Thursday, February 12, 2026
Thursday, February 12, 2026
Home Blog Page 99

World Diabetes Day ನವೆಂಬರ್ 14. ವಿಶ್ವ ಮಧುಮೇಹ ದಿನ, ಉಚಿತ್ರ ನೇತ್ರ ತಪಾಸಣೆ

0

World Diabetes Day ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ನಗರದ ರಾಜೇಂದ್ರ ನಗರ ೧೦೦ಅಡಿ ರಸ್ತೆಯಲ್ಲಿರುವ ಆಶೀರ್ವಾದ ಕಣ್ಣಿಯ ಆಸ್ಪತ್ರೆಯಲ್ಲಿ ನ.14ರ ಶುಕ್ರವಾರ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಮಧುಮೇಹ ರೋಗಿಗಳಿಗೆ ಹಾಗೂ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವ ಸಾರ್ವಜನಿಕರಿಗೆ ಉಚಿತ ಕಣ್ಣಿನ ತಪಾಸಣೆಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಮಧುಮೇಹವು ಕಣ್ಣಿನ ರೆಟಿನಾ ಭಾಗವನ್ನು ಹಾನಿಮಾಡುತ್ತಾ ಹೋಗುತ್ತದೆ. ಇದರಿಂದ ನಿಧಾನವಾಗಿ ದೃಷ್ಠಿನಾಶವಾಗಬಹುದು. ಆರಂಭಿಕ ಹಂತದಲ್ಲೇ ತಪಾಸಣೆ ಮಾಡುವುದರಿಂದ ದೃಷ್ಠಿನಾಶವಾಗುವುದನ್ನು ತಡೆಗಟ್ಟಬಹುದೆಂದು ಆಸ್ಪತ್ರೆ ತಜ್ಞ ವೈದ್ಯರು ತಿಳಿಸಿದ್ದಾರೆ.
World Diabetes Day ಶಿಬಿರದಲ್ಲಿ ಕಣ್ಣಿನ ಪೊರೆ ಹಾಗೂ ಕಣ್ಣಿಗೆ ಸಂಬಂಧಿಸಿದ ಶಸ್ತ್ರ ಚಿಕಿತ್ಸೆ ಹಾಗೂ ಸ್ಕ್ಯಾನಿಂಗ್ ಮೇಲೆ 15% ರಿಯಾಯಿತಿ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ 90080 19005, 9481988550 ಗೆ ಸಂಪರ್ಕಿಸಬಹುದೆಂದು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Shivamogga District Legal Services Authority ಹದಿಹರೆಯದ ಯುವಜನರು ಯಾವುದೇ ಆಕರ್ಷಣೆಗೊಳಗಾಗದೇ ವಿದ್ಯಾಭ್ಯಾಸದ ಬಗ್ಗೆ ಗಮನ ನೀಡಿ- ನ್ಯಾ. ಎಂ.ಎಸ್.ಸಂತೋಷ್

0

Shivamogga District Legal Services Authority ದಿನಾಂಕ 11.11.2025 ರಂದು ಶಿವಮೊಗ್ಗದ ನಾಸಾ ಸ್ವತಂತ್ರ ಪಿಯು ಕಾಲೇಜಿನಲ್ಲಿ ಮಕ್ಕಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ವಕೀಲರ ಒಕ್ಕೂಟದ ಸಹಯೋಗದಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮಕ್ಕಳಿಗೆ ಪೋಕ್ಸೋ ಕಾಯ್ದೆ ಹಾಗೂ ಮಾದಕ ವಸ್ತುಗಳ ದುರ್ಬಳಕೆ ವಿರುದ್ಧ ಜಾಗೃತಿ ಮೂಡಿಸಲಾಯಿತು. ಮಕ್ಕಳಿಗೆ ಪೋಕ್ಸೋ ಕಾಯ್ದೆ ಕುರಿತು ಮಾಹಿತಿಯನ್ನು ನೀಡಿದ ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆಗಿರುವಂತಹ ಶ್ರೀ ಸಂತೋಷ ಎಂ. ಎಸ್. ರವರು ತಮ್ಮ ಮಾತಿನ ಪೂರ್ವದಲ್ಲಿ ಮೊನ್ನೆ ನವದೆಹಲಿಯ ಕೆಂಪುಕೋಟೆಯ ಬಳಿ ನಡೆದ ದುಷ್ಕೃತ್ಯದಲ್ಲಿ ಮರಣ ಹೊಂದಿದ ವ್ಯಕ್ತಿಗಳಿಗೆ ಸಂತಾಪವನ್ನು ಎರಡು ನಿಮಿಷಗಳ ಮೌನಚರಣೆ ಮಾಡುವ ಮೂಲಕ ಸೂಚಿಸೋಣ ಎಂದು ತಿಳಿಸಿದರು.

