Thursday, February 12, 2026
Thursday, February 12, 2026
Home Blog Page 98

Radio Shivamogga ನವೆಂಬರ್ 14. ಮಕ್ಕಳಿಗಾಗಿಯೇ ರೇಡಿಯೋ ಶಿವಮೊಗ್ಗ 90.8 ಎಫ್ ಎಂ ನಿಂದ ವಿಶೇಷ ಕಾರ್ಯಕ್ರಮ.

0

Radio Shivamogga ರೇಡಿಯೋ ಶಿವಮೊಗ್ಗ 90.8 ಎಫ್.ಎಂ ವತಿಯಿಂದ ಮಕ್ಕಳ ದಿನಾಚರಣೆಯ ಅಂಗವಾಗಿ ನವಂಬರ್-14 ರಂದು ಇಡೀ ದಿನದ ಸಂಪೂರ್ಣ ಕಾರ್ಯಕ್ರಮಗಳು ಮಕ್ಕಳಿಂದಲೇ ಮೂಡಿಬರುತ್ತಿದ್ದು ಇದು ದೇಶದಲ್ಲಿಯೇ ಮೊಟ್ಟಮೊದಲ ಬಾರಿಗೆ ‘ಜೂನಿಯರ್ ಆರ್.ಜೆ’ ಹೆಸರಿನ ಮಕ್ಕಳಿಗಾಗಿಯೇ ಸಿದ್ಧಪಡಿಸಿದ ವಿಭಿನ್ನ ಕಾರ್ಯಕ್ರಮ ಮೂಡಿಬರುತ್ತಿದ್ದೆ. ಬೆಳಗ್ಗೆ 6 ರಿಂದ ರಾತ್ರಿ 8 ಘಂಟೆಯವರೆಗೂ ನಡೆಯುವ ಕಾರ್ಯಕ್ರಮಗಳು, ಜಾಗೃತಿಯ ಕಾರ್ಯಕ್ರಮಗಳು, ನೇರಪ್ರಸಾರ, ಸುದ್ಧಿ ಸಮಾಚಾರ ಎಲ್ಲವನ್ನೂ ಮಕ್ಕಳೇ ನಡೆಸಿಕೊಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಶಿವಮೊಗ್ಗ, ಬೆಂಗಳೂರು, ಹಾವೇರಿ, ತುಮಕೂರು, ದಾವಣಗೆರೆ, ಚಿಕ್ಕಮಗಳೂರು ಹೀಗೆ ವಿವಿಧ ಜಿಲ್ಲೆಯ 25 ಕ್ಕೂ ಹೆಚ್ಚಿನ ಮಕ್ಕಳು ‘ಜೂನಿಯರ್ ಆರ್.ಜೆ’ ಗಳಾಗಿ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.

