ಶಿಕ್ಷಣವು ಕೇವಲ ತರಗತಿ ಕೊಠಡಿ ಮತ್ತು ಪಠ್ಯಪುಸ್ತಕಗಳಿಗೆ ಸೀಮಿತವಾಗಿರಬಾರದು. ವಿದ್ಯಾರ್ಥಿಗಳ ಹೃದಯ, ದೇಹ ಮತ್ತು ಮನಸ್ಸಿನ ಸಮಗ್ರ ಬೆಳವಣಿಗೆಗೆ ಪೂರಕವಾಗಿರಬೇಕು ಎಂದು ಡೆಲ್ಲಿ ವರ್ಲ್ಡ್ ಶಾಲೆಯ ಪ್ರಾಂಶುಪಾಲರಾದ ದಿವ್ಯ ಶೆಟ್ಟಿ ಹೇಳಿದರು.
ಅವರು ಶಾಲೆಯಲ್ಲಿ ಸಿಸಿಎ ಬಹುಮಾನ ವಿತರಣಾ ಸಮಾರಂಭದಲ್ಲಿ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಡೆಲ್ಲಿ ವರ್ಲ್ಡ್ ಶಾಲೆಯ ಕ್ರೀಡಾ ವಿಭಾಗದಲ್ಲಿ ಶಾಂತಿ ಹೌಸ್ ಒಟ್ಟಾರೆ ಚಾಂಪಿಯನ್ಷಿಪ್ನ್ನು ಪಡೆದುಕೊಂಡರೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸ್ಪೂರ್ತಿ ಹೌಸ್ ಒಟ್ಟಾರೆ ಚಾಂಪಿಯನ್ಷಿಪ್ನ್ನು ತಮ್ಮದಾಗಿಸಿಕೊಂಡಿತು.
ವಿದ್ಯಾರ್ಥಿಗಳು ವರ್ಷಪೂರ್ತಿ ವಿವಿಧ ಸ್ಪರ್ಧೆಗಳಲ್ಲಿ ಗಳಿಸಿದ ಸಾಧನೆಗಳಿಗೆ ಗೌರವಪೂರ್ವಕವಾಗಿ ಟ್ರೋಫಿಗಳು ಮತ್ತು ಬಹುಮಾನಗಳನ್ನು ನೀಡಿ ಸನ್ಮಾನಿಸಲಾಯಿತು
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿವರ್ಗ ಉಪಸ್ಥಿತರಿದ್ದರು.
ಶಿಕ್ಷಣವು ತರಗತಿ,ಪಠ್ಯಗಳನ್ನು ಮೀರಿ ವಿದ್ಯಾರ್ಥಿಗಳ ದೈಹಿಕ ಮಾನಸಿಕ ಬೆಳವಣಿಗೆಗೆ ಪೂರಕವಾಗಿರಬೇಕು- ದಿವ್ಯಾ ಶೆಟ್ಟಿ.
Style Dance Crew Shivamogga ಶಿವಮೊಗ್ಗ ಮಾರಿಕಾಂಬ ಜಾತ್ರೆ ಹಾಡು. ಚಿತ್ರ ನಿರ್ದೇಶಕ ಜೋಗಿ ಪ್ರೇಮ್ ರಿಂದ ಟ್ರೇಲರ್ ಬಿಡುಗಡೆ
Style Dance Crew Shivamogga ಶಿವಮೊಗ್ಗದ ಸ್ಟೈಲ್ ಡ್ಯಾನ್ಸ್ ಕ್ರಿವ್ ತಂಡದಿಂದ ಬಿಡುಗಡೆಗೆ ತಯಾರಾಗಿರುವ ಕೋಟೆ ಮಾರಿಕಾಂಬ ಜಾತ್ರೆಯ ವಿಶೇಷ ಹಾಡಿನ ಟ್ರೇಲರ್ ಬಿಡುಗಡೆ ಮಾಡಿ ಸಾಂಗ್ ಕೇಳಿದ ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ ಜೋಗಿ ಪ್ರೇಮ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಹೇ ಮಗ ಇದು ಶಿವಮೊಗ್ಗ ಹಾಡಿನ ತಡದಿಂದ ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ಅಮ್ಮನವರ ಜಾತ್ರೆಯ ಪ್ರಯುಕ್ತ ಜಾತ್ರಾ ಇತಿಹಾಸವುಳ್ಳ ವಿಶೇಷ ಮಾಸ್ ಹಾಡು ತಯಾರಾಗಿದ್ದು, ಇದರ ಸಂಪೂರ್ಣ ಹಾಡು ಫೆ.17ರ ಮಂಗಳವಾರ ಸಂಜೆ ಬಿಡುಗಡೆಯಾಗಲಿದೆ ಎಂದು ಸ್ಟೈಲ್ ಡ್ಯಾನ್ಸ್ ಕ್ರಿವ್ ತಂಡದ ಶಶಿಕುಮಾರ್ ಎನ್ ಅವರು ಲ್ಲಿ ತಿಳಿಸಿದ್ದಾರೆ.