ಸಭೆಯಲ್ಲಿ ಹಾಜರಿದ್ದ ಎಲ್ಲಾ ಗಣ್ಯರು ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮೌನಚರಣೆ ಮಾಡುವ ಮೂಲಕ ಸಂತಾಪವನ್ನು ಸೂಚಿಸಿದರು. ತದನಂತರ ಮಕ್ಕಳಿಗೆ ಪೋಕ್ಸೋ ಕಾನೂನಿನ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿ ಶಿವಮೊಗ್ಗ ಜಿಲ್ಲೆಯಲ್ಲಿನ ವಸ್ತು ಸ್ಥಿತಿಯನ್ನು ವಿವರಿಸಿ ಹದಿಹರೆಯದ ಯುವಕ ಮತ್ತು ಯುವತಿಯರು ಯಾವುದೇ ಆಕರ್ಷಣೆಗೆ ಒಳಗಾಗದೆ ವಿದ್ಯಾಭ್ಯಾಸದ ಮೇಲೆ ಹಾಗೂ ತಮ್ಮ ಮುಂದಿನ ಜೀವನವನ್ನು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ತಮ್ಮ ಸಮಯವನ್ನು ಮತ್ತು ಶಕ್ತಿಯನ್ನು ಕೇಂದ್ರೀಕರಿಸಬೇಕು ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಪೋಕ್ಸೋ ಕಾಯ್ದೆಯಲ್ಲಿನ ಮೂಲ ವಿಷಯವಾದ ಬ್ಯಾಟ್ ಟಚ್ ಅಥವಾ ಅನ್ ಸೇಫ್ ಟಚ್ ಬಗ್ಗೆ ಮಾಹಿತಿ ಇಲ್ಲದೆ ಕಾನೂನು ವಿರುದ್ಧವಾದ ಕೃತ್ಯವನ್ನು ಮಾಡುವ ಮೂಲಕ ಅಪರಾಧವನ್ನು ಮಾಡುತ್ತಿರುವುದು ವಿಷಾದನೀಯ ಎಂದು ತಿಳಿಸಿದರು.

Shivamogga District Legal Services Authority ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಮಹಿಳಾ ವಕೀಲರ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಸರೋಜಾ ಪಿ. ಚಂಗೊಳ್ಳಿ ರವರು ಮಾದಕ ವಸ್ತುಗಳ ಕಳ್ಳ ಸಾಗಾಣಿಕೆ ಮತ್ತು ಅದರ ದುರ್ಬಳಕೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ಮತ್ತು ಅದಕ್ಕಾಗಿ ಜಾರಿಯಲ್ಲಿರುವ ಕಟ್ಟುನಿಟ್ಟಿನ ಕಾನೂನಿನ ಬಗ್ಗೆ ವಿವರವಾಗಿ ಮಾತನಾಡಿ ಮಕ್ಕಳಿಗೆ ಸೂಕ್ತ ಮಾಹಿತಿಯನ್ನು ನೀಡಿದರು.

ಸಭೆಯ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಪ್ರಾಂಶುಪಾಲರು ವಹಿಸಿದ್ದರು.

