Thursday, February 12, 2026
Thursday, February 12, 2026
Home Blog Page 95

State Human Rights Commissions ನವೆಂಬರ್ 19. ಶಿವಮೊಗ್ಗ ಜಿಲ್ಲೆಯಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು,ಸದಸ್ಯರುಗಳ ಪ್ರವಾಸ

0

State Human Rights Commissions ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರುಗಳು ನ.19 ರಂದು ಶಿವಮೊಗ್ಗ ಜಿಲ್ಲೆಯ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ.

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರುಗಳು ನ.19 ರಂದು ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆವರೆಗೆ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಾನವ ಹಕ್ಕು ಆಯೋಗಕ್ಕೆ ಸಂಬAಧಿಸಿ ಪ್ರಕರಣಗಳ ವಿಲೇವಾರಿ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಮತ್ತು ದೂರುಗಳ ವಿಚಾರಣೆ ಮಾಡಲಿದ್ದಾರೆ.

State Human Rights Commissions ಅಂದು ಸಂಜೆ 5.00 ರಿಂದ 6.00 ಗಂಟೆವರೆಗೆ ಜಿ.ಪಂ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಪ್ರತಿಕಾಗೋಷ್ಠಿಯನ್ನು ಏರ್ಪಡಿಸಲಾಗಿದೆ.

Yuvanidhi Scheme ಯುವನಿಧಿ ಫಲಾನುಭವಿಗಳು ಪ್ರತೀತಿಂಗಳು ಕಡ್ಡಾಯವಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಸ್ವಯಂ ಘೋಷಣೆ ಮಾಡಬೇಕು.ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆ

0

Yuvanidhi Scheme ಯುವನಿಧಿ ಯೋಜನೆಯಡಿ ಪದವಿ/ ಸ್ನಾತಕೋತ್ತರ ಪದವಿ/ ಡಿಪ್ಲೋಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹರು ಯೋಜನೆ ಮೂಲಕ ಪ್ರತಿ ಮಾಹೆ ರೂ. 3000/- ಮತ್ತು ಡಿಪ್ಲೋಮಾ ಪದವೀದರರಿಗೆ ರೂ. 1500/- ಗಳನ್ನು ಖಾತೆಗೆ ನೇರ ನಗದು ಮೂಲಕ ಪಡೆಯುತ್ತಿದ್ದು, ಜಿಲ್ಲೆಯ ಫಲಾನುಭವಿಗಲು ತ್ರೈಮಾಸಿಕ ಬದಲಾಗಿ ಇನ್ನು ಮುಂದೆ ಪ್ರತಿ ತಿಂಗಳು 25 ರೊಳಗೆ ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು.

Yuvanidhi Scheme ಇಲ್ಲದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮೆಯಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದೂ.ಸಂ.: 9901914601 ಇವರುಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

Shri Shivakumar Swamiji ವಿದ್ಯಾರ್ಥಿ ನಿಲಯಗಳಿಗೆ ದಾನಿಗಳ ಉದಾರ ನೆರವು, ಸ್ಮರಣೆ ಶ್ಲಾಘನೀಯ – ಸಿ.ಎಸ್.ಷಡಾಕ್ಷರಿ

0

Shri Shivakumar Swamiji ಶಿವಮೊಗ್ಗ ನಗರದ ನವಲೆ, ಡಾಲರ್ಸ್ ಕಾಲೋನಿಯ ಹಿಂಭಾಗ ಶ್ರೀ ಶಿವಕುಮಾರ ಸ್ವಾಮೀಜಿ ನೌಕರರ ಸಂಘ ಶ್ರೀ ಬಿ.ಎಸ್. ಯಡಿಯೂರಪ್ಪ ಉಚಿತ ವಿದ್ಯಾರ್ಥಿ ನಿಲಯ ಇಲ್ಲಿ ಕಾರ್ತಿಕ ಚಿಂತನ ಕಾರ್ಯಕ್ರಮ ಶ್ರೀಮನ್ ನಿರಂಜನ ಪ್ರಣವ ಸ್ವರೂಪಿ ಶ್ರೀ ಶ್ರೀ ಬಸವ ಮರುಳಸಿದ್ದ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಏರ್ಪಡಿಸಲಾಗಿತ್ತು.

