Thursday, August 6, 2026
Thursday, August 6, 2026
Home Blog Page 93

ಆನ್ ಲೈನ್ ಮೆಡಿಸಿನ್ ಮತ್ತು ಯದ್ವಾತದ್ವ ರಿಯಾಯಿತಿ ಔಷಧ ಪೂರೈಕೆ ವಿರುದ್ಧ ಔಷಧ ವ್ಯಾಪಾರಿಗಳ ಪ್ರತಿಭಟನೆ

0

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಮೆಡಿಕಲ್ ಶಾಪ್‌ಗಳು ಸಂಪೂರ್ಣ ಬಂದ್ ಆಗಿದ್ದು, ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಮುಂದಿರಿಸಿ ಪ್ರತಿಭಟನೆ ನಡೆಸಲಾಗಿದೆ. ಡಿಸಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಆನ್‌ಲೈನ್ ಮೆಡಿಸಿನ್ ಮಾರಾಟ, ಬೇಕಾಬಿಟ್ಟಿ ರಿಯಾಯಿತಿ ಹಾಗೂ ನಕಲಿ ಔಷಧ ಪೂರೈಕೆ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಲಾಗಿದೆ.

ಆನ್‌ಲೈನ್ ಮೂಲಕ ಔಷಧ ಮಾರಾಟ ಹೆಚ್ಚುತ್ತಿರುವುದು, ಅತಿಯಾದ ರಿಯಾಯಿತಿಯಲ್ಲಿ ಔಷಧ ವಿತರಣೆ ನಡೆಯುತ್ತಿರುವುದು ಹಾಗೂ ನಕಲಿ ಔಷಧ ಪೂರೈಕೆ ಹೆಚ್ಚುತ್ತಿರುವುದರಿಂದ ಸಾಂಪ್ರದಾಯಿಕ ಔಷಧ ವ್ಯಾಪಾರಿಗಳಿಗೆ ಭಾರೀ ನಷ್ಟ ಉಂಟಾಗುತ್ತಿದೆ ಎಂದು ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ, ಆನ್‌ಲೈನ್ ಮೆಡಿಸಿನ್ ಮಾರಾಟ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು, ನಕಲಿ ಔಷಧ ಪೂರೈಕೆ ತಡೆಯಬೇಕು ಹಾಗೂ ಔಷಧ ವ್ಯಾಪಾರಿಗಳ ಹಿತಾಸಕ್ತಿ ಕಾಪಾಡಬೇಕು ಎಂದು ಆಗ್ರಹಿಸಿದರು.

ಯುವ ನಿಧಿ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

0

ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಶಿವಮೊಗ್ಗ ಜಿಲ್ಲೆಯ 2023ರ ನಂತರ ಸ್ನಾತಕೋತ್ತರ ಪದವಿ/ ಪದವಿ/ ಡಿಪ್ಲೋಮಾ ಪಡೆದ ಅರ್ಹ ನಿರುದ್ಯೋಗಿಗಳು ಪದವಿ ಪಡೆದು 6 ತಿಂಗಳಾದರೂ ಉದ್ಯೋಗ ಪಡೆಯದವರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯ ಫಲಾನುಭವಿಗಳು ತ್ರೈಮಾಸಿಕ ಬದಲಾಗಿ ಪ್ರತಿ ತಿಂಗಳು 25ರೊಳಗಾಗಿ ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಸ್ವಯಂ ಘೋಷಣೆ ನೀಡಬೇಕು. ಇಲ್ಲದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮಾ ಆಗುವುದಿಲ್ಲ. ಪ್ರತಿ ತಿಂಗಳು ಪದವೀಧರರಿಗೆ ರೂ. 3000/- ಹಾಗೂ ಡಿಪ್ಲೋಮಾದಾರರಿಗೆ ರೂ. 1500/- ನಿರುದ್ಯೋಗ ಭತ್ಯೆ ನೀಡಲಾಗುವುದು.