ಕೆರೆಗಳ ಪುನರುಜ್ಜೀವನ & ಸಸಿಗಳ ನೆಡುವಿಕೆ ಮೂಲಕ ಬರಡು ಭೂಮಿಯನ್ನ ಸಮೃದ್ಧ ಅರಣ್ಯವಾಗಿಸಲು ರೋಟರಿ ಸಂಸ್ಥೆಗೆ ಕೈಜೋಡಿಸಿ – ರವಿಶಂಕರ್ ದಾಕೋಜು

0

ಪರಿಸರ ಸಂರಕ್ಷಣೆ ಕಾರ್ಯದಲ್ಲಿ ಪ್ರತಿಯೊಬ್ಬರೂ ತೊಡಗಿಸಿಕೊಂಡು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಬೆಂಗಳೂರಿನ ಉದ್ಯಮಿ ಹಾಗೂ ರೋಟರಿ ಜಿಲ್ಲೆ 3192ರ ನಿಯೋಜಿತ ಜಿಲ್ಲಾ ಗವರ್ನರ್ ರವಿಶಂಕರ್ ದಾಕೋಜು ಹೇಳಿದರು.

ರೋಟರಿ ಸಂಸ್ಥೆಗೆ 100 ಕೋಟಿ ರೂ. ದಾನ ಮಾಡಿರುವ ಹಿನ್ನೆಲೆಯಲ್ಲಿ ರೋಟರಿ ಸಮೃದ್ಧಿ ಕಾರ್ಯಾಗಾರ, ದತ್ತಿನಿಧಿ ಸಮಾವೇಶದಲ್ಲಿ ಸದಸ್ಯರು ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಹವಾಮಾನ ವೈಪರೀತ್ಯದಿಂದ ಮಾನವನ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ನಮ್ಮ ಮುಂದಿನ ಪೀಳಿಗೆ ಅನುಭವಿಸದಿರಲಿ ಎಂಬ ಸದುದ್ದೇಶದಿಂದ ಕೆರೆಗಳ ಪುನರುಜ್ಜೀವನ ಮತ್ತು ಲಕ್ಷಾಂತರ ಸಸಿಗಳನ್ನು ನೆಡುವುದರ ಮುಖಾಂತರ ಬರಡು ಭೂಮಿಯನ್ನು ಸಮೃದ್ಧ ಕಾಡನ್ನಾಗಿ ಪರಿವರ್ತಿಸಲು ರೋಟರಿ ಸಂಸ್ಥೆ ಜೊತೆಗೆ ಕೈಜೋಡಿಸಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.

ಮುಂದಿನ ಪೀಳಿಗೆ ತಾವು ಮಾಡದ ತಪ್ಪಿಗೆ ಶಿಕ್ಷೆಯನ್ನು ಅನುಭವಿಸಬಾರದು. ಆದ್ದರಿಂದ ಪ್ರತಿಯೊಬ್ಬರು. ಪರಿಸರ ಸಂರಕ್ಷಣೆಯಲ್ಲಿ ಪ್ರಾಮಾಣಿಕವಾಗಿ ಕೈಜೋಡಿಸಬೇಕು ಎಂದು ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಡಿ.ಕಿಶೋರ್ ಕುಮಾರ್, ಕಾರ್ಯದರ್ಶಿ ಡಾ. ಧನಂಜಯ ರಾಂಪುರ, ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ, ಸಮಾವೇಶದ ಅಧ್ಯಕ್ಷ ಚಂದ್ರಹಾಸ್ ಪಿ ರಾಯ್ಕರ್, ಮಾಜಿ ಜಿಲ್ಲಾ ಗವರ್ನರ್ ಸಾಂಬಶಿವ ರಾವ್ ಪತಿಬಂದ್ಲ, ಡಾ. ನಾರಾಯಣ್, ಡಾ. ವಿನಯಕುಮಾರ್, ರಾಜಾರಾಮ್ ಭಟ್ ಬಿ, ಡಿ.ಎಸ್.ರವಿ, ಬಿ.ಎನ್.ರಮೇಶ್, ನಿಯೋಜಿತ ಜಿಲ್ಲಾ ಗವರ್ನರ್ ಬಿ.ಎಂ.ಭಟ್, ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್, ವಲಯ 11ರ ಸಹಾಯಕ ಗವರ್ನರ್ ಲಕ್ಷ್ಮಣಗೌಡ ಬಿ, ವಲಯ 10ರ ಸಹಾಯಕ ಗವರ್ನರ್ ಕೆ.ಪಿ.ಶೆಟ್ಟಿ, ಪ್ರಮೋಷನ್ ಚೇರ್ಮನ್ ಜಿ.ವಿಜಯಕುಮಾರ್, ಸಮಾವೇಶದ ಕಾರ್ಯದರ್ಶಿ ಡಾ. ಗುಡದಪ್ಪ ಕಸಬಿ, ಮಾಜಿ ಜಿಲ್ಲಾ ಗವರ್ನರ್ ಬಿ.ಎಂ.ರಮೇಶ್, ರೇಖಾ ಪಾಲಾಕ್ಷ, ಪದ್ಮಿನಿ ವಸಂತ ಇದ್ದರು.