Style Dance Crew Shivamogga ಈ ಹಾಡಿಗೆ ಸಂಗೀತ ಪ್ರೀನ್ಸ್ ಜೋಸೆಫ್ , ಸಾಹಿತ್ಯ ಗಾಯನ ಶಶಿಕುಮಾರ್ ಎನ್ , ಛಾಯಾಗ್ರಹಣ ಡ್ರೊನ್ ಗಣೇಶ್ , ಸಂಕಲನ ಪಿಕ್ಚರ್ ಪೋಯೆಟ್ ಸುನಿಲ್, ನಿರ್ಮಾಣದ ಕೆಲಸವನ್ನ ಶಿವಮೊಗ್ಗದ ಪ್ರತಿಷ್ಟಿತ ನೃತ್ಯ ಸಂಸ್ಥೆ ಸ್ಟೈಲ್ ಡಾನ್ಸ್ ಕ್ರಿವ್ ನಿರ್ವಹಿಸಿದೆ. ಈ ಹಾಡನ್ನು ಸ್ಟೈಲ್ ಡಾನ್ಸ್ ಕ್ರಿವ್ ಯೂಟ್ಯೂಬಿನಲ್ಲಿ ಸಾರ್ವಜನಿಕರು ವಿಕ್ಷಿಸಬಹುದಾಗಿದೆ.
ಮಾಚೇನಹಳ್ಳಿಯಿಂದ ವ್ಯಕ್ತಿ ನಾಪತ್ತೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಪ್ರಕಟಣೆ
ಶಿವಮೊಗ್ಗ ತಾಲೂಕು ಮಾಚೇನಹಳ್ಳಿ ಡೈರಿ ಹತ್ತಿರುವಿರುವ ಶ್ರೀ ಮಹಾಲಕ್ಷ್ಮೀ ಬಾರ್ & ರೆಸ್ಟೋರೆಂಟ್ನಲ್ಲಿ ಕ್ಯಾಶಿಯರ್ ಆಗಿದ್ದ ಲಕ್ಷ್ಮೀಶ್ ಎಂಬ 30 ವರ್ಷದ ವ್ಯಕ್ತಿ ಫೆ. 05 ರಂದು ಕಾಣೆಯಾಗಿದ್ದು, ಈತನ ಚಹರೆ 5.6 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕುತ್ತಿಗೆಯಲ್ಲಿ L ಮತ್ತು ಬಲಗೈಯಲ್ಲಿ ಹಾರ್ಟ್ ಗುರುತಿನ ಟ್ಯಾಟು ಇರುತ್ತದೆ. ಈತ ಕಾಣೆಯಾದ ದಿನ ಬಾದಮಿ ಮತ್ತು ಬಿಳಿ ಬಣ್ಣದ ಶರ್ಟ್, ನೀಲಿಬಣ್ಣದ ಜೀನ್ಸ್ ಪ್ಯಾಂಟ್ ಮತ್ತು ಕಪ್ಪು ಬಣ್ಣದ ಜರ್ಕಿನ್ ಧರಿಸಿರುತ್ತಾನೆ
ಈ ವ್ಯಕ್ತಿ ಕಂಡು ಬಂದಲ್ಲಿ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿ – 08182-261400/261418/ 9480803332/ 9480803350 ಗಳನ್ನು ಮತ್ತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
Mahashivratri ಮಹಾ ಶಿವರಾತ್ರಿ ಪ್ರಯುಕ್ತ ಶಿವಮೊಗ್ಗದ ಶಿವಾಲಯದಲ್ಲಿ”ಕಾಶಿ ವಿಶ್ವನಾಥ ದರ್ಶನ”