ಕುಮಾರಿ ತನ್ಮಯ್ ಅವರ ವಚನ ಗೀತೆಯ ಪ್ರಾರ್ಥನೆ ಮಾಡಿದರು, ಶ್ರೀ ಕೆ. ಶರಣಪ್ಪ ಸಭೆಗೆ ಸರ್ವರನ್ನು ಸ್ವಾಗತಿಸಿದರು.

ಪ್ರಾಸ್ತಾವಿಕವಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷರು ಹಾಗೂ ಶಿವಕುಮಾರ ಸ್ವಾಮೀಜಿ ನೌಕರ ಸಂಘದ ಅಧ್ಯಕ್ಷರು ಆಗಿರುವ ಶ್ರೀ ಸಿ ಎಸ್ ಷರಾಕ್ಷರಿ ಅವರು ವಿದ್ಯಾರ್ಥಿ ನಿಲಯ ನಡೆದು ಬಂದ ದಾರಿ ಸಮಾಜ ಬಾಂಧವರು ನೀಡಿದ ಉದಾರ ಧಾನ ಮತ್ತು ಕಡು ಬಡವರ ಮಕ್ಕಳ ವಿದ್ಯಾಭ್ಯಾಸಕ್ಕೆ ದಾನಿಗಳ ನೆರವನ್ನ ನೆನಪಿಸಿಕೊಂಡರು.

ಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷರಾದ ಶ್ರೀ ಜ್ಯೋತಿಪ್ರಕಾಶ್ ಕಾರ್ಯದರ್ಶಿಗಳಾದ ಶ್ರೀ ಎಸ್.ಪಿ ದಿನೇಶ್ ಹಾಗೂ ಬಸವೇಶ್ವರ ಪಟ್ಟಣ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ಬಳ್ಳೇಕೆರೆ ಸಂತೋಷ್ ವಿದ್ಯಾರ್ಥಿ ನಿಲಯ ಕಾರ್ತಿಕ ಚಿಂತನದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ಇತ್ತೀಚೆಗೆ ನಡೆದ ಸಹಕಾರಿ ಯೂನಿಯನ್ ನಲ್ಲಿ ಜಯಶಾಲಿಗಳಾದ ಶ್ರೀ ದಿನೇಶ್ ಬುಳ್ಳಾಪುರ. ಕೆ.ಎಲ್ ಜಗದೀಶ್ ಮತ್ತು ಹನುಮಂತು ಭದ್ರಾವತಿ ಮತ್ತು ನಿವೃತ್ತ ನೌಕರ ಸಂಘದ ನೂತನ ಜಿಲ್ಲಾಧ್ಯಕ್ಷರಾದ ಎಸ್. ಆರ್ ಚಂದ್ರಪ್ಪ ಇವರನ್ನು ಅಭಿನಂದಿಸಲಾಯಿತು.

ಮುಖ್ಯ ಭಾಷಣಕಾರರಾಗಿ ಶ್ರೀಮತಿ ವಿಜಯ ಶ್ರೀಧರ್ ಭಕ್ತಿ ಮತ್ತು ಶ್ರದ್ದೆಯ ಬಗ್ಗೆ ಶರಣರ ವಚನಗಳ ಮೂಲಕ ಪ್ರಸ್ತುತಪಡಿಸಿದರು. ಬಸವ ಕೇಂದ್ರದ ಗುರುಗಳಾದ ಶ್ರೀ ಶ್ರೀ ಬಸವಮರುಳಸಿದ್ದ ಸ್ವಾಮಿಗಳು ಸಮಾಜದ ಪರಂಪರೆಯಲ್ಲಿ ವಚನ ಸಾಹಿತ್ಯ ಮತ್ತು ಭಕ್ತಿ ಪರಂಪರೆಯನ್ನು ಆಶೀರ್ವಚನದ ಮೂಲಕ ಭಕ್ತರಿಗೆ ತಿಳಿಸಿದರು.