Shivamogga Police ವಾರಸುದಾರರಿಲ್ಲದ ವಾಹನಗಳ ವಿಲೇವಾರಿ. ಜಿಲ್ಲಾ ಪೊಲೀಸ್ ಪ್ರಕಟಣೆ

0

Shivamogga Police ಶಿವಮೊಗ್ಗ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ವಾರಸುದಾರಿಲ್ಲದ 21 ವಿವಿಧ ಮಾದರಿಯ ವಾಹನಗಳನ್ನು ನ.21 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಸಾಗರ ರಸ್ತೆಯಲ್ಲಿರುವ ಜಿಲ್ಲಾ ಸಶಸ್ತ್ರಮೀಸಲು ಪಡೆ ಕಚೇರಿಯ ಆವರಣದಲ್ಲಿ ವಿಲೇವಾರಿ ಮಾಡಲು ಉದ್ದೇಶಿಸಿದ್ದು, ಬಹಿರಂಗ ಹರಾಜು ಹಾಕಲಾಗುವುದು. ಆಸಕ್ತರು ನಿಗದಿತ ಸಮಯದಲ್ಲಿ ಭಾಗವಹಿಸುವಂತೆ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Shivamogga Police ಹೆಚ್ಚಿನ ಮಾಹಿತಿಗಾಗಿ ಡಿಎಸ್‌ಪಿ ಡಿಎಆರ್ ಶಿವಮೊಗ್ಗ ದೂ.ಸಂ.: 08182-261412 ನ್ನು ಸಂಪರ್ಕಿಸುವುದು.

ಬಸ್ ನಿಂದ ಬಿದ್ದು ಸಾವನಪ್ಪಿದ ಹೇಮಾವತಿ ಕುಟುಂಬಸ್ಥರಿಗೆ ಸಾರಿಗೆ ಸಂಸ್ಥೆ ವತಿಯಿಂದ ಪರಿಹಾರ ಚೆಕ್ ವಿತರಣೆ

0

2024ರ ಅಕ್ಟೋಬರ್ 22 ರಂದು ಶಿವಮೊಗ್ಗ -ಭದ್ರಾವತಿ ಮಾರ್ಗದ ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಕು. ಹೇಮಾವತಿ ಬಿನ್ ರಮೇಶ್ ಎಂಬ 19 ವರ್ಷದ ಯುವತಿಯು ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.
ನ. 10 ರಂದು ಹೇಮಾವತಿ ತಂದೆ ರಮೇಶ್ ಎಂಬುವವರಿಗೆ ಅಪಘಾತ ಪರಿಹಾರ ನಿಧಿಯಿಂದ ರೂ. 10 ಲಕ್ಷಗಳ ಚೆಕ್‌ನ್ನು ಕ.ರಾ.ರ.ಸಾ.ನಿಗಮದ ಶಿವಮೊಗ್ಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ನವೀನ್ ಟಿ.ಆರ್. ಇವರು ಹಸ್ತಾಂತರ ಮಾಡಿದ್ದಾರೆ ಎಂದು ಕರಾರಾಸಾನಿಗಮದ ಪ್ರಕಟಣೆ ತಿಳಿಸಿದೆ.

