Friday, May 15, 2026
Friday, May 15, 2026
Home Blog Page 92

Department of Revenue ಜನರ ಅನುಕೂಲ ಮತ್ತು ಪಾರದರ್ಶಕತೆಗೆ ದಾಖಲೆಗಳ ಡಿಜಟಲೀಕರಣ.ಸಾರ್ವಜನಿಕರು ಸಹಕರಿಸಬೇಕು- ಸಚಿವ ಕೃಷ್ಣ ಭೈರೇಗೌಡ.

0

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ, ಗ್ರಾಮ ಸೇವಕರು ಮನೆ ಬಾಗಿಲಿಗೆ ಬಂದು ಮೃತ ವ್ಯಕ್ತಿಗಳ ಹೆಸರಿನಲ್ಲಿರುವ ಜಮೀನುಗಳನ್ನು ಅವರ ವಾರಸುದಾರರ ಹೆಸರಿಗೆ ಪೌತಿ ಖಾತೆ ಮಾಡಿಕೊಡುವ ಅಭಿಯಾನ ಕೈಗೊಂಡಿದ್ದು ವಾರಸುದಾರರು ಇದಕ್ಕೆ ಸಹಕರಿಸಬೇಕೆಂದು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡರು ಮನವಿ ಮಾಡಿದರು.
ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇ-ಪೌತಿ ಖಾತೆ ಮಾಡಿಸುವ ಸಂಬಂಧ ವಿಎಓ ಗಳು ವಾರಸುದಾರರನ್ನು ಗುರುತು ಮಾಡಿ ವಿವರಗಳನ್ನು ಪಡೆದು ಕ್ರಮ ಕೈಗೊಳ್ಳಬೇಕು. ಓಟಿಪಿ ಸಮಸ್ಯೆ, ಕೋರ್ಟ್ ವ್ಯಾಜ್ಯ, ಹೆಣ್ಣು ಮಕ್ಕಳಿಗೆ ಆಸ್ತಿ ಕೊಡಬೇಕಾಗುತ್ತದೆಂದು ವಾರಸುದಾರರು ಮಾಹಿತಿ ನೀಡುತ್ತಿಲ್ಲ, ಎರಡು, ಮೂರು ತಲೆಮಾರಗಳ ಪ್ರಕರಣಗಳು ಕಷ್ಟ ಎಂಬ ಸಾಮಾನ್ಯ ಕಾರಣ ನೀಡದೇ ಪ್ರತಿ ಪ್ರಕರಣದಲ್ಲಿ ನಿಖರವಾದ ಕಾರಣ ತಿಳಿದು, ವಾರಸುದಾರರ ಮನವೊಲಿಸಿ ಕ್ರಮ ವಹಿಸಬೇಕು. ಹಾಗೂ 2021 ರ ಸುತ್ತೋಲೆ ಪ್ರಕಾರ ಅಭಿಯಾನ ಮಾದರಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ಸೂಚಿಸಿದರು.
Department of Revenue ಜಿಲ್ಲೆಯಲ್ಲಿ 89434 ಇ-ಪೌತಿ ಪ್ರಕರಣಗಳು ಇದ್ದು, 12726 ಪೂರ್ಣಗೊಂಡಿದೆ. 45470 ಪ್ರಕರಣಗಳು ಬಾಕಿ ಇದ್ದು ಸಂಬಂಧಿಸಿದ ಅಧಿಕಾರಿಗಳು ಮಿಷನ್ ಮೋಡ್‌ಲ್ಲಿ ಕೆಲಸ ಮಾಡಿ ಮೊದಲ ಹಂತದಲ್ಲಿ ಶೇ.75 ರಷ್ಟು ಕೆಲಸ ಮಾಡುವಂತೆ ಸೂಚಿಸಿದ ಅವರು ರೂ. 5 ಕೋಟಿಯನ್ನು ಗ್ರಾಮ ಆಡಳಿತ ಅಧಿಕಾರಿ ಮತ್ತು ಗ್ರಾಮ ಸೇವಕರಿಗೆ ಪ್ರೋತ್ಸಾಹ ಧನ ರೂಪದಲ್ಲಿ ನೀಡಲಾಗುವುದು.
ಭೂ ಸುರಕ್ಷಾ ಯೋಜನೆಯನ್ನು ಸಮರ್ಪಕವಾಗಿ ಜಾರಿ ಮಾಡಬೇಕು. ಡಿಇಓ ಗಳ ಮೂಲಕ ದಾಖಲೆಗಳನ್ನು ಸ್ಕಾö್ಯನ್ ಮಾಡಿಸಬೇಕು. ಈ ಯೋಜನೆಯಡಿ ಸಾಗರ ತಾಲ್ಲೂಕಿನಲ್ಲಿ ನಿಗದಿತ ಪ್ರಮಾಣದಲ್ಲಿ ಪ್ರಗತಿಯಾಗಿಲ್ಲ. ರೆಕಾರ್ಡ್ ರೂಮ್ ಕೌಂಟರ್ ಮೂಲಕ ಪಡೆಯಲಾಗುವ ದಾಖಲಾತಿಗಳಲ್ಲಿ ಭದ್ರಾವತಿ ತಾಲ್ಲೂಕಿನಲ್ಲಿ ಕಡಿಮೆ ಪ್ರಗತಿ ಇದ್ದು, ಮ್ಯಾನುಯಲ್ ಆಗಿ ದಾಖಲಾತಿ ನೀಡಬಾರದು ಎಂದು ಸೂಚನೆ ನೀಡಿದರು.
ಕಂದಾಯ ಗ್ರಾಮಗಳ ರಚನೆ : ರಿಜಿಸ್ಟರ್ಡ್ ಸೇಲ್ ಡೀಡ್ ಇರುವುದನ್ನು ಬಿಟ್ಟು ಉಳಿದವರಿಗೆ ವಾಸಿಸುವ ಜಾಗಕ್ಕೆ ಹಕ್ಕು ಪತ್ರ ನೀಡಬೇಕು. 4000 ಅಡಿಗೆ ಒಂದು ಟೈಟಲ್ ಸಿಗುತ್ತದೆ. ಹಕ್ಕುಪತ್ರ ನೀಡುವುದರಿಂದ ವಾಸಿಸುವ ಮನೆಯಾದ್ರೂ ಸ್ವಂತ ಆಗುತ್ತದೆ. ಅಧಿಕಾರಿಗಳು ಕಾನೂನಿನಲ್ಲಿ ಅವಕಾಶ ಇರುವುದನ್ನು ಮಾಡಿಕೊಡಬೇಕು. ಅರ್ಹರನ್ನು ಗುರುತಿಸಿ ಮಾರ್ಚ್ 16 ರೊಳಗೆ ಹಕ್ಕುಪತ್ರ ನೀಡಲು ಕ್ರಮವಹಿಸಿ ಸರ್ಕಾರಕ್ಕೆ ಸಲ್ಲಿಸಬೇಕು ಈ ಮೂಲಕ ಬಡವರಿಗೆ ಅನುಕೂಲ ಮಾಡಿಕೊಡಬೇಕು ಎಂದರು.
ಮೋಜಿನಿ ವರದಿ: ಮೋಜಿನಿ ಸರ್ವೆಗಾಗಿ 19462 ಅರ್ಜಿಗಳು ಬಂದಿದ್ದು, ಸರ್ವೇ ಇಲಾಖೆಯಲ್ಲಿ 10525 ಬಾಕಿ, ತಹಶಿಲ್ದಾರ್/ಎಸಿ ಕಚೇರಿಯಲ್ಲಿ 7032 ಬಾಕಿ ಸೇರಿದಂತೆ 13557 ಬಾಕಿ ಇದೆ. ಲಭ್ಯವಿರುವ ಸರ್ವೇಯರ್‌ಗಳು, ರೋವರ್‌ಗಳನ್ನು ಬಳಸಿಕೊಂಡು ಸಕಾಲಿಕವಾಗಿ ಸರ್ವೇ ಮಾಡಲು ಕ್ರಮ ವಹಿಸಬೇಕು. ಇಲಾಖೆ ಅಧಿಕಾರಿ, ನೌಕರರು ಆಸಕ್ತಿಯಿಂದ ಬಡವರ ಪರವಾಗಿ ಕೆಲಸ ಮಾಡಬೇಕು ಎಂದರು.
ರೆವೆನ್ಯು ನಿವೇಶನಗಳಿಗೆ ಬಿ-ಖಾತೆ ನೀಡಬೇಕು. ಈ ಕುರಿತು ಅರಿವಿನ ಕೊರತೆ ಇದ್ದು ಅರಿವನ್ನು ಹೆಚ್ಚಿಸಬೇಕು. ಇಲ್ಲವಾದಲ್ಲಿ ಆಸ್ತಿ ವ್ಯವಹಾರಗಳಿಗೆ ಕಷ್ಟವಾಗುತ್ತದೆ. ಹಳೇ ಆಸ್ತಿಗಳಿಗೆ ಇಸ್ವತ್ತು ಸಿಗುತ್ತಿಲ್ಲ. ಆದ್ದರಿಂದ ಡಿಸಿ, ಸಿಇಓ, ಗಳು ಜನರಿಗೆ ತೊಂದರೆಯಾಗದAತೆ ಅಂತಹ ಪ್ರಕರಣಗಳ ಕುರಿತು ಸೂಕ್ತ ಕ್ರಮ ವಹಿಸಬೇಕು ಎಂದು ತಿಳಿಸಿದರು. ರಿಜಿಸ್ರ‍್ಡ್ ಸೇಲ್ ಡೀಡ್ ಇಲ್ಲದವರಿಗೆ ಕಂದಾಯ ಗ್ರಾಮ ರಚನೆ (ನಗರ ಸೇರಿ)ಮೂಲಕ ಮಾತ್ರ ಸಹಾಯ ಮಾಡಬಹುದು. ಇಲ್ಲವಾದಲ್ಲಿ ಅವರಿಗೆ ತ್ರಿಶಂಕು ಪರಿಸ್ಥಿತಿ ಉಂಟಾಗುತ್ತದೆ. ಅದೂ ಕೂಡ ಮಾರ್ಚ್ 16 ರೊಳಗೆ ಮಾಡಬೇಕು ಎಂದರು.

