Agumbe Police ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಬಗ್ಗೊಡಿಗೆ ಗ್ರಾಮದ ಕೊರೊಡಿ ಆನಂದ್ ಹೆಚ್.ಎಸ್. ಎಂಬುವವರ ಮಗಳು ಈಶಾನ್ಯ ಎಂಬ 19 ವರ್ಷದ ಯುವತಿ ಶಿವಮೊಗ್ಗದ ವಸುಂಧರ ಹಾಸ್ಟೆಲ್ನಲ್ಲಿದ್ದುಕೊಂಡು ಸ.ಪ್ರ.ದ.ಕಾಲೇಜಿನಲ್ಲಿ 2ನೇ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದು, ಮನೆಯಿಂದ ಕಾಲೇಜ್ಗೆ ಹೋಗುವುದಾಗಿ ನ. 10 ರಂದು ಹೊರಟವಳು ಕಾಣೆಯಾಗಿದ್ದಾಳೆ.
ಈಕೆಯ ಚಹರೆ 5 ಅಡಿ ಎತ್ತರ, ದೃಢವಾದ ಮೈಕಟ್ಟು, ದುಂಡುಮುಖ,ಎಣ್ಣೆ ಕಪ್ಪು ಮೈ ಬಣ್ಣ, ತಲೆಯಲ್ಲಿ ಸುಮಾರು 14 ಇಂಚು ಉದ್ದದ ಕಪ್ಪು ಕೂದಲಿದ್ದು, ಎಡ ತುಟಿಯ ಮೇಲ್ಭಾಗ ರಾಗಿ ಕಾಳು ಗಾತ್ರದ ಕಪ್ಪುಮಚ್ಚೆ ಇರುತ್ತದೆ. ಕನ್ನಡ ಮಾತನಾಡಲು, ಓದಲು ಬರೆಯಲು ತಿಳಿದಿದ್ದು, ಮನೆಯಿಂದ ಹೋಗುವಾಗ ಕೆಂಪು ಬಣ್ಣದ ಚೂಡಿದಾರ್ ಬಿಳಿ ಬಣ್ಣದ ವೇಲ್ ಧರಿಸಿರುತ್ತಾಳೆ ಹಾಗೂ ಒಂದು ಕಪ್ಪು ಬಣ್ಣದ ಸ್ಕೂಲ್ ಬ್ಯಾಗ್ ತೆಗೆದುಕೊಂಡು ಹೋಗಿರುತ್ತಾಳೆ.
Agumbe Police ಈ ಯುವತಿಯ ಪತ್ತೆಯಾದಲ್ಲಿ ಎಸ್.ಪಿ. ಶಿವಮೊಗ್ಗ -08182-261400, ಡಿವೈಎಸ್ಪಿ ತೀರ್ಥಹಳ್ಳಿ 08181 – 220388, ಸಿಪಿಐ ಮಾಳೂರುವೃತ್ತ :- 9480803333/ಪಿಎಸ್ಐ ಆಗುಂಬೆ ರವರಿಗೆ :- 9480803314, ಕಂಟ್ರೋಲ್ ರೂ ಶಿವಮೊಗ್ಗ – 9480803300, ಇವರುಗಳನ್ನು ಸಂಪರ್ಕಿಸಿ ಮಾಹಿತಿಯನ್ನು ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ
Agumbe Police ಕಾಲೇಜು ವಿದ್ಯಾರ್ಥಿನಿ ಈಶಾನ್ಯ ನಾಪತ್ತೆ.ಆಗುಂಬೆ ಪೊಲೀಸ್ ಠಾಣಾ ಪ್ರಕಟಣೆ
CM Siddharamaiah ಶಿವಮೊಗ್ಗದ ಎಸ್.ಕೆ.ಮರಿಯಪ್ಪ ಅವರಿಗೆ “ಸಹಕಾರಿ ರತ್ನ” ಪ್ರಶಸ್ತಿ ಪ್ರದಾನ
CM Siddharamaiah ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯ ಸರ್ಕಾರದಿಂದ ಸಹಕಾರ ಚಳುವಳಿಗೆ ವಿಶೇಷ ಸೇವೆ ಸಲ್ಲಿಸಿರುವ ಶಿವಮೊಗ್ಗ ಸಹಕಾರಿ ಕ್ಷೇತ್ರದ ದುರೀಣ ಎಸ್ ಕೆ ಮರಿಯಪ್ಪ ರವರಿಗೆ ‘ಸಹಕಾರಿ ರತ್ನ’ ಪ್ರಶಸ್ತಿ ನೀಡಿದರು.
CM Siddharamaiah ಮಕ್ಕಳಿಗೆ ಸಹಿಷ್ಣುತೆ, ಸಹಬಾಳ್ವೆ ಅರಿಯಲು ಸಂವಿಧಾನದ ಓದು ಸಹಕಾರಿ- ಮುಖ್ಯಮಂತ್ರಿ ಸಿದ್ಧರಾಮಯ್ಯ
CM Siddharamaiah ಮಕ್ಕಳು ಸಮಾಜವನ್ನು ಜಾತ್ಯತೀತ ದೃಷ್ಠಿಯಿಂದ ಕಾಣಬೇಕು. ಹಾಗಾಗಿಯೇ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಸಂವಿಧಾನ ಓದು ಆರಂಭಿಸಿದ್ದು, ಇದರಿಂದ ಮಕ್ಕಳಿಗೆ ಸಹಿಷ್ಣುತೆ ಹಾಗೂ ಸಹಬಾಳ್ವೆಯನ್ನು ಅರಿಯಲು ಸಂವಿಧಾನ ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಭಾರತ ಪ್ರಪ್ರಥಮ ಪ್ರಧಾನ ಮಂತ್ರಿಗಳಾದ ಪಂಡಿತ್ ಜವಾಹರಲಾಲ್ ನೆಹರು ಜನ್ಮ ದಿನಾಚರಣೆ ಅಂಗವಾಗಿ ಶುಕ್ರವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೊಜಿಸಿದ್ದ ರಾಜ್ಯಮಟ್ಟದ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಮಹಾಸಭೆಯಲ್ಲಿ ಜಿಲ್ಲೆಯ ಹರಮಘಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು.
