀತಲ್, ಕೇವಲ್, ಕುಂತಲ್ ಇನ್ನೂ ಮುಂತಾದರು ಉಪಸ್ಥಿತರಿದ್ದರು.

Department of Handloom and Textile Technology 3 ವರ್ಷದ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

0

Department of Handloom and Textile Technology ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್, ಶಿವಮೊಗ್ಗ ಇವರ ವತಿಯಿಂದ 2026-27 ನೇ ಸಾಲಿನ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 03 ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಪ್ರವೇಶಕ್ಕಾಗಿ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಸಾಲಿನಲ್ಲಿ ಒಟ್ಟು 39 ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500/- ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ಹಣ ಪಾವತಿಸುವ ಆಧಾರದ ಮೇಲೆ ವಸತಿ ನಿಲಯದ ಸೌಲಭ್ಯವನ್ನು ಕಲ್ಪಿಸಲಾಗುವುದು.
ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ದಿನಾಂಕ: 01.07.2026 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 15 ರಿಂದ 23 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 15 ರಿಂದ 25 ವರ್ಷಗಳ ವಯೋಮಿತಿ ಇರಬೇಕು.
ಲಭ್ಯವಿರುವ ಸಂಸ್ಥೆಗಳು ಮತ್ತು ಸೀಟುಗಳ ವಿವರ:
Department of Handloom and Textile Technology ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ) – 22 ಸೀಟುಗಳು
ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) – 12 ಸೀಟುಗಳು
ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ಆಂಧ್ರಪ್ರದೇಶ) – 03 ಸೀಟುಗಳು
ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ) – 02 ಸೀಟುಗಳು ಸೇರಿ ಒಟ್ಟು 39 ಸೀಟುಗಳು ಲಭ್ಯವಿರುತ್ತವೆ.
ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಫಾರಂಗಳನ್ನು ವೆಬ್‌ಸೈಟ್ https://khtigadag.ac.in/AdmissionForm.pdf ನಿಂದ ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ: 30.05.2026 ರೊಳಗಾಗಿ “ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-582102” ಇವರಿಗೆ ಸಲ್ಲಿಸಬೇಕಾಗಿರುತ್ತದೆ.
ಹೆಚ್ಚಿನ ವಿವರಗಳಿಗಾಗಿ ಗದಗ ಸಂಸ್ಥೆಯ ದೂರವಾಣಿ ಸಂಖ್ಯೆ: 9449162822 ಅಥವಾ ಜಂಟಿ/ಉಪ/ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಶಿವಮೊಗ್ಗ , ದೂರವಾಣಿ ಸಂಖ್ಯೆ: 01812-223405 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಪರಿಚಿತ ಮೃತ ವ್ಯಕ್ತಿ ಬಗ್ಗೆ ಭದ್ರಾವತಿ ಹಳೇನಗರ ಪೊಲೀಸ್ ಠಾಣೆ ಮಾಹಿತಿ

0

ಭದ್ರಾವತಿ ಸೀಗೇಬಾಗಿ ಬಸ್ ನಿಲ್ದಾಣದ ಬಳಿ ಸುಮಾರು 45-50 ವರ್ಷದ ವ್ಯಕ್ತಿ ಅಸ್ವಸ್ಥನಾಗಿ ಬಿದ್ದಿದ್ದು, ಸಾರ್ವಜನಿಕರ ಸಹಾಯದಿಂದ ಭದ್ರಾವತಿ ಆಸ್ಪತ್ರೆಗೆ ಅಂಬ್ಯುಲೆನ್ಸ್ ಮೂಲಕ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದಾಗಿ ದೃಢಪಡಿಸಿರುತ್ತಾರೆ.

ಈತನ ಹೆಸರು, ವಿಳಾಸ, ವಾರಸುದಾರರ ಬಗ್ಗೆ ಯಾವುದೇ ಮಾಹಿತಿ ಇರುವುದಿಲ್ಲ.
ಮೃತ ವ್ಯಕ್ತಿಯ ಚಹರೆ 5 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು, ಕುರುಚಲು ಗಡ್ಡ ಹೊಂದಿರುತ್ತಾರೆ. ಮೈಮೇಲೆ ನೀಲಿ ಮತ್ತು ಬಿಳಿ ಬಣ್ಣದ ಚೌಕಳಿಯ ತುಂಬು ತೋಳಿನ ಶರ್ಟ್ ಸಿಮೆಂಟ್ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಈತನ ವಾರಸುದಾರರ ಇದ್ದಲ್ಲಿ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.