ಇನ್ನು ಮುಂದೆ ಪಹಣಿಯೊಂದಿಗೆ ಸ್ಕೆಚ್, ಆಕಾರ್ ಬಂದ್ ಮತ್ತು ಮ್ಯುಟೇಷನ್ ಸೇರಿದಂತೆ ಸಮಗ್ರ ದಾಖಲೆಗಳು ಜನರಿಗೆ ಲಭ್ಯವಾಗುವಂತಹ ಭೂ ಆಧಾರ್ ಎಂಬ ಯೋಜನೆಗೆ ನೀಲಿನಕ್ಷೆ ಹಾಕಿಕೊಳ್ಳಲಾಗಿದೆ.
ನನ್ನ ಭೂಮಿ ಹೆಸರಿನಲ್ಲಿ ದರಕಾಸ್ತು ಜಮೀನುಗಳ ಪೋಡಿ ಅಭಿಯಾನ ಶುರು ಮಾಡಿದ್ದು, ಹಿಂದೆ ಸರ್ಕಾರದಿಂದ ರೈತರಿಗೆ ಮಂಜೂರಾಗಿರುವ ಭೂಮಿಗೆ ಪಕ್ಕಾ ದಾಖಲೆ ಇಲ್ಲದೇ, ಮಾರಾಟ ಮಾಡಲು, ಭಾಗ ಮಾಡಲು, ಬ್ಯಾಂಕ್ ಸೌಲಭ್ಯ ಪಡೆಯಲು ಆಗದೇ ಅತಂತ್ರ ಸ್ಥಿತಿಯಲ್ಲಿರುವ ರೈತರಿಗೆ ಸರ್ಕಾರವೇ ಜಮೀನಿಗೆ ಹೋಗಿ ದರಕಾಸ್ತು ಪೋಡಿ ಮಾಡಿಸುವ ಅಭಿಯಾನವನ್ನು ಕೈಗೊಂಡಿದೆ. ಈ ಯೋಜನೆಯಡಿ ವೇಗವಾಗಿ ಕೆಲಸ ಆಗುತ್ತಿದೆ. ಹಿಂದಿನ ಐದು ವರ್ಷದಲ್ಲಿ 8542 ಪೋಡಿಯಾಗಿದ್ದರೆ 2025 ರ ಜನವರಿಯಿಂದ 2026 ರ ಜನವರಿಯೊಳಗೆ 1.93 ಲಕ್ಷ ಪೋಡಿ ಮಾಡುವ ಮೂಲಕ ರೈತರ ಭೂಮಿ ಮಾಲೀಕತ್ವಕ್ಕೆ ಖಚಿತತೆ ನೀಡಲಾಗಿದೆ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡರು ಮಾಹಿತಿ ನೀಡಿದರು.