ಪೋಷಕರು ಮಕ್ಕಳನ್ನು ವೈಜ್ಞಾನಿಕ ಹಾಗೂ ವೈಚಾರಿಕ ನೆಲೆಗಟ್ಟಿನಲ್ಲಿ ಬೆಳೆಸಬೇಕು. ಮಕ್ಕಳು ಮಾತ್ರವಲ್ಲದೆ ಪೋಷಕರು ಕೂಡ ಸಂವಿಧಾನವನ್ನು ಅರಿತುಕೊಂಡು ಮಕ್ಕಳಲ್ಲಿ ಉತ್ತಮ ಭಾವನೆ ಮೂಡಿಸಬೇಕು ಎಂದರು.
ಮಕ್ಕಳು ಮುಂದಿನ ಭಾರತದ ಭವಿಷ್ಯಗಳು. ಹಾಗಾಗಿ ನೀವೆಲ್ಲಾ ಸಮಾಜದಲ್ಲಿನ ಜಾತಿ ಪಟ್ಟಭದ್ರ ಹಿತಾಸಕ್ತರಿಂದ ಎಚ್ಚರಿಕೆಯಾಗಿರಬೇಕು. ಇದರಿಂದ ದೂರ ಉಳಿದು ಸಮಾಜಮುಖಿಯಾಗಿ ಬೆಳೆಯಬೇಕು. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು, ದ್ವೇಷಿಸಬಾರದು. ಯಾವ ಧರ್ಮವೂ ದ್ವೇಷದ ಕುರಿತು ಎಲ್ಲೂ ಹೇಳಿಲ್ಲ ಎಂದು ಕಿವಿ ಮಾತು ಹೇಳಿದರು.
ಬಡತನ ರೇಖೆಯಿಂದ ಕೆಳಗಿನವರು ಸಬಲರಾಗಬೇಕು. ಖಾಸಗಿ ಶಾಲೆಯಲ್ಲಿ ಓದುವವರ ಸರಿಸಮಾನವಾಗಿ ಸರ್ಕಾರಿ ಶಾಲೆ ಮಕ್ಕಳು ಓದಬೇಕು. ಮಕ್ಕಳಲ್ಲಿ ಬಡವ ಶ್ರೀಮಂತನೆಂದು ಯಾವುದೇ ತಾರತಮ್ಯ ಬರಬಾರದು ನಾವೆಲ್ಲ ಸಮಾನರು ಎಂಬ ಭಾವನೆ ಮೂಡಬೇಕು. ಆ ನಿಟ್ಟಿನಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಚೆನ್ನಾಗಿ ಓದಿ ಉನ್ನತ ಮಟ್ಟಕ್ಕೆ ತಲುಪಬೇಕು. ಹಾಗಾಗಿ ಸರ್ಕಾರ ಉಚಿತ ಪುಸ್ತಕ, ಯೂನಿಫಾರ್ಮ್, ಶೂ, ಕಾಂಪಸ್ ನೀಡುವ ಮೂಲಕ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.
ಡಿಡಿಪಿಐ ಮಂಜುನಾಥ್ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಮಕ್ಕಳ ಬೆಳವಣಿಗೆಗೆ ಪೌಷ್ಠಿಕ ಆಹಾರಗಳು ಮುಖ್ಯವಾಗಿದೆ. ಆದರಿಂದ ಸರ್ಕಾರವು ಮಕ್ಕಳ ಆರೋಗ್ಯದ ಹಿತದೃಷ್ಠಿಯಿಂದ ಹಾಲು, ಮೊಟ್ಟೆ, ತರಕಾರಿಯನ್ನು ನೀಡಲಾಗುತ್ತಿದ್ದು, ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
CM Siddharamaiah ಮಕ್ಕಳ ಉಂಟಾಗುವ ರಕ್ತಹೀನತೆ ಹಾಗೂ ಅಪೌಷ್ಟಿಕತೆಯನ್ನು ಹೊಗಲಾಡಿಸುವ ನಿಟ್ಟಿನಲ್ಲಿ ಸರ್ಕಾರ ಈ ಯೋಜನೆಯನ್ನು ಜಾರಿ ಮಾಡಿದೆ. ಹಾಲಿನಲ್ಲಿ 3.4 ಗ್ರಾಂ, ಮೊಟ್ಟೆಯಲ್ಲಿ 13 ಗ್ರಾಂ ಹಾಗೂ ತರಕಾರಿಯಲ್ಲಿ 2.9 ಗ್ರಾಂ ಪ್ರೋಟಿನ್ ಇದ್ದು, ಇದನ್ನು ಸೇವಿಸುವುದರಿಂದ ಮಕ್ಕಳ ರಕ್ತಹೀನತೆ ಕಡಿಮೆಯಾಗುತ್ತದೆ. ಹಾಗೂ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢವಾಗಲಿ ಇದು ಸಹಕಾರಿಯಾಗುತ್ತದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಬಿಇಓ ರಮೇಶ್, ಶಾಲೆಯ ಪ್ರಾಂಶುಪಾಲರಾದ ಗಾಯತ್ರಿ, ಹಳೆಯ ಸಂಘದ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರಕಾಶಪ್ಪ, ಶಾಲೆಯ ಶಿಕ್ಷಕರುಗಳು, ಪೋಷಕರು, ಮಕ್ಕಳು ಹಾಗೂ ಗ್ರಾಮಸ್ಥರು ಹಾಜರಿದ್ದರು.
World Diabetes Day ಮಧುಮೇಹವನ್ನ ಆರಂಭಿಕ ಪತ್ತೆ ಮತ್ತು ನಿಯಮಿತ ಪರೀಕ್ಷೆ ಮೂಲಕ ನಿಯಂತ್ರಿಸಬಹುದು- ಡಾ.ನಾಗರಾಜ ನಾಯ್ಕ್
World Diabetes Day ಮಧುಮೇಹವು ಸಾಂಕ್ರಾಮಿಕವಲ್ಲದ ಅತ್ಯಂತ ಅಪಾಯಕಾರಿ ಕಾಯಿಲೆಯಾಗಿದ್ದು, ಇದನ್ನು ನಿಯಂತ್ರಿಸಿಕೊಳ್ಳುವಲ್ಲಿ ನಿಯಮಿತ ತಪಾಸಣೆ ಮತ್ತು ಕಾಳಜಿಯ ಅಗತ್ಯವಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|| ನಾಗರಾಜನಾಯ್ಕ್ಅವರು ಹೇಳಿದರು.
ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಪಂಚಾಯಿತಿ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯಿತಿಯ ಸಹ್ಯಾದ್ರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಉಚಿತ ಮಧುಮೇಹ ತಪಾಸಣೆ ಮತ್ತು ಸಲಹಾ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ಇನ್ಸುಲಿನ್ ಸಂಶೋಧಕ ಫ್ರೆಡೆರಿಕ್ ಬ್ಯಾಂಟಿಂಗ್ ಅವರ ಜನ್ಮದಿನದ ನೆನಪಿಗಾಗಿ ವಿಶ್ವ ಮಧುಮೇಹ ದಿನಾಚರಣೆ ಆಚರಿಸಲಾಗುತ್ತಿದೆ. ಈ ದಿನ ಸಾರ್ವಜನಿಕರಲ್ಲಿ ಮಧುಮೇಹದ ಬಗ್ಗೆ ಜಾಗೃತಿ ಮೂಡಿಸುವುದು, ಅದರ ಪರಿಣಾಮಗಳನ್ನು ತಿಳಿಸುವುದು ಮತ್ತು ತಡೆಗಟ್ಟುವಿಕೆ ಹಾಗೂ ನಿರ್ವಹಣೆಯ ಕುರಿತು ಮಾಹಿತಿಯನ್ನು ಒದಗಿಸುವುದು ಇದರ ಮುಖ್ಯ ಉದ್ದೇಶಗಳಲ್ಲೊಂದಾಗಿದೆ ಎಂದ ಅವರು, ಮಧುಮೇಹ ಹೊಂದಿರುವ ಅನೇಕ ಜನರಿಗೆ ತಮ್ಮ ಸ್ಥಿತಿಯ ಬಗ್ಗೆ ತಿಳಿದಿರುವುದಿಲ್ಲ, ಇದು ತೀವ್ರ ತೊಡಕುಗಳಿಗೆ ಕಾರಣವಾಗುತ್ತದೆ. ಆರಂಭಿಕ ಪತ್ತೆ ಮತ್ತು ನಿಯಮಿತ ಪರೀಕ್ಷೆಯ ಮೂಲಕ ನಿಯಂತ್ರಿಸಬಹುದಾಗಿದೆ ಎಂದವರು ತಿಳಿಸಿದರು.
ಮಧುಮೇಹ ಹೊಂದಿರುವ 50% ಕ್ಕಿಂತ ಹೆಚ್ಚು ಜನರಿಗೆ ತಮ್ಮ ಆರೋಗ್ಯದ ವಾಸ್ತವ ಸ್ಥಿತಿಯ ಬಗ್ಗೆ ತಿಳಿಯದಾಗಿದೆ. ಕುರುಡುತನ, ಮೂತ್ರಪಿಂಡ ವೈಫಲ್ಯ, ಹೃದಯಾಘಾತ, ಪಾರ್ಶ್ವವಾಯು ಮುಂತಾದ ಕಾಯಿಲೆಗಳಿಗೆ ಕಾರಣವಾಗಬಹುದಾದ ಮಧುಮೇಹಕ್ಕೆ ಜಾಗತಿಕವಾಗಿ ಸುಮಾರು 808 ಮಿಲಿಯನ್ ಜನರು ಬಳಲುತ್ತಿದ್ದಾರೆ ಅಲ್ಲದೆ ಪ್ರತಿ ವರ್ಷ ಎರಡು ಮಿಲಿಯನ್ ಜನರು ಮಧುಮೇಹದಿಂದ ಮರಣ ಹೊಂದುತ್ತಿದ್ದಾರೆ.
ಏಷ್ಯಾದಲ್ಲಿ 30 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ 246 ಮಿಲಿಯನ್ಗಿಂತಲೂ ಹೆಚ್ಚು ವಯಸ್ಕರು ಮಧುಮೇಹದಿಂದ ಬಳಲುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ ಎಂದರು.
ಮಧುಮೇಹವು ಮಾನವ ದೇಹವನ್ನು ಕಡಿಮೆ ಸಮಯದಲ್ಲಿ ಹೆಚ್ಚು ದುರ್ಬಲಗೊಳಿಸುವ ಮತ್ತು ರೋಗಗಳಿಗೆ ಗುರಿಯಾಗಿಸುವ ಸೂಕ್ಷ್ಮ ಕಾಯಿಲೆಗಳಲ್ಲಿ ಒಂದಾಗಿದೆ. ಮಾನವ ದೇಹವನ್ನು ರೋಗಗಳಿಗೆ ಹೇಗೆ ಹೆಚ್ಚು ಒಳಗಾಗುವಂತೆ ಮಾಡುತ್ತದೆ ಅಲ್ಲದೇ ದೀರ್ಘಕಾಲದ ಅಥವಾ ತೀವ್ರವಾದ ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆ ಹೆಚ್ಚು ಎಂದರು. ರಾಜ್ಯದಲ್ಲಿ 12-16% ಜನರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ 15.8% ಜನರು ಮಧುಮೇಹ ಹೊಂದಿರುವ ಬಗ್ಗೆ ಎನ್.ಎಫ್.ಹೆಚ್.ಎಸ್-5ನಿಂದ ವರದಿಯಾಗಿದೆ. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ರಕ್ತ ತಪಾಸಣೆ ನಡೆಸಿದ 4,59,138 ಜನರ ಪೈಕಿ 64980ಜನರಿಗೆ ಮಧುಮೇಹ ಮತ್ತು 114327ಜನರಿಗೆ ರಕ್ತದೊತ್ತಡ ಇರುವುದನ್ನು ಗುರುತಿಸಲಾಗಿದೆ ಎಂದರು.