ದಿನಚರಿಯನ್ನು ಜೂನಿಯರ್ ಆರ್.ಜೆ ಪೂಜಾ.ಡಿ.ಜಿ, ಚಂದನ್. ಡಿ.ಜಿ, ‘ಅರುಣೋದಯ’ ಈ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ಅಬ್ಧಿ ಆರ್ ನಾಡಿಗ್, ‘ಗಾಂಧಿಓದು’ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ಮೇಘನಾ.ಎ.ಬಿ, ‘ವಚನ ವಿಹಾರ’ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ಪ್ರಯಾಗ್.ಡಿ.ಹೆಚ್, ಸಾನ್ವಿ ಪಿ ದೇವಾಡಿಗ ಮತ್ತು ಸಂಸ್ಕöÈತಿ, ಜೂನಿಯರ್ ಆರ್.ಜೆ ಖುಷಿ ಮತ್ತು ಕೃತಿಕಾ ‘ಮಂಕುತಿಮ್ಮನಕಗ್ಗ’ ದ ವಾಚನ ಮತ್ತು ನಿರೂಪಣೆಯನ್ನು, ಜೂನಿಯರ್ ಆರ್.ಜೆ ನಮಿತಾ ಮತ್ತು ಸನ್ನಿಧಿ ಇವರುಗಳ ಕಥೆಯನ್ನು, ಯೋಗದ ಮಹತ್ವವನ್ನು ಜ್ಞಾನಶ್ರೀ ಸನ್ನಿಧಿ ‘ದಿನದ ವಿಶೇಷ’ ಸುದ್ಧಿಸಮಾಚಾರವನ್ನು ಜೂನಿಯರ್ ಆರ್.ಜೆ ರಮ್ಯಾ, ‘ಪರಿಸರ ಪರಿಚಯ’ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ಇಂಪನ. ಇವರು ಪರಿಸರ ಮಾಲಿನ್ಯದ ಬಗ್ಗೆ, ‘ಟ್ರಾವೆಲ್ಲರ್ ಸ್ ಡೈರೀ’ ಕಾರ್ಯಕ್ರಮವನ್ನು ಬಸರೀಕಟ್ಟೆಯಿಂದ ಜೂನಿಯರ್ ಆರ್.ಜೆ ರುಚಿರ ಜೂನಿಯರ್ ಆರ್.ಜೆ ಆದ್ಯಾ ಆರ್ ಕಷ್ಯಪ್, ಕುಣಿಗಲ್ ನ ಜೂನಿಯರ್ ಆರ್.ಜೆ ಚೆಂದನ್.ಡಿ.ಜಿ, ‘ಸಾಹಿತ್ಯಲೋಕ’ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ಆಲಾಪನ, ‘ಬಿಂದಾಸ್ ಮಾರ್ನಿಂಗ್’ ನೇರಫೋನ್ ಇನ್ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ಗಳಾದ ಅಬ್ಧಿ ಆರ್ ನಾಡಿಗ್, ಸೃತಿ ಭಾರಧ್ವಾಜ್ ನಡಿಸಿಕೊಡಲಿದ್ದಾರೆ. ‘ಸೋಶಿಯಲ್ ಮೀಡಿಯಾ ಕಥೆಗಳು’ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ಕರಣ್ ನಡೆಸಿಕೊಡಲಿದ್ದಾರೆ. ವಿಜ್ಞಾನದ ವಿಶೇಷತೆಯ ಜಾಣಸುದ್ದಿ ಬಗ್ಗೆ ಜೂನಿಯರ್ ಆರ್.ಜೆ ವಚನ.ಎಂ.ಬಿ, ಪರಿಸರದ ಬಗ್ಗೆ ಜೂನಿಯರ್ ಆರ್.ಜೆ ವೈಷ್ಣವಿ, ಆವಿಷ್ಕಾರದ ಅಸ್ಮಿತೆ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ಪ್ರಣವ್.ಡಿ.ಹೆಚ್, ‘ಅಂಬೇಡ್ಕರ್‌ಓದು’ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ಲಿಖಿತ, ‘ಅಡುಗೆಮನೆಯಲ್ಲೊಂದು ಸುತ್ತು’ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ಆರೋಹಣ, ಸ್ಥಳೀಯ ಸುದ್ಧಿಗಳನ್ನು ತಿಳಿಸುವ ‘ಸುತ್ತಮುತ್ತಾ’ ಸುದ್ಧಿ ಸಮಾಚಾರವನ್ನು ಜೂನಿಯರ್ ಆರ್.