Mahashivratri ಮಹಾಶಿವರಾತ್ರಿ ಪ್ರಯುಕ್ತ ನಗರದ ಸವಳಂಗ ರಸ್ತೆಯಲ್ಲಿರುವ ನೇಮೋಜಿರಾವ್ ಬಡಾವಣೆಯ ಶಿವಾಲಯದಲ್ಲಿ ಫೆಬ್ರವರಿ 15ರಂದು ಸಂಜೆ 5ರಿಂದ ರಾತ್ರಿ 10ರವರೆಗೆ ಕಾಶಿ ವಿಶ್ವನಾಥ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಕಾರ್ಯಕ್ರಮ ಆಯೋಜಿಸಿದ್ದು, ಪ್ರದಕ್ಷಿಣೆ ಲಿಂಗು ದರ್ಶನ, ಸಹಸ್ರಲಿಂಗ ದರ್ಶನ, ಸ್ವಪರಿವರ್ತನೆ ಮಂಟಪ, ಆಧ್ಯಾತ್ಮ ಚಿತ್ರ ಪ್ರದರ್ಶನದಿಂದ ಮೌಲ್ಯ ಜಾಗೃತಿ, ಕಮಲೋದ್ಭವ ಲಿಂಗು ದರ್ಶನವು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದೆ.
ಸಂಜೆ 6ರಿಂದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಎಸ್.ಎನ್.ಚನ್ನಬಸಪ್ಪ ಉದ್ಘಾಟಿಸುವರು. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾಜಯೋಗ ಶಿಕ್ಷಕಿ ಬ್ರಹ್ಮಕುಮಾರಿ ಸ್ವಾತಿ ಮಹಾಶಿವರಾತ್ರಿ ಸಂದೇಶ ನೀಡುವರು.
Mahashivratri ಸಂಜೆ 7ರಿಂದ ಗೌರವಾರ್ಪಣಾ ಮಹೋತ್ಸವ ನಡೆಯಲಿದ್ದು, ರಾತ್ರಿ 8ರಿಂದ ಸಾಂಸ್ಕೃತಿಕ ಮಹೋತ್ಸವ ನಡೆಯಲಿದೆ. ಶ್ರೀ ಗೌರಿ ಕಲಾಕೇಂದ್ರದ ತಂಡದಿAದ ಶಿವನ ನೃತ್ಯ ಕಾರ್ಯಕ್ರಮ ಇರಲಿದೆ. ಅಂಚೆ ಇಲಾಖೆಯ ಪೋಸ್ಟ್ ಮ್ಯಾನ್ ಮತ್ತು ಎಂಟಿಎಸ್ ವರ್ಗದವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸೊರಬ ತಾ.ಉದ್ರಿವಡ್ಡಿಗೇರಿ ಯಿಂದ ಯುವತಿ ನಾಪತ್ತೆ. ಸಾಗರ ಗ್ರಾಮಾಂತರ ಪೊಲೀಸ್ ಮಾಹಿತಿ
ಸೊರಬ ತಾಲೂಕು ಉದ್ರಿ ವಡ್ಡಿಗೇರಿ ವಾಸಿ ಹನುಮಂತರಪ್ಪ ಎಂಬುವವರ ಮಗಳು 17 ವರ್ಷದ ಶಶಿಕಲಾ ಎಂಬ ಯುವತಿ ಫೆ 01 ರಂದು ಗೇಟ್ ಹತ್ತಿರ ಹೋಗಿ ಬರುತ್ತೇನೆಂದು ಹೋದವಳು ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈಕೆಯ ಚಹರೆ 4.8 ಅಡಿ ಎತ್ತರ, ದುಂಡುಮುಖ, ಕಪ್ಪು ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮನೆಯಿಂದ ಹೋಗುವಾಗ ಕಪ್ಪು ಬಣ್ಣದ ಚೂಡಿದಾರ್ ಧರಿಸಿರುತ್ತಾಳೆ.