World Diabetes Day ಈ ಸಂದರ್ಭದಲ್ಲಿ ಡಾ. ಸಂಗೀತಾ, ಡಾ. ಅಫೀಫಾ, ಶಂಕರ್, ಬಸವರಾಜ್ಸೇರಿದಂತೆ ಆರೋಗ್ಯ ಇಲಾಖೆ ಮತ್ತು ಜಿಲ್ಲಾ ಪಂಚಾಯಿತಿಯ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ನೌಕರರು ಹಾಗೂ ಸಾರ್ವಜನಿಕರಿಗೆ ಉಚಿತ ಮಧುಮೇಹ ತಪಾಸಣೆ ನಡೆಸಿ, ವೈದ್ಯಕೀಯ ಸಲಹೆ ನೀಡಲಾಯಿತು.
ರಾಜ್ಯ ಗುತ್ತಿಗೆದಾರರ ಸಂಘಕ್ಕೆ ಶಿವಮೊಗ್ಗದ ಜಿ.ಎಂ.ಜಗದೀಶ್ ನಿರ್ದೇಶಕರಾಗಿ ಆಯ್ಕೆ
ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯ ಗುತ್ತಿಗೆದಾರರ ಸಮಿತಿಗೆ ನಿರ್ದೇಶಕರಾಗಿ ಶಿವಮೊಗ್ಗ ಜಿಲ್ಲೆಯಿಂದ ಜಿ.ಎಂ ಜಗದೀಶ್, ಎನ್ ಮಂಜುನಾಥ್ ಅವಿರೋಧ ಆಯ್ಕೆಯಾಗಿದ್ದಾರೆ.
DVS College of Arts, Science and Commerce ಓದುಗರಿಗೆ ಪುಸ್ತಕ ತಲುಪಿಸುವಲ್ಲಿ ಗ್ರಂಥಾಲಯಗಳದ್ದು ಮುಖ್ಯಪಾತ್ರ- ಪ್ರೊ.ಎಚ್.ಆರ್.ಶಂಕರ ನಾರಾಯಣ ಶಾಸ್ತ್ರಿ
DVS College of Arts, Science and Commerce ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳುವುದರಿಂದ ಸದೃಢ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಎಚ್.ಆರ್.ಶಂಕರನಾರಾಯಣ ಶಾಸ್ತ್ರಿ ಹೇಳಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪುಸ್ತಕಗಳಲ್ಲಿ ಆಯಾ ಕಾಲಘಟ್ಟದ ಘಟನೆಗಳು, ಜನರು ಜೀವನಶೈಲಿ, ಪರಿಸರ ಸೇರಿದಂತೆ ವೈವಿಧ್ಯ ಸಂಗತಿಗಳನ್ನು ಕಾಣಬಹುದಾಗಿದೆ. ಪುಸ್ತಕದ ಅಧ್ಯಯನದ ಮೂಲಕ ಶತಮಾನಗಳಲ್ಲಿ ನಡೆದ ಐತಿಹಾಸಿಕ ಸಂಗತಿಗಳನ್ನು ಹಾಗೂ ಜೀವನಶೈಲಿಯನ್ನು ಅರಿತುಕೊಳ್ಳಬಹುದಾಗಿದೆ. ಓದುಗರಿಗೆ ಪುಸ್ತಕ ತಲುಪಿಸುವಲ್ಲಿ ಗ್ರಂಥಾಲಯಗಳು ಮುಖ್ಯ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಪ್ರತಿ ವರ್ಷ 6000 ಕನ್ನಡ ಪುಸ್ತಕ ಪ್ರಕಟವಾಗುತ್ತದೆ. ಆದರೆ ಹೆಚ್ಚಿನ ಪುಸ್ತಕಗಳು ಓದುಗರಿಗೆ ತಲುಪುವುದಿಲ್ಲ. ವಿದ್ಯಾರ್ಥಿಗಳು ಪುಸ್ತಕ ಹವ್ಯಾಸ ಬೆಳೆಸಿಕೊಳ್ಳಬೇಕು. ಕರ್ನಾಟಕ ಸಂಘದಿಂದ ಪ್ರತಿ ವರ್ಷ 12 ವಿವಿಧ ಪ್ರಕಾರಗಳಲ್ಲಿ ಬಹುಮಾನ ನೀಡಲಾಗುತ್ತಿದೆ. ಲೇಖಕರಿಗೆ ಪ್ರೋತ್ಸಾಹಿಸುವ ಕೆಲಸವನ್ನು ಕರ್ನಾಟಕ ಸಂಘ ಮಾಡುತ್ತಿದೆ ಎಂದರು.
ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ. ಪಿ.ಧರಣಿಕುಮಾರ್ ಮಾತನಾಡಿ, ಖ್ಯಾತ ಗಣಿತಜ್ಞ ಆಗಿದ್ದ ಎಸ್.ಆರ್.ರಂಗನಾಥನ್ ಅವರನ್ನು ಗ್ರಂಥಾಲಯ ಪಿತಾಮಹ ಎನ್ನಲಾಗುತ್ತದೆ. ಗ್ರಂಥಾಲಯ ವಿಜ್ಞಾನಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ವ್ಯವಸ್ಥಿತವಾಗಿ ಪುಸ್ತಕ ಜೋಡಿಸುವ ಮತ್ತು ಓದುಗರಿಗೆ ಪುಸ್ತಕಗಳು ದೊರಕುವಂತೆ ಮಾಡುವ ಕೊಲೋನ್ ವರ್ಗೀಕರಣ ಪದ್ಧತಿ ಪರಿಚಯಿಸುತ್ತಾರೆ ಎಂದು ಹೇಳಿದರು.