Shri Shivakumar Swamiji ಶ್ರೀ ಎಸ್.ಪಿ ಮೋಹನ್ ಕುಮಾರ್ ಕಾರ್ಯಕ್ರಮವನ್ನು ಶರಣು ಸಮರ್ಪಣೆ ಮಾಡಿದರು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಲವಕುಮಾರ್ ಸ್ವಾಮಿ ಪದಾಧಿಕಾರಿಗಳಾದ ಕೆ.ಸಿ ಶರಣಪ್ಪ, ಎಸ್.ಪಿ. ಮೋಹನ್ ಕುಮಾರ್, ಬಿ.ಎಚ್. ನಿರಂಜನ್ ಮೂರ್ತಿ, ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಸಿದ್ದಬಸಪ್ಪ, ಶಿವಕುಮಾರ ಸ್ವಾಮೀಜಿ ಸಂಘದ ಗೌರವಾಧ್ಯಕ್ಷರಾದ ಶ್ರೀ ಸಿ.ಜಿ. ಪರಮೇಶ್ವರಪ್ಪ ಕಾರ್ಯದರ್ಶಿಗಳಾದ ಡಾ. ಶಿವಯೋಗಿ ಎಲಿ ಖಜಾಂಚಿಗಳಾದ ಎಂ.ಎನ್. ರಂಗನಾಥ ಉಪಸ್ಥಿತರಿದ್ದರು.

Saalumarada Thimmakka ಸಾಲುಮರದ ಮಾತೆಗೆ ನುಡಿ ಶ್ರದ್ಧಾಂಜಲಿ ವಿನಯ್ , ಶಿವಮೊಗ್ಗ

0

Saalumarada Thimmakka ಹಸಿರೇ ಉಸಿರಾಗಿ ಬಾಳಿದ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕನಿಗೆ ಅಂತಿಮ ನಮನಗಳು

ನಿಮ್ಮ ಹೆಸರಲ್ಲಿ ಏನೇನಿದೆ ?!!ಎಂದು ಯಾರಾದರೂ ಕೇಳಿದರೆ ನಾವು ಮಾಡಿರುವ ಅಷ್ಟೋ-ಇಷ್ಟೋ ಆಸ್ತಿ-ಸೈಟು-ಮನೆ-ಗಾಡಿಯ ವಿವರ ಕೊಡಬಹುದು…. ವಾಸ್ತವದಲ್ಲಿ ಅವು ನಮ್ಮ ಹೆಸರಿನಲ್ಲಿ ಇದ್ದರೂ ನಮ್ಮದಲ್ಲ! ಇದು ಎಲ್ಲರಿಗೂ ಗೊತ್ತಿರುವ ಸತ್ಯ !

ನಮ್ಮ ಹೆಸರಿನಲ್ಲಿ “ಮರ” ಒಂದಿದೆಯೇ?!!! ಯಾರೋ ನೆಟ್ಟ ಮರವಲ್ಲ … ನೀವೆ ಕಯ್ಯಾರ ಸಸಿಯೊಂದನ್ನು ನೆಟ್ಟು ಮರವಾಗಿ ಬೆಳೆಸಿದ ಭಾಗ್ಯ ನಿಮಗಿದೆಯೇ!? ಈ ಭಾಗ್ಯ ನಿಮಗಿಲ್ಲದಿದ್ದರೆ ನೀವು ಕೋಟಿವಂತರಾದರೂ ಕಡು ಬಡವರೇ…..

Saalumarada Thimmakka ನಮ್ಮ ಪ್ರತಿ ಶ್ವಾಸವೂ ಆ ಮರಗಳು ನಮಗೆ ಕೊಟ್ಟ ತೀರಿಸಲಾಗದ ಸಾಲ …. ಋಣ ಹೊತ್ತು ಸಾಯುವುದರಲ್ಲಿ ಸುಖವಿಲ್ಲ …. ಸ್ವಂತ ಮಕ್ಕಳು ನಮ್ಮ ಹೆಸರು ಹೇಳದೇ ಇರಬಹುದು ಆದರೆ ನೆಟ್ಟ ಸಸಿ ಮರವಾದಾಗ ಸೂಸುವ ಪ್ರತಿ ತಂಗಾಳಿಯಲ್ಲೂ ನಮ್ಮ ಹೆಸರು ಪ್ರತಿಧ್ವನಿಸುತ್ತದೆ.