ಈ ಯುವತಿಯು ಕಂಡು ಬಂದಲ್ಲಿ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿ – 08182-261400 ಸಾಗರ ಗ್ರಾಮಾಂತರ ಠಾಣೆ. ಎ.ಎಸ್.ಪಿ. ಸಾಗರ ಉಪವಿಭಾಗ -08183-226082, ಪಿ.ಐ ಸಾಗರ ಗ್ರಾಮಾಂತರ ಠಾಣೆ- 9480803361, ಪಿ.ಎಸ್.ಐ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ- 9480803385 ಇವರುಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
Information and Public Relations Department ಶಿವಮೊಗ್ಗ ಜಿಲ್ಲೆ ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್. ಅರ್ಹರಿಂದ ಅರ್ಜಿಗಳ ಆಹ್ವಾನ
Information and Public Relations Department ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ (https://sevasindhu.karnataka.gov.in) ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.
ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ.
ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ “ಸೇವಾಸಿಂಧು” ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದರ ಮೂಲಕ ಈ ಸದುಪಯೋಗ ಪಡೆದುಕೊಳ್ಳಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪಅವರು ನೇತೃತ್ವದಲ್ಲಿ ಪರಿಶೀಲನೆ
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸರ್ಕಾರಿ ಖರಾಬು ಕಟ್ಟೆ, ಕೆರೆ ಹಾಗೂ ಸರ್ಕಾರಿ ಜಮೀನುಗಳಲ್ಲಿನ 6 ಘೋಷಿತ ಕೊಳಚೆ ಪ್ರದೇಶಗಳಿಗೆ ಸಂಬಂಧಿಸಿದಂತೆ, ದಿನಾಂಕ ಮಾನ್ಯ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ವಿಧಾನಸಭೆಯ ನಿಯಮ 73ರ ಅಡಿಯಲ್ಲಿ ಸರ್ಕಾರದ ಗಮನ ಸೆಳೆದ ಪರಿಣಾಮವಾಗಿ, ಮಾನ್ಯ ಸಭಾಧ್ಯಕ್ಷರೊಂದಿಗೆ ವಿಸ್ತೃತ ಚರ್ಚೆ ನಡೆಸಿದ್ದರು.
ಈ ಚರ್ಚೆಯ ಮುಂದುವರಿದ ಕ್ರಮವಾಗಿ, ಸದರಿ ಕೊಳಚೆ ಪ್ರದೇಶಗಳ ವಸ್ತುಸ್ಥಿತಿಯನ್ನು ನೇರವಾಗಿ ಅರಿಯಲು ಹಾಗೂ ಮುಂದಿನ ಅಗತ್ಯ ಕ್ರಮಗಳ ಕುರಿತು ತೀರ್ಮಾನ ಕೈಗೊಳ್ಳುವ ಉದ್ದೇಶದಿಂದ, ಜಿಲ್ಲಾಡಳಿತ ಹಾಗೂ ಬೆಂಗಳೂರಿನ ಕೊಳಚೆ ನಿರ್ಮೂಲನಾ ಮಂಡಳಿಯ ಅಧಿಕಾರಿಗಳನ್ನೊಳಗೊಂಡ ಶ್ರೀಮತಿ ಜಯ ಅವರ ತಂಡವು ಇಂದು ಶಿವಮೊಗ್ಗ ನಗರಕ್ಕೆ ಆಗಮಿಸಿ ಜಂಟಿ ಸ್ಥಳ ಪರಿಶೀಲನೆ ನಡೆಸಿತು.
S.N.Chennabasappa ಕೊಳಚೆ ಪ್ರದೇಶದ ವಸ್ತುಸ್ಥಿತಿ ಬಗ್ಗೆ ಉನ್ನತ ಅಧಿಕಾರಿಗಳಿಂದ ಜಂಟಿ ಸ್ಥಳ ಪರಿಶೀಲನೆ- ಶಾಸಕ ಚೆನ್ನಿ
S.N.Chennabasappa ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸರ್ಕಾರಿ ಖಾರಾಬು ಕಟ್ಟೆ, ಕೆರೆ ಹಾಗೂ ಸರ್ಕಾರಿ ಜಮೀನುಗಳಲ್ಲಿನ 6 ಘೋಷಿತ ಕೊಳಚೆ ಪ್ರದೇಶಗಳಿಗೆ ಸಂಬಂಧಿಸಿದಂತೆ, ದಿನಾಂಕ 03.02.2026 ರಂದು ವಿಧಾನಸಭೆಯ ನಿಯಮ 73ರ ಅಡಿಯಲ್ಲಿ ಸರ್ಕಾರದ ಗಮನ ಸೆಳೆದ ಪರಿಣಾಮವಾಗಿ, ಮಾನ್ಯ ಸಭಾಧ್ಯಕ್ಷರೊಂದಿಗೆ ವಿಸ್ತೃತ ಚರ್ಚೆ ನಡೆಸಲಾಗಿತ್ತು.