DVS College of Arts, Science and Commerce ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ಅಧ್ಯಕ್ಷ ಡಾ. ಎಸ್.ಎಲ್.ಕಾಡದೇವರಮಠ ಮಾತನಾಡಿ, ಇಡೀ ಭಾರತ ದೇಶದ ಎಲ್ಲ ಗ್ರಂಥಾಲಯಗಳಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ನಡೆಸುತ್ತಿದ್ದು, ಶಾಲಾ ಕಾಲೇಜುಗಳಲ್ಲಿ ಅಭಿಯಾನ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸುವುದು ಅತ್ಯಂತ ಅವಶ್ಯಕ ಎಂದು ತಿಳಿಸಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಅಧ್ಯಕ್ಷತೆ ವಹಿಸಿದ್ದರು. ದೇಶೀಯ ವಿದ್ಯಾಶಾಲಾ ಸಮಿತಿಯ ಖಜಾಂಚಿ ಬಿ.ಗೋಪಿನಾಥ್, ಸಹ ಕಾರ್ಯದರ್ಶಿ ಡಾ. ಎಂ.ಸತೀಶ್ಕುಮಾರ್ ಶೆಟ್ಟಿ, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಐಕ್ಯೂಎಸಿ ಪ್ರೊ. ಎನ್.ಕುಮಾರಸ್ವಾಮಿ, ಗ್ರಂಥಪಾಲಕ ಕೆ.ನಿರಂಜನ ಇತರರಿದ್ದರು.
Saalumarada Thimmakka ಸಾಲುಮರದ ತಿಮ್ಮಕ್ಕನವರ ಪರಿಸರ ಸೇವೆ ಅನುಕರಣೀಯ-ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರಶ್ರೀ
Saalumarada Thimmakka ಮರಗಳೇ ನನ್ನ ಮಕ್ಕಳು ಎಂದು ಪ್ರೀತಿಯಿಂದ ನೀರೆರೆದು ಪೋಷಿಸಿದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಶಿವಮೊಗ್ಗ ಬೆಕ್ಕಿನಕಲ್ಮಠದ ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಮಿಗಳವರು ಸಂತಾಪ ಸೂಚಿಸಿದ್ದಾರೆ.
ಪರಿಸರದ ಬಗ್ಗೆ ಅತೀವ ಕಾಳಜಿ ಕಳಕಳಿಯುಳ್ಳ ತಿಮ್ಮಕ್ಕನವರ ಸೇವೆ ಅನುಕರಣೀಯವಾದುದು. ತಾನು ಬೆಳೆಸಿದ ಮರಗಿಡಗಳನ್ನು ಕಂಡು ಸಂತಸಪಟ್ಟರೀತಿ ಅವರ ಶ್ರಮಕ್ಕೊಂದು ಹಿರಿಮೆ ಗರಿಮೆಯನ್ನು ತಂದುಕೊಟ್ಟಿತು. ಈ ಮೂಲಕ ಈ ನಾಡಿಗೆ ಅವರು ಸಲ್ಲಿಸಿದ ಮಹದುಪಕಾರದ ಸೇವೆಗೆ ಶಾಶ್ವತವಾಗಿ ಅವರನ್ನು ನೆನೆಯುವಂತೆ ಮಾಡಿದೆ.
Saalumarada Thimmakka ಶ್ರೀಮಠದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು ಶ್ರೀಮಠದ ಕಂಚಿನ ದೀಪ ರಥೋತ್ಸವದಲ್ಲಿ ಪಾಲ್ಗೊಂಡು ಶ್ರೀಮಠ ಮಹಿಳಾ ಸಾಧಕರಿಗೆ ನೀಡುವ ಕೆಳದಿರಾಣಿ ಚನ್ನಮ್ಮ ಪ್ರಶಸ್ತಿಗೆ ಭಾಜನರಾಗಿದ್ದರು. ಸಂತಸದಿAದ ಪ್ರಶಸ್ತಿ ಸ್ವೀಕರಿಸಿ ತಮ್ಮ ಬದುಕಿನ ಯಶೋಗಾಥೆಯನ್ನು ಸಭಿಕರಿಗೆ ತಿಳಿಸಿದ್ದರು. ಎಲ್ಲರನ್ನೂ ಪ್ರೀತಿಯಿಂದ ಕಾಣುತ್ತಿದ್ದ ಸಾಲುಮರದ ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಅವರ ಕುಟುಂಬಕ್ಕೆ ಅಗಲಿಕೆಯ ದು:ಖ ಭರಿಸುವ ಶಕ್ತಿ ದೊರೆಯಲೆಂದು ಬಸವಾದಿ ಶರಣರಲ್ಲಿ ಪ್ರಾರ್ಥಿಸಿದ್ದಾರೆ.
Rotary East English Medium School ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನ ಕಲಿಸುವುದು ಪೋಷಕರ ಕರ್ತವ್ಯ- ರೋ.ಕೆ.ಬಿ.ರವಿಶಂಕರ್
Rotary East English Medium School ರೋಟರಿ ಪೂರ್ವ ಆಂಗ್ಲ ಮಾದ್ಯಮ ಶಾಲೆಯಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಪಂಡಿತ್ ಜವಹರ್ ಲಾಲ್ ನೆಹರು ಇವರ ಜನ್ಮ ಜಯಂತಿಯ ಪ್ರಯುಕ್ತ ಮಕ್ಕಳ ದಿನಾಚರಣೆ ಮತ್ತು ಕ್ರಿಡಾ ದಿನಾಚರಣೆಯನ್ನು ಮಕ್ಕಳ ಪೋಷಕರೊಂದಿಗೆ ಅತ್ಯಂತ ಸಂಭ್ರಮ ಮತ್ತು ಸಡಗರದಿಂದ ಆಚರಿಸಲಾಯಿತು. ಈ ಸಮಾರಂಭದ ಅದ್ಯಕ್ಷತೆಯನ್ನು ವಹಿಸಿದ್ದ ಮ್ಯಾನೇಜಿಂಗ್ ಟ್ರಸ್ಟಿ ರೊ. ಕೆ ಬಿ ರವಿಶಂಕರ್ ಇವರು ಮಾತನಾಡುತ್ತಾ ಇಂದಿನ ಮಕ್ಕಳೇ ಮುಂದಿನ ಸತ್ಪ್ರಜೆಗಳೆಂದು ಮಕ್ಕಳಿಗೆ ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಕಲಿಸುವುದು ಪೊಷಕರ ಆದ್ಯ ಕರ್ತವ್ಯವೆಂದು ತಿಳಿಸುತ್ತಾ ಮಕ್ಕಳೆಲ್ಲರೂ ಈ ರಾಷ್ಟದ ಅಮೂಲ್ಯ ಆಸ್ತಿಗಳೆಂದು ಈ ಕಾರಣದಿಂದಲೇ ರೋಟರಿ ಆಂಗ್ಲ ಮಾದ್ಯಮ ಶಾಲೆಯಲ್ಲಿ ಗುಣಮಟ್ಟ ಮತ್ತು ಮೌಲ್ಯಯುತ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತದೆಂದು ತಿಳಿಸಿದರು.
ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಟ್ರಸ್ಟಿನ ಕಾರ್ಯದರ್ಶಿ ರೊ. ಎಸ್ ಸಿ ರಾಮಚಂದ್ರ ರವರು ಇಂದಿನ ಬಹುತೇಕ ಮಕ್ಕಳಿಗೆ ತಮ್ಮ ಹಕ್ಕುಗಳ ಬಗ್ಗೆ ಅರಿವಿಲ್ಲವೆಂದು ಮಕ್ಕಳೆಲ್ಲರಿಗೂ ಸಂವಿದಾನದಡಿಯಲ್ಲಿ ರಕ್ಷಣೆ, ಬದುಕುವ, ವಿಕಸನಹೊಂದುವ ಮತ್ತು ಭಾಗವಹಿಸುವ ಹಕ್ಕುಗಳನ್ನು ನೀಡಲಾಗಿದ್ದು, ಈ ಎಲ್ಲಾ ಹಕ್ಕುಗಳ ಬಗ್ಗೆ ಮಕ್ಕಳಲ್ಲದೇ ಮಕ್ಕಳ ಪೊಷಕರಿಗೂ ಅರಿವುಮೂಡಿಸುವುದು ಬಹಳ ಮುಖ್ಯವಾಗಿರುತ್ತದೆಂದು ಈ ನಿಟ್ಟಿನಲ್ಲಿ ಎಲ್ಲಾ ಪೊಷಕರೂ ಕಾರ್ಯ ಪ್ರವೃತ್ತರಾಗಬೇಕೆಂದು ಕರೆನೀಡಿದರು.
Rotary East English Medium School ಇನ್ನೊಬ್ಬ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿಕಟಪೂರ್ವ ಮ್ಯಾನೆಜಿಂಗ್ ಟ್ರಸ್ಟಿ ರೊ. ಎಮ್ ಚಂದ್ರಶೇಖರಯ್ಯ ಇವರು ಮಾತನಾಡುತ್ತಾ ಜಗತ್ತು ಇಂದು ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತನ್ನು ನೀಡಲಾಗುತ್ತದೆಂದು ತಂತ್ರಜ್ಞಾನವಿಲ್ಲದ ಜಗತ್ತನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲವೆಂದು ಈ ಕಾರಣಕ್ಕೆ ತಂತ್ರಜ್ಞಾನದ ಜೊತೆಗೆ ಕೃತಕ ಬುದ್ಧಿಮತ್ತೆಯ ಬಗ್ಗೆ ಮಕ್ಕಳಿಗೆ ಬಾಲ್ಯದಲ್ಲಿಯೇ ಅರಿವನ್ನು ಮೂಡಿಸಬೇಕೆಂದು ಈ ನಿಟ್ಟಿನಲ್ಲಿ ಸೂಕ್ತ ತರಬೇತಿಯ ಕೊರತೆ ಇದ್ದು ಈ ಕೊರತೆಯನ್ನು ನೀಗಿಸಲು ಆಡಳಿತ ಮಂಡಳಿಯು ಮುಂದಿನ ದಿನಗಳಲ್ಲಿ ಕ್ರಮಕೈಗೊಳ್ಳಬೇಕೆಂದು ಸೂಚಿಸಿದರು.
ಸಮಾರಂಭದ ಇರ್ನ್ನೊವ ಮುಖ್ಯ ಅತಿಥಿ ರೊ. ವಿಜಯಕುಮಾರ್ ಇವರು ಮಾತನಾಡುತ್ತಾ ಮಕ್ಕಳೆಲ್ಲರೂ ಬಾಲ್ಯದಲ್ಲಿಯೇ ಶಿಕ್ಷಣದ ಜೊತೆಗೆ ಸೇವಾಮನೊಭಾವನ್ನು ಬೆಳೆಸಿಕೊಳ್ಳಬೇಕೆಂದು ಕರೆನಿಡಿದರು. ರೊಟರಿ ಆಂಗ್ಲ ಮಾದ್ಯಮ ಶಾಲೆಯಲ್ಲಿ ಮಕ್ಕಳಿಗೆ ಸೇವಾಮನೊಭಾವನ್ನು ಬೆಳೆಸಿಕೊಳ್ಳುವಂತಹ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆಯೆಂದು, ಸಮಾರಂಭದಲ್ಲಿ ಹಾಜರಿದ್ದ ಮಕ್ಕಳ ಪೊಷಕರೆಲ್ಲರೂ ಕೊಡ ಈ ವಿಚಾರವನ್ನು ಗಮನದಲ್ಲಿಟ್ಟುಕೊಳ್ಳಬೇಕೆಂದು ಕರೆನೀಡಿದರು, ಸಮಾರಂಭದಲ್ಲಿ ಟ್ರಸ್ಟಿನ ಉಪಾಧ್ಯಕ್ಷರಾದ ರೊ. ನಾಗವೇಣಿ ಎಸ್ ಆರ್ ಮತ್ತು ಖಜಾಂಚಿ ರೊ. ಮಂಜುನಾಥ ಎನ್ ಬಿ, ಪ್ರನ್ಸಿಪಾಲ್ ಸೂರ್ಯನಾರಾಯಣ್ ಇವರು ಉಪಸ್ಥಿತರಿದ್ದು ಸದರಿ ಸಮಾರಂಭದಲ್ಲಿ ಇನ್ನರ್ ವೀಲ್ನ ಅದ್ಯಕ್ಷರಾದ ಶ್ರೀಮತಿ ವೀಣಾಸುರೇಶ್ ಭಾಗವಹಿಸಿರುವುದಲ್ಲದೇ ಮಕ್ಕಳೆಲ್ಲರಿಗೂ ಸಿಹಿಯನ್ನು ವಿತರಿಸಿ ಶುಭಾಶಯವನ್ನು ಕೊರಿದರು.