ಜೆ ಸಮನ್ವಿತ, ಪಂಚತAತ್ರ ಕಥೆಯನ್ನು ಜೂನಿಯರ್ ಆರ್.ಜೆ ವೈಷ್ಣವಿ, ಕಾಫಿ ವಿತ್ ಆರ್ ಜೇಸ್, ಸಿನಿಕಹಾನಿ ನೇರ ಫೋನ್‌ಇನ್ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ಗಳಾದ ದಿಶಾ.ಪಿ, ಪ್ರಯಾಗ್ ಮತ್ತು ಪರ್ಣವಿ ಇವರುಗಳು ನಡೆಸಿಕೊಡಲಿದ್ದಾರೆ.
Radio Shivamogga ‘ನಮ್ಮ ನಡಿಗೆ ಪರಿಹಾರದ ಕಡೆಗೆ’ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ಜೀವಿತ ಮೌನೇಶ್, ‘ವಿಸ್ಮಯಜಗತ್ತು’ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ನಿತಿನ್ ಸಾಸ್ವೆಹಳ್ಳಿ, ‘ಬ್ಯುಜಿನೆಜ್ ಬಝ್’ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ.ಸೃತಿ ಭಾರಧ್ವಾಜ್, ‘ನಿಮ್ಮ ಕೃಷಿ ನಮ್ಮ ಖುಷಿ’ ಕಾರ್ಯಕ್ರಮವನ್ನು ಜೂನಿಯರ್ ಆರ್.ಜೆ ಪರ್ಣವಿ, ವಿಜ್ಞಾನಿ, ಕೂತುಹಲ ಸಂಗತಿ ಬಗ್ಗೆ ಜೂನಿಯರ್ ಆರ್.ಜೆ ಸಿರಿ.ಎ.ಎಸ್, ಪ್ರಶಾಂತಿ ಇವರುಗಳು ನಡೆಸಿಕೊಡಲಿದ್ದಾರೆ. ಒಟ್ಟಾರೆಯಾಗಿ 25 ಕ್ಕೂ ಹೆಚ್ಚಿನ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಯ ವಿದ್ಯಾರ್ಥಿಗಳು ಸೇರಿ ಇಡೀ ದಿನದ ಎಲ್ಲಾ ಕಾರ್ಯಕ್ರಮಗಳನ್ನು ನಡೆಸಿಕೊಡುತ್ತಿದ್ದು ಜೊತೆಗೆ ಕಾರ್ಯಕ್ರಮಗಳ ಮಧ್ಯೆ ಪ್ರಸಾರ ಆಗುವ ಹಲವು ಹಾಡುಗಳನ್ನು ಮಕ್ಕಳೇ ಹಾಡಿದ್ದಾರೆ. ಇದು ಮಕ್ಕಳಲ್ಲಿ ರೇಡಿಯೋ ಬಗ್ಗೆ ಅಭಿರುಚಿ, ಆಸಕ್ತಿಯನ್ನು ಮೂಡಿಸುವ ಕಾರ್ಯವಾಗಿದೆ. ಮಕ್ಕಳ ಪ್ರತಿಭೆಗೊಂದು ಅವಕಾಶವನ್ನು ರೇಡಿಯೋ ಶಿವಮೊಗ್ಗ ನೀಡಿದೆ. ಕಾರ್ಯಕ್ರಮದ ಸಂಯೋಜಕರು, ಆರ್.ಜೆ ಗಳು ಎಲ್ಲಾ ಮಕ್ಕಳಿಗೆ ಮಾರ್ಗದರ್ಶನ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಎಲ್ಲಾ ಮಕ್ಕಳನ್ನು ಸಜ್ಜುಗೊಳಿಸಿದ್ದಾರೆ. ಒಂದು ದಿನದ ಸಂಪೂರ್ಣ ಕಾರ್ಯಕ್ರಮವನ್ನು ಮಕ್ಕಳೇ ನಡೆಸಿಕೊಡುತ್ತಿರುವುದರಿಂದ ಇದೊಂದು ದಾಖಲೆಯ ಕಾರ್ಯಕ್ರಮವಾಗಿದೆ. ಕೇಳುಗರು ಎಲ್ಲಾ ಕಾರ್ಯಕ್ರಮಗಳನ್ನು ಕೇಳಿ ನಿಮ್ಮ ಅಭಿಪ್ರಾಯವನ್ನು ನಮ್ಮ ರೇಡಿಯೋ ಶಿವಮೊಗ್ಗ 90.8 ಎಫ್.ಎಂ ನ ಸಂಖ್ಯೆ 9686096279 ಗೆ ಕಳಿಸಿರಿ.