Friends Center ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯ ಶ್ಲಾಘನೀಯ- ಬಿ.ಜಿ‌.ಧನರಾಜ್

0

Friends Center ಶಿವಮೊಗ್ಗ ನಗರದ ಪ್ರತಿಷ್ಟಿತ ಸಂಸ್ಥೆಯಾದ ಫ್ರೆಂಡ್ಸ್ ಸೆಂಟರ್ ವತಿಯಿಂದ ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರನ್ನು ಒದಗಿಸಲು “ಜಲಾಮೃತ” ಕಾರ್ಯಕ್ರಮ ಹಮ್ಮಿಕೆುಾಂಡು ವಿವಿಧ ಬಡಾವಣೆಗಳಿಗೆ ಸಿಮೆಂಟಿನ ನೀರಿನ ತೆುಾಟ್ಟಿಗಳನ್ನು ವಿತರಿಸಲಾಯಿತು.
ಫ್ರೆಂಡ್ಸ್ ಸೆಂಟರ್ ಅಧ್ಯಕ್ಷರಾದ ಬಿ.ಜಿ.ಧನರಾಜ್ ರವರು ಮಾತನಾಡಿ ಪಕ್ಷಿಗಳು ತಿಂದ ಹಣ್ಣಿನ ಬೀಜಗಳಿಂದ ಅವುಗಳು ಹಾರಾಡುತ್ತಲೇ ವೃಕ್ಷಗಳನ್ನು ಸೃಷ್ಟಿ ಮಾಡುತ್ತವೆ ಹಾಗು ಕಾಡುಗಳಲ್ಲಿ ಸಮೃದ್ದವಾದ ಮರಗಳು ಬೆಳೆಯುತ್ತವೆ ಅದರಿಂದ ಮಳೆಯಾಗುತ್ತದೆ ಹೀಗೆ ಒಂದಕ್ಕೆುಾಂದು ಸಂಬಂಧವನ್ನು ಬೆಸೆಯುವಲ್ಲಿ ಹಾಗುಾ ಪ್ರಕೃತಿಯ ಸಮತೆುಾೕಲನ ಕಾಪಾಡುವಲ್ಲಿ ಪಕ್ಷಿಗಳ ಪಾತ್ರ ಬಹಳ ಮುಖ್ಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸುಡುವ ಬಿಸಿಲಿನ ಬೇಗೆಯಲ್ಲಿ ಪಕ್ಷಿಗಳಿಗೆ ಕುಡಿಯಲು ನೀರಿಲ್ಲದೇ ಪ್ರಾಣ ಕಳೆದುಕೆುಾಳ್ಳುತ್ತಿವೆ ಆದ್ದರಿಂದ ಅವುಗಳ ಜೀವ ಕಾಪಾಡುವುದು ಪ್ರತಿಯೊಬ್ಬ ಮನುಷ್ಯನ ಜವಾಬ್ದಾರಿ ಹಾಗೂ ಆದ್ಯ ಕರ್ತವ್ಯ ಎಂದು ಹೇಳಿದರು.
ತೆುಾಟ್ಟಿ ವಿತರಣಾ ಕಾರ್ಯಕ್ರಮವನ್ನು ಪರಿಸರ ಪ್ರೇಮಿಗಳಾದ ಜನಮೇಜಯರವರು ಉಧ್ಘಾಟಿಸಿ ಮಾತನಾಡಿ ಪ್ರಾಣಿ ಪಕ್ಷಿಗಳಿಗಾಗಿ ಸಿಮೆಂಟ್ ತೊಟ್ಟಿಗಳನ್ನು ವಿತರಿಸಿ ನೀರುಣಿಸುವ ಪುಣ್ಯದ ಕೆಲಸವನ್ನು ಫ್ರೆಂಡ್ಸ್ ಸೆಂಟರ್ ಸದಸ್ಯರು ಮಾಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ತಿಳಿಸಿದರು. ಹೀಗೆಯೇ ಸದಸ್ಯರು ನಿರಂತರವಾಗಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಇಂತಹ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಲಿ ಎಂದು ಆಶಿಸಿದರು. ಹಾಗುಾ ಮನೆಯ ಮೇಲೆ ಹಾಗುಾ ಕಿಟಕಿಯ ಹೆುಾರಗಡೆ ನಿಮ್ಮ ಮನೆಯಲ್ಲಿರುವ ತಟ್ಟೆಗಳು, ಪಾತ್ರೆಗಳು ಹಾಗುಾ ಡಬ್ಬಿಗಳಲ್ಲಿ ನೀರನ್ನು ತುಂಬಿ ಇಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
Friends Center ನೇತ್ರ ಭಂಡಾರದ ಅಧ್ಯಕ್ಷರಾದ ವಿ ನಾಗರಾಜ್ ರವರು ಮಾತನಾಡಿ ಪ್ರಕೃತಿಯು ವಿನಾಶದ ಅಂಚಿನೆಡೆ ಸಾಗುತ್ತಿದ್ದು ನಾವುಗಳು ನೆುಾೕಡುತ್ತಿದ್ದ ಗುಬ್ಬಿಗಳು ಕಡಿಮೆಯಾಗಿ ಇನ್ನು ಅನೇಕ ಪ್ರಾಣಿ ಪಕ್ಷಿಗಳು ನಾಶವಾಗಿ ನಾವುಗಳು ನಮ್ಮ ಮುಂದಿನ ಪೀಳಿಗೆಗೆ ಭಾವಚಿತ್ರದ ಮುಾಲಕ ತೆುಾೕರಿಸಬೇಕಾಗುತ್ತದೆಂದು ಕಳವಳ ವ್ಯಕ್ತಪಡಿಸಿದರು
ಮಾಜಿ ಅಧ್ಯಕ್ಷರಾದ ಜಿ ವಿಜಯಕುಮಾರ್ ಮಾತನಾಡಿ ಇತ್ತೀಚೆಗೆ ಅರಣ್ಯ ಸಂಪತ್ತು ಕ್ಷೀಣಿಸುತ್ತಿರುವ ಕಾರಣ ಪ್ರಾಣಿ ಪಕ್ಷಿಗಳಿಗೆ ಆಸರೆ ಇಲ್ಲದಂತಾಗಿ ಅವುಗಳು ಕಾಡಿನಿಂದ ನಾಡಿನ ಕಡೆಗೆ ಬರುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು
ನಂತರ ಸದಸ್ಯರೆಲ್ಲರು ಸೇರಿ ಗೆುಾೕಪಾಳದ ಕೃಷ್ಣ ಮಠ ಪಾರ್ಕ್, ಸ್ವಾಮಿ ವಿವೇಕಾನಂದ ಪಾರ್ಕ್, ಕಮರ್ಷಿಯಲ್ ಟ್ಯಾಕ್ಸ್ ಆಫೀಸ್,ಅಶ್ವಥ್ಥನಗರ ಪಾರ್ಕ್,ರಾಜೇಂದ್ರ ನಗರ,ಬಸವನಗುಡಿ, ತಿಲಕ್ ನಗರ ಹಾಗುಾ ಗಾರ್ಡನ್ ಏರಿಯಾ ಇನ್ನು ಅನೇಕ ಕಡೆಗಳಲ್ಲಿ ತೆುಾಟ್ಟಿಗಳನ್ನು ನಿರ್ವಹಣೆ ಮಾಡುವ ಮನೆಗಳ ಮುಂದೆ ವಿತರಿಸಲಾಯಿತು
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಯುಆರ್ ಐತಾಳ್, ಮಹಿಳಾ ಅಧ್ಯಕ್ಷೆ ಸಪ್ನ ಬದ್ರಿನಾಥ್,ನೇತ್ರ ಭಂಡಾರದ ಅಧ್ಯಕ್ಷರಾದ ವಿ ನಾಗರಾಜ್, ಜಿ ವಿಜಯಕುಮಾರ್,ಆರ್ ಮನೆುಾೕಹರ್ ,ಪಿ ರಾಜೇಶ್,ಎಂ ಪಿ ನಾಗರಾಜ್, ಮಲ್ಲಿಕಾರ್ಜುನ್ ಕಾನುಾರು,ಹೆಚ್ ಎಂ ಸತ್ಯನಾರಾಯಣ್,ಪಿ ಹಿರೇಮಠ್, ಗಂಗಾಧರ್ ಮತ್ತು ಸತೀಶ್ ಇನ್ನಿತರರು
ಹಾಜರಿದ್ದರು.