ಕೊನೆಯಲ್ಲಿ ಕ್ರೀಡೆಯಲ್ಲಿ ಭಾಗವಹಿಸಿ ಗೆದ್ದ ಮಕ್ಕಳೆಲ್ಲರಿಗೂ ಹಾಜರಿದ್ದ ಅತಿಥಿಗಳಿಂದ ಪ್ರಶಸ್ತಿ ಪತ್ರದ ಜೊತೆಗೆ ಬಹುಮಾನವನ್ನು ವಿತರಿಸಲಾಯಿತು. ಸಮಾರಂಭವನ್ನು ಶ್ರೀಮತಿ ರೂಪ ರಾವ್ ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಿದ್ದು, ಶ್ರೀಮತಿ ಸುಷ್ಮಾ ಇವರು ಅತಿಥಿಗಳೆಲ್ಲರನ್ನು ಸ್ವಾಗತಿಸಿದ್ದರು, ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ಕಾವ್ಯ ಇವರು ನಿರ್ವಹಿಸಿದ್ದು ಸಮಾರಂಭದಲ್ಲಿ ಆಂಗ್ಮ ಮಾದ್ಯಮ ಶಾಲೆಯ ಎಲ್ಲಾ ಶಿಕ್ಷಕ/ಶಿಕ್ಷಕಿಯರು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದು, ಶ್ರೀಮತಿ ರೂಪಾ ಎಸ್ ಸಿ ಇವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.
Mathura Paradise ಮಾತೃಭಾಷೆಯಲ್ಲಿ ಭಾವನೆಗಳನ್ನ ಉತ್ತಮವಾಗಿ ವ್ಯಕ್ತಪಡಿಸಬಹುದು- ಡಾ.ಲಕ್ಷ್ಮೀದೇವಿ ಗೋಪಿನಾಥ್
Mathura Paradise ಮನುಷ್ಯ ತನ್ನಲ್ಲಿನ ಮನಸ್ಸಿನ ಭಾವನೆಗಳನ್ನು ಪರಿಣಾಮಕಾರಿಯಾಗಿ ವ್ಯಕ್ತಪಡಿಸಲು ಮಾತೃಭಾಷೆ ಸಹಕಾರಿ ಎಂದು ಮಹಿಳಾ ಉದ್ಯಮಿ ಡಾ. ಲಕ್ಷ್ಮೀದೇವಿ ಗೋಪಿನಾಥ್ ಹೇಳಿದರು.
ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ಎಸ್.ಎಸ್.ಕರೋಕೆ ಗ್ರೂಪ್ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಯಾವುದೇ ಭಾಷೆಗಳಲ್ಲಿ ಪರಿಣತಿ ಹೊಂದಿದ್ದರೂ ಮಾತೃಭಾಷೆಯಲ್ಲಿ ಭಾವನೆಗಳನ್ನು ಉತ್ತಮವಾಗಿ ವ್ಯಕ್ತಪಡಿಸಬಹುದು. ಕನ್ನಡ ಭಾಷೆಯನ್ನು ಉಳಿಸೋಣ, ಬೆಳೆಸೋಣ. ಅನ್ಯ ಭಾಷೆಯನ್ನು ಗೌರವಿಸೋಣ ಎಂದು ತಿಳಿಸಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಸಂಗೀತ ಮನುಷ್ಯನ ಮನಸ್ಸಿಗೆ ನೆಮ್ಮದಿ ತರುವ ದಿವ್ಯ ಔಷಧ. ಇಂತಹ ಕರೋಕೆ ತಂಡಗಳಿಂದ ಹೊಸ ಹೊಸ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಸಿಗುವುದರ ಜತೆ ಅವರ ಪ್ರತಿಭೆ ಅನಾವರಣಗೊಳ್ಳುತ್ತದೆ. ಸಂಗೀತ ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ. ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಕನ್ನಡ ಗೀತೆಗಳ ಸ್ಪರ್ಧೆಯ ಕಾರ್ಯಕ್ರಮ ಹಮ್ಮಿಕೊಂಡಿರುವುದು ಗಾಯಕರ ಭಾಷಾಜ್ಞಾನ ಹಾಗೂ ಧ್ವನಿ ಸಂಸ್ಕಾರ ಆಗುತ್ತದೆ ಮತ್ತು ಅವರಲ್ಲಿ ಕನ್ನಡ ಅಭಿಮಾನ ನೆಲೆಯುತ್ತದೆ ಎಂದು ತಿಳಿಸಿದರು.
Mathura Paradise ಎಸ್ಎಸ್ ಕರೋಕೆ ಗ್ರೂಪ್ ತಂಡದ ಅಧ್ಯಕ್ಷ ಮಥುರಾ ನಾಗರಾಜ್ ಮಾತನಾಡಿ, ಡಾ. ಬಿ.ವಿ.ಲಕ್ಷ್ಮೀದೇವಿ ಗೋಪಿನಾಥ್ ಅವರಿಗೆ ರಾಜ್ಯ ಮಟ್ಟದ ಮಹಿಳಾ ಉದ್ಯಮಿ ಪ್ರಶಸ್ತಿ ಬಂದಿರುವುದು ಹೆಮ್ಮೆಯ ಸಂಗತಿ. ನೂರಾರು ಜನರಿಗೆ ಉದ್ಯೋಗ ಕೌಶಲ್ಯ ಹಾಗೂ ಅನ್ನದಾತರಾಗಿರುವ ಗೋಪಿನಾಥ್ ದಂಪತಿಗೆ ನಾವು ಸದಾ ಚಿರಋಣಿ ಎಂದು ಹೇಳಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಪರಭಾಷೆಯ ವ್ಯಾಮೋಹದಿಂದ ನಮ್ಮ ಕನ್ನಡ ಭಾಷೆಗೆ ಕುತ್ತು ಬರುತ್ತಿದೆ. ಕನ್ನಡ ರಾಜ್ಯೋತ್ಸವ ನವೆಂಬರ್ ತಿಂಗಳಿಗೆ ಮೀಸಲಾಗದೆ ಮನೆಮನಗಳಲ್ಲಿ ನಮ್ಮ ವ್ಯವಹಾರದಲ್ಲಿ ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸುವುದರ ಮುಖಾಂತರ ಸ್ವಾಭಿಮಾನಿಗಳಾಗೋಣ ಎಂದು ತಿಳಿಸಿದರು.