ಆದು ಮಾವೋ, ಬೇವೋ, ಹೊಂಗೆಯೋ, ಆಲವೋ, ಅರಳಿಯೋ, ನೇರಳೆಯೋ …….ಜಾಗ ಒಂದನ್ನು ಗುರುತಿಸಿ ಒಂದಾದರು ಸಸಿ ನೆಟ್ಟು ನಿಮ್ಮ ಹೆಸರಿಟ್ಚು ಬೆಳೆಸಿ ಮರವಾಗಿ ಮಾಡುವ ತಪಸ್ಸಿಗೆ ಇದು ಸೂಕ್ತ ಕಾಲ. ಅದೇ ಆ ವೃಕ್ಷಮಾತೆಯಿಂದ ನಾವು ಕಲಿಯಬಹುದಾದ ಪಾಠ

ತಿಮ್ಮಕ್ಕ

~ವಿನಯ್ ಶಿವಮೊಗ್ಗ

Socio Economic survey Govt of karnataka ಆನ್ ಲೈನ್ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಧಿ ವಿಸ್ತರಣೆ

0

Socio Economic survey Govt of karnataka ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದ್ದು, ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರಿಗಾಗಿ ಅವಕಾಶ ನೀಡುವ ಹಿನ್ನಲೆಯಲ್ಲಿ ಆನ್‌ಲೈನ್ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ನ. 30ರವರೆಗೆ ವಿಸ್ತರಿಸಲಾಗಿದ್ದು, https:/kscbcselfdeclaration.karnataka.gov.in ಮೂಲಕ ಆನ್‌ಲೈನ್ ಸಮೀಕ್ಷೆಯಲ್ಲಿ ಸ್ವಯಂ ಪಾಲ್ಗೊಳ್ಳುವಂತೆ ಹಿಂದುವಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Priyank Kharge ಚಿತ್ತಾಪುರದಲ್ಲಿನ ಆರ್ ಎಸ್ಎಸ್ ಪಥಸಂಚಲನಕ್ಕೆ ಅಸ್ತು. ಸಚಿವ ಪ್ರಿಯಾಂಕ ಖರ್ಗೆ ಏನು ಹೇಳಿದರು?

0

Priyank Kharge ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ.

ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ.
ಸಂವಿಧಾನಕ್ಕೆ ಸವಾಲು ಹಾಕಿದರೆ ಬದುಕು ದುಸ್ಥರ!
ಆರ್ಎಸ್ಎಸ್ ಎಂಬ ಸಂಘಟನೆಗೆ ಈ ಸತ್ಯದ ಅರಿವಾಗಿದೆ ಎಂದು ಭಾವಿಸಿದ್ದೇನೆ.
ಸಂವಿಧಾನ, ಕಾನೂನುಗಳು ನಮಗೆ ಅನ್ವಯಿಸುವುದಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದ RSS ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ.

Priyank Kharge ಯಾವುದೇ ಸಂಘಗಳು, ವ್ಯಕ್ತಿಗಳು ಇದನ್ನು ಅರ್ಥೈಸಿಕೊಂಡು ನೀತಿ, ನಿಯಮಗಳಿಗೆ ಬದ್ಧರಾಗಿ ನಡೆಯಬೇಕು.
ಸರ್ಕಾರ ಮತ್ತು ಕಲಬುರಗಿ ಜಿಲ್ಲಾಡಳಿತ ರೂಪಿಸಿರುವ ಮಾನದಂಡಗಳನ್ನು ಒಪ್ಪಿ, ನಿಯಮಗಳಿಗೆ ಅನುಸಾರವಾಗಿ ಆರ್ಎಸ್ಎಸ್ ತಮ್ಮ ಕಾರ್ಯಕ್ರಮ ನಡೆಸಬೇಕು ಇದರ ಹೊರತಾಗಿ ಯಾವುದೇ ಅತಿ ಬುದ್ದಿವಂತಿಕೆಗೂ ಅವಕಾಶವಿಲ್ಲ.

  • 300 ಜನರು ಮಾತ್ರ ಭಾಗವಹಿಸಬೇಕು.
  • ಸರ್ಕಾರ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಅವಕಾಶ
  • ಚಿತ್ತಾಪುರದ ಹೊರಗಿನವರು ಭಾಗಿಯಾಗುವಂತಿಲ್ಲ
  • ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡುವಂತಿಲ್ಲ

ಈ ನಿಯಮಗಳ ಮೂಲಕ ಸರ್ಕಾರ ತೋರಿದ ಉದಾರತೆಯನ್ನು, ಕಲಬುರಗಿ ಜಿಲ್ಲಾಡಳಿತ ತೋರಿದ ಸಹನೆಯನ್ನು ಗೌರವಿಸಿ ತಮ್ಮ ಕಾರ್ಯಕ್ರಮವನ್ನು ಪೂರೈಸಿಕೊಳ್ಳಬೇಕು.
ಜೈ ಸಂವಿಧಾನ.
ಎಂದು X. ಖಾತೆಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

