Thursday, February 12, 2026
Thursday, February 12, 2026
Home Blog Page 93

Women and Child Development Department ಭದ್ರಾವತಿ ತಾಲ್ಲೂಕಿನಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನ

0

Women and Child Development Department ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಭದ್ರಾವತಿ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ 19 ಕಾರ್ಯಕರ್ತೆಯರು ಮತ್ತು 59 ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ವೆಬ್‌ಸೈಟ್ https://karnemakaone.kar.nic.in/abcd/ ಮೂಲಕ ಡಿ. 15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಭದ್ರಾವತಿ ತಾಲೂಕು ಶಿಶು ಅಭಿವೃದ್ಧಿ
ಯೋಜನಾಧಿಕಾರಿಗಳು ತಿಳಿಸಿದ್ದಾರೆ.

Women and Child Development Department ಹೆಚ್ಚಿನ ಮಾಹಿತಿಗಾಗಿ ಮೇಲಿನ ವೆಬ್‌ಸೈಟ್ ಅಥವಾ ಭದ್ರಾವತಿ ತಾಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವುದು.

MESCOM ನ. 19. ಹೊಳೆಬೆನವಳ್ಳಿ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ, ಮೆಸ್ಕಾಂ ಪ್ರಕಟಣೆ

0

MESCOM ಶಿವಮೊಗ್ಗ ಎಂ.ಆರ್.ಎಸ್. ವಿ ವಿ ಕೇಂದ್ರದ ಪಿಳ್ಳಂಗಿರಿ ಮತ್ತು ಜಾವಳ್ಳಿ ಐ.ಪಿ. ಮಾರ್ಗಗಳಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ. 19 ರಂದು ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ಹೊಳೆಬೆನವಳ್ಳಿ, ದೊಡ್ಡತಾಂಡ, ಹಒಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

S.N.Chennabasappa ಶಾಸಕ ಚನ್ನಬಸಪ್ಪನವರಿಂದ ಸ್ಮಾರ್ಟ್ ಸಿಟಿ ರಸ್ತೆ ಕಾಮಗಾರಿ ಪರಿವೀಕ್ಷಣೆ

0

S.N.Chennabasappa ಸ್ಮಾರ್ಟ್ ಸಿಟಿ ವತಿಯಿಂದ ಜಾರಿಯಲ್ಲಿರುವ ಲಾಸ್ಟ್ ಮೈಲ್ ಕನೆಕ್ಟಿವಿಟಿ (LMC) ಯೋಜನೆ ಅಡಿಯಲ್ಲಿ, ಶಿವಮೊಗ್ಗ ನಗರದ ಲಕ್ಷ್ಮೀ ಟಾಕೀಸ್ ಇಂದ ಎನ್.ಟಿ. ರಸ್ತೆವರೆಗೆ (Tunga Nagara ಮಾರ್ಗವಾಗಿ) ಸುಮಾರು 7.5 ಕಿ.ಮೀ. ಉದ್ದದ 100 ಅಡಿ ರಸ್ತೆಯ ಓವರ್ಲೇ ಮತ್ತು ಗುಂಡಿಗಳ ಮುಚ್ಚುವ ಕೆಲಸ ವೇಗವಾಗಿ ನಡೆಯುತ್ತಿದ್ದು, ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಎಪಿಎಂಸಿ ಮಾರ್ಕೆಟ್ ಸಮೀಪ ನಡೆಯುತ್ತಿರುವ ಕಾಮಗಾರಿಯನ್ನು ಸ್ಥಳದಲ್ಲಿ ಪರಿಶೀಲಿಸಿ, ರಸ್ತೆಯ ಗುಣಮಟ್ಟ, ಮೂಲಸೌಕರ್ಯಗಳ ಸುರಕ್ಷತೆ, ನಾಗರೀಕರಿಗೆ ತೊಂದರೆ ಆಗದಂತೆ ಕೆಲಸದ ನಿರ್ವಹಣೆ, ಇವುಗಳ ಬಗ್ಗೆ ಗುತ್ತಿಗೆದಾರರಿಗೆ ಸ್ಪಷ್ಟ ಸೂಚನೆ ನೀಡಿದರು.

S.N.Chennabasappa ನಗರದ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಿ, ದೈನಂದಿನ ಪ್ರಯಾಣಕ್ಕೆ ಹೆಚ್ಚಿನ ಅನುಕೂಲತೆ ಒದಗಿಸುವುದು ಈ ಯೋಜನೆಯ ಮುಖ್ಯ ಗುರಿ. ಆದ್ದರಿಂದ ಉತ್ತಮ ಗುಣಮಟ್ಟವನ್ನು ಕಟ್ಟುನಿಟ್ಟಾಗಿ ಪಾಲಿಸಿ, ನಿಗದಿತ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ತಾಕೀತು ಮಾಡಿದರು.