ಈ ಚರ್ಚೆಯ ಮುಂದುವರಿದ ಕ್ರಮವಾಗಿ, ಸದರಿ ಕೊಳಚೆ ಪ್ರದೇಶಗಳ ವಸ್ತುಸ್ಥಿತಿಯನ್ನು ನೇರವಾಗಿ ಅರಿಯಲು ಹಾಗೂ ಮುಂದಿನ ಅಗತ್ಯ ಕ್ರಮಗಳ ಕುರಿತು ತೀರ್ಮಾನ ಕೈಗೊಳ್ಳುವ ಉದ್ದೇಶದಿಂದ, ಜಿಲ್ಲಾಡಳಿತ ಹಾಗೂ ಬೆಂಗಳೂರಿನ ಕೊಳಚೆ ನಿರ್ಮೂಲನಾ ಮಂಡಳಿಯ ಅಧಿಕಾರಿಗಳನ್ನೊಳಗೊಂಡ ಶ್ರೀಮತಿ ಜಯ ಅವರ ತಂಡವು ಇಂದು ಶಿವಮೊಗ್ಗ ನಗರಕ್ಕೆ ಆಗಮಿಸಿ ಜಂಟಿ ಸ್ಥಳ ಪರಿಶೀಲನೆ ನಡೆಸಿತು.
ಈ ಸಂದರ್ಭದಲ್ಲಿ ಕೊಳಚೆ ಪ್ರದೇಶಗಳ ಭೌತಿಕ ಸ್ಥಿತಿ, ನಿವಾಸಿಗಳ ಸಮಸ್ಯೆಗಳು, ಕಾನೂನು ಹಾಗೂ ತಾಂತ್ರಿಕ ಅಂಶಗಳು, ಜೊತೆಗೆ ಮೂಲಭೂತ ಸೌಕರ್ಯಗಳ ಅಗತ್ಯತೆಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.
ಈ ಜಂಟಿ ಪರಿಶೀಲನೆ ಕೊಳಚೆ ಪ್ರದೇಶಗಳ ನಿವಾಸಿಗಳ ಹಕ್ಕುಗಳ ರಕ್ಷಣೆಯ ಜೊತೆಗೆ, ಶಾಶ್ವತ ಪುನರ್ವಸತಿ, ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ನಗರ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಮುಂದಿನ ಸ್ಪಷ್ಟ ಮತ್ತು ಪರಿಣಾಮಕಾರಿ ಕ್ರಮಗಳಿಗೆ ದಿಕ್ಕು ನೀಡುವ ಮಹತ್ವದ ಹೆಜ್ಜೆಯಾಗಿದ್ದು, ಸಂಬಂಧಪಟ್ಟ ಇಲಾಖೆಗಳ ಸಹಕಾರದೊಂದಿಗೆ ಶೀಘ್ರವೇ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂಬ ವಿಶ್ವಾಸವನ್ನು ವ್ಯಕ್ತಪಡಿಸಲಾಗಿದೆ.
S.N.Chennabasappa ಈ ಸಂದರ್ಭದಲ್ಲಿ ತಸಿಲ್ದಾರಾದ ಶ್ರೀ ರಾಜೀವ್, ಸ್ಲಂ ಬೋರ್ಡ್ ನ ಅಧಿಕಾರಿಗಳಾದ ಶ್ರೀ ಪ್ರಸನ್ನ, ಶ್ರೀ ಮಂಜಪ್ಪ, ಪಾಲಿಕೆಯ ಕಂದಾಯ ಅಧಿಕಾರಿಗಳಾದ ಶ್ರೀ ಪೂಜಾರ್, ಶ್ರೀ ನಾಗೇಂದ್ರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ನಾಗರಾಜ್, ಬಿಜೆಪಿ ನಗರ ಅಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ನಗರ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ದೀನ್ ದಯಾಳ್ ಸೇರಿದಂತೆ ಬಿಜೆಪಿಯ ಪ್ರಮುಖರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.