K.S. Eshwarappa ಮಹಿಳೆಯರು ಸ್ವಾವಲಂಬಿಗಳಾಗಲು ಮೇಳಗಳು ಆವಶ್ಯಕ- ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

0

K.S. Eshwarappa ಜೆ ಸಿ ಐ ಶಿವಮೊಗ್ಗ ಭಾವನ ಹಾಗೂ ಶ್ರೀ ಸಾಯಿ ಇವೆಂಟ್ಸ್ ವತಿಯಿಂದ ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಆಯೋಜಿಸಿರುವ ಅವರೇ ಬೇಳೆ ಮೇಳ ಬೃಹತ್ ಮಾರಾಟ ಮತ್ತು ಪ್ರದರ್ಶನ ಕಾರ್ಯಕ್ರಮವನ್ನು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪನವರು ಉದ್ಘಾಟಿಸಿದರು

ನಂತರ ಮಾತನಾಡಿದ ಕೆ ಎಸ್ ಈಶ್ವರಪ್ಪನವರು ಮಹಿಳೆಯರು ಸ್ವಹಾಲಂಬಿಯಾಗಿ ಹೊಸ ಹೊಸ ಉದ್ಯಮಗಳನ್ನು ಪ್ರಾರಂಭಿಸಲು ಇಂತಹ ಮೇಳಗಳು ಅತ್ಯವಶ್ಯಕ ಜೆ ಸಿ ಐ ಭಾವನದಿಂದ ಮಾಡಿರುವ ಈ ಮೇಳವು ಉತ್ತಮವಾಗಿದ್ದು ನಮ್ಮ ದೇಸಿ ಪರಂಪರೆಗಳನ್ನು ಪ್ರಚುರ ಪಡಿಸುತ್ತದೆ ಎಂದು ತಿಳಿಸಿದರು

K.S. Eshwarappa ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷರಾದ ಕೆ ರಂಗನಾಥ್ ಜೆ ಸಿ ಐ ವಲಯ ಅಧ್ಯಕ್ಷರಾದ ಮಧುಸೂದನ್ ನಾವಡ, ವಲಯ ಉಪಾಧ್ಯಕ್ಷರಾದ ಕಾರ್ಕಳ ಗಣೇಶ್, ಪೈ ,ವಲಯ ನಿರ್ದೇಶಕರಾದ ರೇಖಾ ರಂಗನಾಥ್,ಜೆ ಸಿ ಐ ಶಿವಮೊಗ್ಗ ಭಾವನ ಅಧ್ಯಕ್ಷರಾದ ಕರಿಬಸಮ್ಮ ಆನಂದ , ಸಾಯಿ ಇವೆಂಟ್ಸ್ ನ ಸೋಮೇಶ್, ಸತೀಶ್ ಹಾಗೂ ಇತರರು ಇದ್ದರು

Department of Health and Family Welfare ಪ್ರಸ್ತುತ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಮತ್ತು ಮಾನಸಿಕ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಬೇಕಿದೆ- ಎನ್.ಹೇಮಂತ್.

0

Department of Health and Family Welfare ಇತ್ತೀಚಿನ ದಿನಗಳಲ್ಲಿ ಪದವಿ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ವೈಯಕ್ತಿಕ ಸಮಸ್ಯೆಗಳಿಗೆ ಹಲವಾರು ಕಾರಣಗಳಿದ್ದು ಅವರ ವ್ಯಕ್ತಿತ್ವ ವಿಕಸನ ಮತ್ತು ಮಾನಸಿಕ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುವ ಅವಶ್ಯಕತೆ ಇದೆ ಎಂದು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ಎನ್ ತಿಳಿಸಿದರು
ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶಿವಮೊಗ್ಗ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ ನಿಮ್ಹಾನ್ಸ್ ಬೆಂಗಳೂರು, ಪ್ರಾದೇಶಿಕ ಜಂಟಿ ನಿರ್ದೇಶಕರು, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಮತ್ತು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪದವಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಹಾಗೂ ಮನಸ್ಸಿನ ಆರೋಗ್ಯ ಕುರಿತಾದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು,
ಇತ್ತೀಚಿನ ದಿನಗಳಲ್ಲಿ ಪದವಿ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ವೈಯಕ್ತಿಕ ಸಮಸ್ಯೆಗಳಿಗೆ ಕಾರಣ ಸಾಮಾಜಿಕ ಸಂಬAಧಗಳು, ದುಶ್ಚಟಗಳು ಸೇರಿದಂತೆ ಹಲವಾರಿವೆ. ಆತ್ಮಹತ್ಯೆ ಪ್ರಕರಣಗಳು ಸಹ ಹೆಚ್ಚಾಗುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಮತ್ತು ಮಾನಸಿಕ ಆರೋಗ್ಯ ಕುರಿತಾದ ಈ ರೀತಿಯ ಕಾರ್ಯಾಗಾರಗಳು ಅತಿ ಅವಶ್ಯಕವಾಗಿದೆ ಎಂದರು.
ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿಗಳಾದ ನಿಖಿಲ್ ಬಿ ಮಾತನಾಡಿ, ಇತ್ತೀಚೆಗೆ ಕಾಲೇಜು ವಿದ್ಯಾರ್ಥಿಗಳು ಹೆಚ್ಚಾಗಿ ದುಶ್ಚಟಗಳಿಗೆ ಬಲಿಯಾಗುತ್ತಿದ್ದು, ಮಾನಸಿಕ ಆರೋಗ್ಯದ ಬಗ್ಗೆ ಮತ್ತು ವ್ಯಕ್ತಿತ್ವ ವಿಕಸನ ಕುರಿತು ಸಮಗ್ರ ಮಾಹಿತಿ ನೀಡುವ ಹಾಗೂ ದುಶ್ಚಟಗಳಿಗೆ ಕಡಿವಾಣ ಹಾಕುವಂತಹ ಇಂತಹ ಕಾರ್ಯಾಗಾರಗಳು ಬಹು ಮುಖ್ಯ ಪಾತ್ರ ವಹಿಸುತ್ತವೆ ಎಂದರು.
ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ನಟರಾಜ್ ಮಾತನಾಡಿ, ಜಿಲ್ಲೆಯ ಆಯ್ದ ಕಾಲೇಜುಗಳ ಪ್ರಾಂಶುಪಾಲರು, ಪ್ರಾಧ್ಯಾಪಕರು, ತಾಲೂಕು ಆರೋಗ್ಯಾಧಿಕಾರಿಗಳು, ವೈದ್ಯಾಧಿಕಾರಿಗಳಿಗೆ ಈ ಕಾರ್ಯಾಗಾರವನ್ನು ಆಯೋಜಿಸಲಾಗಿದ್ದು ತರಬೇತಿ ಪಡೆದ ಪ್ರಾಂಶುಪಾಲರು, ಪ್ರಾಧ್ಯಾಪಕರು ತಮ್ಮ ಕಾಲೇಜುಗಳಲ್ಲಿನ ಪದವಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.
Department of Health and Family Welfare ಜಿಲ್ಲಾ ಮಾನಸಿಕ ಆರೋಗ್ಯ ಅನುಷ್ಟಾಧಿಕಾರಿಯಾದ ಡಾ.ಕಿರಣ್ ಮಾತನಾಡಿ, ರಾಜ್ಯದಲ್ಲಿ ಪ್ರಥಮ ಬಾರಿಗೆ ಜಿಲ್ಲೆಯಲ್ಲಿ ಇಂತಹ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು ವಿದ್ಯಾರ್ಥಿಗಳ ಮನಸ್ಸಿನ ಆರೋಗ್ಯ ವೃದ್ಧಿಸುವ ನಿಟ್ಟಿನಲ್ಲಿ ಇದೊಂದು ಅತ್ಯುತ್ತಮ ಕಾರ್ಯಕ್ರಮ. ವಿದ್ಯಾರ್ಥಿಗಳಿಗೆ ಮನೋಬಲ ನೀಡಿ, ಅವರ ವ್ಯಕ್ತಿತ್ವ ವಿಕಸನದೊಂದಿಗೆ ಕುಟುಂಬಕ್ಕೆ ಉತ್ತಮ ವ್ಯಕ್ತಿ ಮತ್ತು ಸಮಾಜಕ್ಕೆ ಉತ್ತಮ ಪ್ರಜೆಗಳನ್ನಾಗಿ ನೀಡಬೇಕೆಂಬ ಉದ್ದೇಶದಿಂದ ಈ ವಿನೂತನ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ ಎಸ್ , ಮಾನಸಿಕ ಆರೋಗ್ಯದ ಮಹತ್ವ ಹಾಗೂ ಮಾನಸಿಕ ಆರೋಗ್ಯದ ಕಾಯ್ದೆ ಕುರಿತು ಮಾಹಿತಿ ನೀಡಿದರು.
ಕಾರ್ಯಾಗಾರದಲ್ಲಿ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ.ರಾಮ್‌ಪ್ರಸಾದ್,ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ಚಂದ್ರಶೇಖರ್, ಅಶೋಕ್, ನವೀದ್ ಖಾನ್, ಅನಿಕೇತ್, ಶ್ರೀನಿವಾಸ್, ಸಚಿನ್ ಮುಂತಾದವರು ಉಪಸ್ಥಿತರಿದ್ದರು.