Rotary Club Shimoga ಪೌಷ್ಠಿಕ ಆಹಾರ ಸೇವನೆ ಸಂಗಡ ಗರ್ಭಿಣಿಯರಿಗೆ ಸ್ವಚ್ಛತೆ ಮತ್ತು ವೈದ್ಯರ ಸಲಹೆಯ ವ್ಯಾಯಾಮ ಅತ್ಯಂತ ಅಗತ್ಯ- ಬಿ.ಬಸವರಾಜ್

0

Rotary Club Shimoga ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಅತ್ಯಗತ್ಯವಾಗಿದ್ದು, ಮಗುವಿನ ಬೆಳವಣಿಗೆಗೂ ಪೌಷ್ಟಿಕಾಂಶ ಅತಿ ಮುಖ್ಯವಾಗಿ ಸಹಕಾರಿಯಾಗುತ್ತದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಬಸವರಾಜ್ ಬಿ ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಹೊಸಮನೆ ಬಡಾವಣೆಯಲ್ಲಿರುವ ಅಂಗನವಾಡಿಯಲ್ಲಿ ಗರ್ಭಿಣಿಯರಿಗೆ ಪೌಷ್ಟಿಕಾಂಶ ಆಹಾರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಪೌಷ್ಟಿಕವಾದ ಆಹಾರವನ್ನು ತೆಗೆದುಕೊಳ್ಳುವುದರ ಜೊತೆಗೆ ಸ್ವಚ್ಛತೆ ಹಾಗೂ ವ್ಯಾಯಾಮ ಅತ್ಯಂತ ಅಗತ್ಯವಾಗಿರುತ್ತದೆ ಎಂದು ತಿಳಿಸಿದರು.

ಗರ್ಭಿಣಿಯರು ಪೌಷ್ಟಿಕಾಂಶವಾದ ಆಹಾರವನ್ನು ತೆಗೆದುಕೊಳ್ಳುವುದರಿಂದ ಎದೆಹಾಲಿನಲ್ಲಿ ಕೊರತೆ ಇರುವುದಿಲ್ಲ. ತಾಯಿಯ ಮಡಿಲು ಎಂಬ ಕಾರ್ಯಕ್ರಮದ ಅಡಿಯಲ್ಲಿ ರೋಟರಿ ಸಂಸ್ಥೆಯು ಹಲವಾರು ಕಾರ್ಯಕ್ರಮಗಳನ್ನು ಮತ್ತು ಜಾಗೃತಿ ಶಿಬಿರಗಳನ್ನು ಆಯೋಜನೆ ಮಾಡುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ವಲಯ ಸೇನಾನಿ ಕಿರಣ್ ಕುಮಾರ್ ಜಿ ಮಾತನಾಡಿ, ರೋಟರಿ ಸಂಸ್ಥೆಯು ಅನೇಕ ಸಾಮಾಜಿಕ ಕಳಕಳಿಯುಳ್ಳ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಯಾವುದೇ ಪ್ರತಿಫಲ ಅಪೇಕ್ಷೆ ಇಲ್ಲದೆ ಆರೋಗ್ಯಕರ ಸಮಾಜದ ನಿರ್ಮಾಣಕ್ಕಾಗಿ ನಿಸ್ವಾರ್ಥವಾಗಿ ಶ್ರಮಿಸುತ್ತಿದೆ ಎಂದು ತಿಳಿಸಿದರು.

Rotary Club Shimoga ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಜಯಶೀಲಶೆಟ್ಟಿ, ಬಲರಾಮ್, ಧರ್ಮೇಂದ್ರ ಸಿಂಗ್, ಈಶ್ವರ್ ಬಿವಿ, ಮೋಹನ್, ರಾಜೇಶ್ವರಿ ಸಿಂಗ್ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ರವಿ ಮತ್ತು ಅಂಗನವಾಡಿಯ ಕಾರ್ಯಕರ್ತೆ ರೇಣುಕಾ ಮತ್ತು ಗರ್ಭಿಣಿಯರು ಉಪಸ್ಥಿತರಿದ್ದರು.