B.Y. Raghavendra ಆದಿವಾಸಿಗಳನ್ನ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಬಿರ್ಸಾ ಮುಂಡಾ ಅವರ ಹೋರಾಟ ಎಲ್ಲರಿಗೂ ಮಾದರಿ- ಸಂಸದ ಬಿ.ವೈ.ರಾಘವೇಂದ್ರ

0

B.Y. Raghavendra ತನ್ನ ಆದಿವಾಸಿ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಚಿಕ್ಕವಯಸ್ಸಿನಲ್ಲೇ ಹೋರಾಟದ ಕಿಚ್ಚು ಹತ್ತಿಸಿದ ಬಿರ್ಸಾ ಮುಂಡಾರವರು ನಮ್ಮೆಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ಶಿವಮೊಗ್ಗ ನಗರದ ಕಂಟ್ರೀ ಕ್ಲಬ್ ರಸ್ತೆಯಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಏರ್ಪಡಿಸಲಾಗಿದ್ದ ಭಗವಾನ್ ಶ್ರೀ ಬಿರ್ಸಾ ಮುಂಡಾ ಅವರ 150 ನೇ ಜಯಂತಿ ಹಾಗೂ ಜನ ಜಾತೀಯ ಗೌರವ ದಿವಸ ಆಚರಣೆ 2025 ನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅತಿ ಚಿಕ್ಕ ವಯಸ್ಸಿನಲ್ಲೇ ತಮ್ಮ ಸಮುದಾಯದ ಏಳ್ಗೆಗಾಗಿ ಶ್ರಮಿಸಿದ ಹಾಗೂ ಬ್ರಿಟಿಷರ ವಿರುದ್ದ ಸಿಡಿದೆದ್ದ ಬಿರ್ಸಾ ಮುಂಡಾ ಸಮುದಾಯದ ಪಾಲಿಗೆ ದೇವರಾಗಿದ್ದರು.
ನೀರು, ಭೂಮಿ, ಅರಣ್ಯ ಬುಡಕಟ್ಟು ಜನರ ಹಕ್ಕು ಎನ್ನುವ ರೀತಿಯಲ್ಲಿ ಹೋರಾಡಿದ್ದರು. ಆಧ್ಯಾತ್ಮಿಕತೆಗೆ ಶಕ್ತಿ ತುಂಬಿದ್ದ ಇವರನ್ನು ದೇವರಂತೆ ಕಾಣುತ್ತಿದ್ದರು. ಇಂತಹ ಆದಿವಾಸಿ ಸಮುದಾಯಗಳ ಸರ್ವಾಂಗೀಣ ಅಭಿವೃದ್ದಿಗಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ.
ರಾಜ್ಯದಲ್ಲಿ ಆದಿವಾಸಿ ಸಮುದಾಯವಿರುವ ಪ್ರದೇಶಗಳಲ್ಲಿ 1000 ಹೋಂ ಸ್ಟೇ ನಿರ್ಮಿಸಲು ನಿರ್ಧರಿಸಿದ್ದು ಪ್ರತಿ ಹೋಂ ಸ್ಟೇ ನಿರ್ಮಾಣಕ್ಕೆ ರೂ.5 ಲಕ್ಷ ಅನುದಾನ ನೀಡಲಾಗುವುದು. ಬುಡಕಟ್ಟು ಗುಂಪುಗಳ ಸಮಗ್ರ ಅಭಿವೃದ್ಧಿ ಮತ್ತು ಸಬಲೀಕರಣಕ್ಕಾಗಿ ಆದಿವಾಸಿ ಕಲ್ಯಾಣ ಬಜೆಟ್‌ನ್ನು ಜಾರಿಗೆ ತಂದಿದೆ. ಮೂಲಭೂತ ಸೌಕರ್ಯಗಳನ್ನು ನೀಡಿ ಆದರ್ಶ ಗ್ರಾಮ ಮಾಡುವ ಯೋಜನೆ ಜಾರಿಗೊಳಿಸಿದೆ. ಆದಿವಾಸಿ ಭವನಗಳನ್ನು ನಿರ್ಮಿಸಲು ರೂ. 