ಶ್ರದ್ಧೆ ,ನಿಷ್ಠೆ ಮತ್ತು ಪ್ರಾಮಾಣಿಕತೆ ಇರುವ ಕಾಯಕದಿಂದ ಬಡತನವೇ ಇರದು- ಸಿ.ಎಸ್.ಚಂದ್ರಭೂಪಾಲ
ಶ್ರದ್ದೆ, ನಿಷ್ಟೆ ಮತ್ತು ಪ್ರಾಮಾಣಿಕತೆಯಿಂದ ಕಾಯಕದಲ್ಲಿ ತೊಡಗಿದಾಗ ಬಡತನವೇ ಇರುವುದಿಲ್ಲ ಎಂದು ಕಾಯಕ ಶರಣರು ತಮ್ಮ ನಡೆ ಮತ್ತು ನುಡಿಯ ಮೂಲಕ ಸಾರಿದ್ದಾರೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಕಾಯಕ ಶರಣರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಅಸಮಾನತೆ, ತಾರತಮ್ಯ ಮತ್ತು ಕೆಟ್ಟ ಸಂಪ್ರದಾಯಗಳನ್ನು ಹೋಗಲಾಡಿಸಲು ಅವರೆಲ್ಲ ಹೋರಾಡಿದ್ದಾರೆ. ಪ್ರತಿಯೊಬ್ಬರೂ ಕಾಯಕದಲ್ಲಿ ತೊಡಗಬೇಕು. ಆಗ ಸಮಾಜದಲ್ಲಿ ಬಡತನವೆಂಬುದು ಇರುವುದಿಲ್ಲ ಎಂದು ತಿಳಿಸಿದ್ದಾರೆ.
ಪ್ರತಿಯೊಬ್ಬ ಶರಣರು ಸಮಾಜದ ಅಭಿವೃದ್ದಿಗಾಗಿ ಮತ್ತು ಏಳ್ಗೆಯ ದಿಶೆಯಲ್ಲಿ ಶ್ರಮಿಸಿದ್ದು ವಚನಗಳ ಮೂಲಕ ಅಪಾರ ಕೊಡುಗೆ ನೀಡಿದ್ದಾರೆ. 12 ನೇ ಶತಮಾನದಿಂದ ನಡೆದು ಬಂದ ಶರಣರ ಕಾಯಕ ಸಂಸ್ಕೃತಿಯನ್ನು ನಾವೆಲ್ಲ ಮುಂದುವರೆಸಿಕೊAಡು ಹೋಗೋಣ ಎಂದರು.
ದಾರ್ಶನಿಕರು, ಶರಣರು ಮತ್ತು ಮಹಾನ್ ವ್ಯಕ್ತಿಗಳ ತತ್ವಗಳು, ವಿಚಾರಗಳು ಮತ್ತು ಜೀವನ ಚರಿತ್ರೆ ತಿಳಿಸುವಂತಹ ಕಾರ್ಯಕ್ರಮಗಳನ್ನು ಶಾಲಾ-ಕಾಲೇಜುಗಳಲ್ಲಿ ನಡೆಸಬೇಕು. ಆಗ ಮಕ್ಕಳು ಮತ್ತು ವಿದ್ಯಾರ್ಥಿಗಳು ಈ ಬಗ್ಗೆ ತಿಳಿದು ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯವಾಗುತ್ತದೆ ಎಂದರು.
ಶAಕರಘಟ್ಟದ ಸಾಹಿತಿಗಳಾದ ಡಾ.ಬಸವರಾಜ್ ನೆಲ್ಲಿಸರ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಶರಣರು ಆಡಿದ ಮಾತುಗಳು, ನೀಡಿದ ವಚನಗಳು ಜೀವನ್ಮುಖಿಯಾಗಿವೆ. ಸಿನೆಮಾ, ಸೀರಿಯಲ್, ಮೊಬೈಲ್U ನೋಡುವುದನ್ನು ಬಿಟ್ಟು ಶರಣರ ವಚನ ಸಾಹಿತ್ಯವನ್ನು ಓದಿ ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನಿಜವಾದ ಕಲ್ಯಾಣ ಆಗುತ್ತದೆ.