City Cooperative Bank Shimoga ಸಿಟಿ ಸಹಕಾರ ಬ್ಯಾಂಕ್ ನಲ್ಲಿ ಸಹಕಾರ ಸಪ್ತಾಹ ಧ್ವಜಾರೋಹಣ

0

City Cooperative Bank Shimoga ಸಿಟಿ ಕೋ ಆಪರೇಟಿವ್ ಬ್ಯಾಂಕ್ 72ನೇ ಸಹಕಾರ ಸಪ್ತಾಹ – ಧ್ವಜಾರೋಹಣ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಇಂದು ನಗರದ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಸಹಕಾರಿ ಧ್ವಜಾರೋಹಣವನ್ನು ಬ್ಯಾಂಕಿನ ಅಧ್ಯಕ್ಷ ಜಿ ರಾಜು ನೆರವೇರಿಸಿದರು ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಪ್ರೇಮಾ ಚಂದ್ರಶೇಖರ್ ಖಜಾಂಚಿ ಬಿ City Cooperative Bank Shimoga ಲೋಕೇಶ್, ಹಿರಿಯ ನಿರ್ದೇಶಕರಾದ ಎಂ ಕೆ ಸುರೇಶ್ ಕುಮಾರ್, ಎಸ್. ಪಿ ಶೇಷಾದ್ರಿ, ಕೆ .ರಂಗನಾಥ್, ಸಿ. ಹೊನ್ನಪ್ಪ, ಎಸ್ .ಡಿ. ಪ್ರಸನ್ನ ಕುಮಾರ್ , ಬ್ಯಾಂಕಿನ ಸಿಇಓ ಮನೋಜ್ ಕುಮಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು

CM Siddaramaiah ಅರಣ್ಯ ಪ್ರದೇಶದಿಂದ ಹೊರ ಸಂಚರಿಸುತ್ತಿರುವ ಹುಲಿಗಳನ್ನ ಡ್ರೋನ್ ನೆರವಿನಿಂದ ತಕ್ಷಣ ಹಿಡಿಯಿರಿ- ಸೀಎಂ ಸಿದ್ಧರಾಮಯ್ಯ

CM Siddaramaiah ರಾಜ್ಯ ಮಟ್ಟದ ಸಮಗ್ರ ಮಾನವ- ವನ್ಯಜೀವಿ ಸಂಘರ್ಷ ನಿರ್ವಹಣಾ ಕಾರ್ಯತಂತ್ರಗಳನ್ನು ರೂಪಿಸುವುದು ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ಇಂದು ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನೀಡಿದ ಸೂಚನೆಗಳು ಹೀಗಿವೆ.

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ಡ್ರೋನ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ. ಇದಕ್ಕಾಗಿ ಅಗತ್ಯ ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು ನೀಡಲಾಗುವುದು.

ವಯಸ್ಸಾದ ಕಾರಣಕ್ಕೆ ಮತ್ತು ಹೊಸ ಯುವ ಹುಲಿಗಳ ದಾಳಿಯಿಂದ ಗಾಯಗೊಂಡ ಹಾಗೂ ಇನ್ನಿತರೆ ಕಾರಣಗಳಿಂದ ಅರಣ್ಯ ಪ್ರದೇಶದಿಂದ ಹೊರಗೆ ಸಂಚರಿಸುತ್ತಿರುವ 15-20 ಹುಲಿಗಳನ್ನು ಡ್ರೋನ್ ಕ್ಯಾಮರಾ ನೆರವಿನಿಂದ ತಕ್ಷಣ ಹಿಡಿಯಲು ಕ್ರಮ ಜರುಗಿಸಬೇಕು. ಈಗಾಗಲೇ ಎಂಟು ಕುಮ್ಕಿ ಆನೆಗಳನ್ನು ಕಾರ್ಯಾಚರಣೆಗೆ ಬಳಸಲಾಗುತ್ತಿದ್ದು, ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿ ಮತ್ತು ಸ್ಕ್ವಾಡ್ ಗಳ ಸಂಖ್ಯೆಯನ್ನು ಸಂಘರ್ಷ ಪೀಡಿತ ಅರಣ್ಯ ಪ್ರದೇಶದಲ್ಲಿ ಬಳಸಬೇಕು. ಮಾನವ ವನ್ಯಜೀವಿ ಸಂಘರ್ಷ ಇರುವ ಪ್ರದೇಶಗಳನ್ನು ಗುರುತಿಸುವುದು ಮತ್ತು ಯಾವ ಸ್ವರೂಪದ ಸಂಘರ್ಷ ಇದೆ ಎಂದು ಪಟ್ಟಿ ಮಾಡಬೇಕು.