50 ನೀಡಲಾಗುತ್ತಿದೆ. ಅರಣ್ಯ ಹಕ್ಕು ಕಾಯ್ದೆ, ಸಣ್ಣ ಅರಣ್ಯ ಮತ್ತು ಉತ್ಪಾದನೆಗೆ ಆದ್ಯತೆ ನೀಡಲಾಗುತ್ತಿದೆ, ಅಪೌಷ್ಟಿಕ ಮಕ್ಕಳಿಗೆ ಪೌಷ್ಟಿಕ ಪೂರಕ ಆಹಾರ ಯೋಜನೆ, ಆದಿವಾಸಿ ಮಕ್ಕಳಿಗೆ ಶಿಕ್ಷಣ, ಮೂಲಭೂತ ಸೌಕರ್ಯಗಳು ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡುತ್ತಿದ್ದು ಸದ್ಬಳಕೆ ಮಾಡಿಕೊಳ್ಳಬೇಕೆಂದ ಅವರು ಬಿರ್ಸಾ ಮುಂಡಾರಂತಹ ಹುತಾತ್ಮರ ತ್ಯಾಗ, ಬಲಿದಾನವನ್ನು ಸ್ಮರಿಸಿಕೊಂಡು ಮುಂದೆ ಸಾಗೋಣ ಎಂದು ಕರೆ ನೀಡಿದರು.
ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿಯಾದ ಡಾ.ಶುಭಾ ಮರವಂತೆ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಬಿರ್ಸಾ ಮುಂಡಾರಂತಹ ಮಹಾನ್ ವ್ಯಕ್ತಿಗಳ ಬಗ್ಗೆ ತಿಳಿಯಲು ನಾವು ಚರಿತ್ರೆ ಓದಬೇಕು. ಕೇವಲ 25 ವರ್ಷ ಬದುಕಿದ್ದ ಅವರು ಜಾರ್ಕಂಡ್ ರಾಜ್ಯದ ಮುಂಡಾ ಪ್ರದೇಶದ ಬುಡಕಟ್ಟು ಸಮುದಾಯಕ್ಕೆ ಸೇರಿದ ಬಿರ್ಸಾ ಮುಂಡಾರವರು ಅತಿ ಚಿಕ್ಕ ವಯಸ್ಸಿನಲ್ಲಿಯೇ ತಮ್ಮ ಸಮುದಾಯವನ್ನು ರಕ್ಷಿಸಲು ಹೋರಾಟದ ಕಿಚ್ಚನ್ನು ಹಚ್ಚುತ್ತಾರೆ.
B.Y. Raghavendra ತಮ್ಮ ಸಮುದಾಯದಲ್ಲಿದ್ದ ಮೌಢ್ಯ, ಕಂದಾಚಾರಗಳನ್ನು ವಿರೋಧಿಸಿ ತನ್ನದೇ ಆದಿವಾಸಿ ಸಂಸ್ಕೃತಿಯನ್ನು ಕಟ್ಟುತ್ತಾರೆ. ಅದ್ಭುತ ಸಾಧನೆ ಮಾಡುತ್ತಾರೆ. ಸಾಧಕನಿಗೆ ವಯಸ್ಸೇ ಬೇಡ ಎನ್ನುವಂತೆ ಅತಿ ಚಿಕ್ಕ ವಯಸ್ಸಿನಲ್ಲಿ ಕ್ರಾಂತಿಯ ಕಿಡಿ ಹತ್ತಿಸಿ ಸೆಣೆಸಾಡುತ್ತಾರೆ.
ಅರಣ್ಯವನ್ನೇ ದೇವರೆಂದು ತಿಳಿದು, ಪ್ರಕೃತಿಗಾಗಿ ಬದುಕಿದ್ದ ಆದಿವಾಸಿಗಳು ಇವರು. ಆದಿವಾಸಿಗಳ ನೋವು, ಮೌಢ್ಯ ನೋಡಿದ ಅವರು, ಅವರ ಜನರನ್ನು ಇದರಿಂದ ಹೊರತರಲು ತಮ್ಮದೇ ದಾರಿ ಆರಿಸಿಕೊಂಡು ತಾನೇ ‘ಧರ್ತಿ ಅಭಾ’ ಅಂದರೆ ಈ ‘ಭೂಮಿಯ ತಂದೆ’ ತಾನೇ ಎಂದು