ಮೆಗಾನ್ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಸೇವಾ ನ್ಯೂನತೆ ಅನುಭವ: ಕರವೇ ಜನಮನ ರಾಜ್ಯ ಸಂಘಟನೆಯಿಂದ ಮನವಿ.

0

ಕರವೇ ಜನಮನ ರಾಜ್ಯ ಸಂಘಟನೆಯಿಂದ ಶಿವಮೊಗ್ಗ ಮೆಗನ್ ಆಸ್ಪತ್ರೆ ಭ್ರಷ್ಟಾಚಾರ ವಿರುದ್ಧ ಪ್ರತಿಭಟನೆ ಕರವೇ, ಜನ ಮನ, ರಾಜ್ಯ ಸಂಘಟನೆಯ ಪ್ರತಿಭಟನೆರಾಜ್ಯಾಧ್ಯಕ್ಷರಾದ. ಕೆ ಜನಾರ್ಧನ ಸಾಲಿಯಾನ್ ರವರ ನೇತೃತ್ವದಲ್ಲಿ ಮೆಗ್ಗಾನ್,ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆ, ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ ನಡೆಸಿ, ಎಚ್ಚರಿಕೆಯೊಂದಿಗೆ ಸರಿಪಡಿಸಿ ಕೊಳ್ಳಲು ಗಡುವು ನೀಡಿ ಮನವಿಯನ್ನು ಕೊಡಲಾಯಿತು. ಪ್ರತಿಭಟನೆಯಲ್ಲಿ, ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ, ಎನ್, ಮಾಲತೇಶ್, ರಾಜ್ಯ ಸಂಘಟನಾ ಕಾರ್ಯದರ್ಶಿ ಕಿರಣ್ ಕುಮಾರ್ ಕೆ, ಮತ್ತು ರಾಮಣ್ಣ ರಾಗಿಗುಡ್ಡ, ಪಾರ್ತಿಬನ್, ಜಿಲ್ಲಾ ಸಂಚಾಲಕರಾದ ಹರ್ಷಿತ್ ಭಾರದ್ವಾಜ್, ತಾಲೂಕು ಸಂಚಾಲಕರಾದ ಪ್ರತಾಪ್, ಮತ್ತು ಪದಾಧಿಕಾರಿಗಳಾದ ಶೋಭಾ, ಪುಷ್ಪ,ಪ್ರಮುಖ ರಾದ ಲಕ್ಷ್ಮಿಶ,ಸಂಗೇಶ್ವರ, ಮತ್ತಿತರರು ಭಾಗವಹಿಸಿದ್ದರು.