Lion’s Club ಉಚಿತ ನೇತ್ರ ತಪಾಸಣೆ & ಕನ್ನಡಕ ವಿತರಿಸುವ ಲಯನ್ಸ್ ಕ್ಲಬ್ ಸೇವೆ ಶ್ಲಾಘನೀಯ- ಎನ್.ಟಿ.ನಂದೀಶ್.

0

Lion’s Club ಜಿ.ಪಂ. ತಾ.ಪಂ. ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ, ಜಿಲ್ಲಾ ಅಂಧತ್ವ ನಿಯಂತ್ರಣ ಸಂಘ, ಸೊರಬ ಲಯನ್ಸ್ ಕ್ಲಬ್ ಹಾಗೂ ಸಾಗರ ಲಯನ್ಸ್ ಕ್ಲಬ್ ಹಾಗೂ ಶ್ರೀಗಂಧ ಸಂಸ್ಥೆ ಆಶ್ರಯದಲ್ಲಿ ನಿನ್ನೆ ಉಚಿತ ನೇತ್ರ ತಪಾಸಣೆ ಮತ್ತು ಉಚಿತವಾಗಿ ಕನ್ನಡಕ ವಿತರಣೆ ಕರ‍್ಯಕ್ರಮವನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಿತು.
ಶಿಬಿರದಲ್ಲಿ ಸುಮಾರು ೧೫೮ಜನ ನೇತ್ರ ತಪಾಸಣೆಯಲ್ಲಿ ಭಾಗವಹಿ ಸಿದ್ದರು. ನೇತ್ರ ತಜ್ಞರಿಂದ ಸಮಗ್ರ ದೃಷ್ಟಿ ತಪಾಸಣೆ ನಡೆಯಿತು. ಅದರಲ್ಲಿ ೫೪ಜನರಿಗೆ ಶಸ್ತçಚಿಕಿತ್ಸೆಗೆ ಸೂಚಿಸ ಲಾಯಿತು. ಈ ಸಂಧರ್ಭದಲ್ಲಿ ಅವಶ್ಯಕತೆ ಇದ್ದ ೬೫ಜನರಿಗೆ ಉಚಿತ ಕನ್ನಡಕಗಳನ್ನು ವಿತರಿಸಲಾಯಿತು.
Lion’s Club ಈ ಸಂದರ್ಭದಲ್ಲಿ ಮಾತನಾಡಿದ ಶಿವಮೊಜಗ್ಗ ಆಪ್ಟಿಕಲ್ಸ್ನ ಮಾಲೀ ಕರು ಹಾಗೂ ಜಿಲ್ಲಾ ಸಂಯೋಜಕ ರಾದ ಎನ್.ಟಿ. ನಂದೀಶ್ ಅವರು ಮಾತನಾಡಿ, ಕಣ್ಣಿನ ಸಮಸ್ಯೆ ಇರುವ ಸಾವಿರಾರು ಜನರಿಗೆ ಉಚಿತ ತಪಾಸಣೆ ಹಾಗೂ ಉಚಿತವಾಗಿ ಕನ್ನಡಕಗಳನ್ನು ನೀಡುತ್ತ ಬಂದಿರುವ ಲಯನ್ಸ್ ಕ್ಲಬ್ ಕಾರ್ಯಕ್ರಮಗಳು ನಿಜಕ್ಕೂ ಶ್ಲಾಘನೀಯ ಎಂದರು.
ಈ ವರ್ಷ ಲಯನ್ಸ್ನಿಂದ ೩೧೭ಅಡಿಯಲ್ಲಿ ೩ಸಾವಿರಕ್ಕೂ ಹೆಚ್ಚು ಉಚಿತ ಕನ್ನಡಕಗಳನ್ನು ವಿತರಿಸುವ ಗುರಿ ಹೊಂದಲಾಗಿದೆ ಎಂದರು.
ಜಿಲ್ಲಾ ಗವರ್ನರ್ ಡಾ. ಎಂ.ಕೆ. ಭಟ್ , ಅಧ್ಯಕ್ಷ ಮಹಾಬಲೆಶ್ ಕೆ.ಬಿ. ಅವರು ಶಿಬಿರ ಉದ್ಘಾಟಿಸಿ ಸಮಾಜ ಮುಖಿ ಕಾರ್ಯಗಳಲ್ಲಿ ನೀಡುತ್ತಿರುವ ಸೇವೆಗಳನ್ನು ಪ್ರಶಂಸಿಸಿದರು. ಸವಿತಾ ಭಟ್, ಪಿಡಿಜಿ ಡಾ. ಎಂ.ಕೆ. ಭಟ್, ಸುಬ್ರಹ್ಮಣ್ಯ, ಭಾರತೀ ಹನುಮಂತಪ್ಪ, ಸರಸ್ವತಿ ನಾಗರಾಜ್ ಹಾಗೂ ಮೇಜರ್ ನಾಗರಾಜ್ ಇದ್ದರು.

Janjatiya Gaurav Divas ನವೆಂಬರ್ 15. ಜನ ಜಾತೀಯ ಗೌರವ ದಿನಾಚರಣೆ. ಜಿಲ್ಲಾಡಳಿತದಿಂದ ಸಿದ್ಧತೆ.