ಆದಿವಾಸಿಗಳನ್ನು ವಿಶೇಷ ಸಂಸ್ಕೃತಿಯಲ್ಲಿ ನಡೆಸಿಕೊಂಡು ಹೋಗುತ್ತಾರೆ. ತಮಗೆ ತಿಳಿದಿದ್ದ ನಾಟಿ ಔಷಧ ನೀಡಿ ಉಪಚರಿಸಲು ಆರಂಭಿಸುತ್ತಾರೆ. ಪ್ಲೇಗ್ ಬಂದ ಸಮಯದಲ್ಲೂ ತಮ್ಮ ಸಮಾಜ ರಕ್ಷಣೆಗೆ ನಿಲ್ಲುತ್ತಾರೆ. ಮಹಿಳೆಯರ ರಕ್ಷಣೆ, ಸ್ತ್ರೀ ಹಕ್ಕುಗಳು, ಆದಿವಾಸಿ ಮಕ್ಕಳ ಶಿಕ್ಷಣಕ್ಕಾಗಿ ಹೋರಾಡುತ್ತಾರೆ. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳಿಸುವುದನ್ನು ವಿರೋಧಿಸುತ್ತಾರೆ. ಜನ ಜಾಗೃತಿಗೊಳಿಸುವ ಎಲ್ಲ ಪ್ರಯತ್ನ ಮಾಡುತ್ತಾರೆ.
ತಮ್ಮ ಅರಣ್ಯದ ಸುದ್ದಿಗೆ ಬಂದ ಬ್ರಿಟಿಷರ ಧಮನಕಾರಿ ಧೋರಣೆಗಳ ವಿರುದ್ದ ಸೆಣೆಸಾಡಲು ಬಿರ್ಸಾ ರವರು ಬಿಲ್ಲುಬಾಣಗಳ ಸೈನ್ಯವನ್ನು ಕಟ್ಟಿ ಹೋರಾಡುತ್ತಾರೆ. ನಂತರ ಜೈಲಿಗೆ ಹೋಗಿ ಅಲ್ಲಿ ಬ್ರಿಟಿಷರ ಕುತಂತ್ರಕ್ಕೆ ಬಲಿಯಾಗಿ ಸಾವನ್ನಪ್ಪುತ್ತಾರೆ. ಆದರೆ ಅಷ್ಟು ಚಿಕ್ಕ ವಯಸ್ಸಿನಲ್ಲಿ ಅವರು ಸಮುದಾಯಕ್ಕಾಗಿ ಮಾಡಿದ ಕೆಲಸಗಳು ಇಂದಿಗೂ ಹಸಿರಾಗಿವೆ. ಮನುಷ್ಯನ ಘನತೆ ಅವನು ಮಾಡುವ ಕೆಲಸದಲ್ಲಿರುತ್ತದೆ ಎಂದು ಸ್ಮರಿಸಿದರು.
ಜನ ಜಾತೀಯ ದಿನಾಚರಣೆ ಅಂಗವಾಗಿ ಆದಿವಾಸಿ ಬುಡಕಟ್ಟು ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ಸ್ಪರ್ಧಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಬಹುಮಾನ ನೀಡಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ದಿಶಾ ಸಮಿತಿಯ ನಿರ್ದೇಶಕ ಗಿರೀಶ್ ಭದ್ರಾಪುರ, ವಾಲ್ಮೀಕಿ ಅಭಿವೃದ್ದಿ ನಿಗಮದ ಮಾಜಿ ನಿರ್ದೇಶಕ ಬಿ ಎಸ್ ನಾಗರಾಜ್, ವಾಲ್ಮೀಕಿ ಸಮಾಜದ ಮುಖಂಡರು, ಜಿ.ಪಂ.ಸಿಇಓ ಹೇಮಂತ್ ಎನ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶ್ರೀನಿವಾಸ, ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ರಸ್ತೆ ಅಪಘಾತ, ಶಿವಮೊಗ್ಗದ ಫೋಟೋಗ್ರಾಫರ್ ಅರ್ಜುನ್ ಮರಣ