ಎಸ್ಎಸ್ ಕರೋಕೆ ಗ್ರೂಪ್ ತಂಡದ ವತಿಯಿಂದ ಕನ್ನಡ ರಾಜ್ಯೋತ್ಸವದ ವಿಶೇಷ ಗೀತೆಗಳ ಗಾಯನ ಹಾಗೂ ಸ್ಪರ್ಧೆ ನೆರವೇರಿತು. ಯೇಸುದಾಸ್, ಕಲಾವಿದರಾದ ರೂಪಾ, ಕರಿಬಸವ, ಲಿಸ್ಸಿ, ವಿನಯ್, ಯಶಸ್ವಿನಿ, ಪ್ರತಿಭಾ, ಶರತ್, ಶುಭ, ಪ್ರಕಾಶ್, ಎಸ್ ಎಸ್ ಕರೋಕೆ ಗ್ರೂಪ್ ತಂಡದ ಪದಾಧಿಕಾರಿಗಳು, ನಿರ್ದೇಶಕರು, ಸದಸ್ಯರು ಉಪಸ್ಥಿತರಿದ್ದರು.
Children’s Day ಆದರ್ಶಗಳ ಅರಿವನ್ನು ಮಕ್ಕಳಲ್ಲಿ ಪ್ರಾಥಮಿಕ ಹಂತದಿಂದಲೇ ಜಾಗೃತಗೊಳಿಸಬೇಕು- ಡಾ. ಎಚ್.ಬಿ.ಮಂಜುನಾಥ್
Children’s Day ದಾವಣಗೆರೆ : ಆದರ್ಶ ಪ್ರಜೆಗಳಿಂದ ರಾಷ್ಟ್ರದ ಅಭಿವೃದ್ಧಿ ಸಾಧ್ಯವಿದ್ದು ಇಂತಹ ಆದರ್ಶಗಳ ಅರಿವನ್ನು ಭಾವಿ ಪ್ರಜೆಗಳಾದ ಮಕ್ಕಳಲ್ಲಿ ಪ್ರಾಥಮಿಕ ಶಾಲಾ ಹಂತದಿಂದಲೇ ಜಾಗೃತಗೊಳಿಸಬೇಕು ಎಂದು ಹಿರಿಯ ಪತ್ರಕರ್ತ ಡಾ. ಎಚ್ ಬಿ ಮಂಜುನಾಥ ಕರೆ ಕೊಟ್ಟರು.
ಅವರು ದಾವಣಗೆರೆ ನಗರ ಸಮೀಪದ ತೋಳಹುಣಸೆಯ ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ವಸತಿಯುತ ಶಾಲಾ ಸಮೂಹಗಳ ವತಿಯಿಂದ ಏರ್ಪಾಡಾಗಿದ್ದ ಮಕ್ಕಳ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಾ ವಿಶ್ವದಲ್ಲೇ ಮುಂಚಿತವಾಗಿ ಭಾರತವು ಮಕ್ಕಳ ದಿನಾಚರಣೆಯನ್ನು ‘ಪುಷ್ಪ ದಿನಾಚರಣೆ ಎಂಬುದಾಗಿ 1948 ರಿಂದ ಆಚರಿಸಿಕೊಂಡು ಬರುತ್ತಿತ್ತು. ವಿಶ್ವ ರಾಷ್ಟ್ರ ಸಂಸ್ಥೆಯು 1954ರಲ್ಲಿ ನವೆಂಬರ್ 20 ನ್ನು ‘ವಿಶ್ವ ಮಕ್ಕಳ ದಿನಾಚರಣೆ’ ಎಂಬುದಾಗಿ ಘೋಷಿಸಿತು.
ಭಾರತವು ನೆಹರುರವರ ಜನ್ಮದಿನವಾದ ನವೆಂಬರ್ 14 ನ್ನು 1964 ರಿಂದ ರಾಷ್ಟ್ರೀಯ ಮಕ್ಕಳ ದಿನವಾಗಿ ಆಚರಿಸಿಕೊಂಡು ಬರುತ್ತಿದ್ದು ಮಹಾನ್ ವ್ಯಕ್ತಿಗಳ ಬದುಕಿನ ಆದರ್ಶಗಳನ್ನು ಮಕ್ಕಳಿಗೆ ಮನದಟ್ಟು ಮಾಡಲು ಇದು ಅವಕಾಶವಾಗಿದೆ ಎಂದರು.
Children’s Day ಉಪ ಪ್ರಾಂಶುಪಾಲ ಉಮಾಪತಿ ಕೇಶವಪುರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮೂಹ ಸಂಸ್ಥೆಯ ಸಹಸ್ರಾರು ಮಕ್ಕಳು ಭಾಗವಹಿಸಿದ್ದು ಅಧ್ಯಾಪಕ ವರ್ಗದವರೇ ಮಕ್ಕಳಂತೆ ಪೋಷಾಕು ಧರಿಸಿ ಮಕ್ಕಳ ರೀತಿಯಲ್ಲೇ ಅಭಿನಯಿಸುತ್ತಾ ಬ್ಯಾಂಡ್ ಸೆಟ್ ನುಡಿಸಿ ಮಕ್ಕಳಿಗೆ ದಿನಾಚರಣೆಯ ಶುಭಾಶಯ ಕೋರಿದ್ದು ನೆರೆದಿದ್ದ ಮಕ್ಕಳಿಗೆ ವಿಶೇಷ ರಂಜನೆ ನೀಡಿತು.
ಕನ್ನಡ ಅಧ್ಯಾಪಕ ಶಂಕರ್ ನಸ್ವಿ ಸ್ವಾಗತ ಕೋರುತ್ತಾ ಅತಿಥಿಗಳ ಪರಿಚಯ ಮಾಡಿದರು. ಬೋಧಕ ಮತ್ತು ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.