The Institute of Indian Foundrymen ಫೌಂಡ್ರಿಮೆನ್ ಸಂಸ್ಥೆಯ ಮನವಿ ಬಗ್ಗೆಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ- ಸಚಿವ ಹೆಚ್.ಡಿ. ಕುಮಾರಸ್ವಾಮಿ

0

The Institute of Indian Foundrymen ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಕೇಂದ್ರ ಉಕ್ಕು ಕೈಗಾರಿಕೆಗಳ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ದಿ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ ವತಿಯಿಂದ ಜ್ಞಾಪನ ಪತ್ರ ಸಲ್ಲಿಸಲಾಯಿತು.

ಬಿ2ಬಿ ವಹಿವಾಟುಗಳ ಅಡಿಯಲ್ಲಿ ಸರಬರಾಜು ಮಾಡಲಾದ ಎರಕಹೊಯ್ದ ಕಬ್ಬಿಣದ ಗುಣಮಟ್ಟ ನಿಯಂತ್ರಣ ಆದೇಶದಿಂದ (ಕ್ಯೂಸಿಒ) ವಿನಾಯಿತಿ ನೀಡುವ ಬಗ್ಗೆ ಜ್ಞಾಪನ ಪತ್ರವನ್ನು ಹಸ್ತಾಂತರಿಸಿ ಮನವಿ ಮಾಡಿದರು.
ಇತ್ತೀಚಿನ ಕೇಂದ್ರ ಸರ್ಕಾರದ (ಕ್ಯೂಸಿಒ) ನೀತಿಯಿಂದ ಎಂಎಸ್‌ಎಂಇ ಫೌಂಡ್ರಿ ಕೈಗಾರಿಕೆಗಳಿಗೆ ಆಗುತ್ತಿರುವ ತೊಂದರೆ, ಬಿಐಎಸ್ ಅಧಿಕಾರಿಗಳಿಂದ ಕಿರುಕುಳ, ರೆಡ್ ಟೇಪಿಸಂ, ಅಸಮರ್ಪಕ ವಿಳಂಬ, ಆರ್ಥಿಕ ಹೊರೆ, ಅಗತ್ಯ ಪರೀಕ್ಷಾ ಸೌಲಭ್ಯಗಳ ಕೊರತೆ, ವ್ಯಾಪಾರ ನಷ್ಟ ಇತ್ಯಾದಿ ಪರಿಣಾಮಗಳ ಬಗ್ಗೆ ಮನವರಿಕೆ ಮಾಡಲಾಯಿತು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ವಿಷಯದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕೈಗಾರಿಕೆಗಳಿಗೆ ಅನುಕೂಲವಾಗುವಂತೆ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

The Institute of Indian Foundrymen ಐಐಎಫ್ ಮಾಜಿ ಅಧ್ಯಕ್ಷ ಡಿ.ಎಸ್.ಚಂದ್ರಶೇಖರ್, ಖಜಾಂಚಿ ಮುತ್ತುಕುಮಾರ್, ಐಐಎಫ್‌ನ ದಕ್ಷಿಣ ಪ್ರಾಂತ್ಯ ಅಧ್ಯಕ್ಷ ಪಳನಿಮುರುಗನ್, ಐಐಎಫ್‌ನ ದಕ್ಷಿಣ ಪ್ರಾಂತ್ಯ ಮಾಜಿ ಅಧ್ಯಕ್ಷ ಡಿ.ಜಿ.ಬೆನಕಪ್ಪ, ಐಐಎಫ್ ಕೊಯಮತ್ತೂರು ಅಧ್ಯಾಯದ ಅಧ್ಯಕ್ಷ ವೇಲುಸಾಮಿ, ಐಐಎಫ್ ಸದಸ್ಯ ಸೆಂಥಿಲ್ ಕುಮಾರ್, ಜೆಡಿಎಸ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್ ಮತ್ತು ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಉಪಸ್ಥಿತರಿದ್ದರು.