0

ರಸ್ತೆ ಬದಿ ನಿಂತಿದ್ದ ಟಿಪ್ಪರ್‌ ಲಾರಿಗೆ ಹಿಂಬದಿಯಿಂದ ಕಾರು ಡಕ್ಕಿಯಾಗಿ ಶಿವಮೊಗ್ಗದ ಫೋಟೊಗ್ರಾಫರ್‌ ಸಾವನ್ನಪ್ಪಿದ್ದಾರೆ.

ಉಳಿದ ಮೂವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಡರಾತ್ರಿ ಘಟನೆ ಸಂಭವಿಸಿದೆ.

ಶಿವಮೊಗ್ಗದ ಎಲ್‌ಬಿಎಸ್‌ ನಗರದ ಫೋಟೊಗ್ರಾಫರ್‌ ಅರ್ಜುನ್‌ (37) ಮೃತ ದುರ್ದೈವಿ. ಶರತ್‌, ನವೀನ್‌ ಮತ್ತು ಬಸವರಾಜು ಎಂಬುವವರು ಗಾಯಗೊಂಡಿದ್ದು ವಿವಿಧ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಳ್ಳಾರಿಯಲ್ಲಿ ಮದುವೆ ಸಮಾರಂಭದ ಫೋಟೊ ಶೂಟ್‌ಗಾಗಿ ನಾಲ್ವರು ಫೋಟೊಗ್ರಾಫರ್‌ಗಳು ತೆರಳುತ್ತಿದ್ದರು. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಗಿರಿಯಮ್ಮನಹಳ್ಳಿ ಬಳಿ ಹೈವೇ ರಸ್ತೆಯ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.

ICAR Agricultural Science Centre ನವೆಂಬರ್ 20 ರಿಂದ 26 ವರೆಗೆ ಶಿವಮೊಗ್ಗದ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದಲ್ಲಿ ತೋಟಗಾರಿಕಾ ಬೆಳೆ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿ

0

ICAR Agricultural Science Centre ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ ,ಶಿವಮೊಗ್ಗ ಇವರ ಆಶ್ರಯದಲ್ಲಿ ನವೆಂಬರ್ 20 ರಿಂದ 26 ವರೆಗೆ ತೋಟಗಾರಿಕಾ ಬೆಳೆಗಳ ಸಂಸ್ಕರಣೆ,ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಅವಕಾಶಗಳು ಕುರಿತ ಕೌಶಲ್ಯಾಭಿವೃದ್ಧಿ ತರಬೇತಿ ಏರ್ಪಡಿಸಲಾಗಿದೆ.

ಈ ತರಬೇತಿಯಲ್ಲಿ ಕೋಕೋ ಸಂಸ್ಕರಣೆ, ಚಾಕೊಲೇಟ್ಸ್ ತಯಾರಿಕೆ, ಗೇರು ಸಂಸ್ಕರಣೆ, ಮೈಕ್ರೋ ಗ್ರೀನ್ಸ್ ಉತ್ಪಾದನೆ, ಹಣ್ಣು ಮತ್ತು ತರಕಾರಿಗಳ ಮೌಲ್ಯವರ್ಧನೆ ಮತ್ತು ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತ ಪದ್ಧತಿ ಪ್ರತ್ಯಕ್ಷಿಕೆಗಳಿರುತ್ತವೆ.

ಆಸಕ್ತರು ನೊಂದಾಯಿಸಿ ತರಬೇತಿಯ ಪ್ರಯೋಜನವನ್ನ ಪಡೆಯಬಹುದು.
ಕರಪತ್ರದಲ್ಲಿ ನಮೂದಿಸಿರುವ ಮೊ.ಸಂಖ್ಯೆ ಮೂಲಕ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು.

Keladi Shivappa Nayak University of Agricultural and Horticultural Sciences ಮಲೆನಾಡಿನಲ್ಲಿ” ಪುಷ್ಪ ಕೃಷಿ: ಸವಾಲುಗಳು & ಅವಕಾಶಗಳು” ತರಬೇತಿ ಕಾರ್ಯಕ್ರಮ

0

Keladi Shivappa Nayak University of Agricultural and Horticultural Sciences ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ವಿಸ್ತರಣಾ ನಿರ್ದೇಶನಾಲಯದ, ರೈತರ ತರಬೇತಿ ಸಂಸ್ಥೆಯು ” ಮಲೆನಾಡಿನಲ್ಲಿ ಪುಷ್ಪ ಕೃಷಿ: ಸವಾಲುಗಳು ಮತ್ತು ಅವಕಾಶಗಳು “
ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತದೆ.

ಈ ಕಾರ್ಯಕ್ರಮವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ “ರೈತರ ತರಬೇತಿ ಸಂಸ್ಥೆ, ವರದಾ ಬ್ಲಾಕ್, ಕೆಳಗಿನ ಮಹಡಿ, ಇರುವಕ್ಕಿ” ಯಲ್ಲಿ ದಿನಾಂಕ: 19.11.2025 ರ ಬೆಳಗ್ಗೆ 10 ಗಂಟೆಗೆ ನೆರವೇರಿಸಲಾಗುತ್ತದೆ.

ಆದುದರಿಂದ ಆಸಕ್ತ ರೈತರು ಮತ್ತು ರೈತ ಮಹಿಳೆಯರು, ರೈತರ ತರಬೇತಿ ಸಂಸ್ಥೆಯ ಸಿಬ್ಬಂದಿಯವರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಈ ತರಬೇತಿ ಕಾರ್ಯಕ್ರಮವು ಉಚಿತವಾಗಿರುತ್ತದೆ.

ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆಗಳು 9958324261/ 6363725298 / 9448312978

ತರಬೇತಿ ನಡೆಯುವ ಸ್ಥಳಕ್ಕೆ ಬರಲು ಈ ಕೋಡ್ ಪಿನ್ 44L-7L7-PJM6 ಅನ್ನು ಗೂಗಲ್ ಮ್ಯಾಪ್ ನಲ್ಲಿ ಉಪಯೋಗಿಸಿ.

CM Siddharamaiah ಬಿಜೆಪಿ- ಜೆಡಿಎಸ್ ಸಂಸದರು ರಾಜ್ಯಕ್ಕಾಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯೆತ್ತುವುದೇ ಇಲ್ಲ- ಸಿದ್ಧರಾಮಯ್ಯ

0

CM Siddharamaiah ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌
ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುವುದೇ ಇಲ್ಲ.

ಶಿವಕುಮಾರ್ ಅವರು ಜಲಸಂಪನ್ಮೂಲ ಸಚಿವರಾಗಿ ತಮ್ಮ ಅನುಭವ ಮತ್ತು ಗ್ರಹಿಕೆಯನ್ನು ಹಾಗೂ ನೀರಿನ ಮಹತ್ವವನ್ನು ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ. ನಾನು ಪುಸ್ತಕವನ್ನು ಪೂರ್ತಿ ಓದುತ್ತೇನೆ. ನದಿ ವಿವಾದಗಳ ಆಳ ಅಗಲವನ್ನು ಜನರಿಗೆ ತಿಳಿಸುವ ಕೆಲಸವನ್ನು ನೀರಿನ ಹೆಜ್ಜೆ ಪುಸ್ತಕ ಮಾಡಲಿದೆ. ರಾಜ್ಯದಲ್ಲಿ 2028 ರಲ್ಲೂ ಕಾಂಗ್ರೆಸ್ಸೇ ಅಧಿಕಾರಿಕ್ಕೆ ಬರುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನುಡಿದಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬರೆದಿರುವ “ನೀರಿನ ಹೆಜ್ಜೆ: ವಿವಾದ-ಒಪ್ಪಂದ-ತೀರ್ಪು” ಕೃತಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಲೋಕಾರ್ಪಣೆಗೊಳಿಸಿ, ಮಾತನಾಡಿದರು.

ಮಹದಾಯಿ, ಕೃಷ್ಣಾ ಮತ್ತು ಕಾವೇರಿ ಸೇರಿ ಅಂತಾರಾಜ್ಯ ಜಲ ವಿವಾದಗಳು ಇನ್ನೂ ಜೀವಂತವಾಗಿದ್ದು, ರಾಜ್ಯಕ್ಕೆ ಪೂರ್ತಿ ಅನುಕೂಲಕರವಾದ ನ್ಯಾಯಬದ್ಧ ತೀರ್ಮಾನಗಳು ಇನ್ನೂ ಆಗಬೇಕಿದೆ.

ಮೇಕೆದಾಟಿನಲ್ಲಿ 67 ಟಿಎಂಸಿ ನೀರನ್ನು ಶೇಖರಣೆ ಮಾಡಲಾಗುತ್ತದೆ. ಈ ಯೋಜನೆಯಲ್ಲಿ ನಮಗಿಂತ ಹೆಚ್ಚು ತಮಿಳುನಾಡಿಗೇ ಅನುಕೂಲವಿದೆ. ಆದರೂ ಅವರು ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ತಮಿಳುನಾಡು ಸರ್ಕಾರ ಕೇವಲ ರಾಜಕೀಯ ಕಾರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಇದನ್ನು ನಾವು ವಿರೋಧಿಸಿ ಪಾದಯಾತ್ರೆ ನಡೆಸಿದೆವು. ಪಾದಯಾತ್ರೆಗೆ ಹಲವು ಟೀಕೆಗಳು ಬಂದರೂ ನಾವು ಎದೆಗುಂದದೆ ಪಾದಯಾತ್ರೆ ಯಶಸ್ವಿಗೊಳಿಸಿದೆವು.