DVS College of Arts, Science and Commerce ಶಿವಮೊಗ್ಗದಲ್ಲಿ ಪದವಿ‌ ಕಾಲೇಜುಗಳ ಅಧ್ಯಾಪಕರಿಗೆ ಕಾರ್ಯಾಗಾರ

0

DVS College of Arts, Science and Commerce ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್‌ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಭಾಂಗಣದಲ್ಲಿ ಫೆಬ್ರವರಿ 13ರಂದು ಬೆಳಗ್ಗೆ 10ಕ್ಕೆ ಪದವಿ ಕಾಲೇಜುಗಳ ಅಧ್ಯಾಪಕರಿಗೆ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ವಿದ್ಯಾರ್ಥಿ ಕಲಿಕೆಯ ಮೌಲ್ಯ ನಿರ್ಣಯ ಮತ್ತು ಮೌಲ್ಯಮಾಪನ ತಂತ್ರಗಳು ವಿಷಯ ಕುರಿತು ಆಯೋಜಿಸಿರುವ ಕಾರ್ಯಾಗಾರವನ್ನು ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್‌ ಚೌಧರಿ ಉದ್ಘಾಟಿಸುವರು. ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ ಎನ್‌., ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷ ಪ್ರೊ. ಎಸ್‌.ಆರ್‌.ನಿರಂಜನ, ಪರಿಷತ್‌ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಕೆ.ಜಿ.ಚಂದ್ರಶೇಖರ ಭಾಗವಹಿಸುವರು.

DVS College of Arts, Science and Commerce ಕುವೆಂಪು ವಿವಿ ನಿವೃತ್ತ ಇಂಗ್ಲೀಷ್‌ ಪ್ರಾಧ್ಯಾಪಕ ಪ್ರೊ. ರಾಜೇಂದ್ರ ಚೆನ್ನಿ ದಿಕ್ಸೂಚಿ ಭಾಷಣ ಮಾಡುವರು. ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ. ಎಚ್‌.ಕೇಶವ ಅಧ್ಯಕ್ಷತೆ ವಹಿಸುವರು. ದೇಶೀಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಬಸಪ್ಪಗೌಡ, ಉಪಾಧ್ಯಕ್ಷ ಜಿ.ಮಧುಸೂದನ್‌, ಕಾರ್ಯದರ್ಶಿ ಎಸ್‌.ಪಿ.ದಿನೇಶ್‌, ಸಹ ಕಾರ್ಯದರ್ಶಿ ಡಾ. ಎ.ಸತೀಶ್‌ ಕುಮಾರ್‌ ಶೆಟ್ಟಿ, ಕೋಶಾಧ್ಯಕ್ಷ ಎನ್‌.ಆರ್‌.ನಿತಿನ್‌, ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್‌, ಕಾರ್ಯಕ್ರಮ ಸಂಯೋಜಕ ಡಾ. ನವೀನ್‌.ವಿ, ಕಾಲೇಜಿನ ಐಕ್ಯೂಎಸಿ ಸಂಯೋಜಕ ಪ್ರೊ. ಎನ್‌.ಕುಮಾರಸ್ವಾಮಿ ಉಪಸ್ಥಿತರಿರುವರು.

ಹಳ್ಳಿಕೆರೆ ಕೃಷಿ ತರಬೇತಿ ಕೇಂದ್ರದಲ್ಲಿ ” ರೇಡಿಯೊ ಕಿಸಾನ್ ದಿವಸ್ “ಆಚರಣೆ

0

ರೇಡಿಯೋ ಕಿಸಾನ್ ದಿವಸದ ಹಿನ್ನೆಲೆಯಲ್ಲಿ ಆಕಾಶವಾಣಿ ಭದ್ರಾವತಿ, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಹಳ್ಳಿಕೆರೆ ಹಾಗೂ ಕೃಷಿ ತಂತ್ರಜ್ಞರ ಸಂಸ್ಥೆ ಶಿವಮೊಗ್ಗ ಇವರ ಸಹಯೋಗದಲ್ಲಿ ರೇಡಿಯೋ ಕಿಸಾನ್ ದಿವಸ ಹಾಗೂ ರೈತರಿಗೆ ಸನ್ಮಾನ ಕಾರ್ಯಕ್ರಮವನ್ನು ಭದ್ರಾವತಿ ತಾಲ್ಲೂಕು ಹಳ್ಳಿಕೆರೆಯಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಿವಮೊಗ್ಗದ ಜಂಟಿ ಕೃಷಿ ನಿರ್ದೇಶಕರಾದ ಡಾ.ಎಂ. ಕಿರಣಕುಮಾರ್, ಸಹಾಯಕ ಕೃಷಿ ನಿರ್ದೇಶಕರಾದ ಡಾ. ಬಿ.ಆರ್. ಮಮತ, ರಾಜ್ಯ ಕೃಷಿ ತಂತ್ರಜ್ಞರ ಸಂಸ್ಥೆಯ ನಿರ್ದೇಶಕರಾದ ಸಿ ಲೋಕೇಶ್ವರ ಮತ್ತು ಶಿವಮೊಗ್ಗ ಜಿಲ್ಲೆ ಕಾರ್ಯದರ್ಶಿ ಡಾ.ಎಂ.ಜಿ.ವೇದಮೂರ್ತಿ, ಆಕಾಶವಾಣಿ ಭದ್ರಾವತಿ ತಾಂತ್ರಿಕ ವಿಭಾಗದ ಮುಖ್ಯಸ್ಥರಾದ ಎಸ್.ಎಸ್.ಕೃಷ್ಣಪ್ಪ, ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಆರ್.ಭಟ್ ಮತ್ತು ಕೃಷಿರಂಗ ವಿಭಾಗದ ಕಾರ್ಯಕ್ರಮ ನಿರ್ವಹಣ ಅಧಿಕಾರಿಗಳಾದ ಡಾ.ಎಸ್.ಎಂ.ಸುಧಾಕರ ಉಪಸ್ಥಿತರಿದ್ದರು.