DC Shivamogga ಮೇ ಮತ್ತು ಜೂನ್ ತಿಂಗಳ ಪಡಿತರ ಅಕ್ಕಿ ವಿತರಣೆ ಮಾಹಿತಿ

0

DC Shivamogga ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 2026ರ ಮೇ ಮತ್ತು ಜೂನ್ ಮಾಹೆಗಳ ಆಹಾರ ಧಾನ್ಯಗಳನ್ನು ಮೇ 2026ರ ಮಾಹೆಯಲ್ಲಿಯೇ ವಿತರಣೆ ಮಾಡಲು ಸರ್ಕಾರವು ಆದೇಶಿಸಿದೆ.
ಅಂತ್ಯೋದಯ ಅನ್ನ ಯೋಜನೆಯಡಿ ಪಡಿತರ ಚೀಟಿಗೆ 35 ಕೆ.ಜಿ.ಯಂತೆ ಎರಡು ತಿಂಗಳ ಅಕ್ಕಿ 70 ಕೆ.ಜಿ. ಹಾಗೂ ಆದ್ಯತಾ ಕೇಂದ್ರ ಮತ್ತು ರಾಜ್ಯ ಪಡಿತರ ಚೀಟಿಗೆ ಪ್ರತಿ ಸದಸ್ಯರಿಗೆ ಕೇಂದ್ರದಿಂದ ತಲಾ 5 ಕೆ.ಜಿ. ಯಂತೆ ಎರಡು ತಿಂಗಳ ಅಕ್ಕಿ 10 ಕೆ.ಜಿ.ಯಂತೆ ಮೇ-31 ರೊಳಗೆ ಮಾತ್ರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ. DC Shivamogga ಪಡಿತರ ಚೀಟಿದಾರರು ಆಹಾರ ಧಾನ್ಯವನ್ನು ಪಡೆಯುವಾಗ ಮೇ ಮತ್ತು ಜೂನ್ ರ ಮಾಹೆಯ ಹಂಚಿಕೆಗಳಿಗೆ ಪ್ರತ್ಯೇಕವಾಗಿ ಎರಡು ಬಾರಿ ಕಡ್ಡಾಯವಾಗಿ ಬಯೋ ನೀಡಿ ಪ್ರತಿ ದಿನ ಬೆಳಗ್ಗೆ 6.00 ರಿಂದ ರಾತ್ರಿ 10.00ರವರೆಗೆ ಪಡಿತರ ವಿತರಣೆಗೆ ಸರ್ವರ್ ಲಭ್ಯಗೊಳಿಸಿರುವುದರಿಂದ ಮೇ 31 ರೊಳಗಾಗಿ ಪಡಿತರ ಪಡೆಯುವುದು. ಪಡಿತರ ವಿತರಣೆ ಸಂಬಂಧ ಯಾವುದೇ ದೂರುಗಳಿದ್ದಲ್ಲಿ ಕೇಂದ್ರ ಸಹಾಯವಾಣಿ 1967 ಕ್ಕೆ ಕರೆ ಮಾಡಿ ಅಥವಾ ಹತ್ತಿರದ ಆಹಾರ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಬಹುದಾಗಿದೆ.

Dr. Dhananjaya Sarji ದುಬಾರೆ ಸಾಕಾನೆ ಶಿಬಿರ ದುರಂತ: ಇಂತಹ ಘಟನೆ ಮರು ಕಳಿಸದಿರಲಿ- ಡಾ.ಧನಂಜಯ ಸರ್ಜಿ

0

Dr. Dhananjaya Sarji ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ನದಿಯಲ್ಲಿ ಆನೆಗಳನ್ನು ಸ್ನಾನ ಮಾಡಿಸುವ ವೇಳೆ ಕಂಜನ್ ಹೆಸರಿನ ಸಾಕಾನೆ ಮತ್ತೊಂದು ಆನೆ ಮೇಲೆ ದಾಳಿ ಮಾಡಿದ್ದು, ಈ ಆನೆ ಕೆಳಗೆ ಬಿದ್ದಿದೆ. ಸಂದರ್ಭದಲ್ಲಿ ಸ್ಥಳದಲ್ಲೇ ಇದ್ದ ಚೆನ್ನೈ ಮೂಲದ ಪ್ರವಾಸಿ ಮಹಿಳೆ ಆನೆ ಕೆಳಗೆ ಸಿಲುಕಿ ಸ್ಥಳದಲ್ಲಿಯೇ ಪ್ರಾಣ ಕಳೆದುಕೊಂಡು ಬಲಿಯಾಗಿರುವುದು ಅತ್ಯಂತ ದುಃಖಕರ ಮತ್ತು ಆಘಾತಕಾರಿ ಎಂದು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ದುಬಾರೆ ಆನೆ ಶಿಬಿರದ ದುರಂತದ ಬಗ್ಗೆ ಖೇದ ವ್ಯಕ್ತಪಡಿಸಿದ್ದಾರೆ.

ಪ್ರವಾಸೋದ್ಯಮದ ಬೆಳವಣಿಗೆಯಷ್ಟೇ ಸಾರ್ವಜನಿಕರ ಜೀವ ರಕ್ಷಣೆಯೂ ಮುಖ್ಯ. ಇಂತಹ ದುರಂತಗಳು ಮರುಕಳಿಸದಂತೆ ತಡೆಯಲು ಸಾರ್ವಜನಿಕರು ಹಾಗೂ ಸರ್ಕಾರ/ಅರಣ್ಯ ಇಲಾಖೆ ತಕ್ಷಣವೇ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕಿದೆ. ರಾಜ್ಯದ ಎಲ್ಲಾ ಆನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆ ಹಾಗೂ ವನ್ಯಜೀವಿಗಳ ನಿರ್ವಹಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರಲಿ.