0

Janjatiya Gaurav Divas ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ನ.15 ರ ಬೆಳಿಗ್ಗೆ 11 ಗಂಟೆಗೆ ನಗರದ ಕಂಟ್ರೀ ಕ್ಲಬ್ ರಸ್ತೆಯಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಭಗವಾನ್ ಶ್ರೀ ಬಿರ್ಸಾ ಮುಂಡಾ ಅವರ 150 ನೇ ಜಯಂತಿ ಹಾಗೂ ಜನ ಜಾತೀಯ ಗೌರವ ದಿವಸ ಆಚರಣೆ 2025 ರ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಕಾರ್ಯಕ್ರಮದ ಘನ ಉಪಸ್ಥಿತಿ ಇರಲಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಉದ್ಘಾಟನೆಯನ್ನು ನೆರವೇರಿಸುವರು.
ಭದ್ರಾವತಿ ಶಾಸಕ ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷ ಬಿ.ಕೆ.ಸಂಗಮೇಶ್ವರ, ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಎಸ್.ಎನ್.ಚನ್ನಬಸಪ್ಪ ವಹಿಸುವರು.
Janjatiya Gaurav Divas ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರುಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರುಗಳು, ಜಿಲ್ಲಾಧಿಕಾರಿ, ಜಿ.ಪಂ ಸಿಇಓ, ಪೊಲೀಸ್ ಅಧೀಕ್ಷಕರು, ಮಹಾನಗರಪಾಲಿಕೆ ಆಯುಕ್ತರು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ ರಾಷ್ಟಿçÃಯ ಸೇವಾ ಯೋಜನೆ ಸಂಯೋಜನಾಧಿಕಾರಿಯಾದ ಡಾ.ಶುಭಾ ಮರವಂತೆ ವಿಶೇಷ ಉಪನ್ಯಾಸ ನೀಡುವರು.

S.N Channabasappa ಗಾಂಧಿಬಜಾರಿನಲ್ಲಿನ ವರ್ತಕರು ಮತ್ತು ಸ್ಥಳೀಯರ ಸಮಸ್ಯೆ ಅಲಿಸಿದ ಶಾಸಕ ಚೆನ್ನಿ

0

S N Channabasappa ಇಂದು ಬೆಳಿಗ್ಗೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಶಿವಮೊಗ್ಗ ನಗರದ ಗಾಂಧಿ ಬಜಾರ್ ಪ್ರದೇಶಕ್ಕೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳು ಹಾಗೂ ವರ್ತಕರ ಸಮಸ್ಯೆಗಳನ್ನು ಆಲಿಸಿದರು. ಪ್ರತಿ ಮಂಗಳವಾರ ನಡೆಯುವ ಸಂತೆ ಸಮಯದಲ್ಲಿ ಉಂಟಾಗುತ್ತಿದ್ದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸ್ಥಳೀಯರಿಂದ ಬಂದ ಅಹವಾಲುಗಳನ್ನು ಪರಿಶೀಲಿಸಿದರು.

S N Channabasappa ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಸ್ಥಳೀಯರು ಮತ್ತು ವರ್ತಕರ ಮಧ್ಯೆ ಉಂಟಾಗಿದ್ದ ಗೊಂದಲಗಳನ್ನು ಶಾಂತಿಯುತವಾಗಿ ಪರಿಹರಿಸುವ ಕ್ರಮ ಕೈಗೊಳ್ಳಲಾಯಿತು. ಸಾರ್ವಜನಿಕರ ಸಹಕಾರದೊಂದಿಗೆ ಗಾಂಧಿ ಬಜಾರ್ ಪ್ರದೇಶವನ್ನು ಇನ್ನಷ್ಟು ಸುಗಮ, ಸ್ವಚ್ಛ ಮತ್ತು ವ್ಯಾಪಾರ ಸ್ನೇಹಿ ವಾತಾವರಣವಾಗಿಸಲು ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

Keladi Shivappa Nayaka University ನವೆಂಬರ್ 19 ರಿಂದ ಡಿಸೆಂಬರ್ 18 ವರೆಗೆ ಬೇಕರಿ ಉತ್ಪನ್ನಗಳ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿ.

0

Keladi Shivappa Nayaka University ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ನ. 19 ರಿಂದ ಡಿ. 18 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕಿಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರುಟ್ ಕೇಕ್, ಸ್ಪಾಂಜ್‌ಕೇಕ್, ಆರೆಂಜ್ ಕೇಕ್, ಕಪ್ ಕೇಕ್, ಚಾಕಲೇಟ್ ಕೇಕ್, ಜಾಮ್ ರೋಲ್, ಜೆಲ್‌ಕೇಕ್, ಪೇಸ್ಟ್ರೀ ಕೇಕ್, ಬಟರ್ ಐಸಿಂಗ್, ಡೋ ನಟ್, ಮಿಲ್ಕ ಬ್ರೆಡ್, ಬನ್, ರಸ್ಕ್, ಫಿಜ್ಜಾ, ಪಪ್‌ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದೆ.