CM Siddharamaiah ಮತ್ತೊಂದು ಕಡೆ ಕೃಷ್ಣಾ ನದಿ ನೀರಿನ ವಿವಾದದಲ್ಲೂ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಮಾಡಿಲ್ಲ. ಜೆಡಿಎಸ್ ಪಕ್ಷವಾಗಲೀ, ಬಿಜೆಪಿ ಪಕ್ಷವಾಗಲೀ, ಈ ಪಕ್ಷಗಳ ಸಂಸದರಾಗಲೀ ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆಯಾಗಲೀ, ಆರ್ಥಿಕವಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಗೆಯುತ್ತಿರುವ ದ್ರೋಹದ ಬಗ್ಗೆಯೂ ಮಾತಾಡುವುದಿಲ್ಲ. ಇಷ್ಟು ಮಾತ್ರವಲ್ಲದೆ ಕಬ್ಬು ಬೆಳಗಾರರಿಗೆ ದ್ರೋಹ ಬಗೆದಿರುವುದೂ ಕೇಂದ್ರ ಸರ್ಕಾರ. ಈ ಬಗ್ಗೆಯೂ ಬಿಜೆಪಿ, ಜೆಡಿಎಸ್ ಸಂಸದರು ಬಾಯಿ ಬಿಡುತ್ತಿಲ್ಲ.

ಮುಧೋಳದಲ್ಲಿ ಕಬ್ಬಿನ ಟ್ರಾಕ್ಟರ್ ಗಳಿಗೆ ಬೆಂಕಿ ಹಚ್ಚಿದ್ದು ತಾವಲ್ಲ ಎಂದು ರೈತರು, ರೈತ ಮುಖಂಡರು ಹೇಳಿದ್ದಾರೆ. ಕಬ್ಬು ಬೆಳೆಗಾರರ ಹೆಸರಲ್ಲಿ ಮುಧೋಳದಲ್ಲಿ ಬೆಂಕಿ ಹಚ್ಚಿದವರು ಯಾರು ಎನ್ನುವ ಬಗ್ಗೆ ತನಿಖೆ ನಡೆಸಲು ಸೂಚಿಸಲಾಗಿದೆ. ಈ ಮೂಲಕ ಸತ್ಯಾಂಶ ಹೊರಗೆಳೆಯಲಾಗುವುದು ಎಂದು ಹೇಳಿದರು.

Children’s Day ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನ ತಿಳಿಸಬೇಕು- ಜಿ.ವಿಜಯ್ ಕುಮಾರ್