Dr. Dhananjaya Sarji ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಂ.ಎಲ್.ಸಿ. ಡಾ.ಧನಂಜಯ ಸರ್ಜಿ ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

S.N. Channabasappa ಸ್ಥಳೀಯ ನಾಗರಿಕರನ್ನ ಸಂಪೂರ್ಣ ವಿಶ್ವಾಸಕ್ಕೆ ತೆಗೆದುಕೊಂಡು ಕಾಮಗಾರಿ ನಡೆಸಿ- ಎಸ್.ಎನ್‌. ಚನ್ನಬಸಪ್ಪ

0

S.N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 6ರ ವ್ಯಾಪ್ತಿಯ ಗಾಡಿಕೊಪ್ಪದ ಪೊಲೀಸ್ ಲೇಔಟ್‌ನಲ್ಲಿ ಮಹಾನಗರ ಪಾಲಿಕೆಯಿಂದ ಕೈಗೆತ್ತಿಕೊಳ್ಳಲಾಗಿರುವ ಯುಜಿಡಿ ವೆಟ್‌ವೆಲ್ ಕಾಮಗಾರಿ ಸ್ಥಳಕ್ಕೆ ಮಾನ್ಯ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಭೇಟಿ ನೀಡಿ, ಅಧಿಕಾರಿಗಳು ಮತ್ತು ಸಾರ್ವಜನಿಕರೊಂದಿಗೆ ಸಭೆ ನಡೆಸಿದರು.

ಸದರಿ ಪೊಲೀಸ್ ಲೇಔಟ್‌ನಲ್ಲಿ ಪಾಲಿಕೆ ವತಿಯಿಂದ ನಡೆಯುತ್ತಿದ್ದ ಯುಜಿಡಿ ಕಾಮಗಾರಿಗೆ ತಾಂತ್ರಿಕ ಹಾಗೂ ಸ್ಥಳೀಯ ಕಾರಣಗಳಿಂದ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಸ್ಪಂದಿಸಿದ ಶಾಸಕರು, ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.

S.N. Channabasappa ಸಾರ್ವಜನಿಕರು ಮತ್ತು ಪಾಲಿಕೆಯ ಇಂಜಿನಿಯರ್‌ಗಳೊಂದಿಗೆ ಸಮಾಲೋಚನೆ ನಡೆಸಿದ ಶಾಸಕರು, “ನಗರದ ಹಾಗೂ ವಾರ್ಡ್‌ನ ಸರ್ವಾಂಗೀಣ ಅಭಿವೃದ್ಧಿ ನಮಗೆ ಮುಖ್ಯ. ಆದರೆ, ಯಾವುದೇ ಕಾಮಗಾರಿಯಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಬಾರದು. ಸ್ಥಳೀಯ ನಾಗರಿಕರ ಆತಂಕಗಳನ್ನು ದೂರ ಮಾಡಿ, ಅವರನ್ನು ಸಂಪೂರ್ಣವಾಗಿ ವಿಶ್ವಾಸಕ್ಕೆ ತೆಗೆದುಕೊಂಡು ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರಿಕೆಯಿಂದ ಸ್ಥಳ ಪರಿಶೀಲಿಸಿ ಕಾಮಗಾರಿಯನ್ನು ತಕ್ಷಣವೇ ಪುನರಾರಂಭಿಸಬೇಕು” ಎಂದು ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು ಶಾಸಕರ ಮಧ್ಯಸ್ಥಿಕೆಯಿಂದಾಗಿ ಸ್ಥಳೀಯರ ಗೊಂದಲಗಳು ಬಗೆಹರಿದಿದ್ದು, ಕಾಮಗಾರಿ ನಡೆಸಲು ಸಾರ್ವಜನಿಕರು ಸಮ್ಮತಿ ಸೂಚಿಸಿದರು.

ಈ ಸ್ಥಳ ಪರಿಶೀಲನಾ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಗಳು, ವಾರ್ಡ್‌ನ ಪ್ರಮುಖ ಮುಖಂಡರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

Backward Classes Welfare Department ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕದ ವಿಸ್ತರಣೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೂಚನೆ

0

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಭಾರತೀಯ ಸೇನೆ/ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಬೆಳಗಾವಿ ಜಿಲ್ಲೆಯಲ್ಲಿನ ಇಲಾಖೆಯ ಸೇನಾ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ (ಬಾಲಕರಿಗೆ ಮಾತ್ರ) ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೇ 13 ರಿಂದ ಜೂ. 05 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿರುತ್ತಾರೆ.