Keladi Shivappa Nayaka University ಆಕಸ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ನ.18 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯವನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವAತೆ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದ ಪ್ರೋಫೆಸರ್ ತಿಳಿಸಿದ್ದಾರೆ.

ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. -9449187763 ಮತ್ತು ಜಯಶಂಕರ-9686555897 ಇವರುಗಳನ್ನು ಸಂಪರ್ಕಿಸುವುದು.

Gurudatta Hegde ನಗರದೊಳಗೆ ಸೂಚಿಸಿದ ರಸ್ತೆಗಳಲ್ಲಿ ಭಾರೀ ವಾಹನ ಸಂಚಾರ ನಿಷೇಧ. ಡಿಸಿ ಗುರುದತ್ತ ಹೆಗಡೆ ಆದೇಶ

0

Gurudatta Hegde ಶಿವಮೊಗ್ಗ ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಮೋಟಾರು ವಾಹನ ಕಾಯ್ದೆ 1998 ಕಲಂ 115 ರ ಅನ್ವಯ ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989 ರ ನಿಯಮ 221(ಎ)(5) ರನ್ವಯ ಶಿವಮೊಗ್ಗ ನಗರ ಗೋಪಿ ಸರ್ಕಲ್‌ನಿಂದ ಜೆಪಿಎನ್ ರಸ್ತೆ, ಜ್ಯುವೆಲ್ ರಾಕ್ ಹೊಟೇಲ್ ರಸ್ತೆ Gurudatta Hegde ಮಾರ್ಗವಾಗಿ ಕುವೆಂಪು ರಸ್ತೆ ಮತ್ತು ಜೈಲ್ ರಸ್ತೆ ಮೂಲಕ ಲಕ್ಷ್ಮಿ ಟಾಕೀಸ್ ವರೆಗೆ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಭಾರೀ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

Central Army Council ಜಿಲ್ಲಾ ಸೈನಿಕ ಮಂಡಳಿ ಪುನಾರಚನೆ.ಸದಸ್ಯತ್ವಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನ

0

Central Army Council ಮಾಜಿ ಸೈನಿಕರ ಕಲ್ಯಾಣ ಯೋಜನೆಗಳಿಗೆ ಪೂರಕವಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಸೈನಿಕ ಮಂಡಳಿಯನ್ನು ಪುನರ್‌ರಚಿಸಲಾಗುತ್ತಿದೆ.

ಪ್ರತಿ ಜಿಲ್ಲೆಯಿಂದ ಓರ್ವ ಮಾಜಿ ಸೈನಿಕರು ಅಧಿಕಾರೇತರ ಸದಸ್ಯರಾಗಿ ಪ್ರತಿನಿಧಿಸಬಹುದಾಗಿದ್ದು, ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳ ವ್ಯಾಪ್ತಿಯ ಮಾಜಿ ಸೈನಿಕರು ಮಂಡಳಿಯಲ್ಲಿ ವೇತನ-ಭತ್ಯೆ ರಹಿತವಾಗಿ ಸ್ವ-ಇಚ್ಛೆಯಿಂದ ಕಾರ್ಯ ನಿರ್ವಹಿಸಲು ಆಸಕ್ತಿಯುಳ್ಳವರಿಂದ ಅರ್ಜಿ ಆಹ್ವಾನಿಸಿದೆ.

Central Army Council ಆಸಕ್ತರು ತಮ್ಮ ಸ್ವವಿವರಗಳನ್ನೊಳಗೊಂಡ ಅರ್ಜಿಯನ್ನು ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ನ. 15ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯನ್ನು ಖುದ್ದಾಗಿ ಅಥವಾ ದೂ.ಸಂ.: 08182-220925 ನ್ನು ಸಂಪರ್ಕಿಸುವುದು.

ಶಿವಮೊಗ್ಗ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿದ್ದ ಖೈದಿಯ ಸಾವು

0

ಶಿವಮೊಗ್ಗ ಸೆಂಟ್ರಲ್‌ ಜೈಲಿನ ಖೈದಿಯೊಬ್ಬ ಅನಾರೋಗ್ಯದಿಂದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರು ಮೂಲದ ಬಾಬು.ಕೆ.ಪಿ ಅಲಿಯಾಸ್‌ (೫೦)ಸಜಿ ಬಾಬು ಮೃತ ಖೈದಿ ಸಾವನ್ನಪ್ಪಿದ್ದಾರೆ.