0

Children’s Day ಮಕ್ಕಳಿಗೆ ಮಾನವೀಯ ಮೌಲ್ಯಗಳು ಹಾಗೂ ಸಂಸ್ಕಾರವನ್ನು ನೀಡುವುದರ ಮೂಲಕ ಪರಿಪೂರ್ಣರನ್ನಾಗಿಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಹೇಳಿದರು.
ಮಕ್ಕಳ ದಿನಾಚರಣೆ ಅಂಗವಾಗಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ತಂತ್ರಜ್ಞಾನ ಬದಲಾದ ಹಾಗೆ ಮಕ್ಕಳಲ್ಲಿ ಸಂಸ್ಕಾರದ ಕೊರತೆ ಎದ್ದು ಕಾಣಿಸುತ್ತಿದೆ. ಮಾನವೀಯ ಮೌಲ್ಯಗಳು ಕೊರತೆ ಇದೆ. ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ಹಾಗೂ ಜೀವನ ಕೌಶಲ್ಯಗಳ ಬಗ್ಗೆ ಅರಿತುಕೊಂಡು ಸಮಾಜದಲ್ಲಿ ಒಳ್ಳೆಯ ಪ್ರಜೆಗಳಾಗಬೇಕು ಎಂದು ತಿಳಿಸಿದರು.
ಹೆಣ್ಣು ಮಕ್ಕಳು ದೌರ್ಜನ್ಯ ಹಾಗೂ ಬೇರೆ ಬೇರೆ ಕಾರಣಗಳಿಗೆ ಆತ್ಮಹತ್ಯೆಗೆ ಒಳಗುತ್ತಿದ್ದಾರೆ. ಆದ್ದರಿಂದ ಯಾವುದೇ ಆಕರ್ಷಣೆಗೆ ಒಳಗಾಗದೆ ಗುಡ್ ಟಚ್ ಮತ್ತು ಬ್ಯಾಟ್ ಟಚ್ ಬಗ್ಗೆ ತಿಳಿದುಕೊಂಡು ಪರಸ್ಪರರಲ್ಲಿ ಒಡನಾಟ ಇಟ್ಟುಕೊಳ್ಳಬೇಕು. ವಿದ್ಯಾರ್ಥಿಯ ಜೀವನ ಬಂಗಾರದ ಜೀವನ. ಈ ಹಂತದಲ್ಲಿ ವಿದ್ಯಾರ್ಥಿಗಳು ಎಚ್ಚರದಿಂದ ಇರಬೇಕು ಎಂದು ತಿಳಿಸಿದರು.
ಕರ್ನಾಟಕ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷೆ ಸುಮತಿ ಕುಮಾರಸ್ವಾಮಿ ಮಾತನಾಡಿ, ಭಾರತದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸುತ್ತಿದ್ದು, ಮಕ್ಕಳಲ್ಲಿ ಆತ್ಮವಿಶ್ವಾಸ ಹಾಗೂ ನೈತಿಕ ಶಿಕ್ಷಣವನ್ನು ಮೂಡಿಸಬೇಕು ಎಂದು ತಿಳಿಸಿದರು.
Children’s Day ಶಿವಮೊಗ್ಗ ಐಎಂಎ ಶಾಖೆಯ ಮಾಜಿ ಅಧ್ಯಕ್ಷ ಡಾ. ಅರುಣ್ ಮಾತನಾಡಿ, ಮಕ್ಕಳು ಆರೋಗ್ಯವನ್ನು ಸದೃಢವಾಗಿ ಇಟ್ಟುಕೊಳ್ಳಬೇಕು. ನಿಯಮಿತವಾದ ವ್ಯಾಯಾಮ, ಪೌಷ್ಟಿಕಾಂಶ ಸೇವನೆ ಮತ್ತು ಸಕಾರಾತ್ಮಕ ಭಾವನೆಯಿಂದ ಶಿಕ್ಷಣದ ಜೊತೆಗೆ ಆರೋಗ್ಯವನ್ನು ಸಹ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷ ನೆಪ್ಚೂನ್ ಕಿಶೋರ್ ಕುಮಾರ್ ಮಾತನಾಡಿ, ಮಕ್ಕಳು ಸಮಾಜದ ಆಸ್ತಿ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಬಾಲ್ಯದಲ್ಲಿ ಒಳ್ಳೆಯ ಶಿಕ್ಷಣ ಹಾಗೂ ಸರಿಯಾದ ಮಾರ್ಗದರ್ಶನ ಸಿಕ್ಕಾಗ ಮಕ್ಕಳು ಪರಿಪೂರ್ಣವಾದ ವ್ಯಕ್ತಿತ್ವವನ್ನು ಹೊಂದುತ್ತಾರೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಕ್ಕಳಿಂದ ಮಕ್ಕಳ ಗೀತೆಗಳು ಹಾಗೂ ಕೇಕ್ ಕಟ್ ಮಾಡುವುದರ ಮುಖಾಂತರ ಸಿಹಿ ಹಂಚಿ ಸಂಭ್ರಮಿಸಿದರು. ಡಾ. ಅವಿನಾಶ್ ಅವರು ಎಲ್ಲಾ ಮಕ್ಕಳಿಗೆ ಕೇಕ್ ವಿತರಿಸಿದರು.
ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಡಾ. ಧನಂಜಯ ರಾಂಪುರ, ಸತೀಶ್ ಚಂದ್ರ, ಇನ್ನರ್ ವ್ಹೀಲ್ ಮಾಜಿ ಅಧ್ಯಕ್ಷೆ ಬಿಂದು ವಿಜಯ ಕುಮಾರ್, ಮಾಜಿ ಅಧ್ಯಕ್ಷ ಅರುಣ್ ದೀಕ್ಷಿತ್ ಹಾಗೂ ರೋಟರಿ ಸದಸ್ಯರು ಇನ್ನರ್‌ವ್ಹೀಲ್ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.

Breaking News ಮತ್ತೆ ಕಾಡುತ್ತಿರುವ ಕಾಡಾನೆ ಸುಳಿದಾಟ, ಮಲೆಶಂಕರ, ಪುರದಾಳು ಗ್ರಾಮಸ್ಥರಲ್ಲಿ ಮೂಡಿದ ಆತಂಕ

0

Breaking News ಶಿವಮೊಗ್ಗ ತಾಲೂಕಿನ ಮಲೆ ಶಂಕರ, ಮಂಜರಿಕೊಪ್ಪ , ಪುರದಾಳು ಹಾಗೂ ಸಿರಿಗೆರೆ ಭಾಗದಲ್ಲಿ ಕಾಡಾನೆ ಕಾಣಿಸಿಕೊಂಡಿದೆ. ಇದರಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಳೆದ ವಾರದಲ್ಲಿ ಪುರದಾಳು ಭಾಗದ ಹಲವೆಡೆ ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ ನಡೆಸಿತ್ತು. 50 ಎಕರೆಗೂ ಹೆಚ್ಚು ಬೆಳೆ ನಾಶವಾಗಿತ್ತು.