ಬಸವಣ್ಣನವರು ಸೇರಿದಂತೆ ಎಲ್ಲ ಶರಣರು, ಎಲ್ಲ ಜಾತಿ, ಧರ್ಮಗಳು ಒಂದೇ ಎಂದು ಸಾರಿ ಸಮಾಜದಲ್ಲಿ ತಾಂಡವವಾಡುತ್ತಿದ್ದ ಅನಿಷ್ಟ ಪದ್ದತಿಗಳಿಗೆ ಚಾಟಿ ಬೀಸಿ, ಹೆಣ್ಣಿಗೆ ಗೌರವ ಮತ್ತು ಸಮಾನತೆ ನೀಡಬೇಕು, ಅಸ್ಪೃಶ್ಯತೆ ಹೋಗಬೇಕು ಎಂದು ಹೋರಾಡಿದ್ದರು.
ಕಾಯಕಕ್ಕೆ ಮತ್ತೊಂದು ಹೆಸರಾದ ಶರಣರಾದ ಮಾದಾರ ಚನ್ನಯ್ಯನವರು ಬಸವಣ್ಣನವರಿಗಿಂತ ಹಿರಿಯರಾಗಿದ್ದು ಕುದುರೆ ಕಾಯುವ ಕಾಯಕದಲ್ಲಿ ತೊಡಗಿ, ಬರುವ ಶರಣರಿಗೆ ಅಂಬಲಿ ಪ್ರಸಾದ ನೀಡುತ್ತ ಶಿವನನ್ನೇ ಒಲಿಸಿಕೊಂಡಿದ್ದರು, ಮಾದಾರ ದೂಳಯ್ಯ ತಮ್ಮ ಕಾಯಕದೊಂದಿಗೆ ಹಲವಾರು ವಚನ ರಚಿಸಿದ್ದಾರೆ. ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಮತ್ತು ಉರಿಲಿಂಗ ಪೆದ್ದಿಯವರು ಸಹ ಕಾಯಕ ನಿಷ್ಟೆಗೆ ಹೆಸರಾಗಿದ್ದು, ಸಮಾಜದಲ್ಲಿನ ಅನಿಷ್ಟ ಪದ್ದತಿ ನಿವಾರಣೆಗೆ ತಮ್ಮ ಕೊಡುಗೆ ನೀಡಿದ್ದಾರೆ.
ಶಾಲೆ, ಕಾಲೇಜುಗಳಲ್ಲಿ ಕಡ್ಡಾಯವಾಗಿ ಹಾಡು, ನೃತ್ಯ, ಮತ್ತು ಉಪನ್ಯಾಸಗಳ ಮೂಲಕ ಕಾಯಕ ಶರಣರ, ದಾರ್ಶನಿಕರ ಬಗ್ಗೆ ತಿಳಿಸಿ ಹೇಳುವ ಕೆಲಸ ಆಗಬೇಕು. ಆಗ ಮಾತ್ರ ಮುಂದಿನ ಪೀಳಿಗೆಗೆ ಶರಣರ ವಚನಗಳು, ತತ್ವಗಳನ್ನು ತಲುಪಿಸಲು ಸಾಧ್ಯವಾಗುತ್ತದೆ ಎಂದರು.
ಜಿಲ್ಲಾಡಳಿತ ಕಚೇರಿಯ ತಹಶೀಲ್ದಾರ್ ಪ್ರದೀಪ್ ಆರ್ ಮಾತನಾಡಿ, ವಚನಕಾರರು ಯಾವುದೇ ಒಂದು ಸಮುದಾಯಕ್ಕೆ ಸೇರಿದವರಲ್ಲ. ಜಾತಿ ಮತ್ತು ಧರ್ಮಗಳನ್ನು ಮೀರಿದವರು. 12ನೇ ಶತಮಾನದ ವಚನ ಸಾಹಿತ್ಯ ಸಮುದ್ರವಿದ್ದಂತೆ. ಪರ್ವತದಷ್ಟು ಎತ್ತರವಾದ ವಿಚಾರಗಳಿವೆ. ದಾರ್ಶನಿಕರ ಆಶಯಗಳು, ತತ್ವಗಳು, ವಿಚಾರಗಳು ಮುಂದಿನ ಪೀಳಿಗೆಗೆ ತಲುಪಬೇಕು. ಈ ನಿಟ್ಟಿನಲ್ಲಿ ನಾವೆಲ್ಲ ಶ್ರಮಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್ ಹಾಜರಿದ್ದರು.