ಮೇ 18 ರಿಂದ 23 ವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ” ಜನ ಭಾಗಿದಾರಿ …” ವಿಶೇಷ ಮಾಹಿತಿ ಅಭಿಯಾನ

0

ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ವತಿಯಿಂದ ಜಿಲ್ಲೆಯಲ್ಲಿ ಮೇ 18 ರಿಂದ ಮೇ 25 ರವರೆಗೆ “ಜನ ಭಾಗೀದಾರಿ – ಸಬ್‌ಸೇ ದೂರ್, ಸಬ್‌ಸೇ ಪೆಹ್ಲೆ” ಎಂಬ ವಿಶೇಷ ಮಾಹಿತಿ ಶಿಕ್ಷ ಸಂವಹನ(ಐಇಸಿ) ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.
ಬುಡಕಟ್ಟು ಸಮುದಾಯದ ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಪ್ರಯೋಜನಗಳನ್ನು ತಲುಪಿಸುವುದು ಮತ್ತು ಅದಕ್ಕೆ ಬೇಕಾಗುವ ಅಗತ್ಯ ದಾಖಲಾತಿಗಳನ್ನು ಒದಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ 17 ಇಲಾಖೆಗಳ ಸಮನ್ವಯದೊಂದಿಗೆ ಈ ಅಭಿಯಾನವನ್ನು ಆಯೋಜಿಸಲಾಗಿದೆ.
ಗ್ರಾಮಗಳಲ್ಲಿ ಜಾಗೃತಿ ಮತ್ತು ಆರೋಗ್ಯ ಶಿಬಿರ:
‘ಧರ್ತಿ ಆಬಾ ಜನಜಾತೀಯ ಗ್ರಾಮ್ ಉತ್ಕರ್ಷ್ ಅಭಿಯಾನ್’ (ಡಿಎ-ಜೆಜಿಯುಎ)ಯೋಜನೆಯಡಿ ಆಯ್ಕೆಯಾಗಿರುವ ಶಿವಮೊಗ್ಗ ತಾಲೂಕಿನ ಎರಡು ಪ್ರಮುಖ ಗ್ರಾಮಗಳಲ್ಲಿ ಈ ಕಾರ್ಯಕ್ರಮಗಳು ನಡೆಯಲಿವೆ.
ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿರೂಪಿನಕೊಪ್ಪ , ಬಿ.ಬೀರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸದಾಶಿವಪುರ ಈ ಗ್ರಾಮಗಳಲ್ಲಿ ಅಭಿಯಾನದ ಅಂಗವಾಗಿ ಆರೋಗ್ಯ ತಪಾಸಣಾ ಶಿಬಿರಗಳು ಹಾಗೂ ವಿವಿಧ ಸರ್ಕಾರಿ ಯೋಜನೆಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರಮುಖವಾಗಿ ಪಿಎಂ -ಜನ್‌ಮನ್ ಹಾಗೂ ಡಿಎ-ಜೆಜಿಯುಎ ಯೋಜನೆಗಳ ಬಗ್ಗೆ ಸಮುದಾಯದ ಜನರಲ್ಲಿ ವ್ಯಾಪಕ ಅರಿವು ಮೂಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.
ಶಿವಮೊಗ್ಗ ತಾಲೂಕಿನ ವಿರೂಪಿನಕೊಪ್ಪ ಮತ್ತು ಸದಾಶಿವಪುರ ಗ್ರಾಮಗಳ ಪರಿಶಿಷ್ಟ ಪಂಗಡ ಸಮುದಾಯದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರಗಳಲ್ಲಿ ಪಾಲ್ಗೊಂಡು ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬೇಕಾಗಿ ಅವರು ಪ್ರಕಟಣೆಯಲ್ಲಿ‌ ವಿನಂತಿಸಿದ್ದಾರೆ.

ಸುಬ್ರಹ್ಮಣ್ಯದಂತಹ ಕ್ಷೇತ್ರಗಳಲ್ಲಿ ಸ್ಥಳೀಯ ಇತಿಹಾಸ, ಸಂಪ್ರದಾಯ ಪರಿಚಯಿಸುವ ವಸ್ತು ಸಂಗ್ರಹಾಲಯ ಬೆಳೆಯಬೇಕಿದೆ: ಡಾ.ಎಸ್.ಜಿ.ಸಾಮಕ್