ಮಾನವ ಸಂಪನ್ಮೂಲದ ನಿರ್ವಹಣೆ ಸಂಘರ್ಷದ ತೀವ್ರತೆಯ ಆಧಾರದ ಮೇಲೆ ಅಧಿಕಾರಿ, ಸಿಬ್ಬಂದಿಯ ನಿಯೋಜನೆ ಮಾಡಬೇಕು. ಅರಣ್ಯದ ಅಂಚಿನ ಗ್ರಾಮಗಳಲ್ಲಿ ಗಸ್ತು ಹೆಚ್ಚಳ ಮಾಡುವುದು ಹಾಗೂ ರಿಜಿಸ್ಟರ್ ನಿರ್ವಹಣೆ ಮಾಡತಕ್ಕದ್ದು.

CM Siddaramaiah ಹಿರಿಯ ಅಧಿಕಾರಿಗಳು ನಿಯಮಿತವಾಗಿ ಅರಣ್ಯದಂಚಿನ, ಅದರಲ್ಲೂ ಮಾನವ ವನ್ಯ ಜೀವಿ ಸಂಘರ್ಷ ಇರುವ ಗ್ರಾಮದಲ್ಲಿ ವಾಸ್ತವ್ಯ ಹೂಡಬೇಕು. ಸ್ಥಳೀಯರನ್ನು ತೊಡಗಿಸಿಕೊಳ್ಳುವುದು, ಅರಣ್ಯದಂಚಿನ ಗ್ರಾಮದ ಉತ್ಸಾಹಿ ಯುವಕರು ಮತ್ತು ಹಿರಿಯರನ್ನು ಗುರುತಿಸಿ ಅರಣ್ಯ ಮಿತ್ರ ಎಂದು ಪರಿಗಣಿಸಿ ಗಸ್ತು, ವನ್ಯಜೀವಿ, ಸೆರೆ, ಕಾರ್ಯಾಚರಣೆ ವೇಳೆ ಅವರ ಸೇವೆ ಬಳಸಿಕೊಳ್ಳಬೇಕು. ವನ್ಯಜೀವಿ ಸಂರಕ್ಷಣೆ ಕಾರ್ಯಾಚರಣೆಗೆ ವನ್ಯಜೀವಿಗಳು ಸಂಚರಿಸುವ ಕಾರ್ಯತಂತ್ರ ಸ್ಥಳಗಳಲ್ಲಿ 24/7 ವಾಹನ ಮತ್ತು ಅರಣ್ಯ ಸಿಬ್ಬಂದಿ ಲಭ್ಯವಾಗುವಂತೆ ವ್ಯವಸ್ಥೆ ಮಾಡಬೇಕು. ವನ್ಯಜೀವಿ ಸೆರೆ , ವನ್ಯಜೀವಿ ದಾಳಿ ಮಾಡಿದಾಗ ಏನು ಮಾಡಬೇಕು ಎಂಬ ಬಗ್ಗೆ ಮಾಹಿತಿ ನೀಡಲು ಅಣಕು ಪ್ರದರ್ಶನ ಏರ್ಪಡಿಸಬೇಕು.

ಜಿಲ್ಲಾ ಮಟ್ಟದಲ್ಲಿ ಸಮನ್ವಯ/ ಸಹಯೋಗ ಸಮಿತಿ ರಚನೆ ಮಾಡುವುದು. ತಾಲ್ಲೂಕು ಮಟ್ಟದಲ್ಲಿ ಉಪಸಮಿತಿ ರಚನೆ ಮಾಡಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ನೆರವು ಪಡೆಯಬೇಕು. ಈ ಸಮಿತಿ ನಿಯಮಿತವಾಗಿ ಸಭೆ ನಡೆಸಿ ಮಾನವ ವನ್ಯ ಜೀವಿ ಸಂಘರ್ಷ ನಿಯಂತ್ರಣಕ್ಕೆ ಶ್ರಮಿಸತಕ್ಕದ್ದು. ಕರ್ನಾಟಕದಲ್ಲಿ ಆನೆಗಳ ಸಂಖ್ಯೆ 6,395 ಇದ್ದು, ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ಹುಲಿ ಸಂಖ್ಯೆ 563 ಇದ್ದು, ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಹಾಗೂ 1,879 ಚಿರತೆಗಳಿದ್ದು, ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ.