ಮಧುಮೇಹ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ನ.10ರಂದು ಬೆಳಗ್ಗೆ 5 ಗಂಟೆಗೆ ಮೆಗ್ಗಾನ್‌ ಆಸ್ಪತ್ರೆಗೆ ಸೇರಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಿಸದೆ ಬೆಳಗ್ಗೆ 5.40ರ ಹೊತ್ತಿಗೆ ಸಾವನ್ನಪ್ಪಿದ್ದಾರೆ.

ಪ್ರಕರಣವೊಂದರ ಸಂಬಂಧ ಚಿಕ್ಕಮಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಾಬುಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು.

ಕಳೆದ ಆಗಸ್ಟ್‌ 22ರಂದು ಬಾಬುನನ್ನು ಚಿಕ್ಕಮಗಳೂರು ಜಿಲ್ಲಾ ಕಾರಾಗೃಹದಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿತ್ತು.

ಚಿಕ್ಕಮಗಳೂರು ಕಾರಾಗೃಹದಲ್ಲಿ ಇದ್ದಾಗಲೇ ಬಾಬು ಎಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

Delhi Red Fort Blast ದೆಹಲಿ ಬಾಂಬ್ ಸ್ಫೋಟ. ದುಷ್ಟಶಕ್ತಿಗಳಿಗೆ ತಕ್ಕ ಶಾಸ್ತಿ ಮಾಡದೇ ಬಿಡುವುದಿಲ್ಲ- ಪ್ರಧಾನಿ ಮೋದಿ

0

Delhi Red Fort Blast ನವೆಂಬರ್ 10. ದೆಹಲಿಯ ಕೆಂಪುಕೋಟೆಯ ಬಳಿ‌ ದುರ್ಘಟನೆ.
ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಕಾರೊಂದು ಸ್ಫೋಟಗೊಂಡಿತು.

ಕನಿಷ್ಠ 13 ಮಂದಿ ಮರಣಿಸಿದರು. 20 ಹೆಚ್ಚು ಜನರು ಗಾಯಗೊಂಡರು.

ದೆಹಲಿ ಪೊಲೀಸರ ವರದಿ ಪ್ರಕಾರ, ಅಮೋನಿಯಂ ನೈಟ್ರೇಟ್ ರಾಸಾಯನಿಕವೇ ಈ ಸ್ಫೋಟಕ್ಕೆ ಕಾರಣವೆಂದು ಶಂಕಿಸಲಾಗಿದೆ.
ಈ ಸ್ಫೋಟವು ಒಮ್ಮೆಲೆ ಬೆಂಕಿಯನ್ನು ಉಂಟುಮಾಡಿತು.
ಜೊತೆಗೆ ಸನಿಹದಲ್ಲಿದ್ದ ಕಾರುಗಳು ಮತ್ತು ಆಟೋ ರಿಕ್ಷಾಗಳು ಸೇರಿದಂತೆ ಅನೇಕ ವಾಹನಗಳಿಗೆ ಅಪಾರ ಹಾನಿಯನ್ನುಂಟುಮಾಡಿದೆ.
ರಾಷ್ಟ್ರೀಯ ತನಿಖಾತಂಡವು
ತಡಮಾಡದೇ ಈ ಘಟನೆಗೆ ಕಾರಣರಾದ ತಪ್ಪಿತಸ್ಥರ ಶೋಧಕ್ಕೆ ತೊಡಗಿದೆ.
ಸ್ಫೋಟಗೊಂಡ ಕಾರನ್ನು ಶಂಕಿತ ಉಗ್ರ
ಡಾ.ಉಮರ್ ನಬಿ ಚಲಾಯಿಸುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಆದರೆ ಆತ ಆತ್ಮಾಹುತಿ ದಾಳಿಕೋರನೇ ಹೌದೆ ಅಲ್ಲವೆ? ಎಂಬ ಸಂಗತಿಯನ್ನ ಖಚಿತ ಪಡಿಸಿಕೊಳ್ಳಬೇಕಿದೆ.
ಚೋದ್ಯವೆಂದರೆ ಆತ ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಕೋಯಿಲ್ ಹಳ್ಳಿಯವನೆಂದು ಹೇಳಲಾಗಿದೆ.
Delhi Red Fort Blast ನಿನ್ನೆ ಸಂಜೆ 6-52 ಕ್ಕೆ ಕೆಂಪುಕೋಟೆಯ ಬಳಿಯಿರುವ ಲಜಪತ್ ರಾಯ್ ಮಾರುಕಟ್ಟೆ ಹತ್ತಿರ ಈ ಭೀಕರ ಸ್ಫೋಟ ನಡೆದಿದೆ.
ಹನ್ನೆರಡು ಜನ ಮರಣಹೊಂದಿದ್ದು ,ಮೂವತ್ತಕ್ಕೂ ಹೆಚ್ಚು ಜನ ಗಾಯಾಳುಗಳಾಗಿದ್ದಾರೆ.
ಅಮಾಯಕ ಜನ ಮತ್ತೆ ಈ ದುರ್ಘಟನೆಯಲ್ಲಿ‌ ಜೀವ ಕಳೆದುಕೊಂಡಿದ್ದಾರೆ.
ಉನ್ನತ ಮಟ್ಟದ ಸಭೆ ನಡೆಸಿದ ಕೇಂದ್ರಗೃಹ ಸಚಿವ ಅಮಿತ್ ಶಾ ಎನ್ ಐ ಎ ಯಿಂದ ತನಿಖೆ ಚುರುಕುಗೊಳಿಸಲು ಆದೇಶಮಾಡಿದ್ದಾರೆ.
ದಿಲ್ಲಿ ಸ್ಫೋಟದ ಬಗ್ಗೆ ಪ್ರಧಾನಿ ಮೋದಿ ಅವರು ಈ ಘಟನೆ ಹಿಂದಿನ ಶಕ್ತಿಯನ್ನ ಶಿಕ್ಷಿಸದೇ ಬಿಡುವುದಿಲ್ಲ.
ನಮ್ಮ ತನಿಖಾ ದಳ ಅವರೆಲ್ಲರಿಗೂ ಪತ್ತೆಮಾಡಿ ದಂಡನೆಗೊಳಪಡಿಸಲಿದೆ ಎಂದಿದ್ದಾರೆ.