ಕಾರ್ಯಕ್ರಮ ಉದ್ಘಾಟಿಸಿ ರೈತರನ್ನು ಸನ್ಮಾನಿಸಿ ಮಾತನಾಡಿದ ಡಾ.ಕಿರಣಕುಮಾರ್ ಆಕಾಶವಾಣಿ ಕೇಳಿ ಇಲಾಖೆಯ ವಿವಿಧ ಸರ್ಕಾರಿ ಯೋಜನೆಗಳನ್ನು ಅನುಸ್ಟಾನ ಮಾಡಿಕೊಂಡಿರುವ ರೈತರು ಇಲಾಖೆಯಿಂದ ಸಿಗುವ ಸೌಲಭ್ಯ ಉಪಯೋಗಿಸಿಕೊಂಡು ಆಧುನಿಕ ಕೃಷಿಗೆ ಬರಲು ಕರೆನೀಡಿದರು. ರೈತರನ್ನು ಸನ್ಮಾನಿಸಿ ಮಾತನಾಡಿದ ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಆರ್.ಭಟ್ ಆಕಾಶವಾಣಿ ೨೦೦೪ ರಲ್ಲಿ ದೇಶಾದ್ಯಂತ ಕಿಸಾನವಾಣಿ ಕಾರ್ಯಕ್ರಮವನ್ನು ಫೆಬ್ರವರಿ 15ರಂದು ಪ್ರಾರಂಭಿಸಿದ ಸವಿನೆನಪಿಗೆ ಪ್ರತೀ ವರ್ಷ ಫೆಬ್ರವರಿ ೧೫ರಂದು ರೇಡಿಯೋ ಕಿಸಾನ್ ದಿವಸ ಆಚರಿಸುತ್ತಿದೆ. ರೈತರ ಸಬಲೀಕರಣ ಯುವರೈತರನ್ನು ಪ್ರೋತ್ಸಾಹಿಸಲು ಮತ್ತು ಆಧುನಿಕ ಕೃಷಿ ಪದ್ದತಿ ಪ್ರೋತ್ಸಾಹಿಸುವ ದ್ಯೇಯವಾಕ್ಯವನ್ನು ಈ ವರ್ಷದ ದ್ಯೇಯವಾಗಿ ಘೋಷಿಸಲಾಗಿದೆ ಅದನ್ನು ಅನುಸರಿಸುತ್ತೇವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಯ 15 ರೈತರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನೂರಾರು ರೈತರು, ಆಕಾಶವಾಣಿ ಸಿಬ್ಬಂದಿಗಳು ಭಾಗವಹಿಸಿದ್ದರು. ರೈತರು ವಿಷಯ ತಜ್ಞರೊಂದಿಗೆ ಹತ್ತುಹಲವು ಸಮಸ್ಯೆಗಳನ್ನು ಚರ್ಚಿಸಿ ಉತ್ತರ ಪಡೆದುಕೊಂಡರು. ಭದ್ರಾವತಿ ಆಕಾಶವಾಣಿಯ ಹಿರಿಯ ಉದ್ಘೋಷಕರಾದ ಶ್ರೀ.ಎಂ.ಕೆ.ಶಿವಕುಮಾರ್ ನಿರೂಪಿಸಿದರು.

Rotary Club Shimoga ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ಹೊರಬಂದು ಕುಟುಂಬ ಮತ್ತು ಸಮಾಜದ ಆಸ್ತಿಯಾಗಬೇಕು- ಮಂಜುನಾಥ್.

0

Rotary Club Shimoga ನಶೆ ಮುಕ್ತ ಭಾರತ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಶಿವಮೊಗ್ಗ ಸೈಬರ್ ಕ್ರೆöÊಂ ಪೊಲೀಸ್ ಇನ್‌ಸ್ಪೆಕ್ಟರ್ ಮಂಜುನಾಥ್ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ವತಿಯಿಂದ ಪೆಸಿಟ್ ಕಾಲೇಜಿನ ಸಭಾಂಗಣದಲ್ಲಿ ನಶೆ ಮುಕ್ತ ಭಾರತ ವಿಷಯ ಕುರಿತು ಮಾತನಾಡಿ, ಮಾದಕ ದ್ರವ್ಯಗಳ ದುಶ್ಚಟಗಳ ಬಗ್ಗೆ, ಅದರಿಂದ ಕುಟುಂಬದಲ್ಲಿ ಹಾಗೂ ಸಮಾಜದಲ್ಲಿ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದು ತಿಳಿಸಿದರು.
ದುಶ್ಚಟಗಳಿಂದ ಮಕ್ಕಳ ಆರೋಗ್ಯದಲ್ಲಿ ಹಾಗೂ ಕುಟುಂಬದಲ್ಲಿ ಮಕ್ಕಳ ವೈಯಕ್ತಿಕ ಬೆಳವಣಿಗೆಯಲ್ಲಿ ಉಂಟಾಗುವ ಕುಂಠಿತಗಳ ಬಗ್ಗೆ ವಿವರಿಸಿದರು. ಸಮಾಜಕ್ಕೂ ಹಾಗೂ ಕುಟುಂಬದವರಿಗೂ ಭದ್ರ ಬುನಾದಿ ಆಗಬೇಕಾಗಿದ್ದ ವಿದ್ಯಾರ್ಥಿಗಳು ಮಾದಕ ವ್ಯಸನಿಗಳಾಗಿ ಜವಾಬ್ದಾರಿ ಹಾಗೂ ಕರ್ತವ್ಯವನ್ನು ಮರೆತು ಮಾದಕ ವ್ಯಸನಿಗಳಾಗಿದ್ದಾರೆ. ಇದರಿಂದ ಹೊರಬಂದು ಕುಟುಂಬಕ್ಕೆ ಹಾಗೂ ಸಮಾಜಕ್ಕೆ ದೊಡ್ಡ ಆಸ್ತಿಯಾಗಿ ಬೆಳೆಯಬೇಕು ಹಾಗೂ ಭವ್ಯ ಭಾರತದ ಭವಿಷ್ಯದ ಬೆನ್ನೆಲುಬಾಗಿ ವಿದ್ಯಾರ್ಥಿಗಳು ನಿಲ್ಲಬೇಕು ಎಂದರು.
ರೋಟರಿ ಶಿವಮೊಗ್ಗ ರಿವರ್ ಸೈಡ್ ಅಧ್ಯಕ್ಷ ಕೆ.ಎಸ್.ವಿಶ್ವನಾಥ ನಾಯಕ ಮಾತನಾಡಿ, ತಂದೆ ತಾಯಿ ಹಾಗೂ ಗುರಿ ಹಿರಿಯರು ದೇಶದ ಯುವಜನತೆಯಿಂದ ಹಲವಾರು ಉನ್ನತ ಮಟ್ಟದ ನಿರೀಕ್ಷೆಗಳನ್ನು ಇಟ್ಟುಕೊಳ್ಳುವುದು ಸಹಜ. ಆ ನಿರೀಕ್ಷೆಗೆ ತಕ್ಕಂತೆ ಜೀವನ ನಡೆಸುವುದು ನಿಮ್ಮೆಲ್ಲರ ಆದ್ಯ ಕರ್ತವ್ಯವಾಗಿರುತ್ತದೆ ಎಂದು ತಿಳಿಸಿದರು.
ರೋಟರಿ ಕ್ಲಬ್ ಅಸಿಸ್ಟೆಂಟ್ ಗವರ್ನರ್ ಕೆ.ಪಿ. ಶೆಟ್ಟಿ, ವಲಯ ಸೇನಾನಿ ಎಸ್.ಪಿ.ಶಂಕರ್, ಮಾಜಿ ಅಧ್ಯಕ್ಷ ಆರ್.ದೇವೇಂದ್ರಪ್ಪ, ದ್ವಾರಕನಾಥ್, ಸತೀಶ್ ಗಾಂಧಿಬಸಪ್ಪ ಹಾಗೂ ಕಾಲೇಜಿನ ಪ್ರಾಚಾರ್ಯರು, ಸಿಬ್ಬಂದಿ ಇದ್ದರು.