0

ಸುಬ್ರಹ್ಮಣ್ಯ ಮಠದಲ್ಲಿಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ ವಸ್ತು ಸಂಗ್ರಹಾಲಯ ಜ್ಞಾನದ ಕೇಂದ್ರ: ಸುಬ್ರಹ್ಮಣ್ಯ ಶ್ರೀ ಸುಬ್ರಹ್ಮಣ್ಯ, ಮೇ 18: ವಸ್ತು ಸಂಗ್ರಹಾಲಯಗಳಲ್ಲಿ
ಸಂರಕ್ಷಿಸಲ್ಪಟ್ಟಿರುವ ಪ್ರಾಚ್ಯ ವಸ್ತುಗಳು ಸಮಾಜದ ಇತಿಹಾಸ, ಸಂಸ್ಕೃತಿ, ಆಚರಣೆ ಹಾಗೂ ಜೀವನ ಶೈಲಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮಹತ್ವದ ಮಾಧ್ಯಮಗಳಾಗಿವೆ ಎಂದು ಶ್ರೀ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ
ಸ್ವಾಮೀಜಿ ಅಭಿಪ್ರಾಯಪಟ್ಟರು.
ಶನಿಕೇತನ ವಸ್ತು ಸಂಗ್ರಹಾಲಯ ಮತ್ತು ಸಂಶೋಧನ ಕೇಂದ್ರದಲ್ಲಿ ಆಯೋಜಿಸಲಾದ ಅಂತರಾಷ್ಟ್ರೀಯ ವಸ್ತು ಸಂಗ್ರ ಹಾಲಯ
ದಿನಾಚರಣೆಯನ್ನು ಉದ್ಘಾಟಿಸಿ, ವಸ್ತು ಸಂಗ್ರಹಾಲಯದ ನೂತನ ವೆಬ್‌ಸೈಟ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಮರದ ಕೆತ್ತನೆಗಳು, ನಾಣ್ಯಗಳು, ಹಸ್ತ ಪ್ರತಿಗಳು, ತೂಕ – ಅಳತೆಯ ಉಪಕರಣ ಗಳು, ಜಾನಪದ ವಸ್ತುಗಳು, ಹಳೆಯ ನೋಟು ಗಳು
ಸೇರಿದಂತೆ ವಿವಿಧ ಕಾಲಘಟ್ಟಗಳ ಜೀವನಶೈಲಿಯನ್ನು ಪರಿಚಯಿಸುವ ಅಪರೂಪದ ಸಂಗ್ರಹಗಳು ವಸ್ತು ಸಂಗ್ರಹಾಲಯಗಳಲ್ಲಿ ಅಡಕವಾಗಿವೆ.
ಇವುಗಳನ್ನು ಸಂರಕ್ಷಿಸಿ ಮುಂದಿನ ತಲೆಮಾರಿಗೆ ಪರಿಚಯಿಸುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಹೇಳಿದರು.
ಸಂಸ್ಥೆ ನಡೆಸುತ್ತಿರುವ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಂಶೋಧನಾ ಚಟುವಟಿಕೆಗಳ ಮಾಹಿತಿ ಇದರ ಮೂಲಕ ಸಾರ್ವಜನಿಕರಿಗೆ
ಲಭ್ಯವಾಗಲಿದ್ದು, ವಿದ್ಯಾರ್ಥಿಗಳು ಮತ್ತು ಸಂಶೋಧಕರು ಇದರ ಪ್ರಯೋಜನ ಪಡೆಯಬಹುದು ಎಂದರು.
ವಿಶೇಷ ಉಪನ್ಯಾಸ ನೀಡಿದ ಮಲೆನಾಡು ಇತಿಹಾಸ ಮಂಡಳಿಯ ಅಧ್ಯಕ್ಷ ಹಾಗೂ ಪುರಾತತ್ವ ವಿದ್ವಾಂಸ ಡಾ|| ಎಸ್‌.ಜಿ. ಸಾಮಕ್,
ವಸ್ತು ಸಂಗ್ರಹಾಲಯಗಳ ಉಗಮ ಅವುಗಳ ವಿವಿಧ ರೂಪಗಳು ಹಾಗೂ ಭಾರತದಲ್ಲಿನ ಪ್ರಮುಖ ರಾಷ್ಟ್ರೀಯ ವಸ್ತು
ಸಂಗ್ರಹಾಲಯಗಳ ಕುರಿತು ಮಾಹಿತಿ ನೀಡಿದರು. ವಿಶ್ವದ ವಿವಿಧ ದೇಶಗಳಲ್ಲಿ ತಾವು ವೀಕ್ಷಿಸಿದ ವಸ್ತು ಸಂಗ್ರಹಾಲಯಗಳ ಕಾರ್ಯವೈಖರಿ ಮತ್ತು ಅವುಗಳ ವೈಶಿಷ್ಟ್ಯಗಳನ್ನು ವಿವರಿಸಿದ ಅವರು, ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ವಸ್ತು ಸಂಗ್ರಹಾಲಯಗಳ ಪಾತ್ರ ಮಹತ್ವದ್ದಾಗಿದೆ ಎಂದರು. ಐತಿಹಾಸಿಕ, ಪೌರಾಣಿಕ ಹಾಗೂ ಸಾಂಸ್ಕೃತಿಕ ಹಿನ್ನೆಲೆಯುಳ್ಳ ಸುಬ್ರಹ್ಮಣ್ಯದಂತಹ ಕ್ಷೇತ್ರಗಳಲ್ಲಿ ಸ್ಥಳೀಯ ಇತಿಹಾಸ
ಮತ್ತು ಸಂಪ್ರದಾಯಗಳನ್ನು ಪರಿಚಯಿಸುವ ವಸ್ತು ಸಂಗ್ರಹಾಲಯಗಳು ಬೆಳೆಯಬೇಕಿದೆ ಎಂದು ಅಭಿಪ್ರಾಯಪಟ್ಟರು.
ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಡಾ| ಜಿ.ವಿ. ಕಲ್ಲಾಪುರ ಮಾತನಾಡಿ, ಈ ವರ್ಷದ ಅಂತರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆಯನ್ನು “ವಸ್ತು ಸಂಗ್ರಹಾಲಯಗಳು ವಿಭಜಿತ ಜಗತ್ತನ್ನು ಒಂದುಗೂಡಿಸುತ್ತವೆ”
ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಶ್ರೀನಿಕೇತನ ವಸ್ತು ಸಂಗ್ರಹಾಲಯದಲ್ಲಿ ವಿವಿಧ ದೇಶಗಳ ಕರೆನ್ಸಿಗಳನ್ನು ಸಂಗ್ರಹಿಸಲಾಗಿದ್ದು, ಅವುಗಳಿಂದ ಆಯಾ ದೇಶಗಳ ಇತಿಹಾಸ ಹಾಗೂ ಸಂಸ್ಕೃತಿಯನ್ನುಅರಿಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಶ್ರೀ ಸುಬ್ರಹ್ಮಣ್ಯ ಮಠದ ದಿವಾನ ಸುದರ್ಶನ್ ಜೋಯಿಸ್, ಇತಿಹಾಸ ಸಂಶೋಧಕ ಡಾ| ಕೆ.ಎಸ್.ಎನ್‌. ಉಡುಪ ಹಾಗೂ ನಿವೃತ್ತ ಸಂಸ್ಕೃತ ಉಪನ್ಯಾಸಕ ಡಾ| ವೆಂಕಟೇಶ್‌ ಎಂ.ಗಿರಿ ಉಪಸ್ಥಿತರಿದ್ದರು. ಡಾ| ವೆಂಕಟೇಶ್ ಎಂ. ಗಿರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಕಾಲೇಜುಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಶಿವಮೊಗ್ಗದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವೀರಶೈವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