ವನ್ಯಜೀವಿಗಳು ಆಹಾರ ಹುಡುಕಿಕೊಂಡು ಹೊರಗೆ ಬರುವುದನ್ನು ನಿಗ್ರಹಿಸಬೇಕು.‌ ಬೇಸಿಗೆಯ ಕಾಲದಲ್ಲಿ ವನ್ಯಜೀವಿಗಳಿಗೆ ಅರಣ್ಯದೊಳಗೆ ನೀರಿನ ವ್ಯವಸ್ಥೆ ಕಲ್ಪಿಸಬೇಕು.

ಅರಣ್ಯದಲ್ಲಿ ವ್ಯಾಪಕವಾಗಿ ಹರಡುವ
ಲಾಂಟಾನ ಕಳೆಯ ತೆಗೆಯಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ವನ್ಯಪ್ರಾಣಿಗಳಿಗೆ ಮೇವಿಗೆ ಕೊರತೆ ಉಂಟಾಗುತ್ತದೆ.
ಸಭೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಉಪಸ್ಥಿತರಿದ್ದರು.

Madhu Bangarappa ರಾಜ್ಯದಲ್ಲಿ ಆರು ಸಾವಿರ ಗ್ರಾಮ ಪಂಚಾಯಿತಿಗೆ ಒಂದರಂತೆ ಆರು ಸಾವಿರ ಕೆಪಿಎಸ್ ಶಾಲೆ ತೆರೆಯುವ ಚಿಂತನೆ – ಸಚುವ ಮಧು ಬಂಗಾರಪ್ಪ.

0

Madhu Bangarappa ರಾಜ್ಯದ 6 ಸಾವಿರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಲಾ ಒಂದರಂತೆ 6 ಸಾವಿರ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು (ಕೆಪಿಎಸ್‌) ತೆರೆಯುವ ಚಿಂತನೆ ಇದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.

Department of public instruction Shimoga ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ& ಪ್ರೌಢಶಾಲೆಗಳಲ್ಲಿ ಪೋಷಕ ಮತ್ತು ಶಿಕ್ಷಕರ ಮಹಾಸಭೆ.

0

Department of public instruction Shimoga ನ. 14 ರಂದು ಮಕ್ಕಳ ದಿನಾಚರಣೆ ಪ್ರಯುಕ್ತ ಜಿಲ್ಲಾದ್ಯಂತ ಏಕಕಾಲದಲ್ಲಿ 2025-26ನೇ ಸಾಲಿನ ಪೋಷಕ ಶಿಕ್ಷಕ ಮಹಾಸಭೆಯನ್ನು ಜಿಲ್ಲೆ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಆಯೋಜಿಸಲಾಗಿದ್ದು, ಈ ಸಭೆಗೆ ಎಲ್ಲಾ ಪೋಷಕರು ನ. 14 ರಂದು ಬೆ. 10.00ಕ್ಕೆ ಸರಿಯಾಗಿ ತಮ್ಮ ಮಕ್ಕಳು ವ್ಯಾಸಂಗ ಮಾಡುತ್ತಿರುವ ಶಾಲೆಗೆ ಭೇಟಿ ನೀಡಿ Department of public instruction Shimoga ಮಹಾಸಭೆಯ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ಹಾಗು ಈ ಸಭೆಗೆ ಇಲಾಖೆಯ ಎಲ್ಲಾ ಹಂತದ ಮೇಲುಸ್ತುವಾರಿ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗೆ ಭೇಟಿ ನೀಡಿ ಇಲಾಖೆಯ ಸುತ್ತೋಲೆಯ ಅನುಸಾರ ಎಲ್ಲಾ ಚಟುವಟಿಕೆಗಳು ನಡೆಯುವಂತೆ ಕ್ರಮ ಕೈಗೊಳ್ಳಲು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.