Rotary Club Shimoga ಫೆಬ್ರವರಿ 14. ಶಿವಮೊಗ್ಗದಲ್ಲಿ ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರ

0

Rotary Club Shimoga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ವತಿಯಿಂದ ಜೆಸಿಐ ಶಿವಮೊಗ್ಗ ಸಹ್ಯಾದ್ರಿ, ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘ ಹಾಗೂ ಹರಪನಹಳ್ಳಿಯ ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 14ರಂದು ಶನಿವಾರ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಫೆರೋಕಾಸ್ಟ್ ಸಭಾಂಗಣದಲ್ಲಿ ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಫೆಬ್ರವರಿ 14ರಂದು ಬೆಳಗ್ಗೆ 10ಕ್ಕೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಶಿಬಿರ ಉದ್ಘಾಟಿಸುವರು. ಜನನಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ರಾಜೇಶ್ ಪಾದೇಕಲ್ ಅಧ್ಯಕ್ಷತೆ ವಹಿಸುವರು. ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿ ಪ್ರಕಾಶ್, ಜನನಿ ಸಮೂಹ ಸಂಸ್ಥೆಗಳ ಸಾರ್ವಜನಿಕ ಸಂಪರ್ಕ ಮುಖ್ಯಸ್ಥ ಉದಯಶಂಕರ ಭಟ್, ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಕಿಶೋರ್ ಕುಮಾರ್, ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಸಂತೋಷ್ ಕುಮಾರ್ ಬಿ.ಎನ್, ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಿ.ವಿಜಯಕುಮಾರ್ ಅತಿಥಿಗಳಾಗಿ ಭಾಗವಹಿಸುವರು.
ಬೆಳಗ್ಗೆ 10 ರಿಂದ ಮಧ್ಯಾಹ್ನ 2ರವರೆಗೆ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಉಚಿತ ವೈದ್ಯಕೀಯ ಸಮಾಲೋಚನೆ ಮತ್ತು ಆಹಾರ ಸಲಹೆ, ರಕ್ತದಲ್ಲಿನ ಸಕ್ಕರೆ ಅಂಶ ತಪಾಸಣೆ, ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ಸಮಾಲೋಚನೆ, ಆಕ್ಯುಪಂಕ್ಚರ್ ಮತ್ತು ಆಕ್ಯುಪ್ರೆಶರ್, ಬೊಜ್ಜು ಮತ್ತು ಬೆನ್ನು ನೋವು ಸಮಸ್ಯೆಗೆ ಚಿಕಿತ್ಸೆ ಮತ್ತಿತರ ಸೌಲಭ್ಯಗಳಿರುತ್ತವೆ.
Rotary Club Shimoga ಬೆನ್ನುನೋವು, ಕೀಲುನೋವು, ಅಧಿಕ ರಕ್ತದ ಒತ್ತಡ, ಬೊಜ್ಜು, ಮಧುಮೇಹ, ಹೈಪರ್‌ಟೆನ್ಷನ್, ಥೈರಾಯ್ಡ್ ತೊಂದರೆ, ಗ್ಯಾಸ್ಟ್ರೈಟೀಸ್, ಮೈಗ್ರೇನ್, ನಿದ್ರಾಹೀನತೆ, ಉದ್ವಿಗ್ನತೆ, ಪಾಶ್ರ‍್ವವಾಯು, ಸ್ಪಾಂಡಿಲೈಟಿಸ್ ಮತ್ತಿತರ ಸಮಸ್ಯೆಗಳಿಂದ ಬಳಲುವವರು ಶಿಬಿರದ ಪ್ರಯೋಜನ ಪಡೆಯಬಹುದು. ವಿವರಗಳಿಗೆ ಮೊಬೈಲ್ ಸಂಖ್ಯೆ 9448105198 ಸಂಪರ್ಕಿಸಬಹುದಾಗಿದೆ.

ಮೂಲ ಸೌಕರ್ಯ ಒದಗಿಸುವಂತೆ ಅರಬಿಳಚಿ ಗ್ರಾಮಸ್ಥರ ಸತ್ಯಾಗ್ರಹ

0

ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಮೂಲ ಸೌಕರ್ಯಗಳನ್ನು ಒದಗಿಸಿಲ್ಲ ಎಂದು ಆರೊಪಿಸಿ ಶಿವಮೊಗ್ಗದ ಅರಬಿಳಚಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಗ್ರಾಮಸ್ಥರು. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಅರಬಿಳಚ್ಚಿ ಗ್ರಾಮದಲ್ಲಿ ಮೂಲ ಸೌಕರ್ಯಗಳು ಮರಿಚಿಕೆ ಆಗಿವೆ. ಮನೆಗಳಿಗೆ ರಸ್ತೆ ಚರಂಡಿ ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯ ಗಳನ್ನು ಕೊಡುವಂತೆ ಗ್ರಾಮಸ್ಥರು ಪಂಚಾಯಿತಿ ಕಚೇರಿಯ ಮುಂದೆ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಜನಪ್ರತಿನಿಧಿಗಳು ಗಮನ ಹರಿಸಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿ ಕೂಡಲೆ ಕ್ರಮ ಕೈಗೊಳ್ಳುವಂತೆ ಕೆ.ಪಿ.ಸಿ.ಸಿ ರಾಜ್ಯ ಪರಿಶಿಷ್ಟ ಜಾತಿ ವಿಭಾಗ ಸಂಚಾಲಕ ಮಂಜುನಾಥ್ ಆಗ್ರಹಿಸಿದರು.

ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ ಫೆ. 24 ರಿಂದ ಮಾರ್ಚ್ 4 ವರೆಗೆ ಜಾತ್ರಾ ಮಹೋತ್ಸವ

0

ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ,ಶಿವಮೊಗ್ಗ ಶಾಖೆಯಲ್ಲಿ
ದಿ :15.02.2026 ರಂದು ಭಾನುವಾರ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಹಾಗೂ ಶ್ರೀ ಆದಿಚುಂಚನಗಿರಿ ಶಾಖಾ ಮಠ ಶಿವಮೊಗ್ಗ ಶಾಖೆಯ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿ ರವರ ದಿವ್ಯ ಉಪಸ್ಥಿತಿಯಲ್ಲಿ ಹಾಗೂ ನಗರದ ಭಜನಾ ಪರಿಷತ್ ಶಿವಮೊಗ್ಗ, ಮತ್ತು ನಗರದ ಎಲ್ಲಾ ಭಜನಾ ಮಂಡಳಿಗಳ ಒಕ್ಕೂಟ ಇವರುಗಳ ಸಹಯೋಗದಲ್ಲಿ 18ನೇ ವರ್ಷದ ಅಖಂಡ ಭಜನೆಯನ್ನು ಏರ್ಪಡಿಸಲಾಗಿದೆ.
ಶರಾವತಿ ನಗರ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆಬ್ರವರಿ 15 ರ ಬೆಳಿಗ್ಗೆ 6:00 ಗಂಟೆಗೆ ದೇವರಿಗೆ ವಿಶೇಷ ಪೂಜೆ,ಮತ್ತು ಸಾಯಂಕಾಲ 6:00. ಗಂಟೆಗೆ ಜಲಾಭಿಷೇಕ, ಕ್ಷೀರಾಭಿಷೇಕ. ಪಂಚಾಮೃತ ಅಭಿಷೇಕ. ರುದ್ರಾಭಿಷೇಕ,ಪೂಜಾ ಕೈಂಕರ್ಯ ಗಳನ್ನು ಶ್ರೀಮಠದ ವತಿಯಿಂದ ಹಮ್ಮಿಕೊಳ್ಳಲಾಗಿದೆ.
ವಿಶೇಷ ಪೂಜಾ ಕೈಂಕರ್ಯಗಳು:
ಫೆ 15 ರಂದು ಬೆಳಿಗ್ಗೆ 5.30 ರಿಂದ ಏಕವಾರ ರುದ್ರಾಭಿಷೇಕ ಆರಂಭಿಸಲಾಗುವುದು, 6ಕ್ಕೆ ಅಖಂಡ ಭಜನೆ ಉದ್ಘಾಟನೆ,ಬೆಳಗ್ಗೆ 7 ಕ್ಕೆ ಮಹಾಮಂಗಳಾರತಿ ಮಾಡಲಾಗುವುದು.
ಸಂಜೆ 6 ಗಂಟೆಗೆ ರುದ್ರಾಭಿಷೇಕ, ರಾತ್ರಿ 7:30ಕ್ಕೆ ಮಹಾ ಮಂಗಳಾರತಿ ನಡೆಯುವುದು.
ರಾತ್ರಿ 10 ರಿಂದ ರುದ್ರಾಭಿಷೇಕ, ರಾತ್ರಿ 11:30 ಗಂಟೆಗೆ ಮಹಾಮಂಗಳಾರತಿ ನಡೆಯುವುದು.
ರಾತ್ರಿ 1 ಗಂಟೆಗೆ ರುದ್ರಾಭಿಷೇಕ,ರಾತ್ರಿ 2.30 ಗಂಟೆಗೆ ಮಹಾ ಮಂಗಳಾರತಿ ನಡೆಸಲಾಗುವುದು, ರಾತ್ರಿ 3:00ಗೆ ರುದ್ರಾಭಿಷೇಕ,ಬೆಳಿಗ್ಗೆ 4:30 ಗಂಟೆಗೆ ಮಹಾಮಂಗಳಾರತಿ ಮಾಡಲಾಗುವುದು.
ಫೆ. 9ರ ಸೋಮವಾರದಂದು ಬೆಳಿಗ್ಗೆ 5:00 ಗಂಟೆಗೆ ರುದ್ರಾಭಿಷೇಕ, ಬೆಳಗೆ 6 ಗಂಟೆಗೆ ಅಖಂಡ ಭಜನೆ ಸಮಾರೋಪ, 6:15 ಗಂಟೆಗೆ ಮಹಾಮಂಗಳಾರತಿ ನಡೆಯುವುದು. ದೇವರಿಗೆ ರುದ್ರಾಭಿಷೇಕ, ಬಿಲ್ವಪತ್ರೆ, ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗುವುದು.
ವಿಶೇಷವೆಂದರೆ ಫೆ. 15 ರ ಬೆಳಿಗ್ಗೆ 6 ರಿಂದ ನಗರದ ವಿವಿಧ ಭಜನಾ ತಂಡಗಳಿಂದ ಸೋಮವಾರ ಬೆಳಿಗ್ಗೆ 6:00 ಗಂಟೆಯ ವರೆಗೆ ಅಖಂಡ ಭಜನೆ ಮತ್ತು ಶಿವ ಸಂಕೀರ್ತನೆಗಳನ್ನು ಭಜನಾ ತಂಡಗಳಿಂದ ಏರ್ಪಡಿಸಲಾಗಿದೆ.
ಶ್ರೀ ಆದಿಚುಂಚನ ಗಿರಿ ಶಿಕ್ಷಣ ಟ್ರಸ್ಟ್, ಶಿವಮೊಗ್ಗ ಶಾಖೆಯ
ಹೊರವಲಯ ಗುರುಪುರದ “ಶ್ರೀ ವೀರಸೋಮೇಶ್ವರಸ್ವಾಮಿ ದೇವಾಲಯ” ದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಭಾನುವಾರ ಬೆಳಿಗ್ಗೆ 6:30ಕ್ಕೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ,ವಿಶೇಷ ಪೂಜೆ ಅಲಂಕಾರಗಳನ್ನು ಮತ್ತು ಜಾಗರಣೆ ಮತ್ತು ಶಿವ ಸಂಕೀರ್ತನೆಗಳನ್ನು,ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಗುವುದು.
ಸೋಮವಾರ ಬೆಳಿಗ್ಗೆ ವೀರ ಸೋಮೇಶ್ವರ ಸ್ವಾಮಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ,ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಗುವುದು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ ಕೃಪೆಗೆ ಪಾತ್ರರಾಗಬೇಕಾಗಿ,ಶ್ರೀಮಠದ ವ್ಯವಸ್ಥಾಪಕರು ಪತ್ರಿಕಾ ಕೋರಿದ್ದಾರೆ.