National Education Day ಶಿಕ್ಷಣ ಕ್ಷೇತ್ರಕ್ಕೆ ರಾಷ್ಟ್ರದ ಪ್ರಥಮ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಕೊಡುಗೆ ಅನನ್ಯ- ಎನ್.ಎನ್.ಕಬ್ಬೂರ್

0

National Education Day “ಯೋಜನಾ ಬದ್ಧವಾಗಿ ಪರಿಪೂರ್ಣ ನಾಗರಿಕರನ್ನಾಗಿ ರೂಪಿಸುವಲ್ಲಿ ಶಿಕ್ಷಣವು ಅತ್ಯಮೂಲ್ಯವಾಗಿದ್ದು, ಜಗತ್ತಿನ ಪ್ರತಿಯೊಂದು ನಾಗರಿಕ ಸಮಾಜ ಸಧೃಡಗೊಳಿಸಲು ಶಿಕ್ಷಣ ಅತೀ ಮಹತ್ವದ ಪಾತ್ರ ವಹಿಸುತ್ತದೆ, ಈ ದಿಶೆಯಲ್ಲಿ ಸ್ವತಂತ್ರ ಹೋರಾಟಗಾರ ಹಾಗೂ ದೇಶದ ಪ್ರಥಮ ಶಿಕ್ಷಣ ಮಂತ್ರಿ ಮೌಲಾನಾ ಅಬುಲ್ ಕಲಾಂ ಅಜಾದರ ಕೊಡುಗೆ ಅನನ್ಯವಾಗಿದೆ. ಆದುದರಿಂದ ಇವರ ಜನ್ಮದಿನವನ್ನು ಪ್ರತಿ ವರ್ಷ ನವ್ಹಂಬರ 11 ರಂದು ರಾಷ್ಟ್ರೀಯ ಶಿಕ್ಷಣ ದಿನ ಎಂದು ಆಚರಿಸಲಾಗುತ್ತದೆ” ಎಂದು ಶಿಕ್ಷಕ ಹಾಗೂ ನೌಕರ ಸಂಘದ ಕಾರ್ಯದರ್ಶಿ ಎನ್.ಎನ್.ಕಬ್ಬೂರ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಪಟ್ಟಣದ ಸ.ಕಿ.ಪ್ರಾ ಕನ್ನಡ ಶಾಲೆ ನಂ-6 ರಲ್ಲಿ “ರಾಷ್ಟ್ರೀಯ ಶಿಕ್ಷಣ ದಿನ” ನಿಮಿತ್ಯ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅಬುಲ್ ಕಲಾಂರ ಶೈಕ್ಷಣಿಕ ಚಿಂತನೆಗಳನ್ನು ಇಂದು ನಾವೆಲ್ಲರು ಅಳವಡಿಸಿಕೊಳ್ಳಬೇಕಾಗಿದೆ ಎಂದರು.

National Education Day ನಂತರ ಮೌಲಾನಾ ಅಬುಲ್ ಕಲಾಂ ಅಜಾದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಅವರ ಆರಂಭಿಕ ಜೀವನ, ವಿದ್ಯಾಭ್ಯಾಸ, ಸ್ವಾತಂತ್ರ್ಯ ಹೋರಾಟದ ಕ್ಷಣಗಳು, ಶೈಕ್ಷಣಿಕ ಕ್ರಾಂತಿಗಳು ಹೀಗೆ ವಿವಿಧ ಮಜಲುಗಳನ್ನು ಮಕ್ಕಳಿಗೆ ತಿಳಿಸಲಾಯಿತು, ಈ ಸಂದರ್ಭದಲ್ಲಿ ಶಿಕ್ಷಕಿಯರಾದ ಎಮ್.ಆರ್.ಪಂಡಿ, ಅನ್ನಪೂರ್ಣ ಕಾಜಗಾರ, ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಅಡುಗೆ ಸಿಬ್ಬಂದಿಯವರು, ಪಾಲಕ ಪೋಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