World Diabetes Day ನವೆಂಬರ್ 14. ವಿಶ್ವ ಮಧುಮೇಹ ದಿನ, ಉಚಿತ್ರ ನೇತ್ರ ತಪಾಸಣೆ

0

World Diabetes Day ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ನಗರದ ರಾಜೇಂದ್ರ ನಗರ ೧೦೦ಅಡಿ ರಸ್ತೆಯಲ್ಲಿರುವ ಆಶೀರ್ವಾದ ಕಣ್ಣಿಯ ಆಸ್ಪತ್ರೆಯಲ್ಲಿ ನ.14ರ ಶುಕ್ರವಾರ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಮಧುಮೇಹ ರೋಗಿಗಳಿಗೆ ಹಾಗೂ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವ ಸಾರ್ವಜನಿಕರಿಗೆ ಉಚಿತ ಕಣ್ಣಿನ ತಪಾಸಣೆಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಮಧುಮೇಹವು ಕಣ್ಣಿನ ರೆಟಿನಾ ಭಾಗವನ್ನು ಹಾನಿಮಾಡುತ್ತಾ ಹೋಗುತ್ತದೆ. ಇದರಿಂದ ನಿಧಾನವಾಗಿ ದೃಷ್ಠಿನಾಶವಾಗಬಹುದು. ಆರಂಭಿಕ ಹಂತದಲ್ಲೇ ತಪಾಸಣೆ ಮಾಡುವುದರಿಂದ ದೃಷ್ಠಿನಾಶವಾಗುವುದನ್ನು ತಡೆಗಟ್ಟಬಹುದೆಂದು ಆಸ್ಪತ್ರೆ ತಜ್ಞ ವೈದ್ಯರು ತಿಳಿಸಿದ್ದಾರೆ.
World Diabetes Day ಶಿಬಿರದಲ್ಲಿ ಕಣ್ಣಿನ ಪೊರೆ ಹಾಗೂ ಕಣ್ಣಿಗೆ ಸಂಬಂಧಿಸಿದ ಶಸ್ತ್ರ ಚಿಕಿತ್ಸೆ ಹಾಗೂ ಸ್ಕ್ಯಾನಿಂಗ್ ಮೇಲೆ 15% ರಿಯಾಯಿತಿ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ 90080 19005, 9481988550 ಗೆ ಸಂಪರ್ಕಿಸಬಹುದೆಂದು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.