0

ಶ್ರೀರಾವ್ ಬಹದ್ದೂರು ಧರ್ಮ ಪ್ರವರ್ತ ಗುಬ್ಬಿ ತೋಟದಪ್ಪನವರ ಉಚಿತ ವೀರಶೈವ ವಿದ್ಯಾರ್ಥಿ ನಿಲಯ ಶಿವಮೊಗ್ಗ ನವುಲೆ ಶಾಖೆಯಲ್ಲಿ ನಡೆಸುತ್ತಿರುವ ಉಚಿತ ವಿದ್ಯಾರ್ಥಿನಿಲಯದಲ್ಲಿ ಖಾಲಿಯಿರುವ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ಗಳ ಸ್ಥಾನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಶಿವಮೊಗ್ಗ ನಗರದಲ್ಲಿ ವ್ಯಾಸಂಗ ಮಾಡುತ್ತಿರುವ ವೀರಶೈವ ಸಮಾಜದಲ್ಲಿರುವ ಪ್ರತಿಭಾವಂತ ಹಾಗೂ ಬಡ ವಿದ್ಯಾರ್ಥಿಗಳು ಶಿವಕುಮಾರ್ ಸ್ವಾಮೀಜಿಗಳ ನೌಕರರ ಸಂಘ ವಸತಿ ನಿಲಯ, ಡಾಲರ‍್ಸ್ ಕಾಲೋನಿ ಹಿಂಭಾಗ, ಅರ್.ಆರ್. ವಿಶ್ವವಿದ್ಯಾಲಯದ ಹತ್ತಿರ, ನವುಲೆ, ಶಿವಮೊಗ್ಗ ಇಲ್ಲಿಗೆ ಜೂ. 15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 9916278470/ 9448231968 ಗಳನ್ನು ಸಂಪರ್ಕಿಸುವುದು.