ಪರ್ಪಲ್ ಫೆಸ್ಟ್ ಕಾರ್ಯಕ್ರಮದ ರಾಯಭಾರಿ ಆಯ್ಕೆಗೆ ಅರ್ಹ ವಿಕಲಚೇತರಿಂದ ಅರ್ಜಿ ಆಹ್ವಾನ

0

ಶಿವಮೊಗ್ಗ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ವತಿಯಿಂದ ಡಿ.5 ರಿಂದ 7 ವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಪರ್ಪಲ್ ಫೆಸ್ಟ್ ಕಾರ್ಯಕ್ರಮದ ರಾಯಭಾರಿ ಆಯ್ಕೆಗೆ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ವಿಕಲಚೇತನ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ರಾಯಭಾರಿಯಾಗಿ ಆಯ್ಕೆಯಾಗಲು ಅಗತ್ಯವಿರುವ ಮಾರ್ಗಸೂಚಿಯ ಪ್ರತಿಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಕಚೇರಿ ಇಲ್ಲಿ ನೀಡಲಾಗುವುದು. ಭರ್ತಿ ಮಾಡಿದ ಅರ್ಜಿಯನ್ನು ನ.16 ರೊಳಗೆ ಗೂಗಲ್ ಫಾರ್ಮ್ https://forms.gle/7pMqcgCySATEvNVm6 ಮೂಲಕ ಅಥವಾ ಆಯುಕ್ತರು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ಕಚೇರಿಗೆ ಖುದ್ದಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182-251676 ಗೆ ಸಂಪರ್ಕಿಸಬಹುದೆAದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಹೊಲಿಗೆ ಯಂತ್ರ ವಿತರಣಾ ಯೋಜನೆ, ಮರಾಠಾ ಪ್ರವರ್ಗ- 3ಬಿ ಅಡಿಯಲ್ಲಿ ಅರ್ಹ ಫಲಾನುಭವಿಗಳಿಂದ ಅರ್ಜಿ‌ ಆಹ್ವಾನ

0

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಮರಾಠ ಪ್ರವರ್ಗ -3ಬಿ ಅಡಿಯಲ್ಲಿ 2ಎ ಯಿಂದ 2ಎಫ್ ವರೆಗೆ ಬರುವ ಸಮುದಾಯಕ್ಕೆ ಸೇರಿದ 18 ರಿಂದ 55 ವರ್ಷ ವಯೋಮಿತಿ ಹೊಂದಿದವರಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿದಾರರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ 3ಬಿಯಲ್ಲಿ ಪಡೆದಿರಬೇಕು . ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರನ್ನು ಮಾತ್ರ ಈ ಸೌಲಭ್ಯಕ್ಕೆ ಪರಿಗಣಿಸಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98,000/- ಮತ್ತು ನಗರ ಪ್ರದೇಶದವರಿಗೆ ರೂ. 1.20 ಲಕ್ಷ ರೂ.ಗಳನ್ನು ಮೀರಬಾರದು ಅಂಗವಿಕಲ ಮಹಿಳೆಯರಿಗೆ ಶೇ.5% ರಷ್ಟು, ಮಹಿಳೆಯರಿಗೆ ಶೇ.33% ಹಾಗೂ ತೃತೀಯ ಲಿಂಗಿಗಳಿಗೆ ಶೇ.1% ರಷ್ಟು, ಅವಿವಾಹಿತ ಮಹಿಳೆಯರಿಗೆ ಶೇ.2ರಷ್ಟನ್ನು ಮೀಸಲಿರಿಸಿದೆ. ವಿಧವೆಯರಿಗೆ, ಪರಿತ್ಯಕ್ತ ಮಹಿಳೆಯರಿಗೆ, ಹೆಚ್.ಐ.ವಿ. ಪೀಡಿತರಿಗೆ 35 ವರ್ಷ ವಯೋಮಿತಿ ಮೀರಿರಬಾರದು.
ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‌ಲೈನ್‌ನಲ್ಲಿ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು.
ಆಸಕ್ತರು ಸೇವಾಸಿಂಧು ಪೋರ್ಟಲ್‌ನ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ಡಿ.06 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kmcdc.karnataka.gov.in ರಲ್ಲಿ ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ, ಭಾಗ್ಯನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಎದುರು, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ.: 08182-229634 ನ್ನು ಸಂಪರ್ಕಿಸುವುದು.